ಅಪರಾಧ

ಪಿಯುಸಿ ವಿದ್ಯಾರ್ಥಿನಿ ಬದಲಿಗೆ ಪರೀಕ್ಷೆ ಬರೆದ ಕೈ ಕಾರ್ಯಕರ್ತೆ ಸೆರೆ

ಖರ್ಗೆ ಕುಟುಂಬದ ಒಡೆತನದ ಕಾಲೇಜಿನಲ್ಲಿ ನಡೆದ ಅಕ್ರಮ ಬೆಂಗಳೂರು: ಕಲಬುರಗಿ ಜಿಲ್ಲೆಯ ಖರ್ಗೆ ಕುಟುಂಬದ ಒಡೆತನದ ಮಿಲಿಂದ್ ಕಾಲೇಜಿನಲ್ಲಿ ಪಿಯುಸಿ ವಿದ್ಯಾರ್ಥಿನಿಯ ಬದಲಿಗೆ ಪರೀಕ್ಷೆ ಬರೆದ ಕಾಂಗ್ರೆಸ್ ಕಾರ್ಯಕರ್ತೆಯನ್ನು ಬಂಧಿಸಲಾಗಿದೆ. ರಾಜ್ಯದಲ್ಲಿ ದ್ವಿತೀಯ ಪಿಯುಸಿ ಪರೀಕ್ಷೆ ನಡೆಯುತ್ತಿದ್ದು, ಮಾ.5ರಂದು ರಾಜ್ಯಶಾಸ್ತ್ರ ಪರೀಕ್ಷೆ ವೇಳೆ ಕಲಬುರಗಿ ನಗರದ ಮಿಲಿಂದ್ ಕಾಲೇಜ್‌ನಲ್ಲಿ ಅಕ್ರಮ ನಡೆದಿದೆ. ಅರ್ಚನಾ ಎಂಬ ವಿದ್ಯಾರ್ಥಿನಿ ಬದಲಿಗೆ ಕಾನೂನು ವಿದ್ಯಾರ್ಥಿನಿಯೂ ಆಗಿರುವ ಕಾಂಗ್ರೆಸ್ ಕಾರ್ಯಕರ್ತೆ ಸಂಪೂರ್ಣಾ ಪಾಟೀಲ್ ಎಂಬಾಕೆ ಪರೀಕ್ಷೆ ಬರೆದಿದ್ದಾಳೆ. ದಲಿತ ಸೇನೆ ಕಾರ್ಯಕರ್ತರು ಕಾಲೇಜಿಗೆ […]

ಪಿಯುಸಿ ವಿದ್ಯಾರ್ಥಿನಿ ಬದಲಿಗೆ ಪರೀಕ್ಷೆ ಬರೆದ ಕೈ ಕಾರ್ಯಕರ್ತೆ ಸೆರೆ Read More »

ಮನೆಯಲ್ಲಿದ್ದ ಬೈಕ್‍ ಕಳವು

ನಾರಾವಿ : ಕುತ್ತೂರು ಗ್ರಾಮದ ಸಮೃದ್ಧಿ ಮನೆ ನಿವಾಸಿ ಟಿ. ಎಸ್. ಸಲೀಂ ಎಂಬವರ ಬೈಕ್ ನ್ನು ಅವರ ಮನೆಯಿಂದ ಕದ್ದೊಯ್ದ ಘಟನೆ ನಡೆದಿದೆ. ಘಡನಾನುಸಾರವಾಗಿ ವೇಣೂರು ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದೆ. ಮಾ.4ರ ಬೆಳಗಿನ ಜಾವ 3ರಿಂದ 3.30ಗಂಟೆ ಮಧ್ಯೆ ಬೈಕ್ ಕಳ್ಳತನವಾಗಿದ್ದು, ಇಬ್ಬರು ವ್ಯಕ್ತಿಗಳು ಕಳ್ಳತನ ಮಾಡುವ ದೃಶ್ಯ ಮನೆಯ ಸಿಸಿ ಕ್ಯಾಮೆರಾದಲ್ಲಿ ದಾಖಲಾಗಿದೆ. ಕಳವಾದ ಬೈಕ್ ನ ಮೊತ್ತ ಸುಮಾರು  ರು. 60ಸಾವಿರ ಎಂದು ದೂರಿನಲ್ಲಿ ತಿಳಿಸಲಾಗಿದೆ.

ಮನೆಯಲ್ಲಿದ್ದ ಬೈಕ್‍ ಕಳವು Read More »

ಎರಡು ವರ್ಷದಲ್ಲಿ 40 ಬಾರಿ ದುಬೈ ಪ್ರಯಾಣ ಕೈಗೊಂಡಿದ್ದ ನಟಿ ರನ್ಯಾ

ಕನ್ನಡದ ನಟಿಯ ಗೋಲ್ಡ್‌ ಸ್ಮಗ್ಲಿಂಗ್‌ ಕೇಸ್‌ ಬಗೆದಷ್ಟೂ ಆಳ ಬೆಂಗಳೂರು: ಗೋಲ್ಡ್ ಸ್ಮಗ್ಲಿಂಗ್ ಕೇಸ್‌ನಲ್ಲಿ ಅರೆಸ್ಟ್ ಆಗಿರುವ ನಟಿ ರನ್ಯಾ ರಾವ್ ಪ್ರಕರಣ ಅಗೆದಷ್ಟು ಬಯಲಾಗುತ್ತಲೇ ಇದೆ. ಈ ನಟಿ ಒಂದೆರಡು ಬಾರಿ ಅಲ್ಲ ಬರೋಬ್ಬರಿ 40 ಬಾರಿ ದುಬೈಗೆ ಹೋಗಿ ಬಂದಿರುವ ವಿಚಾರ ಈಗ ಬೆಳಕಿಗೆ ಬಂದಿದೆ. ಬಂಧನವಾಗುವ 2 ವಾರಗಳ ಹಿಂದೆ ರನ್ಯಾ ದುಬೈಗೆ ಹೋಗಿ ಬಂದಿದ್ದಳು. ಆಗ ವಿಮಾನ ನಿಲ್ದಾಣದಲ್ಲಿ ತಪಾಸಣೆ ವೇಳೆ ಕಸ್ಟಮ್ ಅಧಿಕಾರಿಗಳೊಂದಿಗೆ ಕಿರಿಕ್ ಮಾಡಿಕೊಂಡು ನಾನು ಡಿಜಿಪಿ ಮಗಳು

ಎರಡು ವರ್ಷದಲ್ಲಿ 40 ಬಾರಿ ದುಬೈ ಪ್ರಯಾಣ ಕೈಗೊಂಡಿದ್ದ ನಟಿ ರನ್ಯಾ Read More »

ಬೆಳ್ಳಂಬೆಳಗ್ಗೆ ಭ್ರಷ್ಟ ಅಧಿಕಾರಿಗಳಿಗೆ ಲೋಕಾಯುಕ್ತ ಶಾಕ್‌ : ಹಲವೆಡೆ ದಾಳಿ

ಬೆಂಗಳೂರು: ಭ್ರಷ್ಟ ಅಧಿಕಾರಿಗಳಿಗೆ ಲೋಕಾಯುಕ್ತ ಬೆಳ್ಳಂಬೆಳಗ್ಗೆ ಶಾಕ್‌ ನೀಡಿದೆ. ಬೆಂಗಳೂರು ಸೇರಿದಂತೆ ರಾಜ್ಯದ ಹಲವೆಡೆಗಳಲ್ಲಿ ಲೋಕಾಯುಕ್ತ ಅಧಿಕಾರಿಗಳು ದಾಳಿ ನಡೆಸಿದ್ದಾರೆ. ಬೆಂಗಳೂರಿನ ಜಿಆರ್‌ಪಿಎ ಚೀಫ್‌ ಎಂಜಿನಿಯರ್ ನಂಜುಂಡಪ್ಪ ಮತ್ತು ಬಿಬಿಎಂಪಿ ಎಕ್ಸಿಕ್ಯೂಟಿವ್ ಎಂಜಿನಿಯರ್‌‌ ಎಚ್‌.ಪಿ ಕಲ್ಲೇಶಪ್ಪ ಮನೆಗಳ ಮೇಲೆ ದಾಳಿ ನಡೆದಿದೆ. ಕೋಲಾರದಲ್ಲಿ ಬೆಸ್ಕಾಂ ಎಇಇ ಜಿ.ನಾಗರಾಜ್ ಮನೆ ಹಾಗೂ ಅವರಿಗೆ ಸೇರಿದ ಮೂರು ಸ್ಥಳಗಳಲ್ಲಿ ಲೋಕಾಯುಕ್ತ ಅಧಿಕಾರಿಗಳು ಪರಿಶೀಲನೆ ನಡೆಸಿದ್ದಾರೆ. ಇವರು ಈಗ ಬೆಂಗಳೂರಿನ ರಾಜಾಜಿನಗರದಲ್ಲಿ ಎಇಇ ಆಗಿ ಕಾರ್ಯ ನಿರ್ವಹಿಸುತ್ತಿದ್ದಾರೆ. ಇವರ ಸಂಬಂಧಿಕರೊಬ್ಬರ ಮನೆ

ಬೆಳ್ಳಂಬೆಳಗ್ಗೆ ಭ್ರಷ್ಟ ಅಧಿಕಾರಿಗಳಿಗೆ ಲೋಕಾಯುಕ್ತ ಶಾಕ್‌ : ಹಲವೆಡೆ ದಾಳಿ Read More »

ವಿಷಾಹಾರದಿಂದ ನರಳಿದ ಮಂಗಳೂರು ಜೈಲಿನ 45 ಕೈದಿಗಳು

ವಾಂತಿಭೇದಿಯಿಂದ ಪ್ರಜ್ಞಾಹೀನ ಸ್ಥಿತಿಗೆ ತಲುಪಿದ್ದ ಕೈದಿಗಳು ಮಂಗಳೂರು : ಮಂಗಳೂರು ಜೈಲಿನಲ್ಲಿ ನಿನ್ನೆ ವಿಷಾಹಾರ ಸೇವನೆಯಿಂದ ಸುಮಾರು 45 ಕೈದಿಗಳು ಅಸ್ವಸ್ಥರಾಗಿದ್ದು, ಈ ಪೈಕಿ ಓರ್ವ ಕೈದಿಗೆ ಐಸಿಯುನಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ. ಜೈಲಿನಲ್ಲಿ ನೀಡಿದ ಆಹಾರದಿಂದಾಗಿ ಫುಡ್ ಪಾಯಿಸನ್ ಆಗಿ ಹೊಟ್ಟೆನೋವಿನಿಂದ 45 ಕೈದಿಗಳು ನರಳಾಡಿದ್ದಾರೆ. ಏಕಾಏಕಿ ವಾಂತಿ ಮಾಡುತ್ತಾ ಹೊಟ್ಟೆನೋವಿನಿಂದ ಕೈದಿಗಳು ನರಳಾಡಿದ್ದಾರೆ. ಬಳಿಕ ಪ್ರಜ್ಞಾಹೀನ ಸ್ಥಿತಿಗೆ ತಲುಪಿದ ಕೈದಿಗಳನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ.ಅಸ್ವಸ್ಥ ಕೈದಿಗಳನ್ನ ಇತರ ಕೈದಿಗಳು ತಾವೇ ಹೊತ್ತುತಂದಿದ್ದಾರೆ. ಈ ವೇಳೆ ನಾವು ಆಸ್ಪತ್ರೆಗೆ

ವಿಷಾಹಾರದಿಂದ ನರಳಿದ ಮಂಗಳೂರು ಜೈಲಿನ 45 ಕೈದಿಗಳು Read More »

ಲಾರಿ ಅಡ್ಡಗಟ್ಟಿ ಜೀವ ಬೆದರಿಕೆ: ಪ್ರಕರಣ ದಾಖಲು

ಕಡಬ,ಮಾ.5: ಕಡಬ ಠಾಣಾ ವ್ಯಾಪ್ತಿಯ ಅಡ್ಡಗದ್ದೆ ಎಂಬಲ್ಲಿಂದ ಲಾರಿಯಲ್ಲಿ  ಮಣ್ಣು ಸಾಗಿಸಿ ದೇವಸ್ಥಾನದ ಬಳಿ  ಹಾಕಿ ರಸ್ತೆಯಲ್ಲಿ  ಹೋಗುವಾಗ ನ್ಯೂಸ್ ರಿಪೋರ್ಟರ್ ಎಂದು ಹೇಳಿಕೊಂಡು  ಗಣೇಶ್ ಇಡಾಳ ಎಂಬಾತ ಲಾರಿ ಅಡ್ಡಗಟ್ಟಿ ಜೀವ ಬೆದರಿಕೆ ಒಡ್ಡಿರುವ ಬಗ್ಗೆ  ಕಡಬ ಠಾಣೆಯಲ್ಲಿ ಮಂಗಳವಾರ ರಾತ್ರಿ ಪ್ರಕರಣ ದಾಖಲಾಗಿದೆ. ಸುಳ್ಯ ತಾಲೂಕಿನ ಕೂತ್ಕುಂಜ ಗ್ರಾಮದ   ಚಿದ್ಗಲ್ ನಿವಾಸಿ ಪ್ರವೀಣ್ ಕುಮಾರ್ ಎಂಬವರು ನೀಡಿದ ದೂರಿನಂತೆ ಪ್ರಕರಣ ದಾಖಲಾಗಿದೆ.  ಪ್ರವೀಣ್ ಕುಮಾರ್ ಲಾರಿ ಚಾಲಕನಾಗಿ ದುಡಿಯುತ್ತಿದ್ದು, ಮಂಗಳವಾರ ರಾತ್ರಿ ಕಡಬದ  ಅಡ್ಡಗದ್ದೆ

ಲಾರಿ ಅಡ್ಡಗಟ್ಟಿ ಜೀವ ಬೆದರಿಕೆ: ಪ್ರಕರಣ ದಾಖಲು Read More »

15 ದಿನದಲ್ಲಿ ನಾಲ್ಕು ಸಲ ಗಲ್ಫ್‌ಗೆ ಹೋಗಿ ಬಂದಿದ್ದ ನಟಿ ರನ್ಯಾ

ಗೋಲ್ಡ್‌ ಸ್ಮಗ್ಲಿಂಗ್‌ ಗ್ಯಾಂಗಿಗಾಗಿ ಕೆಲಸ ಮಾಡುತ್ತಿರುವ ಅನುಮಾನ ಬೆಂಗಳೂರು : ವಿದೇಶದಿಂದ ಚಿನ್ನ ಕಳ್ಳಸಾಗಾಟ ಮಾಡಿದ ಕೇಸ್‌ನಲ್ಲಿ ಸೆರೆಯಾಗಿರುವ ಕನ್ನಡದ ನಟಿ ರನ್ಯಾ ರಾವ್‌ ಹಿಂದೆ ಗೋಲ್ಡ್‌ ಸ್ಮಗ್ಲಿಂಗ್‌ನ ವ್ಯವಸ್ಥಿತ ಜಾಲವೊಂದು ಇರುವ ಬಗ್ಗೆ ಡಿಆರ್‌ಐ ಅಧಿಕಾರಿಗಳು ಅನುಮಾನ ವ್ಯಕ್ತಪಡಿಸಿದ್ದಾರೆ. ಈ ನಟಿ ಕಳೆದ 15 ದಿನಗಳಲ್ಲಿ ನಾಲ್ಕು ಬಾರಿ ಗಲ್ಫ್ ದೇಶಕ್ಕೆ ಹೋಗಿ ಬಂದಿದ್ದಳಂತೆ. ವಿಮಾನ ನಿಲ್ದಾಣದಲ್ಲಿ ಹಿರಿಯ ಅಧಿಕಾರಿಗಳು ಬಳಸುವ ಅಫಿಷಿಯಲ್ ಪ್ರೊಟೊಕಾಲ್ ಸರ್ವೀಸ್ ಬಳಸಿ ಸೆಕ್ಯುರಿಟಿ ಚೆಕ್‌ನಿಂದ ತಪ್ಪಿಸಿಕೊಳ್ಳುತ್ತಿದ್ದಳು. ಪ್ರತಿಬಾರಿ ಚಿನ್ನ ಕಳ್ಳಸಾಗಾಟಕ್ಕೆ

15 ದಿನದಲ್ಲಿ ನಾಲ್ಕು ಸಲ ಗಲ್ಫ್‌ಗೆ ಹೋಗಿ ಬಂದಿದ್ದ ನಟಿ ರನ್ಯಾ Read More »

ಗೋಲ್ಡ್‌ ಸ್ಮಗ್ಲಿಂಗ್‌ ಕೇಸ್‌ : ನಟಿಯ ಮನೆಯಲ್ಲಿ ಸಿಕ್ಕಿತು ಕೋಟಿಗಟ್ಟಲೆ ಮೌಲ್ಯದ ಚಿನ್ನ, ನಗದು

ತಿಂಗಳಿಗೆ 4.5 ಲ.ರೂ. ಬಾಡಿಗೆಯ ಐಷರಾಮಿ ಫ್ಲ್ಯಾಟ್‌ನಲ್ಲಿ ವಾಸವಾಗಿರುವ ರನ್ಯಾ ರಾವ್‌ ಬೆಂಗಳೂರು: ದುಬೈಯಿಂದ ಸುಮಾರು 15 ಕೆಜಿ ಚಿನ್ನ ಅಕ್ರಮವಾಗಿ ತಂದು ವಿಮಾನ ನಿಲ್ದಾಣದಲ್ಲಿ ಡಿಆರ್‌ಐ ಅಧಿಕಾರಿಗಳ ಕೈಗೆ ಸಿಕ್ಕಿಬಿದ್ದಿರುವ ಕನ್ನಡದ ನಟಿ ರನ್ಯಾ ರಾವ್‌ ಫ್ಲ್ಯಾಟ್‌ನಲ್ಲೂ ಕೋಟಿಗಟ್ಟಲೆ ಮೌಲ್ಯದ ಚಿನ್ನ ಮತ್ತು ನಗದು ಸಿಕ್ಕಿದೆ. ನಟಿ ರನ್ಯಾ ರಾವ್‌ ಬಹಳ ಕಾಲದಿಂದ ಚಿನ್ನ ಸ್ಮಗ್ಲಿಂಗ್‌ಗನ್ನಲಿ ಭಾಗಿಯಾಗಿದ್ದಾಳೆ ಎನ್ನುವ ಅನುಮಾನ ಮೂಡಿದೆ. ನಿನ್ನೆ ರಾತ್ರಿ ಡಿಆರ್‌ಐ ಅಧಿಕಾರಿಗಳು ಬೆಂಗಳೂರಿನ ಲ್ಯಾವೆಲ್ಲಿ ರಸ್ತೆಯಲ್ಲಿರುವ ನಟಿಯ ಫ್ಲ್ಯಾಟ್‌ಗೆ ದಾಳಿ

ಗೋಲ್ಡ್‌ ಸ್ಮಗ್ಲಿಂಗ್‌ ಕೇಸ್‌ : ನಟಿಯ ಮನೆಯಲ್ಲಿ ಸಿಕ್ಕಿತು ಕೋಟಿಗಟ್ಟಲೆ ಮೌಲ್ಯದ ಚಿನ್ನ, ನಗದು Read More »

ತಪ್ಪಿಸಿಕೊಳ್ಳಲು ಯತ್ನಿಸುವಾಗ ಸರಣಿ ಅಪಘಾತ : ನಾಲ್ಕು ಕಾರು, ಸ್ಕೂಟಿಗೆ ಡಿಕ್ಕಿ

ರೌಡಿಯನ್ನು ಸಿನಿಮೀಯ ರೀತಿಯಲ್ಲಿ ಬಂಧಿಸಿದ ಮಣಿಪಾಲ ಪೊಲೀಸರು ಉಡುಪಿ: ಮಣಿಪಾಲದಲ್ಲಿ ಸಿನಿಮೀಯ ಶೈಲಿಯಲ್ಲಿ ಕುಖ್ಯಾತ ಕ್ರಿಮಿನಲ್‌ ಒಬ್ಬನನ್ನು ಪೊಲೀಸರು ಬಂಧಿಸಿದ್ದಾರೆ. ಈತ ಪೊಲೀಸರಿಂದ ತಪ್ಪಿಸಿಕೊಳ್ಳಲು ಯತ್ನಿಸಿದಾಗ ಸರಣಿ ಅಪಘಾತವಾಗಿ ಹಲವು ವಾಹನಗಳಿಗೆ ಹಾನಿ ಸಂಭವಿಸಿದೆ. ಬೆಂಗಳೂರಿನ ಕುಖ್ಯಾತ ಪಾತಕಿ ಇಸಾಕ್‌ ಎಂಬಾತನನ್ನು ಪೊಲೀಸರು ಸಿನಿಮೀಯ ರೀತಿಯಲ್ಲಿ ಬೆನ್ನಟ್ಟಿ ಸೆರೆ ಹಿಡಿದಿದ್ದಾರೆ. ಮಣಿಪಾಲದ ಜಿಲ್ಲಾಧಿಕಾರಿ ಕಚೇರಿ ರಸ್ತೆಯಲ್ಲಿ ಘಟನೆ ನಡೆದಿದೆ. ನೆಲಮಂಗಲ ಪೊಲೀಸರನ್ನು ಕಂಡು ಕಾರಿನಲ್ಲಿ ಪರಾರಿಯಾಗಲು ಆರೋಪಿ ಯತ್ನಿಸಿದ್ದ. ಬೆಂಬಿಡದೆ ಪೊಲೀಸರು ಚೇಸ್‌ ಮಾಡಿದ್ದಾರೆ. ತಕ್ಷಣ ಮಣಿಪಾಲ

ತಪ್ಪಿಸಿಕೊಳ್ಳಲು ಯತ್ನಿಸುವಾಗ ಸರಣಿ ಅಪಘಾತ : ನಾಲ್ಕು ಕಾರು, ಸ್ಕೂಟಿಗೆ ಡಿಕ್ಕಿ Read More »

ಮಹಿಳಾ ಅಧಿಕಾರಿಯೊಬ್ಬರ ಲೈಂಗಿಕ ಕಿರುಕಳ | ನೊಂದ ವ್ಯಕ್ತಿಯೋರ್ವ ಆತ್ಮಹತ್ಯೆಗೆ ಶರಣು

ಮಂಗಳೂರು: ಸಿಐಎಸ್‌ಎಫ್ ಮಹಿಳಾ ಅಧಿಕಾರಿಯೊಬ್ಬರು ಲೈಂಗಿಕವಾಗಿ ಬಳಸಿಕೊಂಡು ಮೋಸ ಮಾಡಿದ್ದಾರೆ ಎಂದು ಆರೋಪಿಸಿ ಉತ್ತರ ಪ್ರದೇಶದ ವ್ಯಕ್ತಿಯೋರ್ವ ಆತ್ಮಹತ್ಯೆ ಮಾಡಿಕೊಂಡ ಘಟನೆ ಇಂದು ಮಂಗಳೂರಿನಲ್ಲಿ ನಡೆದಿದೆ. ಮಂಗಳೂರಿನ ರಾವ್ ಸರ್ಕಲ್ ಬಳಿಯ ಲಾಡ್ಜ್‌ ನಲ್ಲಿ ನೇಣಿಗೆ ಶರಣಾದ ಮೃತ ವ್ಯಕ್ತಿಯನ್ನು ಉತ್ತರ ಪ್ರದೇಶದ ಗಾಜಿಪುರದ ಅಭಿಷೇಕ್ ಸಿಂಗ್(40) ಎಂದು ಪತ್ತೆಹಚ್ಚಲಾಗಿದೆ. ಅಭಿಷೇಕ್ ಸಿಂಗ್ ಆತ್ಮಹತ್ಯೆ ಮಾಡಿಕಳ್ಳುವ  ಮುಂಚಿತವಾಗಿ ವಿಡಿಯೋ ರೆಕಾರ್ಡ್ ನಲ್ಲಿ ಸಿಐಎಸ್‌ಎಫ್ ಸಹಾಯಕ ಕಮಾಂಡೆಂಟ್ ಮೋನಿಕಾ ಸಿಹಾಗ್ ತನ್ನನ್ನು ಮದುವೆಯಾಗುವುದಾಗಿ ನಂಬಿಸಿ ದೈಹಿಕ ಸಂಬಂಧ ಬೆಳೆಸಿ

ಮಹಿಳಾ ಅಧಿಕಾರಿಯೊಬ್ಬರ ಲೈಂಗಿಕ ಕಿರುಕಳ | ನೊಂದ ವ್ಯಕ್ತಿಯೋರ್ವ ಆತ್ಮಹತ್ಯೆಗೆ ಶರಣು Read More »

error: Content is protected !!
Scroll to Top