ಅಪರಾಧ

ಯುವಕ ನೇಣು ಬಿಗಿದು ಆತ್ಮಹತ್ಯೆ !

ಬೆಳ್ತಂಗಡಿ: ಯುವಕನೋರ್ವ ನೇಣುಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಬೆಳ್ತಂಗಡಿ ತಾಲೂಕಿನ ಲಾಯಿಲ ಕುಂಠಿನ ಎಂಬಲ್ಲಿ ನಡೆದಿದೆ. ಲಾಯಿಲ ಗ್ರಾಮದ ಕುಂಟಿನಿ ನಿವಾಸಿ ನಿತಿನ್ (26) ಆತ್ಮಹತ್ಯೆ ಮಾಡಿಕೊಂಡ ಯುವಕ. ಕಳೆದ ಕೆಲವು ಸಮಯಗಳಿಂದ ಗೂಡ್ಸ್ ರಿಕ್ಷಾದಲ್ಲಿ ಮೀನು ವ್ಯಾಪಾರ ಮಾಡಿಕೊಂಡಿದ್ದ, ನಿನ್ನೆ ಕೂಡ ಕುಂಟಿನಿಯಲ್ಲಿ ಮೀನು ವ್ಯಾಪಾರ ಮಾಡಿ ನಂತರ ತನ್ನ ಸಂಬಂಧಿಕರ ಮನೆಗೆ ತೆರಳಿದ್ದಾನೆ. ಅಲ್ಲಿ ಯಾವುದೋ ಕಾರಣಕ್ಕಾಗಿ ತನ್ನ ಮನೆಯವರೊಂದಿಗೆ ಜಗಳವಾಗಿದೆ. ಇದೇ ವೇಳೆ ಮನೆಗೆ ಬಂದ ನಿತಿನ್ ಬಾಗಿಲು ಹಾಕಿ ನೇಣು ಬಿಗಿದುಕೊಂಡಿದ್ದಾನೆ. […]

ಯುವಕ ನೇಣು ಬಿಗಿದು ಆತ್ಮಹತ್ಯೆ ! Read More »

ಅನ್ಯ ಕೋಮಿನ ಯುವಕನಿಂದ ಹಿಂದೂ ಯುವತಿಗೆ ಮೆಸೇಜ್ | ತಂಡದಿಂದ ಹಲ್ಲೆ

ಸುಳ್ಯ: ಅನ್ಯಕೋಮಿನ ಯುವಕನನೋರ್ವ ಹಿಂದೂ ಯುವತಿಗೆ ಮೆಸೇಜ್ ಮಾಡುತ್ತಿದ್ದಾನೆ ಎಂದು ಆರೋಪಿಸಿ ತಂಡವೊಂದು ಯುವಕನಿಗೆ ಹಲ್ಲೆ ನಡೆಸಿದ ಸುಳ್ಯ ತಾಲೂಕಿನ ಎಲಿಮಲೆಯಲ್ಲಿ ನಡೆದಿದೆ. ನಯಾಜ್‍ ಎಂಬಾತ ಮೆಸೇಜ್ ಮಾಡುತ್ತಿದ್ದಾನೆ ಎಂದು ಆರೋಪಿಸಿ ಯುವಕರ ತಂಡ ಹಲ್ಲೆ ನಡೆಸಿರುವುದಾಗಿ ತಿಳಿದು ಬಂದಿದ್ದು, ಹಲ್ಲೆಗೊಳಗಾದ ಯುವಕ ಸುಳ್ಯ ಸರಕಾರಿ ಆಸ್ಪತ್ರೆಗೆ ದಾಖಲಾಗಿದ್ದಾನೆ ಎನ್ನಲಾಗಿದೆ. ಯುವಕನ್ನು ಸ್ಥಳೀಯ ನಿವಾಸಿಯೋರ್ವ ಮಾತನಾಡಲು ಇದೆ ಎಂದು ಗ್ಯಾರೇಜಿಗೆ ಕರೆಸಿಕೊಂಡು, ತಾನು ಹೋದಾಗ ಗುಂಪು ಸೇರಿಸಿ ಹಲ್ಲೆ ನಡೆಸಿ, ಜೀವ ಬೆದರಿಕೆ ಒಡ್ಡಿರುವುದಾಗಿ ಯುವಕ ಪೊಲೀಸರಿಗೆ

ಅನ್ಯ ಕೋಮಿನ ಯುವಕನಿಂದ ಹಿಂದೂ ಯುವತಿಗೆ ಮೆಸೇಜ್ | ತಂಡದಿಂದ ಹಲ್ಲೆ Read More »

ಅಮೆಜಾನ್‌ ಕಂಪನಿಗೆ 30 ಕೋಟಿ ರೂ. ವಂಚಿಸಿದ ಇಬ್ಬರು ಮಂಗಳೂರಿನಲ್ಲಿ ಸೆರೆ

ದುಬಾರಿ ವಸ್ತುಗಳನ್ನು ಆರ್ಡರ್‌ ಮಾಡಿ ವಂಚಿಸುತ್ತಿದ್ದ ಕಿಲಾಡಿಗಳು ಮಂಗಳೂರು : ಅಮೆಜಾನ್‌ ಕಂಪನಿಗೆ ಬರೊಬ್ಬರಿ 30 ಕೋಟಿ ರೂ. ವಂಚಿಸಿದ್ದ ಆರೋಪಿಗಳನ್ನು ಮಂಗಳೂರಿನ ಉರ್ವ ಠಾಣೆ ಪೊಲೀಸರು ಬಂಧಿಸಿದ್ದಾರೆ. ರಾಜಸ್ಥಾನದ ಧೋಪುರ್ ಜಿಲ್ಲೆಯ ರಾಜಕುಮಾರ್ ಮೀನಾ (23) ಮತ್ತು ಕರೌಲಿ ಜಿಲ್ಲೆಯ ಸುಭಾಸ್ ಗುರ್ಜರ್ (27) ಬಂಧಿತರು.ಆರೋಪಿಗಳು ಅಮೆಜಾನ್​ನಲ್ಲಿ ಬೆಲೆಬಾಳುವ ವಸ್ತುಗಳನ್ನು ಆರ್ಡರ್​​ ಮಾಡುತ್ತಿದ್ದರು. ವಸ್ತುಗಳ ಡೆಲಿವರಿ ಪಡೆಯಲು ಮಂಗಳೂರಿನಂಥ ಎರಡನೇ ಹಂತದ ನಗರಗಳ ಲೋಕೆಷನ್ ಆಯ್ಕೆ ಮಾಡುತ್ತಿದ್ದರು. ಬುಕ್ ಮಾಡಿದ ವಸ್ತುಗಳನ್ನು ಡೆಲಿವರಿ ಪಡೆಯಲು ಆರೋಪಿಗಳು

ಅಮೆಜಾನ್‌ ಕಂಪನಿಗೆ 30 ಕೋಟಿ ರೂ. ವಂಚಿಸಿದ ಇಬ್ಬರು ಮಂಗಳೂರಿನಲ್ಲಿ ಸೆರೆ Read More »

ಕಿರುಕುಳ ನೀಡುತ್ತಿದ್ದ ಚಿಕ್ಕಪ್ಪನ ಮಗನನ್ನು ಕೇಬಲ್‌ನಿಂದ ಕತ್ತು ಬಿಗಿದು ಕೊಂದ ಮಹಿಳೆ

ಕಟೀಲು : ಕಳೆದ ಭಾನುವಾರ ಅನುಮಾನಾಸ್ಪದ ರೀತಿಯಲ್ಲಿ ಸಾವಿಗೀಡಾಗಿ ಕಟೀಲು ಸಮೀಪದ ಗಿಡಿಗೆರೆ ನಿವಾಸಿ ತಾರನಾಥ ಮುಗೇರ ಎಂಬವರ ಸಾವು ಆತ್ಮಹತ್ಯೆಯಲ್ಲ ಕೊಲೆ ಎಂಬುದು ಪತ್ತೆಯಾಗಿದೆ. ತಾರನಾಥ ಮುಗೇರ ಮೃತದೇಹ ಸಾರ್ವಜನಿಕ ಸ್ಥಳದಲ್ಲಿ ಕುತ್ತಿಗೆಗೆ ಕೇಬಲ್‌ನಿಂದ ಬಿಗಿದು ಮೃತಪಟ್ಟ ರೀತಿಯಲ್ಲಿ ಸಿಕ್ಕಿತ್ತು. ಪ್ರಕರಣ ಸಂಬಂಧ ವಿಚಾರಣೆ ನಡೆಸುವ ವೇಳೆ ಸಂಶಯ ದೃಢಪಟ್ಟ ಹಿನ್ನೆಲೆಯಲ್ಲಿ ಗುರುವಾರ ಆರೋಪಿಯನ್ನು ಬಂಧಿಸಿ ನ್ಯಾಯಾಲಯಕ್ಕೆ ಹಾಜರುಪಡಿಸಲಾಗಿದೆ.ಮನೆಯಿಂದ ಸುಮಾರು 100 ಮೀ. ದೂರದಲ್ಲಿ ಮಲಗಿದ್ದ ಸ್ಥಿತಿಯಲ್ಲಿ ಅಕ್ಟೋಬರ್‌ 27ರಂದು ಮೃತದೇಹ ಪತ್ತೆಯಾಗಿತ್ತು. ಪ್ರಕರಣ ಸುತ್ತ

ಕಿರುಕುಳ ನೀಡುತ್ತಿದ್ದ ಚಿಕ್ಕಪ್ಪನ ಮಗನನ್ನು ಕೇಬಲ್‌ನಿಂದ ಕತ್ತು ಬಿಗಿದು ಕೊಂದ ಮಹಿಳೆ Read More »

ಜಾಗದ ತಕರಾರು : ಇತ್ತಂಡಗಳ ವಿರುದ್ಧ ಪ್ರಕರಣ ದಾಖಲು

ಪುತ್ತೂರು: ಜಾಗದ ವಿಚಾರಕ್ಕೆ ಸಂಬಂಧಿಸಿ ಬನ್ನೂರಿನ ಚರ್ಚ್‍ ಆಡಳಿತ ಮಂಡಳಿ ಹಾಗೂ ಖಾಸಗಿ ವ್ಯಕ್ತಿಗಳ ನಡುವೆ ನಡೆದ ಮಾತಿನ ಚಕಮಕಿ ಸಂಬಂಧ ಇತ್ತಂಡಗಳ ವಿರುದ್ಧ ನಗರ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದಾರೆ. ಚರ್ಚ್‌ ಆಡಳಿತ ಮಂಡಳಿ ಉಪಾಧ್ಯಕ್ಷ ಜೆರಾಲ್ಡ್ ಆಸ್ಟಿನ್ ಡಿಕೊಸ್ತ ಅವರು ನೀಡಿದ ದೂರಿನಂತೆ ಪ್ರಕರಣ ದಾಖಲಾಗಿದೆ. ಬನ್ನೂರು ಗ್ರಾಮದಲ್ಲಿ ಒಟ್ಟು 4 ಎಕ್ರೆ ಜಮೀನಿಗೆ ಮೌರಿಸ್ ಗೊನ್ಸಾಲ್ವಿಸ್, ವಿಕ್ಟರ್ ಗೊನ್ಸಾಲ್ವಿಸ್, ದೀಕ್ಷಿತ್, ಧೀರಜ್ ಗೊನ್ಸಾಲ್ವಿಸ್, ಬೀನಾ ಗೊನ್ಸಾಲ್ವಿಸ್‌ರವರು ಅಕ್ರಮ ಪ್ರವೇಶ ಮಾಡಿ ಜಮೀನಿನಲ್ಲಿದ್ದ ಕೃಷಿ ಹಾಗೂ

ಜಾಗದ ತಕರಾರು : ಇತ್ತಂಡಗಳ ವಿರುದ್ಧ ಪ್ರಕರಣ ದಾಖಲು Read More »

ಬಾವಿಗೆ ಹಾರಿ ಮಹಿಳೆ ಆತ್ಮಹತ್ಯೆ

ಉಪ್ಪಿನಂಗಡಿ: ಮಹಿಳೆಯೋರ್ವರು ಬಾವಿಗೆ ಹಾರಿ ಆತ್ಮಹತ್ಯೆ ಮಾಡಿಕೊಂಡ ಘಟನೆ ಕೊಣಾಲು ಗ್ರಾಮದ ಚಾಮೇತಮೂಲೆ ಎಂಬಲ್ಲಿ ನಡೆದಿದೆ. ಅಂಬೇಡ್ಕರ್ ಎಂಬವರ ಪತ್ನಿ ಸೀತಾ (47) ಎಂಬವರು  ಆತ್ಮಹತ್ಯೆ ಮಾಡಿಕೊಂಡವರು. ಕ್ಯಾನ್ಸರ್ ಪೀಡಿತರಾಗಿದ್ದ ಸೀತಾ ಅವರು ನಿರಂತರ ಚಿಕಿತ್ಸೆ ಪಡೆದರೂ ಗುಣಮುಖರಾಗದೆ ಇದ್ದ ಬಗ್ಗೆ ಮನನೊಂದು ಮನೆಯ ಬಾವಿಗೆ ಹಾರಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ಪೊಲೀಸರಿಗೆ ನೀಡಿದ ದೂರಿನಲ್ಲಿ ತಿಳಿಸಲಾಗಿದೆ. ಉಪ್ಪಿನಂಗಡಿ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದಾರೆ.

ಬಾವಿಗೆ ಹಾರಿ ಮಹಿಳೆ ಆತ್ಮಹತ್ಯೆ Read More »

ಮಹಿಳೆ ನಾಪತ್ತೆ : ಪ್ಲಾಸ್ಟಿಕ್ ಚೀಲದಲ್ಲಿ ಮೃತದೇಹ ಪತ್ತೆ

ಎರಡು ದಿನಗಳ ಹಿಂದೆ ನಾಪತ್ತೆಯಾಗಿದ್ದ ಮಹಿಳೆಯ ದೇಹದ ಭಾಗಗಳು ಪ್ಲಾಸ್ಟಿಕ್ ಚೀಲದಲ್ಲಿ ಪತ್ತೆಯಾದ ಘಟನೆ ರಾಜಸ್ಥಾನದ ಜೋದ್‌ಪುರದಲ್ಲಿ ನಡೆದಿದೆ. ಮೃತಪಟ್ಟವರು ಜೋದ್‌ಪುರದಲ್ಲಿ ಬ್ಯೂಟಿ ಪಾರ್ಲರ್ ನಡೆಸುತ್ತಿದ್ದ ಅನಿತಾ ಚೌಧರಿ (50) ಮೃತದೇಹ ಪತ್ತೆಯಾಗಿದೆ. ಅ.27 ರಂದು ಬ್ಯೂಟಿ ಪಾರ್ಲರ್ ಗೆ ಹೋಗಿದ್ದ ಅನಿತಾ ಮಧ್ಯಾಹ್ನ 2:30 ರ ಸುಮಾರಿಗೆ ಸಲೂನ್ ಬಾಗಿಲು ಹಾಕಿ ನಾಪತ್ತೆಯಾಗಿದ್ದರು. ರಾತ್ರಿಯಾದರೂ ಅನಿತಾ ಮನೆಗೆ ಬಾರದೇ ಇದ್ದುದರಿಂದ ಗಾಬರಿಗೊಂಡ ಪತಿ ಮನಮೋಹನ್‌ ಚೌಧರಿ ಪೊಲೀಸರಿಗೆ ನಾಪತ್ತೆ ದೂರು ನೀಡಿದರು. ಪ್ರಕರಣ ದಾಖಲಿಸಿಕೊಂಡ ಪೊಲೀಸರು

ಮಹಿಳೆ ನಾಪತ್ತೆ : ಪ್ಲಾಸ್ಟಿಕ್ ಚೀಲದಲ್ಲಿ ಮೃತದೇಹ ಪತ್ತೆ Read More »

ಗಾಂಜಾ ಮಾರಾಟ ಮಾಡುತ್ತಿದ್ದ ದಂಪತಿ ಬಂಧನ | ಉಳ್ಳಾಲ ಪೊಲೀಸರು ಹಾಗೂ ತಹಶೀಲ್ದಾರ್ ತಂಡದಿಂದ ಕಾರ್ಯಾಚರಣೆ

ಉಳ್ಳಾಲ: ಗಾಂಜಾ ಮಾರಾಟ ಮಾಡುತ್ತಿದ್ದ ಸಂದರ್ಭ ದಾಳಿ ನಡೆಸಿದ ಉಳ್ಳಾಲ ಪೊಲೀಸರು  ದಂಪತಿಯನ್ನು ಬಂಧಿಸಿದ್ದಾರೆ. ಉಳ್ಳಾಲ ಠಾಣಾ ವ್ಯಾಪ್ತಿಯ ಕಿನ್ಯ ಗ್ರಾಮದ ರಹ್ಮತ್ ನಗರದ ಎಲ್ಲ್ ಪಡ್ಪು ಎಂಬಲ್ಲಿ ಖಚಿತ ಮಾಹಿತಿ ಮೇರೆಗೆ ದಾಳಿ ನಡೆಸಿದ ಎಸಿಪಿ ಧನ್ಯ ನಾಯಕ್ ನೇತೃತ್ವದ ಉಳ್ಳಾಲ ಪೊಲೀಸರು ಹಾಗೂ ಉಳ್ಳಾಲ ತಹಶೀಲ್ದಾರ್ ನೇತೃತ್ವದ ತಂಡ ದಂಪತಿಯನ್ನು ಬಂಧಿಸಿದ್ದಾರೆ. ನಝೀರ್ ಹಾಗೂ ಆತನ ಪತ್ನಿ ಅಸ್ಮ ಬಂಧಿತ ದಂಪತಿ. ಕಾರಿನಲ್ಲಿ ಗಾಂಜಾ ಇಟ್ಟುಕೊಂಡು ಮಾರಾಟ ಮಾಡುತ್ತಿದ್ದರು ಎನ್ನಲಾಗಿದ್ದು, ಬಂಧಿತ ಆರೋಪಿಗಳಿಂದ 6.800ಕೆಜಿ

ಗಾಂಜಾ ಮಾರಾಟ ಮಾಡುತ್ತಿದ್ದ ದಂಪತಿ ಬಂಧನ | ಉಳ್ಳಾಲ ಪೊಲೀಸರು ಹಾಗೂ ತಹಶೀಲ್ದಾರ್ ತಂಡದಿಂದ ಕಾರ್ಯಾಚರಣೆ Read More »

ನಟ ದರ್ಶನ್‌ಗೆ ಕೊನೆಗೂ ಸಿಕ್ಕಿತು ಜಾಮೀನು

ಬೆನ್ನುನೋವಿಗೆ ಚಿಕಿತ್ಸೆ ಪಡೆದುಕೊಳ್ಳಲು ಆರು ವಾರ ಬಿಡುಗಡೆ ಭಾಗ್ಯ ಬೆಂಗಳೂರು : ರೇಣುಕಾಸ್ವಾಮಿ ಕೊಲೆ ಆರೋಪದ ಮೇಲೆ ಕಳೆದ ಸುಮಾರು ಐದು ತಿಂಗಳಿಂದ ಜೈಲಿನಲ್ಲಿರುವ ನಟ ದರ್ಶನ್​ಗೆ ಹೈಕೋರ್ಟ್ ಮಧ್ಯಂತರ ಜಾಮೀನು ಮಂಜೂರು ಮಾಡಿದೆ. ದರ್ಶನ್​ ಆರೋಗ್ಯ ಸಮಸ್ಯೆಯನ್ನು ಪರಿಗಣನೆಗೆ ತೆಗೆದುಕೊಂಡು ಆರು ವಾರಗಳ ಅವಧಿಯ ಮಧ್ಯಂತರ ಜಾಮೀನು ನೀಡಲಾಗಿದ್ದು, ಮಧ್ಯಂತರ ಜಾಮೀನಿಗೆ ಬಹಳಷ್ಟು ಷರತ್ತುಗಳನ್ನು ನ್ಯಾಯಾಲಯ ವಿಧಿಸಿದೆ. ಈ ಹಿಂದೆ ಕೆಳಹಂತದ ನ್ಯಾಯಾಲಯದಲ್ಲಿ ಸಲ್ಲಿಸಲಾಗಿದ್ದ ದರ್ಶನ್ ಜಾಮೀನು ಅರ್ಜಿ ತಿರಸ್ಕೃತಗೊಂಡಿತ್ತು. ಬಳಿಕ ದರ್ಶನ್ ಪರ ವಕೀಲರಾದ

ನಟ ದರ್ಶನ್‌ಗೆ ಕೊನೆಗೂ ಸಿಕ್ಕಿತು ಜಾಮೀನು Read More »

ಅಕ್ರಮ ಕೋಳಿ ಅಂಕಕ್ಕೆ ದಾಳಿ | ಐವರ ಬಂಧನ, ಕೋಳಿ, ನಗದು ವಶಕ್ಕೆ

ಪುತ್ತೂರು : ಅಕ್ರಮವಾಗಿ ನಡೆಯುತ್ತಿದ್ದ ಕೋಳಿ ಅಂಕಕ್ಕೆ ಪುತ್ತೂರು ಗ್ರಾಮಾಂತರ ಪೊಲೀಸರು ದಾಳಿ ನಡೆಸಿ ಘಟನೆ ಇಂದು ಬೆಳಿಗ್ಗೆ ನಡೆದಿದೆ. ಒಳಮೊಗ್ರು ಗ್ರಾಮದ ಕುಟೀನೋಪಿನಡ್ಕ ಎಂಬಲ್ಲಿನ ಗೇರುಬೀಜ ನೆಡುತೋಪು ಗುಡ್ಡದಲ್ಲಿ ಈ ಕೋಳಿ ಅಂಕ ನಡೆಯುತ್ತಿತ್ತು. ಖಚಿತ ಮಾಹಿತಿ ಹಿನ್ನಲೆಯಲ್ಲಿ  ಪುತ್ತೂರು ಗ್ರಾಮಾಂತರ ಪೊಲೀಸ್ ಠಾಣಾಧಿಕಾರಿ, ಸಿಬ್ಬಂದಿಗಳು ದಾಳಿ ನಡೆಸಿ ಸ್ಥಳದಿಂದ ಕೋಳಿ ಅಂಕಕ್ಕೆ ಬಳಸಿದ 5 ಕೋಳಿ ಮತ್ತು 7710 ರೂ. ನಗದು ವಶಕ್ಕೆ ಪಡೆದು, ಐವರನ್ನು ಬಂಧಿಸಿದ್ದಾರೆ. ಠಾಣೆಯ ಪಿ.ಎಸ್.ಐ ಜಂಬೂರಾಜ್ ಮಹಾಜನ್, ಸಿಬ್ಬಂದಿಗಳಾದ

ಅಕ್ರಮ ಕೋಳಿ ಅಂಕಕ್ಕೆ ದಾಳಿ | ಐವರ ಬಂಧನ, ಕೋಳಿ, ನಗದು ವಶಕ್ಕೆ Read More »

error: Content is protected !!
Scroll to Top