ಅಪರಾಧ

ಕೋಟೆಕಾರು ದರೋಡೆ ಕೃತ್ಯಕ್ಕೆ ಸಹಕರಿಸಿದವರಿಗೆ ರಾಜಕೀಯ ರಕ್ಷಣೆ : ಭರತ್‌ ಶೆಟ್ಟಿ

ಸಂಚಿನಲ್ಲಿ ಭಾಗಿಯಾದವರ ಹೆಸರು ಹೊರಗೆ ಬಾರದಂತೆ ತಡೆದಿದ್ದಾರೆ ಎಂದು ಆರೋಪ ಮಂಗಳೂರು: ಕೋಟೆಕಾರು ಸಹಕಾರಿ ಬ್ಯಾಂಕ್‌ನ ಕೆ.ಸಿ ರೋಡ್‌ ಶಾಖೆಯಲ್ಲಿ ಕಳೆದ ಶುಕ್ರವಾರ ಹಾಡಹಗಲೇ ನಡೆದಿರುವ ದರೋಡೆಯಲ್ಲಿ ಸ್ಥಳೀಯರ ಕೈವಾಡವಿದ್ದರೂ ರಾಜಕೀಯ ಕಾರಣಗಳಿಗಾಗಿ ಅವರ ಹೆಸರು ಹೊರಬಾರದಂತೆ ಮಾಡಲಾಗಿದೆ ಎಂದು ಶಾಸಕ ಭರತ್‌ ಶೆಟ್ಟಿ ಬಾಂಬ್‌ ಸಿಡಿಸಿದ್ದಾರೆ. ಸ್ಥಳೀಯರ ಕೈವಾಡವನ್ನು ಮುಚ್ಚಿ ಹಾಕಲು ವ್ಯವಸ್ಥಿತ ಪ್ರಯತ್ನ ಮಾಡಲಾಗುತ್ತಿದೆ. ಪೊಲೀಸರು ದರೋಡೆ ಮಾಡಿದವರನ್ನು ಬಂಧಿಸಿ ಮೂರು ದಿನ ಆದರೂ ದರೋಡೆಗೆ ಪ್ಲಾನ್‌ ಮಾಡಿದವರ ಕುರಿತು ಇನ್ನೂ ಯಾವುದೇ ಮಾಹಿತಿ […]

ಕೋಟೆಕಾರು ದರೋಡೆ ಕೃತ್ಯಕ್ಕೆ ಸಹಕರಿಸಿದವರಿಗೆ ರಾಜಕೀಯ ರಕ್ಷಣೆ : ಭರತ್‌ ಶೆಟ್ಟಿ Read More »

ಬಾಲಿವುಡ್‌ ನಿರ್ದೇಶಕ ರಾಮ್‌ ಗೋಪಾಲ್‌ ವರ್ಮಗೆ ಜೈಲು

ವಿಚಾರಣೆಗೆ ಹಾಜರಾಗದಿರುವುದಕ್ಕೆ ಬಂಧನ ವಾರಂಟ್‌ ಜಾರಿ ಮುಂಬಯಿ: ಬಾಲಿವುಡ್‌ನ ಖ್ಯಾತ ನಿರ್ದೇಶಕ ರಾಮ್‌ಗೋಪಾಲ್‌ ವರ್ಮ ಅವರಿಗೆ ಮುಂಬಯಿ ನ್ಯಾಯಾಲಯವೊಂದು ಚೆಕ್‌ ಬೌನ್ಸ್‌ ಪ್ರಕರಣದಲ್ಲಿ ಮೂರು ತಿಂಗಳ ಕಾರಾಗೃಹ ವಾಸದ ಶಿಕ್ಷೆ ಮತ್ತು ದಂಡ ವಿಧಿಸಿದೆ. ರಾಮ್‌ಗೋಪಾಲ್‌ ವರ್ಮ ಸೋಮವಾರವಷ್ಟೇ ಹೊಸಚಿತ್ರ ಸಿಂಡಿಕೇಟ್‌ನ ಘೋಷಣೆ ಮಾಡಿದ್ದರು. ಇದಾದ ಮರುದಿನವೇ ಕೋರ್ಟ್‌ ಅವರಿಗೆ ಜೈಲು ಶಿಕ್ಷೆ ವಿಧಿಸಿದೆ. ಇಷ್ಟು ಮಾತ್ರವಲ್ಲದೆ ತೀರ್ಪಿನ ದಿನವೂ ನ್ಯಾಯಾಲಯಕ್ಕೆ ಹಾಜರಾಗದ ಕಾರಣ ಅವರ ವಿರುದ್ಧ ಜಾಮೀನು ರಹಿತ ಬಂಧನ ವಾರಂಟ್‌ ಜಾರಿಗೊಳಿಸಿದೆ. ಅಂಧೇರಿಯ ನ್ಯಾಯಾಲಯದಲ್ಲಿ

ಬಾಲಿವುಡ್‌ ನಿರ್ದೇಶಕ ರಾಮ್‌ ಗೋಪಾಲ್‌ ವರ್ಮಗೆ ಜೈಲು Read More »

ಶ್ರೀಮಂತನೆಂದು ಹೇಳಿಕೊಂಡು ಹಿಂದೂ ಯುವತಿಯನ್ನು ಯಾಮಾರಿಸಿ ಮದುವೆಯಾದ ಮುಸ್ಲಿಂ ಯುವಕ | ಬಸ್ಸಿಗೂ ಟಿಕೇಟ್ ನೀಡಲು ಹಣವಿಲ್ಲ ಎಂದು ಗೊತ್ತಾದಾಗ ಬಸ್‍ ನಿಲ್ದಾಣದಲ್ಲೇ ಪತಿಗೆ ಥಳಿಸಿದ ಪತ್ನಿ

ಉಪ್ಪಿನಂಗಡಿ : ಶ್ರೀಮಂತನೆಂದು ಹೇಳಿಕೊಂಡು ಯುವತಿಯೊಬ್ಬಳನ್ನು ಯಾಮಾರಿಸಿ ವಿವಾಹವಾಗಿದ್ದ ವ್ಯಕ್ತಿಗೆ ಆತನಲ್ಲಿ ಬಸ್ಸು ಟಿಕೆಟ್ ಖರೀದಿಸಲು ಹಣವಿಲ್ಲವೆಂದು ತಿಳಿಯುತ್ತಲೇ ಪತ್ನಿ ಸಾರ್ವಜನಿಕರ ಎದುರೇ ಆತನಿಗೆ ಹೊಡೆದ ಘಟನೆ ಉಪ್ಪಿನಂಗಡಿ ಬಸ್ ನಿಲ್ದಾಣದಲ್ಲಿ ನಡೆದಿದೆ. ಶಿವಮೊಗ್ಗ ಜಿಲ್ಲೆಯ ಶಿಕಾರಿಪುರದ ಯುವತಿಯಾಗಿದ್ದು, ಆಕೆಯ ಗಂಡ ಸಮಿರುಲ್ಲಾ ಹಿಂದಿ ಭಾಷಿಗನಾಗಿದ್ದಾನೆ. ಯುವತಿಯು ಮಧ್ಯಮ ಕುಟುಂಬದಿಂದ ಬಂದಿದ್ದು, ಆಕೆಯ ಮುಂದೆ ಸಮಿರುಲ್ಲಾ ಶ್ರೀಮಂತನೆಂದು ತಿಳಿಸಿದ್ದ. ಅವನ ಐಷರಾಮಿ ಜೀವನ ಶೈಲಿಗೆ ಯುವತಿ ಮಾರು ಹೋಗಿದ್ದಾಳೆ ಅವರಿಬ್ಬರು ಪರಸ್ಪರ ಪ್ರೀತಿಸಲು ಆರಂಭಿಸಿದ್ದು, ಇವರಿಬ್ಬರ ಪ್ರೀತಿಗೆ

ಶ್ರೀಮಂತನೆಂದು ಹೇಳಿಕೊಂಡು ಹಿಂದೂ ಯುವತಿಯನ್ನು ಯಾಮಾರಿಸಿ ಮದುವೆಯಾದ ಮುಸ್ಲಿಂ ಯುವಕ | ಬಸ್ಸಿಗೂ ಟಿಕೇಟ್ ನೀಡಲು ಹಣವಿಲ್ಲ ಎಂದು ಗೊತ್ತಾದಾಗ ಬಸ್‍ ನಿಲ್ದಾಣದಲ್ಲೇ ಪತಿಗೆ ಥಳಿಸಿದ ಪತ್ನಿ Read More »

4 ಲಕ್ಷ ರೂ.ಗೆ ಬಾಲಕನ ಮಾರಾಟ | ನಾಲ್ವರ ಬಂಧನ

ಬೆಳಗಾವಿ : ಏಳು ವರ್ಷದ ಬಾಲಕನನ್ನು 4 ಲಕ್ಷ ರೂ.ಗೆ ಮಾರಾಟ ಮಾಡಿದ ಆರೋಪದ ಮೇಲೆ ನಾಲ್ವರನ್ನು ಬಂಧಿಸಿದ ಘಟನೆ ಹುಕ್ಕೇರಿ ತಾಲೂಕಿನ ಸುಲ್ತಾನಪುರದಲ್ಲಿ ನಡೆದಿದೆ. ಸುಲ್ತಾನಪುರ ಮೂಲದ ಸದಾಶಿವ ಶಿವಬಸಪ್ಪ ಮಗದುಮ್ (ಮಗುವಿನ ಮಲತಂದೆ), ಭಡಗಾಂವ್​ ಮೂಲದ, ಸದ್ಯ ಸುಲ್ತಾನಪುರದಲ್ಲಿ ವಾಸವಿರುವ ಲಕ್ಷ್ಮಿ ಬಾಬು ಗೋಲಭಾವಿ, ಕೊಲ್ಲಾಪುರದ ನಾಗಲಾ ಪಾರ್ಕ್‌ನ ಸಂಗೀತಾ ವಿಷ್ಣು ಸಾವಂತ್, ಅಂಬೇಡ್ಕರ್ ನಗರದ ನಿವಾಸಿ ಮತ್ತು ಕಾರವಾರದ ಹಳಿಯಾಳ ತಾಲೂಕಿನ ಕೆಸ್ರೋಳಿಯ ಅನಸೂಯಾ ಗಿರಿಮಲ್ಲಪ್ಪ ದೊಡ್ಮನಿ ಬಂಧಿತ ಆರೋಪಿಗಳು ಎನ್ನಲಾಗಿದೆ. ಶಿವಬಸಪ್ಪ

4 ಲಕ್ಷ ರೂ.ಗೆ ಬಾಲಕನ ಮಾರಾಟ | ನಾಲ್ವರ ಬಂಧನ Read More »

ಗಿರಾಕಿಗಳ ಹಣದಿಂದ ಮಟ್ಕಾ, ಜೂಜಾಟ ನಡೆಸಿದ ಆರೋಪಿಯ ಬಂಧನ

ಸುಳ್ಯ: ಪಾನ್ ಬೀಡ ಅಂಗಡಿಯೊಂದರಲ್ಲಿ ಓರ್ವ ವ್ಯಕ್ತಿ ಮಟ್ಕಾ, ಜೂಜಾಟ ಆಡುತ್ತಿದ್ದ ವೇಳೆ ಸುಳ್ಯ ಪೊಲೀಸರು ದಾಳಿ ನಡೆಸಿ, ಆರೋಪಿಯನ್ನು ಬಂಧಿಸಿದ ಘಟನೆ ನಡೆದಿದೆ. ಮಟ್ಕಾ ಜೂಜಾಟ ನಡೆಸುತ್ತಿದ್ದ ಆರೋಪಿಯನ್ನು ಕಲ್ಲುಗುಂಡಿ ಸಂಪಾಜೆ ಗ್ರಾಮ ಸುಳ್ಯ ನಿವಾಸಿ ಮಹಮ್ಮದ್ ಮುಸ್ತಕ್ ಎನ್ನಲಾಗಿದೆ. ಕಲ್ಲುಗುಂಡಿ ಪೇಟೆಯ ಚರ್ಚ್ ಬಳಿ ಸಮೀಪ ಹೊಟೇಲ್ ಬದಿಯಲ್ಲಿರುವ ಪಾನ್ ಬೀಡ ಅಂಗಡಿಯೊಂದರ ವ್ಯಕ್ತಿ ಜನರಿಂದ ಹಣವನ್ನು ಪಣವಾಗಿರಿಸಿಕೊಂಡು ಮಟ್ಕಾ ಜೂಜಾಟ ನಡೆಸುತಿರುವ ಬಗ್ಗೆ ಮಾಹಿತಿ ಮೂಲಕ ಜ. 20 ರಂದು ರಾತ್ರಿ ಸುಳ್ಯ

ಗಿರಾಕಿಗಳ ಹಣದಿಂದ ಮಟ್ಕಾ, ಜೂಜಾಟ ನಡೆಸಿದ ಆರೋಪಿಯ ಬಂಧನ Read More »

ಲಾರಿ ಪಲ್ಟಿಯಾಗಿ 10 ಮಂದಿ ದುರ್ಮರಣ

ಯಲ್ಲಾಪುರದಲ್ಲಿ ಬೆಳ್ಳಂಬೆಳಗ್ಗೆ ಸಂಭವಿಸಿದ ಭೀಕರ ಅಪಘಾತ ಯಲ್ಲಾಪುರ: ಲಾರಿ ಪಲ್ಟಿಯಾಗಿ 10 ಮಂದಿ ಸಾವನ್ನಪ್ಪಿರುವ ಭೀಕರ ಅಪಘಾತ ಉತ್ತರ ಕನ್ನಡ ಜಿಲ್ಲೆಯ ಯಲ್ಲಾಪುರ ತಾಲೂಕಿನ ಗುಳ್ಳಾಪುರ ಬಳಿ ಬುಧವಾರ ಮುಂಜಾನೆ ನಡೆದಿದೆ. ಕುಮಟಾದಲ್ಲಿ ಸಂತೆ ಹಿನ್ನೆಲೆಯಲ್ಲಿ ವ್ಯಾಪಾರಸ್ಥರು ಹಣ್ಣು ಹಾಗೂ ತರಕಾರಿ ಹೊತ್ತು ಲಾರಿಯಲ್ಲಿ ಬರುತ್ತಿದ್ದರು. ಈ ವೇಳೆ ರಾಷ್ಟ್ರೀಯ ಹೆದ್ದಾರಿ 63ರಲ್ಲಿ ಲಾರಿ ಪಲ್ಟಿಯಾಗಿ ಅಪಘಾತ ಸಂಭವಿಸಿದೆ. ಸವಣೂರು ತಾಲೂಕಿನ 28 ವ್ಯಾಪಾರಿಗಳು ಲಾರಿಯಲ್ಲಿ ಪ್ರಯಾಣಿಸುತ್ತಿದ್ದರು ಎಂದು ತಿಳಿದುಬಂದಿದೆ. ಗುಳ್ಳಾಪುರದ ಬಳಿ ಲಾರಿ ಚಾಲಕನ ನಿಯಂತ್ರಣ

ಲಾರಿ ಪಲ್ಟಿಯಾಗಿ 10 ಮಂದಿ ದುರ್ಮರಣ Read More »

ಪ್ರವೀಣ್‌ ನೆಟ್ಟಾರು ಹತ್ಯೆ ಪ್ರಕರಣ : 21ನೇ ಆರೋಪಿ ಸೆರೆ

ಪಿಎಫ್ಐ ಸೀಕ್ರೆಟ್‌ ಸರ್ವಿಸ್ ಟೀಮ್ ಸದಸ್ಯ ಬೆಂಗಳೂರು : ಹಿಂದೂ ಕಾರ್ಯಕರ್ತ ಹಾಗೂ ಬಿಜೆಪಿ ಯುವ ಮೋರ್ಚಾ ಸದಸ್ಯ ಪ್ರವೀಣ್ ನೆಟ್ಟಾರು ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಪ್ರಮುಖ ಸಂಚುಕೋರ ನಿಷೇಧಿತ ಪಿಎಫ್ಐ ಸದಸ್ಯನಾಗಿದ್ದ ಅತೀಕ್ ಅಹ್ಮದ್ ಎಂಬಾತನನ್ನು ಎನ್‌ಐಎ ನಿನ್ನೆ ಬಂಧಿಸಿದೆ. ಪ್ರವೀಣ್ ನೆಟ್ಟಾರು ಕೊಲೆ ಕೇಸ್​​ಗೆ ಸಂಬಂಧಿಸಿದಂತೆ ಬಂಧಿಸಲ್ಪಟ್ಟ 21ನೇ ಆರೋಪಿ ಅತೀಕ್. ಈತ ಪ್ರಮುಖ ಆರೋಪಿ ಮುಸ್ತಫಾ ಪೈಚಾರ್​ಗೆ ಆಶ್ರಯ ನೀಡಿದ್ದ ಎನ್ನಲಾಗಿದೆ. ಪಾಪ್ಯುಲರ್ ಫ್ರಂಟ್ ಆಫ್ ಇಂಡಿಯಾ (ಪಿಎಫ್​ಐ) ಸದಸ್ಯನಾಗಿದ್ದ ಅತೀಕ್ ಕೊಲೆ

ಪ್ರವೀಣ್‌ ನೆಟ್ಟಾರು ಹತ್ಯೆ ಪ್ರಕರಣ : 21ನೇ ಆರೋಪಿ ಸೆರೆ Read More »

ಒಂದಿಂಚೂ ಮುಂದುವರಿಯದ ಬೀಡಿ ಉದ್ಯಮಿಯ ಮನೆ ದರೋಡೆ ತನಿಖೆ

ಎರಡೂ ದರೋಡೆ ಕೃತ್ಯಗಳಲ್ಲಿವೆ ಕೆಲವು ಸಾಮ್ಯತೆ ಮಂಗಳೂರು: ಕೆ.ಸಿ ರೋಡ್‌ನ ಕೋಟೆಕಾರು ಸಹಕಾರಿ ಬ್ಯಾಂಕ್‌ ದರೋಡೆ ಕೃತ್ಯವನ್ನು ನಾಲ್ಕೇ ದಿನಗಳಲ್ಲಿ ಭೇದಿಸಲು ಪೊಲೀಸರಿಂದ ಸಾಧ್ಯವಾಗಿದೆ. ಆದರೆ ವಿಟ್ಲ ಸಮೀಪ ಬೋಳಂತೂರಿನ ನಾರ್ಶ ಎಂಬಲ್ಲಿ ಸಿಂಗಾರಿ ಬೀಡಿ ಉದ್ಯಮಿ ಸುಲೈಮಾನ್‌ ಹಾಜಿಯವರ ಮನೆಯಲ್ಲಿ ಇದೇ ರೀತಿ ನಡೆದ ದರೋಡೆ ಪ್ರಕರಣವನ್ನು ಯಾಕೆ ಪತ್ತೆಹಚ್ಚಲು ಸಾಧ್ಯವಾಗುತ್ತಿಲ್ಲ ಎನ್ನುವುದು ಜನಸಾಮಾನ್ಯರ ಮನಸ್ಸಿನಲ್ಲಿ ಸುಳಿದಾಡುತ್ತಿರುವ ಪ್ರಶ್ನೆ.ಜ.3ರಂದು ರಾತ್ರಿ ಜಾರಿ ನಿರ್ದೇಶನಾಲಯದ ಅಧಿಕಾರಿಗಳ ಸೋಗಿನಲ್ಲಿ ಬೀಡಿ ಉದ್ಯಮಿಯ ಮನೆಗೆ ಬಂದಿದ್ದ ಏಳು ದರೋಡೆಕೋರರ ತಂಡ

ಒಂದಿಂಚೂ ಮುಂದುವರಿಯದ ಬೀಡಿ ಉದ್ಯಮಿಯ ಮನೆ ದರೋಡೆ ತನಿಖೆ Read More »

ಎನ್‌ಕೌಂಟರ್‌ನಲ್ಲಿ 12 ನಕ್ಸಲರ ಹತ್ಯೆ

1 ಕೋಟಿ ರೂ. ಬಹುಮಾನ ಹೊಂದಿದ್ದ ನಕ್ಸಲ್‌ ಮುಖಂಡನೂ ಬಲಿ ಭುವನೇಶ್ವರ: ಛತ್ತೀಸ್‌ಗಢದ ಗರಿಯಾಬಂದ್ ಜಿಲ್ಲೆಯಲ್ಲಿ ಭದ್ರತಾ ಪಡೆಗಳು ನಡೆಸಿದ ಎನ್‌ಕೌಂಟರ್‌ನಲ್ಲಿ ಕನಿಷ್ಠ 12 ನಕ್ಸಲರು ಹತರಾಗಿದ್ದಾರೆ. ಸೋಮವಾರ ಮತ್ತು ಮಂಗಳವಾರ ಕಾರ್ಯಾಚರಣೆ ನಡೆಸಲಾಗಿದ್ದು, ಇಬ್ಬರು ಮಹಿಳಾ ನಕ್ಸಲರನ್ನು ಕೂಡ ಹತ್ಯೆ ಮಾಡಲಾಗಿದೆ. ಓರ್ವ ಕೋಬ್ರಾ ಯೋಧ ಗಾಯಗೊಂಡಿದ್ದಾರೆ.ಛತ್ತೀಸ್‌ಗಢ-ಒಡಿಶಾ ಗಡಿಯಲ್ಲಿರುವ ಮೈನ್‌ಪುರ ಪೊಲೀಸ್ ಠಾಣೆ ವ್ಯಾಪ್ತಿಯ ಅರಣ್ಯ ಪ್ರದೇಶದಲ್ಲಿ ಸೋಮವಾರ ತಡರಾತ್ರಿ ಮತ್ತು ಮಂಗಳವಾರ ಮುಂಜಾನೆ ಗುಂಡಿನ ಚಕಮಕಿ ನಡೆದಿದೆ ಎಂದು ಪೊಲೀಸರು ಮಾಹಿತಿ ನೀಡಿದ್ದಾರೆ. ಜಿಲ್ಲಾ

ಎನ್‌ಕೌಂಟರ್‌ನಲ್ಲಿ 12 ನಕ್ಸಲರ ಹತ್ಯೆ Read More »

ಎರಡು ತಿಂಗಳ ಹಿಂದೆ ಮಂಗಳೂರಿಗೆ ಬಂದಿದ್ದ ದರೋಡೆ ಸೂತ್ರಧಾರ

ಸ್ಥಳೀಯರು ನೆರವಾಗಿರುವ ಅನುಮಾನ ಮಂಗಳೂರು : ಉಳ್ಳಾಲದ ಕೋಟೆಕಾರು ಸಹಕಾರಿ ಬ್ಯಾಂಕ್​ ದರೋಡೆಯ ಸೂತ್ರಧಾರ ಮುರುಗಂಡಿ ಥೇವರ್ ಎರಡು ತಿಂಗಳ ಹಿಂದೆ ಮಂಗಳೂರಿಗೆ ಬಂದು ತಲಪಾಡಿ ಸಮೀಪ ಕೆ.ಸಿ.ರೋಡ್‌ನಲ್ಲಿರುವ ಕೋಟೆಕಾರು ಸಹಕಾರಿ ಬ್ಯಾಂಕಿನ ಪರಿಸರವನ್ನು ಅಧ್ಯಯನ ಮಾಡಿ ಹೋಗಿದ್ದ ಎಂಬ ಮಾಹಿತಿ ತಿಳಿದುಬಂದಿದೆ.ಕೋಟೆಕಾರು ಪರಿಸರದಲ್ಲಿ ಓಡಾಡಿ ಎಲ್ಲ ವಿಚಾರ ತಿಳಿದುಕೊಂಡು ನಿಖರವಾದ ಸ್ಕೆಚ್ ತಯಾರಿಸಿ ಮತ್ತೆ ತಮಿಳುನಾಡಿಗೆ ತೆರಳಿದ್ದ. ಆ ಬಳಿಕ ದರೋಡೆಗೆ ಪಕ್ಕಾ ಪ್ಲಾನ್ ಮಾಡಿಕೊಂಡು ತಂಡದ ಜೊತೆ ಬಂದಿದ್ದ ಎಂದು ಪೊಲೀಸ್ ಮೂಲಗಳು ತಿಳಿಸಿವೆ.

ಎರಡು ತಿಂಗಳ ಹಿಂದೆ ಮಂಗಳೂರಿಗೆ ಬಂದಿದ್ದ ದರೋಡೆ ಸೂತ್ರಧಾರ Read More »

error: Content is protected !!
Scroll to Top