ಅಪರಾಧ

ಸೈಫ್‌ ಹಲ್ಲೆ ಪ್ರಕರಣ : ಆರೋಪಿಯ ಗುರುತು ದೃಢಪಡಿಸಲು ವೈಜ್ಞಾನಿಕ ಪರೀಕ್ಷೆ

ಎಲ್ಲ ತಂದೆಯಂದಿರೂ ಮಗ ಅಪರಾಧಿಯಲ್ಲ ಎಂದೇ ವಾದಿಸುತ್ತಾರೆ, ತಂದೆಯ ಹೇಳಿಕೆಗೆ ಮಹತ್ವ ನೀಡುವ ಅಗತ್ಯವಿಲ್ಲ ಮುಂಬಯಿ: ನಟ ಸೈಫ್‌ ಅಲಿ ಖಾನ್‌ ಮನೆಗೆ ನುಗ್ಗಿ ಹಲ್ಲೆ ಮಾಡಿದ್ದು ತನ್ನ ಮಗನಲ್ಲ ಎಂದಿರುವ ಆರೋಪಿ ಮೊಹಮ್ಮದ್‌ ಶೆರಿಫುಲ್ಲ ಷೆಹಜಾದ್‌ನ ತಂದೆಯ ಹೇಳಿಕೆಯನ್ನು ಮುಂಬಯಿ ಪೊಲೀಸರು ಅಲ್ಲಗಳೆದಿದ್ದಾರೆ. ಆರೋಪಿ ಬಾಂಗ್ಲಾದೇಶದ ಅಕ್ರಮ ನುಸುಳುಕೋರನಾಗಿದ್ದು, ಸೈಫ್‌ ಮನೆಯಲ್ಲಿ ಸಿಕ್ಕಿರುವ ಬೆರಳಚ್ಚು ಮಾದರಿಗಳು ಅವನ ಬೆರಳಚ್ಚಿಗೆ ಹೋಲಿಕೆಯಾಗುತ್ತಿವೆ. ಎಲ್ಲ ತಂದೆಯಂದಿರೂ ತಮ್ಮ ಮಗ ಅಪರಾಧಿಯಲ್ಲ ಎಂದೇ ವಾದಿಸುತ್ತಾರೆ. ಹೀಗಾಗಿ ಆರೋಪಿಯ ತಂದೆಯ ಮಾತಿಗೆ […]

ಸೈಫ್‌ ಹಲ್ಲೆ ಪ್ರಕರಣ : ಆರೋಪಿಯ ಗುರುತು ದೃಢಪಡಿಸಲು ವೈಜ್ಞಾನಿಕ ಪರೀಕ್ಷೆ Read More »

ಕಕ್ಕಿಂಜೆ ವೃದ್ಧ ದಂಪತಿ ಹತ್ಯೆ ಮಾಡಿ ಚಿನ್ನ, ನಗದು ದೋಚಿದ ಪ್ರಕರಣ | ಆರೋಪಿಗೆ ಜೀವಾವಧಿ ಶಿಕ್ಷೆ

ಬೆಳ್ತಂಗಡಿ: ಕಕ್ಕಿಂಜೆಯಲ್ಲಿ ನಡೆದ ವೃದ್ಧ ದಂಪತಿ ಕೊಲೆ  ಹಾಗೂ ಚಿನ್ನ ನಗದು ದರೋಡೆ ಪ್ರಕರಣಕ್ಕೆ ಸಂಬಂಧಿಸಿ ಆರೋಪಿಗೆ ಮಂಗಳೂರಿನ 2ನೆ ಹೆಚ್ಚುವರಿ ಜಿಲ್ಲಾ ಮತ್ತು ಸತ್ರ ನ್ಯಾಯಾಲಯ ಜೀವಾವಧಿ ಶಿಕ್ಷೆ ವಿಧಿಸಿ ತೀರ್ಪು ನೀಡಿದೆ. 2016ರ ನ. 10 ರಂದು ರಾತ್ರಿ ಕಕ್ಕಿಂಜೆ ಹೈಸ್ಕೂಲ್ ನ ಹಿಂಬದಿಯ ಮನೆಯಲ್ಲಿ ವಾಸಿಸುತ್ತಿದ್ದ ವೃದ್ದ ದಂಪತಿ ವರ್ಕಿ ಹಾಗೂ ಏಲಿಕುಟ್ಟಿ ಅವರನ್ನು ಗದಗ ಜಿಲ್ಲೆಯ ಬಿ.ಸಿ.ಕೇರಿ ನಿವಾಸಿ ರಾಜು ಕಲ್ಲವಡ್ಡರ್ ಎಂಬಾತ ಹತ್ಯೆ ಮಾಡಿರುವುದು ಸಾಬೀತಾಗಿದೆ. ಈತ ಬೆಳ್ತಂಗಡಿಯ ನೆರಿಯಾ

ಕಕ್ಕಿಂಜೆ ವೃದ್ಧ ದಂಪತಿ ಹತ್ಯೆ ಮಾಡಿ ಚಿನ್ನ, ನಗದು ದೋಚಿದ ಪ್ರಕರಣ | ಆರೋಪಿಗೆ ಜೀವಾವಧಿ ಶಿಕ್ಷೆ Read More »

ಉಡುಪಿ : ಹಾಡಹಗಲೇ ಬಾಲಕಿಗೆ ಕಿರುಕುಳ

ಆರೋಪಿಯನ್ನು ಶೀಘ್ರ ಬಂಧಿಸಲು ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್‌ ಸೂಚನೆ ಉಡುಪಿ: ಉಡುಪಿ ನಗರದಲ್ಲಿ ಹಾಡಹಗಲೇ ಯುವಕನೊಬ್ಬ ಐದು ವರ್ಷ ಪ್ರಾಯದ ಬಾಲಕಿಗೆ ಲೈಂಗಿಕ ಕಿರುಕುಳ ನೀಡಿದ ಆಘಾತಕಾರಿ ಘಟನೆ ಸಂಭವಿಸಿದೆ. ಜಿಲ್ಲಾ ಉಸ್ತುವಾರಿ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್‌ ಈ ಘಟನೆಯ ಬಗ್ಗೆ ಕಳವಳ ವ್ಯಕ್ತಪಡಿಸಿ ಆರೋಪಿಯನ್ನು ಶೀಘ್ರ ಬಂಧಿಸಲು ಪೊಲೀಸರಿಗೆ ಸೂಚಿಸಿದ್ದಾರೆ. ನಗರದ ಪೂರ್ಣಪ್ರಜ್ಞ ಕಾಲೇಜು ಸಮೀಪದ ಓಣಿಯಲ್ಲಿ ಸುಮಾರು 30 ವರ್ಷದ ಯುವಕ ಗುರುವಾರ ಮಧ್ಯಾಹ್ನ ಈ ಕೃತ್ಯ ಎಸಗಿದ್ದು, ದೃಶ್ಯ ಸಿಸಿಟಿವಿಯಲ್ಲಿ ಸೆರೆಯಾಗಿದೆ. ಬಾಲಕಿಯ

ಉಡುಪಿ : ಹಾಡಹಗಲೇ ಬಾಲಕಿಗೆ ಕಿರುಕುಳ Read More »

ಕೊನೆಗೂ ಭಾರತಕ್ಕೆ ಗಡಿಪಾರಾಗಲಿದ್ದಾನೆ ಮುಂಬಯಿ ಭಯೋತ್ಪಾದಕ ದಾಳಿಯ ಸೂತ್ರಧಾರ

ತಹಾವುರ್‌ ರಾಣಾನನ್ನು ಭಾರತಕ್ಕೊಪ್ಪಿಸಲು ಆದೇಶಿಸಿದ ಅಮೆರಿಕದ ಸುಪ್ರೀಂ ಕೋರ್ಟ್‌ ಹೊಸದಿಲ್ಲಿ: ಮುಂಬಯಿ ಮೇಲಿನ ಭಯೋತ್ಪಾದಕ ದಾಳಿಯ ಸೂತ್ರಧಾರ ತಹಾವುರ್‌ ರಾಣಾನನ್ನು ಭಾರತಕ್ಕೆ ಗಡಿಪಾರು ಮಾಡಿಕೊಳ್ಳಲು ಇದ್ದ ಎಲ್ಲ ಅಡೆತಡೆಗಳು ನಿವಾರಣೆಯಾಗಿವೆ. ಅಮೆರಿಕದ ಸುಪ್ರೀಂ ಕೋರ್ಟ್‌ ರಾಣಾನನ್ನು ಭಾರತಕ್ಕೆ ಗಡಿಪಾರು ಮಾಡಲು ಅನುಮತಿ ನೀಡಿದೆ. ಪಾಕಿಸ್ಥಾನ ಮೂಲದ ಕೆನಡ ಪ್ರಜೆ 2008ರಲ್ಲಿ ಮುಂಬಯಿ ಮೇಲಾದ ಭೀಕರ ಭಯೋತ್ಪಾದಕ ದಾಳಿಯ ಸೂತ್ರಧಾರ ಎನ್ನಲಾಗಿದೆ. ತನ್ನ ಗಡಿಪಾರು ಆದೇಶ ಪ್ರಶ್ನಿಸಿ ರಾಣಾ ಅಮೆರಿಕದ ಸುಪ್ರೀಂ ಕೋರ್ಟಿಗೆ ಮೇಲ್ಮನವಿ ಸಲ್ಲಿಸಿದ್ದ. ಈ ಮೇಲ್ಮನವಿಯನ್ನು

ಕೊನೆಗೂ ಭಾರತಕ್ಕೆ ಗಡಿಪಾರಾಗಲಿದ್ದಾನೆ ಮುಂಬಯಿ ಭಯೋತ್ಪಾದಕ ದಾಳಿಯ ಸೂತ್ರಧಾರ Read More »

ಮಹಾಕುಂಭಮೇಳದಲ್ಲಿ ಮತ್ತೆ ಅಗ್ನಿ ಅವಘಡ : ಎರಡು ಕಾರುಗಳು ಭಸ್ಮ

ಪ್ರಯಾಗ್‌ರಾಜ್‌ : ಇಲ್ಲಿ ನಡೆಯುತ್ತಿರುವ ಮಹಾಕುಂಭಮೇಳದಲ್ಲಿ ಮತ್ತೆ ಬೆಂಕಿ ಅವಘಡ ಸಂಭವಿಸಿದೆ. ರಸ್ತೆ ಬದಿ ನಿಲ್ಲಿಸಿದ್ದ ಎರಡು ಕಾರುಗಳು ಇದ್ದಕ್ಕಿದ್ದಂತೆ ಬೆಂಕಿಹತ್ತಿಕೊಡು ಉರಿದು ಕರಕಲಾಗಿವೆ. ಕಳೆದ ಭಾನುವಾರಷ್ಟೇ ಸಿಲಿಂಡರ್‌ ಸ್ಫೋಟಿಸಿದ ಪರಿಣಾಮ ಬೆಂಕಿಹತ್ತಿಕೊಂಡು ಸುಮಾರು 20 ಟೆಂಟ್‌ಗಳು ಸುಟ್ಟುಹೋಗಿದ್ದವು. ಮಹಾಕುಂಭಮೇಳದ ಸೆಕ್ಟರ್‌ 2ರ ಬಳಿ ಮುಖ್ಯರಸ್ತೆಯಲ್ಲಿ ನಿಲ್ಲಿಸಿದ್ದ ಕಾರುಗಳಿಗೆ ಬೆಂಕಿಹತ್ತಿಕೊಡಿದ್ದು, ಕೂಡಲೇ ಅಗ್ನಿಶಾಮಕ ಪಡೆ ಉಳಿದ ಕಾರುಗಳು ಮತ್ತಿತರ ವಾಹನಗಳನ್ನು ದೂರ ಸಾಗಿಸಿದ ಪರಿಣಾಮ ಹೆಚ್ಚಿನ ಅನಾಹುತವಾಗಿಲ್ಲ. ಆದರೆ ಬೆಂಕಿಹತ್ತಿಕೊಂಡ ಎರಡು ಕಾರುಗಳು ಪೂರ್ತಿಯಾಗಿ ಸುಟ್ಟುಹೋಗಿವೆ. ಘಟನೆಯಲ್ಲಿ

ಮಹಾಕುಂಭಮೇಳದಲ್ಲಿ ಮತ್ತೆ ಅಗ್ನಿ ಅವಘಡ : ಎರಡು ಕಾರುಗಳು ಭಸ್ಮ Read More »

ಇಡೀ ಗ್ರಾಮವನ್ನೇ ಖರೀದಿ ಮಾಡಿದ ಕಾಂಗ್ರೆಸ್‌ ಶಾಸಕ

ಗ್ರಾಮಸ್ಥರಿಂದ ಲೋಕಾಯುಕ್ತಕ್ಕೆ ದೂರು ರಾಮನಗರ: ವಕ್ಫ್ ಮಂಡಳಿ ರೈತರ ಜಮೀನು ಕಬಳಿಸುತ್ತಿರುವ ವಿವಾದ ಇನ್ನೂ ಜೀವಂತವಾಗಿರುವಾಗಲೇ ರಾಮನಗರದ ಕಾಂಗ್ರೆಸ್ ಶಾಸಕ ಇಕ್ಬಾಲ್‌ ಹುಸೇನ್‌ ಇಡೀ ಗ್ರಾಮವನ್ನೇ ಖರೀದಿ ಮಾಡಿದ ಗಂಭೀರ ಆರೋಪ ಕೇಳಿ ಬಂದಿದೆ. ಉಳುವವನೇ ಭೂಮಿಯ ಒಡೆಯ ಎಂಬ ಭೂ ಸುಧಾರಣಾ ಕಾಯ್ದೆಯನ್ನು ಉಲ್ಲಂಘನೆ ಮಾಡಿ ಇಡೀ ಊರನ್ನೇ ಶಾಸಕರು ಖರೀದಿ ಮಾಡಿದ್ದಾರೆಂದು ಗ್ರಾಮಸ್ಥರು ಲೋಕಾಯುಕ್ತಕ್ಕೆ ದೂರು ನೀಡಿದ್ದಾರೆ. ಉಳುವವನೇ ಭೂಮಿಯ ಒಡೆಯ ಎಂಬ ಕಾಯ್ದೆ ಜಾರಿಗೆ ಬಂದು ದಶಕಗಳೇ ಕಳೆದಿವೆ. ಈ ಕಾಯ್ದೆಯನ್ನು ಜಾರಿ

ಇಡೀ ಗ್ರಾಮವನ್ನೇ ಖರೀದಿ ಮಾಡಿದ ಕಾಂಗ್ರೆಸ್‌ ಶಾಸಕ Read More »

ಶಸ್ತ್ರಾಸ್ತ್ರ ಕಾರ್ಖಾನೆಯಲ್ಲಿ ಭೀಕರ ಸ್ಫೋಟ : 8 ಮಂದಿ ಮೃತ್ಯು

ಮುಂಬಯಿ: ಮಹಾರಾಷ್ಟ್ರದ ಭಂಡಾರ ಜಿಲ್ಲೆಯಲ್ಲಿರುವ ರಕ್ಷಣಾ ಉತ್ಪನ್ನಗಳನ್ನು ತಯಾರಿಸುವ ಆರ್ಡಿನೆನ್ಸ್ ಕಾರ್ಖಾನೆಯಲ್ಲಿ ಶುಕ್ರವಾರ ಸಂಭವಿಸಿದ ಭಾರಿ ಸ್ಫೋಟದಲ್ಲಿ ಕನಿಷ್ಠ 8 ಮಂದಿ ಮೃತರಾಗಿದ್ದು, ಹಲವು ಮಂದಿ ಗಾಯಗೊಂಡಿದ್ದಾರೆ.ಮಹಾರಾಷ್ಟ್ರದ ಭಂಡಾರ ಜಿಲ್ಲೆಯ ಕಾರ್ಖಾನೆಯಲ್ಲಿ ಬೆಳಗ್ಗೆ 10.30ರ ಸುಮಾರಿಗೆ ಸ್ಫೋಟ ಸಂಭವಿಸಿದೆ. 8 ಮಂದಿ ಸಾವನ್ನಪ್ಪಿದ್ದಾರೆ. ಸ್ಫೋಟ ಸಂಭವಿಸುವ ವೇಳೆ ಕಾರ್ಖಾಣೆಯಲ್ಲಿ ಸುಮಾರು 20 ಕಾರ್ಮಿಕರು ಇದ್ದರು. 7 ಮಂದಿ ಗಂಭೀರವಾಗಿ ಗಾಯಗೊಂಡಿದ್ದಾರೆ. ಕೆಲವು ಮಂದಿ ನಾಪತ್ತೆಯಾಗಿದ್ದು, ಅವರಿಗಾಗಿ ರಕ್ಷಣಾ ತಂಡಗಳು ಶೋಧ ನಡೆಸುತ್ತಿವೆ. ಅಗ್ನಿಶಾಮಕ ಸಿಬ್ಬಂದಿ ಬೆಂಕಿ ನಂದಿಸುವ

ಶಸ್ತ್ರಾಸ್ತ್ರ ಕಾರ್ಖಾನೆಯಲ್ಲಿ ಭೀಕರ ಸ್ಫೋಟ : 8 ಮಂದಿ ಮೃತ್ಯು Read More »

ಸೈಫ್‌ ಅಲಿ ಖಾನ್‌ ಹಲ್ಲೆ ಪ್ರಕರಣದಲ್ಲಿ ಬಂಧಿಸಿರುವ ಆರೋಪಿ ನಕಲಿ

ಇಡೀ ಬಂಧನ ಪ್ರಕ್ರಿಯೆ ಮುಂಬಯಿ ಪೊಲೀಸರ ಕಟ್ಟುಕತೆ ಎಂದ ಆರೋಪಿಯ ತಂದೆ ಮುಂಬಯಿ: ಬಾಲಿವುಡ್ ನಟ ಸೈಫ್ ಆಲಿ ಖಾನ್ ಮೇಲಾಗಿರುವ ದಾಳಿಯ ಬಗ್ಗೆಯೇ ಹಲವು ಅನುಮಾನಗಳು ಸೃಷ್ಟಿಯಾಗಿರುವ ಬೆನ್ನಿಗೆ ಪೊಲೀಸರು ಬಂಧಿಸಿರುವುದು ನಕಲಿ ಆರೋಪಿ ಎಂಬ ಆರೋಪ ಕೇಳಿಬಂದಿದೆ. ಪೊಲೀಸ್ ವಶದಲ್ಲಿರುವ ಆರೋಪಿ ಮೊಹಮ್ಮದ್ ಶರೀಫುಲ್‌ ಇಸ್ಲಾಂನ ತಂದೆ ಶರೀಫುಲ್ ಫಕೀರ್, ತನ್ನ ಮಗನನ್ನು ವಿನಾಕಾರಣ ಬಂಧಿಸಲಾಗಿದೆ. ಆತ ಸೈಫ್ ಮೇಲೆ ದಾಳಿ ಮಾಡಿದ ವ್ಯಕ್ತಿಯಲ್ಲ. ಇದು ವ್ಯವಸ್ಥಿತಿ ಷಡ್ಯಂತ್ರ ಎಂದು ಹೇಳಿದ್ದಾರೆ. ಮುಂಬಯಿ ಪೊಲೀಸರು

ಸೈಫ್‌ ಅಲಿ ಖಾನ್‌ ಹಲ್ಲೆ ಪ್ರಕರಣದಲ್ಲಿ ಬಂಧಿಸಿರುವ ಆರೋಪಿ ನಕಲಿ Read More »

ಯಕ್ಷಗಾನ ಕಲಾವಿದನ ಮೇಲೆ ಇನ್ನೊಂದು ಮೇಳದ ಕಲಾವಿದನಿಂದ ಹಲ್ಲೆ

ಗೆಳೆಯರಾಗಿದ್ದ ಎರಡು ಮೇಳಗಳ ಕಲಾವಿದರ ನಡುವೆ ಹಣಕಾಸಿನ ತಕರಾರು ಪಡುಬಿದ್ರಿ: ಹಣಕಾಸು ವಹಿವಾಟಿನ ತಕರಾರಿನ ಹಿನ್ನೆಲೆಯಲ್ಲಿ ಒಂದು ಮೇಳದ ಯಕ್ಷಗಾನ ಕಲಾವಿದನ ಮೇಲೆ ಇನ್ನೊಂದು ಮೇಳದ ಯಕ್ಷಗಾನ ಕಲಾವಿದ ಬರ್ಬರವಾಗಿ ಹಲ್ಲೆ ಮಾಡಿದ ಸಂಬಂಧ ಪಡುಬಿದ್ರಿ ಪೊಲೀಸ್‌ ಠಾಣೆಯಲ್ಲಿ ಗುರುವಾರ ಪ್ರಕರಣ ದಾಖಲಾಗಿದೆ. ಸಸಿಹಿತ್ಲು ಮೇಳದ ಕಲಾವಿದ ಪಡುಬಿದ್ರಿಯ ನಿತಿನ್‌ ಕುಮಾರ್‌ ಮೇಲೆ ಪಾವಂಜೆ ಮೇಳದ ಕಲಾವಿದ ಸಚಿನ್‌ ಅಮೀನ್‌ ಉದ್ಯಾವರ, ಅವರ ತಂದೆ ಕುಶಾಲಣ್ಣ ಹಾಗೂ ಓರ್ವ ಫೈನಾನ್ಶಿಯರ್‌ ಸೇರಿಕೊಂಡು ಉದ್ಯಾವರದ ಮನೆಯೊಂದರಲ್ಲಿ ಜ.21ರಂದು ಕೂಡಿಹಾಕಿ

ಯಕ್ಷಗಾನ ಕಲಾವಿದನ ಮೇಲೆ ಇನ್ನೊಂದು ಮೇಳದ ಕಲಾವಿದನಿಂದ ಹಲ್ಲೆ Read More »

ಮರದ ಕೊಂಬೆಗೆ ನೇಣು ಬಿಗಿದು ವ್ಯಕ್ತಿಯೋರ್ವ ಆತ್ಮಹತ್ಯೆ

ಪುತ್ತೂರು : ವ್ಯಕ್ತಿಯೋರ್ವರು ಮರದ ಕೊಂಬೆಗೆ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡ ಘಟನೆ ಪಡುವನ್ನೂರು ಗ್ರಾಮದ ಪುಂಡಿಕಾಯಿಯಲ್ಲಿ ನಡೆದಿದೆ. ಪಡುವನ್ನೂರು ಗ್ರಾಮದ ಪುಂಡಿಕಾಯಿ ನಿವಾಸಿ  ವೆಯರಿಂಗ್ ಕೆಲಸ ಮಾಡುತ್ತಿದ್ದ ಮೋಹನ್ (31)ಎಂಬವರು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಮಾನಸಿಕ ಕಾಯಿಲೆಯಿಂದ ಬಳಲುತ್ತಿದ್ದ ಅವರು ಖಾಸಗಿ ಆಸ್ಪತ್ರೆಯಿಂದ ಚಿಕಿತ್ಸೆಯನ್ನೂ ಪಡೆಯುತ್ತಿದ್ದರು. ಮೋಹನ್ ಅವರು ಜ.20ರಂದು ರಾತ್ರಿ ಊಟ ಮಾಡಿ ಮಲಗಿದವರು ಜ.21ರ ಬೆಳಗ್ಗೆ ನಾಪತ್ತೆಯಾಗಿದ್ದರು. ವಿಷಯ ಅರಿತು ಹುಡುಕಾಡಿದಾಗ ಮೋಹನ್ ಅವರು ಮನೆಯ ಪಕ್ಕದ ಪದ್ಮನಾಭ ಭಟ್ ಎಂಬವರ ಜಾಗದ ಕಾಡು

ಮರದ ಕೊಂಬೆಗೆ ನೇಣು ಬಿಗಿದು ವ್ಯಕ್ತಿಯೋರ್ವ ಆತ್ಮಹತ್ಯೆ Read More »

error: Content is protected !!
Scroll to Top