ಟೀಮ್ ಕಲ್ಲೇಗ ಟೈಗರ್ಸ್ ಮುಖ್ಯಸ್ಥ ಅಕ್ಷಯ್ ಕಲ್ಲೇಗ ಹತ್ಯೆ ಪ್ರಕರಣ | 1 ಹಾಗೂ 2ನೇ ಆರೋಪಿ ಜಾಮೀನು ಅರ್ಜಿ ತಿರಸ್ಕೃತ
ಪುತ್ತೂರು : ಟೀಮ್ ಕಲ್ಲೇಗ ಟೈಗರ್ಸ್ ಮುಖ್ಯಸ್ಥ ಅಕ್ಷಯ್ ಕಲ್ಲೇಗ ಕೊಲೆ ಪ್ರಕರಣಕ್ಕೆ ಸಂಬಂಧಿಸಿ 1 ಮತ್ತು 2ನೇ ಆರೋಪಿಗಳಾದ ಚೇತನ್ ಹಾಗೂ ಮನೀಷ್ ಅವರ ಅರ್ಜಿಯನ್ನು ಪುತ್ತೂರು 5ನೇ ಹೆಚ್ಚುವರಿ ಜಿಲ್ಲಾ ಮತ್ತು ಸತ್ರ ನ್ಯಾಯಾಲಯದಲ್ಲಿ ತಿರಸ್ಕೃತಗೊಂಡಿದೆ. ಜಾಮೀನಿಗೆ ಅರ್ಜಿ ಸಲ್ಲಿಸಿದ್ದರಿಂದ ಸುದೀರ್ಘ ಪ್ರತಿವಾದ ನಡೆದು ಇದೀಗ ಮಾನ್ಯ ನ್ಯಾಯಾಲಯ ಜಾಮೀನು ನಿರಾಕರಣೆ ಮಾಡಿ ಅರ್ಜಿಯನ್ನು ತಿರಸ್ಕೃತಗೊಳಿಸಿದೆ. ನ. 6ರಂದು ತಡರಾತ್ರಿ ಪುತ್ತೂರಿನ ನೆಹರೂನಗರದಲ್ಲಿ ಅಕ್ಷಯ್ ಕಲ್ಲೇಗ ಅವರ ಹತ್ಯೆಯಾಗಿತ್ತು. ದೂರುದಾರರ ಪರ ವಿಶೇಷ ಸರ್ಕಾರಿ […]










