ಚೂರಿ ಇರಿತ ಕಟ್ಟುಕಥೆ ಹೆಣೆದ ವಿದ್ಯಾರ್ಥಿನಿಯನ್ನು ಕಾಲೇಜಿನಿಂದ ವಜಾ ಮಾಡಬೇಕು | ನಗರ ಪೊಲೀಸ್ ಠಾಣೆಗೆ ವಿದ್ಯಾರ್ಥಿಗಳಿಂದ ಮನವಿ
ಪುತ್ತೂರು: ಕೊಂಬೆಟ್ಟು ಸರಕಾರಿ ಪದವಿಪೂರ್ವ ಕಾಲೇಜಿನ ವಿದ್ಯಾರ್ಥಿನಿಗೆ ಚೂರಿ ಇರಿತ ಪ್ರಕರಣಕ್ಕೆ ಸಂಬಂಧಿಸಿ ಕಟ್ಟು ಕಥೆ ಹೆಣೆದು ಸಮಾಜದಲ್ಲಿ ಅಶಾಂತಿಗೆ ಕಾರಣಳಾದ ವಿದ್ಯಾರ್ಥಿನಿಯನ್ನು ಕಾಲೇಜಿನಿಂದ ವಜಾಗೊಳಿಸುವಂತೆ ಕಾಲೇಜಿನ ವಿದ್ಯಾರ್ಥಿಗಳು ಪುತ್ತೂರು ನಗರ ಪೊಲೀಸರಿಗೆ, ಕಾಲೇಜಿನ ಪ್ರಾಂಶುಪಾಲರಿಗೆ, ಗುರುವಾರ ಮನವಿ ಸಲ್ಲಿಸಿದ್ದಾರೆ. ಚೂರಿ ಇರಿತ ಪ್ರಕರಣದಲ್ಲಿ ವಿದ್ಯಾರ್ಥಿನಿಯೊರ್ವಳ ಕಟ್ಟು ಕಥೆ ಪುತ್ತೂರಿನಲ್ಲಿ ಸಂಚಲನ ಸೃಷ್ಟಿಸಿತ್ತು. ವಿದ್ಯಾರ್ಥಿನಿಯ ಈ ಕಟ್ಟು ಕಥೆ ಸಮಾಜದಲ್ಲಿ ಕೋಮು ಗಲಭೆ ಸೃಷ್ಟಿಸುವ ಪೂರ್ವ ನಿಯೋಜಿತ ಕೃತ್ಯ. ಸುಳ್ಳು ದೂರು ನೀಡಿ ಯುವಕನ ಮಾನ ಹಾನಿಗೊಳಿಸಿ […]









