ಅಪರಾಧ

ವಿಟ್ಲ: ಬಾಡಿಗೆ ಮನೆಯಲ್ಲಿ ಡ್ರಗ್ಸ್‌ ದಂಧೆ, ನಾಲ್ವರು ಸೆರೆ

ವಿಟ್ಲ: ಇಲ್ಲಿನ ಬಾಡಿಗೆ ಮನೆಯೊಂದರಲ್ಲಿ ಇದ್ದುಕೊಂಡು ಮಾದಕ ವಸ್ತು ಎಂಡಿಎಂಎ ಮಾರಾಟ ಮಾಡುತ್ತಿದ್ದ ನಾಲ್ವರು ಆರೋಪಿಗಳನ್ನು ವಿಟ್ಲ ಪೊಲೀಸರು ಬಂಧಿಸಿ, ಸುಮಾರು ರೂ.1,79,700 ಮೌಲ್ಯದ 17.97 ಗ್ರಾಂ ಎಂಡಿಎಂಎ ಮಾದಕ ವಸ್ತುವನ್ನು ವಶಪಡಿಸಿಕೊಂಡಿದ್ದಾರೆ. ವಿಟ್ಲ ಪೊಲೀಸ್ ಠಾಣೆ ವ್ಯಾಪ್ತಿಯ ಬಂಟ್ವಾಳ ತಾಲೂಕಿನ ನೇರಳಕಟ್ಟೆ ಇಂದಿರಾ ನಗರದಲ್ಲಿ ಬಾಡಿಗೆ ಮನೆಯಲ್ಲಿ ವಾಸಿಸುತ್ತಿದ್ದ ಅಶ್ರಫ್ ಜಿ ಎಂಬಾತ ತನ್ನ ಮನೆಯಲ್ಲಿ ಎಂಡಿಎಂಎ ಸಂಗ್ರಹಿಸಿ ಗಿರಾಕಿಗಳಿಗೆ ಮಾರಾಟ ಮಾಡುತ್ತಿದ್ದಾನೆ ಎಂಬ ಖಚಿತ ಮಾಹಿತಿಯ ಮೇರೆಗೆ ವಿಟ್ಲ ಪೊಲೀಸ್ ಠಾಣೆಯ ಪೊಲೀಸ್ ಉಪನಿರೀಕ್ಷಕ […]

ವಿಟ್ಲ: ಬಾಡಿಗೆ ಮನೆಯಲ್ಲಿ ಡ್ರಗ್ಸ್‌ ದಂಧೆ, ನಾಲ್ವರು ಸೆರೆ Read More »

ಅಪ್ರಾಪ್ತ‌ನಿಂದ ಯುವಕನ ಹತ್ಯೆ: ಯುವತಿಯ ವಿಷಯಕ್ಕೆ ನಡೆದ ಜಗಳ ಕೊಲೆಯಲ್ಲಿ ಅಂತ್ಯ

ಬಾಗಲಕೋಟೆ: ಯುವತಿಯೊಬ್ಬಳ‌ ವಿಷಯದಲ್ಲಿ ಆರಂಭವಾದ ಜಗಳ ಕೊಲೆಯಲ್ಲಿ ಅಂತ್ಯವಾದ ಘಟನೆ ನಡೆದಿದೆ. ಅಪ್ರಾಪ್ತ ಯುವಕ ಆರೋಪಿಯಾಗಿದ್ದು, ರಾಹುಲ್ ಎಂಬಾತನೇ ಕೊಲೆಯಾದ ದುರ್ದೈವಿ. ಯುವತಿಯ ವಿಷಯಕ್ಕೆ ಸಂಬಂಧಿಸಿದ ಹಾಗೆ ರಾಹುಲ್ ಮತ್ತು ಅಪ್ರಾಪ್ತ ಯುವಕನ ನಡುವೆ ಹೋಳಿ ಹಬ್ಬದ ಸಂದರ್ಭದಲ್ಲಿ ಗಲಾಟೆ ನಡೆದಿದೆ. ಈ ವೇಳೆ ಯುವಕ ರಾಹುಲ್‌ನ ಕುತ್ತಿಗೆಗೆ ಬೈಕ್‌ನ ಕೀ ಚೈನ್‌ನಿಂದ ಚುಚ್ಚಿದ್ದಾನೆ. ಗಂಭೀರವಾಗಿ ಗಾಯಗೊಂಡ ರಾಹುಲ್ ಆಸ್ಪತ್ರೆಗೆ ಸಾಗಿಸುವ ವೇಳೆ ಮೃತಪಟ್ಟಿದ್ದಾನೆ. ತೇರದಾಳ ಪೊಲೀಸರು ಪ್ರಕರಣ ದಾಖಲಿಸಿಕೊಂಡು ತನಿಖೆ ನಡೆಸುತ್ತಿದ್ದಾರೆ.

ಅಪ್ರಾಪ್ತ‌ನಿಂದ ಯುವಕನ ಹತ್ಯೆ: ಯುವತಿಯ ವಿಷಯಕ್ಕೆ ನಡೆದ ಜಗಳ ಕೊಲೆಯಲ್ಲಿ ಅಂತ್ಯ Read More »

ರೈಲಿನಲ್ಲಿ ಅಕ್ರಮವಾಗಿ ಸಾಗಿಸುತ್ತಿದ್ದ 201 ಮೊಬೈಲ್‌ ವಶ

ವಾರಿಸುದಾರರಿಲ್ಲದ ಬ್ಯಾಗ್‌ ಪರಿಶೀಲಿಸಿದಾಗ ಸಿಕ್ಕಿದ ಮೊಬೈಲ್‌ ಮಂಗಳೂರು: ರೈಲಿನಲ್ಲಿ ಅಕ್ರಮವಾಗಿ ಸಾಗಿಸುತ್ತಿದ್ದ 201 ಹಳೆಯ ಮೊಬೈಲ್‌ಗಳನ್ನು ರೈಲ್ವೆ ರಕ್ಷಣಾ ದಳದವರು (ಆರ್‌ಪಿಎಫ್) ಮಂಗಳೂರು ಜಂಕ್ಷನ್ ನಿಲ್ದಾಣದಲ್ಲಿ ಸೋಮವಾರ ವಶಪಡಿಸಿಕೊಂಡಿದ್ದಾರೆ. ಕೇರಳ ವಿಧಾನಸಭಾ ಚುನಾವಣೆಯ ಹಿನ್ನೆಲೆಯಲ್ಲಿ ಕಣ್ಗಾವಲು ತೀವ್ರಗೊಳಿಸಿರುವ ದಕ್ಷಿಣ ರೈಲ್ವೆಯ ಪಾಲಕ್ಕಾಡ್ ವಿಭಾಗದ ಆರ್‌ಪಿಎಫ್ ರೈಲುಗಳ ಮೂಲಕ ನಗದು, ಚಿನ್ನ ಮತ್ತು ಇತರ ಬೆಲೆಬಾಳುವ ವಸ್ತುಗಳ ಅಕ್ರಮ ಸಾಗಾಟದ ವಿರುದ್ಧ ನಡೆಸಿದ ವಿಶೇಷ ಕಾರ್ಯಾಚರಣೆಯ ವೇಳೆ ಸುಮಾರು 10.05 ಲಕ್ಷ ರೂ. ಮೌಲ್ಯದ 201 ಹಳೆಯ ಮೊಬೈಲ್

ರೈಲಿನಲ್ಲಿ ಅಕ್ರಮವಾಗಿ ಸಾಗಿಸುತ್ತಿದ್ದ 201 ಮೊಬೈಲ್‌ ವಶ Read More »

ಚಿನ್ನಾಭರಣ ಕಳ್ಳತನ ಪ್ರಕರಣ : 24 ಗಂಟೆಯಲ್ಲಿ ಆರೋಪಿ ಅರೆಸ್ಟ್‌

ಮನೆಯಿಂದ ಹಾಡಹಗಲೇ ಚಿನ್ನಾಭರಣ ಕಳ್ಳತನ ಮಾಡಿದ್ದ ಆರೋಪಿ ಮಂಗಳೂರು: ಕಾವೂರು ಪೊಲೀಸ್ ಠಾಣಾ ವ್ಯಾಪ್ತಿಯ ಉಲ್ಲಾಸ್ ನಗರದಲ್ಲಿ ಮನೆಯಿಂದ ಹಾಡಹಗಲೇ ಚಿನ್ನಾಭರಣ ಕಳ್ಳತನವಾದ ಪ್ರಕರಣವನ್ನು ಪೊಲೀಸರು 24 ಗಂಟೆಯೊಳಗೆ ಭೇದಿಸಿ ಆರೋಪಿಯನ್ನು ಬಂಧಿಸಿ ಕಳವು ಮಾಡಿದ ಸೊತ್ತುಗಳನ್ನು ವಶಕ್ಕೆ ಪಡೆದಿದ್ದಾರೆ. ಮಾರ್ಚ್ 7ರಂದು ಮಧ್ಯಾಹ್ನ ಸುಮಾರು 12 ಗಂಟೆಯ ವೇಳೆ ಮನೆಯಲ್ಲಿದ್ದವರು ಹೊರಗಿದ್ದ ಸಂದರ್ಭದಲ್ಲಿ ಉಲ್ಲಾಸ್ ನಗರದ ಮನೆಯೊಂದರ ಬಾಗಿಲಿನ ಬೀಗ ಮುರಿದು ಒಳನುಗ್ಗಿದ ಕಳ್ಳರು ಸುಮಾರು 4,80,000 ರೂ. ಮೌಲ್ಯದ 39 ಗ್ರಾಂ ಚಿನ್ನಾಭರಣ ಹಾಗೂ

ಚಿನ್ನಾಭರಣ ಕಳ್ಳತನ ಪ್ರಕರಣ : 24 ಗಂಟೆಯಲ್ಲಿ ಆರೋಪಿ ಅರೆಸ್ಟ್‌ Read More »

4,175 ಲೀಟರ್‌ ಡೀಸೆಲ್‌ ಅಕ್ರಮ ದಾಸ್ತಾನು ಪತ್ತೆ

ಮನೆಯ ಶೆಡ್‌ನಲ್ಲಿ ಬ್ಯಾರಲ್‌ಗಳಲ್ಲಿ ಅಪಾಯಕಾರಿಯಾಗಿ ತುಂಬಿಸಿಟ್ಟಿದ್ದ ಡೀಸೆಲ್‌ ಉಪ್ಪಿನಂಗಡಿ: ಮಧ್ಯಪ್ರಾಚ್ಯದ ಯುದ್ಧದಿಂದಾಗಿ ಇಂಧನ ಅಭಾವದ ಭೀತಿ ತಲೆದೋರಿರುವಂತೆಯೇ ಉಪ್ಪಿನಂಗಡಿಯಲ್ಲಿ 4 ಸಾವಿರ ಲೀಟರ್‌ಗೂ ಅಧಿಕ ಡೀಸೆಲ್‌ ಅಕ್ರಮವಾಗಿ ದಾಸ್ತಾನು ಇಟ್ಟಿರುವುದು ಪತ್ತೆಯಾಗಿದೆ. ಅಕ್ರಮವಾಗಿ ಶೇಖರಿಸಿದ್ದ ಸುಮಾರು 4,175 ಲೀಟರ್ ಡೀಸೆಲ್‌ನ್ನು ಪೊಲೀಸರು ಪತ್ತೆಹಚ್ಚಿ ಉಪ್ಪಿನಂಗಡಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಿದ್ದಾರೆ. ಮಾರ್ಚ್ 9ರಂದು ರಾತ್ರಿ ಬೆಳ್ತಂಗಡಿ ಉಪವಿಭಾಗದ ಪೊಲೀಸ್ ಉಪಾಧೀಕ್ಷಕರಾದ ರೋಹಿಣಿ ಸಿ.ಕೆ ಅವರಿಗೆ ಬಂದ ಖಚಿತ ಮಾಹಿತಿಯ ಮೇರೆಗೆ ಬೆಳ್ತಂಗಡಿ ತಾಲೂಕಿನ ಕಣಿಯೂರು ಗ್ರಾಮದ ಮುದಲ್ತಿಯಾರ್

4,175 ಲೀಟರ್‌ ಡೀಸೆಲ್‌ ಅಕ್ರಮ ದಾಸ್ತಾನು ಪತ್ತೆ Read More »

ಶ್ರೀಮಂತರನ್ನು ಹನಿಟ್ರ್ಯಾಪ್ ಮಾಡಿ ದೋಚುತ್ತಿದ್ದ ಕಿಲಾಡಿ ಲೇಡಿ ಪೊಲೀಸರ ಬಲೆಗೆ

ಬೆಳಗಾವಿ: ಶ್ರೀಮಂತ ಪುರುಷರನ್ನು ಗುರಿಯಾಗಿಸಿಕೊಂಡು ಹನಿಟ್ರ್ಯಾಪ್ ಮಾಡಿ ಅವರನ್ನು ದೋಚುತ್ತಿದ್ದ ಖತರ್‌ನಾಕ್ ಲೇಡಿಯನ್ನು ತಿಲಕವಾಡಿ ಪೊಲೀಸರು ಬಂಧಿಸಿದ್ದಾರೆ. ಫ್ಯಾಶನ್ ಡಿಸೈನರ್ ದೀಪಾ ಎಂಬಾಕೆಯೇ ಬಂಧಿತ ಆರೋಪಿ. ಆಕೆಗೆ ಈ ಕೆಲಸಕ್ಕೆ ಸಹಾಯ ಮಾಡುತ್ತಿದ್ದ ಆಕೆಯ ಸ್ನೇಹಿತ ಶಿವಾನಂದ ಮಠಪತಿ ಪರಾರಿಯಾಗಿದ್ದಾನೆ. ಆರೋಪಿ ಶಿವಾನಂದನೇ ದೀಪಾಳಿಗೆ ಶ್ರೀಮಂತ ವ್ಯಕ್ತಿಗಳ ಮಾಹಿತಿ ನೀಡುತ್ತಿದ್ದ. ಆ‌ ವ್ಯಕ್ತಿಗಳನ್ನು ಸಾಮಾಜಿಕ ಜಾಲತಾಣಗಳ ಮೂಲಕ ಪರಿಚಯ ಮಾಡಿಕೊಂಡು ತನ್ನ ಬಲೆಗೆ ಬೀಳಿಸಿಕೊಳ್ಳುತ್ತಿದ್ದ ಆಕೆ, ಬಳಿಕ ಅವರ ಜೊತೆ ಸಲುಗೆಯಿಂದ, ಆಶ್ಲೀಲ ಸಂದೇಶಗಳನ್ನು ಕಳುಹಿಸುವ ಮೂಲಕ

ಶ್ರೀಮಂತರನ್ನು ಹನಿಟ್ರ್ಯಾಪ್ ಮಾಡಿ ದೋಚುತ್ತಿದ್ದ ಕಿಲಾಡಿ ಲೇಡಿ ಪೊಲೀಸರ ಬಲೆಗೆ Read More »

ಬಂಧನದಲ್ಲಿದ್ದ ಯುವಕ ಸಾವು: ಪೊಲೀಸರ ಚಿತ್ರಹಿಂಸೆಯೇ ‌ಕಾರಣ ಎಂದು ಕುಟುಂಬಸ್ಥರ ಆರೋಪ

ಮಧುರೈ: ಪ್ರಕರಣವೊಂದಕ್ಕೆ ಸಂಬಂಧಿಸಿದ ಹಾಗೆ ವಿಚಾರಣೆಗಾಗಿ ಪೊಲೀಸರ ಕಸ್ಟಡಿಯಲ್ಲಿದ್ದ ದಲಿತ ಯುವಕನೊಬ್ಬ ಮೃತಪಟ್ಟಿದ್ದು, ಪೊಲೀಸರ ಚಿತ್ರಹಿಂಸೆಯಿಂದ ಈ ಘಟನೆ ನಡೆದಿದೆ ಎಂದು ಯುವಕನ ಕುಟುಂಬಸ್ಥರು ಆರೋಪಿಸಿದ್ದಾರೆ. ಮೃತನನ್ನು ಆಕಾಶ್ (26) ಎಂದು ಗುರುತಿಸಲಾಗಿದೆ. ಶಿವಗಂಗಾದಲ್ಲಿ ‌ನಡೆದ ಹಲ್ಲೆ ಪ್ರಕರಣಕ್ಕೆ ‌ಸಂಬಂಧಿಸಿದ ಹಾಗೆ ಈತನನ್ನು ಪೊಲೀಸರು ಬಂಧಿಸಿದ್ದರು. ಈ ಬಗ್ಗೆ ಆಕಾಶ್ ತಂದೆ ಮಾತನಾಡಿದ್ದು, ಸ್ನೇಹಿತರ ನಡುವೆ ಜಗಳ ನಡೆದಿದ್ದು, ಈ ಪ್ರಕರಣದಲ್ಲಿ ಆಕಾಶ್‌ನನ್ನು ಪೊಲೀಸರು ವಶಕ್ಕೆ ಪಡೆದಿದ್ದರು. ಆದರೆ ‌ವಶಕ್ಕೆ ಪಡೆದಿದ್ದ ನನ್ನ ಪುತ್ರನನ್ನು ಪೊಲೀಸರು ಠಾಣೆಗೆ

ಬಂಧನದಲ್ಲಿದ್ದ ಯುವಕ ಸಾವು: ಪೊಲೀಸರ ಚಿತ್ರಹಿಂಸೆಯೇ ‌ಕಾರಣ ಎಂದು ಕುಟುಂಬಸ್ಥರ ಆರೋಪ Read More »

ಬಂಟ್ವಾಳ : ಬಸ್ಸಿನಿಂದ ಲಕ್ಷಾಂತರ ರೂ. ಮೌಲ್ಯದ ಆಭರಣ ಕದ್ದಿದ್ದ ಆರೋಪಿ ಸೆರೆ

ಬಂಟ್ವಾಳ : ಹೋಟೆಲ್‌ ಎದುರು ನಿಲ್ಲಿಸಿದ್ದ ಬಸ್ಸಿನಿಂದ ದಂಪತಿಯ ಲಕ್ಷಾಂತರ ಮೌಲ್ಯದ ಆಭರಣಗಳನ್ನು ಕಳವು ಮಾಡಿದ್ದ ಆರೋಪಿ ಐದು ತಿಂಗಳ ಬಳಿಕ ಪೊಲೀಸರ ಬಲೆಗೆ ಬಿದ್ದಿದ್ದಾನೆ. ಮಧ್ಯಪ್ರದೇಶದ ನಿವಾಸಿ ಸಮದ್‌ ಖಾನ್‌ (37) ಎಂಬಾತ ಆರೋಪಿ. ಅವನಿಂದ ಕಳವು ಮಾಡಿದ ಆಭರಣಗಳನ್ನು ಪೊಲೀಸರು ವಶಪಡಿಸಿಕೊಂಡಿದ್ದಾರೆ. ಕಳೆದ ನವೆಂಬರ್‌ 19ರಂದು ದುರ್ಗಾಂಬಾ ಬಸ್‌ ಕಲ್ಲಡ್ಕ ಸಮೀಪ ಕುದ್ರಬೆಟ್ಟುವಿನಲ್ಲಿರುವ ಸಮುದ್ರ ಹೋಟೆಲ್‌ ಎದುರು ಪ್ರಯಾಣಿಕರಿಗೆ ಉಪಾಹಾರ ಸೇವಿಸಲೆಂದು ನಿಲ್ಲಿಸಿದ್ದ ವೇಳೆ ಬವ್ರಹ್ಮಾವರ ಮೂಲದ ದಂಪತಿಯ ಬ್ಯಾಗಿನಲ್ಲಿದ್ದ ಸುಮಾರು 20 ಲ.ರೂ.

ಬಂಟ್ವಾಳ : ಬಸ್ಸಿನಿಂದ ಲಕ್ಷಾಂತರ ರೂ. ಮೌಲ್ಯದ ಆಭರಣ ಕದ್ದಿದ್ದ ಆರೋಪಿ ಸೆರೆ Read More »

ಸಹಪಾಠಿಯನ್ನು ಕಬ್ಬಿಣದ ರಾಡ್‌ನಿಂದ ಹೊಡೆದು ಸಾಯಿಸಿದ ವಿದ್ಯಾರ್ಥಿ ಸೆರೆ

ಸಹಪಾಠಿಗಳು, ವಾರ್ಡನ್‌ ಮೇಲೆ ಹಲ್ಲೆ ಮಾಡಿದ್ದ 9ನೇ ತರಗತಿ ವಿದ್ಯಾರ್ಥಿ ಬಳ್ಳಾರಿ: ಜಿಲ್ಲೆಯ ಗೋನಾಳ ಪ್ರದೇಶದ ವಸತಿ ಶಾಲೆಯಲ್ಲಿ ಸಹಪಾಠಿ ವಿದ್ಯಾರ್ಥಿಯನ್ನು ಕಬ್ಬಿಣದ ರಾಡ್‌ನಿಂದ ಹೊಡೆದು ಕೊಂದು ಹಾಸ್ಟೆಲ್‌ ವಾರ್ಡನ್‌ ಮತ್ತು ಇತರ ಏಳು ವಿದ್ಯಾರ್ಥಿಗಲ ಮೇಲೆ ಹಲ್ಲೆ ಮಾಡಿ ಓಡಿಹೋಗಿದ್ದ ಒಂಬತ್ತನೇ ತರಗತಿ ವಿದ್ಯಾರ್ಥಿಯನ್ನು ಪೊಲೀಸರು ಕೊನೆಗೂ ಬಂಧಿಸಿದ್ದಾರೆ. ಈ ಅಪ್ರಾಪ್ತ ವಯಸ್ಸಿನವನನ್ನು ಬಳ್ಳಾರಿ ನಗರದ ಶ್ರೀರಾಮಪುರ ಕಾಲೊನಿಯ ರೂಪನಗುಡಿಯಲ್ಲಿ ಸೋಮವಾರ ರಾತ್ರಿ ವಶಕ್ಕೆ ಪಡೆಯಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ. ನಗರದ ಹೊರವಲಯದ ತಾಳೂರು ರಸ್ತೆಯಲ್ಲಿರುವ

ಸಹಪಾಠಿಯನ್ನು ಕಬ್ಬಿಣದ ರಾಡ್‌ನಿಂದ ಹೊಡೆದು ಸಾಯಿಸಿದ ವಿದ್ಯಾರ್ಥಿ ಸೆರೆ Read More »

9ನೇ ತರಗತಿ ವಿದ್ಯಾರ್ಥಿಯ ಕ್ರೌರ್ಯ : ಕಬ್ಬಿಣದ ರಾಡ್‌ನಿಂದ ಹಲ್ಲೆ ಮಾಡಿ ಸಹಪಾಠಿಯ ಕೊಲೆ

ಏಳು ವಿದ್ಯಾರ್ಥಿಗಳು, ವಾರ್ಡನ್‌ಗೆ ಗಂಭೀರ ಗಾಯ ; ರಾಜ್ಯವನ್ನು ಬೆಚ್ಚಿಬೀಳಿಸಿದ ಆಘಾತಕಾರಿ ಘಟನೆ ಬಳ್ಳಾರಿ: ಒಂಬತ್ತನೇ ತರಗತಿ ವಿದ್ಯಾರ್ಥಿ ಕಬ್ಬಿಣದ ರಾಡ್‌ನಿಂದ ಹಲ್ಲೆ ಮಾಡಿ ತನ್ನ ಸಹಪಾಠಿಯನ್ನು ಕೊಂದು, ಇತರ ಏಳು ವಿದ್ಯಾರ್ಥಿಗಳು ಮತ್ತು ಹಾಸ್ಟೆಲ್‌ ವಾರ್ಡನ್‌ನನ್ನು ಗಾಯಗೊಳಿಸಿದ ಬೆಚ್ಚಿಬೀಳಿಸುವ ಘಟನೆ ಬಳ್ಳಾರಿಯಲ್ಲಿ ನಡೆದಿದೆ. ನಗರದ ಹೊರವಲಯದ ಖಾಸಗಿ ಗುರುಕುಲ ಶಾಲೆಯ ಹಾಸ್ಟೆಲ್‌ನಲ್ಲಿ ಈ ಆಘಾತಕಾರಿ ಘಟನೆ ನಡೆದಿದೆ. ಕಬ್ಬಿಣದ ರಾಡ್‌ನಿಂದ ಬಲವಾದ ಪೆಟ್ಟು ಬಿದ್ದು ಓರ್ವ ಬಾಲಕ ಸಾವನ್ನಪ್ಪಿದ್ದಾನೆ. ಹಾಸ್ಟೆಲ್ ವಾರ್ಡನ್ ಮೇಲೆಯೂ ಬಾಲಕ ಹಲ್ಲೆ

9ನೇ ತರಗತಿ ವಿದ್ಯಾರ್ಥಿಯ ಕ್ರೌರ್ಯ : ಕಬ್ಬಿಣದ ರಾಡ್‌ನಿಂದ ಹಲ್ಲೆ ಮಾಡಿ ಸಹಪಾಠಿಯ ಕೊಲೆ Read More »

error: Content is protected !!
Scroll to Top