ಅಪರಾಧ

ಮನೆಯೊಳಗೆ ಕಳ್ಳ ನುಸುಳಿ ನಗದು ಕಳವು

ಮಿತ್ತಬಾಗಿಲು : ಮನೆಯಲ್ಲಿ ಯಾರೂ ಇಲ್ಲದ ವೇಳೆ ಮನೆಯ ಬೀಗ ಹೊಡೆದು, ಗಾಡ್ರೇಜಿನಿಂದ ಸುಮಾರು 25,000 ರೂ. ಕಳವು ಮಾಡಿದ ಘಟನೆ ಜ. 29 ರಂದು ರಾತ್ರಿ ನಡೆದಿದೆ. ಮಿತ್ತ ಬಾಗಿಲು ಗ್ರಾಮದ ಕಿಲ್ಲೂರಿನ ಯಶೋಧರ ಮತ್ತು ವೇದಾವತಿ ದಂಪತಿಯವರ ಮನೆಯಲ್ಲಿ ನಡೆದಿದೆ.   ಘಟನಾ ವಿರುದ್ದ ಬೆಳ್ತಂಗಡಿ ಪೋಲೀಸ್ ಠಾಣೆಯಲ್ಲಿ ದೂರು ದಾಖಲಾಗಿದೆ.

ಮನೆಯೊಳಗೆ ಕಳ್ಳ ನುಸುಳಿ ನಗದು ಕಳವು Read More »

ಪುತ್ತೂರಿನ ಉದ್ಯಮಿಯನ್ನು ಅಪಹರಿಸಿ 28 ಲ.ರೂ. ದರೋಡೆ

ಕಾರು ಅಡ್ಡಗಟ್ಟಿ ಅಜ್ಞಾತ ಸ್ಥಳಕ್ಕೆ ಒಯ್ದು ಚಿತ್ರಹಿಂಸೆ ಬೆಂಗಳೂರು: ಪುತ್ತೂರಿನ ಉದ್ಯಮಿಯೊಬ್ಬರನ್ನು ಸಿನಿಮೀಯ ರೀತಿಯಲ್ಲಿ ಅಪಹರಿಸಿ ಚಿತ್ರಹಿಂಸೆ ನೀಡಿ, 28 ಲಕ್ಷ ರೂ. ದೋಚಿರುವ ಘಟನೆ ಬೆಂಗಳೂರಿನ ನೆಲಮಂಗಲ ಗ್ರಾಮಾಂತರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ. ಪುತ್ತೂರು ತಾಲೂಕಿನ ಕೊಲ್ಪೆ ಗ್ರಾಮದ ನಿವಾಸಿ ಇಕ್ಬಾಲ್ ಅಪಹರಣಕ್ಕೆ ಒಳಗಾದವರಾಗಿದ್ದು, ಇವರು ಪೆಟ್ರೋಲ್‌ ಬಂಕ್ ಹಾಗೂ ಟ್ರಾನ್ಸ್‌ಪೋರ್ಟ್ ವ್ಯವಹಾರ ಹೊಂದಿದ್ದಾರೆ. ಜ.24ರಂದು ಇಕ್ಬಾಲ್‌ ದೇವನಹಳ್ಳಿಯ ಹೋಟೆಲ್‌ಗೆ ಹೋಗಿ ಅಲ್ಲಿ ಕೆಲಸ ಮುಗಿಸಿ ಬೆಂಗಳೂರಿನಲ್ಲಿರುವ ಸ್ನೇಹಿತ ಕರೀಂ ಮನೆಯಲ್ಲಿ ಉಳಿದುಕೊಂಡು ಮರುದಿನ

ಪುತ್ತೂರಿನ ಉದ್ಯಮಿಯನ್ನು ಅಪಹರಿಸಿ 28 ಲ.ರೂ. ದರೋಡೆ Read More »

ಮಂಗಳೂರಿಗೆ ಬರುತ್ತಿದ್ದ ಬಸ್‌ ತಡೆದು ದಾಂಧಲೆ ಎಸಗಿದ ರೌಡಿಯ ಕಾಲಿಗೆ ಗುಂಡೇಟು

ಬೆಂಗಳೂರು: ಬೆಂಗಳೂರಿನಿಂದ ಮಂಗಳೂರಿಗೆ ಬರುತ್ತಿದ್ದ ಖಾಸಗಿ ಬಸ್ಸನ್ನು ತಡೆದು ಲಾಂಗ್‌ನಿಂದ ಗಾಜು ಒಡೆದು ಹಾಕಿ ಹಲ್ಲೆ ಮಾಡಿ ಅಟ್ಟಹಾಸ ಮೆರೆದು ಪ್ರಯಾಣಿಕರಲ್ಲಿ ಭೀತಿ ಮೂಡಿಸಿದ್ದ ರೌಡಿಯ ಕಾಲಿಗೆ ಪೊಲೀಸರು ಗುಂಡು ಹಾರಿಸಿದ ಘಟನೆ ಹಾಸನ ಜಿಲ್ಲೆಯ ಶಾಂತಿಗ್ರಾಮ ಬಳಿ ನಡೆದಿದೆ. ಒಂದು ಕೊಲೆ, ಮೂರು ಕೊಲೆ ಯತ್ನ ಪ್ರಕರಣಗಳ ಆರೋಪಿಯಾಗಿರುವ ಮನು (23) ಎಂಬ ಈ ರೌಡಿಯನ್ನು ಬೆಂಗಳೂರಿನಲ್ಲಿ ಬಂಧಿಸಿ ನಗರ ಠಾಣೆ ಪೊಲೀಸರು ಹಾಸನಕ್ಕೆ ಕರೆ ತರುತ್ತಿದ್ದರು. ಈ ವೇಳೆ ಮೂತ್ರ ವಿಸರ್ಜನೆ ನೆಪ ಹೇಳಿ

ಮಂಗಳೂರಿಗೆ ಬರುತ್ತಿದ್ದ ಬಸ್‌ ತಡೆದು ದಾಂಧಲೆ ಎಸಗಿದ ರೌಡಿಯ ಕಾಲಿಗೆ ಗುಂಡೇಟು Read More »

ಬೆಳ್ಳಂಬೆಳಗ್ಗೆ ಭ್ರಷ್ಟರ ಬೇಟೆ : ವಿವಿಧೆಡೆ ಲೋಕಾಯುಕ್ತ ದಾಳಿ

ಪಿಡಿಒ ಮನೆಯಲ್ಲಿ ಮಷಿನ್‌ ಬಳಸಿ ನೋಟು ಎಣಿಕೆ ಬೆಂಗಳೂರು: ಲೋಕಾಯುಕ್ತ ಪೊಲೀಸರು ಇಂದು ಬೆಳ್ಳಂಬೆಳಗ್ಗೆ ಇನ್ನೊಂದು ಸುತ್ತಿನ ಭ್ರಷ್ಟರ ಬೇಟೆ ಆರಂಭಿಸಿದ್ದು, ಆದಾಯಕ್ಕಿಂತ ಅಧಿಕ ಆಸ್ತಿ ಗಳಿಸಿದ್ದ ಬೆಳಗಾವಿ, ಬಾಗಲಕೋಟೆ ಹಾಗೂ ಬೆಂಗಳೂರು ಸೇರಿದಂತೆ ಹಲವು ಜಿಲ್ಲೆಗಳ ಅಧಿಕಾರಿಗಳ ಮನೆ ಮೇಲೆ ದಾಳಿ ಮಾಡಿದ್ದಾರೆ. ಬೆಳಗಾವಿಯಲ್ಲಿ ಹಾಗೂ ಬೆಂಗಳೂರಿನ ಎರಡು ಸ್ಥಳಗಳಲ್ಲಿ ದಾಳಿ ನಡೆಸಿರುವ ಪೊಲೀಸರು ದಾಖಲೆಗಳ ಪರಿಶೀಲನೆ ನಡೆಸಿದ್ದಾರೆ. ಬಾಗಲಕೋಟೆಯ ವಿದ್ಯಾಗಿರಿಯಲ್ಲಿರುವ ಹೊಲಗೇರಿ ಪಿಡಿಒ ಹಿರೇಮಠ ನಿವಾಸದ ಮೇಲೆ ದಾಳಿ ನಡೆಸಲಾಗಿದೆ. ಲೋಕಾಯುಕ್ತ ಡಿವೈಎಸ್ಪಿ ಸಿದ್ದೇಶ್

ಬೆಳ್ಳಂಬೆಳಗ್ಗೆ ಭ್ರಷ್ಟರ ಬೇಟೆ : ವಿವಿಧೆಡೆ ಲೋಕಾಯುಕ್ತ ದಾಳಿ Read More »

ಕರುವಿನ ಬಾಲ ಕತ್ತರಿಸಿದ ಸುಳ್ಳು ಸುದ್ದಿ ಹರಡಿದ ವ್ಯಕ್ತಿ ವಿರುದ್ಧ ಕೇಸ್‌

ಉಡುಪಿ: ಮನೆಗೆ ಬಂದ ಸೇಲ್ಸ್‌ಮ್ಯಾನ್‌ ಕರುವಿನ ಬಾಲ ಕತ್ತರಿಸಿದ್ದಾನೆ ಎಂದು ಸೋಷಿಯಲ್‌ ಮೀಡಿಯಾದಲ್ಲಿ ಸುಳ್ಳು ಸುದ್ದಿ ಹರಡಿದ್ದ ವ್ಯಕ್ತಿಯ ವಿರುದ್ಧ ಕೋಟ ಪೊಲೀಸ್‌ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.ಗುಂಡ್ಮಿ ಗ್ರಾಮದ ಭಗವತಿ ರಸ್ತೆಯಲ್ಲಿರುವ ಅನಿಲ್‌ ಮಯ್ಯ ಎಂಬವರ ಮನೆಗೆ ವಸ್ತುಗಳನ್ನು ಮಾರಾಟ ಮಾಡಲು ಬಂದ ಮತಾಂಧ ವ್ಯಕ್ತಿಯೊಬ್ಬ ಮನೆಯವರು ವಸ್ತುಗಳನ್ನು ನಿರಾಕರಿಸಿದಾಗ ಮನೆಯ ಆವರಣದೊಳಗೆ ಮೇಯಲು ಬಿಟ್ಟಿದ್ದ ಕರುವಿನ ಬಾಲ ಕತ್ತರಿಸಿ ವಿಕೃತಿ ಮೆರೆದಿದ್ದಾನೆ ಎಂಬ ಸುದ್ದಿಯನ್ನು ಬುಧವಾರ ಸೋಷಿಯಲ್‌ ಮೀಡಿಯಾದಲ್ಲಿ ಹರಿಯಬಿಡಲಾಗಿತ್ತು. ಈ ಕುರಿತು ಯಾವುದೇ ಎಫ್‌ಐಆರ್‌

ಕರುವಿನ ಬಾಲ ಕತ್ತರಿಸಿದ ಸುಳ್ಳು ಸುದ್ದಿ ಹರಡಿದ ವ್ಯಕ್ತಿ ವಿರುದ್ಧ ಕೇಸ್‌ Read More »

ತಲೆಮರೆಸಿಕೊಂಡಿದ್ದ ಆರೋಪಿ ಅರೆಸ್ಟ್ |  ನ್ಯಾಲಯಕ್ಕೆ ಹಾಜರು ಪಡಿಸಿದ ಪೋಲಿಸರು

ಮಂಗಳೂರು : ಉತ್ತರ ಪೊಲೀಸ್ ಠಾಣೆಯಲ್ಲಿ ದಾಖಲಾದ ಪ್ರಕರಣಕ್ಕೆ ಸಂಬಂಧಿಸಿದಂತೆ ನ್ಯಾಯಾಲಯಕ್ಕೆ ಹಾಜರಾಗದೆ ತಲೆಮರೆಸಿಕೊಂಡಿದ್ದ ಆರೋಪಿಯನ್ನು ಬಂಧಿಸಿದ ಘಟನೆ ನಡೆದಿದೆ. ಆರೋಪಿಯನ್ನು ಹಾಸನ ಜಿಲ್ಲೆಯ ಸಕಲೇಶಪುರದ ಬಾಳುಪೇಟೆ ನಿವಾಸಿ ಕಿಶೋರ್ ಶೆಟ್ಟಿ ಎನ್ನಲಾಗಿದೆ. ಆರೋಪಿಯು 8 ವರ್ಷಗಳಿಂದ ನ್ಯಾಯಾಲಯಕ್ಕೆ ಹಾಜರಾಗದೆ ತಪ್ಪಿಸಿಕೊಂಡಿದ್ದರಿಂದ, ನ್ಯಾಯಾಲಯವು ಈ ಪ್ರಕರಣವನ್ನು LPC ಪ್ರಕರಣವೆಂದು ಪರಿಗಣಿಸಿತ್ತು. ಅದರಂತೆ ಆರೋಪಿಯ ಪತ್ತೆಗಾಗಿ ಮಂಗಳೂರು ಉತ್ತರ ಪೊಲೀಸ್ ಠಾಣೆಯ ಎಎಸ್ಸೆ ಗಂಗಾಧರ ಎನ್, ಎಚ್.ಸಿ ಚಂದ್ರಹಾಸ್ ಸನೀಲ್, ಎಚ್‌ಸಿ ಪುರುಷೋತ್ತಮ ಅವರನ್ನು ಒಳಗೊಂಡ ತಂಡವು ಕಾರ್ಯಾಚರಣೆ

ತಲೆಮರೆಸಿಕೊಂಡಿದ್ದ ಆರೋಪಿ ಅರೆಸ್ಟ್ |  ನ್ಯಾಲಯಕ್ಕೆ ಹಾಜರು ಪಡಿಸಿದ ಪೋಲಿಸರು Read More »

ಮಂಗಳೂರಿಗೆ ಬರುತ್ತಿದ್ದ ಬಸ್‌ ತಡೆದು ದಾಂಧಲೆ ಎಸಗಿದ ರೌಡಿ

ಲಾಂಗ್‌ನಿಂದ ಬಸ್‌ನ ಗಾಜು ಒಡೆದು ಹಾಕಿ ಪ್ರಯಾಣಿಕರಿಗೆ ಬೆದರಿಕೆ ಮಂಗಳೂರು: ಬೆಂಗಳೂರಿನಿಂದ ಮಂಗಳೂರಿಗೆ ಬರುತ್ತಿದ್ದ ಖಾಸಗಿ ಬಸ್ಸನ್ನು ವ್ಯಕ್ತಿಯೊಬ್ಬ ಅಡ್ಡಗಟ್ಟಿ ಗಾಜು ಒಡೆದು ಹಾಕಿ ದಾಂಧಲೆ ಎಸಗಿ ಪ್ರಯಾಣಿಕರನ್ನು ಭೀತಿಗೊಳಪಡಿಸಿದ ಘಟನೆ ಇಂದು ನಸುಕಿನ ಹೊತ್ತು ಹಾಸನದ ಬಳಿ ಸಂಭವಿಸಿದೆ. ದಾಂಧಲೆ ಎಸಗಿದ ವ್ಯಕ್ತಿ ಈ ಪರಿಸರದ ಪುಡಿ ರೌಡಿ ಎನ್ನಲಾಗಿದೆ. ಬಸ್‌ ತಡೆದು ಅಟ್ಟಹಾಸ ಮೆರೆದು ಲಾಂಗ್‌ನಿಂದ ಹಲ್ಲೆಗೆ ಯತ್ನಿಸಿದ್ದಾನೆ. ಘಟನೆ ಹಾಸನ ಹೊರವಲಯದ ಬೈಪಾಸ್‌ ರಸ್ತೆಯಲ್ಲಿ ನಡೆದಿದೆ. ಗುರುವಾರ ನಸುಕಿನ ಜಾವ 2 ಗಂಟೆಗೆ

ಮಂಗಳೂರಿಗೆ ಬರುತ್ತಿದ್ದ ಬಸ್‌ ತಡೆದು ದಾಂಧಲೆ ಎಸಗಿದ ರೌಡಿ Read More »

ಕರುವಿನ ಬಾಲ ಕತ್ತರಿಸಿದ ಕೃತ್ಯದ ವಿರುದ್ಧ ಹಿಂದು ಸಂಘಟನೆಗಳ ಆಕ್ರೋಶ

ಸೇಲ್ಸ್‌ಮ್ಯಾನ್‌ ಸೋಗಿನಲ್ಲಿ ಬಂದು ಕರುವಿನ ಬಾಲ ಕತ್ತರಿಸಿದ ದುಷ್ಕರ್ಮಿ ಉಡುಪಿ : ಬ್ರಹ್ಮಾವರ ತಾಲೂಕಿನ ಗುಂಡ್ಮಿ ಗ್ರಾಮದಲ್ಲಿ ಸೇಲ್ಸ್​​ಮ್ಯಾನ್ ಸೋಗಿನಲ್ಲಿ ಬಂದ ದುಷ್ಕರ್ಮಿಯೊಬ್ಬ ಅಂಗಳದಲ್ಲಿದ್ದ ಕರುವಿನ ಬಾಲ ಕತ್ತರಿಸಿ ಕ್ರೌರ್ಯ ಮೆರೆದ ಘಟನೆ ಬುಧವಾರ ಸಂಭವಿಸಿದೆ. ರಾಜ್ಯದಲ್ಲಿ ಇತ್ತೀಚೆಗಿನ ದಿನಗಳಲ್ಲಿ ಗೋವುಗಳ ಮೇಲೆ ಕ್ರೌರ್ಯ ಮೆರೆದ ಕೆಲವು ಘಟನೆಗಳು ನಡೆದಿದ್ದು, ಇದು ಇದೇ ಮಾದರಿಯ ಇನ್ನೊಂದು ಘಟನೆ ಎಂದು ಹಿಂದು ಸಂಘಟನೆಗಳು ಆಕ್ರೋಶ ವ್ದಯಕ್ತಪಡಿಸಿವೆ.ಉತ್ತರ ಕನ್ನಡ ಜಿಲ್ಲೆಯ ಹೊನ್ನಾವರ ಬಳಿ ಗರ್ಭ ಧರಿಸಿದ್ದ ಹಸುವಿನ ತಲೆ ಕಡಿದು

ಕರುವಿನ ಬಾಲ ಕತ್ತರಿಸಿದ ಕೃತ್ಯದ ವಿರುದ್ಧ ಹಿಂದು ಸಂಘಟನೆಗಳ ಆಕ್ರೋಶ Read More »

ಮಹಾಕುಂಭಮೇಳ ಕಾಲ್ತುಳಿತ : ಮೃತರ ಕುಟುಂಬಗಳಿಗೆ ತಲಾ 25 ಲ.ರೂ. ಪರಿಹಾರ

ತನಿಖೆಗೆ ನ್ಯಾಯಾಂಗ ಆಯೋಗ ರಚನೆ ; ಒಂದೇ ದಿನ 8 ಕೋಟಿ ಜನ ಭೇಟಿ ಪ್ರಯಾಗರಾಜ್: ಮಹಾಕುಂಭಮೇಳದಲ್ಲಿ ಬುಧವಾರ ಮುಂಜಾನೆ ಸಂಭವಿಸಿದ ಕಾಲ್ತುಳಿತದಲ್ಲಿ 30 ಜನರು ಮೃತಪಟ್ಟು 60 ಮಂದಿ ಗಾಯಗೊಂಡ ಬಳಿಕ ಪ್ರಯಾಗ್‌ರಾಜ್‌ನಲ್ಲಿ ನಿಯಮಗಳನ್ನು ಇನ್ನಷ್ಟು ಬಿಗುಗೊಳಿಸಲಾಗಿದೆ. ಜನಜಂಗುಳಿ ಮತ್ತು ವಾಹನ ದಟ್ಟಣೆ ನಿಭಾಯಿಸಲು ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್‌ ಮಾರ್ಗಸೂಚಿ ನೀಡಿದ್ದು, ಸ್ನಾನಕ್ಕೆ ತೆರಳುವವರನ್ನು ತಡೆದಿಡಲು ಅಲ್ಲಲ್ಲಿ ಹೋಲ್ಡಿಂಗ್‌ ಪಾಯಿಂಟ್‌ ರಚಿಸಲು ಮತ್ತು ವಾಹನಗಳ ಓಡಾಟಕ್ಕೆ ನಿರ್ಬಂಧ ಹಾಕಲು ಸೂಚಿಸಿದ್ದಾರೆ. ಕಾಲ್ತುಳಿತದಲ್ಲಿ ಮೃತಪಟ್ಟವರ ಕುಟುಂಬಗಳಿಗೆ ತಲಾ

ಮಹಾಕುಂಭಮೇಳ ಕಾಲ್ತುಳಿತ : ಮೃತರ ಕುಟುಂಬಗಳಿಗೆ ತಲಾ 25 ಲ.ರೂ. ಪರಿಹಾರ Read More »

ಟೇಕಾಫ್‌ಗೆ ರೆಡಿಯಾಗಿದ್ದ ವಿಮಾನದ ಎಮರ್ಜೆನ್ಸಿ ಬಾಗಿಲು ತೆರೆದ ಪ್ರಯಾಣಿಕ

ಬೆಂಗಳೂರು : ಜೋಧ್‌ಪುರದಿಂದ ಬೆಂಗಳೂರಿಗೆ ಬರುತ್ತಿದ್ದ ಇಂಡಿಗೊ ವಿಮಾನ ಟೇಕಾಫ್‌ ಆಗಲು ತಯಾರಾಗುತ್ತಿದ್ದಂತೆ ಪ್ರಯಾಣಿಕರೊಬ್ಬರು ತುರ್ತು ನಿರ್ಗಮನ ಬಾಗಿಲು ತೆರೆದ ಘಟನೆ ಇಂದು ಬೆಳಗ್ಗೆ ಸಂಭವಿಸದೆ. ವಿಮಾನ ಇನ್ನೇನು ಟೇಕ್​ ಆಫ್​ ಆಗಬೇಕು ಎನ್ನುವ ಹೊತ್ತಲ್ಲಿ ಪ್ರಯಾಣಿಕ ಎಮರ್ಜೆನ್ಸಿ ಎಕ್ಸಿಟ್ ತೆರೆದಿದ್ದಾರೆ.ವಿಮಾನ ಬೆಳಗ್ಗೆ 10.10ಕ್ಕೆ ಹೊರಡಬೇಕಿತ್ತು, ಇದ್ದಕ್ಕಿದ್ದಂತೆ ಪ್ರಯಾಣಿಕರೊಬ್ಬರು ಫ್ಲಾಪ್ ಎಳೆದು ತುರ್ತು ನಿರ್ಗಮನ ದ್ವಾರವನ್ನು ತೆರೆದರು. ವಿಮಾನದಲ್ಲಿ ಗೊಂದಲ, ಭಯ ಸೃಷ್ಟಿಯಾಗಿದ್ದು, ಪ್ರಯಾಣಿಕನನ್ನು ಬಂಧಿಸಿ ಸಿಐಎಸ್‌ಎಫ್‌ಗೆ ಒಪ್ಪಿಸಲಾಗಿದೆ. ಆಕ್ಸಿಸ್ ಬ್ಯಾಂಕ್‌ ಉದ್ಯೋಗಿಯಾಗಿರುವ ಸಿರಾಜ್ ಕಿದ್ವಾಯಿ ತಪ್ಪಾಗಿ

ಟೇಕಾಫ್‌ಗೆ ರೆಡಿಯಾಗಿದ್ದ ವಿಮಾನದ ಎಮರ್ಜೆನ್ಸಿ ಬಾಗಿಲು ತೆರೆದ ಪ್ರಯಾಣಿಕ Read More »

error: Content is protected !!
Scroll to Top