ಅಪರಾಧ

ನಾಸಿಕ್ ಟಿಸಿಎಸ್ ಮತಾಂತರ ಪ್ರಕರಣ: ರೂವಾರಿ ನಿದಾಖಾನ್ ಕೊನೆಗೂ ಅರೆಸ್ಟ್

25 ದಿನಗಳಿಂದ ಪೊಲೀಸರಿಗೆ ಚಳ್ಳೆಹಣ್ಣು ತಿನ್ನಿಸಿ ತಲೆಮರೆಕೊಂಡಿದ್ದ ಚಾಲಾಕಿ ಮುಂಬೈ: ನಾಸಿಕದಲ್ಲಿರುವ TCS ಕಚೇರಿಯಲ್ಲಿ ನಡೆದ ಲೈಂಗಿಕ ಕಿರುಕುಳ, ಮತಾಂತರ ಕೃತ್ಯದ ಕಿಂಗ್ ಪಿನ್ ನಿದಾ ‌ಖಾನ್‌ನನ್ನು ಪೊಲೀಸರು ಬಂಧಿಸಿದ್ದಾರೆ. ಪ್ರಕರಣಕ್ಕೆ ಸಂಬಂಧಿಸಿದ ಹಾಗೆ ನಿದಾ ಖಾನ್ ವಿರುದ್ಧ ಹಲವಾರು ಆರೋಪಗಳು ಕೇಳಿ ಬಂದಿತ್ತು‌. ಆಕೆಯ ವಿರುದ್ಧ ಎಫ್‌ಐ‌ಆರ್ ದಾಖಲಾಗುತ್ತಿದ್ದ ಹಾಗೆಯೇ ನಾಪತ್ತೆಯಾಗಿದ್ದಳು. ಆಕೆ ಸಲ್ಲಿಸಿದ್ದ ನಿರೀಕ್ಷಣಾ ಜಾಮೀನು ಅರ್ಜಿಯನ್ನು ಸಹಾ ಕೋರ್ಟ್ ವಜಾ ಮಾಡಿತ್ತು. ಆಕೆ ಕಳೆದ ನಾಲ್ಕು ದಿನಗಳಿಂದ ನರೇಂಗಾವ್‌ನ ಕೈಸರ್ ‌ಕಾಲನಿಯ ಫ್ಲ್ಯಾಟ್‌ನಲ್ಲಿ […]

ನಾಸಿಕ್ ಟಿಸಿಎಸ್ ಮತಾಂತರ ಪ್ರಕರಣ: ರೂವಾರಿ ನಿದಾಖಾನ್ ಕೊನೆಗೂ ಅರೆಸ್ಟ್ Read More »

ಮನೆಯೊಂದರಲ್ಲಿ ಹಿಂದೂಗಳ ಮತಾಂತರಕ್ಕೆ ಯತ್ನ: ದೂರು ದಾಖಲು

ಕಡಬ: ಹಿಂದೂ ಮಹಿಳೆಯರು, ಪುರುಷರು ಮತ್ತು ಮಕ್ಕಳನ್ನು ಮನೆಯಲ್ಲಿ ಕೂಡಿ ಹಾಕಿ ಮತಾಂತರದ ‌ಪ್ರಯತ್ನ ನಡೆಸಲಾಗುತ್ತಿದೆ ಎಂದು ಹಿಂದೂ ಸಂಘಟನೆಗಳು ನೀಡಿದ ಮಾಹಿತಿಯ ಅನ್ವಯ ಐತ್ತೂರಿನ ಮನೆಯೊಂದರ ಮೇಲೆ ಕಡಬ ಪೊಲೀಸರು ದಾಳಿ ನಡೆಸಿದ್ದಾರೆ. ಐತ್ತೂರಿನ ಜೋಸೆಫ್ ಎಂಬಾತನ ಮನೆಯಲ್ಲಿ ಬೆಂಗಳೂರು ಮೂಲದ ಸುಮಾರು 15 ಕ್ಕೂ ಅಧಿಕ ಜನ‌ ಮಹಿಳೆಯರು, ಪುರುಷರು ಮತ್ತು ಮಕ್ಕಳು ತಂದಿರುವ ಸಂಗತಿ ಪೊಲೀಸ್ ದಾಳಿಯ ವೇಳೆ ಬಯಲಾಗಿದೆ. ಜೋಸೆಫ್ ಮನೆಯಲ್ಲಿ ಮತಾಂತರ ಮತ್ತು ಅನೈತಿಕ ಚಟುವಟಿಕೆಗಳು ನಡೆಯುತ್ತಿವೆ ಎಂದು ಹಿಂದೂ

ಮನೆಯೊಂದರಲ್ಲಿ ಹಿಂದೂಗಳ ಮತಾಂತರಕ್ಕೆ ಯತ್ನ: ದೂರು ದಾಖಲು Read More »

ಮಹೇಶ್ ಶೆಟ್ಟಿ ತಿಮರೋಡಿ ನಿರೀಕ್ಷಣಾ ಜಾಮೀನು ಅರ್ಜಿ ವಜಾ

ಯಕ್ಷಗಾನ ಕಲಾವಿದರನ್ನು ಅವಮಾನಿಸಿ ಬೆದರಿಕೆಯೊಡ್ಡಿದ ಪ್ರಕರಣ​ಮಂಗಳೂರು : ಯಕ್ಷಗಾನ ಕಲಾವಿದರ ವಿರುದ್ಧ ಅವಹೇಳನಕಾರಿ ಮಾತು ಹಾಗೂ ಬೆದರಿಕೆ ಹಾಕಿದ ಆರೋಪ ಎದುರಿಸುತ್ತಿರುವ ಮಹೇಶ್ ಶೆಟ್ಟಿ ತಿಮರೋಡಿಯ ನಿರೀಕ್ಷಣಾ ಜಾಮೀನು ಅರ್ಜಿಯನ್ನು ಜಿಲ್ಲಾ ನ್ಯಾಯಾಲಯ ಬುಧವಾರ ವಜಾಗೊಳಿಸಿದೆ.​ಯಕ್ಷಗಾನ ರಂಗದ ಪ್ರಮುಖ ಕಲಾವಿದರ ಕುರಿತು ಅವಹೇಳನಕಾರಿಯಾಗಿ ಮಾತನಾಡಿದ್ದಾರೆ ಮತ್ತು ಅವರಿಗೆ ಬೆದರಿಕೆ ಒಡ್ಡಿದ್ದಾರೆ ಎಂಬ ಆರೋಪದ ಮೇಲೆ ತಿಮರೋಡಿ ವಿರುದ್ಧ ಪ್ರಕರಣ ದಾಖಲಾಗಿತ್ತು. ಈ ಹಿನ್ನೆಲೆಯಲ್ಲಿ ಬಂಧನ ಭೀತಿಯಿಂದ ಪಾರಾಗಲು ಅವರು ನ್ಯಾಯಾಲಯಕ್ಕೆ ನಿರೀಕ್ಷಣಾ ಜಾಮೀನು ಕೋರಿ ಅರ್ಜಿ ಸಲ್ಲಿಸಿದ್ದರು.

ಮಹೇಶ್ ಶೆಟ್ಟಿ ತಿಮರೋಡಿ ನಿರೀಕ್ಷಣಾ ಜಾಮೀನು ಅರ್ಜಿ ವಜಾ Read More »

ಮನೆಯ ಅಂಗಳದಲ್ಲೇ ನೇಣು ಹಾಕಿಕೊಂಡು ವೃದ್ಧ ಆತ್ಮಹತ್ಯೆ

ಬೆಳ್ತಂಗಡಿ : ಅನಾರೋಗ್ಯ ಸಮಸ್ಯೆಯಿಂದ ಬಳಲುತ್ತಿದ್ದ ವೃದ್ಧರೊಬ್ಬರು ಮನೆಯ ಅಂಗಳಕ್ಕೆ ಅಳವಡಿಸಿದ್ದ ಶಿಟಿನ ಚಪ್ಪರದ ರಾಡ್‌ಗೆ ಹಗ್ಗದಿಂದ ನೇಣುಬಿಗಿದು ಆತ್ಮಹತ್ಯೆ ಮಾಡಿಕೊಂಡ ಘಟನೆ ಧರ್ಮಸ್ಥಳದಲ್ಲಿ ನಡೆದಿದೆ. ಬೆಳ್ತಂಗಡಿ ತಾಲೂಕಿನ ಧರ್ಮಸ್ಥಳ ಗ್ರಾಮದ ಜೋಡುಸ್ನಾನದ ಅಗುಳೆ ನಿವಾಸಿ ಐತಪ್ಪ ಪೂಜಾರಿ (68) ಎಂಬವರು ಮೇ 6ರಂದು ರಾತ್ರಿ 11 ಗಂಟೆಯಿಂದ ಮೇ 7ರ ಬೆಳಗ್ಗೆ 6 ಗಂಟೆ ಒಳಗಡೆ ಮನೆಯ ಹೊರಗೆ ಅಳವಡಿಸಿದ್ದ ರಾಡ್‌ಗೆ ನೈಲಾನ್ ಹಗ್ಗದಿಂದ ನೇಣುಬಿಗಿದು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಐತಪ್ಪ ಪೂಜಾರಿಯವರ ಸೊಸೆ ಬೆಳಗ್ಗೆ 6

ಮನೆಯ ಅಂಗಳದಲ್ಲೇ ನೇಣು ಹಾಕಿಕೊಂಡು ವೃದ್ಧ ಆತ್ಮಹತ್ಯೆ Read More »

ಗಿರೀಶ್‌ ಮಟ್ಟಣ್ಣವರ್‌ ಮೊಬೈಲ್‌ ಎಸ್‌ಐಟಿ ವಶ

ಬೆಳ್ತಂಗಡಿ : ಧರ್ಮಸ್ಥಳ ಪ್ರಕರಣದ ಸಂಬಂಧ ತನಿಖೆಗಾಗಿ ಗಿರೀಶ್ ಮಟ್ಟಣ್ಣವರ್ ಗುರುವಾರ ಬೆಳ್ತಂಗಡಿ ಎಸ್‌ಐಟಿ ಕಚೇರಿಗೆ ಹಾಜರಾಗಿದ್ದು, ಈ ಸಂದರ್ಭದಲ್ಲಿ ಅವರ ಮೊಬೈಲ್ ಫೋನ್ ಅನ್ನು ಎಸ್ಐಟಿ ಅಧಿಕಾರಿಗಳು ವಶಪಡಿಸಿಕೊಂಡಿದ್ದಾರೆ. ಬೆಳ್ತಂಗಡಿ ಎಸ್ಐಟಿ ಕಚೇರಿಗೆ ಗಿರೀಶ್ ಮಟ್ಟಣ್ಣವರ್ ಮೇ 7ರಂದು ಬೆಳಗ್ಗೆ 11 ಗಂಟೆಗೆ ಹಾಜರಾಗಿದ್ದಾರೆ. ಪ್ರಕರಣದಲ್ಲಿ ಹಳೆಯ ಆಂಡ್ರಾಯ್ಡ್ ಮೊಬೈಲ್ ಉಪಯೋಗಿಸಿದ್ದನ್ನು ತನಿಖೆಗಾಗಿ ಎಸ್ಐಟಿಗೆ ನೀಡಲು ನೋಟಿಸ್ ಜಾರಿ ಮಾಡಿದ್ದರು. ಅದರಂತೆ ಎಸ್ಐಟಿ ಕಚೇರಿಗೆ ಹಾಜರಾಗಿರುವ ಗಿರೀಶ್ ಮಟ್ಟಣ್ಣನವರ್ ಮೊಬೈಲನ್ನು ಎಸ್‌ಐಟಿ ಅಧಿಕಾರಿಗಳಿಗೆ ಒಪ್ಪಿಸಿದ್ದಾರೆ. ಬಳಿಕ

ಗಿರೀಶ್‌ ಮಟ್ಟಣ್ಣವರ್‌ ಮೊಬೈಲ್‌ ಎಸ್‌ಐಟಿ ವಶ Read More »

ಒಂದೇ ಕುಟುಂಬದ ನಾಲ್ವರ ಸಾವಿಗೆ ಕಲ್ಲಂಗಡಿಯಲ್ಲ ಇಲಿ ಪಾಷಾಣ ಕಾರಣ

ಕಲ್ಲಂಗಡಿಯೊಳಗೆ ಸೇರಿಕೊಂಡಿದ್ದ ಅಪಾಯಕಾರಿ ವಿಷದಿಂದ ಸಾವು ಮುಂಬೈ: ಮುಂಬೈಯ ಒಂದೇ ಕುಟುಂಬದ ನಾಲ್ಕು ಮಂದಿ ಕಲ್ಲಂಗಡಿ ಹಣ್ಣು ತಿಂದು ಸಾವಿಗೀಡಾಗಿರುವ ರಹಸ್ಯ ವಿಧಿವಿಜ್ಞಾನ ಪರೀಕ್ಷೆಯಲ್ಲಿ ಬಯಲಾಗಿದೆ. ಅವರ ಸಾವಿಗೆ ಕಲ್ಲಂಗಡಿ ಕಾರಣವಲ್ಲ ಬದಲಾಗಿ ಹಣ್ಣಿನೊಳಗಿದ್ದ ಇಲಿ ಪಾಷಾಣ ಕಾರಣ ಎಂದು ವಿಧಿವಿಜ್ಞಾನ ಪರೀಕ್ಷೆಯಿಂದ ದೃಢಪಟ್ಟಿದೆ. ಮಟನ್ ಬಿರಿಯಾನಿ ತಿಂದ ಬಳಿಕ ಕಲ್ಲಂಗಡಿ ಹಣ್ಣು ತಿಂದಿದ್ದರಿಂದ ಫುಡ್ ಪಾಯಿಸನ್ ಆಗಿ ಮುಂಬೈನ ಒಂದೇ ಕುಟುಂಬದ ನಾಲ್ವರು ಮೃತಪಟ್ಟ ಪ್ರಕರಣ ದೇಶಾದ್ಯಂತ ಆತಂಕಕ್ಕೆ ಕಾರಣವಾಗಿತ್ತು. ಆದರೆ ಅವರು ಮೃತಪಟ್ಟಿರುವುದು ಕಲ್ಲಂಗಡಿ

ಒಂದೇ ಕುಟುಂಬದ ನಾಲ್ವರ ಸಾವಿಗೆ ಕಲ್ಲಂಗಡಿಯಲ್ಲ ಇಲಿ ಪಾಷಾಣ ಕಾರಣ Read More »

ಲವ್ ಜಿಹಾದ್: ಸಮೀರ್‌ಗೆ ಹಿಂದೂ ಮುಖಂಡರಿಂದ ಥಳಿತ

ಕೊಪ್ಪಳ: ಲವ್ ಜಿಹಾದ್ ಘಟನೆಯೊಂದು ಕೊಪ್ಪಳದಲ್ಲಿ ‌ನಡೆದುದ್ದು, ಮುಸ್ಲಿಂ ಯುವಕನನ್ನು ಹಿಡಿದು ಹಿಂದೂ ಪರ ಮುಖಂಡರು ಧರ್ಮದೇಟು ‌ನೀಡಿದ ಘಟನೆ ನಡೆದಿದೆ. ಹಿಂದೂ ಅಪ್ರಾಪ್ತ ಯುವತಿಯ ಜೊತೆಗೆ ಓಡಾಡುತ್ತಿದ್ದ ಮುಸ್ಲಿಂ ಯುವಕ ಸಮೀರ್‌ನಿಗೆ ಥಳಿಸಲಾಗಿದ್ದು, ಸದ್ಯ ಆತ ಜಿಲ್ಲಾಸ್ಪತ್ರೆಗೆ ದಾಖಲಾಗಿದ್ದಾನೆ. ಸಮೀರ್ ಹಿಂದೂ ಯುವತಿಯ ಜೊತೆಗೆ ಸರಸ ಸಲ್ಲಾಪವಾಡಿದ ಆರೋಪವಿದ್ದು, ಆತನ ಮೊಬೈಲ್ ಪರಿಶೀಲನೆ ನಡೆಸಿದಲ್ಲಿ ಸಾಕ್ಷಿ ದೊರೆಯುತ್ತದೆ. ಆತನ ವಿರುದ್ಧ ಕ್ರಮ ಕೈಗೊಳ್ಳುವಂತೆ ಹಿಂದೂ ಮುಖಂಡರು ಒತ್ತಾಯಿಸಿದ್ದಾರೆ. ಇನ್ನು ಸಮೀರ್ ಮೇಲೆ ಹಲ್ಲೆ ನಡೆಸಿದ ಆರೋಪದಲ್ಲಿ

ಲವ್ ಜಿಹಾದ್: ಸಮೀರ್‌ಗೆ ಹಿಂದೂ ಮುಖಂಡರಿಂದ ಥಳಿತ Read More »

ವಿದೇಶದಲ್ಲಿ ತಲೆಮರೆಸಿಕೊಂಡಿದ್ದ ಆರೋಪಿ ಶರೀಫ್ ಬಂಟ್ವಾಳ ಪೊಲೀಸರ ಬಲೆಗೆ

ಬಂಟ್ವಾಳ: ಪ್ರಕರಣವೊಂದಕ್ಕೆ ಸಂಬಂಧಿಸಿದ ಹಾಗೆ ಬಂಟ್ವಾಳ ಪೊಲೀಸರಿಗೆ ಬೇಕಾಗಿದ್ದ ಆರೋಪಿಯೊಬ್ಬ ಹಲವು ವರ್ಷಗಳಿಂದ ವಿದೇಶದಲ್ಲಿ ತಲೆಮರೆಸಿಕೊಂಡಿದ್ದು, ಸದ್ಯ ಆತನನ್ನು ಪೊಲೀಸರು ಬಂಧಿಸಿದ್ದಾರೆ. ಆರೋಪಿಯನ್ನು ದುನಿಯಾ ಶರೀಫ್ ಅಲಿಯಾಸ್ ಮಹಮ್ಮದ್ ಶರೀಫ್ ಎಂದು ಗುರುತಿಸಲಾಗಿದೆ. ಈತ ಬಂಟ್ವಾಳದ ಕರಿಯಂಗಳ ನಿವಾಸಿ. ಪ್ರಕರಣವೊಂದಕ್ಕೆ ಸಂಬಂಧಿಸಿದ ಹಾಗೆ ನ್ಯಾಯಾಲಯಕ್ಕೆ ವಿಚಾರಣೆಗೆ ಹಾಜರಾಗದೆ ‌ವಿದೇಶಕ್ಕೆ ತೆರಳಿ ತಲೆಮರೆಸಿಕೊಂಡಿದ್ದ. ಈಗ ಆರೋಪಿ ಭಾರತಕ್ಕೆ ಹಿಂದಿರುಗಿದ್ದು, ಆತನ ಬರುವಿಕೆಯ ಮಾಹಿತಿ ಪಡೆದ ಪೊಲೀಸರು ಮುಂಬೈ ಸಹರಾ ಠಾಣಾ ಪೊಲೀಸರ ನೆರವಿನ ಜೊತೆಗೆ ಆರೋಪಿಯನ್ನು ಹೆಡೆಮುರಿ ಕಟ್ಟಿದ್ದಾರೆ.

ವಿದೇಶದಲ್ಲಿ ತಲೆಮರೆಸಿಕೊಂಡಿದ್ದ ಆರೋಪಿ ಶರೀಫ್ ಬಂಟ್ವಾಳ ಪೊಲೀಸರ ಬಲೆಗೆ Read More »

ಪತ್ನಿಗೆ ಚಾಕು ಚುಚ್ಚಲು ಬಂದ ಪತಿಗೆ ಸಾರ್ವಜನಿಕರಿಂದ ಧರ್ಮದೇಟು

ಬೆಂಗಳೂರು: ರಸ್ತೆಯಲ್ಲಿ ಹೋಗುತ್ತಿದ್ದ ಪತ್ನಿಯ ಮೇಲೆ ಚಾಕುವಿನಿಂದ ಹಲ್ಲೆ ಮಾಡಲು ಮುಂದಾದ ಪತಿಯೊಬ್ಬನಿಗೆ ಸಾರ್ವಜನಿಕರೇ ಹಿಡಿದು ಧರ್ಮದೇಟು ‌ನೀಡಿರುವ ಘಟನೆ ಮಾದನಾಯಕನಹಳ್ಳಿಯ ದಾಸನಪುರದಲ್ಲಿ ‌ನಡೆದಿದೆ. ಆರೋಪಿ ಪತಿಯನ್ನು ‌ಸಂಜಯ್ ಎಂದು ಗುರುತಿಸಲಾಗಿದೆ. ಸಂಜಯ್ ತನ್ನ ಪತ್ನಿಗೆ ಚಾಕು ಇರಿಯಲು ಮುಂದಾಗಿದ್ದು, ಈ ಸಂದರ್ಭದಲ್ಲಿ ಸಾರ್ವಜನಿಕರು ಆಕೆಯನ್ನು ರಕ್ಷಣೆ ಮಾಡಿದ್ದಾರೆ. ಹಾಗೆಯೇ ಸಂಜಯ್‌ಗೆ ಹಿಗ್ಗಾಮುಗ್ಗ ಬಾರಿಸಿದ್ದಾರೆ. ಸಂಜಯ್ ಎರಡನೇ ಮದುವೆಯಾಗಿದ್ದು, ವಿಪರೀತ ಕುಡಿತದ ಚಟ‌ ಹೊಂದಿದ್ದ. ಇದರಿಂದ ಬೇಸತ್ತ ಪತ್ನಿ ಆತನಿಂದ ಬೇರೆಯಾಗಿ ವಾಸಿಸುತ್ತಿದ್ದಳು. ಪತ್ನಿ ರಸ್ತೆಯಲ್ಲಿ ನಡೆದುಕೊಂಡು

ಪತ್ನಿಗೆ ಚಾಕು ಚುಚ್ಚಲು ಬಂದ ಪತಿಗೆ ಸಾರ್ವಜನಿಕರಿಂದ ಧರ್ಮದೇಟು Read More »

ಅಕ್ರಮವಾಗಿ 4 ಜಾನುವಾರುಗಳ ಸಾಗಾಟ: ಇಬ್ಬರು ಆರೋಪಿಗಳ ಬಂಧನ

ಹಿರಿಯಡ್ಕ: ಜಾನುವಾರುಗಳನ್ನು ಅಕ್ರಮವಾಗಿ ಸಾಗಾಟ‌ ಮಾಡುತ್ತಿದ್ದ ಆರೋಪಿಗಳಿಬ್ಬರನ್ನು ಪಕ್ಕಾಲು ಹೆಬ್ಬಾರು ಸೇತುವೆ ಬಳಿಯಲ್ಲಿ ಹಿರಿಯಡ್ಕ ಪೊಲೀಸರು ಬಂಧಿಸಿದ್ದಾರೆ. ಬಂಧಿತ ಆರೋಪಿಗಳನ್ನು ಕುರ್ಕಾಲುವಿನ ‌ಸುಹಾಸ್(21) ಮತ್ತು ಕಾಪು ಭರತ್ ನಗರದ ಲವ ಶೆಟ್ಟಿ(64) ಎಂದು ಗುರುತಿಸಲಾಗಿದೆ. ಆರೋಪಿಗಳು ಜಾನುವಾರುಗಳನ್ನು ಮಾಂಸ ಮಾಡುವ ಉದ್ದೇಶದಿಂದ ಕಸಾಯಿಖಾನೆಗೆ ಸಾಗಿಸುತ್ತಿದ್ದರು. ಪೆರ್ಡೂರು ಕಡೆಯಿಂದ ಹಿರಿಯಡ್ಕದತ್ತ ನಾಲ್ಕು ದನಗಳನ್ನು ಪಾಪಿಗಳು ಬೊಲೆರೋ ಗೂಡ್ಸ್ ‌ಟೆಂಪೋದಲ್ಲಿ ಸಾಗಾಟ ಮಾಡುತ್ತಿದ್ದರು. ಈ ವಾಹನ ಪಕ್ಕಾಲು ‌ಹೆಬ್ಬಾರು ಸೇತುವೆ ಬಳಿಯಲ್ಲಿ ಚಾಲಕನ ನಿಯಂತ್ರಣ ತಪ್ಪಿ ಚರಂಡಿಗೆ ಬಿದ್ದಿದೆ. ಆರೋಪಿಗಳಿಬ್ಬರನ್ನು

ಅಕ್ರಮವಾಗಿ 4 ಜಾನುವಾರುಗಳ ಸಾಗಾಟ: ಇಬ್ಬರು ಆರೋಪಿಗಳ ಬಂಧನ Read More »

error: Content is protected !!
Scroll to Top