ಅಪರಾಧ

ಮೇ 4ರ ತನಕ ನಾಲ್ಕು ತಾಲೂಕುಗಳಲ್ಲಿ ಮದ್ಯ ಮಾರಾಟ ನಿಷೇಧ : ಡಿಸಿ ಆದೇಶ

ಪುತ್ತೂರು, ಬೆಳ್ತಂಗಡಿ, ಕಡಬ, ಸುಳ್ಯ ತಾಲೂಕುಗಳಲ್ಲಿ ಬಾರ್‌, ಮದ್ಯದಂಗಡಿಗಳು ಬಂದ್‌ ಮಂಗಳೂರು: ದಕ್ಷಿಣ ಕನ್ನಡ ಜಿಲ್ಲೆಯ ಬೆಳ್ತಂಗಡಿ, ಪುತ್ತೂರು, ಕಡಬ ಮತ್ತು ಸುಳ್ಯ ತಾಲೂಕುಗಳಲ್ಲಿ ಮದ್ಯ ಮಾರಾಟ ನಿಷೇಧಿಸಿ ಜಿಲ್ಲಾಧಿಕಾರಿ ಆದೇಶ ಹೊರಡಿಸಿದ್ದಾರೆ.ಇದಲ್ಲದೆ ಮಂಗಳೂರು ಆಯುಕ್ತರ ವ್ಯಾಪ್ತಿಯಲ್ಲಿ ಮೇ 2ರಿಂದ ಮೇ 4ರಂದು ಬೆಳಿಗ್ಗೆ 6 ಗಂಟೆಯವರೆಗೆ ಮದ್ಯ ಮಾರಾಟವನ್ನು ನಿಷೇಧಿಸಲಾಗಿದೆ. ಮಂಗಳೂರು ಪೊಲೀಸ್ ಕಮಿಷನರೇಟ್ ವ್ಯಾಪ್ತಿಯ ಬಜ್ಪೆ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ದುಷ್ಕರ್ಮಿಗಳು ರೌಡಿ ಶೀಟರ್ ಮತ್ತು ಕಾರ್ಯಕರ್ತ ಸುಹಾಸ್ ಶೆಟ್ಟಿ ಅವರನ್ನು ಹತ್ಯೆ ಮಾಡಿದ […]

ಮೇ 4ರ ತನಕ ನಾಲ್ಕು ತಾಲೂಕುಗಳಲ್ಲಿ ಮದ್ಯ ಮಾರಾಟ ನಿಷೇಧ : ಡಿಸಿ ಆದೇಶ Read More »

ಹತ್ಯೆಯಾದ ಸುಹಾಸ್‌ ಶೆಟ್ಟಿ ಕುಟುಂಬಕ್ಕೆ ಬಿಜೆಪಿಯಿಂದ 25 ಲ.ರೂ. ಪರಿಹಾರ

ತನಿಖೆಯನ್ನು ಎನ್‌ಐಎಗೊಪ್ಪಿಸಲು ವಿಜಯೇಂದ್ರ ಆಗ್ರಹ ಮಂಗಳೂರು: ಗುರುವಾರ ರಾತ್ರಿ ಬಜಪೆ ಬಳಿ ದುಷ್ಕರ್ಮಿಗಳಿಂದ ಬರ್ಬರವಾಗಿ ಹತ್ಯೆಯಾಗಿರುವ ಹಿಂದೂ ಕಾರ್ಯಕರ್ತ ಸುಹಾಸ್ ಶೆಟ್ಟಿ ಕುಟುಂಬಕ್ಕೆ ಬಿಜೆಪಿ ವತಿಯಿಂದ 25 ಲಕ್ಷ ರೂ. ಪರಿಹಾರ ನೀಡುವುದಾಗಿ ರಾಜ್ಯ ಬಿಜೆಪಿ ಅಧ್ಯಕ್ಷ ಬಿ.ವೈ ವಿಜಯೇಂದ್ರ ಘೋಷಣೆ ಮಾಡಿದ್ದಾರೆ. ನಿನ್ನೆ ಮೃತ ಸುಹಾಸ್ ಶೆಟ್ಟಿ ಅಂತಿಮ ದರ್ಶನ ಪಡೆದ ಬಳಿಕ ಮಾತನಾಡಿದ ಅವರು, ಕಾಶ್ಮೀರ ಪಹಲ್ಗಾಮ್ ಹತ್ಯೆ ಮರೆಯುವ ಮೊದಲೇ ಮಂಗಳೂರಿನಲ್ಲಿ ಘಟನೆ ನಡೆದಿರುವುದು ಖಂಡನಾರ್ಹ. ಬಿಜೆಪಿ ಈ ಘಟನೆಯನ್ನು ಬಹಳ ಗಂಭೀರವಾಗಿ

ಹತ್ಯೆಯಾದ ಸುಹಾಸ್‌ ಶೆಟ್ಟಿ ಕುಟುಂಬಕ್ಕೆ ಬಿಜೆಪಿಯಿಂದ 25 ಲ.ರೂ. ಪರಿಹಾರ Read More »

ಸುಹಾಸ್‌ ಶೆಟ್ಟಿ ಹತ್ಯೆ ಬೆನ್ನಲ್ಲೇ ಇಬ್ಬರ ಕೊಲೆಗೆ ಯತ್ನ

ಕೂದಲೆಳೆ ಅಂತರದಿಂದ ಪಾರಾದ ಇಬ್ಬರು ಯುವಕರು ಉಡುಪಿ: ಮಂಗಳೂರಿನ ಬಜ್ಪೆ ಕಿನ್ನಿಪದವು ಬಳಿ ನಿನ್ನೆ ಹಿಂದೂ ಕಾರ್ಯಕರ್ತ ಸುಹಾಸ್ ಶೆಟ್ಟಿ ಕೊಲೆ ಆದ ಬೆನ್ನಲ್ಲೇ ಉಡುಪಿ ಸಮೀಪ ಆತ್ರಾಡಿಯಲ್ಲಿ ಮುಸ್ಲಿಂ ಯುವಕನ ಕೊಲೆಗೆ ಯತ್ನಿಸಿರುವ ಘಟನೆ ನಡೆದಿದೆ. ಅಬೂಬಕ್ಕರ್ ಹಲ್ಲೆಗೊಳಗಾದ ಮುಸ್ಲಿಂ ಯುವಕ. ಹಿರಿಯಡಕ ಠಾಣೆ ಪೊಲೀಸರು ಇಬ್ಬರನ್ನು ಬಂಧಿಸಿದ್ದು, ಸುಹಾಸ್ ಶೆಟ್ಟಿ ಹತ್ಯೆಗೆ ಪ್ರತೀಕಾರವಾಗಿ ಕೊಲೆ ಮಾಡಲು ಯತ್ನಿಸಿರುವುದಾಗಿ ಆರೋಪಿಗಳು ಒಪ್ಪಿಕೊಂಡಿದ್ದಾರೆ ಎಮದು ಪೊಲೀಸರು ತಿಳಿಸಿದ್ದಾರೆ. ಸುಶಾಂತ್ ಮತ್ತು ಸಂದೇಶ್ ಪೂಜಾರಿ ಬಂಧಿತ ಆರೋಪಿಗಳು. ನಿನ್ನೆ

ಸುಹಾಸ್‌ ಶೆಟ್ಟಿ ಹತ್ಯೆ ಬೆನ್ನಲ್ಲೇ ಇಬ್ಬರ ಕೊಲೆಗೆ ಯತ್ನ Read More »

ಸುಹಾಸ್ ಶೆಟ್ಟಿ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಎನ್ ಐ ಎ ತನಿಖೆಗೆ ಒತ್ತಾಯಿಸಿ ಅಮಿತ್ ಶಾ ಗೆ ಪತ್ರ ಬರೆದ ಬ್ರಿಜೇಶ್ ಚೌಟ

ನಮ್ಮ ಕಾರ್ಯಕರ್ತ ಸುಹಾಸ್ ಶೆಟ್ಟಿಯವರ ಭೀಕರ ಸಾರ್ವಜನಿಕ ಹತ್ಯೆಯು ಮತ್ತೊಮ್ಮೆ ಕರಾವಳಿಗರ ಹೃದಯದಲ್ಲಿ ಮನಸ್ಸಿನಲ್ಲಿ ಅಳಿಸಲಾಗದ ಆಘಾತ ಸೃಷ್ಟಿಸಿದೆ. ಇಂತಹ ನೋವು ಮೊದಲನೆಯದಲ್ಲ, ಹೊಸತೂ ಅಲ್ಲ. ಕಾಂಗ್ರೆಸ್ ಅಧಿಕಾರಕ್ಕೆ ಬಂದಾಗಲೆಲ್ಲಾ ನಮ್ಮ ಭಾಗದ ಹಿಂದೂ ಕಾರ್ಯಕರ್ತರ ಗುರಿಯಾಗಿ ಹತ್ಯೆಗಳ ಪ್ರವೃತ್ತಿ ಹೆಚ್ಚಾಗುತ್ತವೆ ಎಂದು ಸಂಸದ ಬ್ರಿಜೇಶ್ ಚೌಟ ಹೇಳಿದರು. ಬಿಜೆಪಿ ಕಾರ್ಯಕರ್ತ ಪ್ರವೀಣ್ ನೆಟ್ಟಾರು ಅವರನ್ನು ಗುರಿ ಇಟ್ಟು ನಡೆಸಿದ ಹತ್ಯೆಯ ರೀತಿಯಲ್ಲಿಯೇ ಈ ಘಟನೆಯು ನಡೆದಿದೆ. ಈ ರೀತಿಯ ಹತ್ಯೆಯು ಈ ಪ್ರದೇಶದಲ್ಲಿ ಪಿಎಫ್‌ಐ ನಂತಹ

ಸುಹಾಸ್ ಶೆಟ್ಟಿ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಎನ್ ಐ ಎ ತನಿಖೆಗೆ ಒತ್ತಾಯಿಸಿ ಅಮಿತ್ ಶಾ ಗೆ ಪತ್ರ ಬರೆದ ಬ್ರಿಜೇಶ್ ಚೌಟ Read More »

ಮಂಗಳೂರಿನಲ್ಲಿ ಮೇ 6ರ ತನಕ ನಿಷೇಧಾಜ್ಞೆ : ನಗರ ಸಂಪೂರ್ಣ ಸ್ತಬ್ಧ

ಕೆಲವು ಬಸ್‌ಗಳಿಗೆ ಕಲ್ಲುತೂರಾಟ; ಅಂಗಡಿ ಹೋಟೆಲ್‌ಗಳು ಬಂದ್‌ ಮಂಗಳೂರು: ಹಿಂದೂ ಕಾರ್ಯಕರ್ತ ಸುಹಾಸ್‌ ಶೆಟ್ಟಿ ಕೊಲೆ ಹಿನ್ನೆಲೆಯಲ್ಲಿ ಪರಿಸ್ಥಿತಿ ಉದ್ವಿಗ್ನಗೊಂಡಿರುವುದನ್ನು ಅನುಸರಿಸಿ ಮಂಗಳೂರು ನಗರ ಪೊಲೀಸ್ ಕಮಿಷನರೇಟ್ ತಕ್ಷಣದಿಂದಲೇ ಭಾರತೀಯ ನಾಗರಿಕ ಸುರಕ್ಷಾ ಸಂಹಿತೆ (ಬಿಎನ್‌ಎಸ್), 2023ರ ಸೆಕ್ಷನ್ 163ರ ಅಡಿಯಲ್ಲಿ ನಿಷೇಧಾಜ್ಞೆ ಜಾರಿಗೊಳಿಸಿದೆ. ಈ ಆದೇಶ ಶುಕ್ರವಾರ ಬೆಳಗ್ಗೆ 6 ಗಂಟೆಯಿಂದ ಜಾರಿಗೆ ಬಂದಿದ್ದು, ಮೇ 6 ಬೆಳಗ್ಗೆ 6 ಗಂಟೆಯವರೆಗೆ ಜಾರಿಯಲ್ಲಿರುತ್ತದೆ. ನಗರ ಪೊಲೀಸ್ ಆಯುಕ್ತರಾದ ಅನುಪಮ್ ಅಗ್ರವಾಲ್ ಈ ನಿಷೇಧಾಜ್ಞೆಯನ್ನು ತಕ್ಷಣದಿಂದಲೇ ಜಾರಿಗೆ

ಮಂಗಳೂರಿನಲ್ಲಿ ಮೇ 6ರ ತನಕ ನಿಷೇಧಾಜ್ಞೆ : ನಗರ ಸಂಪೂರ್ಣ ಸ್ತಬ್ಧ Read More »

ಪುತ್ತೂರಿನ ಬಂದ್ ಮಾಡದ ಅಂಗಡಿಗಳ ವಿರುದ್ಧ ಹಿಂದೂ ಸಂಘಟನೆಗಳಿಂದ ಆಕ್ರೋಶ | ಪುತ್ತೂರು ಬಸ್‍ ನಿಲ್ದಾಣದ ಬಳಿ ಜಮಾಯಿಸಿದ ಹಿಂದೂ ಸಂಘಟನೆಗಳು

ಪುತ್ತೂರು: ಸುಹಾಸ್‍ ಶೆಟ್ಟಿ ಹತ್ಯೆ  ಹಿನ್ನಲೆಯಲ್ಲಿ ವಿಶ್ವ ಹಿಂದೂ ಪರಿಷದ್ ಬಂದ್ ಗೆ ಕರೆ ನೀಡಿದರೂ ಶುಕ್ರವಾರ ಪುತ್ತೂರಿನಲ್ಲಿ ಕೆಲವು ಅಂಗಡಿಗಳು ಬಂದ್‍ ಮಾಡದ ಕಾರಣ ಆಕ್ರೋಶ ವ್ಯಕ್ತಪಡಿಸಿದ ಹಿಂದೂ ಪರ ಸಂಘಟನೆಗಳು, ಪುತ್ತೂರು ಬಸ್ ನಿಲ್ದಾಣ ಬಳಿ ಜಮಾಯಿಸಿದ ಘಟನೆ ನಡೆದಿದೆ. 11 ಗಂಟೆ ಸುಮಾರಿಗೆ ಅರುಣ್ ಕುಮಾರ್ ಪುತ್ತಿಲ ಅವರು ಪೊಲೀಸರ ಜೊತೆ ಮಾತನಾಡಿ, ಅಂಗಡಿಗಳನ್ನು ಬಂದ್ ಮಾಡಿಸಿ, ಹಾಗೊಂದು ವೇಳೆ ಬಂದ್ ಮಾಡದೇ ಇದ್ದರೆ ಸವಾಲು ಎದುರಿಸಲು ಸಿದ್ಧ ಎಂದರು. ಮುರಳೀಕೃಷ್ಣ ಹಸಂತ್ತಡ್ಕ

ಪುತ್ತೂರಿನ ಬಂದ್ ಮಾಡದ ಅಂಗಡಿಗಳ ವಿರುದ್ಧ ಹಿಂದೂ ಸಂಘಟನೆಗಳಿಂದ ಆಕ್ರೋಶ | ಪುತ್ತೂರು ಬಸ್‍ ನಿಲ್ದಾಣದ ಬಳಿ ಜಮಾಯಿಸಿದ ಹಿಂದೂ ಸಂಘಟನೆಗಳು Read More »

ಹಿಂದೂ ಕಾರ್ಯಕರ್ತ ಸುಹಾಸ್‍ ಶೆಟ್ಟಿ ಹತ್ಯೆ | ವಿಎಚ್‍ ಪಿ ಬಂದ್‍ ಕರೆಗೆ ಪುತ್ತೂರಿನಲ್ಲಿ ವ್ಯಾಪಕ ಬೆಂಬಲ

ಪುತ್ತೂರು: ಹಿಂದೂ ಕಾರ್ಯಕರ್ತ ಸುಹಾಸ್‍ ಶೆಟ್ಟಿ ಅವರ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿ ವಿಶ್ವ ಹಿಂದೂ ಪರಿಷದ್ ಕರೆ ನೀಡಿದ ಬಂದ್‍ ಗೆ ಪುತ್ತೂರಿನಾದ್ಯಂತ ವ್ಯಾಪಕ ಬೆಂಬಲ ವ್ಯಕ್ತವಾಗಿದೆ. ಬಂದ್‍ ಕರೆ ನೀಡಿದ ಬೆನ್ನಲ್ಲೇ ಪುತ್ತೂರಿನ ಎಲ್ಲಾ ವರ್ತಕರು ತಮ್ಮ ಅಂಗಡಿ ಮುಂಗಟ್ಟುಗಳನ್ನು ಬಂದ್ ಮಾಡಿದ್ದಾರೆ. ನ್ಯೂಸ್‍ ಪೇಪರ್‍ ಏಜೆನ್ಸಿ,ಹಾಲು, ಮೆಡಿಕಲ್‍, ಆಸ್ಪತ್ರೆ ಇನ್ನಿತರ ಪ್ರಮುಖ ಅಂಗಡಿಗಳು ತೆರೆದಿದ್ದವು. ಕೆಲವೆಡೆ ಹೊಟೇಲ್ ಗಳು ಅರ್ಧ ತೆರೆದಿದ್ದಿರುವುದು ಕಂಡು ಬಂದಿದೆ. ಆಟೋ, ಕಾರು ಮುಂತಾದ ಖಾಸಗಿ ವಾಹನಗಳ ಓಡಾಟ ನಡೆಸುತ್ತಿದ್ದವು.

ಹಿಂದೂ ಕಾರ್ಯಕರ್ತ ಸುಹಾಸ್‍ ಶೆಟ್ಟಿ ಹತ್ಯೆ | ವಿಎಚ್‍ ಪಿ ಬಂದ್‍ ಕರೆಗೆ ಪುತ್ತೂರಿನಲ್ಲಿ ವ್ಯಾಪಕ ಬೆಂಬಲ Read More »

ಹಿಂದೂ ಕಾರ್ಯಕರ್ತ ಸುಹಾಸ್‍ ಶೆಟ್ಟಿ ಹತ್ಯೆ | ಬಂಟ್ವಾಳದಲ್ಲಿ ಅಂತ್ಯಕ್ರಿಯೆಗೆ ತಯಾರಿ

ಮಂಗಳೂರು: ಗುರುವಾರ ಸಂಜೆ ಹಿಂದೂ ಕಾರ್ಯಕರ್ತ ಸುಹಾಸ್ ಶೆಟ್ಟಿ ಹತ್ಯೆ ನಡೆದಿದ್ದು, ಅವರ ಅಂತ್ಯಕ್ರಿಯೆ ಬಂಟ್ವಾಳದಲ್ಲಿ ನಡೆಯಲಿದೆ. ಸುಹಾಸ್ ಶೆಟ್ಟಿ ಅವರ ಮೃತದೇಹ ಮೆರವಣಿಗೆ ಮೂಲಕ ತರಲಾಗುತ್ತಿದ್ದು, ಬಂಟ್ವಾಳ ದಲ್ಲಿ ಅವರ ಅಂತ್ಯಕ್ರಿಯೆ ನಡೆಯಲಿದೆ ಎಂದು ತಿಳಿದು ಬಂದಿದೆ. ಹತ್ಯೆ ಪ್ರಕರಣವನ್ನು ಖಂಡಿಸಿ ವಿಶ್ವ ಹಿಂದೂ ಪರಿಷತ್ ಶುಕ್ರವಾರ ದ.ಕ.ಜಿಲ್ಲಾದ್ಯಂತ ಬಂದ್‍ ಗೆ ಕರೆ ನೀಡಿದೆ. ಇಂದು ಬೆಳಿಗ್ಗೆ ಬಂದ್‍ ಗೆ ಕರೆ ನೀಡುತ್ತಿದ್ದಂತೆ ಮಂಗಳೂರಿನಲ್ಲಿ ಕೆಲವು ಬಸ್‍ ಗಳಿಗೆ ಕಲ್ಲು ತೂರಾಟ ನಡೆದ ಘಟನೆಯೂ ನಡೆಯಿತು.

ಹಿಂದೂ ಕಾರ್ಯಕರ್ತ ಸುಹಾಸ್‍ ಶೆಟ್ಟಿ ಹತ್ಯೆ | ಬಂಟ್ವಾಳದಲ್ಲಿ ಅಂತ್ಯಕ್ರಿಯೆಗೆ ತಯಾರಿ Read More »

ಮಂಗಳೂರಿನಲ್ಲಿ ಅಹಿತಕರ ಘಟನೆ | ಮೇ 5 ರ ತನಕ ದ.ಕ. ಜಿಲ್ಲಾದ್ಯಂತ ನಿಷೇದಾಜ್ಞೆ ಜಾರಿ

ಮಂಗಳೂರು: ಗುರುವಾರ ಸಂಜೆ ಮಂಗಳೂರಿನ ಬಜ್ಪೆ ಪರಿಸರ ಹಾಗೂ ಉಳ್ಳಾಲದಲ್ಲಿ ಅಹಿತಕರ ಘಟನೆ ನಡೆದ ಹಿನ್ನೆಲೆಯಲ್ಲಿ ದಕ್ಷಿಣ ಕನ್ನಡ ಜಿಲ್ಲಾ ವ್ಯಾಪ್ತಿಯಲ್ಲಿ ಕಾನೂನು ಸುವ್ಯವಸ್ಥೆ ಕಾಪಾಡುವ ನಿಟ್ಟಿನಲ್ಲಿ ಮೇ 5 ರ ತನಕ ನಿಷೇದಾಜ್ಞೆ ಜಾರಿ ಮಾಡಿ ದ.ಕ.ಜಿಲ್ಲಾಧಿಕಾರಿ ಆದೇಶಿರುತ್ತಾರೆ. ಗುರುವಾರ ಸಂಜೆ ಹಿಂದೂ ಕಾರ್ಯಕರ್ತ ಸುಹಾಸ್‍ ಶೆಟ್ಟಿ ಹತ್ಯೆಯಾದ ಬೆನ್ನಲ್ಲೆ ಉಳ್ಳಾಲದಲ್ಲಿ ಗುಂಪೊಂದು ವ್ಯಕ್ತಿಯೊಬ್ಬನಿಗೆ ಹಲ್ಲೆ ನಡೆಸಿತ್ತು. ಈ ಎರಡು ಪ್ರಕರಣದ ನಡೆದ ಹಿನ್ನಲೆಯಲ್ಲಿ ಯಾವುದೇ ಅಹಿತಕರ ಘಟನೆ ನಡೆಯದಂತೆ ಕಟ್ಟೆಚ್ಚರವಾಗಿ ನಿಷೇದಾಜ್ಞೆ ಆದೇಶ ಹೊರಡಿಸಿದ್ದಾರೆ.

ಮಂಗಳೂರಿನಲ್ಲಿ ಅಹಿತಕರ ಘಟನೆ | ಮೇ 5 ರ ತನಕ ದ.ಕ. ಜಿಲ್ಲಾದ್ಯಂತ ನಿಷೇದಾಜ್ಞೆ ಜಾರಿ Read More »

ಆರೋಪಿಗಳ ಸುಳಿವು ಪತ್ತೆ, ಕಾರುಗಳು ವಶ : ಎಡಿಜಿಪಿ ಆರ್.ಹಿತೇಂದ್ರ ಮಾಹಿತಿ

ತನಿಖೆಗೆ ವಿಶೇಷ ತಂಡ ರಚನೆ; ಶಾಂತಿ ಕಾಪಾಡಲು ಮನವಿ ಮಂಗಳೂರು: ಮಂಗಳೂರು ಪೊಲೀಸರು ಆರೋಪಿಗಳ ಸುಳಿವು ಪತ್ತೆ ಹಚ್ಚಿದ್ದಾರೆ. ಸುಹಾಸ್ ಶೆಟ್ಟಿ ಮೇಲೆ ದಾಳಿ ನಡೆಸಿ ಪರಾರಿಯಾದ ಆರೋಪಿಗಳು ಯಾರು ಎಂದು ನಮಗೆ ಗೊತ್ತಾಗಿದೆ. ಆರೋಪಿಗಳ ಬಂಧನಕ್ಕೆ ತಂಡ ರಚನೆ ಮಾಡುತ್ತೇವೆ. ಆರೋಪಿಗಳ ಸುಳಿವನ್ನು ಈಗಾಗಲೇ ಪತ್ತೆ ಹಚ್ಚಿಲಾಗಿದೆ ಎಂದು ಎಡಿಜಿಪಿ ಆರ್.ಹಿತೇಂದ್ರ ಹೇಳಿದ್ದಾರೆ. ಕಾನೂನು ಕೈಗೆತ್ತಿಕೊಂಡವರ ಮೇಲೆ ಕಾನೂನು ರೀತಿ ಕ್ರಮ ಆಗಲಿದೆ ಎಂದು ಹಿತೇಂದ್ರ ಹೇಳಿದ್ದಾರೆ. ಸ್ಥಳದ ಸಿಸಿಟಿವಿ ದೃಶ್ಯಗಳನ್ನು ಪೊಲೀಸರು ಪರಿಶೀಲಿಸಿದ್ದಾರೆ. ಇನ್ನು

ಆರೋಪಿಗಳ ಸುಳಿವು ಪತ್ತೆ, ಕಾರುಗಳು ವಶ : ಎಡಿಜಿಪಿ ಆರ್.ಹಿತೇಂದ್ರ ಮಾಹಿತಿ Read More »

error: Content is protected !!
Scroll to Top