ಅಪರಾಧ

ಆಡಳಿತ ವೈದ್ಯಾಧಿಕಾರಿ ವಿರುದ್ಧ ಸಾಮಾಜಿಕ ಜಾಲತಾಣದಲ್ಲಿ ಅವಹೇಳನಕಾರಿ ಸಂದೇಶ | ಪೊಲೀಸ್ ಠಾಣೆಯಿಂದ ಹಲವರಿಗೆ ನೋಟೀಸ್‍

ಪುತ್ತೂರು: ಸರಕಾರಿ ಆಸ್ಪತ್ರೆಯ ಆಡಳಿತ ವೈದ್ಯಾಧಿಕಾರಿ ಡಾ.ಆಶಾ ಪುತ್ತೂರಾಯ ಅವರ ವಿರುದ್ಧ ಸಾಮಾಜಿಕ ಜಾಲತಾಣದಲ್ಲಿ ಅವಹೇಳನಕಾರಿ ಶಬ್ದ ಬಳಕೆ ಮಾಡಿ ಸಂದೇಶ ರವಾನಿಸಿದ ಆರೋಪಕ್ಕೆ ಸಂಬಂಧಿಸಿ ಹಲವರಿಗೆ ಪೊಲೀಸ್ ಠಾಣೆಯಿಂದ ನೋಟೀಸ್ ಜಾರಿಯಾಗಿದೆ. ವೈದ್ಯಾಧಿಕಾರಿ ಡಾ. ಆಶಾ ಪುತ್ತೂರಾಯ ಅವರ ಕರ್ತವ್ಯಕ್ಕೆ ಅಡ್ಡಿಪಡಿಸಿದ ಹಿನ್ನೆಲೆಯಲ್ಲಿ ಪುತ್ತೂರು ನಗರ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿತ್ತು. ಈ ಕುರಿತು ಆರೋಪಿಯನ್ನು ಬಂಧಿಸುವಂತೆ ಆಗ್ರಹಿಸಿ ಧರಣಿಯೂ ನಡೆಯಿತು. ಆದರೆ ಕೆಲವರು ಡಾ. ಆಶಾ ಪುತ್ತೂರಾಯ ವಿರುದ್ಧ ಸಾಮಾಜಿಕ ಜಾಲತಾಣದಲ್ಲಿ ನಿಂದನಾತ್ಮಕ ಶಬ್ದ […]

ಆಡಳಿತ ವೈದ್ಯಾಧಿಕಾರಿ ವಿರುದ್ಧ ಸಾಮಾಜಿಕ ಜಾಲತಾಣದಲ್ಲಿ ಅವಹೇಳನಕಾರಿ ಸಂದೇಶ | ಪೊಲೀಸ್ ಠಾಣೆಯಿಂದ ಹಲವರಿಗೆ ನೋಟೀಸ್‍ Read More »

ಹೆಂಡತಿ, ಮಗನನ್ನು ಗುಂಡಿಕ್ಕಿ ಸಾಯಿಸಿ ಉದ್ಯಮಿ ಆತ್ಮಹತ್ಯೆ

ಮೈಸೂರು ಮೂಲದ ಸಾಫ್ಟ್‌ವೇರ್‌ ಕಂಪನಿ ಮಾಲೀಕನಿಂದ ಘೋರ ಕೃತ್ಯ ಮೈಸೂರು:‌ ಮೈಸೂರು ಮೂಲದ ಅಮೆರಿಕದ ಉದ್ಯಮಿಯೊಬ್ಬರು ಹೆಂಡತಿ ಮತ್ತು ಮಗನನ್ನು ಗುಂಡಿಕ್ಕಿ ಸಾಯಿಸಿ ಬಳಿಕ ತಾನು ಆತ್ಮಹತ್ಯೆ ಮಾಡಿಕೊಂಡಿರುವ ದಾರುಣ ಘಟನೆ ಸಂಭವಿಸಿದೆ. ಇನ್ನೋರ್ವ ಮಗ ಹೊರಗಿದ್ದ ಕಾರಣ ಬದುಕುಳಿದಿದ್ದಾನೆ. ಹರ್ಷವರ್ಧನ ಕಿಕ್ಕೇರಿ ಈ ಕೃತ್ಯವೆಸಗಿದ ಉದ್ಯಮಿ. ಅಮೆರಿಕದ ವಾಷಿಂಗ್ಟನ್ ಬಳಿಯ ನ್ಯೂಕ್ಯಾಸಲ್‌ನಲ್ಲಿ ಪತ್ನಿ ಶ್ವೇತಾ ಮತ್ತು 14 ವರ್ಷದ ಮಗನನ್ನು ಗುಂಡಿಕ್ಕಿ ಕೊಂದಿದ್ದಾರೆ. ಬಳಿಕ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಏ.24ರಂದು ನಡೆದಿದೆ. ದಂಪತಿಯ ಕಿರಿಯ ಮಗ

ಹೆಂಡತಿ, ಮಗನನ್ನು ಗುಂಡಿಕ್ಕಿ ಸಾಯಿಸಿ ಉದ್ಯಮಿ ಆತ್ಮಹತ್ಯೆ Read More »

ಮಂಗಳೂರು: ಅಕ್ರಮ ದಾಸ್ತಾನು ಇಟ್ಟಿದ್ದ 500 ಕ್ವಿಂಟಾಲ್‌ ಅಕ್ಕಿಪತ್ತೆ

ಅನ್ನಭಾಗ್ಯದ ಅಕ್ಕಿಯನ್ನು ಪಾಲಿಷ್‌ ಮಾಡಿ ಮಾರಾಟ ಮಾಡುತ್ತಿರುವ ಶಂಕೆ ಮಂಗಳೂರು: ಮಂಗಳೂರಿನ ಖಾಸಗಿ ಗೋಡೌನ್ ಒಂದರಲ್ಲಿ ನೂರಾರು ಮೂಟೆ ಅಕ್ಕಿ ಅಕ್ರಮವಾಗಿ ಸಂಗ್ರಹಿಸಿರುವುದು ಪತ್ತೆಯಾಗಿದೆ. ಮಂಗಳೂರು ನಗರದ ಬಂದರು ಸಮೀಪದ ಅಕ್ಕಿ ದಾಸ್ತಾನು ಗೋಡೌನ್​​ಗೆ ಜಿಲ್ಲಾಧಿಕಾರಿ ಮುಲ್ಲೈ ಮುಗಿನಲ್ ಸೂಚನೆಯಂತೆ ಸಹಾಯಕ ಆಯುಕ್ತ ಹರ್ಷವರ್ಧನ್ ಹಾಗೂ ಆಹಾರ ಇಲಾಖೆಯ ಉಪನಿರ್ದೇಶಕರು ದಾಳಿ ನಡೆಸಿದಾಗ ಈ ಅಕ್ರಮ ಬೆಳಕಿಗೆ ಬಂದಿದೆ. ಸುಮಾರು 500 ಕ್ವಿಂಟಾಲ್‌ ಅಕ್ಕಿ ಅಕ್ರಮ ದಾಸ್ತಾನು ಇಟ್ಟಿರುವುದು ಪತ್ತೆಯಾಗಿದೆ. ಇದು ಅನ್ನಭಾಗ್ಯದ ಅಕ್ಕಿಯಾಗಿರಬಹುದು ಎಂಬ ಶಂಕೆ

ಮಂಗಳೂರು: ಅಕ್ರಮ ದಾಸ್ತಾನು ಇಟ್ಟಿದ್ದ 500 ಕ್ವಿಂಟಾಲ್‌ ಅಕ್ಕಿಪತ್ತೆ Read More »

ಕುಡುಪು ಕೊಲೆ ಪ್ರಕರಣ : ಯುವಕನ ಶವ ಹಸ್ತಾಂತರ

ಇನ್‌ಸ್ಪೆಕ್ಟರ್‌ ವಿರುದ್ಧ ಕರ್ತವ್ಯ ಲೋಪ ಆರೋಪ – ಉನ್ನತ ತನಿಖೆಗೆ ಒತ್ತಾಯ ಮಂಗಳೂರು: ಕುಡುಪು ಭಟ್ರ ಕಲ್ಲುರ್ಟಿ ದೈವಸ್ಥಾಣದ ಸಮೀಪ ಕೊಲೆಯಾದ ಕೇರಳದ ಯುವಕನ ಶವವನ್ನು ಆತನ ಕುಟುಂಬದವರಿಗೆ ಹಸ್ತಾಂತರಿಸಲಾಗಿದೆ ಎಂದು ಪೊಲೀಸ್‌ ಮೂಲಗಳು ತಿಳಿಸಿವೆ. ಕೇರಳದ ವಯನಾಡು ಜಿಲ್ಲೆಯ ಸುಲ್ತಾನ್ ಬತ್ತೇರಿ ತಾಲೂಕಿನ ಪುಲಪಳ್ಳಿ ನಿವಾಸಿಯಾಗಿದ್ದ ಯುವಕ ಅಶ್ರಫ್‌ ಎಂಬಾತ ಏ.27ರಂದು ಯುವಕರ ಗುಂಪಿನ ಹೊಡೆತಕ್ಕೆ ಸಿಕ್ಕಿ ಸಾವಿಗೀಡಾಗಿದ್ದಾನೆ. ಮಂಗಳೂರಿನ ವೆನ್‌ಲಾಕ್ ಶವಾಗಾರದಲ್ಲಿದ್ದ ಅಶ್ರಫ್‌ನ ಮೃತದೇಹವನ್ನು ಅವನ ಕುಟುಂಬಸ್ಥರು ಗುರುತಿಸಿ ಪೊಲೀಸರಿಂದ ಪಡೆದುಕೊಂಡಿದ್ದಾರೆ. ಮಧ್ಯರಾತ್ರಿ ಕೇರಳದಿಂದ

ಕುಡುಪು ಕೊಲೆ ಪ್ರಕರಣ : ಯುವಕನ ಶವ ಹಸ್ತಾಂತರ Read More »

ಕ್ರಿಕೆಟ್‌ ಪಂದ್ಯಾಟದ ವೇಳೆ ಯುವಕನ ಹತ್ಯೆ : 20 ಮಂದಿ ಬಂಧನ

ಕೊನೆಗೂ ಕುಡುಪು ಕೊಲೆ ರಹಸ್ಯ ಬೇಧಿಸಿದ ಪೊಲೀಸರು ಮಂಗಳೂರು : ಕುಡುಪು ಭಟ್ರ ಕಲ್ಲುರ್ಟಿ ದೈವಸ್ಥಾನ ಸಮೀಪ ಅಪರಿಚಿತ ಯುವಕನ್ನು ಹೊಡೆದು ಸಾಯಿಸಿದ ಪ್ರಕರಣಕ್ಕೆ ಸಂಬಂಧಿಸಿ 20 ಮಂದಿ ಆರೋಪಿಗಳನ್ನು ಪೊಲೀಸರು ಬಂಧಿಸಿದ್ದಾರೆ. ಕ್ರಿಕೆಟ್‌ ಪಂದ್ಯಾಟ ನಡೆಯುತ್ತಿರುವಾಗ ಈ ವ್ಯಕ್ತಿ ಮಧ್ಯೆ ಬಂದು ಕಿರಿಕ್‌ ಮಾಡಿದಾಗ ಯುವಕರ ಗುಂಪು ಕೆರಳಿ ಅವನನ್ನು ಹಿಗ್ಗಾಮುಗ್ಗಾ ಥಳಿಸಿದೆ. ಈ ಹೊಡೆತಗಳಿಂದ ಸಾವು ಸಂಭವಿಸಿದೆ ಎಂದು ವಿಧಿವಿಜ್ಞಾನ ವರದಿ ದೃಢಪಡಿಸಿದೆ. ಏ.27ರಂದು ಸಂಜೆ ನಿರ್ಜನ ಸ್ಥಳದಲ್ಲಿ ಸಂಶಯಾಸ್ಪದ ರೀತಿಯಲ್ಲಿ ಯುವಕನ ಮೃತದೇಹ

ಕ್ರಿಕೆಟ್‌ ಪಂದ್ಯಾಟದ ವೇಳೆ ಯುವಕನ ಹತ್ಯೆ : 20 ಮಂದಿ ಬಂಧನ Read More »

ಹೋಟೆಲ್‌ನಲ್ಲಿ ಭೀಕರ ಬೆಂಕಿ ಅವಘಡ : 15 ಮಂದಿ ಜೀವಂತ ದಹನ

ಕೋಲ್ಕತ್ತಾ: ಕೋಲ್ಕತ್ತಾದ ಬುರ್ರಾಬಜಾರ್​ನಲ್ಲಿರುವ ಹೋಟೆಲ್​ನಲ್ಲಿ ಭೀಕರ ಅಗ್ನಿ ಅವಘಡ ಸಂಭವಿಸಿದ್ದು, 15 ಮಂದಿ ಜೀವಂತ ಸುಟ್ಟು ಕರಕಲಾಗಿರುವ ಘಟನೆ ಸಂಭವಿಸಿದೆ. ಅನೇಕ ಮಂದಿಗೆ ಸುಟ್ಟ ಗಾಯಗಳಾಗಿದ್ದು, ಆಸ್ಪತ್ರೆಗೆ ದಾಖಲಿಸಲಾಗಿದೆ. ಹಣ್ಣಿನ ಮಾರುಕಟ್ಟೆ ಪ್ರದೇಶದಲ್ಲಿರುವ ಹೋಟೆಲ್ ರಿತುರಾಜ್‌ನಲ್ಲಿ ನಿನ್ನೆ ರಾತ್ರಿ 8.30ರ ಸುಮಾರಿಗೆ ಬೆಂಕಿ ಕಾಣಿಸಿಕೊಂಡಿದ್ದು, ಬೆಂಕಿಯಿಂದ ತಪ್ಪಿಸಿಕೊಳ್ಳುವ ಪ್ರಯತ್ನದಲ್ಲಿ ಹೋಟೆಲ್ ಸಿಬ್ಬಂದಿಯೊಬ್ಬರು ಮಹಡಿಯಿಂದ ಹಾರಿ ಸಾವನ್ನಪ್ಪಿದ್ದಾರೆ. ಹೋಟೆಲ್‌ನಿಂದ 15 ಶವಗಳನ್ನು ಹೊರತೆಗೆಯಲಾಗಿದ್ದು, ಹಲವರನ್ನು ರಕ್ಷಿಸಲಾಗಿದೆ ಎಂದು ಪೊಲೀಸ್ ಆಯುಕ್ತ ಮನೋಜ್ ವರ್ಮಾ ತಿಳಿಸಿದ್ದಾರೆ. ಕೋಲ್ಕತ್ತ ನಗರದ ಹಳೆ

ಹೋಟೆಲ್‌ನಲ್ಲಿ ಭೀಕರ ಬೆಂಕಿ ಅವಘಡ : 15 ಮಂದಿ ಜೀವಂತ ದಹನ Read More »

ಕುಡುಪು ಕೊಲೆ ಪ್ರಕರಣ : ಹಲವು ಮಂದಿ ವಶ

ಕೋಮು ವೈಷಮ್ಯಕ್ಕೆ ಎಡೆಮಾಡಿಕೊಡದಂತೆ ಉಸ್ತುವಾರಿ ಸಚಿವ ದಿನೇಶ್‌ ಗುಂಡೂರಾವ್‌ ಮನವಿ ಮಂಗಳೂರು : ಮಂಗಳೂರಿನ ಹೊರವಲಯದ ಕುಡುಪು ಬಳಿ ಯುವಕನನ್ನು ಕಲ್ಲಿನಿಂದ ಹೊಡೆದು ಬರ್ಬರವಾಗಿ ಹತ್ಯೆ ಮಾಡಿರುವ ಘಟನೆ ಅಂತ್ಯಂತ ಖಂಡನೀಯ ಎಂದು ದಕ್ಷಿಣ ಕನ್ನಡ ಜಿಲ್ಲಾ ಉಸ್ತುವಾರಿ ಸಚಿವ ದಿನೇಶ್ ಗುಂಡೂರಾವ್ ತಿಳಿಸಿದ್ದಾರೆ. ಈ ಕುರಿತು ಎಕ್ಸ್‌ನಲ್ಲಿ ಪೋಸ್ಟ್ ಮಾಡಿರುವ ಸಚಿವ ದಿನೇಶ್ ಗುಂಡೂರಾವ್, ಕ್ರಿಕೆಟ್ ಆಟ ಆಡುವ ವೇಳೆ ಆಟಗಾರರು ಹಾಗೂ ಅನ್ಯ ಕೋಮಿನ ಯುವಕನ ನಡುವೆ ಮಾತಿನ ಚಕಮಕಿ ನಡೆದು, ಯುವಕನ ಮೇಲೆ

ಕುಡುಪು ಕೊಲೆ ಪ್ರಕರಣ : ಹಲವು ಮಂದಿ ವಶ Read More »

ಕಾಶ್ಮೀರ : 48 ಪ್ರವಾಸಿ ತಾಣಗಳು ಬಂದ್‌

ಉಗ್ರರ ಇನ್ನಷ್ಟು ದಾಳಿಗಳು ನಡೆಯುವ ಮಾಹಿತಿ ಹಿನ್ನೆಲೆಯಲ್ಲಿ ಕ್ರಮ ಶ್ರೀನಗರ: ಪಹಲ್ಗಾಮ್‌ ದಾಳಿಯ ಮಾದರಿಯಲ್ಲೇ ಉಗ್ರರು ಇನ್ನಷ್ಟು ಪ್ರವಾಸಿ ತಾಣಗಳ ಮೇಲೆ ದಾಳಿ ನಡೆಸುವ ಸಾಧ್ಯತೆಯಿದೆ ಎಂಬ ಗುಪ್ತಚರ ಮಾಹಿತಿ ದೊರಕಿದ ಹಿನ್ನೆಲೆಯಲ್ಲಿ ಜಮ್ಮು-ಕಾಶ್ಮೀರ ಸರಕಾರ 48 ಪ್ರವಾಸಿ ತಾಣಗಳನ್ನು ಮುಚ್ಚಿದೆ. ಕಾಶ್ಮೀರದಲ್ಲಿ ಒಟ್ಟು 87 ಪ್ರಮುಖ ಪ್ರವಾಸಿ ತಾಣಗಳಿದ್ದು, ಈ ಪೈಕಿ 47 ತಾಣಗಳಿಗೆ ಪ್ರವಾಸಿಗರು ಭೇಟಿ ನೀಡುವುದನ್ನು ನಿರ್ಬಂಧಿಸಿ ಸರಕಾರ ಆದೇಶ ಹೊರಡಿಸಿದೆ. ಪಹಲ್ಗಾಮ್‌ ಉಗ್ರ ದಾಳಿಯ ಬಳಿಕ ಕಾಶ್ಮೀರ ಕಣಿವೆಯಲ್ಲಿರುವ ಕೆಲವು ಸ್ಲೀಪರ್‌

ಕಾಶ್ಮೀರ : 48 ಪ್ರವಾಸಿ ತಾಣಗಳು ಬಂದ್‌ Read More »

ಹಿಂದೂ ದ್ವೇಷದ ಪೋಸ್ಟ್‌ ಹಾಕಿದ ಮಂಗಳೂರಿನ ವೈದ್ಯೆ ವಿರುದ್ಧ ಎಫ್‌ಐಆರ್‌

ನೌಕರಿಯಿಂದ ವಜಾಗೊಳಿಸಿದ ಹೈಲ್ಯಾಂಡ್‌ ಆಸ್ಪತ್ರೆ ಮಂಗಳೂರು : ಪಹಲ್ಗಾಮ್‌ ಉಗ್ರ ದಾಳಿಯ ಬಳಿಕ ಸೋಷಿಯಲ್‌ ಮೀಡಿಯಾದಲ್ಲಿ ವಿವಾದಾತ್ಮಕ ಪೋಸ್ಟ್‌ ಒಂದನ್ನು ಹಾಕಿದ್ದ ಮಂಗಳೂರಿನ ಪ್ರತಿಷ್ಠಿತ ಖಾಸಗಿ ಆಸ್ಪತ್ರೆಯ ವೈದ್ಯೆಯನ್ನು ನೌಕರಿಯಿಂದ ವಜಾ ಮಾಡಲಾಗಿದೆ. ಡಾ.ಅಫೀಫ ಫಾತಿಮಾ ಎಂಬಾಕೆ ಜಮ್ಮು ಕಾಶ್ಮೀರದ ಪಹಲ್ಗಾಮ್ ದಾಳಿ ನಂತರ ಭಾರತ ಹಾಗೂ ಪಾಕಿಸ್ಥಾನ ಮಧ್ಯೆ ಉದ್ವಿಗ್ನ ಪರಿಸ್ಥಿತಿ ಇರುವ ಸಂದರ್ಭದಲ್ಲಿಯೇ ʼಕಾಪಾಡಿ, ಕೊಳಕು ಹಿಂದೂಗಳು ನನ್ನ ಹಿಂದೆ ಬಿದ್ದಿದ್ದಾರೆ. ಹೌದು ನಾನು ಭಾರತೀಯಳು, ಹೌದು ನಾನು ಭಾರತವನ್ನು ದ್ವೇಷಿಸುತ್ತೇನೆ’ ಎಂದು ಸೋಷಿಯಲ್‌

ಹಿಂದೂ ದ್ವೇಷದ ಪೋಸ್ಟ್‌ ಹಾಕಿದ ಮಂಗಳೂರಿನ ವೈದ್ಯೆ ವಿರುದ್ಧ ಎಫ್‌ಐಆರ್‌ Read More »

ಕಾರಿನಲ್ಲೇ ಗುಂಡು ಹಾರಿಸಿಕೊಂಡು ಉದ್ಯಮಿ ಆತ್ಮಹತ್ಯೆ

ಕಾರ್ಕಳ : ಮಂಗಳೂರಿನಲ್ಲಿ ವಾಸವಿದ್ದ ಮೂಲತಃ ಕಾರ್ಕಳದವರಾದ ಉದ್ಯಮಿ ದಿಲೀಪ್‌ ಎನ್‌.ಆರ್‌. ಎಂಬವರು ಮಂಗಳವಾರ ನಸುಕಿನ ಹೊತ್ತು ಕಾರ್ಕಳದ ನಿಟ್ಟೆ ಸಮೀಪ ಕಾರಿನಲ್ಲಿ ಗುಂಡು ಹಾರಿಸಿಕೊಂಡು ಆತ್ಮಹತ್ಯೆ ಮಾಡಿಕೊಂಡಿರುವ ಆಘಾತಕಾರಿ ಘಟನೆ ಸಂಭವಿಸಿದೆ. ಕಾರ್ಕಳ ಪುರಸಭೆಯ ಮಾಜಿ ಉಪಾಧ್ಯಕ್ಷರಾಗಿದ್ದರು.ವಾರ ನಸುಕಿನ ಹೊತ್ತು ಕಾರ್ಕಳದ ನಿಟ್ಟೆ ಸಮೀಪ ಕಾರಿನಲ್ಲಿ ಗುಂಡು ಹಾರಿಸಿಕೊಂಡು ಆತ್ಮಹತ್ಯೆ ಮಾಡಿಕೊಂಡಿರುವ ಆಘಾತಕಾರಿ ಘಟನೆ ಸಂಭವಿಸಿದೆ. ಮಂಗಳೂರಿನಲ್ಲಿ ವಾಸವಿದ್ದ ದಿಲೀಪ್‌ ಎನ್‌.ಆರ್‌. ಅವರು ನಿನ್ನೆ ರಾತ್ರಿ ಅಲ್ಲಿಂದ ತನ್ನ ಕ್ವಿಡ್‌ ಕಾರಿನಲ್ಲಿ ಹೊರಟವರು ನಿಟ್ಟೆ ದೂಪಕಟ್ಟೆಯ

ಕಾರಿನಲ್ಲೇ ಗುಂಡು ಹಾರಿಸಿಕೊಂಡು ಉದ್ಯಮಿ ಆತ್ಮಹತ್ಯೆ Read More »

error: Content is protected !!
Scroll to Top