ಅಪರಾಧ

ಆಟೋ ರಿಕ್ಷಾದಲ್ಲಿ ಅಕ್ರಮ ಗೋಸಾಗಾಟ | ಬಜರಂಗದಳ ಕಾರ್ಯಕರ್ತರಿಂದ ಕಾರ್ಯಾಚರಣೆ

ಪುತ್ತೂರು : ಅಕ್ರಮವಾಗಿ ಆಟೋ ರಿಕ್ಷಾದಲ್ಲಿ ಗೋ ಸಾಗಾಟ ಮಾಡುತ್ತಿದ್ದುದನ್ನು ಬಜರಂಗದಳ ಕಾರ್ಯಕರ್ತರು ಬೈಪಾಸ್ ರಸ್ತೆಯಲ್ಲಿ ಪತ್ತೆಹಚ್ಚಿದ ಘಟನೆ ಇಂದು ನಡೆದಿದೆ. ಪುತ್ತೂರು ಬೈಪಾಸ್ ರಸ್ತೆಯಲ್ಲಿ ತೆರಳುತ್ತಿದ್ದ ಆಟೋ ರಿಕ್ಷಾದಲ್ಲಿ ವ್ಯಕ್ತಿಯೋರ್ವ ಗೋ ಸಾಗಾಟ ಮಾಡುತ್ತಿರುವ ಬಗ್ಗೆ ಮಾಹಿತಿ ಬಂದ ಮೇರೆಗೆ ಬಜರಂಗದಳ ಕಾರ್ಯಕರ್ತರು ದಾಳಿ ನಡೆಸಿದ್ದು, ಜಾನುವಾರು ಸಹಿತ ಆಟೋ ರಿಕ್ಷಾವನ್ನು ಪೊಲೀಸ್ ಠಾಣೆಗೆ ಒಪ್ಪಿಸಿದ್ದಾರೆ ಎಂದು ತಿಳಿದು ಬಂದಿದೆ. ಆಟೋ ರಿಕ್ಷಾದಲ್ಲಿ ಮಹಿಳೆಯರು ಕೂಡ ಪ್ರಯಾಣಿಸುತ್ತಿದ್ದರು ಎನ್ನಲಾಗಿದ್ದು, ಅವರನ್ನು ಕೂಡ ಪೊಲೀಸರು ವಶಕ್ಕೆ ಪಡೆದಿದ್ದಾರೆ […]

ಆಟೋ ರಿಕ್ಷಾದಲ್ಲಿ ಅಕ್ರಮ ಗೋಸಾಗಾಟ | ಬಜರಂಗದಳ ಕಾರ್ಯಕರ್ತರಿಂದ ಕಾರ್ಯಾಚರಣೆ Read More »

ಅಕ್ರಮ ದನ ಸಾಗಾಟ ಸ್ಥಳಕ್ಕೆ ಪೊಲೀಸರಿಂದ ದಾಳಿ : ಆರೋಪಿಗಳು ಪರಾರಿ

ಬೆಳ್ಳಾರೆ: ಅಕ್ರಮ ದನ ಸಾಗಾಟ ಮಾಡಲು ಯತ್ನಿಸುತ್ತಿದ್ದ ಸ್ಥಳಕ್ಕೆ ಪೊಲೀಸರು ದಾಳಿ ನಡೆಸಿದ ಘಟನೆ ಸುಳ್ಯ ತಾಲೂಕು ಕಲ್ಮಡ್ಕ ಗ್ರಾಮದ ಮುಚ್ಚಿಲ ಎಂಬಲ್ಲಿ ನಡೆದಿದೆ. ಸ್ಕ್ರಿಪ್ಟ್ ಕಾರೊಂದರಲ್ಲಿ ಅಕ್ರಮವಾಗಿ ದನಗಳನ್ನು ತುಂಬಿಸಿ ಸಾಗಾಟ ಮಾಡಲು ಪ್ರಯತ್ನಿಸುತ್ತಿರುವ ಬಗ್ಗೆ ಮಾಹಿತಿ ಬಂದ ಮೇರೆಗೆ ಬೆಳ್ಳಾರೆ ಪೊಲೀಸ್ ಠಾಣೆಯ ಉಪ ನಿರೀಕ್ಷಕರಾದ ಈರಯ್ಯ ಡಿ.ಎನ್. ಮತ್ತು ಸಿಬ್ಬಂದಿಗಳು ಸ್ಥಳಕ್ಕೆ ತೆರಳಿದಾಗ ರಸ್ತೆ ಬದಿಯಲ್ಲಿ ಬಿಳಿ ಬಣ್ಣದ ಕಾರೊಂದು ನಿಂತಿದ್ದು, ಕಾರನ್ನು ಪರಿಶೀಲಿಸಿದಾಗ ಕಾರಿನೊಳಗೆ ಹಿಂಸಾತ್ಮಕವಾಗಿ ಮೂರು ದನಗಳನ್ನು ತುಂಬಿಸಿರುವುದು ಕಂಡು

ಅಕ್ರಮ ದನ ಸಾಗಾಟ ಸ್ಥಳಕ್ಕೆ ಪೊಲೀಸರಿಂದ ದಾಳಿ : ಆರೋಪಿಗಳು ಪರಾರಿ Read More »

ಬಾಬಾ ಸಿದ್ದಿಕಿ ಹತ್ಯೆ ಪ್ರಕರಣ: ಇನ್ನೋರ್ವ ಆರೋಪಿ ಸೆರೆ

ಮುಂಬಯಿ: ಮಹಾರಾಷ್ಟ್ರದ ಮಾಜಿ ಸಚಿವ ಬಾಬಾ ಸಿದ್ದಿಕಿ ಹತ್ಯೆ ಪ್ರಕರಣದ ಮೂರನೇ ಆರೋಪಿಯನ್ನು ಪೊಲೀಸರು ಭಾನುವಾರ ರಾತ್ರಿ ಪುಣೆಯಲ್ಲಿ ಬಂಧಿಸಿದ್ದಾರೆ. ಮೂವರು ಶೂಟರ್‌ಗಳ ಪೈಕಿ ಈತ ತನ್ನ ಸಹೋದರನೊಂದಿಗೆ ಸೇರಿಕೊಂಡು ಹತ್ಯೆಗೆ ಸಂಚು ರೂಪಿಸಿದ್ದ ಎನ್ನಲಾಗಿದೆ. ಬಂಧಿತ ಆರೋಪಿಯನ್ನು ಪುಣೆಯ ಪ್ರವೀಣ್ ಲೋಂಕರ್ (28) ಎಂದು ಗುರುತಿಸಲಾಗಿದೆ. ತಲೆಮರೆಸಿಕೊಂಡಿರುವ ಈತನ ಸಹೋದರ ಶುಭಂ ಲೋಂಕರ್‌ಗಾಗಿ ಪೊಲೀಸರು ಹುಡುಕಾಟ ನಡೆಸುತ್ತಿದ್ದಾರೆ. ಈ ಪ್ರಕರಣದಲ್ಲಿ ಇದು ಮೂರನೇ ಬಂಧನವಾಗಿದೆ. ಇಬ್ಬರು ಆರೋಪಿಗಳನ್ನು ಈಗಾಗಲೇ ಬಂಧಿಸಿದ್ದಾರೆ. ಬಂಧಿತರನ್ನು ಹರ್ಯಾಣದ ಗುರ್ಮೈಲ್ ಬಲ್ಜಿತ್

ಬಾಬಾ ಸಿದ್ದಿಕಿ ಹತ್ಯೆ ಪ್ರಕರಣ: ಇನ್ನೋರ್ವ ಆರೋಪಿ ಸೆರೆ Read More »

ಪೆಟ್ರೋಲ್ ಸುರಿದು ಬೆಂಕಿ ಹಚ್ಚಿ ಮಹಿಳೆ ಹತ್ಯೆಗೆ ಯತ್ನ : ಪ್ರಕರಣ ದಾಖಲು

ಸುಳ್ಯ: ಮಹಿಳೆ ಮೇಲೆ ಪೆಟ್ರೋಲ್ ಸುರಿದು ಬೆಂಕಿ ಹಚ್ಚಿ ಕೊಲೆಗೆ ಯತ್ನಿಸಿರುವ ಬಗ್ಗೆ ಬೆಳ್ಳಾರೆ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಸುಳ್ಯ ತಾಲೂಕಿನ ಕೊಡಿಯಾಲ ಗ್ರಾಮದ ಕಲ್ಕರ್ವೆ ಜಯಭಾರತಿ (56) ಅವರ ಕೊಲೆಗೆ ಯತ್ನಿಸಲಾಗಿದೆ ಎಂದು ತಿಳಿದು ಬಂದಿದೆ. ಜಯಭಾರತಿ  ಮನೆಯಲ್ಲಿ ಶನಿವಾರ ರಾತ್ರಿ ಮಲಗಿದ್ದ ಸಂದರ್ಭದಲ್ಲಿ ಮಹಿಳೆಯ ಬಾವ ಶಂಕರ ಎಂಬವರು ಪೆಟ್ರೋಲ್ ಸುರಿದು ಬೆಂಕಿ ಹಚ್ಚಿದ್ದಾರೆ ಎಂದು ಆರೋಪಿಸಲಾಗಿದೆ. ಗಂಭೀರ ಗಾಯಗೊಂಡಿರುವ ಮಹಿಳೆಯನ್ನು ಸಂಬಂಧಿಕರು ಸುಳ್ಯದ ಆಸ್ಪತ್ರೆಗೆ ಕರೆತಂದು ಹೆಚ್ಚಿನ ಚಿಕಿತ್ಸೆಗೆ ಮಂಗಳೂರಿನ ಆಸ್ಪತ್ರೆಗೆ ದಾಖಲಿಸಲಾಗಿದೆ.

ಪೆಟ್ರೋಲ್ ಸುರಿದು ಬೆಂಕಿ ಹಚ್ಚಿ ಮಹಿಳೆ ಹತ್ಯೆಗೆ ಯತ್ನ : ಪ್ರಕರಣ ದಾಖಲು Read More »

ಗುಜರಾತ್‌ನಲ್ಲಿ 5000 ಕೋ.ರೂ. ಮೌಲ್ಯದ ಕೊಕೇನ್‌ ವಶ

ಹೊಸದಿಲ್ಲಿ : ದಿಲ್ಲಿಯ ಬಳಿಕ ಈಗ ಗುಜರಾತ್‌ನಲ್ಲಿ ಭಾರಿ ಪ್ರಮಾಣದ ಮಾದಕ ವಸ್ತು ವಶವಾಗಿದೆ. ಗುಜರಾತಿನ ಅಂಕಲೇಶ್ವರ ನಗರದ ಗೋದಾಮೊಂದರಿಂದ ಪೊಲೀಸರು 5000 ಕೋ. ರೂ. ಬೆಲೆಬಾಳುವ ಕೊಕೇನ್‌ ಡ್ರಗ್‌ ವಶಪಡಿಸಿಕೊಂಡಿದ್ದಾರೆ. ದಿಲ್ಲಿ ಮತ್ತು ಗುಜರಾತ್‌ ಪೊಲೀಸರು ಆವ್ಕರ್‌ ಡ್ರಗ್ಸ್‌ ಲಿಮಿಟೆಡ್‌ ಕಂಪನಿಯ ಗೋದಾಮಿಗೆ ಖಚಿತ ಮಾಹಿತಿಯ ಆಧಾರದಲ್ಲಿ ದಾಳಿ ಮಾಡಿದಾಗ 518 ಕೆಜಿ ಕೊಕೇನ್‌ ವಶವಾಗಿದೆ. ಇದರ ಈಗಿನ ಮಾರುಕಟ್ಟೆ ಮೌಲ್ಯ 5000 ಕೋ.ರೂ.ಗೂ ಹೆಚ್ಚಿದೆ ಎಂದು ಪೊಲೀಸರು ತಿಳಿಸಿದ್ದಾರೆ. ಕೆಲದಿನಗಳ ಹಿಂದೆಯಷ್ಟೇ ದಿಲ್ಲಿ ಪೊಲೀಸರು

ಗುಜರಾತ್‌ನಲ್ಲಿ 5000 ಕೋ.ರೂ. ಮೌಲ್ಯದ ಕೊಕೇನ್‌ ವಶ Read More »

ಕಾಡುಕೋಣ ಬೇಟೆ | ಉಪ್ಪಿನಂಗಡಿ ಅರಣ್ಯಾಧಿಕಾರಿಗಳ ತಂಡದಿಂದ ಪತ್ತೆ | ಆರೋಪಿಗಳು ಪರಾರಿ

ಉಪ್ಪಿನಂಗಡಿ : ವಲಯ ಅರಣ್ಯ ವ್ಯಾಪ್ತಿಯ ಮೀಸಲು ಅರಣ್ಯ ಪ್ರದೇಶದಲ್ಲಿ ಹಾಡಹಗಲೇ ನಾಲ್ವರು ಬೇಟೆಗಾರರ ತಂಡ ಭಾರೀ ಗಾತ್ರದ ಕಾಡುಕೋಣವನ್ನು ಕೊಂದು ಒಣ ಮಾಂಸವನ್ನಾಗಿ ಪರಿವರ್ತಿಸಿದ ಘಟನೆಯನ್ನು ಉಪ್ಪಿನಂಗಡಿ ಅರಣ್ಯಾಧಿಕಾರಿಗಳ ತಂಡ ಪತ್ತೆ ಹಚ್ಚಿದೆ. ನಿಡ್ಲೆ ಗ್ರಾಮದ ಬೂಡುಜಾಲಿನಲ್ಲಿ ಮೀಸಲು ಅರಣ್ಯದ ಅಂಚಿನಲ್ಲಿರುವ ತೋಟದಲ್ಲಿ ಕಾಡುಕೋಣವೊಂದನ್ನು ಗುಂಡಿಕ್ಕಿ ಕೊಂದು ಕಾಡಿನಲ್ಲೇ ಕತ್ತರಿಸಿ ಪಿಕಪ್ ವಾಹನದ ಮೂಲಕ ಸಾಗಿಸಿರುವ ಮಾಹಿತಿ ಮೇರೆಗೆ ದಾಳಿ ನಡೆಸಲಾಗಿತ್ತು. ಬೂಡುಜಾಲು ಅರಣ್ಯ ಅಂಚಿನಲ್ಲಿ ಇರುವ ತೋಟಕ್ಕೆ ಬೃಹತ್ ಗಾತ್ರದ ಕಾಡುಕೋಣ ಬರುತ್ತಿತ್ತೆನ್ನಲಾಗಿದ್ದು, ಇದಕ್ಕಾಗಿ

ಕಾಡುಕೋಣ ಬೇಟೆ | ಉಪ್ಪಿನಂಗಡಿ ಅರಣ್ಯಾಧಿಕಾರಿಗಳ ತಂಡದಿಂದ ಪತ್ತೆ | ಆರೋಪಿಗಳು ಪರಾರಿ Read More »

ಸೀತಾಮಾತೆಯನ್ನು ಹುಡುಕಲು ಹೋದ ʼವಾನರʼರು ಪಲಾಯನ

ತೀವ್ರ ಮುಜುಗರದ ಸ್ಥಿತಿಯಲ್ಲಿ ಜೈಲು ಅಧಿಕಾರಿಗಳು ಹೊಸದಿಲ್ಲಿ: ಸೀತಾಮಾತೆಯನ್ನು ಹುಡುಕಲು ಹೋದ ʼವಾನರʼರಿಬ್ಬರು ಇನ್ನೂ ಹಿಂದಿರುಗದಿರುವುದು ಜೈಲು ಅಧಿಕಾರಿಗಳಿಗೆ ಚಿಂತೆಯನ್ನುಂಟು ಮಾಡಿದೆ. ಇದು ಶುಕ್ರವಾರ ರಾತ್ರಿ ನಡೆದ ಘಟನೆ. ಉತ್ತರಾಖಂಡದ ಹರಿದ್ವಾರ ಜಿಲ್ಲಾ ಕಾರಾಗೃಹದಲ್ಲಿ ದಸರಾ ಅಂಗವಾಗಿ ಜೈಲಿನಲ್ಲಿ ರಾಮಲೀಲಾ ನಾಟಕ ಆಡಿಸಲಾಗಿತ್ತು. ಕೈದಿಗಳು ವಿವಿಧ ಪಾತ್ರಧಾರಿಗಳಾಗಿ ಅಭಿನಯಿಸುತ್ತಿದ್ದರು. ವಾನರ ವೇಷ ಧರಿಸಿದ್ದ ಇಬ್ಬರು ಕೈದಿಗಳು ಮಾತ್ರ ಸೀತಾಮಾತೆಯನ್ನು ಹುಡುಕಲೇಂದು ಹೋದವರು ಪರಾರಿಯಾಗಿದ್ದು, ಮಂಕುಬೂದಿ ಎರಚಿಸಿಕೊಂಡ ಜೈಲು ಅಧಿಕಾರಿಗಳನ್ನು ನೋಡಿ ಜನರು ಮುಸಿಮುಸಿ ನಗುತ್ತಿದ್ದಾರೆ. ಪೊಲೀಸರು ಮತ್ತು

ಸೀತಾಮಾತೆಯನ್ನು ಹುಡುಕಲು ಹೋದ ʼವಾನರʼರು ಪಲಾಯನ Read More »

ಮಾಜಿ ಸಚಿವ ಬಾಬಾ ಸಿದ್ದಿಕಿ ಹತ್ಯೆ ಬಿಷ್ಣೋಯ್‌ ಗ್ಯಾಂಗ್‌ ಕೃತ್ಯ?

ಎನ್‌ಸಿಪಿ ನಾಯಕನ ಹತ್ಯೆಯಿಂದ ನಟ ಸಲ್ಮಾನ್‌ ಖಾನ್‌ಗೆ ನಡುಕ ಮುಂಬಯಿ: ಮಹಾರಾಷ್ಟ್ರದ ಮಾಜಿ ಸಚಿವ, ಪ್ರಭಾವಿ ಮುಸ್ಲಿಂ ನಾಯಕ ಬಾಬಾ ಸಿದ್ದಿಕಿ ಅವರನ್ನು ದಸರಾ ದಿನವೇ ಹತ್ಯೆ ಮಾಡಿರುವುದು ಆಘಾತದ ಅಲೆ ಎಬ್ಬಿಸಿದೆ. ಇದು ಲಾರೆನ್ಸ್‌ ಬಿಷ್ಣೋಯ್‌ ಗ್ಯಾಂಗ್‌ನ ಕೃತ್ಯವೇ ಎಂಬ ಅನುಮಾನ ಮೂಡಿದೆ. ಹತ್ಯೆ ಕೃತ್ಕಕ್ಕೆ ಸಂಬಂಧಿಸಿ ಸೆರೆಯಾಗಿರುವ ಇಬ್ಬರು ಶಂಕಿತರು ತಮ್ಮನ್ನು ಲಾರೆನ್ಸ್‌ ಬಿಷ್ಣೋಯ್‌ ಗ್ಯಾಂಗ್‌ ಸದಸ್ಯರು ಎಂದು ಹೇಳಿಕೊಂಡಿದ್ದಾರೆ. ಈ ಕಾರಣಕ್ಕೆ ಬಾಲಿವುಡ್‌ನಲ್ಲೂ ಬಾಬಾ ಸಿದ್ದಿಕಿಯ ಹತ್ಯೆ ತಲ್ಲಣ ಮೂಡಿಸಿದೆ. ನಿರ್ದಿಷ್ಟವಾಗಿ ನಟ

ಮಾಜಿ ಸಚಿವ ಬಾಬಾ ಸಿದ್ದಿಕಿ ಹತ್ಯೆ ಬಿಷ್ಣೋಯ್‌ ಗ್ಯಾಂಗ್‌ ಕೃತ್ಯ? Read More »

ಹಿಂದೂ ಯುವಕನಿಗೆ ಅನ್ಯ ಧರ್ಮದ ಯುವಕರಿಂದ ಹಲ್ಲೆ! | ಹಲ್ಲೆ ನಡೆಸಿದ ನಾಲ್ವರು ಪೊಲೀಸ್ ವಶಕ್ಕೆ !

ಪುತ್ತೂರು: ಬೆಂಗಳೂರಿನಿಂದ ಮಂಗಳೂರಿಗೆ ಬರುತ್ತಿದ್ದ ರೈಲಿನಲ್ಲಿ ಸುಳ್ಯದ ಹಿಂದೂ ಯುವಕನಿಗೆ ಅದೇ ರೈಲಿನಲ್ಲಿ ಬಂದ ಅನ್ಯ ಧರ್ಮದ ನಾಲ್ವರು ಕಬಕ ಪುತ್ತೂರು ರೈಲು ನಿಲ್ದಾಣದಲ್ಲಿ ಹಲ್ಲೆ ನಡೆಸಿ ಪರಾರಿಯಾದ ಘಟನೆ ಇಂದು ಬೆಳಿಗ್ಗೆ ನಡೆದಿದೆ. ಆದ್ರೆ ತತ್ ಕ್ಷಣ ಎಚ್ಚೆತ್ತ ಪುತ್ತೂರು ಪೊಲೀಸರು ಹಲ್ಲೆ ನಡೆಸಿ ಪರಾರಿಯಾದ ನಾಲ್ವರನ್ನು  ಸಾಲ್ಮರ ಮಸೀದಿ ಬಳಿಯಿಂದ ವಶಕ್ಕೆ ಪಡೆದು ಕೊಂಡಿದ್ದಾರೆ ಎಂದು ತಿಳಿದುಬಂದಿದೆ. ಬೆಂಗಳೂರಿನಿಂದ ಪುತ್ತೂರು ಆಗಿ ಮಂಗಳೂರು ಕಡೆ ಹೋಗುವ ರೈಲಿನಲ್ಲಿ ಕೆಲ ಮಂದಿ ಗಲಾಟೆ ಮಾಡುತ್ತಿರುವುದನ್ನು ಯುವಕನೊಬ್ಬ

ಹಿಂದೂ ಯುವಕನಿಗೆ ಅನ್ಯ ಧರ್ಮದ ಯುವಕರಿಂದ ಹಲ್ಲೆ! | ಹಲ್ಲೆ ನಡೆಸಿದ ನಾಲ್ವರು ಪೊಲೀಸ್ ವಶಕ್ಕೆ ! Read More »

ಮಗಳ ಮೇಲೆ ನಾಲ್ಕು ವರ್ಷ ಅತ್ಯಾಚಾರ ಎಸಗಿದ ಪಾಪಿ ತಂದೆ

ಭೋಪಾಲ: ಪಾಪಿ ತಂದೆಯೊಬ್ಬ ತನ್ನ ಮಗಳ ಮೇಲೆಯೇ ನಿರಂತರವಾಗಿ ಅತ್ಯಾಚಾರ ಎಸಗಿರುವ ನೀಚ ಘಟನೆ ಮಧ್ಯಪ್ರದೇಶದ ಛತ್ತರ್‌ಪುರದಲ್ಲಿ ನಡೆದಿದೆ.ಆರೋಪಿಯ ಪತ್ನಿ ಮತ್ತು 21 ವರ್ಷದ ಮಗಳು ಇಂದು ಈ ಸಂಬಂಧ ಲವ್ಕುಶ್ ನಗರ ಪೊಲೀಸ್ ಠಾಣೆಗೆ ದೂರು ನೀಡಿದ್ದಾರೆ. 40 ವರ್ಷ ಪ್ರಾಯದ ಆರೋಪಿ ಪರಾರಿಯಾಗಿದ್ದು, ಆತನ ಬಂಧನಕ್ಕೆ ಪೊಲೀಸರು ಹುಡುಕಾಟ ಆರಂಭಿಸಿದ್ದಾರೆ. ಆರೋಪಿಯ ವಿರುದ್ಧ ಭಾರತೀಯ ನ್ಯಾಯ ಸಂಹಿತಾ (ಬಿಎನ್‌ಎಸ್) ಅಡಿಯಲ್ಲಿ ಅತ್ಯಾಚಾರ, ಆರೋಪಿ ತನ್ನ ಮಗಳನ್ನು 18 ವರ್ಷಕ್ಕಿಂತ ಕಡಿಮೆ ವಯಸ್ಸಿನಿಂದಲೂ ಅತ್ಯಾಚಾರವೆಸಗುತ್ತಿದ್ದರಿಂದ ಲೈಂಗಿಕ

ಮಗಳ ಮೇಲೆ ನಾಲ್ಕು ವರ್ಷ ಅತ್ಯಾಚಾರ ಎಸಗಿದ ಪಾಪಿ ತಂದೆ Read More »

error: Content is protected !!
Scroll to Top