ಅಪರಾಧ

ವಿದ್ಯುತ್‍ ಕಳ್ಳತನ : ಗುತ್ತಿಗೆದಾರ ಸಹಿತ ಬಳಕೆದಾರನ ಮೇಲೆ ಪ್ರಕರಣ ದಾಖಲು

ಸವಣೂರು: ವ್ಯಕ್ತಿಯೊಬ್ಬರು ವಿದ್ಯುತ್‍ ಕಳ್ಳತನ ಮಾಡಿರುವುದನ್ನು ಮೆಸ್ಕಾಂ ಜಾಗೃತ ದಳದ ಸಿಬ್ಬಂದಿಗಳು ಕಡಬ ತಾಲೂಕು ಸವಣೂರು ಗ್ರಾಮದ ಕಣಿಮಜಲು ಎಂಬಲ್ಲಿ ಪತ್ತೆಹಚ್ಚಿದ್ದಾರೆ. ಅಬ್ದುಲ್ ಆಸೀಫ್ ರೆಂಜಾಲಾಡಿ ಎಂಬವರ ತೋಟದಲ್ಲಿ ವಿದ್ಯುತ್ ಕಳ್ಳತನ ಮಾಡಿರುವುದರ ಕುರಿತು ಖಚಿತ ಮಾಹಿತಿ ಮೇರೆಗೆ ಮಂಗಳೂರು ಮೆಸ್ಕಾಂ ಜಾಗೃತದಳ ಸಿಬ್ಬಂದಿಗಳು ಪತ್ತೆ ಹಚ್ಚಿದ್ದಾರೆ. ವಿದ್ಯುತ್ ಕಂಬ ಅಳವಡಿಸಿ ಅನಧಿಕೃತವಾಗಿ ಸಂಪರ್ಕ ನೀಡಿದ ಗುತ್ತಿಗೆದಾರ ಬೈಟ್ ಪವರ್ ಪ್ಲಸ್ ತಾಜುದ್ದೀನ್ ಕೂರತ್ ಹಾಗೂ ಅಬ್ದುಲ್ ಆಸೀಫ್ ರೆಂಜಲಾಡಿಯವರ ಮೇಲೆ ಪ್ರಕರಣ ದಾಖಲಾಗಿದೆ.

ವಿದ್ಯುತ್‍ ಕಳ್ಳತನ : ಗುತ್ತಿಗೆದಾರ ಸಹಿತ ಬಳಕೆದಾರನ ಮೇಲೆ ಪ್ರಕರಣ ದಾಖಲು Read More »

ಲೈಂಗಿಕ ಕಿರುಕುಳ : ವೇಣೂರು ಠಾಣೆಯಲ್ಲಿ ಪ್ರಕರಣ ದಾಖಲು

ಬೆಳ್ತಂಗಡಿ: ಬಾಲಕಿಯೋರ್ವಳಿಗೆ ದೊಡ್ಡಮ್ಮನ ಮಗನೇ ಲೈಂಗಿಕ ಕಿರುಕುಳ ನೀಡಿದ ಘಟನೆ ಬೆಳ್ತಂಗಡಿ ತಾಲೂಕಿನ ಸುಲ್ಕೇರಿಮೊಗ್ರು ಎಂಬಲ್ಲಿ ನಡೆದಿದೆ. ಸುಲ್ಕೇರಿಮೊಗ್ರು ಹಿರಿಯ ಪ್ರಾಥಮಿಕ ಶಾಲೆಯ 5ನೇ ತರಗತಿ ವಿದ್ಯಾರ್ಥಿನಿಯೊಬ್ಬಳಿಗೆ ಲೈಂಗಿಕ ಕಿರುಕುಳವಾದ ಬಗ್ಗೆ ಶಿಕ್ಷಕಿಯೊಬ್ಬರಿಗೆ ಮಾಹಿತಿ ಸಿಕ್ಕಿದ್ದು, ಅವರು ಬಾಲಕಿಯನ್ನು ವಿಚಾರಣೆ ನಡೆಸಿದಾಗ ದೊಡ್ಡಮ್ಮನ ಮಗನು ದೇವರ ಗುಡ್ಡೆಯ ಮನೆಯಲ್ಲಿ ಹಾಗೂ ಮೂರು ಸಲ ಕುತ್ತೂರಿನ ಅಜ್ಜನ ಮನೆಯಲ್ಲಿ ಲೈಂಗಿಕ ದೌರ್ಜನ್ಯ ಎಸಗಿರುವ ಬಗ್ಗೆ ತಿಳಿಸಿದ್ದಳು. ಬಳಿಕ ಬಾಲಕಿಗೆ ತಾಯಿಗೆ ತಿಳಿಸಲಾಗಿದ್ದು ವೇಣೂರು ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಲಾಗಿದೆ.

ಲೈಂಗಿಕ ಕಿರುಕುಳ : ವೇಣೂರು ಠಾಣೆಯಲ್ಲಿ ಪ್ರಕರಣ ದಾಖಲು Read More »

ಬಾಲಕಿಗೆ ಲೈಂಗಿಕ ಕಿರುಕುಳ : ವೇಣೂರು ಠಾಣೆಯಲ್ಲಿ ಪ್ರಕರಣ ದಾಖಲು

ಬೆಳ್ತಂಗಡಿ: ಬಾಲಕಿಯೋರ್ವಳಿಗೆ ದೊಡ್ಡಮ್ಮನ ಮಗನೇ ಲೈಂಗಿಕ ಕಿರುಕುಳ ನೀಡಿದ ಘಟನೆ ಬೆಳ್ತಂಗಡಿ ತಾಲೂಕಿನ ಸುಲ್ಕೇರಿಮೊಗ್ರು ಎಂಬಲ್ಲಿ ನಡೆದಿದೆ. ಸುಲ್ಕೇರಿಮೊಗ್ರು ಹಿರಿಯ ಪ್ರಾಥಮಿಕ ಶಾಲೆಯ 5ನೇ ತರಗತಿ ವಿದ್ಯಾರ್ಥಿನಿಯೊಬ್ಬಳಿಗೆ ಲೈಂಗಿಕ ಕಿರುಕುಳವಾದ ಬಗ್ಗೆ ಶಿಕ್ಷಕಿಯೊಬ್ಬರಿಗೆ ಮಾಹಿತಿ ಸಿಕ್ಕಿದ್ದು, ಅವರು ಬಾಲಕಿಯನ್ನು ವಿಚಾರಣೆ ನಡೆಸಿದಾಗ ದೊಡ್ಡಮ್ಮನ ಮಗನು ದೇವರ ಗುಡ್ಡೆಯ ಮನೆಯಲ್ಲಿ ಹಾಗೂ ಮೂರು ಸಲ ಕುತ್ತೂರಿನ ಅಜ್ಜನ ಮನೆಯಲ್ಲಿ ಲೈಂಗಿಕ ದೌರ್ಜನ್ಯ ಎಸಗಿರುವ ಬಗ್ಗೆ ತಿಳಿಸಿದ್ದಳು. ಬಳಿಕ ಬಾಲಕಿಗೆ ತಾಯಿಗೆ ತಿಳಿಸಲಾಗಿದ್ದು ವೇಣೂರು ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಲಾಗಿದೆ.

ಬಾಲಕಿಗೆ ಲೈಂಗಿಕ ಕಿರುಕುಳ : ವೇಣೂರು ಠಾಣೆಯಲ್ಲಿ ಪ್ರಕರಣ ದಾಖಲು Read More »

ಗೋಲ್ಡ್‌ ಸ್ಮಗ್ಲಿಂಗ್‌ ಕೇಸ್‌ : ಇನ್ನೋರ್ವ ಆರೋಪಿ ಸೆರೆ

ರಾಜ್ಯದ ಇತರೆಡೆಗಳಿಗೂ ಹರಡಿದೆ ಚಿನ್ನ ಕಳ್ಳ ಸಾಗಾಟ ಜಾಲ ಬೆಂಗಳೂರು: ಕನ್ನಡದ ನಟಿ ರನ್ಯಾ ರಾವ್‌ ಮುಖ್ಯ ಆರೋಪಿಯಾಗಿರುವ ಗೋಲ್ಡ್‌ ಸ್ಮಗ್ಲಿಂಗ್‌ ಕೇಸಿಗೆ ಸಂಬಂಧಪಟ್ಟು ಮೂರನೇ ಆರೋಪಿಯನ್ನು ಬಂಧಿಸಲಾಗಿದೆ. ಬಳ್ಳಾರಿ ಮೂಲದ ಸಾಹಿಲ್ ಜೈನ್ ಸೆರೆಯಾಗಿರುವ ಆರೋಪಿ. ರನ್ಯಾ ರಾವ್ ಜೊತೆಗೆ ವಾಟ್ಸಾಪ್ ಚಾಟಿಂಗ್ ಮಾಡಿದ್ದ ಹಿನ್ನೆಲೆ ಸಾಹಿಲ್ ಜೈನ್ ಮೇಲೆ ತನಿಖಾಧಿಕಾರಿಗಳು ಕಣ್ಣಿಟ್ಟಿದ್ದರು. ಸಾಹಿಲ್ ಜೈನ್ ತಂದೆ ಮಹೇಂದ್ರ ಜೈನ್ ಅವರ ಸಹೋದರರ ಬಟ್ಟೆ ಮಳಿಗೆ ಬಳ್ಳಾರಿಯಲ್ಲಿದ್ದು, ಸಹೋದರರು ಬಳ್ಳಾರಿಯಲ್ಲಿ ವಾಸವಾಗಿದ್ದಾರೆ. ಆದರೆ ಕೆಲ ವರ್ಷಗಳಿಂದ

ಗೋಲ್ಡ್‌ ಸ್ಮಗ್ಲಿಂಗ್‌ ಕೇಸ್‌ : ಇನ್ನೋರ್ವ ಆರೋಪಿ ಸೆರೆ Read More »

ಧರ್ಮಸ್ಥಳ ವಿರುದ್ಧ ಅಪಪ್ರಚಾರಕ್ಕೆ ಕೋರ್ಟ್‌ ತಡೆ

ಸೋಷಿಯಲ್‌ ಮೀಡಿಯಾಗಳಲ್ಲಿರುವ ವೀಡಿಯೊಗಳನ್ನು ಡಿಲೀಟ್‌ ಮಾಡಲು ಆದೇಶ ಬೆಂಗಳೂರು: ವಿದ್ಯಾರ್ಥಿನಿ ಸೌಜನ್ಯಾ ಅತ್ಯಾಚಾರ ಮತ್ತು ಕೊಲೆ ಪ್ರಕರಣದ ಹಿನ್ನೆಲೆಯಲ್ಲಿ ಕಳೆದ ಕೆಲವು ದಿನಗಳಿಂದ ಧರ್ಮಸ್ಥಳ ಮತ್ತು ಧರ್ಮಾಧಿಕಾರಿಯವರ ವಿರುದ್ಧ ನಡೆಯುತ್ತಿರುವ ಅವಹೇಳನ ಮತ್ತು ಅಪಪ್ರಚಾರಕ್ಕೆ ನ್ಯಾಯಾಲಯ ತಡೆ ನೀಡಿದೆ. ಬೆಂಗಳೂರು ನಗರ ಸಿವಿಲ್ ನ್ಯಾಯಾಲಯ ಈ ಕುರಿತು ಜಾನ್ ಡೋ (ಅಶೋಕ ಕುಮಾರ್) ಆದೇಶ ನೀಡಿದೆ. ಜತೆಗೆ ಈವರೆಗೆ ಸಾಮಾಜಿಕ ಜಾಲತಾಣಗಳಲ್ಲಿ ಹಂಚಿಕೊಂಡಿರುವ ವೀಡಿಯೊಗಳನ್ನು ಡಿಲೀಟ್‌ ಮಾಡುವಂತೆ ಸೂಚನೆ ನೀಡಿದೆ. ಇತ್ತೀಚೆಗೆ ಸೌಜನ್ಯ ಪ್ರಕರಣದ ವಿಚಾರವಾಗಿ ಧರ್ಮಸ್ಥಳ

ಧರ್ಮಸ್ಥಳ ವಿರುದ್ಧ ಅಪಪ್ರಚಾರಕ್ಕೆ ಕೋರ್ಟ್‌ ತಡೆ Read More »

ಹೆಂಡತಿ ಜೊತೆ ಅನೈತಿಕ ಸಂಬಂಧ ಹೊಂದಿದ್ದ ಯೋಗ ಶಿಕ್ಷಕನನ್ನು 7 ಅಡಿ ಗುಂಡಿಯಲ್ಲಿ ಜೀವಂತ ಹೂತು ಹಾಕಿದ ಗಂಡ

ಮೂರು ತಿಂಗಳ ಬಳಿಕ ಬೆಳಕಿಗೆ ಬಂದ ಆಘಾತಕಾರಿ ಕೊಲೆ ಪ್ರಕರಣ ಚಂಡೀಗಢ : ತನ್ನ ಹೆಂಡತಿ ಜೊತೆ ಅನೈತಿಕ ಸಂಬಂಧ ಇಟ್ಟುಕೊಂಡಿದ್ದ ಯೋಗ ಶಿಕ್ಷಕನನ್ನು ವ್ಯಕ್ತಿಯೊಬ್ಬ 7 ಅಡಿ ಗುಂಡಿ ಅಗೆದು ಜೀವಂತ ಹೂತು ಹಾಕಿದ ಘಟನೆಯೊಂದು ಹರ್ಯಾಣದ ಚರ್ಖಿ ದಾದ್ರಿ ಎಂಬಲ್ಲಿ ಮೂರು ತಿಂಗಳ ಬೆಳಕಿಗೆ ಬಂದಿದೆ. ರೋಹ್ಟಕ್‌ನ ಖಾಸಗಿ ವಿಶ್ವವಿದ್ಯಾಲಯವೊಂದರಲ್ಲಿ ಯೋಗ ಉಪನ್ಯಾಸಕನಾಗಿದ್ದ ಜಗದೀಪ್‌ ಕೊಲೆಯಾದ ವ್ಯಕ್ತಿ. ಮಾ.24ರಂದು ಪೊಲೀಸರು ಅವನ ಶವವನ್ನು ಮೇಲೆತ್ತಿ ಪೋಸ್ಟ್‌ಮಾರ್ಟಂಗೆ ಕಳುಹಿಸಿದ್ದಾರೆ.ಕಳೆದ ಡಿ.24ರಂದು ಜಗದೀಪ್‌ ಕಾಲೇಜಿನಿಂದ ಮನೆಗೆ ಹಿಂದಿರುಗುತ್ತಿದ್ದಾಗ

ಹೆಂಡತಿ ಜೊತೆ ಅನೈತಿಕ ಸಂಬಂಧ ಹೊಂದಿದ್ದ ಯೋಗ ಶಿಕ್ಷಕನನ್ನು 7 ಅಡಿ ಗುಂಡಿಯಲ್ಲಿ ಜೀವಂತ ಹೂತು ಹಾಕಿದ ಗಂಡ Read More »

ಫೇಸ್‍ ಬುಕ್‍ನಲ್ಲಿ ಷೇರ್ ಟ್ರೇಡಿಂಗ್‍ ಜಾಹಿರಾತು ಮೂಲಕ ವಂಚನೆ | 38 ಲಕ್ಷ ರೂ. ಕಳೆದುಕೊಂಡ ವ್ಯಕ್ತಿ

ಮಂಗಳೂರು: ಷೇರು ಟ್ರೇಡಿಂಗ್ ಕುರಿತಾಗಿ ಫೇಸ್‌ಬುಕ್‌ನಲ್ಲಿ ಬಂದ ಜಾಹೀರಾತನ್ನು ನಂಬಿದ ವ್ಯಕ್ತಿಯೋರ್ವ 38,53,961 ರೂ. ಕಳೆದುಕೊಂಡ ಘಟನೆ ಮಂಗಳೂರಿನಲ್ಲಿ ನಡೆದಿದೆ. ಈ ಬಗ್ಗೆ ಕಾವೂರು ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಫೇಸ್‌ಬುಕ್‌ನಲ್ಲಿ ಬಂದ ಲಿಂಕ್‍ ನಲ್ಲಿ ವೈಯಕ್ತಿಕ ಮಾಹಿತಿಯನ್ನು  ತಿಳಿಸಿದ ಬಳಿಕ ಅಪರಿಚಿತ ವ್ಯಕ್ತಿಯೋರ್ವ ಕರೆ ಮಾಡಿ ಷೇರು ಟ್ರೇಡಿಂಗ್‌ನಲ್ಲಿ ನೋಂದಣಿ ಮಾಡಲು 21 ಸಾವಿರ ರೂ. ಹಣ ವರ್ಗಾವಣೆ ಮಾಡುವಂತೆ ಹೇಳಿದ್ದಾನೆ. ವಂಚಕ ಕಳುಹಿಸಿದ ಯುಪಿಐ ಐಡಿಗಳಿಗೆ ಹಣವನ್ನು ಪಾವತಿಸಿದ್ದಾನೆ. ಬಳಿಕ ಟ್ರೇಡಿಂಗ್ ಕಂಪೆನಿಯವರು ಕರೆ ಮಾಡಿ

ಫೇಸ್‍ ಬುಕ್‍ನಲ್ಲಿ ಷೇರ್ ಟ್ರೇಡಿಂಗ್‍ ಜಾಹಿರಾತು ಮೂಲಕ ವಂಚನೆ | 38 ಲಕ್ಷ ರೂ. ಕಳೆದುಕೊಂಡ ವ್ಯಕ್ತಿ Read More »

ಗೋಲ್ಡ್‌ ಸ್ಮಗ್ಲಿಂಗ್‌ ಕೇಸ್‌ : ಇಂದು ತನಿಖಾ ವರದಿ ಸರಕಾರಕ್ಕೆ ಸಲ್ಲಿಕೆ

ಪ್ರೋಟೊಕಾಲ್‌ ದುರ್ಬಳಕೆ ಮಾಡಿ ಚಿನ್ನ ಕಳ್ಳ ಸಾಗಾಟ ಮಾಡಿದ ಕುರಿತು ತನಿಖೆ ಬೆಂಗಳೂರು: ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ 14.2 ಕೆಜಿ ಚಿನ್ನದೊಂದಿಗೆ ಡಿಆರ್​ಐ ಅಧಿಕಾರಿಗಳ ಕೈಗೆ ಸಿಕ್ಕಿಬಿದ್ದಿರುವ ನಟಿ ರನ್ಯಾ ರಾವ್‌ಗೆ ನೀಡಿದ ಪ್ರೋಟೊಕಾಲ್‌ ಕುರಿತಾದ ತನಿಖಾ ವರದಿ ಇಂದು ಸರಕಾರದ ಕೈಸೇರಲಿದೆ. ಸರಕಾರ ಈ ಪ್ರಕರಣದಲ್ಲಿ ಪ್ರೋಟೋಕಾಲ್ ದುರ್ಬಳಕೆಯ ಬಗ್ಗೆ ತನಿಖೆ ನಡೆಸಿ ವರದಿ ನೀಡಲು ಹಿರಿಯ ಐಎಎಸ್ ಅಧಿಕಾರಿ ಗೌರವ್ ಗುಪ್ತ ಅವರಿಗೆ ಆದೇಶಿಸಿತ್ತು. ಈಗ ವರದಿ ಸಿದ್ದವಾಗಿದ್ದು ಇಂದು ಸರ್ಕಾರಕ್ಕೆ ಸಲ್ಲಿಕೆಯಾಗಲಿದೆ.

ಗೋಲ್ಡ್‌ ಸ್ಮಗ್ಲಿಂಗ್‌ ಕೇಸ್‌ : ಇಂದು ತನಿಖಾ ವರದಿ ಸರಕಾರಕ್ಕೆ ಸಲ್ಲಿಕೆ Read More »

ಭಕ್ತಕೋಡಿ ಶ್ರೀರಾಮ ಭಜನಾ ಮಂದಿರದ ಅಧ್ಯಕ್ಷ ರಾಜೇಶ್‍ ಎಸ್‍.ಡಿ. ಆತ್ಮಹತ್ಯೆ

ಪುತ್ತೂರು: ತಾಲೂಕಿನ ಭಕ್ತಕೋಡಿ ಶ್ರೀರಾಮ ಭಜನಾ ಮಂದಿರದ ಅಧ್ಯಕ್ಷ, ಸರ್ವೆ ಷಣ್ಮುಖ ಯುವಕ ಮಂಡಲದ ಮಾಜಿ ಅಧ್ಯಕ್ಷ, ರಾಜೇಶ್ ಎಸ್. .ಡಿ (45) ಸೋಮವಾರ ವಿಷ ಸೇವಿಸಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಆತ್ಮಹತ್ಯೆಗೆ ಯತ್ನಿಸಿದ್ದ ರಾಜೇಶ್ ಅವರನ್ನು ಪುತ್ತೂರಿನ ಖಾಸಗಿ ಆಸ್ಪತ್ರೆಗೆ ದಾಖಲಿಸಿ ಹೆಚ್ಚಿನ ಚಿಕಿತ್ಸೆಗಾಗಿ ಮಂಗಳೂರಿನ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಅಲ್ಲಿ ಚಿಕಿತ್ಸೆ ಫಲಕಾರಿಯಾಗದೆ ಅವರು ಮೃತಪಟ್ಟಿದ್ದಾರೆ ಎಂದು ತಿಳಿದು ಬಂದಿದೆ. ಮೃತರು ತಾಯಿ, ಪತ್ನಿ, ಇಬ್ಬರು ಪುತ್ರರನ್ನು ಅಗಲಿದ್ದಾರೆ.

ಭಕ್ತಕೋಡಿ ಶ್ರೀರಾಮ ಭಜನಾ ಮಂದಿರದ ಅಧ್ಯಕ್ಷ ರಾಜೇಶ್‍ ಎಸ್‍.ಡಿ. ಆತ್ಮಹತ್ಯೆ Read More »

ಕೆಲಸಕ್ಕೆ ಹೋದ ವ್ಯಕ್ತಿಯೋರ್ವ ನಾಪತ್ತೆ

ಕಡಬ: ಸಾರಣೆ ಕೆಲಸಕ್ಕೆಂದು ಹೋದ ವ್ಯಕ್ತಿಯೋರ್ವರು ನಾಪತ್ತೆಯಾದ ಘಟನೆ ಕಡಬದಲ್ಲಿ ನಡೆದಿದೆ. ಈ ಕುರಿತಾಗಿ ಸುಬ್ರಹ್ಮಣ್ಯ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ನಾಪತ್ತೆಯಾದ ವ್ಯಕ್ತಿಯನ್ನು ಕಡಬ ತಾಲೂಕು ಬಳ್ಳ ಗ್ರಾಮದ ಜೋಗಿ ಮನೆ ಚೆನ್ನಕೇಶವ ಜೋಗಿ (61) ಎಂದು ಪತ್ತೆಹಚ್ಚಲಾಗಿದೆ. ಮಾ.11 ರಂದು ತನ್ನ ಮನೆಯಿಂದ ಕೋಡಿಂಬಾಳಕ್ಕೆ ಸಾರಣೆ ಕೆಲಸಕ್ಕೆ ಹೋದವರು ತಿರುಗಿ ಬರಲಿಲ್ಲ. ಇವರ ಬಳಿ ಇದ್ದ ಮೊಬೈಲ್ ಸ್ವಿಚ್ ಆಫ್ ಆಗಿದೆ ಎಂದು ದೂರಿನಲ್ಲಿ ತಿಳಿಸಲಾಗಿದೆ. ಮನೆಯಿಂದ ಹೊರ ಹೋಗುವ ವೇಳೆ ಉದ್ದ ತೋಳಿನ ಹಸಿರು

ಕೆಲಸಕ್ಕೆ ಹೋದ ವ್ಯಕ್ತಿಯೋರ್ವ ನಾಪತ್ತೆ Read More »

error: Content is protected !!
Scroll to Top