ಅಪರಾಧ

ಇಬ್ಬರು ಕುಖ್ಯಾತ ಸರಗಳ್ಳರ ಬಂಧನ : ಸರ, ಬೈಕ್‌ ವಶ

39ಕ್ಕೂ ಅಧಿಕ ಪ್ರಕರಣಗಳಿರುವ ಕುಖ್ಯಾತ ಕಳ್ಳರು 24 ತಾಸೊಳಗೆ ಅರೆಸ್ಟ್‌ ಮಂಗಳೂರು : ಕಾರ್ಕಳದಲ್ಲಿ ಕಳೆದ ಡಿ.9ರಂದು ನಡೆದ ಸರಗಳ್ಳತನ ಕೃತ್ಯದ ಆರೋಪಿಗಳಿಬ್ಬರನ್ನು ಮಂಗಳೂರು ಸಿಸಿಬಿ ಪೊಲೀಸರು ಬಂಧಿಸಿದ್ದಾರೆ. ಮಂಗಳೂರು ಹಾಗೂ ಕಾರ್ಕಳ ಗ್ರಾಮಾಂತರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಬೈಕ್‌ನಲ್ಲಿ ಬಂದು ಮಹಿಳೆಯರ ಕುತ್ತಿಗೆಯಿಂದ ಚಿನ್ನದ ಸರ ಕಿತ್ತುಕೊಂಡ ಪರಾರಿಯಾದ ಪ್ರಕರಣಗಳ ಆರೋಪಿಗಳು ಇವರು ಎಂದು ಮಂಗಳೂರು ಪೊಲೀಸರು ತಿಳಿಸಿದ್ದಾರೆ. ಕೃತ್ಯ ನಡೆದ 24 ಗಂಟೆ ಒಳಗಡೆ ಮಂಗಳೂರು ಸಿಸಿಬಿ ಪೊಲೀಸರು ಇಬ್ಬರನ್ನು ಬಂಧಿಸುವಲ್ಲಿ ಯಶಸ್ವಿಯಾಗಿದ್ದು, ಚಿನ್ನದ […]

ಇಬ್ಬರು ಕುಖ್ಯಾತ ಸರಗಳ್ಳರ ಬಂಧನ : ಸರ, ಬೈಕ್‌ ವಶ Read More »

ಮಾದಕ ವಸ್ತು ಮಾರಾಟ ಮಾಡುತ್ತಿದ್ದ  ಆರೋಪಿಯ ಬಂಧನ | 56,000 ರೂ. ಮೌಲ್ಯದ ಮಾದಕ ವಸ್ತು ವಶ

ಮಂಗಳೂರು: ಮಾದಕ ವಸ್ತುವನ್ನು ಮಾರಾಟ ಮಾಡುತ್ತಿದ್ದ  ಆರೋಪಿಯನ್ನು ಕಾವೂರು ಪೊಲೀಸರು ಬಂಧಿಸಿದ್ದಾರೆ. ಬಂಧಿತ ಆರೋಪಿಯನ್ನು ವಾಮಂಜೂರು ತಿರುವೈಲು ಮೂಡುಜೆಪ್ಪು ಅಮೃತೇಶ್ವರ ದೇವಸ್ಥಾನದ ಬಳಿಯ ನಿವಾಸಿ ನದೀಂ(34) ಎಂದು ಪತ್ತೆ ಹಚ್ಚಲಾಗಿದೆ. ಈತ ಬಂಗ್ರ ಕೂಳೂರು ಕಡೆಗೆ ಹೋಗುವ ರಸ್ತೆಯಲ್ಲಿ ಕಾರಿನಲ್ಲಿ ಮಾದಕ ವಸ್ತುಗಳನ್ನಿಟ್ಟುಕೊಂಡು ಗಿರಾಕಿಗಳಿಗಾಗಿ ಕಾಯುತ್ತಿದ್ದ ಎನ್ನಲಾಗಿದ್ದು, ಈತನ ವಶದಲ್ಲಿದ್ದ ಅಂದಾಜು 56,000 ರೂ. ಬೆಲೆಬಾಳುವ ಮಾದಕ ವಸ್ತುಗಳು, ಮೊಬೈಲ್ ಫೋನ್, 7 ಡೆಬಿಟ್‌ ಕಾರ್ಡ್‌ಗಳು ಮತ್ತು ಕಾರನ್ನು ಪೊಲೀಸರು ವಶಪಡಿಸಿಕೊಂಡಿದ್ದಾರೆ.

ಮಾದಕ ವಸ್ತು ಮಾರಾಟ ಮಾಡುತ್ತಿದ್ದ  ಆರೋಪಿಯ ಬಂಧನ | 56,000 ರೂ. ಮೌಲ್ಯದ ಮಾದಕ ವಸ್ತು ವಶ Read More »

ಟವರ್ ನಿರ್ಮಾಣಕ್ಕೆ ವಿರೋಧ | ಸ್ಥಳಕ್ಕೆ ಜಮಾಯಿಸಿದ ಸ್ಥಳೀಯರಿಂದ ಪ್ರತಿಭಟನೆ | ಸ್ಥಳದಲ್ಲಿ ಪೊಲೀಸರೊಂದಿಗೆ ಮಾತುಕತೆ

ಪುತ್ತೂರು: ಪುತ್ತೂರು ಬೈಪಾಸ್ ರಸ್ತೆಯ ಬಪ್ಪಳಿಗೆಯ ಗುಡ್ಡದ ಮೇಲಿನ ಖಾಸಗಿ ಸ್ಥಳವೊಂದರಲ್ಲಿ ಖಾಸಗಿ ಕಂಪೆನಿಯೊಂದರಿಂದ ಮೊಬೈಲ್ ಟವರ್ ಕಾಮಗಾರಿ ನಡೆಯುತ್ತಿರುವುದನ್ನು ಸ್ಥಳೀಯರು ವಿರೋಧಿಸಿದ್ದು, ಅಪಾಯದ ಹಿನ್ನಲೆಯಲ್ಲಿ ಮಂಗಳವಾರ ಬೆಳಗ್ಗೆ ಸ್ಥಳೀಯರು ಜಮಾಯಿಸಿ ವಿರೋಧ ವ್ಯಕ್ತಪಡಿಸಿದರು. ನಗರಸಭೆಯಿಂದ ನಿರಾಪೇಕ್ಷಣ ಪತ್ರ ಪಡೆಯದೇ ಟವರ್ ನಿರ್ಮಾಣ ಮಾಡುತ್ತಿದ್ದಾರೆ. ಜನರ ಆರೋಗ್ಯದ ಹಿತದೃಷ್ಟಿಯಿಂದ ಜನವಸತಿ ಪ್ರದೇಶದಲ್ಲಿ ಮೊಬೈಲ್ ಟವರ್ ನಿರ್ಮಾಣ ಮಾಡಬಾರದು. ಜೊತೆಗೆ ಮಳೆಗಾದಲ್ಲಿ ಪದೇ ಪದೇ ಕುಸಿಯುತ್ತಿರುವ ಬೈಪಾಸ್ ರಸ್ತೆಯ ಗುಡ್ಡದಲ್ಲಿ ಈ ಟವರ್ ನಿರ್ಮಾಣ ಆದರೆ ಅಪಾಯ ತಪ್ಪಿದಲ್ಲ

ಟವರ್ ನಿರ್ಮಾಣಕ್ಕೆ ವಿರೋಧ | ಸ್ಥಳಕ್ಕೆ ಜಮಾಯಿಸಿದ ಸ್ಥಳೀಯರಿಂದ ಪ್ರತಿಭಟನೆ | ಸ್ಥಳದಲ್ಲಿ ಪೊಲೀಸರೊಂದಿಗೆ ಮಾತುಕತೆ Read More »

ಉದ್ಯೋಗದ ನೆಪದಲ್ಲಿ ಯುವತಿಗೆ ಕಿರುಕುಳ | ಪಿಡಬ್ಲ್ಯೂಡಿ ಇಂಜಿನಿಯರ್ ಗೆ ಚಪ್ಪಲಿಯಿಂದ ಏಟು

ಮಧ್ಯಪ್ರದೇಶ: ಉದ್ಯೋಗ ಕೊಡಿಸುವುದಾಗಿ ಪಿಡಬ್ಲ್ಯೂಡಿ ಸಬ್‌ ಇಂಜಿನಿಯರ್‌ ಯುವತಿಯನ್ನು ವಿಶ್ರಾಂತಿ ಕೊಠಡಿಗೆ ಕರೆಸಿಕೊಂಡು ಕಿರುಕುಳ ನೀಡಿದ ಘಟನೆ  ಮಧ್ಯಪ್ರದೇಶದ ಗ್ವಾಲಿಯರ್‌ನಲ್ಲಿನಡೆದಿದೆ. ಕೆಲಸ ಕೊಡಿಸುವುದಾಗಿ ಹೇಳಿ ಮೋಸ ಮಾಡಿದ್ದ ಎಂದು ಆತನ ನಿಜಾಂಶ ತಿಳಿದು ಚಪ್ಪಲಿಯಿಂದ ಹಿಗ್ಗಾಮುಗ್ಗವಾಗಿ ಭಾರಿಸಿದ್ದಾಳೆ. ಈ ಘಟನೆಯ ವೀಡಿಯೋ ಸೋಷಿಯಲ್‍ ಮೀಡಿಯಾದಲ್ಲಿ ಬಾರಿ ವೈರಲ್‍ ಆಗಿದ್ದು, ಈಕೆಯ ಧೈರ್ಯಕ್ಕೆ ನೆಟ್ಟಿಗರು ಮೆಚ್ಚುಗೆಯನ್ನು ವ್ಯಕ್ತ ಪಡಿಸಿದ್ದಾರೆ. ಭಾನುವಾರ ಈ ಘಟನೆ ನಡೆದಿದ್ದು, ದಾಬ್ರಾದಲ್ಲಿ ಸಬ್‌ ಇಂಜಿನಿಯರ್‌ ಆಗಿ ಕೆಲಸ ಮಾಡುತ್ತಿದ್ದ ರಾಮ್ ಸ್ವರೂಪ್ ಕುಶ್ವಾಹ ಎಂದು

ಉದ್ಯೋಗದ ನೆಪದಲ್ಲಿ ಯುವತಿಗೆ ಕಿರುಕುಳ | ಪಿಡಬ್ಲ್ಯೂಡಿ ಇಂಜಿನಿಯರ್ ಗೆ ಚಪ್ಪಲಿಯಿಂದ ಏಟು Read More »

ಪಾದಚಾರಿ ಮಹಿಳೆಯ ಕುತ್ತಿಗೆಯಿಂದ ಕರಿಮಣಿ ಸರ ಎಳೆದು ಪರಾರಿ

ಬೆಳ್ತಂಗಡಿ : ಮಹಿಳೆಯೊಬ್ಬರನ್ನು ಹಿಂಬಾಲಿಸಿಕೊಂಡು ಬಂದು ಬೆದರಿಸಿ ಚಿನ್ನದ ಕರಿಮಣಿ ಸರವನ್ನು ಎಳೆದು ಪರಾರಿಯಾದ ಘಟನೆ ಬೆಳ್ತಂಗಡಿಯ ಕೊಯ್ಯೂರಿನಲ್ಲಿ ನಡೆದಿದೆ. ಬೆಳ್ತಂಗಡಿ ತಾಲೂಕಿನ ಕೊಯ್ಯೂರು ಗ್ರಾಮದ ಕೋರಿಯಾರ್ ನಿವಾಸಿ ದಾಮೋಧರ್ ಭಟ್ ಅವರ ಪತ್ನಿ ರಾಜೀವಿ(50) ಎಂಬವರ ಕುತ್ತಿಗೆಯಿಂದ ಆರೋಪಿ ಬೆಳ್ತಂಗಡಿ ತಾಲೂಕಿನ ಕೊಯ್ಯೂರು ಗ್ರಾಮದ ಗಿರಿಗುಡ್ಡೆ ಡೆಂಬುಗ ನಿವಾಸಿ ಕೊರಗಪ್ಪ ಗೌಡರ ಮಗ ಉಮೇಶ್‍ ಗೌಡ ಕರಿಮಣಿ ಸರ ಎಳೆದು ಪರಾರಿಯಾಗಿದ್ದನೆ ಎನ್ನಲಾಗಿದೆ. ಮಹಿಳೆ ಬೆಳ್ತಂಗಡಿಗೆ ಹೋಗಿ ವಾಪಸ್ ಮನೆಗೆ ಕೊಯ್ಯೂರು ಗ್ರಾಮದ ಪಾಂಬೇಲ್ ಕ್ರಾಸ್

ಪಾದಚಾರಿ ಮಹಿಳೆಯ ಕುತ್ತಿಗೆಯಿಂದ ಕರಿಮಣಿ ಸರ ಎಳೆದು ಪರಾರಿ Read More »

ಮಾಜಿ ಮುಖ್ಯಮಂತ್ರಿ ಎಸ್‌.ಎಂ.ಕೃಷ್ಣ ಇನ್ನಿಲ್ಲ

ರಾಜ್ಯಪಾಲರಾಗಿ, ವಿದೇಶಾಂಗ ಸಚಿವರಾಗಿ ಸೇವೆ ಸಲ್ಲಿಸಿದ್ದ ಮುತ್ಸದ್ದಿ ರಾಜಕಾರಣಿ ಬೆಂಗಳೂರು : ಕರ್ನಾಟಕ ರಾಜಕಾರಣ ಕಂಡ ಮುತ್ಸದ್ದಿ ರಾಜಕಾರಣಿ, ಮಾಜಿ ವಿದೇಶಾಂಗ ಸಚಿವ, ಮಾಜಿ ಮುಖ್ಯಮಂತ್ರಿ ಎಸ್​.ಎಂ ಕೃಷ್ಣ ಬೆಂಗಳೂರಿನ ಸದಾಶಿವನಗರದ ನಿವಾಸದಲ್ಲಿ ಇಂದು (ಡಿಸೆಂಬರ್​ 10) ನಸುಕಿನ ಜಾವ 2.30ರ ಸುಮಾರಿಗೆ ನಿಧನರಾದರು. ಅವರಿಗೆ 92 ವರ್ಷ ವಯಸ್ಸಾಗಿತ್ತು. ವಯೋಸಹಜ ಕಾಯಿಲೆಯಿಂದ ಬಳಲುತ್ತಿದ್ದ ಎಸ್​​.ಎಂ ಕೃಷ್ಣರನ್ನು ಆಸ್ಪತ್ರೆಗೆ ಚಿಕಿತ್ಸೆ ಕೊಡಿಸಲಾಗಿತ್ತು. ಶ್ವಾಸಕೋಶದ ಸೋಂಕಿನ ಕಾರಣಕ್ಕೆ ಅವರು ಉಸಿರಾಟದ ತೊಂದರೆಯಿಂದ ಬಳಲುತ್ತಿದ್ದರು. ಮಂಡ್ಯ ಜಿಲ್ಲೆಯ ಮದ್ದೂರು ತಾಲೂಕಿನ

ಮಾಜಿ ಮುಖ್ಯಮಂತ್ರಿ ಎಸ್‌.ಎಂ.ಕೃಷ್ಣ ಇನ್ನಿಲ್ಲ Read More »

40ಕ್ಕೂ ಅಧಿಕ ಶಾಲೆಗಳಿಗೆ ಬಾಂಬ್‌ ಬೆದರಿಕೆ : ಬೆಚ್ಚಿಬಿದ್ದ ರಾಜಧಾನಿ

ಹುಸಿ ಬೆದರಿಕೆ ಕಳುಹಿಸಿ ಕಾಟ ಕೊಡುತ್ತಿರುವವರಿಗೆ ಶೋಧ ಹೊಸದಿಲ್ಲಿ: ದಿಲ್ಲಿಯ 40ಕ್ಕೂ ಅಧಿಕ ಖಾಸಗಿ ಶಾಲೆಗಳಿಗೆ ಇಂದು ಬೆಳ್ಳಂಬೆಳಗ್ಗೆ ಇ-ಮೇಲ್‌ ಮೂಲಕ ಬಾಂಬಿಟ್ಟಿರುವ ಕುರಿತು ಬಂದಿದ್ದ ಬೆದರಿಕೆ ಸಂದೇಶ ತಾಸುಗಳಷ್ಟು ಹೊತ್ತು ಆತಂಕಕ್ಕೆ ಕಾರಣವಾಯಿತು. ಪೊಲೀಸರು ಬಾಂಬ್‌ ನಿಷ್ಕ್ರಿಯ ತಂಡದೊಂದಿಗೆ ಶಾಲೆಯಿಂದ ಶಾಲೆಗೆ ಅಲೆದಾಡಿ ಯಾವುದೇ ಅನುಮಾನಾಸ್ಪದ ವಸ್ತುಗಳು ಕಂಡುಬಂದಿಲ್ಲ ಎಂದು ಹೇಳಿದ ಬಳಿಕ ಪರಿಸ್ಥಿತಿ ನಿರಾಳವಾಯಿತು.40ಕ್ಕೂ ಹೆಚ್ಚು ಶಾಲೆಗಳಿಗೆ ಇ-ಮೇಲ್ ಮೂಲಕ ಬೆದರಿಕೆಗಳನ್ನು ಕಳುಹಿಸಲಾಗಿದೆ. ಇನ್ನು ಮುಂದೆ ಬೆದರಿಕೆ ಬರಬಾರದು ಎಂದಾದರೆ 30 ಸಾವಿರ ಡಾಲರ್

40ಕ್ಕೂ ಅಧಿಕ ಶಾಲೆಗಳಿಗೆ ಬಾಂಬ್‌ ಬೆದರಿಕೆ : ಬೆಚ್ಚಿಬಿದ್ದ ರಾಜಧಾನಿ Read More »

ನಮ್ಮನ್ನು ಬೊಳುವಾರಿನಲ್ಲಿ ಇಳಿಸುತ್ತಾರೆ: ವಿದ್ಯಾರ್ಥಿಗಳಿಂದ ಶಾಸಕರಿಗೆ ದೂರು

ಪುತ್ತೂರು: ನಾವು ಉಪ್ಪಿನಂಗಡಿಯಿಂದ ವಿಟ್ಲ ಐಟಿಐ ಕಾಲೇಜಿಗೆ ವ್ಯಾಸಂಗಕ್ಕೆ ಬರುತ್ತಿದ್ದೇವೆ, ನಮಗೆ ಬೊಳುವಾರಿನಿಂದ ವಿಟ್ಲ ಎಂದು ಬಸ್ ಪಾಸ್ ಕೊಟ್ಟಿದ್ದಾರೆ. ಮನೆಯಿಂದ ಕಾಲೇಜಿಗೆ ಬರುವಾಗ ನಾವು ಬೊಳುವಾರಿನ ಇಳಿಯಬೇಕು ಕಾಲೇಜು ಮುಗಿಸಿ ಬರುವಾಗಲೂ ನಾವು ಬೊಳುವಾರಿನಲ್ಲೇ ಇಳಿಯಬೇಕು. ಬೊಳುವಾರಿನಲ್ಲಿ ಇಳಿದರೆ ನಮಗೆ ಬಸ್ ಸಿಗುವುದಿಲ್ಲ ನಮಗೆ ಬಸ್ ಸ್ಟ್ಯಾಂಡ್ ವರೆಗೆ ತೆರಳಲು ಅವಕಾಶ ಮಾಡಿಕೊಡಬೇಕು ಎಂದು ವಿಟ್ಲ ಐಟಿಐ ಕಾಲೇಜಿನ ವಿದ್ಯಾರ್ಥಿಗಳು ಶಾಸಕ ಅಶೋಕ್ ರೈ ಅವರಿಗೆ ಮನವಿ ಸಲಿ ಸಿದ್ದಾರೆ. ವಿಟ್ಲದ ಐಟಿಐ ಕಾಲೇಜಿನಲ್ಲಿ ಕಾಮಗಾರಿ

ನಮ್ಮನ್ನು ಬೊಳುವಾರಿನಲ್ಲಿ ಇಳಿಸುತ್ತಾರೆ: ವಿದ್ಯಾರ್ಥಿಗಳಿಂದ ಶಾಸಕರಿಗೆ ದೂರು Read More »

ಹುಷಾರ್‌! ಇಡೀ ಮೊಬೈಲನ್ನೇ ಹ್ಯಾಕ್‌ ಮಾಡಿ ಹಣ ಎಗರಿಸುತ್ತಾರೆ

ಎಪಿಕೆ ಮಾದರಿಯ ಫೈಲ್ ಕಳುಹಿಸಿ ಮಂಗಳೂರಿನ ವ್ಯಕ್ತಿಗೆ ವಂಚನೆ ಮಂಗಳೂರು : ಪೊಲೀಸರು ಚಾಪೆ ಕೆಳಗೆ ತೂರಿದರೆ ಸೈಬರ್‌ ವಂಚಕರು ರಂಗೋಲಿ ಕೆಳಗೆ ತೂರುವ ಕಲೆಯನ್ನು ಕರಗತಮಾಡಿಕೊಳ್ಳುತ್ತಿದ್ದಾರೆ. ಇಷ್ಟರ ತನಕ ಮೊಬೈಲ್‌ನಲ್ಲಿರುವ ಕೆಲವು appಗಳನ್ನು ಹ್ಯಾಕ್‌ ಮಾಡಿ ಬ್ಯಾಂಕ್‌ ಖಾತೆಗಳಲ್ಲಿರುವ ಹಣ ಲಪಟಾಯಿಸುತ್ತಿದ್ದ ವಂಚಕರು ಈಗ ಇಡೀ ಮೊಬೈಲನ್ನೇ ಹ್ಯಾಕ್‌ ಮಾಡುವ ಹೊಸ ತಂತ್ರವನ್ನು ಕಂಡುಕೊಂಡಿದ್ದಾರೆ. ಮಂಗಳೂರಿನಲ್ಲಿ ರಾಜ್ಯದಲ್ಲೇ ಮೊದಲ ಬಾರಿಗೆ ಇಂಥ ಪ್ರಕರಣವೊಂದು ನಡೆದಿದ್ದು, ವ್ಯಕ್ತಿಯೊಬ್ಬರು ಲಕ್ಷಾಂತರ ರೂಪಾಯಿ ಕಳೆದುಕೊಂಡಿದ್ದಾರೆ. ವಾಟ್ಸಪ್‌ಗೆ ನಕಲಿ ಎಪಿಕೆ ಮಾದರಿಯ

ಹುಷಾರ್‌! ಇಡೀ ಮೊಬೈಲನ್ನೇ ಹ್ಯಾಕ್‌ ಮಾಡಿ ಹಣ ಎಗರಿಸುತ್ತಾರೆ Read More »

ಉಳ್ಳಾಲ : ಮನೆಯಲ್ಲಿ ಸಿಲಿಂಡರ್‌ ಸ್ಫೋಟ; ತಾಯಿ ಮೂವರು ಮಕ್ಕಳು ಗಂಭೀರ

ಗ್ಯಾಸ್‌ ಸೋರಿಕೆಯಾಗಿ ಸ್ಫೋಟಿಸಿದ ಸಿಲಿಂಡರ್‌, ಹಾರಿಹೋದ ಛಾವಣಿ ಮಂಗಳೂರು : ಉಳ್ಳಾಲ ತಾಲೂಕಿನ ಮಂಜನಾಡಿ ಗ್ರಾಮದ ಕಂಡಿಕ ಎಂಬಲ್ಲಿ ಶನಿವಾರ ಮಧ್ಯರಾತ್ರಿ ಮನೆಯೊಳಗೆ ಗ್ಯಾಸ್‌ ಸಿಲಿಂಡರ್‌ ಸ್ಫೋಟಗೊಂಡು ತಾಯಿ ಮತ್ತು ಮೂವರು ಮಕ್ಕಳು ಗಂಭೀರವಾಗಿ ಗಾಯಗೊಂಡಿದ್ದಾರೆ. ಸಿಗ್ಯಾಸ್ ಸೋರಿಕೆಯಿಂದ ಸಿಲಿಂಡರ್‌ ಸ್ಫೋಟಗೊಂಡಿದೆ ಎನ್ನಲಾಗಿದೆ. ಸ್ಫೋಟದ ಬಿರುಸಿಗೆ ಮನೆಯ ಮೇಲ್ಛಾವಣಿ ಹಾರಿ ಹೋಗಿದೆ. ಮಲಗಿದ್ದ ಮಂಚ ಸುಟ್ಟು ಕರಕಲಾಗಿದೆ.ತಾಯಿ ಖುಬ್ರಾ (40) ಹಾಗೂ ಮೂವರು ಮಕ್ಕಳಾದ ಮೆಹದಿ (15), ಮಝಿಯಾ (13), ಮಾಯಿದಾ (11) ಘಟನೆಯಲ್ಲಿ ತೀವ್ರ ಗಾಯಗೊಂಡವರು.

ಉಳ್ಳಾಲ : ಮನೆಯಲ್ಲಿ ಸಿಲಿಂಡರ್‌ ಸ್ಫೋಟ; ತಾಯಿ ಮೂವರು ಮಕ್ಕಳು ಗಂಭೀರ Read More »

error: Content is protected !!
Scroll to Top