ಅಪರಾಧ

ವಿದೇಶದಿಂದ ಚಿನ್ನ ಅಕ್ರಮವಾಗಿ ಸಾಗಾಟ : ಕನ್ನಡದ ನಟಿ ಕಸ್ಟಮ್ಸ್‌ ವಶ

ಕರ್ನಾಟಕದ ಡಿಜಿಪಿಗೆ ಸಂಬಂಧಿಯಾಗಿರುವ ನಟಿ ಬೆಂಗಳೂರು : ಅಕ್ರಮವಾಗಿ ಚಿನ್ನ ಸಾಗಾಟ ಮಾಡಿದ ಆರೋಪದ ಮೇಲೆ ಕನ್ನಡದ ನಟಿ ರನ್ಯಾ ರಾವ್ ಅವರನ್ನು​ ಬೆಂಗಳೂರು ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ವಶಕ್ಕೆ ಪಡೆಯಲಾಗಿದೆ. ಸುದೀಪ್ ನಟನೆಯ ‘ಮಾಣಿಕ್ಯ’ ಸಿನಿಮಾದಲ್ಲಿ ರನ್ಯಾ ರಾವ್ ನಟಿಸಿ ಕನ್ನಡಿಗರಿಗೆ ಪರಿಚಿತರಾಗಿದ್ದರು. ನಟಿ ರನ್ಯಾ ರಾವ್ ಕರ್ನಾಟಕದ ಡಿಜಿಪಿ ರಾಮಚಂದ್ರ ರಾವ್ ಸಂಬಂಧಿಯಾಗಿದ್ದಾರೆ. ರನ್ಯಾ ದುಬೈನಿಂದ ಬೆಂಗಳೂರಿಗೆ ಮಾರ್ಚ್ 3ರ ರಾತ್ರಿ ಮರಳಿದ್ದಾರೆ. ಬೆಂಗಳೂರು ಅಂತಾರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ಬರುತ್ತಿದ್ದಂತೆ ಏರ್​ಪೋರ್ಟ್​ ಕಸ್ಟಮ್ಸ್​ನ […]

ವಿದೇಶದಿಂದ ಚಿನ್ನ ಅಕ್ರಮವಾಗಿ ಸಾಗಾಟ : ಕನ್ನಡದ ನಟಿ ಕಸ್ಟಮ್ಸ್‌ ವಶ Read More »

ಮಾದಕ ವಸ್ತು ಸೇವನೆಯ ಜೊತೆ ಮಾರಾಟ ಮಾಡುತ್ತಿದ್ದ ಮೂವರು ಆರೋಪಿಗಳ ಬಂಧನ

ಮಂಗಳೂರು: ಮಾದಕ ವಸ್ತು ಸೇವನೆ ಹಾಗೂ  ಮಾರಾಟ ಮಾಡಿದ್ದಾರೆ ಎಂಬ  ಎರಡು ಪ್ರತ್ಯೇಕ ಘಟನೆಗೆ ಸಂಬಂಧಿಸಿದಂತೆ ಮೂವರು ಆರೋಪಿಗಳನ್ನು ಪೊಲೀಸರು ಬಂಧಿಸಿದ್ದಾರೆ. ಬಂಧಿತ ಆರೋಪಿಗಳನ್ನು ವೈಶಾಖ್, ಅರವಿಂದ್, ಇಸ್ಮಾಯಿಲ್ ಸೊಹೈಲ್ ಎಂದು ಪತ್ತೆಹಚ್ಚಲಾಗಿದೆ. ಉಳ್ಳಾಲ ಗ್ರಾಮದ ಮೊಗವೀರಪಟ್ಟ ಬೀಚ್ ಪರಿಸರದ ಸಾರ್ವಜನಿಕ ಸ್ಥಳದಲ್ಲಿ ನಿಷೇಧಿತ ಮಾದಕವಸ್ತುಗಳನ್ನು ಸೇವಿಸಿ ಸಾರ್ವಜನಿಕರಿಗೆ ತೊಂದರೆ ನೀಡುತ್ತಿದ್ದ ವೈಶಾಖ್ ಎಂಬುವವನನ್ನು ಮಂಗಳೂರಿನ ಸೆನ್ ಪೊಲೀಸರು ಬಂಧಿಸಿದ್ದಾರೆ.  ಜಪ್ಪಿನಮೊಗರು ಸಮೀಪದ ಕುಡ್ಡಾಡಿ ರೈಲ್ವೆ ಅಂಡರ್‌ಪಾಸ್ ರಸ್ತೆಯಿಂದ ಸೂಟರ್‌ಪೇಟೆ ಹಾದು ಹೋಗುವ ರಸ್ತೆಯಲ್ಲಿ ನಿಷೇಧಿತ ಮಾದಕ

ಮಾದಕ ವಸ್ತು ಸೇವನೆಯ ಜೊತೆ ಮಾರಾಟ ಮಾಡುತ್ತಿದ್ದ ಮೂವರು ಆರೋಪಿಗಳ ಬಂಧನ Read More »

ರೆಸಾರ್ಟ್‌ನಲ್ಲಿ ತಂಗಿದ್ದ ಕುಟುಂಬ ನಿಗೂಢವಾಗಿ ನಾಪತ್ತೆ

ಚಾಮರಾಜನಗರ : ರೆಸಾರ್ಟ್‌ನಲ್ಲಿ ತಂಗಿದ್ದ ಕುಟುಂಬವೊಂದು ನಿಗೂಢವಾಗಿ ನಾಪತ್ತೆಯಾಗಿದೆ. ಗುಂಡ್ಲುಪೇಟೆ ತಾಲೂಕಿನ ಬಂಡೀಪುರಕ್ಕೆ ತೆರಳಿದಿದ್ದ ಕುಟುಂಬ ನಂತರ ಕಾಣೆಯಾಗಿದೆ ಎನ್ನಲಾಗಿದೆ. ಬಂಡೀಪುರ ಬಳಿಯ ಕಂಟ್ರಿ ಕ್ಲಬ್ ರೆಸಾರ್ಟ್‌ನಲ್ಲಿ ಕುಟುಂಬ ಭಾನುವಾರ ರಾತ್ರಿ ವಾಸ್ತವ್ಯ ಹೂಡಿತ್ತು. ಸೋಮವಾರ ಮಧ್ಯಾಹ್ನದಿಂದ ಕುಟುಂಬ ನಾಪತ್ತೆಯಾಗಿದೆ. ಬೆಂಗಳೂರು ಮೂಲದ ಜೆ.ನಿಶಾಂತ್ (40), ಪತ್ನಿ ಚಂದನಾ ಮತ್ತು 10 ವರ್ಷದ ಗಂಡು ಮಗು ನಾಪತ್ತೆಯಾಗಿದ್ದಾರೆ. ಜೆ.ನಿಶಾಂತ್ ಬ್ಯಾಗ್​ ಕಂಟ್ರಿ ಕ್ಲಬ್ ರೆಸಾರ್ಟ್​​ನಲ್ಲೆ ಇದೆ. ರೆಸಾರ್ಟ್​ನಲ್ಲಿ ಲಗೇಜ್ ಬಿಟ್ಟು ಮೂವರು ಕಾರಿನಲ್ಲಿ ಹೊರಗೆ ಹೋಗಿದ್ದಾರೆ. ಬಂಡೀಪುರ

ರೆಸಾರ್ಟ್‌ನಲ್ಲಿ ತಂಗಿದ್ದ ಕುಟುಂಬ ನಿಗೂಢವಾಗಿ ನಾಪತ್ತೆ Read More »

ಧಾರ್ಮಿಕ ಕಾರ್ಯಕ್ರಮದಲ್ಲಿ ಗಲಾಟೆ : ಶಾಸಕ ವೇದವ್ಯಾಸ್‌ ಕಾಮತ್‌ ವಿರುದ್ಧ ಎಫ್‌ಐಆರ್‌

ಕಾಂಗ್ರೆಸ್‌ ಕಾರ್ಯಕರ್ತನ ಮೇಲೆ ಹಲ್ಲೆ ನಡೆಸಿದ ಆರೋಪ ಮಂಗಳೂರು: ಶಕ್ತಿನಗರ ಬಳಿಯ ಶ್ರೀ ಕೃಷ್ಣ ಭಜನಾ ಮಂದಿರದಲ್ಲಿ ನಡೆದ ಧಾರ್ಮಿಕ ಕಾರ್ಯಕ್ರಮದ ಸಂದರ್ಭದಲ್ಲಿ ಕಾಂಗ್ರೆಸ್ ಕಾರ್ಯಕರ್ತನ ಮೇಲೆ ಹಲ್ಲೆ ನಡೆಸಿದ ಆರೋಪದ ಮೇಲೆ ಮಂಗಳೂರು ನಗರ ದಕ್ಷಿಣ ಶಾಸಕ ವೇದವ್ಯಾಸ ಕಾಮತ್ ಸೇರಿದಂತೆ 12 ಜನರ ವಿರುದ್ಧ ಎಫ್ಐಆರ್ ದಾಖಲಿಸಲಾಗಿದೆ. ಭಾನುವಾರ ತಡರಾತ್ರಿ ಈ ಘಟನೆ ನಡೆದಿದ್ದು, ಕಂಕನಾಡಿ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ. ಕಾಂಗ್ರೆಸ್ ಕಾರ್ಯಕರ್ತ ಯಶವಂತ ಪ್ರಭು ನೀಡಿದ ದೂರಿನ

ಧಾರ್ಮಿಕ ಕಾರ್ಯಕ್ರಮದಲ್ಲಿ ಗಲಾಟೆ : ಶಾಸಕ ವೇದವ್ಯಾಸ್‌ ಕಾಮತ್‌ ವಿರುದ್ಧ ಎಫ್‌ಐಆರ್‌ Read More »

ಉದ್ಯಮಿಯನ್ನು ಅಪಹರಿಸಿ 5 ಕೋ.ರೂ. ಸುಲಿಗೆ ಯತ್ನ: ಸಚಿವ ಸತೀಶ್‌ ಜಾರಕಿಹೊಳಿ ಆಪ್ತೆ ಬಂಧನ

ಗೋಕಾಕ್ ಬ್ಲಾಕ್ ಮಹಿಳಾ ಕಾಂಗ್ರೆಸ್ ಅಧ್ಯಕ್ಷೆ ಮಂಜುಳಾ ಪ್ರಕರಣದ ಸೂತ್ರಧಾರಿ ಬೆಳಗಾವಿ: ರಿಯಲ್ ಎಸ್ಟೇಟ್ ಉದ್ಯಮಿಯನ್ನು ಅಪಹರಿಸಿ 5 ಕೋಟಿ ರೂಪಾಯಿ ಸುಲಿಗೆ ಮಾಡಲು ಯತ್ನಿಸಿದ ಪ್ರಕರಣಕ್ಕೆ ಸಂಬಂಧಿಸಿ ಲೋಕೋಪಯೋಗಿ ಸಚಿವ ಸತೀಶ್ ಜಾರಕಿಹೊಳಿ‌ ಆಪ್ತೆ, ರಾಮಗನಟ್ಟಿ ಗೋಕಾಕ್ ಬ್ಲಾಕ್ ಕಾಂಗ್ರೆಸ್ ಮಹಿಳಾ ಅಧ್ಯಕ್ಷೆ ಮಂಜುಳಾ ರಾಮಗನಟ್ಟಿಯನ್ನು ಘಟಪ್ರಭಾ ಠಾಣೆ ಪೊಲೀಸರು ಬಂಧಿಸಿದ್ದಾರೆ. ಇದರೊಂದಿಗೆ ಈ ಪ್ರಕರಣದಲ್ಲಿ ಬಂಧಿತರ ಸಂಖ್ಯೆ ಏಳಕ್ಕೆ ಏರಿದೆ. ಈ ಹಿಂದೆ ಪೊಲೀಸರು ಪ್ರಕರಣದಲ್ಲಿ ಭಾಗಿಯಾಗಿದ್ದ ಆರು ಮಂದಿ ಆರೋಪಿಗಳನ್ನು ಬಂಧಿಸಿದ್ದರು. ಘಟಪ್ರಭಾ

ಉದ್ಯಮಿಯನ್ನು ಅಪಹರಿಸಿ 5 ಕೋ.ರೂ. ಸುಲಿಗೆ ಯತ್ನ: ಸಚಿವ ಸತೀಶ್‌ ಜಾರಕಿಹೊಳಿ ಆಪ್ತೆ ಬಂಧನ Read More »

ಹಸಿಮೀನು ಗಂಟಲಲ್ಲಿ ಸಿಲುಕಿ ಯುವಕ ಸಾವು!

ಕೇರಳ: ಗದ್ದೆಯಲ್ಲಿ ಮೀನು ಹಿಡಿಯುತ್ತಿದ್ದಾಗ ಒಂದು ಮೀನು ಗಂಟಲೊಳಗೆ ಹೋದ ಪರಿಣಾಮ ಯುವಕ ಸಾವನ್ನಪ್ಪಿರುವ ಘಟನೆ ಆಲಪ್ಪುಳ ಸಮೀಪದ ಕಾಯಂಕುಲಂನಲ್ಲಿ ಭಾನುವಾರ ನಡೆದಿದೆ. ಮೃತ ಯುವಕನನ್ನು ಪುತ್ತುಪ್ಪಳ್ಳಿಯ ಆದರ್ಶ್ ಅಲಿಯಾಸ್ ಉನ್ನಿ (25) ಎಂದು ಗುರುತಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ. ಸಂಜೆ 4.30ರ ಸುಮಾರಿಗೆ ಆದರ್ಶ್‌ ಸ್ನೇಹಿತರೊಂದಿಗೆ ಗದ್ದೆಗೆ ನೀರು ಹಾಯಿಸಿ ಮೀನು ಹಿಡಿಯುತ್ತಿದ್ದಾಗ ಈ ಘಟನೆ ನಡೆದಿದೆ. ಇನ್ನೊಂದು ಮೀನನ್ನು ಹಿಡಿಯಲು ಯತ್ನಿಸುತ್ತಿದ್ದಾಗ ಮೀನೊಂದು ಆತನ ಬಾಯಿ ಕಚ್ಚಿಕೊಂಡು ಗಂಟಲೊಳಗೆ ಹೋಗಿ ಸಿಲುಕಿಕೊಂಡಿದೆ. ಕೂಡಲೇ ಯುವಕನನ್ನು

ಹಸಿಮೀನು ಗಂಟಲಲ್ಲಿ ಸಿಲುಕಿ ಯುವಕ ಸಾವು! Read More »

ಸೂಟ್‌ಕೇಸ್‌ನಲ್ಲಿ ಕಾಂಗ್ರೆಸ್‌ ಕಾರ್ಯಕರ್ತೆ ಶವ ಪತ್ತೆ ಪ್ರಕರಣ : ಓರ್ವ ಆರೋಪಿ ಸೆರೆ

ಕಾಂಗ್ರೆಸ್‌ನವರಿಂದಲೇ ಕೊಲೆ ಎಂದು ಆರೋಪಿಸಿದ ತಾಯಿ ಚಂಡೀಗಢ: ಹರ್ಯಾಣದ ಯುವ ಕಾಂಗ್ರೆಸ್ ಕಾರ್ಯಕರ್ತೆಯ ಕೊಲೆ ಪ್ರಕರಣದಲ್ಲಿ ಕಾಂಗ್ರೆಸ್‌ನ ಕೆಲವರ ಕೈವಾಡ ಇದೆ ಎಂದು ಆಕೆಯ ತಾಯಿ ಆರೋಪಿಸಿದ ಬೆನ್ನಿಗೆ ಹರ್ಯಾಣ ಪೊಲೀಸರು ಓರ್ವ ಆರೋಪಿಯನ್ನು ಬಂಧಿಸಿದ್ದಾರೆ. ಪುರಸಭೆ ಚುನಾವಣೆಗೆ ಒಂದು ದಿನ ಮೊದಲು ಹರ್ಯಾಣದ ರೋಹ್ಟಕ್‌ ಜಿಲ್ಲೆಯ ಸಂಪ್ಲಾ ಬಸ್ ನಿಲ್ದಾಣದ ಬಳಿ ಸೂಟ್‌ಕೇಸ್‌ನಲ್ಲಿ ಹಿಮಾನಿ ನರ್ವಾಲ್‌ ಎಂಬ 22ರ ಹರೆಯದ ಯುವತಿಯ ಶವ ಪತ್ತೆಯಾಗಿತ್ತು. ಹಿಮಾನಿ ನರ್ವಾಲ್, ರಾಹುಲ್ ಗಾಂಧಿಯವರ ಭಾರತ್ ಜೋಡೋ ಯಾತ್ರೆಯಲ್ಲಿ ಭಾಗವಹಿಸಿ

ಸೂಟ್‌ಕೇಸ್‌ನಲ್ಲಿ ಕಾಂಗ್ರೆಸ್‌ ಕಾರ್ಯಕರ್ತೆ ಶವ ಪತ್ತೆ ಪ್ರಕರಣ : ಓರ್ವ ಆರೋಪಿ ಸೆರೆ Read More »

ವಿಟ್ಲದ ಲಾಡ್ಜ್ ನಲ್ಲಿ ಚಿಂತಾಜನಕ ಸ್ಥಿತಿಯಲ್ಲಿ ವ್ಯಕ್ತಿ ಪತ್ತೆ

ವಿಟ್ಲ: ವ್ಯಕ್ತಿಯೊಬ್ಬರ ದೇಹ ಚಿಂತಾಜನಕ ಸ್ಥಿತಿಯಲ್ಲಿ ವಿಟ್ಲದ ಕಾವೇರಿ ಬಾ‌ರ್ ಲಾಡ್ಜ್‌ ನಲ್ಲಿ ಕಂಡು ಬಂದ ಘಟನೆ ನಡೆದಿದೆ. ಚಿಂತಾಜನಕ ಸ್ಥಿತಿಯಲ್ಲಿ ಕಂಡುಬಂದ ವ್ಯಕ್ತಿಯನ್ನು ಕೇರಳ ಮೂಲದ ಸುಜೇಶ್ ಎಂದು ಗುರುತಿಸಲಾಗಿದೆ. ವಿಟ್ಲ ಮಂಗಳೂರು ರಸ್ತೆಯ ಕೋಡಿ ಕಾವೇರಿ ಬಾರ್ & ರೆಸ್ಟೋರೆಂಟ್ ಲಾಡ್ಜ್‌ನಲ್ಲಿ ವ್ಯಕ್ತಿಯೊಬ್ಬರು ಕಳೆದ ಒಂದು ವಾರಗಳ ಹಿಂದೆ ಬಂದು ತಂಗಿದ್ದು. ಇಂದು ಮುಂಜಾನೆ ಲಾಡ್ಜ್ ಸಿಬ್ಬಂದಿಯವರು ಕೋಣೆಯ ಬಾಗಿಲು ತೆಗೆಯುತ್ತಿದ್ದಂತೆ ಕೋಣೆಯಲ್ಲಿ ಮಲಗಿದ್ದ ವ್ಯಕ್ತಿಯು ರಕ್ತದ ಮಡುವಿನಲ್ಲಿ ಚಿಂತಾಜನಕ ಸ್ಥಿತಿಯಲ್ಲಿ ಕಂಡುಬಂದಿದೆ. ಕೂಡಲೇ

ವಿಟ್ಲದ ಲಾಡ್ಜ್ ನಲ್ಲಿ ಚಿಂತಾಜನಕ ಸ್ಥಿತಿಯಲ್ಲಿ ವ್ಯಕ್ತಿ ಪತ್ತೆ Read More »

ಕಾಂಗ್ರೆಸ್‌ ಯುವ ಕಾರ್ಯಕರ್ತೆಯ ಶವ ಸೂಟ್‌ಕೇಸ್‌ನಲ್ಲಿ ಪತ್ತೆ

ಬಸ್‌ ನಿಲ್ದಾಣದಲ್ಲಿದ್ದ ಅನಾಥ ಸೂಟ್‌ಕೇಸ್‌ನಲ್ಲಿತ್ತು ಹೆಣ ಚಂಡೀಗಢ: ಕಾಂಗ್ರೆಸ್‌ ಕಾರ್ಯಕರ್ತೆಯೊಬ್ಬರ ಶವ ಹರ್ಯಾಣದ ರೋಹ್ಟಕ್‌ ಜಿಲ್ಲೆಯ ಸಂಪ್ಲಾದ ಬಸ್‌ ನಿಲ್ದಾಣದಲ್ಲಿ ಸೂಟ್‌ಕೇಸ್‌ನೊಳಗೆ ಪತ್ತೆಯಾಗಿದೆ. ಇಲ್ಲಿ ಇಂದು ಸ್ಥಳೀಯಾಡಳಿತ ಚುನಾವಣೆ ನಡೆಯುತ್ತಿದ್ದು, ಇದೇ ವೇಳೆ ಯುವ ಕಾಂಗ್ರೆಸ್‌ ಕಾರ್ಯಕರ್ತೆಯ ಶವ ಪತ್ತೆಯಾಗಿರುವುದು ಅನೇಕ ಅನುಮಾನಗಳಿಗೆ ಕಾರಣವಾಗಿದೆ.ಕೊಲೆಯಾದ ಕಾಂಗ್ರೆಸ್‌ ಕಾರ್ಯಕರ್ತೆಯನ್ನು ಹಿಮಾನಿ ನರ್ವಾಲ್‌ (22) ಎಂದು ಗುರುತಿಸಲಾಗಿದೆ. ಕಾಂಗ್ರೆಸ್‌ನ ಸಕ್ರಿಯ ಕಾರ್ಯಕರ್ತೆಯಾಗಿದ್ದ ಈ ಯುವತಿ ರಾಹುಲ್‌ ಗಾಂಧಿಯ ಭಾರತ್‌ ಜೋಡೋ ಯಾತ್ರೆಯಲ್ಲೂ ಭಾಗವಹಿಸಿದ್ದರು.ಬಸ್‌ ನಿಲ್ದಾಣದ ಬಳಿ ಪತ್ತೆಯಾದ ಸೂಟ್‌ಕೇಸ್‌ನಲ್ಲಿ ಶವ

ಕಾಂಗ್ರೆಸ್‌ ಯುವ ಕಾರ್ಯಕರ್ತೆಯ ಶವ ಸೂಟ್‌ಕೇಸ್‌ನಲ್ಲಿ ಪತ್ತೆ Read More »

ಮಹಿಳೆಯರನ್ನು ಬೆದರಿಸಿ ಹಣ ಸುಲಿಗೆ : ಆರೋಪಿ ಸೆರೆ

ಮಂಗಳೂರು : ಅಶ್ಲೀಲ ವೀಡಿಯೊ ಇರುವುದಾಗಿ ಯುವತಿಯರನ್ನು ಬೆದರಿಸಿ ಹಣ ಸುಲಿಯುತ್ತಿದ್ದ ಕಾರ್ಕಳದ ಈದು ಗ್ರಾಮದ ವ್ಯಕ್ತಿಯನ್ನು ಮಂಗಳೂರು ಪೊಲೀಸರು ಬಂಧಿಸಿದ್ದಾರೆ. ಆರೋಪಿಯನ್ನು ಈದು ಗ್ರಾಮದ ಸತೀಶ್‌ ಹೊಸ್ಮಾರು (36) ಎಂದು ಗುರುತಿಸಲಾಗಿದೆ.ಈತ ಸೋಷಿಯಲ್‌ ಮೀಡಿಯಾದ ಮೂಲಕ ಯುವತಿಯರ ಮತ್ತು ಮಹಿಳೆಯರ ಮೊಬೈಲ್‌ ನಂಬರ್‌ ಸಂಪಾದಿಸಿ ಫೋನ್‌ ಮಾಡಿ ನಿಮ್ಮ ಅಶ್ಲೀಲ ವೀಡಿಯೊ ಇದೆ, ಹಣ ಕೊಡದಿದ್ದರೆ ಅದನ್ನು ಸೋಷಿಯಲ್‌ ಮೀಡಿಯಾದಲ್ಲಿ ಅಪ್‌ಲೋಡ್‌ ಮಾಡುತ್ತೇನೆ ಎಂದು ಬೆದರಿಸುತ್ತಿದ್ದ. ಈ ರೀತಿ ಹಲವು ಯುವತಿಯರಿಂದ ಹಣ ಸುಲಿಗೆ ಮಾಡಿದ್ದಾನೆ.

ಮಹಿಳೆಯರನ್ನು ಬೆದರಿಸಿ ಹಣ ಸುಲಿಗೆ : ಆರೋಪಿ ಸೆರೆ Read More »

error: Content is protected !!
Scroll to Top