ಅಪರಾಧ

ಬ್ಯಾಂಕ್‌ ಮ್ಯಾನೇಜರ್‌ ಸಹಿ ಫೋರ್ಜರಿ ಮಾಡಿ ಲಕ್ಷಾಂತರ ವಂಚನೆ : ನಾಲ್ವರ ವಿರುದ್ಧ ಕೇಸ್‌

ವಾಹನಕ್ಕೆ ಪಡೆದ ಸಾಲ ಸಂದಾಯವಾಗಿದೆ ಎಂದು ಪತ್ರ ತಯಾರಿಸಿದ ಖದೀಮರು ಬಂಟ್ವಾಳ : ವಾಹನವೊಂದಕ್ಕೆ ಬ್ಯಾಂಕ್‌ನಿಂದ ತೆಗೆದ ಲಕ್ಷಾಂತರ ರೂ. ಸಾಲ ಮರುಪಾವತಿಸದೆ ವಂಚಿಸಿದ ಘಟನೆ ನಡೆದಿದೆ. ಬ್ಯಾಂಕ್ ಮುಖ್ಯಸ್ಥರ ಫೋರ್ಜರಿ ಸಹಿಯನ್ನು ಲೆಟರ್ ಹೆಡ್‌ನಲ್ಲಿ ಬಳಸಿ ಸಾಲ ಸಂಪೂರ್ಣ ಸಂದಾಯವಾಗಿರುವುದಾಗಿ ಸುಳ್ಳು ಪತ್ರವನ್ನು ಆರ್.ಟಿ.ಒ.ಕಚೇರಿಗೆ ನೀಡಿರುವುದರ ಕುರಿತು ದೂರು ದಾಖಲಾಗಿದೆ. ಮೂಲತಃ ಬೆಳ್ತಂಗಡಿ ನಿವಾಸಿಗಳಾದ ತನ್ವಿರ್ ಹಾಗೂ ಅವನ ತಾಯಿ ನೆಬಿಶಾ ಮತ್ತು ಜುನೈದ್ ಮೆಲ್ಕಾರ್ ಹಾಗೂ ರಮೀಝ್ ಆಲಿಶ್ ಉಪ್ಪಿನಂಗಡಿ ಅವರ ಮೇಲೆ ಬಂಟ್ವಾಳ […]

ಬ್ಯಾಂಕ್‌ ಮ್ಯಾನೇಜರ್‌ ಸಹಿ ಫೋರ್ಜರಿ ಮಾಡಿ ಲಕ್ಷಾಂತರ ವಂಚನೆ : ನಾಲ್ವರ ವಿರುದ್ಧ ಕೇಸ್‌ Read More »

ಬೆಳ್ತಂಗಡಿ : ಬೈಕ್‌ ಕಳ್ಳತನ ಆರೋಪದಲ್ಲಿ ಇಬ್ಬರನ್ನು ಹಿಡಿದು ಕಟ್ಟಿಹಾಕಿ ಥಳಿಸಿದ ಗ್ರಾಮಸ್ಥರು

ಬೆಳ್ತಂಗಡಿ : ಬೈಕ್ ಕಳ್ಳತನ ಮಾಡಿ ಪರಾರಿಯಾಗುತ್ತಿರುವ ಆರೋಪದ ಮೇರೆಗೆ ಸಾರ್ವಜನಿಕರು ಸೇರಿ ಇಬ್ಬರು ಆರೋಪಿಗಳನ್ನು ಹಿಡಿದು ಹಿಗ್ಗಾಮುಗ್ಗ ಥಳಿಸಿ ನಂತರ ಮರಕ್ಕೆ ಕಟ್ಟಿ ಹಾಕಿ ವೇಣೂರು ಪೊಲೀಸರಿಗೆ ಒಪ್ಪಿಸಿದ ಘಟನೆ ಮರೋಡಿಯಲ್ಲಿ ನಡೆದಿದೆ. ಈ ಬಗ್ಗೆ ಇಬ್ಬರು ಬೈಕ್ ಕಳ್ಳತನಕ್ಕೆ ಯತ್ನಿಸಿದ ಬಗ್ಗೆ ಪ್ರಕರಣ ದಾಖಲಿಸಲಾಗಿದೆ. ಇದೇ ಘಟನೆಗೆ ಸಂಬಂಧಿಸಿದಂತೆ ಹಲ್ಲೆಗೆ ಒಳಗಾದವರು ನೀಡಿದ ದೂರಿನಂತೆ ಸ್ಥಳೀಯರಾದ 8 ಮಂದಿ ಆರೋಪಿಗಳ ವಿರುದ್ದ ಪ್ರಕರಣ ದಾಖಲಿಸಲಾಗಿದೆ ಎರಡೂ ಪ್ರಕರಣಗಳಬಗ್ಗೆ ಪೊಲೀಸರು ತನಿಖೆ ನಡೆಸುತ್ತಿದ್ದಾರೆ. ಬೆಳ್ತಂಗಡಿ ತಾಲೂಕಿನ

ಬೆಳ್ತಂಗಡಿ : ಬೈಕ್‌ ಕಳ್ಳತನ ಆರೋಪದಲ್ಲಿ ಇಬ್ಬರನ್ನು ಹಿಡಿದು ಕಟ್ಟಿಹಾಕಿ ಥಳಿಸಿದ ಗ್ರಾಮಸ್ಥರು Read More »

ರೆಡ್ಡಿ, ರಾಮುಲು ಹೆಸರಿನಲ್ಲಿದ್ದ ಮನೆಯಲ್ಲಿ ಬೆಂಕಿ ಅವಘಡ

ಭರತ್‌ ರೆಡ್ಡಿ ಬೆಂಬಲಿಗರು ಬೆಂಕಿ ಹಚ್ಚಿರುವ ಆರೋಪ ಬಳ್ಳಾರಿ : ಬಳ್ಳಾರಿಯಲ್ಲಿ ಇತ್ತೀಚೆಗೆ ಸಂಭವಿಸಿದ ಬ್ಯಾನರ್‌ ಗಲಾಟೆ ಮತ್ತು ಕಾಂಗ್ರೆಸ್‌ ಕಾರ್ಯಕರ್ತನ ಕೊಲೆ ಪ್ರಕರಣದ ಕಾವು ತಣ್ಣಗಾಗುವ ಮೊದಲೇ ಇನ್ನೊಂದು ಘಟನೆ ಸಂಭವಿಸಿದೆ. ಶಾಸಕ ಜನಾರ್ದನ ರೆಡ್ಡಿ ಮತ್ತು ಮಾಜಿ ಸಚಿವ ಶ್ರೀರಾಮುಲು ಜಂಟಿ ಹೆಸರಿನಲ್ಲಿದ್ದ ಮನೆಯೊಂದರಲ್ಲಿ ಶುಕ್ರವಾರ ಸಂಜೆ ಅಗ್ನಿ ಅವಘಡ ಸಂಭವಿಸಿದ್ದು, ಇದು ಕಾಂಗ್ರೆಸ್‌ ಕಾರ್ಯಕರ್ತರ ಕೃತ್ಯ ಎಂದು ರೆಡ್ಡಿ ಸಹೋದರರು ಆರೋಪಿಸಿದ್ದಾರೆ. ಗಂಗಾವತಿ ಶಾಸಕ ಜನಾರ್ದನ ರೆಡ್ಡಿ ಹಾಗೂ ಶ್ರೀರಾಮುಲುಗೆ ಸೇರಿದ ಸೇರಿದ

ರೆಡ್ಡಿ, ರಾಮುಲು ಹೆಸರಿನಲ್ಲಿದ್ದ ಮನೆಯಲ್ಲಿ ಬೆಂಕಿ ಅವಘಡ Read More »

ಡಿಜಿಪಿ ರಾಮಚಂದ್ರ ರಾಸಲೀಲೆ ಪ್ರಕರಣ: ತನಿಖೆಗೆ ಎಡಿಜಿಪಿ ಹಿತೇಂದ್ರ ಅವರಿಗೆ ಸರ್ಕಾರ ಸೂಚನೆ

ಬೆಂಗಳೂರು: ರಾಜ್ಯದೆಲ್ಲೆಡೆ ದೊಡ್ಡ ಮಟ್ಟದಲ್ಲಿ ಸುದ್ದಿಯಾಗಿದ್ದ ಡಿಜಿಪಿ ರಾಮಚಂದ್ರ ರಾವ್ ರಾಸಲೀಲೆ ಪ್ರಕರಣಕ್ಕೆ ಸಂಬಂಧಿಸಿದ ತನಿಖೆಗೆ ಕಾನೂನು ಮತ್ತು ಸುವ್ಯವಸ್ಥೆ ಎಡಿಜಿಪಿ ಹಿತೇಂದ್ರ ಅವರನ್ನು ರಾಜ್ಯ ಸರ್ಕಾರ ನೇಮಕ ಮಾಡಿದೆ. ರಾಮಚಂದ್ರ ಅವರು ಕರ್ತವ್ಯದ ವೇಳೆ, ಕಚೇರಿಯಲ್ಲೇ‌ ಮಹಿಳೆಯರ ಜೊತೆ ಸರಸವಾಡುವ ವಿಡಿಯೋ ವೈರಲ್ ಆಗಿ ಸಾರ್ವಜನಿಕ ವಲಯದಲ್ಲಿ ಸಾಕಷ್ಟು ಆಕ್ರೋಶಕ್ಕೂ ಕಾರಣವಾಗಿತ್ತು. ಈ ಹಿನ್ನೆಲೆ ಅವರನ್ನು ಅಮಾನತು ಮಾಡಿ ರಾಜ್ಯ ಸರ್ಕಾರ ಆದೇಶ ಹೊರಡಿಸಿತ್ತು. ಇದೀಗ ಈ ಪ್ರಕರಣಕ್ಕೆ ಸಂಬಂಧಿಸಿದ ಹಾಗೆ ತನಿಖೆಗೆ ಆದೇಶ ನೀಡಿರುವುದಾಗಿದೆ.

ಡಿಜಿಪಿ ರಾಮಚಂದ್ರ ರಾಸಲೀಲೆ ಪ್ರಕರಣ: ತನಿಖೆಗೆ ಎಡಿಜಿಪಿ ಹಿತೇಂದ್ರ ಅವರಿಗೆ ಸರ್ಕಾರ ಸೂಚನೆ Read More »

ನಕ್ಸಲ್‌ ಮುಖಂಡನ ಸಹಿತ 15 ಮಾವೋವಾದಿಗಳ ಹತ್ಯೆ

ತಲೆಗೆ 1 ಕೋಟಿ ರೂ. ಬಹುಮಾನ ಹೊತ್ತಿದ್ದ ನಕ್ಸಲ್‌ ನಾಯಕ ನವದೆಹಲಿ: ಜಾರ್ಖಂಡ್‌ನ ಪಶ್ಚಿಮ ಸಿಂಗ್‌ಭೂಮ್‌ನಲ್ಲಿ ಕೇಂದ್ರ ಮೀಸಲು ಪೊಲೀಸ್ ಪಡೆ ಮತ್ತು ಜಾರ್ಖಂಡ್ ಪೊಲೀಸರು ನಡೆಸುತ್ತಿರುವ ಜಂಟಿ ಕಾರ್ಯಾಚರಣೆಯಲ್ಲಿ ತಲೆಗೆ 1 ಕೋಟಿ ರೂ. ಬಹುಮಾನ ಹೊಂದಿದ್ದ ನಕ್ಸಲ್‌ ಮುಖಂಡನ ಸಹಿತ 15 ನಕ್ಸಲರನ್ನು ಹೊಡೆದುರುಳಿಸಲಾಗಿದೆ ಎಂದು ಕೇಂದ್ರ ಗೃಹ ಸಚಿವ ಅಮಿತ್ ಶಾ ಹೇಳಿದ್ದಾರೆ. ಹತ್ಯೆಯಾದ ನಕ್ಸಲ್‌ ಮುಖಂಡನನ್ನು ಮಾವೋವಾದಿ ಕೇಂದ್ರ ಸಮಿತಿಯ ಸದಸ್ಯ ಪತಿರಾಮ್ ಮಾಂಝಿ ಎಂದು ಗುರುತಿಸಲಾಗಿದೆ. 1 ಕೋಟಿ ಬಹುಮಾನ

ನಕ್ಸಲ್‌ ಮುಖಂಡನ ಸಹಿತ 15 ಮಾವೋವಾದಿಗಳ ಹತ್ಯೆ Read More »

ಕುಖ್ಯಾತ ದಂಡುಪಾಳ್ಯ ಗ್ಯಾಂಗಿನ ಸದಸ್ಯ 29 ವರ್ಷಗಳ ಬಳಿಕ ಸೆರೆ

1997ರಲ್ಲಿ ಮಂಗಳೂರಿನಲ್ಲಿ ನಡೆದಿದ್ದ ಕೊಲೆ, ದರೋಡೆ ಕೃತ್ಯದ ಆರೋಪಿ ಮಂಗಳೂರು : ಕುಖ್ಯಾತ ದಂಡುಪಾಳ್ಯ ಗ್ಯಾಂಗಿನ ಓರ್ವ ಸದಸ್ಯನನ್ನು ಮಂಗಳೂರು ಪೊಲೀಸರು ಬರೋಬ್ಬರಿ 29 ವರ್ಷಗಳ ಬಳಿಕ ಬಂಧಿಸಿದ್ದಾರೆ. ಮಂಗಳೂರಿನ ಉರ್ವ ಪೊಲೀಸರು ಕಾರ್ಯಾಚರಣೆ ನಡೆಸಿ ಸುಮಾರು 29 ವರ್ಷಗಳಿಂದ ತಲೆಮರೆಸಿಕೊಂಡಿದ್ದ ಚಿಕ್ಕ ಹನುಮ ಅಲಿಯಾಸ್​ ಚಿಕ್ಕ ಹನುಮಂತಪ್ಪನನ್ನು ಆಂಧ್ರ ಪ್ರದೇಶದಲ್ಲಿ ಪತ್ತೆಹಚ್ಚಿ ಬಂಧಿಸಿದ್ದಾರೆ. ಬಂಧಿತನ ವಿರುದ್ಧ ಈವರೆಗೆ ರಾಜ್ಯದಲ್ಲಿ ಸುಮಾರು 13 ಕೊಲೆ, ದರೋಡೆ ಪ್ರಕರಣಗಳು ದಾಖಲಾಗಿವೆ. 1997 ಅಕ್ಟೋಬರ್​​ 11ರಂದು ಉರ್ವ ಮಾರಿಗುಡಿ ಕ್ರಾಸ್

ಕುಖ್ಯಾತ ದಂಡುಪಾಳ್ಯ ಗ್ಯಾಂಗಿನ ಸದಸ್ಯ 29 ವರ್ಷಗಳ ಬಳಿಕ ಸೆರೆ Read More »

ಅಕ್ರಮ ವಲಸಿಗರ ಪತ್ತೆ ಕಾರ್ಯ : ಪುನೀತ್‌ ಕೆರೆಹಳ್ಳಿ ಮತ್ತೆ ಬಂಧನ

ಒಂದೇ ವಾರದಲ್ಲಿ ಎರಡನೇ ಸಲ ಬಂಧಿಸಿದ ಪೊಲೀಸರು ಬೆಂಗಳೂರು: ಅಕ್ರಮ ಬಾಂಗ್ಲಾದೇಶ ವಲಸಿಗರ ಪತ್ತೆ ಕಾರ್ಯಾಚರಣೆ ಮಾಡುತ್ತಿರುವ ರಾಷ್ಟ್ರ ರಕ್ಷಣಾ ಪಡೆಯ ಮುಖಂಡ ಪುನೀತ್ ಕೆರೆಹಳ್ಳಿಯನ್ನು ಪೊಲೀಸರು ಮತ್ತೆ ಬಂಧಿಸಿದ್ದಾರೆ. ಸೋಲದೇವನಹಳ್ಳಿ ಪೊಲೀಸ್ ಠಾಣಾ ವ್ಯಾಪ್ತಿಯ ಕೆಂಪಾಪುರದಲ್ಲಿ ಅಕ್ರಮ ಬಾಂಗ್ಲಾ ವಲಸಿಗರು ಇದ್ದಾರೆ ಎಂಬ ಆರೋಪದ ಹಿನ್ನೆಲೆ ಪುನೀತ್ ಕೆರೆಹಳ್ಳಿ ಅಲ್ಲಿಗೆ ತೆರಳಿದ್ದರು. ಹಸನ್ ಎಂಬಾತ ಅಕ್ರಮ ಬಾಂಗ್ಲಾ ವಲಸಿಗ ಎಂದು ಪುನೀತ್ ಕೆರೆಹಳ್ಳಿ ಆರೋಪಿಸಿದ್ದಲ್ಲದೆ, ಈ ಸಂಬಂಧ ಸೋಲದೇವನಹಳ್ಳಿ ಪೊಲೀಸ್ ಠಾಣೆಗೆ ದೂರು ನೀಡಿದ್ದಾರೆ. ದೂರು

ಅಕ್ರಮ ವಲಸಿಗರ ಪತ್ತೆ ಕಾರ್ಯ : ಪುನೀತ್‌ ಕೆರೆಹಳ್ಳಿ ಮತ್ತೆ ಬಂಧನ Read More »

ಮದುವೆಯಾಗುವುದಾಗಿ ಹೇಳಿದ್ದಕ್ಕೆ ‌ನಾಮಕರಣ ಮುಂದೂಡಿಕೆ: ಪ್ರತಿಭಾ ಕುಳಾಯಿ

ಪುತ್ತೂರು: ಇಡೀ ರಾಜ್ಯದೆಲ್ಲೆಡೆ ‌ಸುದ್ದಿಯಾಗಿದ್ದ ಲವ್, ಸೆಕ್ಸ್, ಮಗು ಕೊಟ್ಟು ಮದುವೆಯಾಗದೆ ಯುವತಿಗೆ ‌ವಂಚಿಸಿದ ಆರೋಪಿ ಕೃಷ್ಣ ಜೆ. ರಾವ್ ಮದುವೆಗೆ ಒಪ್ಪಿದ್ದಾನೆ ಎಂಬ ಕಾರಣಕ್ಕೆ ಆ ಮಗುವಿನ ನಾಮಕರಣ ಕಾರ್ಯಕ್ರಮವನ್ನು ಫೆ. 7 ಕ್ಕೆ ಮುಂದೂಡಿರುವುದಾಗಿ ಪ್ರತಿಭಾ ಕುಳಾಯಿ ತಿಳಿಸಿದ್ದಾರೆ. ಜ. 24 ಕ್ಕೆ ನಾಮಕರಣ ಕಾರ್ಯಕ್ರಮ ನಡೆಯಬೇಕಿತ್ತು. ಆದರೆ ಅವರಾಗಿಯೇ ಮದುವೆಯಾಗುವುದಾಗಿ ಹೇಳಿ ಈಗ ಮುಂದೆ ಬಂದಿದ್ದಾರೆ. ಜ. 31 ರ ಒಳಗಾಗಿ ಕೃಷ್ಣ ಸಂತ್ರಸ್ತೆಯನ್ನು ಮದುವೆಯಾಗಬೇಕು ಎಂದು ಪ್ರತಿಭಾ ಹೇಳಿದ್ದಾರೆ. ಸಂತ್ರಸ್ತೆಯ ‌ತಾಯಿಗೆ

ಮದುವೆಯಾಗುವುದಾಗಿ ಹೇಳಿದ್ದಕ್ಕೆ ‌ನಾಮಕರಣ ಮುಂದೂಡಿಕೆ: ಪ್ರತಿಭಾ ಕುಳಾಯಿ Read More »

ಅನ್ಯ ಧರ್ಮದ ಹುಡುಗನನ್ನು ಪ್ರೀತಿಸಿದ ತಂಗಿ: ಜೋಡಿಯನ್ನು ಕೊಂದ ಯುವತಿಯ ಸಹೋದರರು

ಮೊರಾದಾಬಾದ್: ಯುವತಿ ಮತ್ತು ಆಕೆಯ ಮುಸ್ಲಿಂ ಪ್ರಿಯಕರನನ್ನು ಆಕೆಯ ಸಹೋದರರೇ ಬರ್ಬರವಾಗಿ ಹತ್ಯೆ ಮಾಡಿದ ಘಟನೆ ಉತ್ತರ ಪ್ರದೇಶದಲ್ಲಿ ನಡೆದಿದೆ. ಕಾಜಲ್ (19) ಮತ್ತು ಅವಳ ಪ್ರೇಮಿ ಅರ್ಮಾನ್ (27) ಎಂಬಾತನನ್ನು ಮರ್ಯಾದಾ ಹತ್ಯೆ ನಡೆಸಿರುವುದಾಗಿದೆ. ಕಾಜಲ್ ಕಾಲೇಜು ವಿದ್ಯಾರ್ಥಿನಿಯಾಗಿದ್ದು ಕೊಲೆಗೀಡಾದ ಇಬ್ಬರೂ ಉಮ್ರಿ ಸಬ್ಜೀಪುರ ನಿವಾಸಿಗಳಾಗಿದ್ದಾರೆ. ಪ್ರೇಮಿಗಳಿಬ್ಬರೂ ಕಳೆದ ಮೂರು ದಿನಗಳಿಂದ ನಾಪತ್ತೆಯಾಗಿದ್ದು, ಎರಡೂ ಕುಟುಂಬಗಳು ಪೊಲೀಸರಿಗೆ ದೂರು ನೀಡಿದ್ದವು. ಅವರಿಬ್ಬರ ಪತ್ತೆಗಾಗಿ ಹುಡುಕಾಟ ನಡೆಸಿದ ಸಂದರ್ಭದಲ್ಲಿ ಅವರಿಬ್ಬರ ಶವಗಳು ಹಳ್ಳಿಯಿಂದ ಕೆಲವು ಮೀಟರ್ ದೂರದ

ಅನ್ಯ ಧರ್ಮದ ಹುಡುಗನನ್ನು ಪ್ರೀತಿಸಿದ ತಂಗಿ: ಜೋಡಿಯನ್ನು ಕೊಂದ ಯುವತಿಯ ಸಹೋದರರು Read More »

ನ್ಯಾಯಾಧೀಶರ ಮುಂದೆಯೇ ಆತ್ಮಹತ್ಯೆಗೆ ಯತ್ನಿಸಿದ ‌ವ್ಯಕ್ತಿ: ಆಸ್ಪತ್ರೆಗೆ ದಾಖಲು

ಪುತ್ತೂರು: ನ್ಯಾಯಾಧೀಶರ ಎದುರೇ ವಿಷ ಕುಡಿದು ವ್ಯಕ್ತಿಯೊಬ್ಬರು ಆತ್ಮಹತ್ಯೆಗೆ ಯತ್ನಿಸಿದ ಘಟನೆ ಪುತ್ತೂರಿನಲ್ಲಿ ನಡೆದಿದೆ. ಕಾವು ಮಾಣಿಯಡ್ಕ ನಿವಾಸಿ ರವಿ ಎನ್ನುವವರೇ ವಿಷ ಕುಡಿದ ವ್ಯಕ್ತಿ. ಅವರನ್ನು ಪುತ್ತೂರಿನ ಆಸ್ಪತ್ರೆಗೆ ದಾಖಲಿಸಿ ಹೆಚ್ಚಿನ ಚಿಕಿತ್ಸೆಗಾಗಿ ಮಂಗಳೂರಿನ ಆಸ್ಪತ್ರೆಗೆ ಸಾಗಿಸಲಾಗಿದೆ ಎಂದು ತಿಳಿದು ಬಂದಿದೆ. ರವಿ ಮತ್ತು ಅವರ ಪತ್ನಿಯ ನಡುವೆ ಜಗಳ ನಡೆಯುತ್ತಿತ್ತು. ಎರಡು ದಿನಗಳ ಹಿಂದೆ ಪತ್ನಿಯ ಕತ್ತು ಹಿಸುಕಿ ಕೊಲೆ ಮಾಡುವ ಪ್ರಯತ್ನ ಸಹ ಮಾಡಿದ್ದರು. ಈ ವಿಷಯವಾಗಿ ಪೊಲೀಸ್ ಕೇಸ್ ಆಗುವ ಸಾಧ್ಯತೆ

ನ್ಯಾಯಾಧೀಶರ ಮುಂದೆಯೇ ಆತ್ಮಹತ್ಯೆಗೆ ಯತ್ನಿಸಿದ ‌ವ್ಯಕ್ತಿ: ಆಸ್ಪತ್ರೆಗೆ ದಾಖಲು Read More »

error: Content is protected !!
Scroll to Top