ಅಪರಾಧ

ಪ್ರೀತಿಗೆ ಅಡ್ಡಿ | ಪ್ರಿಯತಮೆಯ ತಾಯಿ ಹಾಗೂ ಸಹೋದರನ ಬರ್ಬರ ಕೊಲೆ

ಬೆಳಗಾವಿ: ಮಗಳ ಪ್ರೀತಿ ವಿರೋಧ ಮಾಡಿದ್ದ ತಾಯಿ ಹಾಗೂ ಸಹೋದರನನ್ನು ಬರ್ಬರ ಕೊಲೆ ಮಾಡಿರುವ ಘಟನೆ ಬೆಳಗಾವಿ ಜಿಲ್ಲೆಯ ನಿಪ್ಪಾಣಿಯ ಅಕ್ಕೊಳದಲ್ಲಿ ಇಂದು ನಡೆದಿದೆ. ಮಂಗಳ ನಾಯಕ (45), ಪ್ರಜ್ವಲ್ ನಾಯಕ (18) ಮೃತ ದುರ್ದೈವಿಗಳು. ಕಳೆದ ಕೆಲ ತಿಂಗಳಿಂದ ಮಂಗಳ ಅವರ ಮಗಳು ಹಾಗೂ ರವಿ ಪರಸ್ಪರ ಪ್ರೀತಿಸುತ್ತಿದ್ದರು. ಈ ವಿಷಯ ತಿಳಿದ ತಾಯಿ ಮಗಳನ್ನು ಕರೆದು ಬುದ್ಧಿ ಮಾತು ಹೇಳಿದ್ದಾರೆ. ತಾಯಿ ಬುದ್ದಿ ಮಾತು ಹೇಳಿದರು ಕೇಳದ ಮಗಳು ಮತ್ತೆ ತನ್ನ ಹಳೆಯ ಚಾಳಿಯನ್ನು […]

ಪ್ರೀತಿಗೆ ಅಡ್ಡಿ | ಪ್ರಿಯತಮೆಯ ತಾಯಿ ಹಾಗೂ ಸಹೋದರನ ಬರ್ಬರ ಕೊಲೆ Read More »

ವಿದ್ಯಾರ್ಥಿನಿಗೆ ಕಿರುಕುಳ, ಜಾತಿ ನಿಂದನೆ | ಆರೋಪಿ ವಿರುದ್ಧ ಪುತ್ತೂರು ಮಹಿಳಾ ಠಾಣೆಯಲ್ಲಿ ಪ್ರಕರಣ ದಾಖಲು

ಪುತ್ತೂರು: ಶಾಂತಿಗೋಡು ಗ್ರಾಮದ ಯುವಕೋರ್ವ ವಿದ್ಯಾರ್ಥಿನಿಯೊರ್ವಳಿಗೆ ಕಿರುಕುಳ ನೀಡಿ ಜಾತಿ ನಿಂದನೆ ಮಾಡಿದ ಆರೋಪದಲ್ಲಿ ಯುವಕನ ವಿರುದ್ಧ ಪುತ್ತೂರು ಮಹಿಳಾ ಪೊಲೀಸ್ ಠಾಣೆಯಲ್ಲಿ ಕೇಸು ದಾಖಲಾಗಿದೆ. ಶಾಂತಿಗೋಡು ಗ್ರಾಮದ ರೋಶನ್ ಎಂಬಾತ ಕಿರುಕುಳ ನೀಡಿದ ಆರೋಪಿ. ವಿದ್ಯಾರ್ಥಿನಿ ನೀಡಿದ ದೂರಿನಂತೆ ಆತನ ವಿರುದ್ಧ ಪೋಕ್ಸೋ ಪ್ರಕರಣ ಮತ್ತು ಜಾತಿ ನಿಂದನೆ ಪ್ರಕರಣ ದಾಖಲಿಸಲಾಗಿದೆ. ಆರೋಪಿಯನ್ನು ಬಂಧಿಸಿದ ಪೊಲೀಸರು ನ್ಯಾಯಾಧೀಶರ ಮುಂದೆ ಹಾಜರುಪಡಿಸಿದಾಗ ನ್ಯಾಯಾಂಗ ಬಂಧನ ವಿಧಿಸಲಾಗಿದೆ.

ವಿದ್ಯಾರ್ಥಿನಿಗೆ ಕಿರುಕುಳ, ಜಾತಿ ನಿಂದನೆ | ಆರೋಪಿ ವಿರುದ್ಧ ಪುತ್ತೂರು ಮಹಿಳಾ ಠಾಣೆಯಲ್ಲಿ ಪ್ರಕರಣ ದಾಖಲು Read More »

ಪುತ್ತೂರು ಖಾಸಗಿ ಬಸ್ ನಿಲ್ದಾಣದ ಬಳಿಯಿರುವ ನಾಗದೇವರ ಕಟ್ಟೆಗೆ ಅನ್ಯಮತೀಯ ವ್ಯಕ್ತಿಯಿಂದ  ಹಾನಿ | ವಿಶ್ವ ಹಿಂದೂ ಪರಿಷದ್‌ ಬಜರಂಗದಳ ಖಂಡನೆ

ಪುತ್ತೂರು: ತುಳುವರು ಭಕ್ತಿಯಿಂದ ಪೂಜಿಸುವ ಪುತ್ತೂರು ಖಾಸಗಿ ಬಸ್ ನಿಲ್ದಾಣದ ಬಳಿಯಿರುವ ನಾಗದೇವರ ಕಟ್ಟೆಗೆ ಅನ್ಯಮತೀಯ ವ್ಯಕ್ತಿ ಹಾನಿಗೊಳಿಸಿದ್ದನ್ನು ವಿಶ್ವ ಹಿಂದೂ ಪರಿಷತ್, ಬಜರಂಗದಳ ತೀವ್ರವಾಗಿ ಖಂಡಿಸಿದೆ. ಅನ್ಯಮತೀಯ ವ್ಯಕ್ತಿ ಸಲಾಂ ಎಂಬಾತ ಹಾನಿಯುಂಟುಮಾಡಲು ಯತ್ನಿಸಿರುವುದನ್ನು ತೀವ್ರವಾಗಿ ಖಂಡಿಸುತ್ತಿದ್ದೇವೆ ಎಂದು ಸಂಘಟನೆಯ ಪ್ರಮುಖರು ತಿಳಿಸಿದ್ದಾರೆ. ಹಿಂದೂ ವಿರೋಧಿ ಶಕ್ತಿಗಳು ವಿನಾಕಾರಣ ಹಿಂದುಗಳ ಆರಾಧನ ಸ್ಥಳಗಳಿಗೆ ಹಾನಿಯುಂಟು ಮಾಡುತ್ತಿರುವ ಘಟನೆಗಳು ಹೆಚ್ಚುತ್ತಿದ್ದು.ಇಂತಹ ಮನಸ್ಥಿತಿಯ ವ್ಯಕ್ತಿಗಳ ಬಗ್ಗೆ ಸರಕಾರ ಹಾಗೂ ಪೊಲೀಸ್ ಇಲಾಖೆ ಸೂಕ್ತ ಕ್ರಮಕೈಗೊಳ್ಳಬೇಕು. ಇಲ್ಲದಿದ್ದರೆ ಮುಂದಿನ ದಿನಗಳಲ್ಲಿ

ಪುತ್ತೂರು ಖಾಸಗಿ ಬಸ್ ನಿಲ್ದಾಣದ ಬಳಿಯಿರುವ ನಾಗದೇವರ ಕಟ್ಟೆಗೆ ಅನ್ಯಮತೀಯ ವ್ಯಕ್ತಿಯಿಂದ  ಹಾನಿ | ವಿಶ್ವ ಹಿಂದೂ ಪರಿಷದ್‌ ಬಜರಂಗದಳ ಖಂಡನೆ Read More »

ಪ್ರವೀಣ್‌ ನೆಟ್ಟಾರು ಹತ್ಯಾ ಪ್ರಕರಣ : ಆರೋಪಿ ನೌಷಾದ್‌ ಮನೆಗೆ ಬೆಳ್ಳಂಬೆಳಗ್ಗೆ ಎನ್‌ಐಎ ದಾಳಿ

ಮಂಗಳೂರು: ಸುಳ್ಯ ಬೆಳ್ಳಾರೆಯ ಬಿಜೆಪಿ ಕಾರ್ಯಕರ್ತ ಪ್ರವೀಣ್‌ ನೆಟ್ಟಾರು ಹತ್ಯಾ ಪ್ರಕರಣದ ತನಿಖೆ ಈಗಲೂ ನಡೆಯುತ್ತಿದ್ದು, ಇಂದು ಬೆಳ್ಳಂಬೆಳಗ್ಗೆ ರಾಷ್ಟ್ರೀಯ ತನಿಖಾ ಸಂಸ್ಥೆಯ ತಂಡವೊಂದು ಪ್ರಕರಣದ ತಲೆಮರೆಸಿಕೊಂಡಿರುವ ಆರೋಪಿ ನೌಷಾದ್‌ ಎಂಬಾತನ ಮನೆಗೆ ದಾಳಿ ಮಾಡಿದೆ.ನೌಷಾದ್‌ ಬೆಳ್ತಂಗಡಿ ತಾಲೂಕಿನ ಪಡಂಗಡಿ ಎಂಬಲ್ಲಿಯವ. ಬೆಂಗಳೂರಿನಿಂದ ಬಂದ ಎನ್‌ಐಎ ತಂಡ ಬೆಳಗ್ಗೆ ಪಡಂಗಡಿಯ ಮನೆಗೆ ದಾಳಿ ಮಾಡಿ ಶೋಧ ನಡೆಸಿ ಮನೆಯವರನ್ನು ಪ್ರಶ್ನಿಸಿದೆ ಎಂದು ತಿಳಿದುಬಂದಿದೆ.ಬೆಂಗಳೂರಿನಿಂದ ಐವರು ಎನ್‌ಐಎ ಅಧಿಕಾರಿಗಳ ತಂಡ ಬೆಳ್ಳಂಬೆಳಗ್ಗೆ 5.30ರ ವೇಳೆಗೆ ಪಡಂಗಡಿಗೆ ಬಂದಿದೆ ಎಂಬ

ಪ್ರವೀಣ್‌ ನೆಟ್ಟಾರು ಹತ್ಯಾ ಪ್ರಕರಣ : ಆರೋಪಿ ನೌಷಾದ್‌ ಮನೆಗೆ ಬೆಳ್ಳಂಬೆಳಗ್ಗೆ ಎನ್‌ಐಎ ದಾಳಿ Read More »

ಡ್ರಗ್ಸ್‌ ಪ್ರಕರಣ : ಖ್ಯಾತ ನಟನ ಮಗ ಸೆರೆ

ಚೆನ್ನೈ : ಕನ್ನಡ, ತಮಿಳು ಸೇರಿದಂತೆ ದಕ್ಷಿಣದ ಕೆಲವು ಭಾಷೆಗಳ ಸಿನಿಮಾದಲ್ಲಿ ನಟಿಸಿರುವ ನಟ ಮನ್ಸೂರ್ ಅಲಿ ಖಾನ್‌ರ ಪುತ್ರ ತುಘಲಕ್‌ನನ್ನು ತಮಿಳುನಾಡು ಪೊಲೀಸರು ಡ್ರಗ್ಸ್‌ ಕೇಸಿನಲ್ಲಿ ಬಂಧಿಸಿದ್ದಾರೆ. ಮನ್ಸೂರ್‌ ಅಲಿ ಖಾನ್‌ ಹೆಚ್ಚಾಗಿ ವಿಲನ್‌ ಪಾತ್ರಗಳಲ್ಲಿ ಕಾಣಿಸಿಕೊಳ್ಳುತ್ತಿದ್ದಾರೆ. ತಿರುಮಂಗಳಂ ಪೊಲೀಸರು ತುಘಲಕ್‌ನನ್ನು ಬಂಧಿಸಿ ವಿಚಾರಣೆಗೊಳಪಡಿಸಿದ್ದಾರೆ. ಈ ಪ್ರಕರಣಕ್ಕೆ ಸಂಬಂಧಿಸಿ ಈಗಾಗಲೇ 10 ಜನರನ್ನು ಬಂಧಿಸಲಾಗಿತ್ತು. ತನಿಖೆ ಮುಂದುವರಿದಾಗ ಮನ್ಸೂರ್ ಅಲಿ ಖಾನ್ ಪುತ್ರ ತುಘಲಕ್ ಸಹ ಈ ಡ್ರಗ್ಸ್‌ ಜಾಲದಲ್ಲಿ ಶಾಮೀಲಾಗಿರುವುದು ತಿಳಿದುಬಂದಿದೆ. ಹೀಗಾಗಿ ಆತನನ್ನು

ಡ್ರಗ್ಸ್‌ ಪ್ರಕರಣ : ಖ್ಯಾತ ನಟನ ಮಗ ಸೆರೆ Read More »

ಖಾಸಗಿ ಬಸ್‍ ನಿಲ್ದಾಣದ ಬಳಿ ಇರುವ ನಾಗನಕಟ್ಟೆಗೆ ಹಾನಿ : ಆರೋಪಿ ಬಂಧನ

ಪುತ್ತೂರು: ನೆಲ್ಲಿಕಟ್ಟೆ ಖಾಸಗಿ ಬಸ್ ನಿಲ್ದಾಣದ ಸಮೀಪದ ನಾಗನ ಕಟ್ಟೆಯ ಬೀಗ ಗೇಟ್ ಗಳನ್ನು ಮುರಿದು ಹಾನಿ ಮಾಡಿದ ಘಟನೆ ನಡೆದಿದೆ. ಹಾನಿ ಮಾಡುವ ಸಂದರ್ಭ ಸ್ಥಳದಲ್ಲಿದ್ದ ಸ್ಥಳೀಯರು ಹಾನಿ ಮಾಡಿದಾತ ಜಿಡೆಕಲ್ಲು ನಿವಾಸಿ ಸಲಾಂ ನನ್ನು ಹಿಡಿದು ಪೊಲೀಸರಿಗೆ ಒಪ್ಪಿಸಿದ್ದಾರೆ. ಸ್ಥಳೀಯ ನಗರಸಭಾ ಸದಸ್ಯ ಹಾಗೂ ನಾಗನ ಕಟ್ಟೆ ಸಮಿತಿಯ ಪದಾಧಿಕಾರಿಗಳು ಭಕ್ತರು ನೀಡಿದ ದೂರಿನ ಮೇರೆಗೆ ಪುತ್ತೂರು ನಗರ ಠಾಣಾ ಪೊಲೀಸರು ಪ್ರಕರಣ ದಾಖಲಿಸಿದ್ದಾರೆ ಎನ್ನಲಾಗಿದೆ.

ಖಾಸಗಿ ಬಸ್‍ ನಿಲ್ದಾಣದ ಬಳಿ ಇರುವ ನಾಗನಕಟ್ಟೆಗೆ ಹಾನಿ : ಆರೋಪಿ ಬಂಧನ Read More »

ಪುಷ್ಪ-2 ಸಿನೆಮಾ ನೋಡುವಾಗ ಅಭಿಮಾನಿಗಳ ನೂಕುನುಗ್ಗಲು : ಕಾಲ್ತುಳಿತಕ್ಕೆ ಮಹಿಳೆ ಬಲಿ

ಮಗನ ಸ್ಥಿತಿ ಚಿಂತಾಜನಕ; ಅನೇಕ ಮಂದಿಗೆ ಗಾಯ ಹೈದರಾಬಾದ್:‌ ಸ್ಟಾರ್‌ ನಟ ಅಲ್ಲು ಅರ್ಜುನ್‌ ಅಭಿನಯದ ಪುಷ್ಪ 2 ಸಿನೆಮಾದ ಪ್ರೀಮಿಯರ್‌ ಶೋ ವೇಳೆ ಜನರ ನೂಕುನುಗ್ಗಲು ಸಂಭವಿಸಿ ಕಾಲ್ತುಳಿತದಲ್ಲಿ ಓರ್ವ ಮಹಿಳೆ ಮೃತಪಟ್ಟಿರುವ ಘಟನೆ ನಡೆದಿದೆ.ಹೈದರಾಬಾದ್‌ನ ಆರ್‌ಟಿಸಿ ಕ್ರಾಸ್‌ರೋಡ್ಸ್‌ನ ಸಂಧ್ಯಾ ಥಿಯೇಟರ್‌ನಲ್ಲಿ ನಿನ್ನೆ ರಾತ್ರಿ ಈ ದುರಂತ ಸಂಭವಿಸಿದೆ. ಮೃತ ಮಹಿಳೆಯನ್ನು ದಿಲ್‌ಸುಖ್‌ನಗರದ ರೇವತಿ ಎಂದು ಗುರುತಿಸಲಾಗಿದೆ. ಪತಿ ಭಾಸ್ಕರ್ ಮತ್ತು ಇಬ್ಬರು ಮಕ್ಕಳೊಂದಿಗೆ ಸಿನೆಮಾಕ್ಕೆ ಬಂದಿದ್ದರು.ರಾತ್ರಿ 10.30ರ ಸುಮಾರಿಗೆ ಥಿಯೇಟರ್‌ನಲ್ಲಿ ಪ್ರೇಕ್ಷಕರು ಕಿಕ್ಕಿರಿದು ಸೇರಿದ್ದರು.

ಪುಷ್ಪ-2 ಸಿನೆಮಾ ನೋಡುವಾಗ ಅಭಿಮಾನಿಗಳ ನೂಕುನುಗ್ಗಲು : ಕಾಲ್ತುಳಿತಕ್ಕೆ ಮಹಿಳೆ ಬಲಿ Read More »

ಮಂಗಳೂರು ವಿಮಾನ ನಿಲ್ದಾಣಕ್ಕೆ ರಾಮೇಶ್ವರಂ ಮಾದರಿಯಲ್ಲಿ ಸ್ಫೋಟದ ಬೆದರಿಕೆ

ಸಂದೇಶದಲ್ಲಿರುವ ಹೆಸರುಗಳನ್ನು ನೋಡಿ ಪೊಲೀಸರು ಹೈರಾಣ ಮಂಗಳೂರು : ರಾಮೇಶ್ವರಂ ಕೆಫೆ ಮಾದರಿಯಲ್ಲಿ ಬಾಂಬ್ ಇರಿಸಿದ್ದಾಗಿ ಮಂಗಳೂರು ಅಂತಾರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ಬೆದರಿಕೆ ಸಂದೇಶ ಬಂದ ಬಗ್ಗೆ ತಡವಾಗಿ ವರದಿಯಾಗಿದೆ. ನ.30ರಂದು ಬೆಳಗ್ಗೆ 10 ಗಂಟೆ ಸುಮಾರಿಗೆ ಅಕ್ರಮ್ ವಾಯ್ಕರ್‌ ಎನ್ನುವ ಹೆಸರಲ್ಲಿದ್ದ ಇಮೇಲ್‌ನಿಂದ ಬೆದರಿಕೆ ಸಂದೇಶ ಬಂದಿದೆ. ಈ ಬಗ್ಗೆ ಬಜಪೆ ಠಾಣೆಗೆ ಕೇಂದ್ರೀಯ ಕೈಗಾರಿಕಾ ಭದ್ರತಾ ಪಡೆ ಸಿಬ್ಬಂದಿ ದೂರು ನೀಡಿದ್ದಾರೆ. ಇಂಥ ಬೆದರಿಕೆ ಕರೆಗಳು ಈಗ ಮಾಮೂಲಿಯಾಗಿದ್ದರೂ ಈ ಸಂದೇಶದಲ್ಲಿ ಉಲ್ಲೇಖಿಸಿರುವ ಕೆಲವು

ಮಂಗಳೂರು ವಿಮಾನ ನಿಲ್ದಾಣಕ್ಕೆ ರಾಮೇಶ್ವರಂ ಮಾದರಿಯಲ್ಲಿ ಸ್ಫೋಟದ ಬೆದರಿಕೆ Read More »

ಆಟೋ ಚಾಲಕ ನಾಪತ್ತೆ : ಪ್ರಕರಣ ದಾಖಲು

ವಿಟ್ಲ: ಆಟೋ ಚಾಲಕರೊಬ್ಬರು ಬಾಡಿಗೆಗೆಂದು ತೆರಳಿ ನಾಪತ್ತೆಯಾದ ಬಗ್ಗೆ ವಿಟ್ಲ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಬಂಟ್ವಾಳ ತಾಲೂಕು ವೀರಕಂಭ ಗ್ರಾಮದ ಬಾಯಿಲ ನಿವಾಸಿ ಧನರಾಜ್ ನಾಪತ್ತೆಯಾಗಿದ್ದು, ಅವರ ಆಟೋ ರಿಕ್ಷಾ, ಉಪ್ಪಿನಂಗಡಿಯಲ್ಲಿ ಪತ್ತೆಯಾಗಿದೆ. ಮೊಬೈಲ್ ಸ್ವಿಚ್ ಆಗಿದೆ. ನ.28 ರಂದು ತನ್ನ ಮನೆಯಿಂದ ಆಟೋರಿಕ್ಷಾವನ್ನು ತೆಗೆದುಕೊಂಡು ಬೆಳಿಗ್ಗೆ ಹೊರಟಿದ್ದು ವಾರ ಕಳೆದರೂ ಮನೆಗೆ ವಾಪಸು ಬಂದಿಲ್ಲ. ಈ ಬಗ್ಗೆ ಸಂಬಂದಿಕರಲ್ಲಿ ನೆರೆಕರೆಯವರಲ್ಲಿ ಹಾಗೂ ಸ್ನೇಹಿತರಲ್ಲಿ ವಿಚಾರಿಸಲಾಗಿ ಎಲ್ಲಿಯೂ ಪತ್ತೆಯಾಗದೆ ಕಾಣೆಯಾಗಿರುತ್ತಾರೆ ಮನಯವರು ಠಾಣೆಗೆ ನೀಡಿದ ಎಂದು ದೂರಿನಲ್ಲಿ

ಆಟೋ ಚಾಲಕ ನಾಪತ್ತೆ : ಪ್ರಕರಣ ದಾಖಲು Read More »

ಜೋಡಿ ಕೊಲೆ ಕೃತ್ಯ : ಬಾಲಿವುಡ್‌ ನಟಿಯ ಸಹೋದರಿ ಬಂಧನ

ಕಟ್ಟಡಕ್ಕೆ ಬೆಂಕಿಹಚ್ಚಿ ಪ್ರಿಯಕರ, ಆತನ ಸ್ನೇಹಿತನ ಹತ್ಯೆ ಮುಂಬಯಿ: ಪ್ರಿಯಕರ ಹಾಗೂ ಆತನ ಸ್ನೇಹಿತನ ಕೊಲೆ ಪ್ರಕರಣಕ್ಕೆ ಸಂಬಂಧಿಸಿ ಬಾಲಿವುಡ್‌ನ ಜನಪ್ರಿಯ ನಟಿ ನರ್ಗಿಸ್‌ ಫಕ್ರಿಯ ಸಹೋದರಿ ಅಲಿಯಾ ಫಕ್ರಿಯನ್ನು ಪೊಲೀಸರು ಬಂಧಿಸಿದ್ದಾರೆ. ಹಿಂದಿಯ ರಾಕ್‌ಸ್ಟಾರ್‌ ಸೇರಿದಂತೆ ಹಲವು ಭಾರತೀಯ ಸಿನೆಮಾಗಳಲ್ಲಿ ನಟಿಸಿರುವ ನರ್ಗಿಸ್‌ ಫಕ್ರಿ ಮೂಲತಃ ಅಮೆರಿಕದವರು. ಅವರ ಸಹೋದರಿ ಅಲಿಯಾ ಫಕ್ರಿ ಕೂಡ ಸೆಲೆಬ್ರಿಟಿಯಾಗಿದ್ದು, ಆಕೆಯ ಮೇಲೆ ನ್ಯೂಯಾರ್ಕ್‌ನಲ್ಲಿ ಬಾಯ್‌ಫ್ರೆಂಡ್‌ ಮತ್ತು ಆತನ ಗೆಳೆಯನನ್ನು ಕೊಂದ ಆರೋಪವಿದೆ. ಬಾಯ್‌ಫ್ರೆಂಡ್‌ ಎಡ್ವರ್ಡ್‌ ಜೇಕಬ್‌ (35) ಮತ್ತು

ಜೋಡಿ ಕೊಲೆ ಕೃತ್ಯ : ಬಾಲಿವುಡ್‌ ನಟಿಯ ಸಹೋದರಿ ಬಂಧನ Read More »

error: Content is protected !!
Scroll to Top