ಅಪರಾಧ

ಪುಣೆ ಸ್ವಾರ್ಗೇಟ್‌ ಬಸ್‌ ನಿಲ್ದಾಣದಲ್ಲಿ ಅತ್ಯಾಚಾರ : ದೇಶಾದ್ಯಂತ ಆಕ್ರೋಶ

ನಿಲ್ಲಿಸಿದ್ದ ಬಸ್‌ಗಳಲ್ಲಿ ರಾಶಿ ರಾಶಿ ಕಾಂಡೋಮ್‌, ಬಿಯರ್‌ ಬಾಟಲಿ, ಒಳ ಉಡುಪು ಪತ್ತೆ ಪುಣೆ : ಪುಣೆಯ ಜನನಿಬಿಡ ಸ್ವಾರ್ಗೇಟ್ ಸರಕಾರಿ ಬಸ್​ ನಿಲ್ದಾಣದಲ್ಲಿ ಮಂಗಳವಾರ ಮುಂಜಾನೆ ನಡೆದಿರುವ ಅತ್ಯಾಚಾರ ಕೃತ್ಯ ದೇಶಾದ್ಯಂತ ಆಕ್ರೋಶದ ಅಲೆಯೆಬ್ಬಿಸಿದೆ. ನಿಲ್ಲಿಸಿದ್ದ ಸ್ಟೇಷನರಿ ಬಸ್ಸಿನೊಳಗೆ 26 ವರ್ಷದ ಮಹಿಳೆಯ ಮೇಲೆ ಅತ್ಯಾಚಾರ ನಡೆದಿದೆ. ಹಳೆಯ ಬಳಕೆಯಾಗದ ಬಸ್​ಗಳನ್ನು ಅಲ್ಲಿ ನಿಲ್ಲಿಸಲಾಗಿದ್ದು, ಈ ಬಸ್​ಗಳಲ್ಲಿ ರಾಶಿಗಟ್ಟಲೆ ಕಾಂಡೋಮ್, ಮದ್ಯದ ಬಾಟಲಿಗಳು, ಮಹಿಳೆಯರ ಒಳಉಡುಪುಗಳು ಪತ್ತೆಯಾಗಿದ್ದು ಬಹಳ ಕಾಲದಿಂದ ಇಲ್ಲಿ ಅತ್ಯಾಚಾರ ಮತ್ತಿತರ ಅಪರಾಧ […]

ಪುಣೆ ಸ್ವಾರ್ಗೇಟ್‌ ಬಸ್‌ ನಿಲ್ದಾಣದಲ್ಲಿ ಅತ್ಯಾಚಾರ : ದೇಶಾದ್ಯಂತ ಆಕ್ರೋಶ Read More »

ಸುಳ್ಯದ ವಿದ್ಯಾರ್ಥಿನಿ ಆತ್ಮಹತ್ಯೆ

ಸುಳ್ಯ: ಕೆವಿಜಿ ದಂತ ಮಹಾವಿದ್ಯಾಲಯದ ಬಿಡಿಎಸ್‌ ವಿದ್ಯಾರ್ಥಿನಿಯೊಬ್ಬರು ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡ ಘಟನೆ ನಡೆದಿದೆ. ಬಿಜಾಪುರ ಮೂಲದ ಕೃತಿಕಾ ಹಾಸ್ಟೆಲ್ ನಲ್ಲಿ  ಆತ್ಮಹತ್ಯೆ ಮಾಡಿಕೊಂಡವರು. ಆತ್ಮಹತ್ಯೆ ಹಿಂದೆ ಪುತ್ತೂರಿನ ಪಾಲಿಟೆಕ್ನಿಕ್ ವಿದ್ಯಾರ್ಥಿಯೊರ್ವನ ಕೈವಾಡವಿರುವ ಶಂಕೆ ವ್ಯಕ್ತವಾಗಿದ್ದು,. ಸುಳ್ಯ ಪೋಲಿಸರು ಘಟನಾ ಸ್ಥಳಕ್ಕೆ ಆಗಮಿಸಿ ತನಿಖೆ ನಡೆಸುತ್ತಿದ್ದಾರೆ.

ಸುಳ್ಯದ ವಿದ್ಯಾರ್ಥಿನಿ ಆತ್ಮಹತ್ಯೆ Read More »

ತೆಲುಗು ನಟ ಪೋಸಾನಿ ಕೃಷ್ಣ ಮುರಳಿ ಬಂಧನ

ಜನಪ್ರಿಯ ನಟನಿಗೆ ಮುಳುವಾದ ಹೇಳಿಕೆ ಹೈದರಾಬಾದ್‌: ತೆಲುಗು ಚಿತ್ರರಂಗದ ಹಿರಿಯ ನಟ ಹಾಗೂ ವೈಎಸ್‌ಆರ್‌ ಕಾಂಗ್ರೆಸ್‌ ಪಕ್ಷದ ಸದಸ್ಯ ಪೋಸಾನಿ ಕೃಷ್ಣ ಮುರಳಿ ಅವರನ್ನು ನಿನ್ನೆ ರಾತ್ರಿ ಆಂಧ್ರ ಪ್ರದೇಶದ ಪೊಲೀಸರು ಬಂಧಿಸಿದ್ದಾರೆ. ಸಮುದಾಯವೊಂದರ ವಿರುದ್ಧ ಅವಹೇಳನಕಾರಿ ಹೇಳಿಕೆ ನೀಡಿದ ಕುರಿತು ಪೋಸಾನಿ ಕೃಷ್ಣ ಮುರಳಿ ವಿರುದ್ಧ ದೂರು ದಾಖಲಾಗಿತ್ತು. ಈ ಹಿನ್ನೆಲೆಯಲ್ಲಿ ನಟನನ್ನು ಬಂಧಿಸಲಾಗಿದೆ. ಈ ಹೇಳಿಕೆಯು ಎರಡು ಗುಂಪುಗಳ ನಡುವೆ ವೈಷಮ್ಯಕ್ಕೂ ಕಾರಣವಾಗಿತ್ತು.ನಟನ ವಿರುದ್ಧ ಓಬುಲವಾರಿಪಲ್ಲಿ ಪೊಲೀಸ್ ಠಾಣೆಯಲ್ಲಿ ಸೆಕ್ಷನ್ ಎಸ್‌ಸಿ/ಎಸ್‌ಟಿ ಕಾಯ್ದೆಯ ಅಡಿಯಲ್ಲಿ

ತೆಲುಗು ನಟ ಪೋಸಾನಿ ಕೃಷ್ಣ ಮುರಳಿ ಬಂಧನ Read More »

ಬಿಟ್‌ ಕಾಯಿನ್‌ ಹಗರಣ : 60 ಕಡೆ ಸಿಬಿಐ ದಾಳಿ

ಬೆಂಗಳೂರು: ಬಿಟ್‌ ಕಾಯಿನ್‌ ಹಗರಣಕ್ಕೆ ಸಂಬಂಧಿಸಿದಂತೆ ಬೆಂಗಳೂರು ಸೇರಿ ದೇಶದ 60 ಕಡೆ ಸಿಬಿಐ ದಾಳಿ ನಡೆಸಿದೆ. ಬೆಂಗಳೂರು, ಪುಣೆ, ಚಂಡೀಗಡ, ದೆಹಲಿ ಎನ್‌ಸಿಆರ್, ನಾಂದೇಡ್, ಕೊಲ್ಲಾಪುರ ಸೇರಿದಂತೆ ಹಲವೆಡೆ ಸಿಬಿಐ ದಾಳಿ ನಡೆಸಿ ಶೋಧಕಾರ್ಯ ಮುಂದುವರಿಸಿದೆ. ಪ್ರಮುಖ ಆರೋಪಿಗಳಿಗೆ ಸಂಬಂಧಿಸಿದ ಸ್ಥಳಗಳಲ್ಲಿ ದಾಳಿ ಮಾಡಿ ಪರಿಶೀಲನೆ ನಡೆಸಿದೆ. ಬಿಟ್ ಕಾಯಿನ್, ಕ್ರಿಪ್ಟೋ ಕರೆನ್ಸಿ ಹಗರಣ ಸಂಬಂಧ ದೇಶದ ಹಲವು ರಾಜ್ಯಗಳಲ್ಲಿ ಎಫ್‌ಐಆರ್ ದಾಖಲಾಗಿತ್ತು. ಬಳಿಕ ಸುಪ್ರೀಂ ಕೋರ್ಟ್ ಈ ಪ್ರಕರಣವನ್ನು ಸಿಬಿಐ ತನಿಖೆಗೆ ವಹಿಸಿತ್ತು. ದೊಡ್ಡಮಟ್ಟದ

ಬಿಟ್‌ ಕಾಯಿನ್‌ ಹಗರಣ : 60 ಕಡೆ ಸಿಬಿಐ ದಾಳಿ Read More »

ಉಳ್ಳಾಲ ಕೋಟಕಾರು ಸಿಎ ಬ್ಯಾಂಕ್‍ ದರೋಡೆ | ಮತ್ತೆ ಇಬ್ಬರು ಆರೋಪಿಗಳ ಬಂಧನ

ಉಳ್ಳಾಲ:  ತಾಲ್ಲೂಕಿನ ಕೋಟಕಾರು ವ್ಯವಸಾಯ ಸೇವಾ ಸಹಕಾರಿ ಸಂಘದ ಕೆ.ಸಿ.ರೋಡ್ ಶಾಖೆಯಲ್ಲಿ ಜ.17 ರಂದು ನಡೆದ ದರೋಡೆ ಪ್ರಕರಣದ ಸಂಚು ರೂಪಿಸುವಲ್ಲಿ ಪ್ರಮುಖ ಪಾತ್ರ ವಹಿಸಿದ್ದ ಇಬ್ಬರು ಸ್ಥಳೀಯ ಆರೋಪಿಗಳನ್ನು ಉಳ್ಳಾಲ ಪೊಲೀಸರು ಬಂಧಿಸಿದ್ದಾರೆ. ಬಂಟ್ವಾಳ ತಾಲೂಕಿನ ಕನ್ಯಾನದ ಭಾಸ್ಕರ್ ಬೆಳ್ಳವಾಡ ಅಲಿಯಾಸ್ ಶಶಿ ಥೇವರ್ (69) ಹಾಗೂ ಉಳ್ಳಾಲ ತಾಲ್ಲೂಕಿನ ಕೆ.ಸಿ.ರೋಡ್‌ನ ಮಹಮ್ಮದ್ ನಜೀರ್ (65) ಬಂಧಿತ ಆರೋಪಿಗಳು. ಈ ಮೂಲಕ ಪ್ರಕರಣದಲ್ಲಿ, ಒಟ್ಟಾರೆ ಆರು ಜನರನ್ನುಈ ವರೆಗೆ ಬಂಧಿಸಲಾಗಿದೆ. ಮುಂಬೈನ ದರೋಡೆಕೋರರ ತಂಡಕ್ಕೆ ಈ

ಉಳ್ಳಾಲ ಕೋಟಕಾರು ಸಿಎ ಬ್ಯಾಂಕ್‍ ದರೋಡೆ | ಮತ್ತೆ ಇಬ್ಬರು ಆರೋಪಿಗಳ ಬಂಧನ Read More »

ಕೆರೆಗೆ ಹಾರಿ ಯುವಕ ಆತ್ಮಹತ್ಯೆ

ಉಪ್ಪಿನಂಗಡಿ: ಯುವಕನೋರ್ವ ತನ್ನ ಮನೆಯ ತೋಟದ ಕೆರೆಗೆ ಹಾರಿ ಆತ್ಮಹತ್ಯೆ ಮಾಡಿಕೊಂಡ ಘಟನೆ ಉಪ್ಪಿನಂಗಡಿ ಸಮೀಪದ ಪೆರಿಯಡ್ಕದಲ್ಲಿ ನಡೆದಿದೆ. ಕಿಂಡೋವು ಜಿನ್ನಪ್ಪ ಗೌಡ ಎಂಬವರ ಪುತ್ರ ಶ್ರೀನಿವಾಸ ಆತ್ಮಹತ್ಯೆಗೈದ ಯುವಕ ಕೂಲಿ ಕಾರ್ಮಿಕನಾಗಿದ್ದ ಶ್ರೀನಿವಾಸ ಸೋಮವಾರ ಸಂಜೆಯಿಂದ ನಾಪತ್ತೆಯಾಗಿದ್ದು, ಮಂಗಳವಾರ ಮುಂಜಾನೆ ಆತನ ಶವ ತೋಟದಲ್ಲಿನ ಕೆರೆಯಲ್ಲಿ ಪತ್ತೆಯಾಗಿತ್ತು ಈತನ ಸಾವಿಗೆ ಕಾರಣ ತಿಳಿದುಬಂದಿಲ್ಲ ಉಪ್ಪಿನಂಗಡಿ ಪೋಲಿಸರು ಘಟನಾ ಸ್ಥಳಕ್ಕೆ ಭೇಟಿ ನೀಡಿ ತನಿಖೆ ನಡೆಸುತ್ತಿದ್ದಾರೆ

ಕೆರೆಗೆ ಹಾರಿ ಯುವಕ ಆತ್ಮಹತ್ಯೆ Read More »

ಮಲ್ಪೆ ಸೈಂಟ್‌ ಮೇರಿಸ್‌ ದ್ವೀಪದ ಸಮೀಪ ಅನುಮಾನಾಸ್ಪದ ದೋಣಿ ಪತ್ತೆ

ಸತಾಯಿಸುತ್ತಿದ್ದ ಮಾಲೀಕನಿಂದ ಪಾರಾಗಲು ತಪ್ಪಿಸಿಕೊಂಡು ಬಂದ ತಮಿಳುನಾಡಿನ ಮೀನುಗಾರರು 4000 ಕಿ.ಮೀ. ಮೀನುಗಾರಿಕೆ ದೋಣಿಯಲ್ಲೆ ಪ್ರಯಾಣ ಉಡುಪಿ : ಮಲ್ಪೆ ಸೈಂಟ್‌ ಮೇರಿಸ್‌ ದ್ವೀಪದ ಸಮೀಪ ಆಳ ಸಮುದ್ರದಲ್ಲಿ ಅನುಮಾನಸ್ಪದ ವಿದೇಶಿ ಮೀನುಗಾರಿಕೆ ದೋಣಿಯೊಂದು ಪತ್ತೆಯಾಗಿದೆ. ಮಲ್ಪೆಯ ಸೈಂಟ್ ಮೇರಿಸ್ ದ್ವೀಪದಲ್ಲಿ ಓಮಾನ್ ಮೂಲದ ಮೀನುಗಾರಿಕಾ ಬೋಟ್ ಪತ್ತೆಯಾಗಿದ್ದು, ಇದು ಓಮಾನ್ ಹಾರ್ಬರ್​ನಿಂದ ತಪ್ಪಿಸಿಕೊಂಡು ಭಾರತೀಯ ಸಮುದ್ರಕ್ಕೆ ಬಂದಿದ್ದ ಬೋಟ್ ಎಂಬುದು ತಿಳಿದುಬಂದಿದೆ. ಬೋಟ್​​​ನಲ್ಲಿ ತಮಿಳುನಾಡು ಮೂಲದ ಮೀನುಗಾರರು ಪತ್ತೆಯಾಗಿದ್ದಾರೆ.ಓಮಾನ್ ಮೂಲದ ಬೋಟ್​ನಲ್ಲಿ ಮೀನುಗಾರಿಕೆ ವೃತ್ತಿ ನಡೆಸುತ್ತಿದ್ದ

ಮಲ್ಪೆ ಸೈಂಟ್‌ ಮೇರಿಸ್‌ ದ್ವೀಪದ ಸಮೀಪ ಅನುಮಾನಾಸ್ಪದ ದೋಣಿ ಪತ್ತೆ Read More »

ಸೈಬರ್‌ ವಂಚಕನಿಂದಲೇ ವಿದ್ಯಾರ್ಥಿಗಳಿಗೆ ಸೈಬರ್‌ ಜಾಗೃತಿ ಪಾಠ ಮಾಡಿಸಿದ ಮಂಗಳೂರು ಪೊಲೀಸರು!

ಆರೋಪಿಗಳ ಖರ್ಚಿನಲ್ಲೇ ಗುಜರಾತ್‌ಗೆ ಹೋಗಿ ಮೋಜುಮಸ್ತಿ ಮಾಡಿದ ಫೋಟೊ ಬಹಿರಂಗ ಮಂಗಳೂರು : ಅಮೆಜಾನ್‌ ಆನ್‌ಲೈನ್‌ ಕಂಪನಿಗೆ ವಂಚಿಸಿದ ಆರೋಪದಲ್ಲಿ ಸೆರೆಯಾಗಿರುವ ಇಬ್ಬರು ಸೈಬರ್‌ ವಂಚಕರಿಂದಲೇ ಮಂಗಳೂರು ಪೊಲೀಸರು ಕಾನೂನು ವಿದ್ಯಾರ್ಥಿಗಳಿಗೆ ಸೈಬರ್‌ ವಂಚನೆ ಜಾಗೃತಿಯ ಪಾಠ ಮಾಡಿಸಿ ಯಡವಟ್ಟು ಮಾಡಿಕೊಂಡಿರುವುದು ಬಹಿರಂಗವಾಗಿದೆ. ಇಷ್ಟು ಮಾತ್ರವಲ್ಲದೆ ಈ ಆರೋಪಿಗಳ ಖರ್ಚಿನಲ್ಲಿ ಪೊಲೀಸರು ತಿರುಗಾಡಿ ಮೋಜು ಮಸ್ತಿ ಮಾಡಿ ಸೆಲ್ಫಿ ಕ್ಲಿಕ್ಕಿಸಿಕೊಂಡಿರುವುದು ಕೂಡ ಬಹಿರಂಗವಾಗಿ ಪೊಲೀಸ್‌ ಇಲಾಖೆಯೇ ತಲೆತಗ್ಗಿಸುವಂತಾಗಿದೆ. ಮಂಗಳೂರಿನ ಉರ್ವ ಠಾಣೆಯ ಪೊಲೀಸರ ವಿರುದ್ಧ ಇಂಥದ್ದೊಂದು ಗಂಭೀರ

ಸೈಬರ್‌ ವಂಚಕನಿಂದಲೇ ವಿದ್ಯಾರ್ಥಿಗಳಿಗೆ ಸೈಬರ್‌ ಜಾಗೃತಿ ಪಾಠ ಮಾಡಿಸಿದ ಮಂಗಳೂರು ಪೊಲೀಸರು! Read More »

ಅಜ್ಜಿ, ತಾಯಿ ಸಹೋದರ, ಪ್ರೇಯಸಿ ಸೇರಿ ಆರು ಮಂದಿಯನ್ನು ಕೊಂದ ಯುವಕ

2 ತಾಸಿನಲ್ಲಿ 34 ಕಿಲೋಮೀಟರ್‌ ಪ್ರಯಾಣಿಸಿ ಮೂರು ಮನೆಗಳಲ್ಲಿ ಆರು ಮಂದಿಯ ಹತ್ಯೆ ತಿರುವನಂತಪುರ: ಯುವಕನೊಬ್ಬ ತನ್ನ ಅಜ್ಜಿ,ಅಮ್ಮ, ಸಹೋದರ, ಚಿಕ್ಕಪ್ಪ, ಚಿಕ್ಕಮ್ಮ, ಪ್ರೇಯಸಿ ಸೇರಿ ಆರು ಮಂದಿಯನ್ನು ಬರ್ಬರವಾಗಿ ಕೊಂದಿರುವ ಆಘಾತಕಾರಿ ಘಟನೆಯೊಂದು ಕೇರಳದ ವಂಜರಜಮೂಡು ಪೊಲೀಸ್‌ ಠಾಣೆ ವ್ಯಾಪ್ತಿಯಲ್ಲಿ ಸಂಭವಿಸಿದೆ. 23ರ ಹರೆಯದ ಅಫಾನ್‌ ಎಂಬಾತ 2 ತಾಸಿನ ಅವಧಿಯಲ್ಲಿ ಮೂರು ಮನೆಗಳಲ್ಲಿ ಈ ಕೃತ್ಯಗಳನ್ನು ಎಸಗಿದ್ದಾನೆ. ಆರು ಕೊಲೆಗಳನ್ನು ಮಾಡಲು ಅವನು ಸುಮಾರು 34 ಕಿಲೋಮೀಟರ್‌ ಪ್ರಯಾಣಿಸಿದ್ದಾನೆ. ನಂತರ ವಂಜರಮೂಡು ಪೊಲೀಸ್‌ ಠಾಣೆಗೆ

ಅಜ್ಜಿ, ತಾಯಿ ಸಹೋದರ, ಪ್ರೇಯಸಿ ಸೇರಿ ಆರು ಮಂದಿಯನ್ನು ಕೊಂದ ಯುವಕ Read More »

ಚಲಿಸುತ್ತಿದ್ದ ಲಾರಿಯಿಂದ ಜಿಗಿದ ನಿರ್ವಾಹಕ : ಸ್ಥಳದಲ್ಲೇ ಮೃತ್ಯು

ನೆಲ್ಯಾಡಿ: ಚಲಿಸುತ್ತಿದ್ದ ಲಾರಿಯಿಂದ ಜಿಗಿದು ನಿರ್ವಾಹಕರೊಬ್ಬರು ಸಾವನ್ನಪ್ಪಿದ ಘಟನೆ ಮಂಗಳೂರು ಬೆಂಗಳೂರು ರಾಷ್ಟ್ರೀಯ ಹೆದ್ದಾರಿ 75ರ  ಗುಂಡ್ಯ  ಸಮೀಪದ ಅಡ್ಡಹೊಳೆ ಎಂಬಲ್ಲಿ ಮಂಗಳವಾರ ಮುಂಜಾನೆ ನಡೆಸಿದೆ. ತಮಿಳುನಾಡಿನ ನಾಗಪಟ್ಟಣದ ಚೆನ್ನತೂಬೂರು ನಿವಾಸಿ ಲಕ್ಷ್ಮಣನ್ ಸೆಂಗುತ್ತುವನ್ (46) ಲಾರಿಯಿಂದ ಜಿಗಿದು ಮೃತಪಟ್ಟವರು. ತಮಿಳುನಾಡಿನ ಕೃಷ್ಣಗಿರಿಯಿಂದ ಕಲ್ಲಂಗಡಿಯನ್ನು ತುಂಬಿಕೊಂಡು ಮಂಗಳೂರಿಗೆ ಬರುತ್ತಿದ್ದ ಲಾರಿಯು ಗುಂಡ್ಯ ಸಮೀಪದ ಅಡ್ಡಹೊಳೆ ತಲುಪುತಿದ್ದಂತೆ ಏಕಾಏಕಿಯಾಗಿ  ನಿರ್ವಾಹಕ ಲಾರಿಯಿಂದ ಜಿಗಿದು ರಸ್ತೆಗೆ ಬಿದ್ದು ಸಾವನ್ನಪ್ಪಿದ್ದಾನೆ. ಮೃತ ದೇಹವನ್ನು ಪುತ್ತೂರಿನ  ಶವಗಾರಕ್ಕೆ ಕೊಂಡಯ್ಯಲಾಗಿದೆ. ಘಟನಾ ಸ್ಥಳಕ್ಕೆ  ನೆಲ್ಯಾಡಿ

ಚಲಿಸುತ್ತಿದ್ದ ಲಾರಿಯಿಂದ ಜಿಗಿದ ನಿರ್ವಾಹಕ : ಸ್ಥಳದಲ್ಲೇ ಮೃತ್ಯು Read More »

error: Content is protected !!
Scroll to Top