ಅಪರಾಧ

ಸುಳ್ಯದ ಗುರುಂಪಿನಲ್ಲಿ ಬರೆ ಕುಸಿತ: ಮಣ್ಣಿನಡಿ ಸಿಲುಕಿದ್ದ 3 ಮೃತದೇಹ ಪತ್ತೆ

ಸುಳ್ಯ: ಹೃದಯವಿದ್ರಾವಕ ಘಟನೆಯಲ್ಲಿ ಸುಳ್ಯದ ಗುರುಂಪು ಬಳಿ ಬರೆ ಕುಸಿತ ಪ್ರಕರಣದಲ್ಲಿ ಮಣ್ಣಿನಡಿ ಸಿಲುಕಿದ್ದ ಮೂವರ ಮೃತದೇಹವನ್ನು ಹೊರಕ್ಕೆ ತೆಗೆಯಲಾಗಿದೆ. ಶನಿವಾರ ಮಧ್ಯಾಹ್ನ ಅಬೂಬಕ್ಕರ್ ಎಂಬವರ ಮನೆ ಸಮೀಪ ಘಟನೆ ಸಂಭವಿಸಿದೆ. ಬರೆಗೆ ತಡೆಗೋಡೆ ಕಾಮಗಾರಿ ನಡೆಯುತ್ತಿದ್ದಾಗ ದುರ್ಘಟನೆ ಘಟಿಸಿದೆ. ಕಾಮಗಾರಿಯಲ್ಲಿ ನಿರತರಾಗಿದ್ದ ಮೂವರು ಕಾರ್ಮಿಕರು ಮಣ್ಣಿನಡಿ ಸಿಲುಕಿ ಮೃತಪಟ್ಟಿದ್ದಾರೆ. ಮೃತರಲ್ಲಿ ಇಬ್ಬರು ಪುರುಷರು ಹಾಗೂ ಓರ್ವ ಮಹಿಳೆ. ಮೃತಪಟ್ಟವರಲ್ಲಿ ಗದಗ ಮುಂಡರಗಿ ಮೂಲದ ಸೋಮಶೇಖರ, ಶಾಂತಾ ದಂಪತಿ ಇದ್ದರು ಎಂದು ಗುರುತಿಸಲಾಗಿದೆ. ಬರೆ ಕುಸಿದ ತಕ್ಷಣ […]

ಸುಳ್ಯದ ಗುರುಂಪಿನಲ್ಲಿ ಬರೆ ಕುಸಿತ: ಮಣ್ಣಿನಡಿ ಸಿಲುಕಿದ್ದ 3 ಮೃತದೇಹ ಪತ್ತೆ Read More »

ಉಪ್ಪಿನಂಗಡಿ: 10 ಲಕ್ಷ ರೂ. ನಗದು ದರೋಡೆ, ಪ್ರಕರಣ ಓರ್ವ ವಶ

ಉಪ್ಪಿನಂಗಡಿ : ಮಗಳ ಮದುವೆಗೆ ಚಿನ್ನವನ್ನು ಖರೀದಿಸಲೆಂದು ದ್ವಿಚಕ್ರ ವಾಹನದಲ್ಲಿ 10 ಲಕ್ಷ ರೂ. ನಗದು ಹಣ ಕೊಂಡೊಯ್ಯುತ್ತಿದ್ದ ವೇಳೆ ಇಳಂತಿಲ ಗ್ರಾಮದ ಪೆದಮಲೆ- ಸರಳಿಕಟ್ಟೆ ರಸ್ತೆಯ ರಿಫಾಯಿನಗರ ಎಂಬಲ್ಲಿ ಅಪರಿಚಿತ ಯುವಕನೋರ್ವ ಹಣವನ್ನು ದರೋಡೆ ಮಾಡಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಉಪ್ಪಿನಂಗಡಿ ಪೊಲೀಸರು ಓರ್ವ ಆರೋಪಿಯನ್ನು ಒಂಬತ್ತು ಲಕ್ಷ ರೂ. ನಗದಿನೊಂದಿಗೆ ವಶಪಡಿಸಿಕೊಂಡಿದ್ದಾರೆ. ಇಳಂತಿಲ ಗ್ರಾಮದ ಕಾರ್ಯಪಾಡಿ ಮನೆ ನಿವಾಸಿ ಮಹಮ್ಮದ್ ಕೆ. (60) ಅವರು ತನ್ನ ಮಗಳ ಮದುವೆಗಾಗಿ ಚಿನ್ನಾಭರಣ ಖರೀದಿಸಲು ಸಂಗ್ರಹಿಸಿಟ್ಟ 10 ಲಕ್ಷ

ಉಪ್ಪಿನಂಗಡಿ: 10 ಲಕ್ಷ ರೂ. ನಗದು ದರೋಡೆ, ಪ್ರಕರಣ ಓರ್ವ ವಶ Read More »

ದೀರ್ಘದಂಡ ನಮಸ್ಕಾರ ಮಾಡುತ್ತಿದ್ದ ಯುವತಿ ಮೇಲೆ ಕಾರು ಹರಿದು ಸಾವು

ಬೆಳಗಾವಿ : ದೇವರಿಗೆ ದೀರ್ಘದಂಡ ನಮಸ್ಕಾರ ಮಾಡುತ್ತಿದ್ದ ಯುವತಿ ಮೇಲೆ ಕಾರು ಹರಿದ ಪರಿಣಾಮ ಆಕೆ ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ಗುರುವಾರ ಬೆಳಗಾವಿಯಲ್ಲಿ ನಡೆದಿದೆ. ಬೆಳಗಾವಿ ಜಿಲ್ಲೆ ಅಥಣಿ ತಾಲೂಕಿನ ತೀರ್ಥ ಗ್ರಾಮದಲ್ಲಿ ಜಾತ್ರಾ ಸಂದರ್ಭದಲ್ಲಿ ಈ ಅಹಿತಕರ ಘಟನೆ ಆಕಸ್ಮಿಕವಾಗಿ ನಡೆದಿದ್ದು, ಮೃತ ಯುವತಿಯನ್ನು 22 ವರ್ಷ ವಯಸ್ಸಿನ ಐಶ್ವರ್ಯಾ ನಾಯ್ಕ್ ಎಂದು ಗುರುತಿಸಲಾಗಿದೆ.ಐಶ್ವರ್ಯಾ ಅಥಣಿ ತಾಲೂಕಿನ ತನ್ನ ತೀರ್ಥ ಗ್ರಾಮದ ಕೃಷ್ಣಾ ನದಿಯಿಂದ ದೇವಸ್ಥಾನದವರೆಗೆ ದೀರ್ಘ ನಮಸ್ಕಾರ ಹಾಕುವ ಹರಕೆ ತೀರಿಸುವಾಗ ಕಾರು ಆಕೆಯ

ದೀರ್ಘದಂಡ ನಮಸ್ಕಾರ ಮಾಡುತ್ತಿದ್ದ ಯುವತಿ ಮೇಲೆ ಕಾರು ಹರಿದು ಸಾವು Read More »

23 ಪ್ರಕರಣಗಳಲ್ಲಿ ಬೇಕಾಗಿದ್ದ ಮೋಸ್ಟ್ ವಾಂಟೆಡ್ ಆರೋಪಿ ಅರೆಸ್ಟ್

ಮಂಗಳೂರು : 23 ಪ್ರಕರಣಗಳಲ್ಲಿ ಬೇಕಾಗಿದ್ದ ಮೋಸ್ಟ್ ವಾಂಟೆಡ್ ವಾರಂಟ್ ಆರೋಪಿಯನ್ನು ಪೊಲೀಸರು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ.ಕೃಷ್ಣಾಪುರ, ಕಾಟಿಪಳ್ಳ ಗ್ರಾಮದ ನಿವಾಸಿ ಅಜರುದ್ದೀನ್ ಅಲಿಯಾಸ್ ಅಜರ್ (ನಾಥು)(29) ಬಂಧಿತ ಆರೋಪಿ.ಈತನ ಮೇಲೆ ಮಂಗಳೂರು ನಗರ, ದಕ್ಷಿಣ ಕನ್ನಡ ಜಿಲ್ಲೆ ಹಾಗೂ ಉಡುಪಿ ಜಿಲ್ಲೆಯ ವಿವಿಧ ಪೊಲೀಸ್ ಠಾಣೆಗಳಲ್ಲಿ ಒಟ್ಟು 23 ಪ್ರಕರಣಗಳಲ್ಲಿ ಜಾಮೀನು ರಹಿತ ವಾರಂಟ್ ಇದೆ.ಇನ್ನು ಮಂಗಳೂರು ಪೊಲೀಸು ಆಯುಕ್ತರ ಆದೇಶದ ಮೇರೆಗೆ ಮಂಗಳೂರು ಉತ್ತರ ಉಪವಿಭಾಗದ ಸಹಾಯಕ ಆಯುಕ್ತರಾದ ಮನೋಜ್‌ ಕುಮಾರ್‌ರವರ ನಿರ್ದೇಶನದಂತೆ ಮಾರ್ಚ್ 22

23 ಪ್ರಕರಣಗಳಲ್ಲಿ ಬೇಕಾಗಿದ್ದ ಮೋಸ್ಟ್ ವಾಂಟೆಡ್ ಆರೋಪಿ ಅರೆಸ್ಟ್ Read More »

ಕಲಬುರುಗಿಯಲ್ಲಿ ಅಕ್ರಮವಾಗಿ ಸಾಗಿಸುತ್ತಿದ್ದ 1.90 ಕೋಟಿ ರೂ. ವಶ

ಕಲಬುರಗಿ : ಚುನಾವಣೆ ಘೋಷಣೆಯಾಗುವುದಕ್ಕೂ ಮೊದಲೇ ಹಣ ಮತ್ತು ಉಡುಗೊರೆ ಹಂಚುವ ಭರಾಟೆ ಶುರುವಾಗಿದೆ. ಕಲಬುರಗಿಯಲ್ಲಿ ಅಕ್ರಮವಾಗಿ ಸಾಗಿಸಲಾಗುತ್ತಿದ್ದ ಸುಮಾರು 1.90 ಕೋಟಿ ರೂ.ಯನ್ನು ಅಧಿಕಾರಿಗಳು ವಶಕ್ಕೆ ಪಡೆದಿದ್ದಾರೆ. ವಿಧಾನಸಭೆ ಚುನಾವಣೆ ಹಿನ್ನೆಲೆಯಲ್ಲಿ ಜಿಲ್ಲೆಯಲ್ಲಿ ಸ್ಥಾಪಿಸಲಾದ ಚೆಕ್ ಪೋಸ್ಟ್‌ಗಳಲ್ಲಿ ಬುಧವಾರ ಯಾವುದೇ ದಾಖಲೆ ಇಲ್ಲದ ಅಂದಾಜು 1.90 ಕೋಟಿ ರೂ. ಸಾಗಿಸುತ್ತಿದ್ದಾಗ ವಶಕ್ಕೆ ಪಡೆಯಲಾಗಿದೆ ಎಂದು ಜಿಲ್ಲಾಧಿಕಾರಿ ಯಶವಂತ ವಿ.‌ ಗುರುಕರ್ ತಿಳಿಸಿದ್ದಾರೆ. ಇದರಲ್ಲಿ ಕಮಲಾಪುರ ತಾಲ್ಲೂಕಿನ ಕಿಣ್ಣಿಸಡಕ್ ಚೆಕ್‌ಪೋಸ್ಟ್ ಬಳಿ 1.40 ಕೋಟಿ ರೂ ಹಾಗೂ

ಕಲಬುರುಗಿಯಲ್ಲಿ ಅಕ್ರಮವಾಗಿ ಸಾಗಿಸುತ್ತಿದ್ದ 1.90 ಕೋಟಿ ರೂ. ವಶ Read More »

ಪಿಎಫ್‌ಐ ನಿಷೇಧ : ಕೇಂದ್ರದ ಕ್ರಮ ಸರಿ ಎಂದ ನ್ಯಾಯಾಧಿಕರಣ

ಯುಎಪಿಎ ಕಾಯಿದೆಯಡಿ 5 ವರ್ಷ ನಿಷೇಧಕ್ಕೆ ಸಮರ್ಥನೆ ಹೊಸದಿಲ್ಲಿ : ಪಾಪ್ಯುಲರ್ ಫ್ರಂಟ್ ಆಫ್ ಇಂಡಿಯಾ ನಿಷೇಧಿಸಿದ ಕೇಂದ್ರ ಸರ್ಕಾರದ ಆದೇಶವನ್ನು ಯುಎಪಿಎ ನ್ಯಾಯಾಧಿಕರಣ ಎತ್ತಿ ಹಿಡಿದಿದೆ. ಕಳೆದ ವರ್ಷ ಅಕ್ಟೋಬರ್‌ನಲ್ಲಿ ಪಿಎಫ್‍ಐ ಮೇಲೆ ವಿಧಿಸಿದ ನಿಷೇಧವನ್ನು ಪರಿಶೀಲಿಸಲು ನ್ಯಾಯಮೂರ್ತಿ ದಿನೇಶ್ ಕುಮಾರ್ ಶರ್ಮಾ ಅಧ್ಯಕ್ಷತೆಯಲ್ಲಿ ನ್ಯಾಯಾಧಿಕರಣ ರಚಿಸಲಾಗಿತ್ತು.ಪಿಎಫ್‍ಐ ಮೇಲೆ ನಿಷೇಧ ಹೇರಿದ ಕ್ರಮದ ಬಗ್ಗೆ ದೇಶದ ವಿವಿಧೆಡೆ ವಿಚಾರಣೆ ನಡೆಸಿದ್ದ ನ್ಯಾಯಾಧಿಕರಣ ಕೇಂದ್ರದ ಆದೇಶವನ್ನು ಎತ್ತಿ ಹಿಡಿದೆ.ಕಳೆದ ವರ್ಷ ಸೆಪ್ಟೆಂಬರ್ 28 ರಂದು ಯುಎಪಿಎ ಸೆಕ್ಷನ್

ಪಿಎಫ್‌ಐ ನಿಷೇಧ : ಕೇಂದ್ರದ ಕ್ರಮ ಸರಿ ಎಂದ ನ್ಯಾಯಾಧಿಕರಣ Read More »

ತುಮಕೂರಿನಲ್ಲಿ ಬೈಕ್ ಅಪಘಾತ: ಸುಳ್ಯದ ಯುವಕ ಸ್ಥಳದಲ್ಲೇ ಸಾವು

ಸುಳ್ಯ: ತುಮಕೂರು ಟೋಲ್ ಬಳಿ ನಡೆದ ಬೈಕ್ ಅಪಘಾತದಲ್ಲಿ ಸುಳ್ಯದ ಯುವಕನೋರ್ವ ದಾರುಣವಾಗಿ ಮೃತಪಟ್ಟ ಘಟನೆ ನಡೆದಿದೆ. ಯುವಕನನ್ನು ಸುಳ್ಯ ತಾಲೂಕಿನ ಕೇರ್ಪಳ ನಿವಾಸಿ ಪ್ರಜ್ವಲ್ (25) ಎಂದು ಗುರುತಿಸಲಾಗಿದೆ. ಇವರು ಸುಳ್ಯದಲ್ಲಿ ರಿಕ್ಷಾ ಚಾಲಕರಾಗಿರುವ ರಮೇಶ್ ಅವರ ಪುತ್ರ. ಪ್ರಜ್ವಲ್ ತುಮಕೂರಿನಲ್ಲಿ ಟೋಲ್ ಸೂಪರ್ ವೈಸರ್ ಆಗಿ ಕೆಲಸ ನಿರ್ವಹಿಸುತ್ತಿದ್ದರು. ರವಿವಾರ ತಡರಾತ್ರಿ ಟೋಲ್ ಸಮೀಪವೇ ಬೈಕ್ ಸ್ಕಿಡ್ ಆಗಿ, ಅಪಘಾತ ಸಂಭವಿಸಿತ್ತು. ಪ್ರಜ್ವಲ್ ಸ್ಥಳದಲ್ಲೇ ಕೊನೆಯುಸಿರೆಳೆದಿದ್ದಾರೆ‌. ಮೃತ ಪ್ರಜ್ವಲ್ ತಂದೆ, ತಾಯಿ, ಸಹೋದರಿಯನ್ನು ಅಗಲಿದ್ದಾರೆ.

ತುಮಕೂರಿನಲ್ಲಿ ಬೈಕ್ ಅಪಘಾತ: ಸುಳ್ಯದ ಯುವಕ ಸ್ಥಳದಲ್ಲೇ ಸಾವು Read More »

ಬೋರ್‍ವೆಲ್ ಲಾರಿ ಢಿಕ್ಕಿ: ದ್ವಿಚಕ್ರ ವಾಹನ ಸವಾರ ಸ್ಥಳದಲ್ಲೇ ಮೃತ್ಯು

ವಿಟ್ಲ: ವಿಟ್ಲದ ಕಾಶಿಮಠದಲ್ಲಿ ನಡೆದ ಬೋರ್‍ವೆಲ್ ಲಾರಿ ಢಿಕ್ಕಿಯಾಗಿ ದ್ವಿಚಕ್ರ ವಾಹನ ಸವಾರ ಸ್ಥಳದಲ್ಲಿಯೇ ಮೃತಪಟ್ಟ ಘಟನೆ ಶನಿವಾರ ನಡೆದಿದೆ. ಉಕ್ಕುಡ ಆಲಂಗಾರು ನಿವಾಸಿ ರಂಜಿತ್ (20) ಮೃತ ದುರ್ದೈವಿ. ವಿಟ್ಲ ಕಡೆಯಿಂದ ಉಕ್ಕುಡ ಕಡೆ ತೆರಳುತ್ತಿದ್ದ ದ್ವಿಚಕ್ರ ವಾಹನಕ್ಕೆ ಎದುರಿನಿಂದ ಬಂದ ಬೋರ್‍ವೆಲ್ ಲಾರಿ ಢಿಕ್ಕಿ ಹೊಡೆದಿದೆ. ಪರಿಣಾಮ ಸವಾರ ಸ್ಥಳದಲ್ಲಿಯೇ ಮೃತಪಟ್ಟಿದ್ದಾರೆ. ಸಹಸವಾರ ಅಪಾಯದಿಂದ ಪಾರಾಗಿದ್ದಾರೆ.

ಬೋರ್‍ವೆಲ್ ಲಾರಿ ಢಿಕ್ಕಿ: ದ್ವಿಚಕ್ರ ವಾಹನ ಸವಾರ ಸ್ಥಳದಲ್ಲೇ ಮೃತ್ಯು Read More »

ಗಾಂಜಾ ಮಾರಾಟ ಯತ್ನ : ಆರೋಪಿಯ ಬಂಧನ

ಪುತ್ತೂರು : ಅಕ್ರಮವಾಗಿ ಗಾಂಜಾ ಮಾರಾಟ ಮಾಡುತ್ತಿದ್ದು ವ್ಯಕ್ತಿಯೋರ್ವನನ್ನು ಪುತ್ತೂರು ನಗರ ಠಾಣೆ ಪೊಲೀಸರು ಕಾರ್ಯಾಚರಣೆಯೊಂದರಲ್ಲಿ ಮುಕ್ರಂಪಾಡಿ ಬಸ್ ತಂಗುದಾಣದಲ್ಲಿ ಬಂಧಿಸಿ ಆತನಿಂದ 40 ಸಾವಿರ ರೂ. ಮೌಲ್ಯದ 1.020 ಕೆ.ಜಿ.ತೂಕದ ಗಾಂಜಾ ವಶಪಡಿಸಿಕೊಂಡಿದ್ದಾರೆ. ಬಲ್ನಾಡು ಗ್ರಾಮದ ಬುಳ್ಳೇರಿಕಟ್ಟೆ ನಿವಾಸಿ ಅಬೂಬಕ್ಕರ್ ಎಂಬವರ ಪುತ್ರ ಇಕ್ಬಾಲ್ ಯಾನೆ ಇಕ್ಕು (35) ಬಂಧಿತ ಆರೋಪಿ. ಆರೋಪಿ ಮಾಣಿ-ಮೈಸೂರು ರಾಷ್ಟ್ರೀಯ ಹೆದ್ದಾರಿ ಮುಕ್ರಂಪಾಡಿ ಎಂಬಲ್ಲಿ ಬಸ್ ತಂಗುದಾಣದಲ್ಲಿ ಗಾಂಜಾ ಮಾರಾಟ ಮಾಡುವ ಉದ್ದೇಶದಿಂದ ತನ್ನ ಬಳಿ ಇಟ್ಟುಕೊಂಡಿದ್ದ. ಖಚಿತ ಮಾಹಿತಿ

ಗಾಂಜಾ ಮಾರಾಟ ಯತ್ನ : ಆರೋಪಿಯ ಬಂಧನ Read More »

ತಾಯಿಯನ್ನು ಕೊಂದು ಹೆಣವನ್ನು 3 ತಿಂಗಳು ಮನೆಯಲ್ಲಿಟ್ಟುಕೊಂಡ ಮಗಳು

ವಾಸನೆ ತಡೆಯಲು 500 ಬಾಟಲಿ ಸೆಂಟ್‌ ಚಿಮುಕಿಸಿದ್ದಳು ಮುಂಬಯಿ : ಮಗಳೇ ತಾಯಿಯನ್ನು ಕೊಂದು ಹೆಣವನ್ನು ಮೂರು ತಿಂಗಳು ಮನೆಯಲ್ಲಿಟ್ಟುಕೊಂಡ ಅಮಾನವೀಯ ಘಟನೆಯೊಂದು ಮುಂಬಯಿಯಲ್ಲಿ ಸಂಭವಿಸಿದೆ. ಮುಂಬಯಿಯ ಲಾಲ್‌ಬಾಗ್‌ನ ರಿಂಪಲ್‌ ಜೈನ್‌ (24) ಈ ಪಾಪಿ ಮಗಳು. ಕಳೆದ ಡಿಸೆಂಬರ್‌ನಲ್ಲಿ ಆಕೆ ತಾಯಿ ಬೀನಾ ಜೈನ್‌ರನ್ನು (55) ಕೊಲೆ ಮಾಡಿದ್ದಳು. ಬಳಿಕ ಶವವನ್ನು ಹಲವಾರು ತುಂಡು ಮಾಡಿ ಪ್ಲಾಸ್ಟಿಕ್‌ ಚೀಲದಲ್ಲಿ ತುಂಬಿಸಿ ಮನೆಯೊಳಗಿಟ್ಟಿದ್ದಳು. ಬುಧವಾರ ಕೊಲೆ ಪ್ರಕರಣ ಬೆಳಕಿಗೆ ಬಂದಿದೆ.ಪ್ಲಾಸ್ಟಿಕ್‌ ಚೀಲದಲ್ಲಿ ತುಂಬಿಸಿಟ್ಟಿದ್ದ ಹೆಣ ಪೊಲೀಸರು ತಪಾಸಣೆ

ತಾಯಿಯನ್ನು ಕೊಂದು ಹೆಣವನ್ನು 3 ತಿಂಗಳು ಮನೆಯಲ್ಲಿಟ್ಟುಕೊಂಡ ಮಗಳು Read More »

error: Content is protected !!
Scroll to Top