ಅಪರಾಧ

ಗ್ರಾಹಕರ ನ್ಯಾಯಾಲಯ : ಸೇವಾ ಕೊರತೆ ಆರೋಪ | ಪರಿಹಾರಕ್ಕೆ ಆದೇಶ 

ಮಂಗಳೂರು : ಬಜಾಜ್ ಅಲಿಯನ್ಸ್ ಜನರಲ್ ಇನ್ಸೂರೆನ್ಸ್ ಕಂಪನಿಯ ಸೇವಾ ನ್ಯೂನ್ಯತೆ ಆರೋಪದ ಪ್ರಕರಣವೊಂದರ ವಿಚಾರಣೆ ನಡೆಸಿದ ಗ್ರಾಹಕರ ನ್ಯಾಯಾಲಯ ಪರಿಹಾರಕ್ಕೆ ಆದೇಶ ನೀಡಿದೆ. ಕೃಷಿಕರಾಗಿರುವ  ಕಡಬ ತಾಲೂಕಿನ ಇಚ್ಲಂಪಾಡಿ ಗ್ರಾಮದ  ನಿವಾಸಿ ಶ್ರೀನಿವಾಸ ಪೂಜಾರಿಯವರು   ಬಜಾಜ್ ಅಲಿಯನ್ಸ್ ಜನರಲ್ ಇನ್ಸೂರೆನ್ಸ್  ವಿಮಾ ಕಂಪನಿಯ ಪಾಲಿಸಿ ಸಂಖ್ಯೆ OG-19-3125-6401-00000446 ಜೊತೆಗೆ ಮೆಡಿಕ್ಲೈಮ್ ಪಾಲಿಸಿಯನ್ನು ಹೊಂದಿದ್ದು, ಈ ಪಾಲಿಸಿಯು ದಿನಾಂಕ 19.02.2019 ರಿಂದ ಪ್ರಾರಂಭವಾಗಿ,ನಂತರ ಕಾಲಕಾಲಕ್ಕೆ ಅಗತ್ಯವಾದ ಪ್ರೀಮಿಯಂ ಪಾವತಿಸುವ ಮೂಲಕ ಮುಂದುವರಿಸಲಾಗಿತ್ತು. ಹೀಗಿರುವಾಗ,ಶ್ರೀನಿವಾಸ ಪೂಜಾರಿಯವರ ಕಾಲಿಗೆ ವಿದ್ಯುತ್ […]

ಗ್ರಾಹಕರ ನ್ಯಾಯಾಲಯ : ಸೇವಾ ಕೊರತೆ ಆರೋಪ | ಪರಿಹಾರಕ್ಕೆ ಆದೇಶ  Read More »

ಈಶ್ವರಮಂಗಲದ ಪ್ರಶಾಂತ್ ನೇಣು ಬಿಗಿದು ಆತ್ಮಹತ್ಯೆ

ಪುತ್ತೂರು: ವ್ಯಕ್ತಿಯೊಬ್ಬರು ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡ ಘಟನೆ ಈಶ್ವರಮಂಗಲದ ಚಿಮಿಣಿಗುಡ್ಡೆಯಲ್ಲಿ ಇಂದು ನಡೆದಿದೆ. ಈಶ್ವರಮಂಗಲ ಮುಂಡ್ಯ ನಿವಾಸಿ ಪ್ರಶಾಂತ್ (38) ಮೃತ ವ್ಯಕ್ತಿ ವೃತ್ತಿಯಲ್ಲಿ ಮರದ ಕೆಲಸ ಮಾಡುತ್ತಿದ್ದ ಪ್ರಶಾಂತ್ ರವರ ಮನೆ ಗೃಹಪ್ರವೇಶ ಹತ್ತು ದಿನಗಳ ಹಿಂದೆ ನಡೆದಿತ್ತು ಎನ್ನಲಾಗಿದೆ. ಆತ್ಮಹತ್ಯೆಗೆ ಕಾರಣಗಳು ಇನ್ನಷ್ಟೇ ತಿಳಿದು ಬರಬೇಕಿದೆ. ಮೃತರು ಪತ್ನಿ, ಮಗು, ತಂದೆ, ತಾಯಿ ಹಾಗೂ ಸಹೋದರಿಯರನ್ನು ಅಗಲಿದ್ದಾರೆ.

ಈಶ್ವರಮಂಗಲದ ಪ್ರಶಾಂತ್ ನೇಣು ಬಿಗಿದು ಆತ್ಮಹತ್ಯೆ Read More »

ಹೈಕೋರ್ಟ್ ಮಹಿಳಾ ವಕೀಲರೊಬ್ಬರ ಮೃತದೇಹ ನೇಣು ಬಿಗಿದ ಸ್ಥಿತಿಯಲ್ಲಿ ಪತ್ತೆ !

ಬೆಂಗಳೂರು: ಹೈಕೋರ್ಟ್ ಮಹಿಳಾ ವಕೀಲೆಯೊಬ್ಬರು ಅನುಮಾನಾಸ್ಪದವಾಗಿ ಸಾವನ್ನಪ್ಪಿರುವ ಘಟನೆ ಸಂಜಯನಗರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ. ಚೈತ್ರಾ ಬಿ.ಗೌಡ (35) ಮೃತಪಟ್ಟ ವಕೀಲೆ. ಮನೆಯೊಂದರಲ್ಲಿ ನೇಣು ಬಿಗಿದ ಸ್ಥಿತಿಯಲ್ಲಿ ಪತ್ತೆಯಾಗಿದ್ದಾರೆ. ಹೈಕೋರ್ಟ್‌ನಲ್ಲಿ ಅಡ್ವೋಕೇಟ್ ಆಗಿದ್ದ ಚೈತ್ರಾ, ಅಣ್ಣಯ್ಯ ಲೇಔಟ್‌ನಲ್ಲಿ ವಾಸವಿದ್ದರು. ಅವರ ಪತಿ ಪತಿ ಕರ್ನಾಟಕ ಕೈಗಾರಿಕಾ ಪ್ರದೇಶಾಭಿವೃದ್ಧಿ ನಿಗಮದಲ್ಲಿ (ಕೆಐಡಿಬಿ) ಅಸ್ಪಿಸೆಂಟ್ ಕಮೀಷನರ್ ಆಗಿದ್ದಾರೆ. ವೃತ್ತಿಯಲ್ಲಿ ವಕೀಲೆಯಾಗಿದ್ದರೂ ಪ್ರವೃತ್ತಿಯಲ್ಲಿ ಮಾಡೆಲ್ ಆಗಿ ಗುರುತಿಸಿಕೊಂಡಿದ್ದರು. ದಂಪತಿ ನಡುವೆ ವೈಮನಸ್ಸು ಇತ್ತು ಎನ್ನಲಾಗಿದೆ. ಮನೆಯವರು ನೀಡಿದ ಮಾಹಿತಿ ಮೇರೆಗೆ

ಹೈಕೋರ್ಟ್ ಮಹಿಳಾ ವಕೀಲರೊಬ್ಬರ ಮೃತದೇಹ ನೇಣು ಬಿಗಿದ ಸ್ಥಿತಿಯಲ್ಲಿ ಪತ್ತೆ ! Read More »

ವಿದ್ಯಾರ್ಥಿನಿಯ ರುಂಡ ಕತ್ತರಿಸಿ ಬರ್ಬರ ಹತ್ಯೆ : ರುಂಡ ಪತ್ತೆ

ಕೊಡಗು:  ಜಿಲ್ಲೆಯ ಸೂರ್ಲಬ್ಬಿ ಗ್ರಾಮದಲ್ಲಿ ಎಸ್.ಎಸ್.ಎಲ್.ಸಿ ವಿದ್ಯಾರ್ಥಿನಿಯ ರುಂಡ ಕತ್ತರಿಸಿ ಬರ್ಬರವಾಗಿ ಹತ್ಯೆ ಮಾಡಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ ಎರಡು ದಿನಗಳ ಬಳಿಕ ವಿದ್ಯಾರ್ಥಿನಿಯ ರುಂಡ ಪತ್ತೆಯಾಗಿದೆ. ನಿಶ್ಚಿತಾರ್ಥ ನಿಲ್ಲಿಸಿದ್ದಕ್ಕೆ ಆರೋಪಿ ಪ್ರಕಾಶ್ ಎಸ್.ಎಸ್.ಎಲ್.ಸಿ ವಿದ್ಯಾರ್ಥಿನಿ ಮೀನಾಳ ರುಂಡ ಕತ್ತರಿಸಿ ಹತ್ಯೆಗೈದು ಪರಾರಿಯಾಗಿದ್ದ. ಬಳಿಕ ಹಮ್ಮಿಯಾಲ ಗ್ರಾಮದ ಗುಡ್ಡಪ್ರದೇಶದಲ್ಲಿ ಅಡಗಿ ಕುಳಿತಿದ್ದ ಆರೋಪಿ ಪ್ರಕಾಶ್ ನನ್ನು ಇಂದು ಪೊಲೀಸರು ಬಂಧಿಸಿದ್ದು, ಮೃತ ಮೀನಾಳ ರುಂಡವನ್ನು ಸೂರ್ಲಬ್ಬಿಯ ಬೆಟ್ಟ ಪ್ರದೇಶದಲ್ಲಿ ಎಸೆದಿರುವುದಾಗಿ ಆರೋಪಿ ಹೇಳಿಕೆ ನೀಡಿದ್ದ. ಇದೀಗ ಹತ್ಯೆಯಾದ ಪ್ರದೇಶದಿಂದ

ವಿದ್ಯಾರ್ಥಿನಿಯ ರುಂಡ ಕತ್ತರಿಸಿ ಬರ್ಬರ ಹತ್ಯೆ : ರುಂಡ ಪತ್ತೆ Read More »

ವಿದ್ಯಾರ್ಥಿನಿಯ ರುಂಡ ಕತ್ತರಿಸಿ ಹತ್ಯೆ : ಆರೋಪಿ ಪ್ರಕಾಶ್ ಬಂಧನ

ಮಡಿಕೇರಿ: ಹತ್ತನೇ ತರಗತಿ ವಿದ್ಯಾರ್ಥಿನಿಯ ರುಂಡ ಕಡಿದು ಹತ್ಯೆ ಮಾಡಿ ತಲೆ ಮರೆಸಿಕೊಂಡಿದ್ದ ಆರೋಪಿಯನ್ನು ಪೊಲೀಸರು ಬಂಧಿಸಿದ್ದಾರೆ ಆರೋಪಿ ಪ್ರಕಾಶ್ (35) ಕಾಡಿನಲ್ಲಿ ಅವಿತು ಕುಳಿತಿದ್ದ ಎನ್ನಲಾಗಿದೆ. ಸೋಮವಾರಪೇಟೆಯಲ್ಲಿ ತನ್ನೊಂದಿಗೆ ನಿಶ್ಚಿತಾರ್ಥ ಮು೦ದೂಡಲಾದ ಹಿನ್ನಲೆಯಲ್ಲಿ ಕೋಪಗೊಂಡು ಬಾಲಕಿಯ ತಲೆ ಕಡಿದು ಭೀಕರವಾಗಿ ಹತ್ಯೆ ಮಾಡಿ ಆರೋಪಿ ಪ್ರಕಾಶ್ ಪರಾರಿಯಾಗಿದ್ದ. ಈ ಬಗ್ಗೆ ಯುವಕನ ಶವ ಪತ್ತೆಯಾಗಿದೆ ಎಂಬ ವದಂತಿ ಹಬ್ಬಿತ್ತು. ಆದರೆ ಇದು ಸುಳ್ಳು ಎಂದು ಕೊಡಗು ಪೊಲೀಸ್ ವರಿಷ್ಠಾಧಿಕಾರಿ ಕೆ. ರಾಮರಾಜನ್ ಸ್ಪಷ್ಟಪಡಿಸಿದ್ದರು.

ವಿದ್ಯಾರ್ಥಿನಿಯ ರುಂಡ ಕತ್ತರಿಸಿ ಹತ್ಯೆ : ಆರೋಪಿ ಪ್ರಕಾಶ್ ಬಂಧನ Read More »

ಯುವಕನ ಅನುಮಾನಾಸ್ಪದ ಸಾವು : ಕೊಲೆ ಶಂಕೆ

ಪುತ್ತೂರು: ಬೆಟ್ಟಂಪಾಡಿ ಗ್ರಾಮದ  ಬರೆ ಎಂಬಲ್ಲಿ ಯುವಕನೋರ್ವನ  ಶವ ಅನುಮಾನಾಸ್ಪದವಾಗಿ ಮೃತಪಟ್ಟ ರೀತಿಯಲ್ಲಿ ಪತ್ತೆಯಾಗಿದ್ದು, ಇದೊಂದು ಕೊಲೆ ಶಂಕೆ ವ್ಯಕ್ತವಾಗಿದೆ. ಘಟನೆಗೆ ಸಂಬಂಧಿಸಿದಂತೆ  ಗ್ರಾಮಾಂತರ ಪೊಲೀಸರು  ಮೂವರನ್ನು ವಶಕ್ಕೆ ಪಡೆದುಕೊಂಡಿರುವುದಾಗಿ ತಿಳಿದುಬಂದಿದೆ. ಬೆಟ್ಟಂಪಾಡಿ ಬರೆ ದಿ.ಕೊರಗಪ್ಪ ಶೆಟ್ಟಿ ಯವರ ಪುತ್ರ ಚೇತನ್ (33ವ.) ಮೃತಪಟ್ಟವರು. ಮದ್ಯ ವ್ಯಸನಿಯಾಗಿದ್ದ ಚೇತನ್ ಮೇ.9ರಂದು ರಾತ್ರಿ ಕುಡಿದು ಬಂದು ಮನೆಯಲ್ಲಿ ಗಲಾಟೆ ಮಾಡಿದ್ದರು. ನಂತರ ನೆರೆಯ ಮನೆಗೆ ಹೋಗಿ  ಅಲ್ಲಿಯೂ  ಗಲಾಟೆ ಮಾಡಿದ್ದರು. ಅಲ್ಲಿಂದ  ಚೇತನ್ ರವರನ್ನು ಆತನ  ತಾಯಿ, ಬಾವ

ಯುವಕನ ಅನುಮಾನಾಸ್ಪದ ಸಾವು : ಕೊಲೆ ಶಂಕೆ Read More »

ಪ್ರವೀಣ್‌ ನೆಟ್ಟಾರು ಹತ್ಯೆ ಪ್ರಕರಣ : ಪ್ರಮುಖ ಆರೋಪಿ ಬಂಧನ

ಪುತ್ತೂರು: ಹಿಂದೂ ಕಾರ್ಯಕರ್ತ ಪ್ರವೀಣ್‌ ನೆಟ್ಟಾರು ಕೊಲೆ ಪ್ರಕರಣದ ಪ್ರಮುಖ ಆರೋಪಿ ಮುಸ್ತಾಫಾ ಪೈಚಾರ್‌ ಎಂಬಾತನನ್ನು  ಪೊಲೀಸರು  ಬಂಧಿಸಿದ್ದಾರೆ  ಎಂಬ ಮಾಹಿತಿ ಲಭ್ಯವಾಗಿದೆ. ಆರೋಪಿ ಮುಸ್ತಫಾ  ಪೈಚಾರ್ ಗೆ ಎನ್‌ಐಎ ಲುಕ್ ಔಟ್ ನೋಟೀಸ್‌ನ್ನು ನೀಡಿದ್ದು ಮಾಹಿತಿ ಕೊಟ್ಟವರಿಗೆ 5 ಲಕ್ಷ ಬಹುಮಾನ ಕೂಡ ಈ ಹಿಂದೆ  ಘೋಷಿಸಿತ್ತು. ಇದೀಗ ಸಕಲೇಶಪುರದಲ್ಲಿ ಪ್ರವೀಣ್ ನೆಟ್ಟಾರು ಕೊಲೆ ಪ್ರಕರಣದ ಪ್ರಮುಖ ಆರೋಪಿ ಮುಸ್ತಾಫಾ ಪೈಚಾರ್ ನನ್ನು  ಬಂಧಿಸಿದ್ದಾರೆ  ಎಂಬ  ಮಾಹಿತಿ  ಲಭಿಸಿದೆ.

ಪ್ರವೀಣ್‌ ನೆಟ್ಟಾರು ಹತ್ಯೆ ಪ್ರಕರಣ : ಪ್ರಮುಖ ಆರೋಪಿ ಬಂಧನ Read More »

ಸುಳ್ಯದ ವಿದ್ಯಾರ್ಥಿನಿ ನೇಣು ಬಿಗಿದು ಆತ್ಮಹತ್ಯೆ

ಸುಳ್ಯ: ಕಾಲೇಜು ವಿದ್ಯಾರ್ಥಿಯೋರ್ವಳು ನೇಣುಬಿಗಿದು ಆತ್ಮಹತ್ಯೆ ಮಾಡಿಕೊಂಡ ಘಟನೆ ಸಂಪಾಜೆ ಗ್ರಾಮದ ದೊಡ್ಡಡ್ಕದಲ್ಲಿ ಇಂದು ನಡೆದಿದೆ. ಸುಳ್ಯ ಸರಕಾರಿ ಪಿಯು  ಕಾಲೇಜಿನ ವಿದ್ಯಾರ್ಥಿನಿ ರಶ್ಮಿತಾ (16) ಆತ್ಮಹತ್ಯೆ ಮಾಡಿಕೊಂಡವರು. ಸಂಪಾಜೆ ಗ್ರಾಮದ ದೊಡ್ಡಡ್ಕ ಗೋಪಾಲ ಹಾಗೂ ಬಾಬಿ ದಂಪತಿಯ ಪುತ್ರಿಯಾಗಿರುವ ರಶ್ಮಿತಾ ಮನೆಯಲ್ಲಿ ಯಾರು ಇಲ್ಲದ ಸಂದರ್ಭದಲ್ಲಿ ನೇಣುಬಿಗಿದು ಆತ್ಮಹತ್ಯೆ ಮಾಡಿಕೊಂಡಿದ್ದಾರೆ.  ಆತ್ಮಹತ್ಯೆಗೆ ಕಾರಣ ತಿಳಿದುಬಂದಿಲ್ಲ. ಸುಳ್ಯ‌ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದಾರೆ.

ಸುಳ್ಯದ ವಿದ್ಯಾರ್ಥಿನಿ ನೇಣು ಬಿಗಿದು ಆತ್ಮಹತ್ಯೆ Read More »

ಕನ್ನಡ ಓದಲು, ಬರೆಯಲು ಬಾರದವನಿಗೆ ನ್ಯಾಯಾಲಯದಲ್ಲಿ ಜವಾನ ಹುದ್ದೆ : ನ್ಯಾಯಾಧೀಶರಿಂದ ಸ್ವಯಂಪ್ರೇರಿತ‌ ಪ್ರಕರಣ ದಾಖಲು

ಕೊಪ್ಪಳ : ಕನ್ನಡ ಸರಿಯಾಗಿ ಓದಲು ಮತ್ತು ಬರೆಯಲು ಬಾರದಿದ್ದರೂ ಒಬ್ಬ 625ರಲ್ಲಿ 622 ಅಂಕ ಪಡೆದಿದ್ದ.  ಅಂಕಗಳ ಆಧಾರದಲ್ಲಿ ನ್ಯಾಯಾಲಯದ ಜವಾನ ಹುದ್ದೆಗೆ ಆಯ್ಕೆಯಾಗಿದ್ದ.ಈ ಬಗ್ಗೆ ಆತನ ವಿರುದ್ಧ ಸ್ವಯಂ ಪ್ರೇರಿತ ಪ್ರಕರಣವನ್ನು ದಾಖಲಿಸಿ ತನಿಖೆ ನಡೆಸುವಂತೆ ಕೊಪ್ಪಳ ನ್ಯಾಯಾಧೀಶರು ಆದೇಶ ಹೊರಡಿಸಿದ್ದಾರೆ. ಕೊಪ್ಪಳ ಸಿವಿಲ್ ಮತ್ತು ಜೆ ಎಂ ಎಫ್ ಸಿ ನ್ಯಾಯಾಲಯದ ಮಾನ್ಯ ನ್ಯಾಯಾಧೀಶರಾದ  ಶ್ರೀ. ಎಂ ಹರೀಶ್ ಕುಮಾರ್ ರವರ ದಿಟ್ಟತನದ ನಡೆಗೆ ವ್ಯಾಪಕ ಪ್ರಶಂಸೆ ವ್ಯಕ್ತವಾಗಿದೆ. ಯಾದಗಿರಿ ಜಿಲ್ಲಾ ನ್ಯಾಯಾಲಯದಲ್ಲಿ

ಕನ್ನಡ ಓದಲು, ಬರೆಯಲು ಬಾರದವನಿಗೆ ನ್ಯಾಯಾಲಯದಲ್ಲಿ ಜವಾನ ಹುದ್ದೆ : ನ್ಯಾಯಾಧೀಶರಿಂದ ಸ್ವಯಂಪ್ರೇರಿತ‌ ಪ್ರಕರಣ ದಾಖಲು Read More »

ಕೌಟುಂಬಿಕ ಕಲಹ : ಜೀವ ಬೆದರಿಕೆ

ಬೆಳ್ತಂಗಡಿ: ಕೌಟುಂಬಿಕ ಕಲಹದ ಹಿನ್ನೆಲೆಯಲ್ಲಿ ಮಾವನಿಗೆ ಸೊಸೆ ಹಾಗೂ ಆಕೆಯ ತವರು ಮನೆಯವರು ಜೀವ ಬೆದರಿಕೆ ಒಡ್ಡಿದ ಘಟನೆ ನಡೆದಿದೆ. ಮೂಡುಕೋಡಿ ಗ್ರಾಮದ ನಿವಾಸಿ ವೆಂಕಟ್ರಮಣ ಭಟ್ (71) ಎಂಬವರ ಸೊಸೆ  ವಸಂತಾ ಯಾನೆ ಮೋಹನಾಕ್ಷಿ, ಸುಮಾರು ಒಂದು ತಿಂಗಳ ಹಿಂದೆ ತನ್ನ ಗಂಡ ಹಾಗೂ ಮನೆಯವರೊಂದಿಗೆ ಗಲಾಟೆ ನಡೆಸಿ ಸಣ್ಣ ಮಗನನ್ನು ಕರೆದುಕೊಂಡು ಆಕೆಯ ತವರು ಮನೆಗೆ ಹೋಗಿದ್ದರು. ಮಂಗಳವಾರ ಬೆಳಿಗ್ಗೆ, ತನ್ನ ದೊಡ್ಡ ಮಗನನ್ನು ಕರೆದುಕೊಂಡು ಹೋಗಲು, ಸೊಸೆ ತನ್ನ ತಾಯಿ ಹಾಗೂ ಸಹೋದರ

ಕೌಟುಂಬಿಕ ಕಲಹ : ಜೀವ ಬೆದರಿಕೆ Read More »

error: Content is protected !!
Scroll to Top