ಅಪರಾಧ

ಅಬ್ದುಲ್‌ ರಹಿಮಾನ್‌ ಹತ್ಯೆ : ಮೂವರು ವಶ

15 ಮಂದಿಯ ತಂಡದಿಂದ ಕೊಲೆ ಎಂದು ಎಫ್‌ಐಆರ್‌ ದಾಖಲು ಬಂಟ್ವಾಳ: ತಾಲೂಕಿನ ಕೂರಿಯಾಳ ಸಮೀಪದ ಇರಾಕೋಡಿಯ ಕೊಳತ್ತಮಜಲ್ ನಿವಾಸಿ ಅಬ್ದುಲ್ ರಹಿಮಾನ್ ಹತ್ಯೆಗೆ ಸಂಬಂಧಪಟ್ಟು ದೀಪಕ್ ಸಹಿತ ಮೂವರನ್ನು ಪೊಲೀಸರು ವಶಕ್ಕೆ ಪಡೆದಿರುವುದಾಗಿ ತಿಳಿದು ಬಂದಿದೆ. ಕೊಲೆ ಕೃತ್ಯದಲ್ಲಿ ಸುಮಾರು 15 ಮಂದಿ ಭಾಗಿಯಾಗಿದ್ದಾರೆ ಎನ್ನಲಾಗುತ್ತಿದ್ದು, ಕೃತ್ಯ ನಡೆದ ಬಳಿಕ ಆರೋಪಿಗಳು ಪರಾರಿಯಾಗಿದ್ದಾರೆ. ಆ ಪೈಕಿ ಮೂವರನ್ನು ಪೊಲೀಸರು ವಶಕ್ಕೆ ಪಡೆದು ತೀವ್ರ ವಿಚಾರಣೆ ನಡೆಸುತ್ತಿದ್ದಾರೆ ಎಂದು ಮೂಲಗಳು ತಿಳಿಸಿವೆ. ಮಂಗಳವಾರ ಮಧ್ಯಾಹ್ನ ಅಬ್ದುಲ್‌ ರಹಿಮಾನ್‌ ಅವರನ್ನು […]

ಅಬ್ದುಲ್‌ ರಹಿಮಾನ್‌ ಹತ್ಯೆ : ಮೂವರು ವಶ Read More »

ಯುವಕನ ಮೇಲೆ  ಬಿಯರ್‌ ಬಾಟಲ್‌ನಿಂದ ಹಲ್ಲೆ | ದೂರು ದಾಖಲು

ಪುತ್ತೂರು:  ಯುವಕನ ಮೇಲೆ ಬಿಯರ್ ಬಾಟಲಿಯಿಂದ ಹಲ್ಲೆ ಮಾಡಿದ ಘಟನೆ ನಿನ್ನೆ ಪಾಣಾಜೆ ಗ್ರಾಮದಲ್ಲಿ ನಡೆದಿದೆ. ಹಲ್ಲೆಗೊಳಗಾದ ವ್ಯಕ್ತಿ ಅರ್ಲಪದವು ನಿವಾಸಿ ಪ್ರಕಾಶ್ (28) ಎನ್ನಲಾಗಿದೆ. ಹಲ್ಲೆ ಮಾಡಿದ ಆರೋಪಿಗಳು ಧನಂಜಯ ಮತ್ತು ಪುನೀತ್  ಎಂದು ತಿಳಿದು ಬಂದಿದೆ. ಪಾಣಾಜೆ ಗ್ರಾಮದ ವೈನ್‌ ಶಾಪ್‌ ನಿಂದ ಬಿಯರ್‌ ಬಾಟಲಿಯನ್ನು ಖರೀದಿ ಮಾಡಿ, ವೈನ್‌ ಶಾಪ್‌ ನಲ್ಲಿ ಇರುವ ಶೆಡ್‌ ನಲ್ಲಿದ್ದ ಚಯರ್‌ನಲ್ಲಿ ಕುಳಿತು ಬಿಯರ್ ಕುಡಿಯುತ್ತಿದ್ದ ವೇಳೆ ಪರಿಚಯದವರಾದ ಧನಂಜಯ ಮತ್ತು ಪುನೀತ್‌ ಎಂಬುವವರು ಬಂದಿದ್ದರು. ಬಂದ

ಯುವಕನ ಮೇಲೆ  ಬಿಯರ್‌ ಬಾಟಲ್‌ನಿಂದ ಹಲ್ಲೆ | ದೂರು ದಾಖಲು Read More »

ಅಬ್ದುಲ್‌ ರಹಿಮಾನ್‌ ಹತ್ಯೆ : ಅಘೋಷಿತ ಬಂದ್‌ ಆಚರಣೆ

ಮಂಗಳೂರಿನಿಂದ ಬಂಟ್ವಾಳ ತನಕ ಅಂಗಡಿಮುಂಗಟ್ಟುಗಳನ್ನು ಸ್ವಯಂ ಪ್ರೇರಣೆಯಿಂದ ಮುಚ್ಚಿದ ಮಾಲೀಕರು ಮಂಗಳೂರು: ಬಂಟ್ವಾಳದ ಅಬ್ದುಲ್‌ ರಹಿಮಾನ್‌ ಹತ್ಯೆ ಹಿನ್ನೆಲೆಯಲ್ಲಿ ಇಂದು ಮಂಗಳೂರಿನಿಂಂದ ಬಂಟ್ವಾಳದವರೆಗಿನ ನೂರಾರು ಅಂಗಡಿಮುಂಗಟ್ಟುಗಳು ಬಂದ್‌ ಆಗಿವೆ. ಮಾಲೀಕರು ಸ್ವಯಂಪ್ರೇರಿತವಾಗಿ ಅಘೋಷಿತ ಬಂದ್‌ ಆಚರಣೆ ಮಾಡಿದ್ದಾರೆ ಎನ್ನಲಾಗುತ್ತಿದೆ. ಅಬ್ದುಲ್ ರಹಿಮಾನ್‌ ಮೃತದೇಹವನ್ನು ಕೊಳತ್ತಮಜಲಿಗೆ ಬೆಳಗ್ಗೆ ಸಾಗಿಸುವಾಗ ಅಂಗಡಿಗಳೆಲ್ಲ ಮುಚ್ಚಿದ್ದವು. ಪೊಲೀಸ್ ಬಂದೋಬಸ್ತ್‌ನಲ್ಲಿ ಮೃತದೇಹವನ್ನು ಮೆರವಣಿಗೆಯ ಮೂಲಕ ಸಾಗಿಸಲಾಯಿತು. ಈ ವೇಳೆ ನೂರಾರು ಜನ ಸೇರಿದ್ದರು. ಹತ್ಯೆ ಖಂಡಿಸಿ ಮಂಗಳೂರಿನಿಂದ ಬಂಟ್ವಾಳದವರೆಗೆ ಅಂಗಡಿಗಳ ಮುಂಗಟ್ಟುಗಳು ಬಂದ್‌ ಮಾಡಿ

ಅಬ್ದುಲ್‌ ರಹಿಮಾನ್‌ ಹತ್ಯೆ : ಅಘೋಷಿತ ಬಂದ್‌ ಆಚರಣೆ Read More »

ಅಬ್ದುಲ್‌ ರಹಿಮಾನ್‌ ಶವಯಾತ್ರೆ ವೇಳೆ ಫರಂಗಿಪೇಟೆಯಲ್ಲಿ ಉದ್ವಿಗ್ನ ಸ್ಥಿತಿ

ರಸ್ತೆತಡೆ ಮಾಡಿ ಸರಕಾರದ ವಿರುದ್ಧ ಘೋಷಣೆ ಕೂಗಿದ ಉದ್ರಿಕ್ತ ಗುಂಪು ಮಂಗಳೂರು: ಬಂಟ್ವಾಳದ ಕುರಿಯಾಳ ಗ್ರಾಮದ ಈರಾಕೋಡಿ ಎಂಬಲ್ಲಿ ದುಷ್ಕರ್ಮಿಗಳಿಂದ ಕೊಲೆಯಾದ ಅಬ್ದುಲ್ ರಹಿಮಾನ್(34) ಮೃತದೇಹ ಸಾಗಾಟದ ವೇಳೆ ಫರಂಗಿಪೇಟೆಯಲ್ಲಿ ಭಾರಿ ಸಂಖ್ಯೆಯಲ್ಲಿ ಜಮಾಯಿಸಿದ ಜನರ ಗುಂಪು ರಸ್ತೆ ತಡೆ ನಡೆಸಿ ಆಕ್ರೋಶ ವ್ಯಕ್ತಪಡಿಸಿದೆ. ದೇರಳಕಟ್ಟೆ ಯೇನೆಪೊಯ ಆಸ್ಪತ್ರೆಯಲ್ಲಿ ಮಂಗಳವಾರ ರಾತ್ರಿಯೇ ಮೃತದೇಹದ ಮರಣೋತ್ತರ ಪರೀಕ್ಷೆ ನಡೆದು ಇಂದು ಮುಂಜಾನೆ ಕುತ್ತಾರ್ ಮದನಿ ನಗರದ ಮಸೀದಿಯಲ್ಲಿ ಮಯ್ಯತ್ ಸ್ನಾನ ನಿರ್ವಹಿಸಿ ಅಲ್ಲಿಂದ ಪೊಲೀಸ್ ಬಂದೋಬಸ್ತ್‌ನಲ್ಲಿ ಮೃತದೇಹವನ್ನು ಕೊಂಡೊಯ್ಯಲಾಯಿತು.

ಅಬ್ದುಲ್‌ ರಹಿಮಾನ್‌ ಶವಯಾತ್ರೆ ವೇಳೆ ಫರಂಗಿಪೇಟೆಯಲ್ಲಿ ಉದ್ವಿಗ್ನ ಸ್ಥಿತಿ Read More »

ಕಾರಿನ ಸನ್‌ರೂಫ್‌ ತೆರೆದು ನಡುರಸ್ತೆಯಲ್ಲೇ ದಂಪತಿ ರೊಮಾನ್ಸ್‌

ದಂಡ ವಿಧಿಸಿ ಎಚ್ಚರಿಕೆ ನೀಡಿದ ಪೊಲೀಸರು ಬೆಂಗಳೂರು: ಕಾರಿನಲ್ಲಿ ಹೋಗುತ್ತಿರುವಾಗ ಸನ್‌ರೂಫ್ ತೆಗೆದು ನಡುರಸ್ತೆಯಲ್ಲೇ ದಂಪತಿ ಅಸಭ್ಯವಾಗಿ ವರ್ತಿಸಿರುವ ಘಟನೆ ನಗರದ ಕೋರಮಂಗಲದಲ್ಲಿ ನಿನ್ನೆ ರಾತ್ರಿ ನಡೆದಿದೆ. ಮಂಗಳವಾರ ರಾತ್ರಿ ದಂಪತಿ ಊಟ ಮುಗಿಸಿ ಕಾರಿನಲ್ಲಿ ಮನೆಗೆ ತೆರಳುತ್ತಿದ್ದರು. ಈ ವೇಳೆ ಕಾರಿನ ಸನ್‌ರೂಪ್ ತೆಗೆದು ರೊಮ್ಯಾನ್ಸ್ ಮಾಡಿದ್ದು, ದಂಪತಿಯ ವರ್ತನೆಯನ್ನು ವಾಹನ ಸವಾರರು ವಿಡಿಯೋ ಮಾಡಿ ಪೊಲೀಸರಿಗೆ ಟ್ಯಾಗ್ ಮಾಡಿದ್ದಾರೆ. ಇದನ್ನು ಕಂಡ ಹಲಸೂರು ಪೊಲೀಸರು ಕಾರಿನ ನಂಬರ್ ಆಧಾರಿಸಿ ಮಾಲೀಕರನ್ನು ಪತ್ತೆ ಹಚ್ಚಿದ್ದಾರೆ. ಅಪಾಯಕಾರಿಯಾಗಿ

ಕಾರಿನ ಸನ್‌ರೂಫ್‌ ತೆರೆದು ನಡುರಸ್ತೆಯಲ್ಲೇ ದಂಪತಿ ರೊಮಾನ್ಸ್‌ Read More »

ಅಬ್ದುಲ್‌ ರಹಿಮಾನ್‌ ಹತ್ಯೆ : 15 ಮಂದಿಯ ವಿರುದ್ಧ ಪ್ರಕರಣ ದಾಖಲು

ಕೊಲೆ ಮಾಡಿದವರಲ್ಲಿ ಸ್ಥಳೀಯ ಇಬ್ಬರು ಪರಿಚಯಸ್ಥರು ಎಂದು ಮಾಹಿತಿ ಬಂಟ್ವಾಳ: ತಾಲೂಕಿನ ಕುರಿಯಾಳ ಗ್ರಾಮದ ಈರಾಕೋಡಿ ಎಂಬಲ್ಲಿ ಕೊಳತ್ತಮಜಲು ಜುಮ್ಮಾ ಮಸೀದಿ ಕಾರ್ಯದರ್ಶಿ ಹಾಗೂ ಪಿಕಪ್ ಚಾಲಕ ಅಬ್ದುಲ್ ರಹಿಮಾನ್ (32) ಹತ್ಯೆ ಮತ್ತು ಕಲಂದರ್ ಶಾಫಿ ಎಂಬವರ ಮೇಲಿನ ಕೊಲೆಯತ್ನ ಪ್ರಕರಣ‌ ಸಂಬಂಧ ಸ್ಥಳೀಯ ಇಬ್ಬರು ಸೇರಿ 15 ಮಂದಿಯ ವಿರುದ್ಧ ಬಂಟ್ವಾಳ‌ ಗ್ರಾಮೀಣ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಅಬ್ದುಲ್ ರಹಿಮಾನ್ ಅವರ‌ ಕೊಲೆ ಮತ್ತು ಕಲಂದರ್ ಶಾಫಿ ಕೊಲೆಯತ್ನ ಪ್ರಕರಣದಲ್ಲಿ ದೀಪಕ್ ಮತ್ತು

ಅಬ್ದುಲ್‌ ರಹಿಮಾನ್‌ ಹತ್ಯೆ : 15 ಮಂದಿಯ ವಿರುದ್ಧ ಪ್ರಕರಣ ದಾಖಲು Read More »

ಮಂಗಳೂರು : ಹುಟ್ಟೂರು ಕೊಳತ್ತಮಜಲ್‌ಗೆ ಅಬ್ದುಲ್‌ ರಹಿಮಾನ್‌ ಮೃತದೇಹ ರವಾನೆ

ಸರಣಿ ಹತ್ಯೆಗಳಿಂದ ಕರಾವಳಿಯಲ್ಲಿ ಆತಂಕದ ವಾತಾವರಣ- ಮೇ 30ರವರೆಗೆ ನಿಷೇಧಾಜ್ಞೆ ಮಂಗಳೂರು: ಕರಾವಳಿಯಲ್ಲಿ ಮತ್ತೆ ನೆತ್ತರು ಹರಿದಿದೆ. ಬಂಟ್ವಾಳ ಸಮೀಪ ಮುಸ್ಲಿಂ ಯುವಕನನ್ನು ಬರ್ಬರವಾಗಿ ಮಾರಕಾಸ್ತ್ರದಿಂದ ಕೊಚ್ಚಿ ಕೊಲೆ ಮಾಡಿದ ಘಟನೆ ಕರಾವಳಿಯಲ್ಲಿ ಮತ್ತೆ ಆತಂಕದ ವಾತಾವರಣ ಉಂಟು ಮಾಡಿದೆ. ಆರೋಪಿಗಳನ್ನು ಕೂಡಲೇ ಬಂಧಿಸುವಂತೆ ಮುಸ್ಲಿಮರು ಒತ್ತಾಯಿಸಿ ರಾತ್ರಿಯಿಡೀ ಪ್ರತಿಭಟನೆ ನಡೆಸಿದ್ದಾರೆ. ಪರಿಸ್ಥಿತಿ ಉದವಿಗ್ನಗೊಂಡಿರುವ ಹಿನ್ನೆಲೆಯಲ್ಲಿ ಮೇ 30ರ ಸಂಜೆ 6ಗಂಟೆವರೆಗೂ ಮಂಗಳೂರು ಕಮೀಷನರೇಟ್ ಹಾಗೂ ಮಂಗಳೂರು ಪೊಲೀಸ್‌ ವ್ಯಾಪ್ತಿಯಡಿ ನಿಷೇಧಾಜ್ಞೆಯನ್ನು ಜಾರಿ ಮಾಡಲಾಗಿದ್ದು ಹೆಚ್ಚುವರಿ ಪೊಲೀಸರನ್ನು

ಮಂಗಳೂರು : ಹುಟ್ಟೂರು ಕೊಳತ್ತಮಜಲ್‌ಗೆ ಅಬ್ದುಲ್‌ ರಹಿಮಾನ್‌ ಮೃತದೇಹ ರವಾನೆ Read More »

ಇರಾಕೋಡಿಯಲ್ಲಿ ಪಿಕಪ್ ಚಾಲಕನ ಬರ್ಬರ ಹತ್ಯೆ | ಮರಳು ಅನ್‍ ಲೋಡ್ ಮಾಡುತ್ತಿದ್ದ ವೇಳೆ ಘಟನೆ

ಬಂಟ್ವಾಳ: ಪಿಕಪ್ ಚಾಲಕರೊಬ್ಬರನ್ನು ಬರ್ಬರವಾಗಿ ಕಡಿದು ಕೊಲೆ ಮಾಡಿದ ಘಟನೆ ದಕ್ಷಿಣ ಕನ್ನಡ ಜಿಲ್ಲೆಯ ಬಂಟ್ವಾಳ ತಾಲೂಕಿನ ಕುರಿಯಾಳ ಸಮೀಪದ ಕಾಂಬೋಡಿಯ ಇರಾಕೋಡಿ ಎಂಬಲ್ಲಿ ಇಂದು ನಡೆದಿದೆ. ಕೊಳತ್ತಮಜಲು ನಿವಾಸಿ ರಹೀಮ್ ಎಂಬಾತ ಹತ್ಯೆಗೀಡಾದವರು. ರಹೀಮ್‍ ಇರಾಕೋಡಿ ಎಂಬಲ್ಲಿ ಮರಳು ಅನ್ ಲೋಡ್ ಮಾಡುತ್ತಿದ್ದ ವೇಳೆ ಬೈಕಿನಲ್ಲಿ ಬಂದ ಇಬ್ಬರು ದುಷ್ಕರ್ಮಿಗಳು ಕಡಿದು ಪರಾರಿಯಾಗಿದ್ದಾರೆ ಎನ್ನಲಾಗಿದೆ. ರಹೀಮ್ ಜೊತೆ ಇನ್ನೊರ್ವ ಸ್ಥಳದಲ್ಲಿದ್ದು,  ಆತನಿಗೂ ಕಡಿಯಲಾಗಿದೆ. ಆತನಿಗೆ ಕೈಗೆ ಗಾಯ ವಾಗಿದ್ದು ಆತನನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ ಎಂದು ತಿಳಿದು

ಇರಾಕೋಡಿಯಲ್ಲಿ ಪಿಕಪ್ ಚಾಲಕನ ಬರ್ಬರ ಹತ್ಯೆ | ಮರಳು ಅನ್‍ ಲೋಡ್ ಮಾಡುತ್ತಿದ್ದ ವೇಳೆ ಘಟನೆ Read More »

ಪ್ರಜ್ವಲ್‌ ರೇವಣ್ಣ ಮೊಬೈಲ್‌ನಲ್ಲಿತ್ತಂತೆ 2 ಸಾವಿರ ಅಶ್ಲೀಲ ಫೋಟೊ, 50 ವಿಡಿಯೋ

ನ್ಯಾಯಾಲಯಕ್ಕೆ ಮಾಹಿತಿ ನೀಡಿದ ರೇವಣ್ಣ ಕುಟುಂಬದ ಮಾಜಿ ಚಾಲಕ ಬೆಂಗಳೂರು: ಸರಣಿ ಅತ್ಯಾಚಾರ ಹಾಗೂ ಬೆದರಿಕೆ ಪ್ರಕರಣಗಳಲ್ಲಿ ಬಂಧಿತರಾಗಿ ಜೈಲಿನಲ್ಲಿರುವ ಮಾಜಿ ಸಂಸದ ಪ್ರಜ್ವಲ್‌ ರೇವಣ್ಣ ಪ್ರಕರಣದ ವಿಚಾರಣೆ ವೇಳೆ ಅವರ ಮಾಜಿ ಕಾರು ಚಾಲಕ ಕಾರ್ತಿಕ್‌ ಸ್ಫೋಟಕ ಸಾಕ್ಷ್ಯ ನುಡಿದಿದ್ದಾರೆ. ಪ್ರಜ್ವಲ್‌ ಮೊಬೈಲ್‌ನಲ್ಲಿ ಸುಮಾರು 2 ಸಾವಿರ ಅಶ್ಲೀಲ ಫೋಟೋಗಳು ಹಾಗೂ 40ರಿಂದ 50 ವಿಡಿಯೋಗಳಿದ್ದವು ಎಂದು ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯದಲ್ಲಿ ಹೇಳಿಕೆ ದಾಖಲಿಸಿದ್ದಾರೆ. ನ್ಯಾಯಾಲಯದಲ್ಲಿ ಸೋಮವಾರ ಪ್ರಕರಣದ ವಿಚಾರಣೆಗೆ ಹಾಜರಾದ ಕಾರ್ತಿಕ್‌, ಪ್ರಜ್ವಲ್‌ ಮೊಬೈಲ್‌ನಲ್ಲಿದ್ದ

ಪ್ರಜ್ವಲ್‌ ರೇವಣ್ಣ ಮೊಬೈಲ್‌ನಲ್ಲಿತ್ತಂತೆ 2 ಸಾವಿರ ಅಶ್ಲೀಲ ಫೋಟೊ, 50 ವಿಡಿಯೋ Read More »

ಸಾಲದ ಹೊರೆಯಿಂದ ನೊಂದು ಒಂದೇ ಕುಟುಂಬದ 7 ಮಂದಿ ಆತ್ಮಹತ್ಯೆ

ಕಾರಿನೊಳಗೆ ಕುಳಿತು ವಿಷ ಸೇವಿಸಿದ ಇಡೀ ಕುಟುಂಬ ಹರ್ಯಾಣ: ಸಾಲ ಹೊರೆಯಿಂದ ನೊಂದು ಒಂದೇ ಕುಟುಂಬದ 7 ಮಂದಿ ಆತ್ಮಹತ್ಯೆ ಮಾಡಿಕೊಂಡಿರುವ ದಾರುಣ ಘಟನೆ ಹರ್ಯಾಣದ ಪಂಚಕುಲದಲ್ಲಿ ನಡೆದಿದೆ. ಡೆಹ್ರಾಡೂನ್​ನ ಒಂದೇ ಕುಟುಂಬದ 7 ಮಂದಿ ವಿಷ ಸೇವಿಸಿ ಜೀವ ಬಿಟ್ಟಿದ್ದಾರೆ. ಸೆಕ್ಟರ್ 27ರಲ್ಲಿ ಮನೆಯ ಹೊರಗೆ ನಿಲ್ಲಿಸಿದ್ದ ಕಾರಿನೊಳಗೆ ಶವಗಳು ಇರುವುದು ಪತ್ತೆಯಾಗಿದೆ. ಕುಟುಂಬವು ಭಾರಿ ಆರ್ಥಿಕ ಸಂಕಷ್ಟದಲ್ಲಿ ಸಿಲುಕಿದ್ದರಿಂದ ಈ ನಿರ್ಧಾರಕ್ಕೆ ಬಂದಿರಬಹುದು ಎಂದು ಹೇಳಲಾಗಿದೆ. ಡೆಹ್ರಾಡೂನ್‌ನ ನಿವಾಸಿ ಪ್ರವೀಣ್ ಮಿತ್ತಲ್ ಪಂಚಕುಲದ ಬಾಗೇಶ್ವರ

ಸಾಲದ ಹೊರೆಯಿಂದ ನೊಂದು ಒಂದೇ ಕುಟುಂಬದ 7 ಮಂದಿ ಆತ್ಮಹತ್ಯೆ Read More »

error: Content is protected !!
Scroll to Top