ಅಪರಾಧ

ಅಕ್ರಮ ನಾಡ ಬಂದೂಕು ತಯಾರಿಸಿ ಮಾರಾಟ | ಆರೋಪಿ ಸಹಿತ ಖರೀದಿದಾರರ ಬಂಧನ

ಕೊಡಗು : ಅಕ್ರಮ ನಾಡ ಬಂದೂಕು ತಯಾರಿಸಿ ಮಾರಾಟ ಮಾಡುತ್ತಿದ್ದ ಆರೋಪಿಗಳನ್ನು ಕೊಡಗು ಪೊಲೀಸರು ಬಂಧಿಸಿದ ಘಟನೆ ನಡೆದಿದೆ. ಮೂಲತಃ ಕೇರಳ ರಾಜ್ಯದ ಇಡುಕ್ಕಿಯವನಾದ ಸುರೇಶ್  ಬಂಧಿತ ಆರೋಪಿ. ಮಡಿಕೇರಿ ತಾಲ್ಲೂಕಿನ ಸಣ್ಣಪುಲಿಕೋಟು ಗ್ರಾಮದಲ್ಲಿ ಮನೆಯೊಂದನ್ನು ಬಾಡಿಗೆ ಪಡೆದಿದ್ದ ಸುರೇಶ್ ಅಕ್ರಮವಾಗಿ ಬಂದೂಕು ತಯಾರಿಸಿ ಮಾರಾಟ ಮಾಡುತ್ತಿದ್ದ. ಇವನಿಂದ ಬಂದೂಕುಗಳನ್ನು ಖರೀದಿಸಿದ್ದ ಮೂವರನ್ನು ಕೊಡಗು ಪೊಲೀಸರು ಬಂಧಿಸಿದ್ದಾರೆ. ಅಕ್ರಮವಾಗಿ ಬಂದೂಕು ಖರೀದಿಸಿದ್ದ ಕರಿಕೆ ನಿವಾಸಿ ಎನ್.ಜೆ ಶಿವರಾಮ(45), ಮೈಸೂರು ಜಿಲ್ಲೆ ಪಿರಿಯಾಪಟ್ಟಣ ತಾಲ್ಲೂಕಿನ ಎಸ್.ರವಿ(35), ಮಡಿಕೇರಿ ತಾಲ್ಲೂಕಿನ […]

ಅಕ್ರಮ ನಾಡ ಬಂದೂಕು ತಯಾರಿಸಿ ಮಾರಾಟ | ಆರೋಪಿ ಸಹಿತ ಖರೀದಿದಾರರ ಬಂಧನ Read More »

ಕುಣಿಗಲ್ ಜಿಕೆಬಿಎಂಎಸ್ ಶಾಲಾ ಮೈದಾನದಲ್ಲಿ ಸ್ವಾತಂತ್ರ್ಯೋತ್ಸವ | ಪ್ಯಾಲೆಸ್ತೀನ್ ಧ್ವಜ ಹಾರಿಸಲು ಮುಂದಾದ ಪುಂಡರು | ಪ್ರಕರಣ ದಾಖಲು

ತುಮಕೂರು : 78ನೇ ಸ್ವಾತಂತ್ರ್ಯೋತ್ಸವ ಪ್ರಯುಕ್ತ ಕುಣಿಗಲ್ ನ ಜಿಕೆಬಿಎಂಎಸ್ ಶಾಲಾ ಮೈದಾನದಲ್ಲಿ ಧ್ವಜಾರೋಹಣದ ವೇಳೆ ಕೆಲ ಪುಂಡರು ಪ್ಯಾಲೆಸ್ತೀನ್ ದ್ವಜ ಹಾರಿಸಲು ಮುಂದಾದ ಘಟನೆ ಬೆಳಕಿಗೆ ಬಂದಿದೆ. ಕುಣಿಗಲ್ ತಾಲೂಕು ವತಿಯಿಂದ ನಡೆಯುತ್ತಿದ್ದ ಸ್ವಾತಂತ್ರ್ಯೋತ್ಸವದಲ್ಲಿ ಕೆಲ ಕಿಡಿಗೇಡಿಗಳು ವೇದಿಕೆಯ ಕೂಗಳತೆಯ ದೂರದಲ್ಲಿ ಪ್ಯಾಲೆಸ್ತೀನ್ ಧ್ವಜ ಹಿಡಿದು ನಿಂತಿದ್ದರು. ಇದನ್ನ ಕಂಡ ಕೆಲ ಸ್ಥಳೀಯರು ಯುವಕರನ್ನು ಪ್ರಶ್ನಿಸಿದ್ದಾರೆ.. ಈ ವೇಳೆ ಸ್ಥಳಕ್ಕೆ ಆಗಮಿಸಿದ ಭಜರಂಗದಳದ ಕಾರ್ಯಕರ್ತರು ಕಿಡಿಗೇಡಿಗಳನ್ನು ಅಲ್ಲಿಂದ ಕಳಿಸಲು ಯತ್ನಿಸಿ, ನಂತರ ಪೊಲೀಸರಿಗೆ ಮಾಹಿತಿ ನೀಡಿದ್ದಾರೆ

ಕುಣಿಗಲ್ ಜಿಕೆಬಿಎಂಎಸ್ ಶಾಲಾ ಮೈದಾನದಲ್ಲಿ ಸ್ವಾತಂತ್ರ್ಯೋತ್ಸವ | ಪ್ಯಾಲೆಸ್ತೀನ್ ಧ್ವಜ ಹಾರಿಸಲು ಮುಂದಾದ ಪುಂಡರು | ಪ್ರಕರಣ ದಾಖಲು Read More »

19 ಕಡೆಗಳಲ್ಲಿ ಬಾಂಬ್‍ ಇಟ್ಟಿದ್ದೇವೆ | ಅಸ್ಸಾಂನ ದಂಗೆಕೋರ ಗುಂಪೊಂದರಿಂದ ಬೆದರಿಕೆ

ಅಸ್ಸಾಂ: ಸ್ವಾತಂತ್ರ್ಯ ದಿನಾಚರಣೆಯ ಸಂದರ್ಭದಲ್ಲಿ ನಮ್ಮ ಪ್ರತಿಭಟನೆಯನ್ನು ವ್ಯಕ್ತಪಡಿಸಲು ಅಸ್ಸಾಂನ 19 ಕಡೆ ಬಾಂಬ್ ಇಟ್ಟಿದ್ದೆವು. ಆದರೆ, ತಾಂತ್ರಿಕ ದೋಷದಿಂದ ಅವುಗಳು ಸ್ಫೋಟಗೊಂಡಿಲ್ಲ ಎಂದು ಅಸ್ಸಾಂನ ದಂಗೆಕೋರ ಗುಂಪೊಂದು ತಿಳಿಸಿದೆ. ಗುವಾಹಟಿಯ 8 ಪ್ರದೇಶಗಳು ಸೇರಿದಂತೆ 19 ಸ್ಥಳಗಳಲ್ಲಿ ಬಾಂಬ್ ಇಡಲಾಗಿದೆ ಎಂದು ಬೆಳಿಗ್ಗೆ 11.30ರ ಸುಮಾರಿಗೆ ಬಿಡುಗಡೆ ಮಾಡಿರುವ ಪ್ರಕಟಣೆಯಲ್ಲಿ ದಂಗೆಕೋರರ ಗುಂಪು ತಿಳಿಸಿದೆ. ಬಾಂಬ್ ಇರಿಸಲಾಗಿರುವ ಕೆಲವು ಪ್ರದೇಶಗಳ ಚಿತ್ರಗಳನ್ನೂ ಕೂಡ ನಿಷೇಧಿತ ಸಂಘಟನೆ ಹಂಚಿಕೊಂಡಿದೆ.ಅದರಲ್ಲಿ ಒಂದು ಪ್ರದೇಶವು ರಾಜಧಾನಿ ಗುವಾಹಟಿಯ ದಿಸ್ಪುರ್‌ ನ

19 ಕಡೆಗಳಲ್ಲಿ ಬಾಂಬ್‍ ಇಟ್ಟಿದ್ದೇವೆ | ಅಸ್ಸಾಂನ ದಂಗೆಕೋರ ಗುಂಪೊಂದರಿಂದ ಬೆದರಿಕೆ Read More »

ವೃದ್ಧ ನೇಣು ಬಿಗಿದು ಆತ್ಮಹತ್ಯೆ

ಸುಳ್ಯ: ನೇಣು ಬಿಗಿದು ವೃದ್ಧರೊಬ್ಬರು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಕಲ್ಲುಗುಂಡಿಯಲ್ಲಿ ನಡೆದಿದೆ. ಸಂಪಾಜೆ ಗ್ರಾಮದ ದಂಡಕಜೆ ನಿವಾಸಿ ಲಾರೆನ್ಸ್(70) ಆತ್ಮಹತ್ಯೆ ಮಾಡಿಕೊಂಡವರು. ಆತ್ಮಹತ್ಯೆಗೆ ನಿಖರ ಕಾರಣ ತಿಳಿದು ಬಂದಿಲ್ಲ. ಮೃತರು ಪತ್ನಿ, ಮೂವರು ಮಕ್ಕಳನ್ನು ಅಗಲಿದ್ದಾರೆ.

ವೃದ್ಧ ನೇಣು ಬಿಗಿದು ಆತ್ಮಹತ್ಯೆ Read More »

ಲಾಡ್ಜ್ ನಲ್ಲಿ  ಭಿನ್ನ ಜೋಡಿ ಪತ್ತೆ

ಪುತ್ತೂರು : ಪುತ್ತೂರು ನೆಹರುನಗರದ ಲಾಡ್ಜ್ ನಲ್ಲಿ ಭಿನ್ನ ಧರ್ಮದ ದಂಪತಿಗಳು  ಉಳಿದುಕೊಂಡಿದ್ದ ಬಗ್ಗೆ ಮಾಹಿತಿ ಲಭ್ಯವಾಗಿದೆ. ಭಿನ್ನಧರ್ಮದ ಜೋಡಿ ನೆಹರುನಗರದ ವಸತಿ ಗೃಹದಲ್ಲಿ ಉಳಿದುಕೊಂಡಿರುವ ಬಗ್ಗೆ ಪೊಲೀಸರಿಗೆ ಬಂದ ಮಾಹಿತಿಯಂತೆ ಸ್ಥಳಕ್ಕೆ ತೆರಳಿ ದಾಖಲೆಗಳನ್ನು ಪರಿಶೀಲಿಸಿ ಕೊಠಡಿ ಬಾಡಿಗೆಗೆ ಪಡೆದು ಉಳಿದುಕೊಂಡಿದ್ದ ಜೋಡಿಯನ್ನು ವಿಚಾರಣೆ ನಡೆಸಿದಾಗ ಅವರು ಒಂದೇ ಧರ್ಮಕ್ಕೆ ಸೇರಿದ ಬೆಂಗಳೂರು ಮೂಲದ ದಂಪತಿಗಳೆಂದು ತಿಳಿದುಬಂದಿದೆ. ಈ ಬಗ್ಗೆ ಲಾಡ್ಜ್ ನ ಮಾಲಕರು ಪ್ರತಿಕ್ರಿಯೆ ನೀಡಿದ್ದು, ‘ನಾವು 4 ವರ್ಷಗಳ ಹಿಂದೆಯೇ ಅಗ್ರಿಮೆಂಟ್ ಮೂಲಕ

ಲಾಡ್ಜ್ ನಲ್ಲಿ  ಭಿನ್ನ ಜೋಡಿ ಪತ್ತೆ Read More »

ಕಾಫಿ ಶಾಪ್‍ ನ ಮಹಿಳಾ ವಾಶ್‍ ರೂಂನಲ್ಲಿ ಮೊಬೈಲ್ ಕ್ಯಾಮರಾ ಬಚ್ಚಿಟ್ಟು ರೆಕಾರ್ಡ್ | ಪ್ರಕರಣ ದಾಖಲು | ಸಿಬ್ಬಂದಿ ಕೆಲಸದಿಂದ ವಜಾ

ಬೆಂಗಳೂರು: ಕಾಫಿ ಶಾಪ್‌ನ ಮಹಿಳಾ ಟಾಯ್ಲೆಟ್‍ ಮೊಬೈಲ್ ಕ್ಯಾಮರಾ ಬಚ್ಚಿಟ್ಟು ವೀಡಿಯೋ ರೆಕಾರ್ಡ್ ಮಾಡಿರುವ ಘಟನೆ ನಡೆದಿದೆ. ಸದಾಶಿವನಗರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಈ ಘಟನೆ ನಡೆದಿದ್ದು, ಮಹಿಳಾ ಗ್ರಾಹಕರು ಕಾಫಿ ಶಾಪ್‌ನ ಟಾಯ್ಲೆಟ್‌ಗೆ ಹೋದಾಗ ಹಿಡೆನ್ ಕ್ಯಾಮೆರಾ ಪತ್ತೆಯಾಗಿದೆ. ಕೂಡಲೇ ಎಚ್ಚೆತ್ತುಕೊಂಡಿರುವ ಮಹಿಳೆ ಈ ಮಾಹಿತಿಯನ್ನು ಕೆಫೆ ಸಿಬ್ಬಂದಿಗೆ ತಿಳಿಸಿದ್ದಾರೆ. ಜೊತೆಗೆ ಸಾಮಾಜಿಕ ಜಾಲತಾಣದಲ್ಲಿ ಬೆಂಗಳೂರಿನ ಹೆಣ್ಮಕ್ಕಳೇ ಹುಷಾರ್ ಎಂದು ಎಚ್ಚರಿಸಿದ್ದಾರೆ. ಕೆಫೆಯ ವಾಶ್ ರೂಂನಲ್ಲಿ ಡಸ್ಟ್‌ ಬಿನ್ ಕವರ್‌ನಲ್ಲಿ ಯಾರಿಗೂ ಡೌಟ್ ಬರದಂತೆ ಫೋನ್

ಕಾಫಿ ಶಾಪ್‍ ನ ಮಹಿಳಾ ವಾಶ್‍ ರೂಂನಲ್ಲಿ ಮೊಬೈಲ್ ಕ್ಯಾಮರಾ ಬಚ್ಚಿಟ್ಟು ರೆಕಾರ್ಡ್ | ಪ್ರಕರಣ ದಾಖಲು | ಸಿಬ್ಬಂದಿ ಕೆಲಸದಿಂದ ವಜಾ Read More »

ಆಟೋದಲ್ಲಿ ಮಾದಕ ವಸ್ತು ಸಾಗಾಟ | ಮೂವರು ಆರೋಪಿಗಳ ಬಂಧನ

ಪುತ್ತೂರು : ಅಟೋ ರಿಕ್ಷಾದಲ್ಲಿ ಮಾದಕ ವಸ್ತು ಸಾಗಿಸುತ್ತಿದ್ದ ಮೂವರನ್ನು ಉಪ್ಪಿನಂಗಡಿ ಪೊಲೀಸರು ಬಂಧಿಸಿದ ಘಟನೆ ನೆಕ್ಕಿಲಾಡಿ ಗ್ರಾಮದ ನೆಕ್ಕಿಲಾಡಿ ವೃತ್ತದ ಬಳಿ ನಡೆದಿದೆ. ಬಂಟ್ವಾಳ ತಾಲೂಕು ಕೆದಿಲ ಗ್ರಾಮ ನಿವಾಸಿ ಮೊಹಮ್ಮದ್ ನಾಸೀರ್ (21), ಬಂಟ್ವಾಳ ತಾಲೂಕು ಪೆರಾಜೆ ಗ್ರಾಮದ ಏನಾಜೆ ಬುಡೋಳಿ ನಿವಾಸಿ ಮಹಮ್ಮದ್ ಆಸೀಫ್.ಬಿ(21) ಹಾಗೂ ಸಿನಾನ್ ಬಂಧಿತ ಆರೋಪಿಗಳು. ನೆಕ್ಕಿಲಾಡಿ ಜಂಕ್ಷನ್ ಬಳಿ ಉಪ್ಪಿನಂಗಡಿ ಪೊಲೀಸ್ ಠಾಣಾ ಪೊಲೀಸ್ ಉಪ ನಿರೀಕ್ಷಕರಾದ ಅವಿನಾಶ್ ಹೆಚ್ ಮತ್ತು ಸಿಬ್ಬಂದಿಗಳು ವಾಹನ ತಪಾಸಣೆ ನಡೆಸುತ್ತಿದ್ದಾಗ

ಆಟೋದಲ್ಲಿ ಮಾದಕ ವಸ್ತು ಸಾಗಾಟ | ಮೂವರು ಆರೋಪಿಗಳ ಬಂಧನ Read More »

ಕರಾವಳಿಯನ್ನು ಬೆಚ್ಚಿ ಬೀಳಿಸಿದ್ದ ಸೌಮ್ಯಾ ಭಟ್ ಕೊಲೆ ಪ್ರಕರಣ | ಪ್ರಕರಣಕ್ಕೆ 27 ವರ್ಷ ಪೂರ್ತಿ | ಪೊಲೀಸರಿಂದ ತಪ್ಪಿಸಿಕೊಂಡ ಆರೋಪಿಯ ಸುಳಿವೇ ಇಲ್ಲ

ಪುತ್ತೂರು: ವಿದ್ಯಾರ್ಥಿನಿ ಸೌಮ್ಯಾ ಭಟ್‌ ಕೊಲೆ ಪ್ರಕರಣ ನಡೆದು 27 ವರ್ಷ ತುಂಬಿದ್ದು, ಈ ಪ್ರಕರಣ ಕರಾವಳಿಯನ್ನು ಬೆಚ್ಚಿ ಬೀಳಿಸಿತ್ತು. ಆದರೆ ಪೊಲೀಸರ ಕೈಯಿಂದ ತಪ್ಪಿಸಿಕೊಂಡಿದ್ದ ಕೊಲೆ ಆರೋಪಿ ಮಿಲಿಟ್ರಿ ಅಶ್ರಫ್ ಸುಳಿವು ಇನ್ನೂ ಪತ್ತೆಯಾಗಿಲ್ಲ. ಪುತ್ತೂರು ವಿವೇಕಾನಂದ ಕಾಲೇಜಿನ ಬಿಎಸ್‌ ಸಿ ಅಂತಿಮ ವರ್ಷದ ವಿದ್ಯಾರ್ಥಿನಿಯಾಗಿದ್ದ ಸೌಮ್ಯಾ ಭಟ್‌ ಅವರನ್ನು ಹಿಂಬಾಲಿಸಿ ಕುದಂಬ್ಲಾಜೆಯ ಮಿಲಿಟ್ರಿ ಅಶ್ರಫ್‌ ಬರ್ಬರವಾಗಿ ಕೊಲೆಗೈದಿದ್ದ ಆ ಘಟನೆ ಇಡೀ ಪುತ್ತೂರು ಕೆರಳಿ ಕೆಂಡದಂತೆ ಮಾಡಿತ್ತು. 1997ರ ಆಗಸ್ಟ್‌ 7 ರಂದು ಸಂಜೆ

ಕರಾವಳಿಯನ್ನು ಬೆಚ್ಚಿ ಬೀಳಿಸಿದ್ದ ಸೌಮ್ಯಾ ಭಟ್ ಕೊಲೆ ಪ್ರಕರಣ | ಪ್ರಕರಣಕ್ಕೆ 27 ವರ್ಷ ಪೂರ್ತಿ | ಪೊಲೀಸರಿಂದ ತಪ್ಪಿಸಿಕೊಂಡ ಆರೋಪಿಯ ಸುಳಿವೇ ಇಲ್ಲ Read More »

ಮುಡಾ ಸೈಟ್ ಹಂಚಿಕೆ ಪ್ರಕರಣ | ನಾಳೆ (ಆ.9) ಸಿ.ಎಂ.ಸಿದ್ಧರಾಮಯ್ಯ ಸಹಿತ ಇನ್ನಿತರರ ಮೇಲೆ ದಾಖಲಾದ ಪ್ರಕರಣದ ವಿಚಾರಣೆ

ಬೆಂಗಳೂರು: ಮುಡಾ ಸೈಟ್ ಹಗರಣ ಪ್ರಕರಣಕ್ಕೆ ಸಂಬಂಧಿಸಿದಂತೆ ಸಿಎಂ ಸಿದ್ದರಾಮಯ್ಯ ವಿರುದ್ಧ ಜನಪ್ರತಿನಿಧಿಗಳ ನ್ಯಾಯಾಲಯದಲ್ಲಿ ಖಾಸಗಿ ದೂರು ದಾಖಲಾಗಿದ್ದು, ಆ.9 ನಾಳೆ ವಿಚಾರಣೆ ನಡೆಯಲಿದೆ. ಸ್ನೇಹಮಯಿ ಕೃಷ್ಣ ಎಂಬುವರು ನೀಡಿದ ದೂರಿನಂತೆ ಸಿಎಂ ಸಿದ್ದರಾಮಯ್ಯ, ಪತ್ನಿ ಪಾರ್ವತಮ್ಮ, ಮಲ್ಲಿಕಾರ್ಜುನ, ನಿಂಗಾ (ಜವರ) ಮತ್ತು ಇನ್ನಿತರರ ವಿರುದ್ಧ ದೂರು ದಾಖಲಾಗಿದೆ. ಅರ್ಜಿಯ ವಿಚಾರಣೆ 82ನೇ ಜನಪ್ರತಿನಿಧಿಗಳ ನ್ಯಾಯಾಲಯದ ನ್ಯಾಯಾಧೀಶ ಸಂತೋಷ್ ಗಜಾನನ ಭಟ್ ನಡೆಸಲಿದ್ದಾರೆ. ದಾಖಲೆಗಳ ಪರಿಶೀಲನೆ ನಡೆದಿದ್ದು, ನಾಳೆಗೆ ವಾದ ಮಂಡನೆ ಮುಂದೂಡಿಕೆಯಾಗಿದೆ ಎಂದು ತಿಳಿದು ಬಂದಿದೆ.

ಮುಡಾ ಸೈಟ್ ಹಂಚಿಕೆ ಪ್ರಕರಣ | ನಾಳೆ (ಆ.9) ಸಿ.ಎಂ.ಸಿದ್ಧರಾಮಯ್ಯ ಸಹಿತ ಇನ್ನಿತರರ ಮೇಲೆ ದಾಖಲಾದ ಪ್ರಕರಣದ ವಿಚಾರಣೆ Read More »

ಮಂಗಳೂರು ಹೋಂಸ್ಟೇ ದಾಳಿ ಪ್ರಕರಣ | ಎಲ್ಲಾ ಆರೋಪಿಗಳನ್ನು ಖುಲಾಸೆಗೊಳಿಸಿದ ನ್ಯಾಯಾಲಯ

ಮಂಗಳೂರು: ದೇಶಾದ್ಯಂತ ಸುದ್ದಿಯಾಗಿದ್ದ ಮಂಗಳೂರು ಹೋಂ ಸ್ಟೇ ದಾಳಿ ಪ್ರಕರಣದ ಎಲ್ಲಾ ಆರೋಪಿಗಳು ಖುಲಾಸೆಗೊಂಡಿದ್ದು, ಮಂಗಳೂರಿನ ಆರನೇ ಹೆಚ್ಚುವರಿ ಜಿಲ್ಲಾ ಮತ್ತು ಸತ್ರ ನ್ಯಾಯಾಲಯ ಪ್ರಕರಣ ನಡೆದು 12 ವರ್ಷಗಳ ಬಳಿಕ ಈ ಮಹತ್ವದ ತೀರ್ಪು ನೀಡಿದೆ. ಪ್ರಕರಣದ ಬಗ್ಗೆ ಸಾಕ್ಷ್ಯಾಧಾರಗಳ ಕೊರತೆಯಿಂದ ಆರೋಪಿಗಳು ದೋಷ ಮುಕ್ತರಾಗಿದ್ದಾರೆ ಎಂದು ಮಂಗಳೂರು ಆರನೇ ಹೆಚ್ಚುವರಿ ಜಿಲ್ಲಾ ಮತ್ತು ಸತ್ರ ನ್ಯಾಯಾಲಯದ ನ್ಯಾಯಾಧೀಶರಾದ ಕಾಂತರಾಜು ತೀರ್ಪು ನೀಡಿದ್ದಾರೆ. 2012ರ ಜುಲೈ 28ರಂದು ಮಂಗಳೂರಿನ ಪಡೀಲ್ ಬಳಿಯ ಮಾರ್ನಿಂಗ್ ಮಿಸ್ಟ್ ಹೋಂಸ್ಟೇ

ಮಂಗಳೂರು ಹೋಂಸ್ಟೇ ದಾಳಿ ಪ್ರಕರಣ | ಎಲ್ಲಾ ಆರೋಪಿಗಳನ್ನು ಖುಲಾಸೆಗೊಳಿಸಿದ ನ್ಯಾಯಾಲಯ Read More »

error: Content is protected !!
Scroll to Top