ಅಪರಾಧ

ನಟ ದರ್ಶನ್‌ಗೆ ಕೊನೆಗೂ ಸಿಕ್ಕಿತು ಜಾಮೀನು

ಬೆನ್ನುನೋವಿಗೆ ಚಿಕಿತ್ಸೆ ಪಡೆದುಕೊಳ್ಳಲು ಆರು ವಾರ ಬಿಡುಗಡೆ ಭಾಗ್ಯ ಬೆಂಗಳೂರು : ರೇಣುಕಾಸ್ವಾಮಿ ಕೊಲೆ ಆರೋಪದ ಮೇಲೆ ಕಳೆದ ಸುಮಾರು ಐದು ತಿಂಗಳಿಂದ ಜೈಲಿನಲ್ಲಿರುವ ನಟ ದರ್ಶನ್​ಗೆ ಹೈಕೋರ್ಟ್ ಮಧ್ಯಂತರ ಜಾಮೀನು ಮಂಜೂರು ಮಾಡಿದೆ. ದರ್ಶನ್​ ಆರೋಗ್ಯ ಸಮಸ್ಯೆಯನ್ನು ಪರಿಗಣನೆಗೆ ತೆಗೆದುಕೊಂಡು ಆರು ವಾರಗಳ ಅವಧಿಯ ಮಧ್ಯಂತರ ಜಾಮೀನು ನೀಡಲಾಗಿದ್ದು, ಮಧ್ಯಂತರ ಜಾಮೀನಿಗೆ ಬಹಳಷ್ಟು ಷರತ್ತುಗಳನ್ನು ನ್ಯಾಯಾಲಯ ವಿಧಿಸಿದೆ. ಈ ಹಿಂದೆ ಕೆಳಹಂತದ ನ್ಯಾಯಾಲಯದಲ್ಲಿ ಸಲ್ಲಿಸಲಾಗಿದ್ದ ದರ್ಶನ್ ಜಾಮೀನು ಅರ್ಜಿ ತಿರಸ್ಕೃತಗೊಂಡಿತ್ತು. ಬಳಿಕ ದರ್ಶನ್ ಪರ ವಕೀಲರಾದ […]

ನಟ ದರ್ಶನ್‌ಗೆ ಕೊನೆಗೂ ಸಿಕ್ಕಿತು ಜಾಮೀನು Read More »

ಅಕ್ರಮ ಕೋಳಿ ಅಂಕಕ್ಕೆ ದಾಳಿ | ಐವರ ಬಂಧನ, ಕೋಳಿ, ನಗದು ವಶಕ್ಕೆ

ಪುತ್ತೂರು : ಅಕ್ರಮವಾಗಿ ನಡೆಯುತ್ತಿದ್ದ ಕೋಳಿ ಅಂಕಕ್ಕೆ ಪುತ್ತೂರು ಗ್ರಾಮಾಂತರ ಪೊಲೀಸರು ದಾಳಿ ನಡೆಸಿ ಘಟನೆ ಇಂದು ಬೆಳಿಗ್ಗೆ ನಡೆದಿದೆ. ಒಳಮೊಗ್ರು ಗ್ರಾಮದ ಕುಟೀನೋಪಿನಡ್ಕ ಎಂಬಲ್ಲಿನ ಗೇರುಬೀಜ ನೆಡುತೋಪು ಗುಡ್ಡದಲ್ಲಿ ಈ ಕೋಳಿ ಅಂಕ ನಡೆಯುತ್ತಿತ್ತು. ಖಚಿತ ಮಾಹಿತಿ ಹಿನ್ನಲೆಯಲ್ಲಿ  ಪುತ್ತೂರು ಗ್ರಾಮಾಂತರ ಪೊಲೀಸ್ ಠಾಣಾಧಿಕಾರಿ, ಸಿಬ್ಬಂದಿಗಳು ದಾಳಿ ನಡೆಸಿ ಸ್ಥಳದಿಂದ ಕೋಳಿ ಅಂಕಕ್ಕೆ ಬಳಸಿದ 5 ಕೋಳಿ ಮತ್ತು 7710 ರೂ. ನಗದು ವಶಕ್ಕೆ ಪಡೆದು, ಐವರನ್ನು ಬಂಧಿಸಿದ್ದಾರೆ. ಠಾಣೆಯ ಪಿ.ಎಸ್.ಐ ಜಂಬೂರಾಜ್ ಮಹಾಜನ್, ಸಿಬ್ಬಂದಿಗಳಾದ

ಅಕ್ರಮ ಕೋಳಿ ಅಂಕಕ್ಕೆ ದಾಳಿ | ಐವರ ಬಂಧನ, ಕೋಳಿ, ನಗದು ವಶಕ್ಕೆ Read More »

ಬ್ಯಾಂಕ್‌ನಿಂದ 13 ಕೋಟಿ ರೂ. ಮೌಲ್ಯದ 17 ಕೆಜಿ ಚಿನ್ನಾಭರಣ ಕಳ್ಳತನ | ಕಿಟಿಕಿ ಸರಳು ಮುರಿದು ಒಳನುಗ್ಗಿದ್ದ ಕಳ್ಳರು; ಬ್ಯಾಂಕ್‌ ಒಳಗೆಲ್ಲ ಮೆಣಸಿನ ಪುಡಿ

ದಾವಣಗೆರೆ: ಜಿಲ್ಲೆಯ ನ್ಯಾಮತಿಯ ಸ್ಟೇಟ್‌ ಬ್ಯಾಂಕ್‌ ಆಫ್‌ ಇಂಡಿಯಾ (ಎಸ್‌ಬಿಐ) ಶಾಖೆಯಿಂದ ಕಳ್ಳರು ಬರೋಬ್ಬರಿ 17 ಕೆಜಿ ಚಿನ್ನಾಭರಣ ಕಳ್ಳತನ ಮಾಡಿದ್ದಾರೆ. ಈ ಕುರಿತು ಬ್ಯಾಂಕ್‌ ಮ್ಯಾನೇಜರ್‌ ಸುನಿಲ್‌ ಕುಮಾರ್‌ ಯಾದವ್‌ ಪೊಲೀಸರಿಗೆ ದೂರು ನೀಡಿದ್ದಾರೆ. 12.95 ಕೋಟಿ ರೂ. ಮೌಲ್ಯದ 17.705 ಕೆಜಿ ಚಿನ್ನಾಭರಣವನ್ನು ಕಳ್ಳರು ಕದ್ದೊಯ್ದಿದ್ದಾರೆ ಎಂದು ದೂರಿನಲ್ಲಿ ಮಾಹಿತಿ ನೀಡಿದ್ದಾರೆ.ನ್ಯಾಮತಿ ನಗರದ ನೆಹರು ರಸ್ತೆಯಲ್ಲಿರುವ ಸ್ಟೇಟ್​ ಬ್ಯಾಂಕ್​ ಆಫ್​ ಇಂಡಿಯಾ ಶಾಖೆಯ ಕಿಟಕಿ ಸರಳುಗಳನ್ನು ಮುರಿದು ಲಾಕರ್‌ನಲ್ಲಿದ್ದ ನಗದು ಹಾಗೂ ಚಿನ್ನಾಭರಣವನ್ನು ಕಳ್ಳರು

ಬ್ಯಾಂಕ್‌ನಿಂದ 13 ಕೋಟಿ ರೂ. ಮೌಲ್ಯದ 17 ಕೆಜಿ ಚಿನ್ನಾಭರಣ ಕಳ್ಳತನ | ಕಿಟಿಕಿ ಸರಳು ಮುರಿದು ಒಳನುಗ್ಗಿದ್ದ ಕಳ್ಳರು; ಬ್ಯಾಂಕ್‌ ಒಳಗೆಲ್ಲ ಮೆಣಸಿನ ಪುಡಿ Read More »

ಮುಂದುವರಿದ ಉಗ್ರ ಬೇಟೆ : ಇನ್ನೋರ್ವ ಭಯೋತ್ಪಾದಕ ಹತ್ಯೆ | ಸೇನೆಯ ಶ್ವಾನ ಫ್ಯಾಂಟಮ್‌ ಗುಂಡು ತಗಲಿ ಸಾವು

ಜಮ್ಮು: ಜಮ್ಮು ಪ್ರದೇಶದ ಅಖ್ನೂರ್ ಸೆಕ್ಟರ್‌ನಲ್ಲಿ ಇಂದು ಬೆಳಗ್ಗೆ ಮತ್ತೆ ಭದ್ರತಾ ಪಡೆ ಮತ್ತು ಉಗ್ರರ ನಡುವೆ ಗುಂಡಿನ ಚಕಮಕಿ ನಡೆದಿದೆ. ಇಲ್ಲಿನ ಹಳ್ಳಿಯೊಂದರಲ್ಲಿ ಅಡಗಿಕೊಂಡಿದ್ದ ಭಯೋತ್ಪಾದಕನನ್ನು ಮಂಗಳವಾರ ಬೆಳಗ್ಗೆ ನಡೆದ ಗುಂಡಿನ ಚಕಮಕಿಯಲ್ಲಿ ಭದ್ರತಾ ಪಡೆಗಳು ಹೊಡೆದುರುಳಿಸಿವೆ ಎಂದು ಅಧಿಕಾರಿಗಳು ಮಾಹಿತಿ ನೀಡಿದ್ದಾರೆ. ಇಲ್ಲಿಯವರೆಗೆ ಇಬ್ಬರು ಭಯೋತ್ಪಾದಕರು ಹತರಾಗಿದ್ದಾರೆ ಮತ್ತು ಜೋಗ್ವಾನ್ ಗ್ರಾಮದ ಅಸ್ಸಾನ್ ದೇವಸ್ಥಾನದ ಸಮೀಪವಿರುವ ಅರಣ್ಯ ಪ್ರದೇಶದಲ್ಲಿ ಅಡಗಿರುವ ಮೂರನೇ ಉಗ್ರನನ್ನು ಮುಗಿಸಲು ಪ್ರಯತ್ನಗಳು ನಡೆಯುತ್ತಿವೆ ಎಂದು ಅವರು ತಿಳಿಸಿದ್ದಾರೆ. ಸೋಮವಾರ ಬೆಳಗ್ಗೆ

ಮುಂದುವರಿದ ಉಗ್ರ ಬೇಟೆ : ಇನ್ನೋರ್ವ ಭಯೋತ್ಪಾದಕ ಹತ್ಯೆ | ಸೇನೆಯ ಶ್ವಾನ ಫ್ಯಾಂಟಮ್‌ ಗುಂಡು ತಗಲಿ ಸಾವು Read More »

ದೇವಸ್ಥಾನದ ಉತ್ಸವದಲ್ಲಿ ಭೀಕರ ಪಟಾಕಿ ಸ್ಫೋಟ : 154 ಮಂದಿಗೆ ಗಾಯ; 10 ಮಂದಿಯ ಸ್ಥಿತಿ ಚಿಂತಾಜನಕ | ಕಾಸರಗೋಡಿನ ನೀಲೇಶ್ವರದಲ್ಲಿ ಈ ವರ್ಷದ ಮೊದಲ ಉತ್ಸವದ ಮೊದಲ ದಿನವೇ ಸಂಭವಿಸಿದ ದುರಂತ

ಕಾಸರಗೋಡು: ಕಾಸರಗೋಡು ಸಮೀಪ ನೀಲೇಶ್ವರಂನಲ್ಲಿ ದೇವಸ್ಥಾನದ ಉತ್ಸವದ ವೇಳೆ ಭೀಕರ ಪಟಾಕಿ ದುರಂತ ಸಂಭವಿಸಿ, 154 ಮಂದಿ ಗಾಯಗೊಂಡಿದ್ದು 10 ಮಂದಿಯ ಸ್ಥಿತಿ ಚಿಂತಾಜನಕವಾಗಿದೆ. ಗಾಯಾಳುಗಳನ್ನು ಕಾಸರಗೋಡು, ಕಣ್ಣೂರು ಮತ್ತು ಮಂಗಳೂರಿನ ವಿವಿಧ ಆಸ್ಪತ್ರೆಗಳಿಗೆ ದಾಖಲಿಸಲಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.ವೀರರ್ಕಾವು ದೇವಸ್ಥಾನದ ಬಳಿಯ ಪಟಾಕಿ ಸಂಗ್ರಹಾಗಾರಕ್ಕೆ ಬೆಂಕಿ ತಗುಲಿ ಈ ಅವಘಡ ಸಂಭವಿಸಿರುವ ಶಂಕೆ ವ್ಯಕ್ತವಾಗಿದೆ. ಮಂಗಳವಾರ ತಡರಾತ್ರಿ 12.30ರ ಸುಮಾರಿಗೆ ಅಪಘಾತ ಸಂಭವಿಸಿದೆ. ಜಿಲ್ಲಾಧಿಕಾರಿ, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಸೇರಿದಂತೆ ಜಿಲ್ಲಾಡಳಿತದ ಉನ್ನತ ಅಧಿಕಾರಿಗಳು ಸ್ಥಳಕ್ಕೆ

ದೇವಸ್ಥಾನದ ಉತ್ಸವದಲ್ಲಿ ಭೀಕರ ಪಟಾಕಿ ಸ್ಫೋಟ : 154 ಮಂದಿಗೆ ಗಾಯ; 10 ಮಂದಿಯ ಸ್ಥಿತಿ ಚಿಂತಾಜನಕ | ಕಾಸರಗೋಡಿನ ನೀಲೇಶ್ವರದಲ್ಲಿ ಈ ವರ್ಷದ ಮೊದಲ ಉತ್ಸವದ ಮೊದಲ ದಿನವೇ ಸಂಭವಿಸಿದ ದುರಂತ Read More »

ಬೀಡಿ ಕಳ್ಳತನ ಆರೋಪಿ ಉಳ್ಳಾಲದಲ್ಲಿ ಬಂಧನ | ಎರಡು ವರ್ಷಗಳಿಂದ ತಲೆ ಮರೆಸಿಕೊಂಡಿದ್ದ ಆರೋಪಿ

ಪುತ್ತೂರು: ಬೀಡಿ ಕಳ್ಳತನ ಆರೋಪದಲ್ಲಿ ಎರಡು ವರ್ಷಗಳಿಂದ ನ್ಯಾಯಾಲಯಕ್ಕೆ ಹಾಜರಾಗದೇ ತಲೆ ಮರೆಸಿಕೊಂಡಿದ್ದ ಆರೋಪಿಯನ್ನು ಪುತ್ತೂರು ನಗರ ಠಾಣಾ ಪೊಲೀಸರು ಉಳ್ಳಾಲದಲ್ಲಿ ಬಂಧಿಸಿದ್ದಾರೆ. ಆರೋಪಿಯು ಎರಡು ವರ್ಷಗಳ ಹಿಂದೆ ಪುತ್ತೂರಿನ ಬೀಡಿ ಬ್ರಾಂಚೊಂದರಿಂದ ಸಾವಿರಾರು ರೂಪಾಯಿ ಮೌಲ್ಯದ ಬೀಡಿಗಳನ್ನು ಕದ್ದು ಸಿಕ್ಕಿ ಹಾಕಿಕೊಂಡಿದ್ದ. ಬಂಧಿತ ಆರೋಪಿ ಕಡಬ ತಾಲೂಕಿನ ಕುದ್ಮಾರು ಗ್ರಾಮದ ಏರ್ಕಮೆ ನಿವಾಸಿ ಮಹಮ್ಮದ್  ಕುಂಞಿ ಎಂದು ಗುರುತಿಸಲಾಗಿದೆ. 2022ರಲ್ಲಿ ಕೂರ್ನಡ್ಕದ ಬೀಡಿ ಬ್ರಾಂಚೊಂದರಲ್ಲಿ ಸುಮಾರು 22 ಸಾವಿರ ರೂಪಾಯಿ ಮೌಲ್ಯದ ಬೀಡಿಗಳನ್ನು ಕಳವು ಮಾಡಿದ

ಬೀಡಿ ಕಳ್ಳತನ ಆರೋಪಿ ಉಳ್ಳಾಲದಲ್ಲಿ ಬಂಧನ | ಎರಡು ವರ್ಷಗಳಿಂದ ತಲೆ ಮರೆಸಿಕೊಂಡಿದ್ದ ಆರೋಪಿ Read More »

ಪೇಜಾವರ ಶ್ರೀಗಳನ್ನು ಪುಡಿ ರಾಜಕಾರಣಿ ಎಂದ ಕಾಂಗ್ರೇಸ್‍ ಮುಖಂಡ ಬಿ.ಕೆ ಹರಿಪ್ರಸಾದ್ ಹೇಳಿಕೆ ಖಂಡನೀಯ : ಅರುಣ್ ಕುಮಾರ್ ಪುತ್ತಿಲ

ಪುತ್ತೂರು: ಕಾಂಗ್ರೇಸ್‍  ಮುಖಂಡ ಬಿ.ಕೆ ಹರಿಪ್ರಸಾದ್  ಪೇಜಾವರ ಶ್ರೀಗಳನ್ನು ಪುಡಿ ರಾಜಕಾರಣಿ ಎಂಬ ಹೇಳಿಕೆಯನ್ನು ಹಿಂದೂ ಸಮಾಜ ತೀವ್ರ ಖಂಡಿಸುತ್ತದೆ. ಈ ರೀತಿಯ ಹೇಳಿಕೆಗಳನ್ನು ನೀಡಿ ಸಂಪ್ರದಾಯ ಮತ್ತು ನಂಬಿಕೆಗಳಿಗೆ ದ್ರೋಹ ಎಸಗುತ್ತಿರುವ ಬಿ.ಕೆ ಹರಿಪ್ರಸಾದ್ ನಾಲಗೆಯನ್ನು ಹಿಡಿತದಲ್ಲಿಟ್ಟುಕೊಂಡು ಮಾತನಾಡುವುದು ಸೂಕ್ತ. ಪೂರ್ವಾಗ್ರಹ ಪೀಡಿತರಾಗಿ ಈ ರೀತಿಯಾಗಿ ಮಾತನಾಡಿ  ಸಮಾಜದಲ್ಲಿ ಶಾಂತಿ ಕೆದಡುವ ಪ್ರಯತ್ನವಿದು. ಹಿಂದೂ ಸಮಾಜಕ್ಕೆ ಪ್ರಾತಸ್ಮರಣಿಯರಾಗಿರುವ ಶ್ರೀಗಳಿಗೆ ಈ ರೀತಿಯ ಹೇಳಿಕೆ ನೀಡಿರುವುದು ಸಮಸ್ತ ಹಿಂದೂ  ಸಮಾಜಕ್ಕೆ  ಮಾಡಿರುವ ಅವಮಾನ. ಬಿ.ಕೆ ಹರಿಪ್ರಸಾದ್ ಸ್ವಾಮಿಜೀಯವರಲ್ಲಿ ಕ್ಷಮೆಯಾಚಿಸಬೇಕು

ಪೇಜಾವರ ಶ್ರೀಗಳನ್ನು ಪುಡಿ ರಾಜಕಾರಣಿ ಎಂದ ಕಾಂಗ್ರೇಸ್‍ ಮುಖಂಡ ಬಿ.ಕೆ ಹರಿಪ್ರಸಾದ್ ಹೇಳಿಕೆ ಖಂಡನೀಯ : ಅರುಣ್ ಕುಮಾರ್ ಪುತ್ತಿಲ Read More »

ಕೊಕ್ಕಡ ರಾಷ್ಟ್ರೀಕೃತ ಬ್ಯಾಂಕ್‍ ನಲ್ಲಿ ಖಾತೆ ಹೊಂದಿರುವ ಬಡ ಮಹಿಳೆಯರ ಖಾತೆಯಿಂದ ಹಣ ಲಪಟಾಯಿಸಿ ವಂಚನೆ | ಜಾಣ ಕುರುಡರಂತೆ ವರ್ತಿಸುತ್ತಿರುವ ಅಧಿಕಾರಿಗಳು

ಕೊಕ್ಕಡ: ರಾಷ್ಟ್ರೀಕೃತ ಬ್ಯಾಂಕ್ ಕೊಕ್ಕಡ ಶಾಖೆಯಲ್ಲಿ ಇತ್ತೀಚಿನ ದಿನಗಳಲ್ಲಿ ಬಡ ಮಹಿಳೆಯರ ಖಾತೆಯಿಂದ ಒಂದಿಲ್ಲೊಂದು ರೀತಿಯಲ್ಲಿ ಹಣ ವರ್ಗಾವಣೆಗೊಳ್ಳುತ್ತಿರುವ ಪ್ರಕರಣ ನಡೆಯುತ್ತಿದ್ದರು ಜಾಣ ಕುರುಡರಂತೆ ವರ್ತಿಸುತ್ತಿರುವ ಅಧಿಕಾರಿಗಳು. ಅ.25ರಂದು ಮಧ್ಯಾಹ್ನ 12.45ಕ್ಕೆ ಬ್ಯಾಂಕ್ ಮ್ಯಾನೇಜರ್ ಎಂದು ಫೋನ್ ಕರೆಯ ಮೂಲಕ ನಂಬಿಸಿ. ವಾಟ್ಸಪ್ ಮುಖಾಂತರ ಮಹಿಳೆಯ ಪಾಸ್ ಬುಕ್ ನಕಲನ್ನು ಪಡೆದು ಮಹಿಳೆಯೋರ್ವರಿಗೆ ರೂ.6,500 ವಂಚಿಸಿದ ಘಟನೆ ನಡೆದಿದೆ. ಕೊಕ್ಕಡ ಗ್ರಾಮದ ಹಾರ ನಿವಾಸಿ ಟಿ.ಜೆ.ರೀನಾ ಅವರ ಬ್ಯಾಂಕ್ ಖಾತೆಯಿಂದ ರೂ. 6,500 ಅನ್ನು ಅಪರಿಚಿತ ವ್ಯಕ್ತಿ

ಕೊಕ್ಕಡ ರಾಷ್ಟ್ರೀಕೃತ ಬ್ಯಾಂಕ್‍ ನಲ್ಲಿ ಖಾತೆ ಹೊಂದಿರುವ ಬಡ ಮಹಿಳೆಯರ ಖಾತೆಯಿಂದ ಹಣ ಲಪಟಾಯಿಸಿ ವಂಚನೆ | ಜಾಣ ಕುರುಡರಂತೆ ವರ್ತಿಸುತ್ತಿರುವ ಅಧಿಕಾರಿಗಳು Read More »

ಮುಂಬಯಿ: ಬಾಂದ್ರ ರೈಲು ನಿಲ್ದಾಣದಲ್ಲಿ ಕಾಲ್ತುಳಿತದಿಂದ 9 ಮಂದಿಗೆ ಗಾಯ

ದೀಪಾವಳಿ ಹಬ್ಬದ ಹಿನ್ನೆಲೆಯಲ್ಲಿ ಪ್ರಯಾಣಿಕರಿಂದ ಗಿಜಿಗುಡುತ್ತಿದ್ದ ರೈಲ್ವೆ ಸ್ಟೇಷನ್‌ ಮುಂಬಯಿ: ಉಪನಗರ ಬಾಂದ್ರ ಟರ್ಮಿನಸ್‌ ರೈಲು ನಿಲ್ದಾಣದಲ್ಲಿ ಭೀಕರ ಕಾಲ್ತುಳಿತ ಸಂಭವಿಸಿ ಕನಿಷ್ಠ 9 ಮಂದಿ ಗಾಯಗೊಂಡ ಘಟನೆ ಇಂದು ಬೆಳಗ್ಗೆ ಸಂಭವಿಸಿದೆ.ಬಾಂದ್ರ ಟರ್ಮಿನಸ್‌ನ ಪ್ಲಾಟ್‌ಫಾರ್ಮ್‌ 1ರಲ್ಲಿ ಕಾಲ್ತುಳಿತ ಸಂಭವಿಸಿದೆ. ದೀಪಾವಳಿ ಹಬ್ಬದ ಹಿನ್ನೆಲೆಯಲ್ಲಿ ರೈಲು ನಿಲ್ದಾಣದಲ್ಲಿ ಊರಿಗೆ ಹೋಗುವ ಪ್ರಯಾಣಿಕರ ದಟ್ಟಣೆಯಿತ್ತು. ಪ್ಲಾಟ್‌ಫಾರ್ಮ್‌ಗಳಲ್ಲಿ ಪ್ರಯಾಣಿಕರು ಗಿಜಿಗುಡುತ್ತಿದ್ದರು. 1ನೇ ನಂಬರ್‌ ಪ್ಲಾಟ್‌ಫಾರ್ಮ್‌ನಲ್ಲಿ ಬಾಂದ್ರ-ಗೋರಖ್‌ಪುರ ಎಕ್ಸ್‌ಪ್ರೆಸ್‌ ರೈಲು ಹೊರಡುವ ತುಸು ಮುನ್ನ ಕಾಲ್ತುಳಿತ ಸಂಭವಿಸಿದೆ. 9 ಮಂದಿ ಗಾಯಗೊಂಡಿದ್ದು,

ಮುಂಬಯಿ: ಬಾಂದ್ರ ರೈಲು ನಿಲ್ದಾಣದಲ್ಲಿ ಕಾಲ್ತುಳಿತದಿಂದ 9 ಮಂದಿಗೆ ಗಾಯ Read More »

ಮಾಜಿ ಸಚಿವರಿಗೆ ಹನಿಟ್ರ್ಯಾಪ್‌ : ಕಾಂಗ್ರೆಸ್‌ ನಾಯಕಿ ಬಂಧನ

ಬೆಂಗಳೂರು : ಮಾಜಿ ಸಚಿವ ಮಾಲೀಕಯ್ಯ ಗುತ್ತೆದಾರ್‌ ಅವರನ್ನು ಹನಿಟ್ರ್ಯಾಪ್ ಬಲೆಗೆ ಕೆಡವಿ 20 ಲ.ರೂ. ವಸೂಲು ಮಾಡಲು ಯತ್ನಿಸಿದ ಕಾಂಗ್ರೆಸ್‌ ನಾಯಕಿ ಹಾಗೂ ಆಕೆಯ ಪತಿಯನ್ನು ಪೊಲೀಸರು ಬಂಧಿಸಿದ್ದಾರೆ. ಕಾಂಗ್ರೆಸ್‌ನ ನಲಪಾಡ್ ಬ್ರಿಗೇಡ್‌ನ ಕಲಬುರಗಿ ಜಿಲ್ಲಾಧ್ಯಕ್ಷೆ ಮಂಜುಳಾ ಪಾಟೀಲ್‌ (32) ಹಾಗೂ ಆಕೆಯ ಪತಿ ಶಿವರಾಜ್‌ ಪಾಟೀಲ್‌ (39) ವೀಡಿಯೊ ತುಣುಕುಗಳನ್ನು ತೋರಿಸಿ ಮಾಲೀಕಯ್ಯ ಗುತ್ತೆದಾರ್‌ ಅವರನ್ನು ಹಣಕ್ಕಾಗಿ ಬ್ಲ್ಯಾಕ್‌ಮೇಲ್‌ ಮಾಡುತ್ತಿದ್ದರು. ಗುತ್ತೆದಾರ್‌ ನೀಡಿದ ದೂರಿನ ಪ್ರಕಾರ ಬೆಂಗಳೂರು ಸಿಸಿಬಿ ಪೊಲೀಸ್ದಂಪತಿಯನ್ನು ಬಂಧಿಸಿದ್ದಾರೆ.ಮಂಜುಳಾ ಪಾಟೀಲ್‌ ಮಾಜಿ

ಮಾಜಿ ಸಚಿವರಿಗೆ ಹನಿಟ್ರ್ಯಾಪ್‌ : ಕಾಂಗ್ರೆಸ್‌ ನಾಯಕಿ ಬಂಧನ Read More »

error: Content is protected !!
Scroll to Top