ಅಪರಾಧ

ಪೊಲೀಸರ ಸಮಯ ಪ್ರಜ್ಞೆ : ಆತ್ಮಹತ್ಯೆಗೆ ಬಲಿಯಾಗುತ್ತಿದ್ದ ಯುವಕ ಬಚಾವ್

ದೆಹಲಿ : ಈಶಾನ್ಯ ದೆಹಲಿಯ ನಂದ್ ನಾಗ್ರಿ ಪ್ರದೇಶದಲ್ಲಿ ಸಾಮಾಜಿಕ ಜಾಲತಾಣ ಫೇಸ್‌ಬುಕ್‌ನಲ್ಲಿ ಲೈವ್ ಸ್ಟ್ರೀಮಿಂಗ್ ಮಾಡುವ ಮೂಲಕ ಆತ್ಮಹತ್ಯೆಗೆ ಯತ್ನಿಸುತ್ತಿದ್ದ 25 ವರ್ಷದ ಯುವಕನನ್ನು ಪೊಲೀಸರು ಸಮಯ ಪ್ರಜ್ಞೆ ಮೆರೆಯುವ ಮೂಲಕ ಆತನ ಜೀವ ಉಳಿಸಿರುವ ಘಟನೆ ದೆಹಲಿಯಲ್ಲಿ ವರದಿಯಾಗಿದೆ. ಫೇಸ್‌ಬುಕ್‌ನಲ್ಲಿ ಲೈವ್ ಸ್ಟ್ರೀಮ್ ಮಾಡಿ ಆತ್ಮಹತ್ಯೆಗೆ ಯತ್ನಿಸುತ್ತಿದ್ದ ಯುವಕನ ಮಾಹಿತಿ ಪಡೆದು ತಕ್ಷಣ ಪೊಲೀಸರು ಕಾರ್ಯಾಚರಣೆ ನಡೆಸಿ ಕ್ರಮ ಕೈಗೊಂಡು ಪ್ರಾಣ ಉಳಿಸಿದ್ದಾರೆ. ಸೋಮವಾರ ರಾತ್ರಿ ಘಟನೆಯ ಬಗ್ಗೆ ಮಾಹಿತಿ ಸಿಕ್ಕಿತು. ಸಂತ್ರಸ್ತನ ಫೇಸ್‌ಬುಕ್ […]

ಪೊಲೀಸರ ಸಮಯ ಪ್ರಜ್ಞೆ : ಆತ್ಮಹತ್ಯೆಗೆ ಬಲಿಯಾಗುತ್ತಿದ್ದ ಯುವಕ ಬಚಾವ್ Read More »

ಅಪರಿಚಿತ ಗಂಡಸಿನ ಕೊಳೆತ ಶವ ನೀರಿನ ಟ್ಯಾಂಕಿಯಲ್ಲಿ ಪತ್ತೆ

ಪುತ್ತೂರು: ಅಪರಿಚಿತ ವ್ಯಕ್ತಿಯ ಶವವೊಂದು ಗ್ರಾಪಂನ ನೀರು ಪೂರೈಕೆಯ ಸಿಮೆಂಟ್‍ ಟ್ಯಾಂಕಿನ ಒಳಗಡೆ ಕೊಳೆತ ಸ್ಥಿತಿಯಲ್ಲಿ ಪತ್ತೆಯಾಗಿದೆ. ಮಾಡನ್ನೂರು ಗ್ರಾಮದ ತೋಟದಮೂಲೆ ಎಂಬಲ್ಲಿ ಗ್ರಾಪಂ ನೀರು ಸರಬರಾಜಿನ ಸಿಮೆಂಟ್ ಟ್ಯಾಂಕಿ ಒಳಗಡೆ ಶವ ಪತ್ತೆಯಾಗಿದ್ದು, ಪರಿಸರದಲ್ಲಿ ದುರ್ನಾತ ಬೀರುತ್ತಿರುವುದರಿಂದ ಸ್ಥಳೀಯರು ಟ್ಯಾಂಕಿಯನ್ನು ನೋಡಿದಾಗ ಕೊಳೆತ ಸ್ಥಿತಿಯಲ್ಲಿ ಶವ ಪತ್ತೆಯಾಗಿದೆ. ಟ್ಯಾಕಿನ ಮೇಲೆ ಕೇಸರಿ ಬಣ್ಣ ಲುಂಗಿಯೊಂದು ಪತ್ತೆಯಾಗಿದ್ದು, ಟ್ಯಾಂಕ್ ಸ್ವಚ್ಛ ಮಾಡಲು ಬಳಸುವ ಏಣಿ ನಾಪತ್ತೆಯಾಗಿದ್ದು ಸಂಶಯಕ್ಕೆ ಎಡೆಮಾಡಿದೆ. ಸ್ಥಳೀಯರು ಪೊಲೀಸರಿಗೆ ಮಾಹಿತಿ ನೀಡಿದ್ದು, ಹೆಚ್ಚಿನ ಮಾಹಿತಿ

ಅಪರಿಚಿತ ಗಂಡಸಿನ ಕೊಳೆತ ಶವ ನೀರಿನ ಟ್ಯಾಂಕಿಯಲ್ಲಿ ಪತ್ತೆ Read More »

ಪಿಎಫ್ಐ ಸುಳ್ಯ ಕಚೇರಿ ಎನ್ಐಎ ವಶ | ಬಿಜೆಪಿ ಯುವ ಮೋರ್ಚಾ ಸದಸ್ಯ ಪ್ರವೀಣ್ ನೆಟ್ಟಾರು ಹತ್ಯೆ ಪ್ರಕರಣ

ಸುಳ್ಯ: ಪಾಪ್ಯುಲರ್ ಫ್ರಂಟ್ ಆಫ್ ಇಂಡಿಯಾ (ಪಿಎಫ್ಐ)ದ ಸುಳ್ಯದ ಕಚೇರಿಯನ್ನು ರಾಷ್ಟ್ರೀಯ ತನಿಖಾ ಸಂಸ್ಥೆ (ಎನ್ಐಎ) ಸೋಮವಾರ ವಶಪಡಿಸಿಕೊಂಡಿದೆ. ಸುಳ್ಯದ ಗಾಂಧಿನಗರದ ಅಲೆಟ್ಟಿ ರಸ್ತೆಯಲ್ಲಿರುವ ತಾಹಿರಾ ಕಾಂಪ್ಲೆಕ್ಸಿನಲ್ಲಿ ಮೊದಲ ಮಹಡಿಯಲ್ಲಿ ಕಚೇರಿ ಇದೆ ಎಂದು ಹೇಳಲಾಗಿದೆ. ಬಿಜೆಪಿ ಯುವ ಮೋರ್ಚಾ ಸದಸ್ಯ ಪ್ರವೀಣ್ ಕುಮಾರ್ ನೆಟ್ಟಾರು ಹತ್ಯೆ ಪ್ರಕರಣದ ತನಿಖೆಯನ್ನು ಎನ್.ಐ.ಎ. ಚುರುಕುಗೊಳಿಸಿದೆ. ಸುಳ್ಯದಲ್ಲಿರುವ ಪಿಎಫ್ಐ ಕಚೇರಿಯನ್ನು ಭಯೋತ್ಪಾದನಾ ಕೃತ್ಯಗಳಿಗೆ ಬಳಸಿಕೊಳ್ಳಲಾಗಿದೆ ಎಂದು ಹೇಳಲಾಗಿದೆ. ಕಚೇರಿಯಲ್ಲೇ ಪ್ರವೀಣ್ ಕುಮಾರ್ ನೆಟ್ಟಾರು ಹತ್ಯೆಗೆ ಸಂಚು ರೂಪಿಸಲಾಗಿತ್ತು ಎಂದು ಮೂಲಗಳು

ಪಿಎಫ್ಐ ಸುಳ್ಯ ಕಚೇರಿ ಎನ್ಐಎ ವಶ | ಬಿಜೆಪಿ ಯುವ ಮೋರ್ಚಾ ಸದಸ್ಯ ಪ್ರವೀಣ್ ನೆಟ್ಟಾರು ಹತ್ಯೆ ಪ್ರಕರಣ Read More »

ವಾರೆಂಟ್ ಜಾರಿಯಾಗಿದ್ದು, ತಲೆಮರೆಸಿಕೊಂಡಿದ್ದ ಆರೋಪಿಯ ಬಂಧನ : 6 ತಿಂಗಳು ಜೈಲು

ಮಂಗಳೂರು : ನ್ಯಾಯಾಲಯದಿಂದ ವಾರೆಂಟ್ ಜಾರಿಯಾಗಿದ್ದರೂ ತಲೆಮರೆಸಿಕೊಂಡಿದ್ದ ಆರೋಪಿಯನ್ನು ಮಾ.27 ರಂದು ಪೊಲೀಸರು ಬಂಧಿಸಿದ್ದಾರೆ. ಆತನಿಗೆ ನ್ಯಾಯಾಲಯ 6 ತಿಂಗಳು ಜೈಲು ಶಿಕ್ಷೆ ಹಾಗೂ 10,000 ರೂ. ದಂಡ ವಿಧಿಸಿದೆ. ಕಡಬ ಗ್ರಾಮದ ಲಿಗೋರಿ ಡಿಸೋಜ ಪುತ್ರ ವಿಲ್ಫ್ರೇಡ್ ಡಿಸೋಜ (34) ಬಂಧಿತ ಆರೋಪಿ. ಈತ ಪ್ರಸ್ತುತ ಮಂಗಳೂರು ಕುಲಶೇಖರ ದುರ್ಗಾಪರಮೇಶ್ವರಿ ದೇವಸ್ಥಾನದ ಬಳಿ ಸಿರ್ಲಾ ಪಡ್ಪು ಹೆವೆನ್ ಅಪಾರ್ಟ್ ಮೆಂಟ್ ನಲ್ಲಿ ವಾಸವಾಗಿದ್ದು, ಈತನ ವಿರುದ್ಧ conviction warrent ಹೊರಡಿಸಿದ ನಂತರ ಆತ ತಲೆಮರೆಸಿಕೊಂಡಿದ್ದ. ಇನ್ನು

ವಾರೆಂಟ್ ಜಾರಿಯಾಗಿದ್ದು, ತಲೆಮರೆಸಿಕೊಂಡಿದ್ದ ಆರೋಪಿಯ ಬಂಧನ : 6 ತಿಂಗಳು ಜೈಲು Read More »

ಅಕ್ರಮ ಜಾನುವಾರು ಸಾಗಾಟ : ಆರೋಪಿ ಸಹಿತ ವಾಹನ ವಶಕ್ಕೆ, ಇಬ್ಬರು ಪರಾರಿ

ಬಂಟ್ವಾಳ : ಮಾ.26 ರಂದು ಪರವಾನಿಗೆ ಇಲ್ಲದೆ ಹಿಂಸಾತ್ಮಕವಾಗಿ ಜಾನುವಾರು ಸಾಗಾಟ ಮಾಡುತ್ತಿದ್ದ ವೇಳೆ ಬಂಟ್ವಾಳ ಗ್ರಾಮಾಂತರ ಠಾಣಾ ಪೊಲೀಸರು ದಾಳಿ ನಡೆಸಿ ಆರೋಪಿ ಸಹಿತ ವಾಹನದಲ್ಲಿದ್ದ ದನಗಳನ್ನು ವಶಕ್ಕೆ ಪಡೆದುಕೊಂಡು ಪ್ರಕರಣ ದಾಖಲಿಸಿದ್ದಾರೆ.ಚಾಲಕ ಪ್ರವೀಣ್ ಪ್ರದೀಪ್ ಪೆರ್ನಾಂಡಿಸ್ ಬಂಧಿತ ಆರೋಪಿಯಾಗಿದ್ದು, ಉಳಿದ ಇಬ್ಬರು ಆರೋಪಿಗಳು ವಾಹನದಿಂದ ಜಿಗಿದು ಪರಾರಿಯಾಗಿದ್ದಾರೆ. ವಾಹನದಲ್ಲಿ ಹಿಂಸಾತ್ಮಕ ವಾಗಿ ಕಟ್ಟಿಹಾಕಲಾಗಿದ್ದ ಎರಡು ಕರು ಸಹಿತ ಪಿಕಪ್ ವಾಹನ ಸೇರಿ ಒಟ್ಟು ಸುಮಾರು ಲಕ್ಷ ಮೌಲ್ಯದ ಸೊತ್ತುಗಳನ್ನು ವಶಕ್ಕೆ ಪಡೆದುಕೊಳ್ಳಲಾಗಿದೆ. ಬಂಟ್ವಾಳ ಗ್ರಾಮಾಂತರ

ಅಕ್ರಮ ಜಾನುವಾರು ಸಾಗಾಟ : ಆರೋಪಿ ಸಹಿತ ವಾಹನ ವಶಕ್ಕೆ, ಇಬ್ಬರು ಪರಾರಿ Read More »

ಭಾರತೀಯ ಮೂಲದ ಮಗುವಿನ ಸಾವಿಗೆ ಕಾರಣನಾದ ಅಮೇರಿಕದ ವ್ಯಕ್ತಿಗೆ 100 ವರ್ಷ ಜೈಲು ಶಿಕ್ಷೆ

ವಾಷಿಂಗ್ ಟನ್: ಭಾರತೀಯ ಮೂಲದ ಮಗುವಿನ ಸಾವಿಗೆ ಕಾರಣವಾದ ವ್ಯಕ್ತಿಯೋರ್ವನಿಗೆ ಅಮೇರಿಕಾದ ನ್ಯಾಯಾಲಯ 100 ವರ್ಷಗಳ ಶಿಕ್ಷೆಯನ್ನು ವಿಧಿಸಿದೆ.2021 ರಲ್ಲಿ 5 ವರ್ಷದ ಭಾರತೀಯ ಮೂಲದ ಹೆಣ್ಣುಮಗುವಿನ ಸಾವಿಗೆ 35 ವರ್ಷದ ಜೋಸೆಫ್ ಲೀ ಸ್ಮಿತ್ ಕಾರಣವಾಗಿದ್ದ ಆರೋಪ ಸಾಬೀತಾಗಿದ್ದು, ಆತನ ಶಿಕ್ಷೆಯ ಪ್ರಮಾಣವನ್ನು ಕೋರ್ಟ್ ಈಗ ಪ್ರಕಟಿಸಿದೆ. ಮಾಯಾ ಪಟೇಲ್ ಎಂಬ 5 ವರ್ಷದ ಮಗು ಹೊಟೆಲ್ ರೂಮಿನೊಳಗೆ ಆಡುತ್ತಿತ್ತು, ಏಕಾ ಏಕಿ ಬುಲೆಟ್ ಆ ಮಗುವಿನ ತಲೆಗೆ ಹೊಕ್ಕಿತ್ತು. ತಕ್ಷಣವೇ ಮಗುವನ್ನು ಆಸ್ಪತ್ರೆಗೆ ಕರೆದೊಯ್ಯಲಾಯಿತಾದರೂ,

ಭಾರತೀಯ ಮೂಲದ ಮಗುವಿನ ಸಾವಿಗೆ ಕಾರಣನಾದ ಅಮೇರಿಕದ ವ್ಯಕ್ತಿಗೆ 100 ವರ್ಷ ಜೈಲು ಶಿಕ್ಷೆ Read More »

ನೇತ್ರಾವತಿ ನದಿಗೆ ಹಾರಿ ಯುವಕ ಆತ್ಮಹತ್ಯೆ

ಪುತ್ತೂರು:ಯುವಕನೋರ್ವ ಪಾಣೆಮಂಗಳೂರು ಸೇತುವೆಯಿಂದ ನದಿಗೆ ಹಾರಿ ಆತ್ಮಹತ್ಯೆ ಮಾಡಿಕೊಂಡ ಘಟನೆ ಭಾನುವಾರ ನಡೆದಿದೆ. ಕೆಮ್ಮಿಂಜೆ ಗ್ರಾಮದ ಲಕ್ಷ್ಮೀ ವೆಂಕಟರಮಣ ಲೇಔಟ್ ನಿವಾಸಿ ವಿಠ್ಠಲ ಕಾಮತ್ ಅವರ ಪುತ್ರ ವಿಘ್ನೇಶ್ ಕಾಮತ್ (29) ಆತ್ಮಹತ್ಯೆ ಮಾಡಿಕೊಂಡ ಯುವಕ. ಈತ ಪುತ್ತೂರಿನ ಕೋರ್ಟ್ ರಸ್ತೆಯಲ್ಲಿ ಅಂಗಡಿ ಹೊಂದಿದ್ದು, ಅಲ್ಲಿ ಕೆಲಸ ನಿರ್ವಹಿಸುತ್ತಿದ್ದರು. ಅವಿವಾಹಿತರಾಗಿದ್ದು, ಆತ್ಮಹತ್ಯೆಗೆ ಕಾರಣಗಳು ತಿಳಿದು ಬಂದಿಲ್ಲ.

ನೇತ್ರಾವತಿ ನದಿಗೆ ಹಾರಿ ಯುವಕ ಆತ್ಮಹತ್ಯೆ Read More »

ಮಂಗಳೂರು: ಹೋಳಿ ಸಂಭ್ರಮದ ಡಿಜೆ ಪಾರ್ಟಿಗೆ ಭಜರಂಗದಳ ಕಾರ್ಯಕರ್ತರ ದಾಳಿ

ಮಂಗಳೂರು: ನಗರದ ಮರೋಳಿ ಎಂಬಲ್ಲಿ ‘ರಂಗ್ ದೇ ಬರ್ಸಾ’ ಹೆಸರಿನಲ್ಲಿ ನಡೆಯುತ್ತಿದ್ದ ಹೋಳಿ ಸಂಭ್ರಮದ ಡಿಜೆ ಪಾರ್ಟಿಗೆ ಭಜರಂಗದಳ ಕಾರ್ಯಕರ್ತರು ದಾಳಿ ನಡೆಸಿರುವ ಮಾ.26 ರಂದು ಘಟನೆ ನಡೆದಿದೆ.ಡಿಜೆ ಪಾರ್ಟಿ ಜೊತೆಗೆ ಬಣ್ಣ ಎರಚಿ ಯುವಕ-ಯುವತಿಯರು ಸಂಭ್ರಮಿಸುತ್ತಿದ್ದು, ಅನ್ಯಕೋಮಿನ ಯುವಕರ ಜೊತೆ ಹೋಳಿ ಆಚರಣೆ ಎಂದು ಆರೋಪಿಸಿ ಭಜರಂಗದಳ ದಾಳಿ ನಡೆಸಿ ಬ್ಯಾನರ್ ಹರಿದು ಹಾಕಿ ವಸ್ತುಗಳನ್ನು ಪುಡಿಗೈದಿದ್ದಾರೆ. ಈ ವೇಳೆ ಭಜರಂಗದಳ ಕಾರ್ಯಕರ್ತರು ಮತ್ತು ಆಯೋಜಕರ ಮಧ್ಯೆ ಮಾತಿನ ಚಕಮಕಿ ನಡೆದಿದ್ದು, ಭಜರಂಗದಳದ ಕಾರ್ಯಕರ್ತರು ಆಯೋಜಕರು

ಮಂಗಳೂರು: ಹೋಳಿ ಸಂಭ್ರಮದ ಡಿಜೆ ಪಾರ್ಟಿಗೆ ಭಜರಂಗದಳ ಕಾರ್ಯಕರ್ತರ ದಾಳಿ Read More »

ಅಕ್ರಮವಾಗಿ ಸಾಗಿಸುತ್ತಿದ್ದ ಹಣ, ಸೀರೆ, ಬೆಳ್ಳಿ ಬಂಗಾರ ವಶ

ಗದಗ : 2023ರ ವಿಧಾನಸಭಾ ಚುನಾವಣೆಗೆ ಇನ್ನು ಕೆಲವು ದಿನಗಳು ಬಾಕಿ ಇರುವಾಗಲೇ ಚೆಕ್ ಪೋಸ್ಟ್​ಗಳಲ್ಲಿ ನಿರ್ಮಿಸಿ, ಪೊಲೀಸರ ಹದ್ದಿನ ಕಣ್ಣು ಇಡಲಾಗಿದೆ. ಗಜೇಂದ್ರಗಡ ಚೆಕ್​​ಪೋಸ್ಟ್​​ನಲ್ಲಿ ದಾಖಲೆ ಇಲ್ಲದೆ ಸಾಗಿಸುತ್ತಿದ್ದ 6.40 ಲಕ್ಷ ಹಣವನ್ನ ಸೀಜ್ ಮಾಡಲಾಗಿದೆ. ಕೊಪ್ಪಳದಿಂದ ಹುಬ್ಬಳ್ಳಿಗೆ ಹೋಗುತ್ತಿದ್ದ ಕಾರನ್ನ ಇಳಕಲ್ ನಾಕಾ ಚೆಕ್ ಪೋಸ್ಟ್​ನಲ್ಲಿ ತಪಾಸಣೆ ಮಾಡಿದ್ದಾಗ ಹಣ ಪತ್ತೆಯಾಗಿದೆ. ಜೊತೆಗೆ 5 ಲಕ್ಷ ಮೌಲ್ಯದ ಸೀರೆ ಹಾಗೂ ಇತರ ವಸ್ತಗಳ ಪತ್ತೆಯಾಗಿದ್ದು ಜಪ್ತಿ ಮಾಡಲಾಗಿದೆ. ಕೊಪ್ಪಳದ ಜಿಲ್ಲಾಧಿಕಾರಿ ಕಚೇರಿ ಬಳಿ ದಾಳಿ

ಅಕ್ರಮವಾಗಿ ಸಾಗಿಸುತ್ತಿದ್ದ ಹಣ, ಸೀರೆ, ಬೆಳ್ಳಿ ಬಂಗಾರ ವಶ Read More »

ಹೈದರಾಬಾದ್‌ : ವಿಷಸೇವಿಸಿ ಒಂದೇ ಕುಟುಂಬದ ನಾಲ್ವರು ಆತ್ಮಹತ್ಯೆ

ಹೈದರಾಬಾದ್‌: ಇಲ್ಲಿನ ಕುಷಯಗುಡ ಪ್ರದೇಶದಲ್ಲಿ ಅಪಾರ್ಟ್‌ಮೆಂಟ್‌ವೊಂದರಲ್ಲಿ ಒಂದೇ ಕುಟುಂಬದ ನಾಲ್ವರು ವಿಷ ಸೇವಿಸಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಈ ಘಟನೆ ಶುಕ್ರವಾರ ರಾತ್ರಿ ನಡೆದಿರುವ ಶಂಕೆ ವ್ಯಕ್ತವಾಗಿದ್ದು, ಶನಿವಾರ ಮಧ್ಯಾಹ್ನ ಪೊಲೀಸರಿಗೆ ಮಾಹಿತಿ ಲಭಿಸಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಮಾಹಿತಿ ಪಡೆದ ಪೊಲೀಸರು ಸ್ಥಳಕ್ಕೆ ಆಗಮಿಸಿ ಪ್ರಕರಣ ದಾಖಲಿಸಿಕೊಂಡಿದ್ದಾರೆ. ಮೃತರನ್ನು ಸತೀಶ್, ಅವರ ಪತ್ನಿ ವೇದಾ ಮತ್ತು ಅವರ ಇಬ್ಬರು ಮಕ್ಕಳಾದ ನಿಶಿಕೇತ್ (9) ಮತ್ತು ನಿಹಾಲ್ (5) ಎಂದು ಗುರುತಿಸಲಾಗಿದೆ. ಮಕ್ಕಳಿಗೆ ವಿಷ ಕುಡಿಸಿ ಬಳಿಕ ಹೆತ್ತವರು

ಹೈದರಾಬಾದ್‌ : ವಿಷಸೇವಿಸಿ ಒಂದೇ ಕುಟುಂಬದ ನಾಲ್ವರು ಆತ್ಮಹತ್ಯೆ Read More »

error: Content is protected !!
Scroll to Top