ಅಪರಾಧ

ಇಬ್ಬರು ಮಕ್ಕಳನ್ನು ಸಾಯಿಸಿ ಸಾಫ್ಟ್‌ವೇರ್‌ ಇಂಜಿನಿಯರ್‌ ದಂಪತಿ ಆತ್ಮಹತ್ಯೆ

ಬೆಂಗಳೂರು: ಇಬ್ಬರು ಮಕ್ಕಳನ್ನು ಹತ್ಯೆ ಮಾಡಿ ದಂಪತಿ ಆತ್ಮಹತ್ಯೆಗೆ ಶರಣಾದ ಘಟನೆ ಬೆಂಗಳೂರಿನ ಸದಾಶಿವ ನಗರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ.ಅನೂಪ್‌ (38) ಮತ್ತು ರಾಖಿ(35) ಎಂಬ ದಂಪತಿ ಮಕ್ಕಳಾದ ಅನುಪ್ರಿಯಾ (5) ಮತ್ತು ಪ್ರಿಯಾಂಶ್ (2) ಅವರನ್ನು ಕೊಂದು ಬಳಿಕ ಸಾವಿಗೆ ಶರಣಾಗಿದ್ದಾರೆ ಎನ್ನಲಾಗಿದೆ. ಅನೂಪ್‌ ಉತ್ತರ ಪ್ರದೇಶ ಮೂಲದವರಾಗಿದ್ದು ಖಾಸಗಿ ಕಂಪನಿಯಲ್ಲಿ ಸಾಫ್ಟ್‌ವೇರ್‌ ಕನ್ಸಲ್ಟೆಂಟ್‌ ಆಗಿ ಕೆಲಸ ಮಾಡುತ್ತಿದ್ದರು. ಇಂದು ಬೆಳಗ್ಗೆ ಮನೆಗೆ ಕೆಲಸದವರು ಬಂದಾಗ ಆತ್ಮಹತ್ಯೆ ಪ್ರಕರಣ ಬೆಳಕಿಗೆ ಬಂದಿದೆ. ರಾತ್ರಿ ಇಬ್ಬರು […]

ಇಬ್ಬರು ಮಕ್ಕಳನ್ನು ಸಾಯಿಸಿ ಸಾಫ್ಟ್‌ವೇರ್‌ ಇಂಜಿನಿಯರ್‌ ದಂಪತಿ ಆತ್ಮಹತ್ಯೆ Read More »

ಸಿಲಿಂಡರ್‌ ಸ್ಪೋಟಿಸಿದ ಬಿರುಸಿಗೆ ಮನೆ ಗೋಡೆ ಛಿದ್ರ : ಇಬ್ಬರಿಗೆ ಗಾಯ

ಬೆಂಗಳೂರು: ಬೆಂಗಳೂರು ಸಮೀಪ ಆನೇಕಲ್ ತಾಲೂಕಿನ ಕಿತ್ತಾಗನಹಳ್ಳಿ ಗ್ರಾಮದಲ್ಲಿ ಸೋಮವಾರ ಬೆಳಗ್ಗೆ ಸಿಲಿಂಡರ್ ಸ್ಫೋಟಗೊಂಡು ಇಬ್ಬರಿಗೆ ಗಂಭೀರ ಗಾಯಗಳಾಗಿವೆ. ಕೇರಳ ಮೂಲದ ಸುನೀಲ್ ಜೋಸೆಫ್ ಮತ್ತು ವಿಷ್ಣು ಜಯರಾಜ್ ಎಂಬವರು ಗಾಯಗೊಂಡಿದ್ದು, ಅವರಿಗೆ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ. ಸ್ಪೋಟದ ತೀವ್ರತೆಗೆ ಮನೆ ಗೋಡೆಗಳು, ಕಿಟಕಿ, ಬಾಗಿಲು ಛಿದ್ರವಾಗಿವೆ. ಅಕ್ಕಪಕ್ಕದ ನಾಲ್ಕೈದು ಮನೆಗಳು, ಕೆಲವು ವಾಹನಗಳಿಗೂ ಹಾನಿಯಾಗಿದೆ. ಸೂರ್ಯಸಿಟಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ಸಂಭವಿಸಿದೆ. ಸ್ಥಳಕ್ಕೆ ಸೂರ್ಯನಗರ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಇಂದು

ಸಿಲಿಂಡರ್‌ ಸ್ಪೋಟಿಸಿದ ಬಿರುಸಿಗೆ ಮನೆ ಗೋಡೆ ಛಿದ್ರ : ಇಬ್ಬರಿಗೆ ಗಾಯ Read More »

ಕರ್ನಾಟಕದ ಪಿಎಫ್‌ಐ ಉಗ್ರರಿಗೆ ಹಣ ಹಂಚುತ್ತಿದ್ದವ ಸೆರೆ

ಬೆಂಗಳೂರು : ನಿಷೇಧಿತ ಪಿಎಫ್​ಐ ಉಗ್ರ ಸಂಘಟನೆಯ ಕೃತ್ಯಗಳಿಗೆ ದುಬೈನಿಂದ ಬರುತ್ತಿದ್ದ ಹಣವನ್ನು ಕರ್ನಾಟಕ ಹಾಗೂ ಕೇರಳದಲ್ಲಿ ಹಂಚುತ್ತಿದ್ದ ಬಿಹಾರ ಮೂಲದ ವ್ಯಕ್ತಿಯನ್ನು ದಿಲ್ಲಿಯಲ್ಲಿ ರಾಷ್ಟ್ರೀಯ ತನಿಖಾ ದಳ (ಎನ್​ಐಎ) ಬಂಧಿಸಿದೆ. ಬಿಹಾರದ ಪೂರ್ವ ಚಂಪಾರಣ್ ಜಿಲ್ಲೆಯ ಮೊಹಮ್ಮದ್ ಸಜ್ಜದ್ ಆಲಂ ಎಂಬಾತ ಬಂಧಿತ ವ್ಯಕ್ತಿ. ಈತ ದುಬೈನಿಂದ ದಿಲ್ಲಿ ಇಂದಿರಾಗಾಂಧಿ ಅಂತರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ಬಂದಿಳಿಯುತ್ತಿದ್ದಂತೆಯೇ ಬಂಧಿಸಲಾಗಿದೆ.ಪಿಎಫ್‌ಐ ತರಬೇತಿ ಪಡೆದಿರುವ ಉಗ್ರ ಆಲಂ ವಿರುದ್ಧ ವಿಶೇಷ ಎನ್‌ಐಎ ನ್ಯಾಯಾಲಯ ವಾರಂಟ್ ಹೊರಡಿಸಿತ್ತು. ಅವನ ವಿರುದ್ಧ ಲುಕ್‌ಔಟ್

ಕರ್ನಾಟಕದ ಪಿಎಫ್‌ಐ ಉಗ್ರರಿಗೆ ಹಣ ಹಂಚುತ್ತಿದ್ದವ ಸೆರೆ Read More »

ಮನೆಯೊಳಗೆ ಉಸಿರುಕಟ್ಟಿ ಒಂದೇ ಕುಟುಂಬದ ಐವರು ಸಾವು

ಚಳಿಯಿಂದ ಪಾರಾಗಲು ಬಳಸಿದ ಹೀಟರ್‌ ಮೃತ್ಯುವಾಯಿತು ಶ್ರೀನಗರ: ಮನೆಯಲ್ಲಿಯೇ ಉಸಿರುಗಟ್ಟಿ ಒಂದೇ ಕುಟುಂಬದ ಐವರು ಮೃತಪಟ್ಟಿರುವ ದಾರುಣ ಘಟನೆ ಜಮ್ಮು ಮತ್ತು ಕಾಶ್ಮೀರದ ಶ್ರೀನಗರದಲ್ಲಿ ಸಂಭವಿಸಿದೆ. ಚಳಿಯಿಂದ ಪಾರಾಗಲು ಬಳಸಿದ ಎಲ್‌ಪಿಜಿ ರೂಮ್‌ ಹೀಟರ್‌ ಅವರ ಸಾವಿಗೆ ಕಾರಣ ಎನ್ನಲಾಗಿದೆ. ಬಾರಾಮುಲ್ಲಾ ಜಿಲ್ಲೆಯ ಉರಿಯಿಂದ ಬಂದಿದ್ದ ದಂಪತಿ ಹಾಗೂ ಅವರ ಮೂವರು ಮಕ್ಕಳು ಶ್ರೀನಗರದ ಬಾಡಿಗೆ ಮನೆಯೊಂದರಲ್ಲಿ ನೆಲೆಸಿದ್ದರು. ಶ್ರೀನಗರ ಜಿಲ್ಲೆಯ ಪಂದ್ರಾಥಾನ್ ಪ್ರದೇಶದಲ್ಲಿ ದಂಪತಿ ಮತ್ತು ಅವರ 3 ಮಕ್ಕಳು ಸೇರಿದಂತೆ ಒಂದೇ ಕುಟುಂಬದ 5

ಮನೆಯೊಳಗೆ ಉಸಿರುಕಟ್ಟಿ ಒಂದೇ ಕುಟುಂಬದ ಐವರು ಸಾವು Read More »

ಮಹಿಳೆಗೆ ಮಾನಸಿಕ, ದೈಹಿಕ ಹಿಂಸೆ | ಪತಿ, ಅತ್ತೆ ಮಾವ ಸಹಿತ ಐವರ ವಿರುದ್ಧ ವಿಟ್ಲ ಠಾಣೆಯಲ್ಲಿ ಪ್ರಕರಣ ದಾಖಲು

ವಿಟ್ಲ: ಪತಿಯ ಅನೈತಿಕ ಸಂಬಂಧವನ್ನು ಪ್ರಶ್ನಿಸಿದ ಪತ್ನಿಗೆ ಮಾನಸಿಕ ಹಾಗೂ ದೈಹಿಕ ಹಿಂಸೆ ನೀಡಿದ ವಿಚಾರದಲ್ಲಿ ಪತಿ, ಮಾವ, ಅತ್ತೆ ಸಹಿತ ಐದು ಮಂದಿಯ ವಿರುದ್ಧ ವಿಟ್ಲ ಪೊಲೀಸ್ ಠಾಣೆಯಲ್ಲಿ ಮಹಿಳಾ ದೌರ್ಜನ್ಯ ಪ್ರಕರಣ ದಾಖಲಾಗಿದೆ. ದೈಹಿಕ ಹಲ್ಲೆಯಿಂದ ಗಾಯಗೊಂಡ ಮಹಿಳೆ ಮಂಗಳೂರು ಸರ್ಕಾರಿ ಆಸ್ಪತ್ರೆಗೆ ದಾಖಲಾಗಿದ್ದಾರೆ. ನೀರ್ಕಜೆ ನಿವಾಸಿಗಳಾದ ಪತಿ ದಿನೇಶ್ ಕುಮಾರ್, ಅತ್ತೆ ಸುಂದರಿ, ಮಾವ ಬಾಬು ಮೂಲ್ಯ, ಜಯಪ್ರಕಾಶ್, ಮಂಜುಳಾ ಅವರ ವಿರುದ್ಧ ಪ್ರಕರಣ ದಾಖಲಾಗಿದೆ. 2023ರಲ್ಲಿ ವಿವಾಹ ನಡೆದಿದ್ದು, ತಿಂಗಳ ಕಾಲ

ಮಹಿಳೆಗೆ ಮಾನಸಿಕ, ದೈಹಿಕ ಹಿಂಸೆ | ಪತಿ, ಅತ್ತೆ ಮಾವ ಸಹಿತ ಐವರ ವಿರುದ್ಧ ವಿಟ್ಲ ಠಾಣೆಯಲ್ಲಿ ಪ್ರಕರಣ ದಾಖಲು Read More »

ತಾಯಿ, ಅವಳಿ ಮಕ್ಕಳ ಕೊಲೆ : 19 ವರ್ಷಗಳ ಬಳಿಕ ಇಬ್ಬರು ಮಾಜಿ ಸೈನಿಕರ ಸೆರೆ

ಕ್ರೈಂ ಥ್ರಿಲ್ಲರ್‌ ಸಿನೆಮಾದಂತಿದೆ ಕೇರಳದಲ್ಲಿ ನಡೆದ ಈ ಹತ್ಯಾ ಪ್ರಕರಣ ತಿರುವನಂತಪುರ: ತಾಯಿ ಮತ್ತು ಆಕೆಯ ನವಜಾತ ಅವಳಿ ಮಕ್ಕಳನ್ನು ಉಸಿರು ಕಟ್ಟಿಸಿ ಕೊಂದು 19 ವರ್ಷಗಳಿಂದ ಪೊಲೀಸರಿಗೆ ಚಳ್ಳೆಹಣ್ಣು ತಿನ್ನಿಸಿ ತಲೆಮರೆಸಿಕೊಂಡಿದ್ದ ಇಬ್ಬರು ಮಾಜಿ ಸೈನಿಕರನ್ನು ಬಂಧಿಸುವಲ್ಲಿ ಪೊಲೀಸರು ಕೊನೆಗೂ ಯಶಸ್ವಿಯಾಗಿದ್ದಾರೆ. ಕೇರಳದಲ್ಲಿ ನಡೆದಿರುವ ಈ ಕೊಲೆ ಮತ್ತು ಆರೋಪಿಗಳ ಪತ್ತೆ ಕಾರ್ಯ ಯಾವುದೇ ಕ್ರೈಂ ಥ್ರಿಲ್ಲರ್‌ ಸಿನೇಮಾಕ್ಕೆ ಕಡಿಮೆಯಿಲ್ಲ. ಕಳೆದ ಮೂರು ತಿಂಗಳಿನಿಂದ ಸಿಬಿಐ ಮತ್ತು ಕೇರಳ ಪೊಲೀಸರ ತನಿಖಾ ತಂಡ 10,000ಕ್ಕೂ ಅಧಿಕ

ತಾಯಿ, ಅವಳಿ ಮಕ್ಕಳ ಕೊಲೆ : 19 ವರ್ಷಗಳ ಬಳಿಕ ಇಬ್ಬರು ಮಾಜಿ ಸೈನಿಕರ ಸೆರೆ Read More »

ಇ.ಡಿ.ಅಧಿಕಾರಿಗಳ ಸೋಗಿನಲ್ಲಿ ಬೀಡಿ ಉದ್ಯಮಿ ಮನೆಯಿಂದ 30 ಲ.ರೂ. ದರೋಡೆ

ವಿಟ್ಲ: ಜಾರಿ ನಿರ್ದೇಶನಾಲಯದ ಅಧಿಕಾರಿಗಳಂತೆ ಸೋಗು ಹಾಕಿ ವಿಟ್ಲದ ಬೀಡಿ ಉದ್ಯಮಿಯೊಬ್ಬರ ಮನೆಯಿಂದ 30 ಲ.ರೂ. ದರೋಡೆ ಮಾಡಿದ ಘಟನೆ ಸಂಭವಿಸಿದೆ. ಬಂಟ್ವಾಳ ಬಂಟ್ವಾಳ ತಾಲೂಕಿನ ವಿಟ್ಲ ಪೋಲೀಸ್ ಠಾಣೆ ವ್ಯಾಪ್ತಿಯ ಬೋಳಂತೂರು ಸಮೀಪದ ನಾರ್ಶ ಎಂಬಲ್ಲಿ ಸುಲೈಮಾನ್ ಹಾಜಿ ಎಂಬವರು ಸಿಂಗಾರಿ ಬೀಡಿ ಸಂಸ್ಥೆಯನ್ನು ಅನೇಕ ವರ್ಷಗಳಿಂದ ನಡೆಸುತ್ತಿದ್ದಾರೆ. ತಡರಾತ್ರಿ ಅವರ ಮನೆಗೆ ತಮಿಳುನಾಡು ಮೂಲದ ಕಾರಿನಲ್ಲಿ ಆಗಮಿಸಿದ ತಂಡ ತಮ್ಮನ್ನು ಇ.ಡಿ.ಅಧಿಕಾರಿಗಳೆಂದು ಪರಿಚಯಿಸಿಕೊಂಡಿದೆ. ಬಳಿಕ ಮನೆಯಲ್ಲಿ ಸುಮಾರು ಎರಡು ತಾಸು ಶೋಧ ನಡೆಸುವ ನಾಟಕವಾಡಿದೆ.

ಇ.ಡಿ.ಅಧಿಕಾರಿಗಳ ಸೋಗಿನಲ್ಲಿ ಬೀಡಿ ಉದ್ಯಮಿ ಮನೆಯಿಂದ 30 ಲ.ರೂ. ದರೋಡೆ Read More »

ಉದ್ಯಮಿ ಮನೆಗೆ ದಾಳಿ ನಡೆಸಿದ ನಕಲಿ ಇಡಿ ಅಧಿಕಾರಿಗಳು | 30 ಲಕ್ಷ ರೂ. ಲೂಟಿ

ವಿಟ್ಲ: ನಕಲಿ ಇಡಿ ಅಧಿಕಾರಿಗಳು ಉದ್ಯಮಿಯೊಬ್ಬರ ಮನೆಗೆ ದಾಳಿ ನಡೆಸಿ 30 ಲಕ್ಷ ರೂ. ಲೂಟಿ ಮಾಡಿದ ಘಟನೆ ಬೋಳಂತೂರು ಸಮೀಪದ ನಾರ್ಶ ಎಂಬಲ್ಲಿ ನಡೆದಿದೆ. ಬಂಟ್ವಾಳ ತಾಲ್ಲೂಕಿನ ವಿಟ್ಲ ಪೊಲೀಸ್ ಠಾಣೆ ವ್ಯಾಪ್ತಿಯ ಬೋಳಂತೂರು ಸಮೀಪದ ನಾರ್ಶ ಎಂಬಲ್ಲಿ ಸುಲೈಮಾನ್ ಹಾಜಿ ಅವರು ಸಿಂಗಾರಿ ಬೀಡಿ ಸಂಸ್ಥೆಯನ್ನು ಅನೇಕ ವರ್ಷಗಳಿಂದ ನಡೆಸುತ್ತಿದ್ದಾರೆ. ತಡರಾತ್ರಿ ಅವರ ಮನೆಗೆ ತಮಿಳುನಾಡು ಮೂಲದ ಕಾರಿನಲ್ಲಿ ಆಗಮಿಸಿದ ತಂಡ ಬಂದು ದಿಡೀರ್ ದಾಳಿ ನಡೆಸಿದೆ. ನಾವು ಇಡಿ ಅಧಿಕಾರಿಗಳು’ ಎಂದು ನಂಬಿಸಿ

ಉದ್ಯಮಿ ಮನೆಗೆ ದಾಳಿ ನಡೆಸಿದ ನಕಲಿ ಇಡಿ ಅಧಿಕಾರಿಗಳು | 30 ಲಕ್ಷ ರೂ. ಲೂಟಿ Read More »

ಎಂಎಲ್‌ಸಿ ಡಾ. ಧನಂಜಯ ಸರ್ಜಿ ಹೆಸರಲ್ಲಿ ವಿಷಪೂರಿತ ಸಿಹಿತಿಂಡಿ ರವಾನೆ

ಹೊಸವರ್ಷದ ಗ್ರೀಟಿಂಗ್‌ ಜೊತೆಗೆ ವಿಷಪೂರಿತ ಸಿಹಿತಿಂಡಿ ರವಾನಿಸಿದ ದುಷ್ಕರ್ಮಿಗಳು ಶಿವಮೊಗ್ಗ: ಹೊಸ ವರ್ಷಾಚರಣೆಯಂದು ಬಿಜೆಪಿ ಎಂಎಲ್‌ಸಿ ಡಾ.ಧನಂಜಯ್ ಸರ್ಜಿ ಅವರ ಹೆಸರಿನಲ್ಲಿ ವಿಷಪೂರಿತ ಸಿಹಿತಿಂಡಿಗಳ ಬಾಕ್ಸ್‌ಗಳನ್ನು ಮೂವರಿಗೆ ಕಳುಹಿಸಿದ ದುಷ್ಕರ್ಮಿಗಳ ವಿರುದ್ಧ ಸರ್ಜಿ ಅವರ ಆಪ್ತ ಕಾರ್ಯದರ್ಶಿ ಪೊಲೀಸರಿಗೆ ದೂರು ನೀಡಿದ್ದಾರೆ. ಸಿಹಿತಿಂಡಿಗಳ ಬಾಕ್ಸ್‌ ಸ್ವೀಕರಿಸಿದ ಮೂವರಲ್ಲಿ ನ್ಯಾಷನಲ್ ಎಜುಕೇಶನ್ ಸೊಸೈಟಿ ಕಾರ್ಯದರ್ಶಿ ಎಸ್ ಎನ್ ನಾಗರಾಜ್ ಸಹ ಒಬ್ಬರಾಗಿದ್ದಾರೆ. ಜನವರಿ 1ರಂದು ಅಜ್ಞಾತ ವ್ಯಕ್ತಿಗಳು ಡಾ. ಸರ್ಜಿ ಅವರ ಹೆಸರನ್ನು ಬಳಸಿಕೊಂಡು, ಡಿಟಿಡಿಸಿ ಕೊರಿಯರ್ ಮೂಲಕ

ಎಂಎಲ್‌ಸಿ ಡಾ. ಧನಂಜಯ ಸರ್ಜಿ ಹೆಸರಲ್ಲಿ ವಿಷಪೂರಿತ ಸಿಹಿತಿಂಡಿ ರವಾನೆ Read More »

ದೂರು ನೀಡಲು ಬಂದ ಮಹಿಳೆ ಜೊತೆ ಡಿವೈಎಸ್‌ಪಿ ಅಸಭ್ಯ ವರ್ತನೆ

ಗೃಹ ಸಚಿವರ ತವರು ಜಿಲ್ಲೆಯಲ್ಲೇ ನಡೆದ ಘಟನೆ ತುಮಕೂರು : ದೂರು ನೀಡಲು ಕಚೇರಿಗೆ ಬಂದ ಮಹಿಳೆಯ ಜೊತೆ ಡಿವೈಎಸ್‌ಪಿ ದರ್ಜೆಯ ಪೊಲೀಸ್‌ ಅಧಿಕಾರಿಯೇ ಅಸಭ್ಯವಾಗಿ ವರ್ತಿಸಿದ ವೀಡಿಯೊ ಸೋಷಿಯಲ್‌ ಮೀಡಿಯಾದಲ್ಲಿ ವೈರಲ್‌ ಆಗಿದ್ದು, ಪೊಲೀಸ್‌ ಇಲಾಖೆ ತಲೆ ತಗ್ಗಿಸುವಂತಾಗಿದೆ. ಗೃಹ ಸಚಿವ ಜಿ.ಪರಮೇಶ್ವರ್‌ ಅವರ ತವರು ಜಿಲ್ಲೆಯಲ್ಲೇ ಈ ಘಟನೆ ನಡೆದಿದೆ. ಮಧುಗಿರಿ ಉಪವಿಭಾಗದ ಡಿವೈಎಸ್​​ಪಿ ರಾಮಚಂದ್ರಪ್ಪ ಅಸಭ್ಯವಾಗಿ ವರ್ತಿಸಿದ್ದು, ವೀಡಿಯೊ ವೈರಲ್‌ ಆದ ಬಳಿಕ ಅವರು ತಲೆಮರೆಸಿಕೊಂಡಿದ್ದಾರೆ. ಜಮೀನು ವ್ಯಾಜ್ಯದ ಬಗ್ಗೆ ದೂರು ನೀಡಲು

ದೂರು ನೀಡಲು ಬಂದ ಮಹಿಳೆ ಜೊತೆ ಡಿವೈಎಸ್‌ಪಿ ಅಸಭ್ಯ ವರ್ತನೆ Read More »

error: Content is protected !!
Scroll to Top