ಅಪರಾಧ

ಕಡಬ ಶ್ರೀ ಆದಿ ನಾಗಬ್ರಹ್ಮಣ ಮೊಗೇರ್ಕಳ, ಕೊರಗಜ್ಜ ದೈವಸ್ಥಾನದಿಂದ ಕಳ್ಳತನ

ಕಡಬ : ಕೋಡಿಂಬಾಳ ಗ್ರಾಮದ ರಾಮನಗರದಲ್ಲಿರುವ ಶ್ರೀ ಆದಿ ನಾಗಬ್ರಹ್ಮ – ಮೊಗೇರ್ಕಳ ಹಾಗೂ ಕೊರಗಜ್ಜ ದೈವಸ್ಥಾನದ ಕಾಣಿಕೆ ಹುಂಡಿಗಳನ್ನು ಮುರಿದು ಕಳ್ಳರು ಹಣ ಕಳವುಗೈದ ಘಟನೆ ನಡೆದಿದೆ. ಶನಿವಾರ ದಿನ ದೈವಸ್ಥಾನದಲ್ಲಿ ಅಗೆಲು ಸೇವೆ ನಡೆದಿದ್ದು ಅನ್ನಸಂತರ್ಪಣೆ ಬಳಿಕ ಎಲ್ಲರೂ ತೆರಳಿದ್ದರು. ಅದೇ ದಿನ ರಾತ್ರಿ ಈ ಕಳ್ಳತನ ನಡೆದಿದೆ. ನ.16ರ ರಾತ್ರಿ 2 ಗಂಟೆಯ ಸುಮಾರಿಗೆ ದೈವಸ್ಥಾನ ಬಳಿ ಇರುವ ಮನೆಯವರಿಗೆ ಶಬ್ದ ಕೇಳಿ ಎಚ್ಚರಗೊಂಡಿದ್ದರು. ನ.17ರ ಮುಂಜಾನೆ ದೈವಸ್ಥಾನಕ್ಕೆ ಬಂದು ನೋಡಿದಾಗ ಕಳ್ಳತನ […]

ಕಡಬ ಶ್ರೀ ಆದಿ ನಾಗಬ್ರಹ್ಮಣ ಮೊಗೇರ್ಕಳ, ಕೊರಗಜ್ಜ ದೈವಸ್ಥಾನದಿಂದ ಕಳ್ಳತನ Read More »

ನಕ್ಸಲ್‌ ವಿಕ್ರಂ ಗೌಡ ಎನ್‌ಕೌಂಟರ್‌ : ಗೃಹ ಸಚಿವರು ಹೇಳಿದ್ದಿಷ್ಟು

2-3 ನಕ್ಸಲರಿಗೆ ಎನ್‌ಕೌಂಟರ್‌ನಲ್ಲಿ ಗುಂಡೇಟು? ಬೆಂಗಳೂರು: ವಿಕ್ರಂ ಗೌಡ ಎಂಬ ಗ್ರೇಡೆಡ್ ನಕ್ಸಲ್‌ನನ್ನು ಪೊಲೀಸರು ಸೋಮವಾರ ಸಂಜೆ ಎನ್‌ಕೌಂಟರ್ ಮಾಡಿದ್ದಾರೆ ಎಂದು ಗೃಹಸಚಿವ ಜಿ. ಪರಮೇಶ್ವರ್ ಹೇಳಿದ್ದಾರೆ.ಎನ್‌ಕೌಂಟರ್ ವಿಚಾರವಾಗಿ ಇಂದು ಬೆಂಗಳೂರಿನಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿ, ಕಳೆದ 20 ವರ್ಷಗಳಿಂದ ವಿಕ್ರಂನನ್ನು ಪೊಲೀಸರು ಹುಡುಕುತ್ತಿದ್ದರು. ಆದರೆ ವಿಕ್ರಂ ತಪ್ಪಿಸಿಕೊಂಡು ಓಡಾಡುತ್ತಿದ್ದ. ಅನೇಕ ಎನ್‌ಕೌಂಟರ್‌ಗಳಲ್ಲಿ ವಿಕ್ರಂ ಗೌಡ ತಪ್ಪಿಸಿಕೊಂಡಿದ್ದ. ಸೋಮವಾರ ಸಂಜೆ ವಿಕ್ರಂ ಗೌಡ ಎನ್‌ಕೌಂಟರ್ ಆಗಿದೆ. ಸೋಮವಾರ ಪೊಲೀಸರ ಮೇಲೆ ವಿಕ್ರಂ ಶೂಟ್ ಮಾಡಿದ್ದ. ಪೊಲೀಸರು ಪ್ರತಿದಾಳಿ ನಡೆಸಿ

ನಕ್ಸಲ್‌ ವಿಕ್ರಂ ಗೌಡ ಎನ್‌ಕೌಂಟರ್‌ : ಗೃಹ ಸಚಿವರು ಹೇಳಿದ್ದಿಷ್ಟು Read More »

ಮಾಜಿ ಗೃಹ ಸಚಿವರಿಗೆ ಕಲ್ಲೇಟು : ಆಸ್ಪತ್ರೆಗೆ ದಾಖಲು

ಕಾರಿನ ಮೇಲೆ ಕಲ್ಲು ತೂರಿದ ದುಷ್ಕರ್ಮಿಗಳು ಮುಂಬಯಿ: ವಿಧಾನಸಭೆ ಚುನಾವಣೆ ಕಾವು ತೀವ್ರವಾಗಿರುವ ಮಹಾರಾಷ್ಟ್ರದ ಕಟೋಲ್‌ನಲ್ಲಿ ಶರದ್ ಪವಾರ್ ಬಣದ ನಾಯಕ ಹಾಗೂ ಮಹಾರಾಷ್ಟ್ರದ ಮಾಜಿ ಗೃಹ ಸಚಿವ ಅನಿಲ್ ದೇಶಮುಖ್ ಕಾರಿನ ಮೇಲೆ ಕಲ್ಲು ತೂರಾಟ ನಡೆದು ಅನಿಲ್ ದೇಶಮುಖ್ ಗಾಯಗೊಂಡಿದ್ದಾರೆ. ದೇಶಮುಖ್ ಅವರ ತಲೆಗೆ ಕಲ್ಲು ತಾಗಿ ರಕ್ತಸ್ರಾವವಾಗಿದೆ. ತಕ್ಷಣ ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿತ್ತು. ದಾಳಿ ನಡೆಸಿದವರ ಬಗ್ಗೆ ಇನ್ನೂ ಮಾಹಿತಿ ಸಿಕ್ಕಿಲ್ಲ.ಮಹಾರಾಷ್ಟ್ರ ಚುನಾವಣಾ ಪ್ರಚಾರದ ಕೊನೆಯ ದಿನವಾದ ಸೋಮವಾರ ಸಂಜೆ ಐದು ಗಂಟೆಗೆ

ಮಾಜಿ ಗೃಹ ಸಚಿವರಿಗೆ ಕಲ್ಲೇಟು : ಆಸ್ಪತ್ರೆಗೆ ದಾಖಲು Read More »

ಅಪ್ರಾಪ್ತೆಯನ್ನು ಪುಸಲಾಯಿಸಿ ಲೈಂಗಿಕ ಕಿರುಕುಳ | ಪುತ್ತೂರು ಮಹಿಳಾ ಠಾಣೆಯಲ್ಲಿ ಪೋಕ್ಸೋ ಪ್ರಕರಣ ದಾಖಲು

ಪುತ್ತೂರು: ಪಿ.ಜಿ.ಯೊಂದರಲ್ಲಿದ್ದ ಕಾಸರಗೋಡು ಮೂಲದ ಅಪ್ರಾಪ್ತೆಯನ್ನು ಪುಸಲಾಯಿಸಿ ಕರೆದೊಯ್ತು ಲೈಂಗಿಕ ಕಿರುಕುಳ ನೀಡಿದ ಆರೋಪದಲ್ಲಿ ಓರ್ವನ ವಿರುದ್ಧ ಪುತ್ತೂರು ಮಹಿಳಾ ಠಾಣೆಯಲ್ಲಿ ಪೋಕ್ಸೋ ಪ್ರಕರಣ ದಾಖಲಾಗಿದೆ. ಗುಲ್ಬರ್ಗ ಮೂಲದ ಯುವಕ ಕಾರ್ತಿಕ್ ಎಂಬಾತನ ವಿರುದ್ಧ ಪೋಕ್ಸೋ ಪ್ರಕರಣ ದಾಖಲಾಗಿರುವುದು. ಪುತ್ತೂರಿನ ಪ್ರತಿಷ್ಠಿತ ಕಾಲೇಜೊಂದರ ಪ್ರಥಮ ಪಿಯುಸಿ ವಿದ್ಯಾರ್ಥಿನಿ ಪಿ.ಜಿ.ಯಿಂದ ಕಾಲೇಜಿಗೆ ಹೋಗುತ್ತಿದ್ದರು. ನ.16ರಿಂದ ಆಕೆ ಪಿ.ಜಿ.ಯಿಂದ ನಾಪತ್ತೆಯಾಗಿದ್ದರು. ಈ ಕುರಿತು ವಿದ್ಯಾರ್ಥಿನಿಯ ತಾಯಿ ಪುತ್ತೂರು ಮಹಿಳಾ ಪೊಲೀಸ್ ಠಾಣೆಯಲ್ಲಿ ದೂರು ನೀಡಿದ್ದರು. ಅಪ್ರಾಪ್ತ ವಿದ್ಯಾರ್ಥಿನಿಯನ್ನು ಗುಲ್ಬರ್ಗ ಮೂಲದ

ಅಪ್ರಾಪ್ತೆಯನ್ನು ಪುಸಲಾಯಿಸಿ ಲೈಂಗಿಕ ಕಿರುಕುಳ | ಪುತ್ತೂರು ಮಹಿಳಾ ಠಾಣೆಯಲ್ಲಿ ಪೋಕ್ಸೋ ಪ್ರಕರಣ ದಾಖಲು Read More »

ಮೂರು ರಾಜ್ಯಗಳ ಪೊಲೀಸರಿಗೆ ಬೇಕಾಗಿದ್ದ ವಿಕ್ರಂ ಗೌಡ

ದಶಕಗಳ ಬಳಿಕ ಆರಂಭವಾದ ನಕ್ಸಲ್‌ ಚಟುವಟಿಕೆಗೆ ಆರಂಭದಲ್ಲೇ ಹೊಡೆತ ಕೊಟ್ಟ ಎನ್‌ಕೌಂಟರ್‌ ಕಾರ್ಕಳ: ನಕ್ಸಲ್ ನಿಗ್ರಹ ಪಡೆ ಉಡುಪಿ ಜಿಲ್ಲೆಯ ಹೆಬ್ರಿ ಠಾಣೆ ವ್ಯಾಪ್ತಿಯ ಕಬ್ಬಿನಾಲೆ ಅರಣ್ಯ ಪ್ರದೇಶದಲ್ಲಿ ಸೋಮವಾರ ರಾತ್ರಿ ನಡೆಸಿದ ಎನ್​ಕೌಂಟರ್​ನಲ್ಲಿ ನಕ್ಸಲ್ ನಾಯಕ‌ ವಿಕ್ರಂ ಗೌಡ ಹತ್ಯೆಯಾಗಿದ್ದಾನೆ. ಇದರೊಂದಿಗೆ ಪಶ್ಚಿಮ ಘಟ್ಟ ಪ್ರದೇಶದಲ್ಲಿ ನಕ್ಸಲ್‌ ಚಟುವಟಿಕೆ ಮತ್ತೊಮ್ಮೆ ಶುರುವಾಗಿದ್ದು ನಿಜ ಎನ್ನುವುದು ಸಾಬೀತಾಗಿದೆ. ಹೆಬ್ರಿಯ ಕಬ್ಬಿನಾಲೆ ಸಮೀಪದ ಕಾಡಂಚಿನ ನಿವಾಸಿಯಾಗಿದ್ದ ವಿಕ್ರಂ ಗೌಡ ಕರ್ನಾಟಕ, ಕೇರಳ, ತಮಿಳುನಾಡಿನಲ್ಲಿ ನಕ್ಸಲ್‌ ಚಟುವಟಿಕೆಗಳನ್ನು ನಡೆಸುತ್ತಿದ್ದು, ಮೂರು

ಮೂರು ರಾಜ್ಯಗಳ ಪೊಲೀಸರಿಗೆ ಬೇಕಾಗಿದ್ದ ವಿಕ್ರಂ ಗೌಡ Read More »

ನಕ್ಸಲ್‌ ನಾಯಕ ವಿಕ್ರಂ ಗೌಡ ಎನ್‌ಕೌಂಟರ್‌ಗೆ ಬಲಿ

ಹೆಬ್ರಿ ಬಳಿ ನಕ್ಸಲ್‌ ತಡರಾತ್ರಿ ಪೊಲೀಸರಿಗೆ ಮುಖಾಮುಖಿಯಾದ ನಕ್ಸಲರು ಹೆಬ್ರಿ : ಹೆಬ್ರಿಯ ಸೀತಾಬೈಲು ಎಂಬಲ್ಲಿ ನ.18ರ ತಡರಾತ್ರಿ ನಕ್ಸಲ್‌ ನಿಗ್ರಹ ಪಡೆ (ಎಎನ್ಎಫ್) ನಡೆಸಿದ ಎನ್‌ಕೌಂಟರ್‌ಗೆ ನಕ್ಸಲ್ ನಾಯಕ ವಿಕ್ರಂ ಗೌಡ ಬಲಿಯಾಗಿದ್ದಾನೆ.ಒಂದೂವರೆ ದಶಕದಿಂದ ನಕ್ಸಲ್‌ ಚಟುವಟಿಕೆಯಲ್ಲಿ ತೊಡಗಿದ್ದ ಹೆಬ್ರಿ ಕಬ್ಬಿನಾಲೆ ಮೂಲದ ವಿಕ್ರಂ ಗೌಡ ಪೊಲೀಸರಿಗೆ ತಲೆನೋವಾಗಿದ್ದ. ಅವನನ್ನು ಹಿಡಿಯಲು ಪೊಲೀಸರು ಮತ್ತು ನಕ್ಸಲ್‌ ನಿಗ್ರಹ ಪಡೆಯವರು ಸತತವಾಗಿ ಪ್ರಯತ್ನಿಸುತ್ತಿದ್ದರು. ನಿನ್ನೆ ರಾತ್ರಿ ಹೆಬ್ರಿ ಸಮೀಪ ಸೀತಾಂಬೈಲು ಎಂಬಲ್ಲಿ ಎಎನ್‌ಎಫ್‌ ಪಡೆಗೆ ನಕ್ಸಲರು ಎದುರಾಗಿದ್ದು,

ನಕ್ಸಲ್‌ ನಾಯಕ ವಿಕ್ರಂ ಗೌಡ ಎನ್‌ಕೌಂಟರ್‌ಗೆ ಬಲಿ Read More »

ಮೇಸ್ತ್ರೀ ಕೆಲಸ ಸಹಾಯಕರಾಗಿದ್ದ ಶಿವಪ್ಪ ಸಾವಿನ ಪ್ರಕರಣ | ಮಾಲಕ ಸಹಿತ ಮೂವರ ವಿರುದ್ಧ ಪ್ರಕರಣ ದಾಖಲು

ಪುತ್ತೂರು: ಸಾಲ್ಮರ ಕೆರೆಮೂಲೆ ನಿವಾಸಿ ಶಿವಪ್ಪ ಅವರು ಮೃತಪಟ್ಟ ವಿಚಾರಕ್ಕೆ ಸಂಬಂಧಿಸಿ ಕೆಲಸ ಮಾಡುತ್ತಿದ್ದ ಮಾಲಕರ ಸಹಿತ ಮೂವರ ವಿರುದ್ಧ ಪುತ್ತೂರು ನಗರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಮೃತ ಶಿವಪ್ಪ ಅವರ ಅಳಿಯ ಶಶಿ ಕೆರೆಮೂಲೆ ಅವರು ನೀಡಿದ ದೂರಿನಂತೆ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದಾರೆ. ನ.16ರಂದು ಬೆಳಿಗ್ಗೆ ತಾವೋ ವುಡ್ ಇಂಡಸ್ಟ್ರೀಸ್ ನ ಮಾಲೀಕರಾದ ಹೆನ್ರಿ ತಾಮ್ರ ಅವರು ಶಿವಪ್ಪ ಅವರನ್ನು ಮರದ ಕೆಲಸಕ್ಕೆ ಕರೆದುಕೊಂಡು ಹೋಗಿದ್ದು ಬಳಿಕ ಅವರನ್ನು ಹೆನ್ರಿ ತಾವೋ, ಸ್ಪ್ಯಾನಿ  ಹಾಗೂ ಇನ್ನೊಬ್ಬರು

ಮೇಸ್ತ್ರೀ ಕೆಲಸ ಸಹಾಯಕರಾಗಿದ್ದ ಶಿವಪ್ಪ ಸಾವಿನ ಪ್ರಕರಣ | ಮಾಲಕ ಸಹಿತ ಮೂವರ ವಿರುದ್ಧ ಪ್ರಕರಣ ದಾಖಲು Read More »

ತಹಶೀಲ್ದಾರ್‌ ಕಚೇರಿಯಲ್ಲಿ ಆತ್ಮಹತ್ಯೆ ಪ್ರಕರಣ : ರಾಜ್ಯಪಾಲರಿಗೆ ಬಂದ ಪತ್ರದಲ್ಲಿದೆ ಬೇರೆಯೇ ಮಾಹಿತಿ

ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್‌ ಪಿಎ ಆರೋಪಿಯಾಗಿರುವ ಪ್ರಕರಣಕ್ಕೆ ತಿರುವು ಬೆಂಗಳೂರು: ಬೆಳಗಾವಿ ತಹಶೀಲ್ದಾರ್ ಕಚೇರಿಯಲ್ಲಿ ನ.5ರಂದು ಸಂಭವಿಸಿದ ಎಸ್‌ಡಿಎ ರುದ್ರೇಶ್ (ರುದ್ರಣ್ಣ ಯಡವಣ್ಣವರ) ಆತ್ಮಹತ್ಯೆ ಕೊಲೆ ಪ್ರಕರಣ ಎಂಬುದಾಗಿ ರಾಜ್ಯಪಾಲರಿಗೆ ಅನಾಮಧೇಯ ಪ್ರತವೊಂದು ಬರುವುದರೊಂದಿಗೆ ಈ ಪ್ರಕರಣ ತಿರುವು ಪಡೆದುಕೊಂಡಿದೆ. ರುದ್ರೇಶ್ ಆತ್ಮಹತ್ಯೆ ಮಾಡಿಕೊಂಡಿಲ್ಲ ಕೊಲೆ ಎಂಬ ಒಕ್ಕಣೆಯುಳ್ಳ ಅನಾಮಧೇಯ ಪತ್ರವೊಂದು ರಾಜ್ಯಪಾಲರು, ಮಾನವ ಹಕ್ಕುಗಳ ಆಯೋಗದ ಅಧ್ಯಕ್ಷರು, ನಗರ ಪೊಲೀಸ್ ಆಯುಕ್ತರು, ಜಿಲ್ಲಾಧಿಕಾರಿ, ಪ್ರಕರಣದ ತನಿಖಾಧಿಕಾರಿ ಸೇರಿ ಹಲವರಿಗೆ ಬಂದಿದೆ. ಬೆಳಗಾವಿ ತಹಶೀಲ್ದಾರ್ ಕಚೇರಿಯಲ್ಲಿ ಎಸ್‌ಡಿಎ

ತಹಶೀಲ್ದಾರ್‌ ಕಚೇರಿಯಲ್ಲಿ ಆತ್ಮಹತ್ಯೆ ಪ್ರಕರಣ : ರಾಜ್ಯಪಾಲರಿಗೆ ಬಂದ ಪತ್ರದಲ್ಲಿದೆ ಬೇರೆಯೇ ಮಾಹಿತಿ Read More »

ಪಿಕಪ್‍ ನಲ್ಲಿ ಕಾರ್ಮಿಕನ ಮೃತದೇಹ ತಂದು ಇಳಿಸಿ ಹೋದ ಮಾಲಕ | ಪ್ರತಿಭಟನೆಗೆ ಇಳಿದ ದಲಿತ ಸಂಘಟನೆ, ಹಿಂದೂ ಮುಖಂಡರು | ಪಿಕಪ್‍ ಜಪ್ತಿ

ಪುತ್ತೂರು: ಕಾರ್ಮಿಕನ ಮೃತ ದೇಹವನ್ನು ಪಿಕಪ್ ವಾಹನದಲ್ಲಿ ತಂದು ಮನೆಯ ಮುಂದಿನ ರಸ್ತೆ ಸಮೀಪ ಮಲಗಿಸಿ ಹೋದ ಘಟನೆಗೆ ಸಂಬಂಧಿಸಿದಂತೆ ಪೊಲೀಸರು ತನಿಖೆ ನಿಧಾನಗೊಳಿಸಿ ಹಿನ್ನಲೆಯಲ್ಲಿ ದಲಿತ ಸಂಘಟನೆ ಹಾಗೂ ಹಿಂದೂ ಮುಖಂಡರು ಪ್ರತಿಭಟನೆ ನಡೆಸಿ ಪಿಕಪ್ ವಾಹನವನ್ನು ಜಪ್ತಿ ಮಾಡಿದ ಘಟನೆ ಭಾನುವಾರ ನಡೆದಿದೆ. ಸಾಲ್ಮರ ಕೆರೆಮೂಲೆ ನಿವಾಸಿ ಸಿಮೆಂಟ್ ಸಾರಣೆ ಮೇ ಜೊತೆ ಸಹಾಯಕರಾಗಿ ಹೋಗುತ್ತಿದ್ದ ಕೂಲಿ ಕಾರ್ಮಿಕ, ಪರಿಶಿಷ್ಟ ಜಾತಿಗೆ ಸೇರಿದ ಶಿವಪ್ಪ (69) ಶನಿವಾರ ಮೃತಪಟ್ಟಿದ್ದರು. ಶಿವಪ್ಪ ಅವರು ಬೆಳಿಗ್ಗೆ ಮನೆಯಲ್ಲಿದ್ದ

ಪಿಕಪ್‍ ನಲ್ಲಿ ಕಾರ್ಮಿಕನ ಮೃತದೇಹ ತಂದು ಇಳಿಸಿ ಹೋದ ಮಾಲಕ | ಪ್ರತಿಭಟನೆಗೆ ಇಳಿದ ದಲಿತ ಸಂಘಟನೆ, ಹಿಂದೂ ಮುಖಂಡರು | ಪಿಕಪ್‍ ಜಪ್ತಿ Read More »

ಸಗಣಿ ರಾಶಿಯಡಿಯಲ್ಲಿತ್ತು ಲಕ್ಷಗಟ್ಟಲೆ ರೂಪಾಯಿ!

ಭುವನೇಶ್ವರ:ಸಗಣಿ ರಾಶಿಯಲ್ಲಿ ಬಚ್ಚಿಟ್ಟಿದ್ದ 20 ಲಕ್ಷ ರೂ.ಯನ್ನು ಪೊಲೀಸರು ವಶಪಡಿಸಿಕೊಂಡ ಘಟನೆ ಒಡಿಶಾದ ಬಾಲಾಸೋರ್ ಜಿಲ್ಲೆಯ ಹಳ್ಳಿಯೊಂದರಲ್ಲಿ ನಡೆದಿದೆ. ಹೈದರಾಬಾದ್ ಮತ್ತು ಒಡಿಶಾ ಪೊಲೀಸ್ ತಂಡ ದಾಳಿ ನಡೆಸಿ ಕಮರ್ದಾ ಪೊಲೀಸ್ ಠಾಣಾ ವ್ಯಾಪ್ತಿಯ ಬಡಮಂಡರುಣಿ ಗ್ರಾಮದಲ್ಲಿ ಹಣವನ್ನು ವಶಪಡಿಸಿಕೊಂಡಿದ್ದಾರೆ ಎಂದು ಅಧಿಕಾರಿಯೊಬ್ಬರು ತಿಳಿಸಿದ್ದಾರೆ. ಗೋಪಾಲ್ ಎಂಬಾತ ಹೈದರಾಬಾದ್‌ನ ಕೃಷಿ ಆಧಾರಿತ ಕಂಪನಿಯೊಂದರಲ್ಲಿ ಕೆಲಸ ಮಾಡುತ್ತಿದ್ದು, ಕಂಪನಿಯ ಲಾಕರ್‌ನಿಂದ 20 ಲಕ್ಷಕ್ಕೂ ಹೆಚ್ಚು ಹಣವನ್ನು ಕಳ್ಳತನ ಮಾಡಿದ್ದ. ಬಳಿಕ ತನ್ನ ಸೋದರ ಮಾವ ರವೀಂದ್ರ ಬೆಹೆರಾ ಮೂಲಕ

ಸಗಣಿ ರಾಶಿಯಡಿಯಲ್ಲಿತ್ತು ಲಕ್ಷಗಟ್ಟಲೆ ರೂಪಾಯಿ! Read More »

error: Content is protected !!
Scroll to Top