ಅಪರಾಧ

ಕಡಬ ತಹಶೀಲ್ದಾರ್ ರಿಂದ ದಲಿತರ ಮೇಲೆ ಮುಂದುವರಿದ ದೌರ್ಜನ್ಯ : ಬಿ.ಎಂ.ಭಟ್‌ಖಂಡನೆ

ಕಡಬ: ತಾಲೂಕಿನ ಕೌಕ್ರಾಡಿ ಗ್ರಾಮ ನಿವಾಸಿ ದಲಿತೆ ರಾಧಮ್ಮ ಕುಟುಂಬದ ಮೇಲೆ ಮತ್ತೆ ಮತ್ತೆ ದೌರ್ಜನ್ಯ ಎಸಗುತ್ತಿರುವ ಕಡಬ ತಹಶೀಲ್ದಾರ್ ಪ್ರಭಾಕರ ಕಜೂರೆ ಅವರ ಕಾನೂನು ದುರುಪಯೋಗದ ನಡೆಯನ್ನು ಸಹಿಸಲು ಸಾದ್ಯವಿಲ್ಲ. ಈ ನಿಟ್ಟಿನಲ್ಲಿ ಅವರ ವಿರುದ್ದ ಸೂಕ್ತ ಕ್ರಮ ಕೈಗೊಳ್ಳಬೇಕು ಎಂದು ಸಿಪಿಐಎಂ ಜಿಲ್ಲಾ ಮುಖಂಡ, ನ್ಯಾಯವಾದಿ ಬಿ.ಎಂ.ಭಟ್ ಸರಕಾರವನ್ನು ಒತ್ತಾಯಿಸಿದ್ದಾರೆ. ರೇಣುಕೆ ಎಂಬ ಬೆಳ್ತಂಗಡಿ ತಾಲೂಕು ಶಿಬಾಜೆ ನಿವಾಸಿಯ ಹೆಸರಲ್ಲಿ ಹೈಕೋರ್ಟಲ್ಲಿ ದಾವೆ ದಾಖಲಿಸಲಾಗಿದೆ ಎಂದು ರೇಣುಕೆ ಎಂಬವರ ಮನೆಯನ್ನು ದ್ವಂಸ ಮಾಡಲು ಆದೇಶವಿದೆ […]

ಕಡಬ ತಹಶೀಲ್ದಾರ್ ರಿಂದ ದಲಿತರ ಮೇಲೆ ಮುಂದುವರಿದ ದೌರ್ಜನ್ಯ : ಬಿ.ಎಂ.ಭಟ್‌ಖಂಡನೆ Read More »

ಡ್ರಗ್ಸ್‌ ದಂಧೆ : 63 ವರ್ಷದ ಮಹಿಳೆ ಬಂಧನ; 40 ಕೆಜಿ ಗಾಂಜಾ ವಶ

ಮಾದಕವಸ್ತು ವ್ಯಾಪಾರದಿಂದಲೇ ಕೋಟಿಗಟ್ಟಲೆ ಸಂಪಾದಿಸಿದ್ದ ಲೇಡಿ ಡಾನ್‌ ಬೆಂಗಳೂರು: ಹಲವು ವರ್ಷಗಳಿಂದ ಡ್ರಗ್ಸ್ ದಂಧೆ ಮಾಡುತ್ತಿದ್ದ 63 ವರ್ಷದ ಮಹಿಳೆಯನ್ನು ಪೊಲೀಸರು ಬಂಧಿಸಿದ್ದಾರೆ. ಕೆಲವು ಪೊಲೀಸರು ಸಹ ಆಕೆಯೊಂದಿಗೆ ಕೈಜೋಡಿಸಿದ್ದಾರೆ ಶಂಕೆ ವ್ಯಕ್ತವಾಗಿದ್ದು, ಈ ಕುರಿತು ತನಿಖೆ ನಡೆಯುತ್ತಿದೆ. ಮಹಿಳೆಯ ಮನೆಯಿಂದ 40 ಕೆಜಿ ಗಾಂಜಾ, 33 ಲಕ್ಷ ರೂ. ನಗದು, ಮಚ್ಚು ಸೇರಿದಂತೆ ಎಂಟು ಶಸ್ತ್ರಾಸ್ತ್ರಗಳನ್ನು ಪೊಲೀಸರು ವಶಪಡಿಸಿಕೊಂಡಿದ್ದಾರೆ. ಖಚಿತ ಮಾಹಿತಿ ಆಧಾರದ ಮೇರೆಗೆ ಬ್ಯಾಟರಾಯನಪುರ ಪೊಲೀಸರು ಮಾದಕವಸ್ತು ಮಾರಾಟಗಾರ್ತಿ ಕಾಲಿ ಮೆಹರುನಿಸಾ ಒಡೆತನದ ಹಲವು

ಡ್ರಗ್ಸ್‌ ದಂಧೆ : 63 ವರ್ಷದ ಮಹಿಳೆ ಬಂಧನ; 40 ಕೆಜಿ ಗಾಂಜಾ ವಶ Read More »

ಕುವೈಟ್‌ನ ಬ್ಯಾಂಕಿಗೇ 700 ಕೋ. ರೂ. ವಂಚಿಸಿದ ಮಲಯಾಳಿಗಳು

ಸಾಲ ಪಡೆದು ಸ್ವದೇಶಕ್ಕೆ ಪಲಾಯನ ತಿರುವನಂತಪುರ: ಕುವೈಟ್‌ಗೆ ಉದ್ಯೋಗಕ್ಕೆ ತೆರಳಿದ ಕೇರಳದವರು ಅಲ್ಲಿನ ಗಲ್ಫ್‌ ಬ್ಯಾಂಕ್‌ಗೆ 700 ಕೋ. ರೂ.ಅಧಿಕ ಮೊತ್ತ ವಂಚಿಸಿ ಪಲಾಯನ ಮಾಡಿರುವುದು ಬೆಳಕಿಗೆ ಬಂದಿದೆ. ಇತ್ತೀಚೆಗೆ ಗಲ್ಫ್‌ ಬ್ಯಾಂಕ್‌ನ ಡೆಪ್ಯುಟಿ ಜನರಲ್‌ ಮ್ಯಾನೇಜರ್‌ ಕೇರಳಕ್ಕೆ ಬಂದು ಈ ಕುರಿತು ದೂರು ನೀಡಿದ ಬಳಿಕ ಕೇರಳ ಪೊಲೀಸರು ವಂಚನೆ ಕುರಿತು ತನಿಖೆ ಪ್ರಾರಂಭಿಸಿದ್ದಾರೆ. ವಿಶೇಷವೆಂದರೆ ಸಾಲ ಪಡೆದು ವಂಚಿಸಿದವರಲ್ಲಿ ಬಹುತೇಕ ಮಂದಿ ನರ್ಸ್‌ ಕೆಲಸಕ್ಕಾಗಿ ಕುವೈಟ್‌ಗೆ ಹೋದ ಮಹಿಳೆಯರು. ಗಲ್ಫ್‌ ಬ್ಯಾಂಕ್‌ನ ಕುವೈಟ್‌ ಷೇರ್‌

ಕುವೈಟ್‌ನ ಬ್ಯಾಂಕಿಗೇ 700 ಕೋ. ರೂ. ವಂಚಿಸಿದ ಮಲಯಾಳಿಗಳು Read More »

ಭಾರತದ ಮೇಲೆ ಮತ್ತೆ ದಾಳಿ : ಉಗ್ರ ಮಸೂದ್ ಅಜರ್ ಉಗ್ರ ಪ್ರತಿಜ್ಞೆ

ಪಾಕಿಸ್ಥಾನದ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದ ಭಾರತ ಹೊಸದಿಲ್ಲಿ: ಭಾರತದ ಮೇಲೆ ಮತ್ತೆ ದಾಳಿ ಮಾಡುತ್ತೇನೆ ಎಂದು ಪಾಕಿಸ್ಥಾನದ ಉಗ್ರಗಾಮಿ ಸಂಘಟನೆ ಜೈಶ್‌ ಎ ಮೊಹಮ್ಮದ್‌ನ ಮುಖಂಡ ಮಸೂದ್‌ ಅಜರ್‌ ಉಗ್ರ ಪ್ರತಿಜ್ಞೆ ಮಾಡಿದ್ದಾನೆ. ನಿಷೇಧಿತ ಭಯೋತ್ಪಾದನಾ ಸಂಘಟನೆಯಾಗಿರುವ ಜೈಶ್-ಎ-ಮೊಹಮ್ಮದ್ 2011ರ ಸಂಸತ್ ದಾಳಿಯಂತಹ ಭಯೋತ್ಪಾದಕ ಕೃತ್ಯಗಳನ್ನು ಎಸಗಿದ್ದು, ಈ ದಾಳಿಗಳ ಮಾಸ್ಟರ್ ಮೈಂಡ್ ಉಗ್ರ ಮಸೂದ್ ಅಜರ್ ಆಗಿದ್ದಾನೆ. ಅವನ ವಿರುದ್ಧ ಕ್ರಮ ಕೈಗೊಳ್ಳಬೇಕೆಂದು ಪಾಕಿಸ್ಥಾನವನ್ನು ಭಾರತ ಒತ್ತಾಯಿಸಿದೆ. ಪಾಕಿಸ್ಥಾನದ ಪಂಜಾಬ್ ಪ್ರಾಂತ್ಯದ ಬಹವಾಲ್‌ಪುರದ ಇಸ್ಲಾಮಿಕ್ ಸೆಮಿನರಿಯಲ್ಲಿ

ಭಾರತದ ಮೇಲೆ ಮತ್ತೆ ದಾಳಿ : ಉಗ್ರ ಮಸೂದ್ ಅಜರ್ ಉಗ್ರ ಪ್ರತಿಜ್ಞೆ Read More »

ತೋಡಿನಲ್ಲಿ ಪತ್ತೆಯಾದ ಮೃತದೇಹದ ಗುರುತು ಪತ್ತೆ

ಪುತ್ತೂರು: ರೋಟರಿ  ಸಾಮೆತ್ತಡ್ಕ ನಡುವೆ ಇರುವ ತೋಡಿನಲ್ಲಿ ಪತ್ತೆಯಾದ ಅಪರಿಚಿತ ವ್ಯಕ್ತಿಯ ಮೃತದೇಹದ ಗುರುತು ಪತ್ತೆಯಾಗಿದೆ. ಪುತ್ತೂರು ಪೊಲೀಸರು ಘಟನಾ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿ ಗುರುತು ಪತ್ತೆ ಹಚ್ಚಿದ್ದಾರೆ. ನಂದಕುಮಾ‌ರ್ ನಿನ್ನೆ ಸಂಜೆ ಬೊಳ್ಳಾರಿನಿಂದ ಕಾಣೆಯಾಗಿದ್ದರು. ಇಂದು ತೋಡಿನಲ್ಲಿ ಅವರ ಮೃತದೇಹ ಪತ್ತೆಯಾಗಿದೆ.

ತೋಡಿನಲ್ಲಿ ಪತ್ತೆಯಾದ ಮೃತದೇಹದ ಗುರುತು ಪತ್ತೆ Read More »

ಶ್ರೀ ಮಹಾಲಿಂಗೇಶ್ವರನ ಪುಣ್ಯಭೂಮಿಯಲ್ಲಿರುವ ನಾಗನಕಟ್ಟೆಗೆ ಹಾನಿಗೈದಿರುವುದು ಖಂಡನೀಯ | ಆರೋಪಿಗೆ ಸೂಕ್ತ ಶಿಕ್ಷೆ ನೀಡಬೇಕು: ಕಿಶೋರ್ ಕುಮಾರ್ ಪುತ್ತೂರು

ಪುತ್ತೂರು: ತುಳುನಾಡಿನಲ್ಲಿ ನಾಗದೇವರಿಗೆ ವಿಶೇಷ ಪ್ರಾಧಾನ್ಯತೆ ಇದೆ. ಅದೂ ಶ್ರೀ ಮಹಾಲಿಂಗೇಶ್ವರನ ಪುಣ್ಯಭೂಮಿಯಲ್ಲಿರುವ ನಾಗನಕಟ್ಟೆಯನ್ನು ಧ್ವಂಸಗೊಳಿಸುವುದಲ್ಲದೆ ಕೆಟ್ಟ ರೀತಿಯಲ್ಲಿ ವರ್ತಿಸಿರುವುದು ಖಂಡನೀಯ ಎಂದು ವಿಧಾನ ಪರಿಷತ್ ಸದಸ್ಯ ಕಿಶೋರ್ ಕುಮಾರ್ ಹೇಳಿದ್ದಾರೆ. ಅವರು ಖಾಸಗಿ ವ್ಯಕ್ತಿಯಿಂದ ಹಾನಿಗೊಳಗಾದ ನಗರದ ಖಾಸಗಿ ಬಸ್‍ ನಿಲ್ದಾಣದ ಬಳಿ ಇರುವ ನಾಗನಕಟ್ಟೆಗೆ ಶುಕ್ರವಾರ ಭೇಟಿ ನೀಡಿ ಪ್ರತಿಕ್ರಿಯೆ ನೀಡಿದ್ದಾರೆ. ಈಗಾಗಲೇ ಪುತ್ತೂರು ನಗರ ಠಾಣಾ ಪೊಲೀಸರು ಆತನನ್ನು ಬಂಧಿಸಿದ್ದು, ಇದಕ್ಕಾಗಿ ಅಭಿನಂದನೆ ಸಲ್ಲಿಸಿದ ಅವರು, ಹಿಂದೂಗಳ ಶ್ರದ್ಧಾ ಕೇಂದ್ರಗಳಿಗೆ ಅನ್ಯಾಯ ಆದಾಗ

ಶ್ರೀ ಮಹಾಲಿಂಗೇಶ್ವರನ ಪುಣ್ಯಭೂಮಿಯಲ್ಲಿರುವ ನಾಗನಕಟ್ಟೆಗೆ ಹಾನಿಗೈದಿರುವುದು ಖಂಡನೀಯ | ಆರೋಪಿಗೆ ಸೂಕ್ತ ಶಿಕ್ಷೆ ನೀಡಬೇಕು: ಕಿಶೋರ್ ಕುಮಾರ್ ಪುತ್ತೂರು Read More »

ಬಿಯರ್‌ ಬಾಟಲಿಯಿಂದ ಇರಿದು ಹೋಟೆಲ್‌ ಕಾರ್ಮಿಕನ ಹತ್ಯೆ

ಉಡುಪಿ: ಹೊಟೇಲ್ ಕಾರ್ಮಿಕನನ್ನು ಬಿಯರ್ ಬಾಟಲಿಯಿಂದ ಕುತ್ತಿಗೆಗೆ ಇರಿದು ಕೊಲೆಗೈದ ಘಟನೆ ಮಣಿಪಾಲದ ಲಕ್ಷ್ಮೀಂದ್ರ ನಗರದ ಬ್ಯಾಕಸಿನ್ ರೆಸ್ಟೊರೆಂಟ್‌ನ ಮುಂಭಾಗದ ಅನಂತ ಕಲ್ಯಾಣ ಮಾರ್ಗದಲ್ಲಿ ಇಂದು ಬೆಳಗ್ಗೆ ನಡೆದಿದೆ. ಕೊಲೆಯಾದ ವ್ಯಕ್ತಿಯನ್ನು ಹೊನ್ನಾವರದ ಕಾಸರಕೋಡಿನ ನಿವಾಸಿ ಶ್ರೀಧರ ನಾಯಕ್ (38)ಎಂದು ಗುರುತಿಸಲಾಗಿದೆ. ಶ್ರೀಧರ ನಾಯಕ್ ಮಣಿಪಾಲ ಈಶ್ವರ ನಗರದ ಹೊಟೇಲ್ ಒಂದರ ಕುಕ್ ಆಗಿದ್ದರು ಎಂದು ತಿಳಿದುಬಂದಿದೆ. ಬೆಳಿಗ್ಗೆ 6 ಗಂಟೆ ವೇಳೆಗೆ ರಸ್ತೆಯಲ್ಲಿ ವಾಕಿಂಗ್‌ ಹೋದವರಿಗೆ ರಸ್ತೆ ಬದಿ ಬಿದ್ದಿದ್ದ ಶವ ಕಂಡು ಪೊಲೀಸರಿಗೆ ತಿಳಿಸಿದ್ದಾರೆ.

ಬಿಯರ್‌ ಬಾಟಲಿಯಿಂದ ಇರಿದು ಹೋಟೆಲ್‌ ಕಾರ್ಮಿಕನ ಹತ್ಯೆ Read More »

ಪ್ರೀತಿಗೆ ಅಡ್ಡಿ | ಪ್ರಿಯತಮೆಯ ತಾಯಿ ಹಾಗೂ ಸಹೋದರನ ಬರ್ಬರ ಕೊಲೆ

ಬೆಳಗಾವಿ: ಮಗಳ ಪ್ರೀತಿ ವಿರೋಧ ಮಾಡಿದ್ದ ತಾಯಿ ಹಾಗೂ ಸಹೋದರನನ್ನು ಬರ್ಬರ ಕೊಲೆ ಮಾಡಿರುವ ಘಟನೆ ಬೆಳಗಾವಿ ಜಿಲ್ಲೆಯ ನಿಪ್ಪಾಣಿಯ ಅಕ್ಕೊಳದಲ್ಲಿ ಇಂದು ನಡೆದಿದೆ. ಮಂಗಳ ನಾಯಕ (45), ಪ್ರಜ್ವಲ್ ನಾಯಕ (18) ಮೃತ ದುರ್ದೈವಿಗಳು. ಕಳೆದ ಕೆಲ ತಿಂಗಳಿಂದ ಮಂಗಳ ಅವರ ಮಗಳು ಹಾಗೂ ರವಿ ಪರಸ್ಪರ ಪ್ರೀತಿಸುತ್ತಿದ್ದರು. ಈ ವಿಷಯ ತಿಳಿದ ತಾಯಿ ಮಗಳನ್ನು ಕರೆದು ಬುದ್ಧಿ ಮಾತು ಹೇಳಿದ್ದಾರೆ. ತಾಯಿ ಬುದ್ದಿ ಮಾತು ಹೇಳಿದರು ಕೇಳದ ಮಗಳು ಮತ್ತೆ ತನ್ನ ಹಳೆಯ ಚಾಳಿಯನ್ನು

ಪ್ರೀತಿಗೆ ಅಡ್ಡಿ | ಪ್ರಿಯತಮೆಯ ತಾಯಿ ಹಾಗೂ ಸಹೋದರನ ಬರ್ಬರ ಕೊಲೆ Read More »

ವಿದ್ಯಾರ್ಥಿನಿಗೆ ಕಿರುಕುಳ, ಜಾತಿ ನಿಂದನೆ | ಆರೋಪಿ ವಿರುದ್ಧ ಪುತ್ತೂರು ಮಹಿಳಾ ಠಾಣೆಯಲ್ಲಿ ಪ್ರಕರಣ ದಾಖಲು

ಪುತ್ತೂರು: ಶಾಂತಿಗೋಡು ಗ್ರಾಮದ ಯುವಕೋರ್ವ ವಿದ್ಯಾರ್ಥಿನಿಯೊರ್ವಳಿಗೆ ಕಿರುಕುಳ ನೀಡಿ ಜಾತಿ ನಿಂದನೆ ಮಾಡಿದ ಆರೋಪದಲ್ಲಿ ಯುವಕನ ವಿರುದ್ಧ ಪುತ್ತೂರು ಮಹಿಳಾ ಪೊಲೀಸ್ ಠಾಣೆಯಲ್ಲಿ ಕೇಸು ದಾಖಲಾಗಿದೆ. ಶಾಂತಿಗೋಡು ಗ್ರಾಮದ ರೋಶನ್ ಎಂಬಾತ ಕಿರುಕುಳ ನೀಡಿದ ಆರೋಪಿ. ವಿದ್ಯಾರ್ಥಿನಿ ನೀಡಿದ ದೂರಿನಂತೆ ಆತನ ವಿರುದ್ಧ ಪೋಕ್ಸೋ ಪ್ರಕರಣ ಮತ್ತು ಜಾತಿ ನಿಂದನೆ ಪ್ರಕರಣ ದಾಖಲಿಸಲಾಗಿದೆ. ಆರೋಪಿಯನ್ನು ಬಂಧಿಸಿದ ಪೊಲೀಸರು ನ್ಯಾಯಾಧೀಶರ ಮುಂದೆ ಹಾಜರುಪಡಿಸಿದಾಗ ನ್ಯಾಯಾಂಗ ಬಂಧನ ವಿಧಿಸಲಾಗಿದೆ.

ವಿದ್ಯಾರ್ಥಿನಿಗೆ ಕಿರುಕುಳ, ಜಾತಿ ನಿಂದನೆ | ಆರೋಪಿ ವಿರುದ್ಧ ಪುತ್ತೂರು ಮಹಿಳಾ ಠಾಣೆಯಲ್ಲಿ ಪ್ರಕರಣ ದಾಖಲು Read More »

ಪುತ್ತೂರು ಖಾಸಗಿ ಬಸ್ ನಿಲ್ದಾಣದ ಬಳಿಯಿರುವ ನಾಗದೇವರ ಕಟ್ಟೆಗೆ ಅನ್ಯಮತೀಯ ವ್ಯಕ್ತಿಯಿಂದ  ಹಾನಿ | ವಿಶ್ವ ಹಿಂದೂ ಪರಿಷದ್‌ ಬಜರಂಗದಳ ಖಂಡನೆ

ಪುತ್ತೂರು: ತುಳುವರು ಭಕ್ತಿಯಿಂದ ಪೂಜಿಸುವ ಪುತ್ತೂರು ಖಾಸಗಿ ಬಸ್ ನಿಲ್ದಾಣದ ಬಳಿಯಿರುವ ನಾಗದೇವರ ಕಟ್ಟೆಗೆ ಅನ್ಯಮತೀಯ ವ್ಯಕ್ತಿ ಹಾನಿಗೊಳಿಸಿದ್ದನ್ನು ವಿಶ್ವ ಹಿಂದೂ ಪರಿಷತ್, ಬಜರಂಗದಳ ತೀವ್ರವಾಗಿ ಖಂಡಿಸಿದೆ. ಅನ್ಯಮತೀಯ ವ್ಯಕ್ತಿ ಸಲಾಂ ಎಂಬಾತ ಹಾನಿಯುಂಟುಮಾಡಲು ಯತ್ನಿಸಿರುವುದನ್ನು ತೀವ್ರವಾಗಿ ಖಂಡಿಸುತ್ತಿದ್ದೇವೆ ಎಂದು ಸಂಘಟನೆಯ ಪ್ರಮುಖರು ತಿಳಿಸಿದ್ದಾರೆ. ಹಿಂದೂ ವಿರೋಧಿ ಶಕ್ತಿಗಳು ವಿನಾಕಾರಣ ಹಿಂದುಗಳ ಆರಾಧನ ಸ್ಥಳಗಳಿಗೆ ಹಾನಿಯುಂಟು ಮಾಡುತ್ತಿರುವ ಘಟನೆಗಳು ಹೆಚ್ಚುತ್ತಿದ್ದು.ಇಂತಹ ಮನಸ್ಥಿತಿಯ ವ್ಯಕ್ತಿಗಳ ಬಗ್ಗೆ ಸರಕಾರ ಹಾಗೂ ಪೊಲೀಸ್ ಇಲಾಖೆ ಸೂಕ್ತ ಕ್ರಮಕೈಗೊಳ್ಳಬೇಕು. ಇಲ್ಲದಿದ್ದರೆ ಮುಂದಿನ ದಿನಗಳಲ್ಲಿ

ಪುತ್ತೂರು ಖಾಸಗಿ ಬಸ್ ನಿಲ್ದಾಣದ ಬಳಿಯಿರುವ ನಾಗದೇವರ ಕಟ್ಟೆಗೆ ಅನ್ಯಮತೀಯ ವ್ಯಕ್ತಿಯಿಂದ  ಹಾನಿ | ವಿಶ್ವ ಹಿಂದೂ ಪರಿಷದ್‌ ಬಜರಂಗದಳ ಖಂಡನೆ Read More »

error: Content is protected !!
Scroll to Top