ಬಲೂನು ಗಂಟಲಲ್ಲಿ ಸಿಲುಕಿ ಬಾಲಕ ಸಾವು
ಕಾರವಾರ: ಬಲೂನು ಗಂಟಲಲ್ಲಿ ಸಿಲುಕಿ 13 ವರ್ಷದ ಬಾಲಕ ಮೃತಪಟ್ಟ ಘಟನೆ ಉತ್ತನರ ಕನ್ನಡದ ಹಳಿಯಾಳ ಎಂಬಲ್ಲಿ ಸಂಭವಿಸಿದೆ. ಹಳಿಯಾಳ ತಾಲೂಕಿನ ಜೋಗನಕೊಪ್ಪ ಗ್ರಾಮದ ನವೀನ ನಾರಾಯಣ ಬೆಳಗಾಂವಕರ್ (13) ಎಂಬ ವಿದ್ಯಾರ್ಥಿ ಮನೆಯಲ್ಲಿ ಆಟವಾಡುವಾಗುವಾಗ ಬಾಯಿಯಿಂದ ಬಲೂನು ಊದಿದ್ದು, ಆದರೆ ಈ ಬಲೂನು ಬಾಯಿಯೊಳಗೆ ಹೋಗಿ ಗಂಟಲಲ್ಲಿ ಸಿಲುಕಿತ್ತು. ಉಸಿರುಗಟ್ಟಿ ಒದ್ದಾಡುತಿದ್ದ ಈತನನ್ನು ತಕ್ಷಣವೇ ಆಸ್ಪತ್ರೆಗೆ ಕರೆದೊಯ್ದರೂ ಉಸಿರಾಟವಾಡಲು ಸಾಧ್ಯವಾಗದೆ ಕೊನೆಯುಸಿರೆಳೆದಿದ್ದಾನೆ. ಈತ ಜೋಗನಕೊಪ್ಪ ಗ್ರಾಮದ ಸರ್ಕಾರಿ ಪ್ರಾಥಮಿಕ ಶಾಲೆಯಲ್ಲಿ 7ನೇ ತರಗತಿ ವ್ಯಾಸಂಗ ಮಾಡುತ್ತಿದ್ದ.
ಬಲೂನು ಗಂಟಲಲ್ಲಿ ಸಿಲುಕಿ ಬಾಲಕ ಸಾವು Read More »










