ಅಪರಾಧ

ಕ್ರಿಕೆಟ್‌ ಪಂದ್ಯಾಟದ ವೇಳೆ ಯುವಕನ ಹತ್ಯೆ : 20 ಮಂದಿ ಬಂಧನ

ಕೊನೆಗೂ ಕುಡುಪು ಕೊಲೆ ರಹಸ್ಯ ಬೇಧಿಸಿದ ಪೊಲೀಸರು ಮಂಗಳೂರು : ಕುಡುಪು ಭಟ್ರ ಕಲ್ಲುರ್ಟಿ ದೈವಸ್ಥಾನ ಸಮೀಪ ಅಪರಿಚಿತ ಯುವಕನ್ನು ಹೊಡೆದು ಸಾಯಿಸಿದ ಪ್ರಕರಣಕ್ಕೆ ಸಂಬಂಧಿಸಿ 20 ಮಂದಿ ಆರೋಪಿಗಳನ್ನು ಪೊಲೀಸರು ಬಂಧಿಸಿದ್ದಾರೆ. ಕ್ರಿಕೆಟ್‌ ಪಂದ್ಯಾಟ ನಡೆಯುತ್ತಿರುವಾಗ ಈ ವ್ಯಕ್ತಿ ಮಧ್ಯೆ ಬಂದು ಕಿರಿಕ್‌ ಮಾಡಿದಾಗ ಯುವಕರ ಗುಂಪು ಕೆರಳಿ ಅವನನ್ನು ಹಿಗ್ಗಾಮುಗ್ಗಾ ಥಳಿಸಿದೆ. ಈ ಹೊಡೆತಗಳಿಂದ ಸಾವು ಸಂಭವಿಸಿದೆ ಎಂದು ವಿಧಿವಿಜ್ಞಾನ ವರದಿ ದೃಢಪಡಿಸಿದೆ. ಏ.27ರಂದು ಸಂಜೆ ನಿರ್ಜನ ಸ್ಥಳದಲ್ಲಿ ಸಂಶಯಾಸ್ಪದ ರೀತಿಯಲ್ಲಿ ಯುವಕನ ಮೃತದೇಹ […]

ಕ್ರಿಕೆಟ್‌ ಪಂದ್ಯಾಟದ ವೇಳೆ ಯುವಕನ ಹತ್ಯೆ : 20 ಮಂದಿ ಬಂಧನ Read More »

ಹೋಟೆಲ್‌ನಲ್ಲಿ ಭೀಕರ ಬೆಂಕಿ ಅವಘಡ : 15 ಮಂದಿ ಜೀವಂತ ದಹನ

ಕೋಲ್ಕತ್ತಾ: ಕೋಲ್ಕತ್ತಾದ ಬುರ್ರಾಬಜಾರ್​ನಲ್ಲಿರುವ ಹೋಟೆಲ್​ನಲ್ಲಿ ಭೀಕರ ಅಗ್ನಿ ಅವಘಡ ಸಂಭವಿಸಿದ್ದು, 15 ಮಂದಿ ಜೀವಂತ ಸುಟ್ಟು ಕರಕಲಾಗಿರುವ ಘಟನೆ ಸಂಭವಿಸಿದೆ. ಅನೇಕ ಮಂದಿಗೆ ಸುಟ್ಟ ಗಾಯಗಳಾಗಿದ್ದು, ಆಸ್ಪತ್ರೆಗೆ ದಾಖಲಿಸಲಾಗಿದೆ. ಹಣ್ಣಿನ ಮಾರುಕಟ್ಟೆ ಪ್ರದೇಶದಲ್ಲಿರುವ ಹೋಟೆಲ್ ರಿತುರಾಜ್‌ನಲ್ಲಿ ನಿನ್ನೆ ರಾತ್ರಿ 8.30ರ ಸುಮಾರಿಗೆ ಬೆಂಕಿ ಕಾಣಿಸಿಕೊಂಡಿದ್ದು, ಬೆಂಕಿಯಿಂದ ತಪ್ಪಿಸಿಕೊಳ್ಳುವ ಪ್ರಯತ್ನದಲ್ಲಿ ಹೋಟೆಲ್ ಸಿಬ್ಬಂದಿಯೊಬ್ಬರು ಮಹಡಿಯಿಂದ ಹಾರಿ ಸಾವನ್ನಪ್ಪಿದ್ದಾರೆ. ಹೋಟೆಲ್‌ನಿಂದ 15 ಶವಗಳನ್ನು ಹೊರತೆಗೆಯಲಾಗಿದ್ದು, ಹಲವರನ್ನು ರಕ್ಷಿಸಲಾಗಿದೆ ಎಂದು ಪೊಲೀಸ್ ಆಯುಕ್ತ ಮನೋಜ್ ವರ್ಮಾ ತಿಳಿಸಿದ್ದಾರೆ. ಕೋಲ್ಕತ್ತ ನಗರದ ಹಳೆ

ಹೋಟೆಲ್‌ನಲ್ಲಿ ಭೀಕರ ಬೆಂಕಿ ಅವಘಡ : 15 ಮಂದಿ ಜೀವಂತ ದಹನ Read More »

ಕುಡುಪು ಕೊಲೆ ಪ್ರಕರಣ : ಹಲವು ಮಂದಿ ವಶ

ಕೋಮು ವೈಷಮ್ಯಕ್ಕೆ ಎಡೆಮಾಡಿಕೊಡದಂತೆ ಉಸ್ತುವಾರಿ ಸಚಿವ ದಿನೇಶ್‌ ಗುಂಡೂರಾವ್‌ ಮನವಿ ಮಂಗಳೂರು : ಮಂಗಳೂರಿನ ಹೊರವಲಯದ ಕುಡುಪು ಬಳಿ ಯುವಕನನ್ನು ಕಲ್ಲಿನಿಂದ ಹೊಡೆದು ಬರ್ಬರವಾಗಿ ಹತ್ಯೆ ಮಾಡಿರುವ ಘಟನೆ ಅಂತ್ಯಂತ ಖಂಡನೀಯ ಎಂದು ದಕ್ಷಿಣ ಕನ್ನಡ ಜಿಲ್ಲಾ ಉಸ್ತುವಾರಿ ಸಚಿವ ದಿನೇಶ್ ಗುಂಡೂರಾವ್ ತಿಳಿಸಿದ್ದಾರೆ. ಈ ಕುರಿತು ಎಕ್ಸ್‌ನಲ್ಲಿ ಪೋಸ್ಟ್ ಮಾಡಿರುವ ಸಚಿವ ದಿನೇಶ್ ಗುಂಡೂರಾವ್, ಕ್ರಿಕೆಟ್ ಆಟ ಆಡುವ ವೇಳೆ ಆಟಗಾರರು ಹಾಗೂ ಅನ್ಯ ಕೋಮಿನ ಯುವಕನ ನಡುವೆ ಮಾತಿನ ಚಕಮಕಿ ನಡೆದು, ಯುವಕನ ಮೇಲೆ

ಕುಡುಪು ಕೊಲೆ ಪ್ರಕರಣ : ಹಲವು ಮಂದಿ ವಶ Read More »

ಕಾಶ್ಮೀರ : 48 ಪ್ರವಾಸಿ ತಾಣಗಳು ಬಂದ್‌

ಉಗ್ರರ ಇನ್ನಷ್ಟು ದಾಳಿಗಳು ನಡೆಯುವ ಮಾಹಿತಿ ಹಿನ್ನೆಲೆಯಲ್ಲಿ ಕ್ರಮ ಶ್ರೀನಗರ: ಪಹಲ್ಗಾಮ್‌ ದಾಳಿಯ ಮಾದರಿಯಲ್ಲೇ ಉಗ್ರರು ಇನ್ನಷ್ಟು ಪ್ರವಾಸಿ ತಾಣಗಳ ಮೇಲೆ ದಾಳಿ ನಡೆಸುವ ಸಾಧ್ಯತೆಯಿದೆ ಎಂಬ ಗುಪ್ತಚರ ಮಾಹಿತಿ ದೊರಕಿದ ಹಿನ್ನೆಲೆಯಲ್ಲಿ ಜಮ್ಮು-ಕಾಶ್ಮೀರ ಸರಕಾರ 48 ಪ್ರವಾಸಿ ತಾಣಗಳನ್ನು ಮುಚ್ಚಿದೆ. ಕಾಶ್ಮೀರದಲ್ಲಿ ಒಟ್ಟು 87 ಪ್ರಮುಖ ಪ್ರವಾಸಿ ತಾಣಗಳಿದ್ದು, ಈ ಪೈಕಿ 47 ತಾಣಗಳಿಗೆ ಪ್ರವಾಸಿಗರು ಭೇಟಿ ನೀಡುವುದನ್ನು ನಿರ್ಬಂಧಿಸಿ ಸರಕಾರ ಆದೇಶ ಹೊರಡಿಸಿದೆ. ಪಹಲ್ಗಾಮ್‌ ಉಗ್ರ ದಾಳಿಯ ಬಳಿಕ ಕಾಶ್ಮೀರ ಕಣಿವೆಯಲ್ಲಿರುವ ಕೆಲವು ಸ್ಲೀಪರ್‌

ಕಾಶ್ಮೀರ : 48 ಪ್ರವಾಸಿ ತಾಣಗಳು ಬಂದ್‌ Read More »

ಹಿಂದೂ ದ್ವೇಷದ ಪೋಸ್ಟ್‌ ಹಾಕಿದ ಮಂಗಳೂರಿನ ವೈದ್ಯೆ ವಿರುದ್ಧ ಎಫ್‌ಐಆರ್‌

ನೌಕರಿಯಿಂದ ವಜಾಗೊಳಿಸಿದ ಹೈಲ್ಯಾಂಡ್‌ ಆಸ್ಪತ್ರೆ ಮಂಗಳೂರು : ಪಹಲ್ಗಾಮ್‌ ಉಗ್ರ ದಾಳಿಯ ಬಳಿಕ ಸೋಷಿಯಲ್‌ ಮೀಡಿಯಾದಲ್ಲಿ ವಿವಾದಾತ್ಮಕ ಪೋಸ್ಟ್‌ ಒಂದನ್ನು ಹಾಕಿದ್ದ ಮಂಗಳೂರಿನ ಪ್ರತಿಷ್ಠಿತ ಖಾಸಗಿ ಆಸ್ಪತ್ರೆಯ ವೈದ್ಯೆಯನ್ನು ನೌಕರಿಯಿಂದ ವಜಾ ಮಾಡಲಾಗಿದೆ. ಡಾ.ಅಫೀಫ ಫಾತಿಮಾ ಎಂಬಾಕೆ ಜಮ್ಮು ಕಾಶ್ಮೀರದ ಪಹಲ್ಗಾಮ್ ದಾಳಿ ನಂತರ ಭಾರತ ಹಾಗೂ ಪಾಕಿಸ್ಥಾನ ಮಧ್ಯೆ ಉದ್ವಿಗ್ನ ಪರಿಸ್ಥಿತಿ ಇರುವ ಸಂದರ್ಭದಲ್ಲಿಯೇ ʼಕಾಪಾಡಿ, ಕೊಳಕು ಹಿಂದೂಗಳು ನನ್ನ ಹಿಂದೆ ಬಿದ್ದಿದ್ದಾರೆ. ಹೌದು ನಾನು ಭಾರತೀಯಳು, ಹೌದು ನಾನು ಭಾರತವನ್ನು ದ್ವೇಷಿಸುತ್ತೇನೆ’ ಎಂದು ಸೋಷಿಯಲ್‌

ಹಿಂದೂ ದ್ವೇಷದ ಪೋಸ್ಟ್‌ ಹಾಕಿದ ಮಂಗಳೂರಿನ ವೈದ್ಯೆ ವಿರುದ್ಧ ಎಫ್‌ಐಆರ್‌ Read More »

ಕಾರಿನಲ್ಲೇ ಗುಂಡು ಹಾರಿಸಿಕೊಂಡು ಉದ್ಯಮಿ ಆತ್ಮಹತ್ಯೆ

ಕಾರ್ಕಳ : ಮಂಗಳೂರಿನಲ್ಲಿ ವಾಸವಿದ್ದ ಮೂಲತಃ ಕಾರ್ಕಳದವರಾದ ಉದ್ಯಮಿ ದಿಲೀಪ್‌ ಎನ್‌.ಆರ್‌. ಎಂಬವರು ಮಂಗಳವಾರ ನಸುಕಿನ ಹೊತ್ತು ಕಾರ್ಕಳದ ನಿಟ್ಟೆ ಸಮೀಪ ಕಾರಿನಲ್ಲಿ ಗುಂಡು ಹಾರಿಸಿಕೊಂಡು ಆತ್ಮಹತ್ಯೆ ಮಾಡಿಕೊಂಡಿರುವ ಆಘಾತಕಾರಿ ಘಟನೆ ಸಂಭವಿಸಿದೆ. ಕಾರ್ಕಳ ಪುರಸಭೆಯ ಮಾಜಿ ಉಪಾಧ್ಯಕ್ಷರಾಗಿದ್ದರು.ವಾರ ನಸುಕಿನ ಹೊತ್ತು ಕಾರ್ಕಳದ ನಿಟ್ಟೆ ಸಮೀಪ ಕಾರಿನಲ್ಲಿ ಗುಂಡು ಹಾರಿಸಿಕೊಂಡು ಆತ್ಮಹತ್ಯೆ ಮಾಡಿಕೊಂಡಿರುವ ಆಘಾತಕಾರಿ ಘಟನೆ ಸಂಭವಿಸಿದೆ. ಮಂಗಳೂರಿನಲ್ಲಿ ವಾಸವಿದ್ದ ದಿಲೀಪ್‌ ಎನ್‌.ಆರ್‌. ಅವರು ನಿನ್ನೆ ರಾತ್ರಿ ಅಲ್ಲಿಂದ ತನ್ನ ಕ್ವಿಡ್‌ ಕಾರಿನಲ್ಲಿ ಹೊರಟವರು ನಿಟ್ಟೆ ದೂಪಕಟ್ಟೆಯ

ಕಾರಿನಲ್ಲೇ ಗುಂಡು ಹಾರಿಸಿಕೊಂಡು ಉದ್ಯಮಿ ಆತ್ಮಹತ್ಯೆ Read More »

ಪುತ್ತೂರು ಸರಕಾರಿ ಆಸ್ಪತ್ರೆಯಲ್ಲಿ ವೈದ್ಯಾಧಿಕಾರಿಗೆ ಅವಾಚ್ಯ ಶಬ್ದಗಳಿಂದ ನಿಂದನೆ | ಪತ್ರಿಕಾಗೋಷ್ಠಿಯಲ್ಲಿ ಸ್ಪಷ್ಟನೆ ನೀಡಿದ ಆರೋಗ್ಯಾಧಿಕಾರಿ ಡಾ.ದೀಪಕ್‍ ರೈ

ಪುತ್ತೂರು: ಪುತ್ತೂರು ಸರಕಾರಿ ಆಸ್ಪತ್ರೆಯಲ್ಲಿ ಸಾರ್ವಜನಿಕರಿಂದ ಪದೇ ಪದೇ ಆಗುತ್ತಿರುವ ತೊಂದರೆಯ ನಿಟ್ಟಿನಲ್ಲಿ  ಆಸ್ಪತ್ರೆಯ ಪ್ರಮುಖ ಬಾಗಿಲುಗಳನ್ನು ಮುಚ್ಚಲಾಗುವುದು. ಅಲ್ಲದೆ ನಾಲ್ವರು ಭದ್ರತಾ ಸಿಬ್ಬಂದಿಗಳನ್ನು ನೇಮಿಸಲಾಗುವುದು. ಈ ಕುರಿತು ಇಂದಿನಿಂದಲೇ ಕ್ರಮ ಕೈಗೊಳ್ಳಲಾಗುವುದು ಎಂದು ತಾಲೂಕು ಆರೋಗ್ಯಾಧಿಕಾರಿ ಡಾ.ದೀಪಕ್ ರೈ ತಿಳಿಸಿದ್ದಾರೆ. ಅವರು ಸೋಮವಾರ ಪತ್ರಿಕಾಗೋಷ್ಠಿಯಲ್ಲಿ ಏ.25 ಶುಕ್ರವಾರ ನಡೆದ ಘಟನೆಯ ಕುರಿತು ಸ್ಪಷ್ಟನೆ ನೀಡಿ, ಮುಖ್ಯವಾಗಿ ಹೆರಿಗೆ ವಾರ್ಡಿನಲ್ಲಿ ಗಂಡಸರಿಗೆ ಎಂಟ್ರಿ ಇಲ್ಲ. ವೈದ್ಯಾಧಿಕಾರಿ ಡಾ. ಆಶಾ ಪುತ್ತೂರಾಯ ಅವರು ಘಟನೆಗೆ ಕಾರಣರಾದವರಿಗೆ ಹೊರಗೆ ಹೋಗುವಂತೆ

ಪುತ್ತೂರು ಸರಕಾರಿ ಆಸ್ಪತ್ರೆಯಲ್ಲಿ ವೈದ್ಯಾಧಿಕಾರಿಗೆ ಅವಾಚ್ಯ ಶಬ್ದಗಳಿಂದ ನಿಂದನೆ | ಪತ್ರಿಕಾಗೋಷ್ಠಿಯಲ್ಲಿ ಸ್ಪಷ್ಟನೆ ನೀಡಿದ ಆರೋಗ್ಯಾಧಿಕಾರಿ ಡಾ.ದೀಪಕ್‍ ರೈ Read More »

ವ್ಯಕ್ತಿಯೋರ್ವನ ಕುತ್ತಿಗೆಗೆ ಚೂರಿಯಿಂದ ಇರಿತ | ಗಂಭೀರ ಗಾಯ

ಬೆಳ್ತಂಗಡಿ: ವ್ಯಕ್ತಿಯೊಬ್ಬನ ಕುತ್ತಿಗೆಗೆ ಹಾಗೂ ಎದೆಗೆ ಚೂರಿಯಿಂದ ಇರಿದು ಕೊಲೆ ಮಾಡಲು ಯತ್ನಿಸಿದ ಘಟನೆ ಅಳದಂಗಡಿ ಸಂತೆ ಮಾರುಕಟ್ಟೆಯಲ್ಲಿ ನಡೆದಿದೆ. ಗಂಭೀರವಾಗಿ ಗಾಯಗೊಂಡ ವ್ಯಕ್ತಿಯನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ . ಡೆನ್ನಿಸ್ ಪಿಂಟೋ ಹಲ್ಲೆಗೆ ಒಳಗಾದ ವ್ಯಕ್ತಿಯಾಗಿದ್ದಾರೆ. ಕೊಲೆಗೈದವ ಸ್ಥಳೀಯ ನಿವಾಸಿ ಶೀನ ಎಂಬವರು ಆರೋಪಿಯಾಗಿದ್ದಾನೆ. ಅಳದಂಗಡಿ ಸಂತೆ ಮಾರುಕಟ್ಟೆಯ ಒಳಗೆ ಎ.26 ರಂದು ರಾತ್ರಿಯ ವೇಳೆ ಕ್ಷುಲ್ಲಕ ಕಾರಣಕ್ಕೆ ಆರೋಪಿ ಶೀನ ಎಂಬಾತ ಹಾಗೂ ಡೆನ್ನಿಸ್ ಪಿಂಟೋ ನಡುವೆ ಮಾತಿನ ಚಕಮಕಿ ನಡೆದಿದೆ. ಈ ವೇಳೆ ಶೀನ

ವ್ಯಕ್ತಿಯೋರ್ವನ ಕುತ್ತಿಗೆಗೆ ಚೂರಿಯಿಂದ ಇರಿತ | ಗಂಭೀರ ಗಾಯ Read More »

ಮಹಿಳಾ ಪೊಲೀಸ್ ಠಾಣೆ ಬಳಿ ಮುಖ್ಯರಸ್ತೆಯಲ್ಲಿ ಕುಳಿತು ಸುಗಮ ಸಂಚಾರ, ಪೊಲೀಸರ ಕರ್ತವ್ಯಕ್ಕೆ ಅಡ್ಡಿ ಹಿನ್ನೆಲೆ | ಪ್ರತಿಭಟನಾಕಾರರ ವಿರುದ್ಧ ಪ್ರಕರಣ ದಾಖಲು

ಪುತ್ತೂರು: ಪುತ್ತೂರು ಸರಕಾರಿ ಆಸ್ಪತ್ರೆಯ ಆಡಳಿತ ವೈದ್ಯಾಧಿಕಾರಿಯವರ ಕರ್ತವ್ಯಕ್ಕೆ ಅಡ್ಡಿಪಡಿಸಿದ ಆರೋಪಿಯನ್ನು ಬಂಧಿಸುವಂತೆ ಆಗ್ರಹಿಸಿ ಎ.26 ರಂದು ಬೆಳಗ್ಗೆ ಪುತ್ತೂರು ಮಹಿಳಾ ಪೊಲೀಸ್ ಠಾಣೆಯ ಬಳಿ ಮುಖ್ಯರಸ್ತೆಯ ಮಧ್ಯದಲ್ಲಿ ಕುಳಿತು ಸುಗಮ ಸಂಚಾರಕ್ಕೆ ಮತ್ತು ಇತರ ವೈದ್ಯಕೀಯ ತುರ್ತು ಸೇವೆಗೆ ಅಡ್ಡಿ ಸಹಿತ ಪೊಲೀಸರ ಕರ್ತವ್ಯಕ್ಕೂ ಅಡ್ಡಿಪಡಿಸಿರುವ ಆರೋಪದ ಮೇರೆಗೆ ಪ್ರತಿಭಟನಾಕಾರರ ವಿರುದ್ಧ ಪುತ್ತೂರು ನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಎ.25ರಂದು ಪುತ್ತೂರು ಸರಕಾರಿ ಆಸ್ಪತ್ರೆಯ ಆಡಳಿತ ವೈದ್ಯಾಧಿಕಾರಿ ಡಾ. ಅಶಾಜ್ಯೋತಿ ಕೆ ಪುತ್ತೂರಾಯ ಅವರ

ಮಹಿಳಾ ಪೊಲೀಸ್ ಠಾಣೆ ಬಳಿ ಮುಖ್ಯರಸ್ತೆಯಲ್ಲಿ ಕುಳಿತು ಸುಗಮ ಸಂಚಾರ, ಪೊಲೀಸರ ಕರ್ತವ್ಯಕ್ಕೆ ಅಡ್ಡಿ ಹಿನ್ನೆಲೆ | ಪ್ರತಿಭಟನಾಕಾರರ ವಿರುದ್ಧ ಪ್ರಕರಣ ದಾಖಲು Read More »

ವಿದ್ಯಾರ್ಥಿನಿಗೆ ಕಿರುಕುಳ ನೀಡಿದ ವಾಲಿಬಾಲ್‌ ಕೋಚ್‌ ವಿರುದ್ಧ ಪೋಕ್ಸೊ ಕೇಸ್‌

ಹಿಂದು ಕಾರ್ಯಕರ್ತರು ಹಲ್ಲೆ ಮಾಡಿದ ಕುರಿತು ಪ್ರತಿದೂರು ದಾಖಲು ಬೆಳ್ತಂಗಡಿ: ಖಾಸಗಿ ಕಾಲೇಜು ವಿದ್ಯಾರ್ಥಿನಿಗೆ ಅಸಭ್ಯ ಮೆಸೇಜ್‌ ಕಳುಹಿಸಿ ಕಿರುಕುಳ ನೀಡುತ್ತಿದ್ದ ವಾಲಿಬಾಲ್ ಕೋಚ್‌ ವಿರುದ್ಧ ಬೆಳ್ತಂಗಡಿ ಪೊಲೀಸ್‌ ಠಾಣೆಯಲ್ಲಿ ಪೋಕ್ಸೊ ಕೇಸ್‌ ದಾಖಲಾಗಿದೆ. ಕಾರ್ಕಳದ ಸಯ್ಯದ್ (24) ಎಂಬಾತ ಕಿರುಕುಳ ನೀಡಿದ ಆರೋಪಿ. 17ರ ಹರೆಯದ ವಿದ್ಯಾರ್ಥಿನಿಗೆ ಸಯ್ಯದ್‌ ಕಳೆದ ಕೆಲವು ದಿನಗಳಿಂದ ನಿರಂತರವಾಗಿ ಮೆಸೇಜ್‌ಗಳನ್ನು ಕಳುಹಿಸಿ ಕಿರುಕುಳ ನೀಡುತ್ತಿದ್ದ ಎಂದು ಆರೋಪಿಸಲಾಗಿದೆ. ಈ ವಿಚಾರ ತಿಳಿದ ರಾಷ್ಟ್ರೀಯ ಹಿಂದೂ ಜಾಗರಣ ವೇದಿಕೆಯ ಕಾರ್ಯಕರ್ತರು ಏ.26ರಂದು

ವಿದ್ಯಾರ್ಥಿನಿಗೆ ಕಿರುಕುಳ ನೀಡಿದ ವಾಲಿಬಾಲ್‌ ಕೋಚ್‌ ವಿರುದ್ಧ ಪೋಕ್ಸೊ ಕೇಸ್‌ Read More »

error: Content is protected !!
Scroll to Top