ರೈಲ್ವೇ ಟ್ರ್ಯಾಕಿನಲ್ಲಿ ಪತ್ತೆಯಾಯ್ತು KSRTC ಚಾಲಕನ ಮೃತದೇಹ!
ಪುತ್ತೂರು: ಕೆ.ಎಸ್.ಆರ್.ಟಿ.ಸಿ. ಬಸ್ ಚಾಲಕನ ಮೃತದೇಹ ಕಾಣಿಯೂರು ರೈಲ್ವೇ ಟ್ರ್ಯಾಕಿನಲ್ಲಿ ಶುಕ್ರವಾರ ಬೆಳಿಗ್ಗೆ ಪತ್ತೆಯಾಗಿದೆ. ಕುಸುಮಾಧರ ಗೌಡ ಅಭೀರ (34 ವ.) ಎಂಬವರ ಮೃತದೇಹ ಇದಾಗಿದೆ. ಗುರುವಾರ ರಾತ್ರಿ ಕರ್ತವ್ಯದಿಂದ ತೆರಳಿದ್ದು, ಬಳಿಕ ನಾಪತ್ತೆಯಾಗಿದ್ದರು. ಶುಕ್ರವಾರ ಬೆಳಿಗ್ಗೆ ಮೃತದೇಹ ರೈಲ್ವೇ ಟ್ರ್ಯಾಕಿನಲ್ಲಿ ಪತ್ತೆಯಾಗಿದೆ. ಕೆ.ಎಸ್.ಆರ್.ಟಿ.ಸಿ. ಪುತ್ತೂರು ವಿಭಾಗದಲ್ಲಿ ಚಾಲಕ ಕಂ ನಿರ್ವಾಹಕರಾಗಿ ಕುಸುಮಾಧರ ಕೆಲಸ ನಿರ್ವಹಿಸುತ್ತಿದ್ದರು. 1 ವರ್ಷದ ಹಿಂದೆ ವಿವಾಹವಾಗಿದ್ದರು. ರೈಲಿಗೆ ತಲೆಕೊಟ್ಟು ಆತ್ಮಹತ್ಯೆ ಮಾಡಿಕೊಂಡಿರುವ ಶಂಕೆ ವ್ಯಕ್ತವಾಗಿದ್ದು, ಕಡಬ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದಾರೆ.
ರೈಲ್ವೇ ಟ್ರ್ಯಾಕಿನಲ್ಲಿ ಪತ್ತೆಯಾಯ್ತು KSRTC ಚಾಲಕನ ಮೃತದೇಹ! Read More »