ಉಪ್ಪಿನಂಗಡಿ ಜಾತ್ರೆ ಸಂದರ್ಭದಲ್ಲೇ ನದಿಗೆ ಹಾರಿದ ಕುಖ್ಯಾತ ಆರೋಪಿ | ಪೊಲೀಸರ ಕಣ್ತಪ್ಪಿಸಿ ಪರಾರಿಯಾದ ಆರೋಪಿ | ಭಕ್ತರಲ್ಲಿ ಆತಂಕ
ಉಪ್ಪಿನಂಗಡಿ: ಮಖೆ ಜಾತ್ರೆ ಸಡಗರದಲ್ಲಿದ್ದ ಉಪ್ಪಿನಂಗಡಿಯ ಶ್ರೀ ಸಹಸ್ರಲಿಂಗೇಶ್ವರ ದೇವಾಲಯದ ಭಕ್ತರಲ್ಲಿ ಯುವಕನೋರ್ವ ನದಿಗೆ ಹಾರಿರುವ ಕುರಿತು ಸುದ್ದಿಯಾಗುತ್ತಿದ್ದಂತೆ ಆತಂಕ ಸೃಷ್ಟಿಯಾದ ಘಟನೆ ಗುರುವಾರ ರಾತ್ರಿ ನಡೆದಿದೆ ದೇಗುಲದ ರಥೋತ್ಸವ ನಡೆಯುತ್ತಿದ್ದಂತೆಯೇ ಪೊಲೀಸರು ನೇತ್ರಾವತಿ ಹಾಗೂ ಕುಮಾರಧಾರಾ ನದಿ ಸಂಗಮ ಸ್ಥಳದತ್ತ ಧಾವಿಸುತ್ತಿರುವುದು ಕಂಡು ಬಂದಿತ್ತು. ಜತೆಗೆ ಭಕ್ತರು ಕೂಡ ಅತ್ತ ಧಾವಿಸತೊಡಗಿದರು. ಈ ವೇಳೆ ವಿವಿಧ ಧಾರ್ಮಿಕ ಹಾಗೂ ಸಾಂಸ್ಕೃತಿಕ ಕಾರ್ಯಕ್ರಮದಲ್ಲಿ ಭಾಗಿಯಾದ ಮಂದಿಗೆ ಈ ಬೆಳವಣಿಗೆ ಬಗ್ಗೆ, ಕುತೂಹಲ ಮೂಡಿ ವಿಚಾರಿಸತೊಡಗಿದರು. ಆದರೆ ನದಿಗೆ […]








