ಅಪರಾಧ

ವ್ಯಕ್ತಿಯೋರ್ವನ ಕುತ್ತಿಗೆಗೆ ಚೂರಿಯಿಂದ ಇರಿತ | ಗಂಭೀರ ಗಾಯ

ಬೆಳ್ತಂಗಡಿ: ವ್ಯಕ್ತಿಯೊಬ್ಬನ ಕುತ್ತಿಗೆಗೆ ಹಾಗೂ ಎದೆಗೆ ಚೂರಿಯಿಂದ ಇರಿದು ಕೊಲೆ ಮಾಡಲು ಯತ್ನಿಸಿದ ಘಟನೆ ಅಳದಂಗಡಿ ಸಂತೆ ಮಾರುಕಟ್ಟೆಯಲ್ಲಿ ನಡೆದಿದೆ. ಗಂಭೀರವಾಗಿ ಗಾಯಗೊಂಡ ವ್ಯಕ್ತಿಯನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ . ಡೆನ್ನಿಸ್ ಪಿಂಟೋ ಹಲ್ಲೆಗೆ ಒಳಗಾದ ವ್ಯಕ್ತಿಯಾಗಿದ್ದಾರೆ. ಕೊಲೆಗೈದವ ಸ್ಥಳೀಯ ನಿವಾಸಿ ಶೀನ ಎಂಬವರು ಆರೋಪಿಯಾಗಿದ್ದಾನೆ. ಅಳದಂಗಡಿ ಸಂತೆ ಮಾರುಕಟ್ಟೆಯ ಒಳಗೆ ಎ.26 ರಂದು ರಾತ್ರಿಯ ವೇಳೆ ಕ್ಷುಲ್ಲಕ ಕಾರಣಕ್ಕೆ ಆರೋಪಿ ಶೀನ ಎಂಬಾತ ಹಾಗೂ ಡೆನ್ನಿಸ್ ಪಿಂಟೋ ನಡುವೆ ಮಾತಿನ ಚಕಮಕಿ ನಡೆದಿದೆ. ಈ ವೇಳೆ ಶೀನ […]

ವ್ಯಕ್ತಿಯೋರ್ವನ ಕುತ್ತಿಗೆಗೆ ಚೂರಿಯಿಂದ ಇರಿತ | ಗಂಭೀರ ಗಾಯ Read More »

ಮಹಿಳಾ ಪೊಲೀಸ್ ಠಾಣೆ ಬಳಿ ಮುಖ್ಯರಸ್ತೆಯಲ್ಲಿ ಕುಳಿತು ಸುಗಮ ಸಂಚಾರ, ಪೊಲೀಸರ ಕರ್ತವ್ಯಕ್ಕೆ ಅಡ್ಡಿ ಹಿನ್ನೆಲೆ | ಪ್ರತಿಭಟನಾಕಾರರ ವಿರುದ್ಧ ಪ್ರಕರಣ ದಾಖಲು

ಪುತ್ತೂರು: ಪುತ್ತೂರು ಸರಕಾರಿ ಆಸ್ಪತ್ರೆಯ ಆಡಳಿತ ವೈದ್ಯಾಧಿಕಾರಿಯವರ ಕರ್ತವ್ಯಕ್ಕೆ ಅಡ್ಡಿಪಡಿಸಿದ ಆರೋಪಿಯನ್ನು ಬಂಧಿಸುವಂತೆ ಆಗ್ರಹಿಸಿ ಎ.26 ರಂದು ಬೆಳಗ್ಗೆ ಪುತ್ತೂರು ಮಹಿಳಾ ಪೊಲೀಸ್ ಠಾಣೆಯ ಬಳಿ ಮುಖ್ಯರಸ್ತೆಯ ಮಧ್ಯದಲ್ಲಿ ಕುಳಿತು ಸುಗಮ ಸಂಚಾರಕ್ಕೆ ಮತ್ತು ಇತರ ವೈದ್ಯಕೀಯ ತುರ್ತು ಸೇವೆಗೆ ಅಡ್ಡಿ ಸಹಿತ ಪೊಲೀಸರ ಕರ್ತವ್ಯಕ್ಕೂ ಅಡ್ಡಿಪಡಿಸಿರುವ ಆರೋಪದ ಮೇರೆಗೆ ಪ್ರತಿಭಟನಾಕಾರರ ವಿರುದ್ಧ ಪುತ್ತೂರು ನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಎ.25ರಂದು ಪುತ್ತೂರು ಸರಕಾರಿ ಆಸ್ಪತ್ರೆಯ ಆಡಳಿತ ವೈದ್ಯಾಧಿಕಾರಿ ಡಾ. ಅಶಾಜ್ಯೋತಿ ಕೆ ಪುತ್ತೂರಾಯ ಅವರ

ಮಹಿಳಾ ಪೊಲೀಸ್ ಠಾಣೆ ಬಳಿ ಮುಖ್ಯರಸ್ತೆಯಲ್ಲಿ ಕುಳಿತು ಸುಗಮ ಸಂಚಾರ, ಪೊಲೀಸರ ಕರ್ತವ್ಯಕ್ಕೆ ಅಡ್ಡಿ ಹಿನ್ನೆಲೆ | ಪ್ರತಿಭಟನಾಕಾರರ ವಿರುದ್ಧ ಪ್ರಕರಣ ದಾಖಲು Read More »

ವಿದ್ಯಾರ್ಥಿನಿಗೆ ಕಿರುಕುಳ ನೀಡಿದ ವಾಲಿಬಾಲ್‌ ಕೋಚ್‌ ವಿರುದ್ಧ ಪೋಕ್ಸೊ ಕೇಸ್‌

ಹಿಂದು ಕಾರ್ಯಕರ್ತರು ಹಲ್ಲೆ ಮಾಡಿದ ಕುರಿತು ಪ್ರತಿದೂರು ದಾಖಲು ಬೆಳ್ತಂಗಡಿ: ಖಾಸಗಿ ಕಾಲೇಜು ವಿದ್ಯಾರ್ಥಿನಿಗೆ ಅಸಭ್ಯ ಮೆಸೇಜ್‌ ಕಳುಹಿಸಿ ಕಿರುಕುಳ ನೀಡುತ್ತಿದ್ದ ವಾಲಿಬಾಲ್ ಕೋಚ್‌ ವಿರುದ್ಧ ಬೆಳ್ತಂಗಡಿ ಪೊಲೀಸ್‌ ಠಾಣೆಯಲ್ಲಿ ಪೋಕ್ಸೊ ಕೇಸ್‌ ದಾಖಲಾಗಿದೆ. ಕಾರ್ಕಳದ ಸಯ್ಯದ್ (24) ಎಂಬಾತ ಕಿರುಕುಳ ನೀಡಿದ ಆರೋಪಿ. 17ರ ಹರೆಯದ ವಿದ್ಯಾರ್ಥಿನಿಗೆ ಸಯ್ಯದ್‌ ಕಳೆದ ಕೆಲವು ದಿನಗಳಿಂದ ನಿರಂತರವಾಗಿ ಮೆಸೇಜ್‌ಗಳನ್ನು ಕಳುಹಿಸಿ ಕಿರುಕುಳ ನೀಡುತ್ತಿದ್ದ ಎಂದು ಆರೋಪಿಸಲಾಗಿದೆ. ಈ ವಿಚಾರ ತಿಳಿದ ರಾಷ್ಟ್ರೀಯ ಹಿಂದೂ ಜಾಗರಣ ವೇದಿಕೆಯ ಕಾರ್ಯಕರ್ತರು ಏ.26ರಂದು

ವಿದ್ಯಾರ್ಥಿನಿಗೆ ಕಿರುಕುಳ ನೀಡಿದ ವಾಲಿಬಾಲ್‌ ಕೋಚ್‌ ವಿರುದ್ಧ ಪೋಕ್ಸೊ ಕೇಸ್‌ Read More »

ನಿರ್ಜನ ಸ್ಥಳದಲ್ಲಿ ಯುವಕನ ಶವ ಪತ್ತೆ : ಕೊಲೆ ಶಂಕೆ

ಕ್ರಿಕೆಟ್‌ ವಿಚಾರದಲ್ಲಿ ನಡೆದ ಹಲ್ಲೆಯಿಂದ ಸಾವಿಗೀಡಾದ ಅನುಮಾನ ಮಂಗಳೂರು : ನಗರದ ಹೊರವಲಯದ ಕುಡುಪು ಭಟ್ರಕಲ್ಲುರ್ಟಿ ದೈವಸ್ಥಾನದ ಬಳಿ ನಿರ್ಜನ ಪ್ರದೇಶದಲ್ಲಿ ಅಪರಿಚಿತ ವ್ಯಕ್ತಿಯ ಮೃತದೇಹ ಭಾನುವಾರ ಸಂಜೆ ವೇಳೆಗೆ ಪತ್ತೆಯಾಗಿದೆ. ವ್ಯಕ್ತಿಯನ್ನು ಹಲ್ಲೈಗೈದು ಕೊಲೆ ಮಾಡಿರುವ ಶಂಕೆ ವ್ಯಕ್ತವಾಗಿದೆ. ಇಲ್ಲಿನ ಸ್ಥಳೀಯರಿಗೆ ಮೃತ ವ್ಯಕ್ತಿಯ ಪರಿಚಯವಿಲ್ಲ. ಆತ ದಿನಗೂಲಿ ಕಾರ್ಮಿಕನಾಗಿರಬಹುದು ಎಂದು ಶಂಕಿಸಲಾಗಿದೆ. ಇಲ್ಲೆ ಸಮೀಪ ಕ್ರಿಕೆಟ್‌ ಪಂದ್ಯಾಟವೊಂದು ನಡೆದಿದ್ದು, ಅದನ್ನು ನೋಡಲು ಬಂದ ವ್ಯಕ್ತಿ ಕೊಲೆಯಾಗಿದ್ದಾನೆಯೇ ಎಂಬ ಅನುಮಾನವೂ ಇದೆ. ಕುಡುಪು ಕಟ್ಟೆ ಸಮೀಪದ

ನಿರ್ಜನ ಸ್ಥಳದಲ್ಲಿ ಯುವಕನ ಶವ ಪತ್ತೆ : ಕೊಲೆ ಶಂಕೆ Read More »

ನದಿಗೆ ಬಿದ್ದು ಯುವಕ ಸಾವು

ಉಡುಪಿ: ಹೆಬ್ರಿ ಸಮೀಪ ಸೀತಾನದಿ ನದಿಗೆ ಆಕಸ್ಮಿಕವಾಗಿ ಜಾರಿ ಬಿದ್ದು ಯುವಕ ಸಾವನ್ನಪ್ಪಿದ ದುರಂತ ಘಟನೆ ಸಂಭವಿಸಿದೆ. ಮೃತನನ್ನು ಹೆಬ್ರಿಯ ಕಿನ್ನಿಗುಡ್ಡೆ ನಿವಾಸಿ ಸುಧಾಕರ ಶೆಟ್ಟಿ ಅವರ ಪುತ್ರ ಸಂಕೇತ್ ಶೆಟ್ಟಿ (24) ಎಂದು ಗುರುತಿಸಲಾಗಿದೆ. ಸಂಕೇತ್ ತನ್ನ ಸ್ನೇಹಿತರೊಂದಿಗೆ ನದಿಗೆ ಹೋಗಿದ್ದಾಗ ಕಾಲು ಜಾರಿ ಬಿದ್ದು ನೀರಿನಲ್ಲಿ ಮುಳುಗಿ ಸಾವನ್ನಪ್ಪಿದ್ದಾರೆ. ಹೆಬ್ರಿ ಗ್ರಾಮ ಪಂಚಾಯತ್ ಅಡಿಯಲ್ಲಿ ಅಂಗವಿಕಲ ವ್ಯಕ್ತಿಗಳ ಪುನರ್ವಸತಿ ವಿಭಾಗದಲ್ಲಿ ಅವರು ಉದ್ಯೋಗದಲ್ಲಿದ್ದರು ಮತ್ತು ಹೆಬ್ರಿ ಜೆಸಿಐ ಸೇರಿದಂತೆ ವಿವಿಧ ಸಂಸ್ಥೆಗಳಲ್ಲಿ ಸಕ್ರಿಯವಾಗಿ ತೊಡಗಿಸಿಕೊಂಡಿದ್ದರು.

ನದಿಗೆ ಬಿದ್ದು ಯುವಕ ಸಾವು Read More »

ಧರ್ಮದ ಹೆಸರಲ್ಲಿ ಹಿಂಸಾಚಾರ : ಇಸ್ಲಾಂ ತ್ಯಜಿಸಿದ ಶಿಕ್ಷಕ

ಕೋಲ್ಕತ್ತಾ: ಪಹಲ್ಗಾಮ್‌ನಲ್ಲಿ ಉಗ್ರರು ಧರ್ಮ ಕೇಳಿ ಪ್ರವಾಸಿಗರನ್ನು ಸಾಯಿಸಿದ ಕೃತ್ಯದ ಬಳಿಕ ಪಶ್ಚಿಮ ಬಂಗಾಳದ ಬದುರಿಯಾದ ಶಾಲಾ ಶಿಕ್ಷಕರೊಬ್ಬರು ಇಸ್ಲಾಂ ಧರ್ಮ ತ್ಯಜಿಸಲು ನಿರ್ಧರಿಸಿದ್ದಾರೆ. ಈ ಬಗ್ಗೆ ವೀಡಿಯೋ ಹಂಚಿಕೊಂಡಿರುವ ಶಿಕ್ಷಕ ಸಬೀರ್ ಹುಸೇನ್, ಕಾಶ್ಮೀರ ಸೇರಿದಂತೆ ವಿವಿಧೆಡೆ ಧರ್ಮವನ್ನು ಹಿಂಸೆಗೆ ಆಯುಧವನ್ನಾಗಿ ಬಳಸಲಾಗುತ್ತಿದೆ. ಇದನ್ನು ಒಪ್ಪಲು ಸಾಧ್ಯವಿಲ್ಲ. ಆದ್ದರಿಂದ ನಾನು ಇಸ್ಲಾಂನ್ನು ತ್ಯಜಿಸುತ್ತೇನೆ. ಯಾವ ಧರ್ಮದ ವ್ಯಾಪ್ತಿಗೂ ಒಳಪಡದೆ, ಕೇವಲ ಮಾನವನಾಗಿ ಗುರುತಿಸಿಕೊಳ್ಳಲು ಬಯಸುತ್ತೇನೆ ಎಂದು ಹೇಳಿಕೊಂಡಿದ್ದಾರೆ. ಏ.22ರಂದು ಜಮ್ಮು ಮತ್ತು ಕಾಶ್ಮೀರದ ಪಹಲ್ಗಾಮ್‌ನಲ್ಲಿ ಪ್ರವಾಸಿಗರ

ಧರ್ಮದ ಹೆಸರಲ್ಲಿ ಹಿಂಸಾಚಾರ : ಇಸ್ಲಾಂ ತ್ಯಜಿಸಿದ ಶಿಕ್ಷಕ Read More »

ಕಾಶ್ಮೀರದಲ್ಲಿ ಇನ್ನಿಬ್ಬರು ಉಗ್ರರ ಮನೆ ಧ್ವಂಸ

ಸ್ಫೋಟಕದ ಮೂಲಕ ಮನೆಗಳನ್ನು ನಾಶ ಮಾಡಿದ ಸೇನೆ ಶ್ರೀನಗರ: ಜಮ್ಮು-ಕಾಶ್ಮೀರದ ಪಹಲ್ಗಾಮ್‌ನಲ್ಲಿ ಅಮಾಯಕ ಪ್ರವಾಸಿಗರನ್ನು ಗುಂಡು ಹಾರಿಸಿ ಕೊಂದ ಭಯೋತ್ಪಾದಕ ಕೃತ್ಯದ ಬಳಿಕ ಉಗ್ರರ ಮನೆಗಳನ್ನು ಭದ್ರತಾ ಪಡೆ ನಾಶ ಮಾಡುತ್ತಿದೆ. ನಿನ್ನೆ ರಾತ್ರಿ ಐಇಡಿ ಸ್ಫೋಟಿಸಿ ಮತ್ತು ಬುಲ್‌ಡೋಜರ್‌ ಮೂಲಕ ಇಬ್ಬರು ಉಗ್ರರ ಮನೆಯನ್ನು ಭಾರತೀಯ ಸೇನೆ ಧ್ವಂಸ ಮಾಡಿದೆ. ಲಷ್ಕರ್ ಎ ತೊಯ್ಬಾದ ಉಗ್ರ ಸಂಘಟನೆಯ ಉಗ್ರ ಫಾರೂಕ್ ಎಂಬಾತನ ಮನೆಯನ್ನು ಸೇನೆ ಧ್ವಂಸಗೊಳಿಸಿದೆ. ಕುಪ್ವಾರದ ಕಲಾರೂಸ್ ಪ್ರದೇಶದಲ್ಲಿರುವ ಫಾರೂಕ್ ಮನೆಯನ್ನು ಐಇಡಿ ಸ್ಫೋಟಿಸಿ

ಕಾಶ್ಮೀರದಲ್ಲಿ ಇನ್ನಿಬ್ಬರು ಉಗ್ರರ ಮನೆ ಧ್ವಂಸ Read More »

ಪುತ್ತೂರು ಸರಕಾರಿ ಆಸ್ಪತ್ರೆ ಆಡಳಿತ ವೈದ್ಯಾಧಿಕಾರಿಗಳ ಜೊತೆ ಅನುಚಿತ ವರ್ತನೆ, ಹಲ್ಲೆಗೆ ಯತ್ನ | ಪುತ್ತೂರು ಮಹಿಳಾ ಪೊಲೀಸ್ ಠಾಣೆ ಎದುರು ಭಾರತೀಯ ವೈದ್ಯಕೀಯ ಸಂಘದ ಪುತ್ತೂರು ಶಾಖೆಯ ಪದಾಧಿಕಾರಿಗಳಿಂದ ಪ್ರತಿಭಟನೆ | ರಸ್ತೆ ತಡೆ ನಡೆಸಿ ಪ್ರತಿಭಟನೆ

ಪುತ್ತೂರು: ಪುತ್ತೂರು ಸರಕಾರಿ ಆಸ್ಪತ್ರೆ ವೈದ್ಯಾಧಿಕಾರಿ ಮೇಲೆ ಅನುಚಿತ ವರ್ತನೆ ಹಾಗೂ ಹಲ್ಲೆಗೆ ಯತ್ನಿಸಿದ ಯುವಕನನ್ನು ಇಂದು ಸಂಜೆ 6 ಗಂಟೆ ಒಳಗೆ ಬಂಧಿಸದಿದ್ದಲ್ಲಿ ತಾಲೂಕಿನ ಎಲ್ಲಾ ಆಸ್ಪತ್ರೆಗಳು ಬಂದ್‍ ಆಗಲಿದೆ ಎಂಬ ಎಚ್ಚರಿಕೆಯನ್ನು ಭಾರತೀಯ ವೈದ್ಯಕೀಯ ಸಂಘದ ಪುತ್ತೂರು ಶಾಖ ಎಚ್ಚರಿಕೆ ನೀಡಿದೆ. ಪುತ್ತೂರು ಸರಕಾರಿ ಆಸ್ಪತ್ರೆಯ ವೈದ್ಯಾಧಿಕಾರಿಗಳ ಮೇಲೆ ವ್ಯಕ್ತಿಯೋರ್ವ ಅನುಚಿತ ವರ್ತನೆ, ಹಲ್ಲೆಗೆ ಯತ್ನಿಸಿದ ಘಟನೆ ಶುಕ್ರವಾರ ರಾತ್ರಿ ಪುತ್ತೂರು ಸರಕಾರಿ ಆಸ್ಪತ್ರೆಯಲ್ಲಿ ನಡೆದಿದ್ದು, ಈ ನಿಟ್ಟಿನಲ್ಲಿ ವೈದ್ಯರು ಹಾಗೂ ಬಿಜೆಪಿ ಮುಖಂಡರು

ಪುತ್ತೂರು ಸರಕಾರಿ ಆಸ್ಪತ್ರೆ ಆಡಳಿತ ವೈದ್ಯಾಧಿಕಾರಿಗಳ ಜೊತೆ ಅನುಚಿತ ವರ್ತನೆ, ಹಲ್ಲೆಗೆ ಯತ್ನ | ಪುತ್ತೂರು ಮಹಿಳಾ ಪೊಲೀಸ್ ಠಾಣೆ ಎದುರು ಭಾರತೀಯ ವೈದ್ಯಕೀಯ ಸಂಘದ ಪುತ್ತೂರು ಶಾಖೆಯ ಪದಾಧಿಕಾರಿಗಳಿಂದ ಪ್ರತಿಭಟನೆ | ರಸ್ತೆ ತಡೆ ನಡೆಸಿ ಪ್ರತಿಭಟನೆ Read More »

ಪಾಕ್‌ ಪ್ರಜೆಗಳ ಬಳಿಕ ಈಗ ಬಾಂಗ್ಲಾದೇಶದ ಪ್ರಜೆಗಳ ಗಡಿಪಾರು

550ಕ್ಕೂ ಅಧಿಕ ಬಾಂಗ್ಲಾದೇಶಿಯರ ಬಂಧನ; ಗಡಿಪಾರು ಮಾಡಲು ಕ್ರಮ ಹೊಸದಿಲ್ಲಿ: ಪಹಲ್ಗಾಮ್‌ ಉಗ್ರ ದಾಳಿಯ ಬಳಿಕ ಪಾಕಿಸ್ಥಾನಿ ಪ್ರಜೆಗಳಿಗೆ ದೇಶಬಿಟ್ಟು ಹೋಗಲು ಹೇಳಿದ ಬಳಿಕ ಈಗ ಬಾಂಗ್ಲಾದೇಶದ ಅಕ್ರಮ ಪ್ರಜೆಗಳಿಗೆ ಗೇಟ್‌ಪಾಸ್‌ ನೀಡಲಾಗುತ್ತಿದೆ. ಪ್ರಧಾನಿ ನರೇಂದ್ರ ಮೋದಿಯವರ ತವರು ರಾಜ್ಯವಾದ ಗುಜರಾತಿನಲ್ಲಿ ಅಕ್ರಮವಾಗಿ ನೆಲೆಸಿರುವ ಬಾಂಗ್ಲಾದೇಶ ಪ್ರಜೆಗಳನ್ನು ಗುರುತಿಸುವ ಕಾರ್ಯಾಚರಣೆ ಪ್ರಾರಂಭಿಸಲಾಗಿದ್ದು, ಭಾರತದಿಂದ ಹೊರಗೆ ಕಳುಹಿಸಲು ಸಿದ್ಧತೆಗಳನ್ನು ನಡೆಸಿದೆ. ರಾಜ್ಯಾದ್ಯಂತ ನಡೆದ ಬೃಹತ್ ಕಾರ್ಯಾಚರಣೆಯಲ್ಲಿ, ನಕಲಿ ದಾಖಲೆಗಳೊಂದಿಗೆ ಭಾರತದಲ್ಲಿ ವಾಸಿಸುತ್ತಿರುವ 550ಕ್ಕೂ ಹೆಚ್ಚು ಅಕ್ರಮ ವಲಸಿಗರನ್ನು ಅಹಮದಾಬಾದ್

ಪಾಕ್‌ ಪ್ರಜೆಗಳ ಬಳಿಕ ಈಗ ಬಾಂಗ್ಲಾದೇಶದ ಪ್ರಜೆಗಳ ಗಡಿಪಾರು Read More »

ಜೀನಿ ಸಂಸ್ಥೆಯ ಮಾಲಕನ ವಿರುದ್ದ ಲೈಂಗಿಕ ದೌರ್ಜನ್ಯ ಪ್ರಕರಣದಲ್ಲಿ ದೂರು ದಾಖಲು

ಜೀನಿ ಸಂಸ್ಥೆಯ ಮಾಲೀಕ ದಿಲೀಪ್ ಕುಮಾರ್ ವಿರುದ್ಧ ಲೈಂಗಿಕ ಕಿರುಕುಳವನ್ನು ನೀಡಿದ್ದಾರೆ ಎಂದು ಕಳ್ಳಂಬೆಳ್ಳ ಪೊಲೀಸ್ ಠಾಣೆಯಲ್ಲಿ ಮಹಿಳೆಯೊಬ್ಬರು ದೂರು ನೀಡಿದ ಘಟನೆ ನಡೆದಿದೆ. ಜೀನಿ ಕಂಪೆನಿಯ ಮಾಲೀಕರಾದ ದಿಲೀಪ್ ಕುಮಾರ್ ವಿರುದ್ಧ ಅವರದ್ದೇ ಕಂಪೆನಿಯ ಕೆಲಸ ಮಾಡುತ್ತಿದ್ದ ಮೇಘನಾ ಎಂಬುವವರು ದೂರು ನೀಡಿದ್ದು, ದೂರಿನಲ್ಲಿ ತಿಳಿಸಿದಂತೆ, ಕಳೆದ ಹತ್ತು ತಿಂಗಳ ಹಿಂದೆ ನಾನು ಕೆಲಸಕ್ಕೆ ಸೇರಿದ್ದೆ, ಕಳೆದ 15 ದಿನಗಳಿಂದ ನನ್ನೊಂದಿಗೆ ಅಸಭ್ಯವಾಗಿ ಮಾತನಾಡಿ, ನನ್ನನ್ನು ಕೈ ಹಿಡಿದು ಎಳೆದು ಲೈಂಗಿಕ ಕಿರುಕುಳ ನೀಡಲು ಪ್ರಯತ್ನಿಸಿದ್ದಾರೆ

ಜೀನಿ ಸಂಸ್ಥೆಯ ಮಾಲಕನ ವಿರುದ್ದ ಲೈಂಗಿಕ ದೌರ್ಜನ್ಯ ಪ್ರಕರಣದಲ್ಲಿ ದೂರು ದಾಖಲು Read More »

error: Content is protected !!
Scroll to Top