ಅಪರಾಧ

ಅಟ್ಟಿಕಾ ಗೋಲ್ಡ್ ಕಂಪನಿ ಮಾಲೀಕ ಬಂಧನ

ಬೆಂಗಳೂರು : ಅಟ್ಟಿಕಾ ಗೋಲ್ಡ್ ಕಂಪನಿ ಮಾಲೀಕ ಅಟ್ಟಿಕಾ ಬಾಬು ಅಲಿಯಾಸ್ ಬೊಮ್ಮನಹಳ್ಳಿ ಬಾಬು ಅವರನ್ನು ಪೊಲೀಸರು ಬಂಧಿಸಿದ್ದಾರೆ ಎಂದು ತಿಳಿದುಬಂದಿದೆ. ಕದ್ದ ಚಿನ್ನ ಖರೀದಿ ಪ್ರಕರಣಕ್ಕೆ ಸಂಬಂಧಿಸಿದಂತೆ ತುಮಕೂರು ಜಿಲ್ಲೆಯ ತುರುವೇಕೆರೆ ಪೊಲೀಸರು ಬುಧವಾರ ಬೊಮ್ಮನಹಳ್ಳಿ ಬಾಬು ಅವರನ್ನು ಪ್ರೇಜರ್ ಟೌನ್ ನಿವಾಸದ ಬಳಿ ಬಂಧಿಸಿದ್ದಾರೆ. ಕಳ್ಳತನ ಮಾಡಿದ ಚಿನ್ನದ ಆಭರಣಗಳನ್ನು ಖರೀದಿ ಮಾಡಿದ ಕುರಿತು ತುರುವೇಕೆರೆ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಪ್ರಕರಣ ದಾಖಲಾಗಿತ್ತು. ಹಾಗಾಗಿ, ತುರುವೇಕೆರೆ ಸಿಪಿಐ ಲೋಹಿತ್ ಬಿ.ಎನ್ ಹಾಗೂ ತಂಡದಿಂದ ಬಂಧಿಸಲಾಗಿದೆ. […]

ಅಟ್ಟಿಕಾ ಗೋಲ್ಡ್ ಕಂಪನಿ ಮಾಲೀಕ ಬಂಧನ Read More »

ವಿದ್ಯುತ್ ತಂತಿ ತಗುಲಿ ಇಬ್ಬರು ಆಟೋ ಚಾಲಕರು ಮೃತ್ಯು

ಮಂಗಳೂರು : ಮಳೆಗೆ ವಿದ್ಯುತ್ ತಂತಿ ಕಡಿದು ಬಿದ್ದ ಹಿನ್ನಲೆ ಇಬ್ಬರು ಆಟೋ ಚಾಲಕರು ಸಾವನ್ನಪ್ಪಿದ ಘಟನೆ ಮಂಗಳೂರಿನ ರೊಸಾರಿಯೂ ಶಾಲಾ ಹಿಂಭಾಗದಲ್ಲಿ ನಡೆದಿದೆ. ಉಪ್ಪಿನಂಗಡಿ ನಿವಾಸಿ ದೇವರಾಜ್ ಗೌಡ, ಹಾಸನ ಮೂಲದ ರಾಜು ಪಾಲ್ಯ ವಿದ್ಯುತ್ ಶಾಕ್‍ ನಿಂದ ಮೃತಪಟ್ಟವರು. ಮಳೆಗೆ ತುಕ್ಕು ಹಿಡಿದ ವಿದ್ಯುತ್ ತಂತಿ ಹಠಾತ್ತನೆ ತುಂಡಾಗಿ ಆಟೋ ಚಾಲಕನ ಮೇಲೆ ಬಿದ್ದಿದ್ದು, ಆತನನ್ನು ರಕ್ಷಿಸಲು ಹೋದ ಇನ್ನೊಬ್ಬ ಆಟೋ ಚಾಲಕ ಕೂಡ ವಿದ್ಯುತ್ ಸ್ಪರ್ಶಿಸಿ ಮೃತಪಟ್ಟಿದ್ದಾರೆ ಎಂದು ತಿಳಿದು ಬಂದಿದೆ. ಸ್ಥಳಕ್ಕೆ

ವಿದ್ಯುತ್ ತಂತಿ ತಗುಲಿ ಇಬ್ಬರು ಆಟೋ ಚಾಲಕರು ಮೃತ್ಯು Read More »

ಪವರ್ ಟಿ ವಿ ಪ್ರಸಾರ ಸ್ಥಗಿತ: ಹೈಕೋರ್ಟ್ ಆದೇಶ

ಬೆಂಗಳೂರು: ಕನ್ನಡ ಸುದ್ದಿ ವಾಹಿನಿ ಪವರ್ ಟಿವಿ ತಕ್ಷಣಕ್ಕೆ ತನ್ನೆಲ್ಲಾ ಕಾರ್ಯಕ್ರಮಗಳ ಪ್ರಸಾರ ನಿಲ್ಲಿಸಬೇಕೆಂದು ಕರ್ನಾಟಕ ಹೈಕೋರ್ಟ್ ಮಂಗಳವಾರ ಆದೇಶ ನೀಡಿದೆ. ಕೇಂದ್ರ ವಲಯದ ಐಜಿ ಬಿಆರ್ ರವಿಕಾಂತೇಗೌಡ, ವಿಧಾನ ಪರಿಷತ್ ಮಾಜಿ ಸದಸ್ಯ ಎಚ್ಎಂ ರಮೇಶ್ ಗೌಡ ಸಲ್ಲಿಸಿದ್ದ ಅರ್ಜಿಗಳ ವಿಚಾರಣೆ ನಡೆಸಿದ ಏಕಸದಸ್ಯ ಪೀಠ ಈ ಆದೇಶ ನೀಡಿದೆ. ಚಾನೆಲ್ ಗೆ ಪರವಾನಗಿ ನವೀಕರಿಸದ ಹಿನ್ನೆಲೆಯಲ್ಲಿ ಕನ್ನಡ ಸುದ್ದಿ ವಾಹಿನಿ ಪವರ್ ಟಿವಿ ಕೂಡಲೇ ತನ್ನೆಲ್ಲಾ ಕಾರ್ಯಕ್ರಮಗಳ ಪ್ರಸಾರ ಸ್ಥಗಿತಗೊಳಿಸಬೇಕೆಂದು ಕರ್ನಾಟಕ ಹೈಕೋರ್ಟ್, ನಿನ್ನೆ

ಪವರ್ ಟಿ ವಿ ಪ್ರಸಾರ ಸ್ಥಗಿತ: ಹೈಕೋರ್ಟ್ ಆದೇಶ Read More »

ಅಮರನಾಥ ಯಾತ್ರಿಕರಿಗೆ ಭಯೋತ್ಪಾದಕ ದಾಳಿ ಬೆದರಿಕೆ | ಜಮ್ಮು ಕಾಶ್ಮೀರದಲ್ಲಿ ಬಿಗಿ ಭದ್ರತೆ

ಜಮ್ಮು ಕಾಶ್ಮೀರ: ಜೂ. 29ರಿಂದ ಪ್ರಸಿದ್ಧ ಅಮರನಾಥ ಯಾತ್ರೆ ಪ್ರಾರಂಭವಾಗುತ್ತಿದೆ. ಈ ಹಿನ್ನೆಲೆ ಜಮ್ಮು-ಕಾಶ್ಮೀರದಲ್ಲಿ ಬಿಗಿ ಭದ್ರತೆ ಏರ್ಪಡಿಸಲಾಗಿದೆ. ಈ ಬಗ್ಗೆ ಮಾಹಿತಿ ನೀಡಿದ ಪೊಲೀಸರು, ಅಮರನಾಥ ಬೇಸ್ ಕ್ಯಾಂಪ್ ಗೂ 3 ಹಂತದ ಭದ್ರತೆ ಒದಗಿಸಲಾಗಿದ್ದು, ಜಮ್ಮು-ಶ್ರೀನಗರ ರಾಷ್ಟ್ರೀಯ ಹೆದ್ದಾರಿಯಲ್ಲಿ 260 ಡಿಗ್ರಿ ಸಿಸಿ ಕ್ಯಾಮೆರಾಗಳನ್ನು ಅಳವಡಿಸಲಾಗಿದೆ ಎಂದು ತಿಳಿಸಿದ್ದಾರೆ. ಯಾತ್ರೆ ಸಾಗುವ ಹೆದ್ದಾರಿಯ ಸುರಕ್ಷತೆ ಖಾತರಿಗಾಗಿ ವಾಹನಗಳನ್ನು ಪರಿಶೀಲಿಸಲು 60 ಕ್ಯಾಮರಾಗಳು, ಬಾಡಿ ಸ್ಕ್ಯಾನರ್ ಗಳನ್ನು ಅಳವಡಿಸಲಾಗಿದೆ. ಜೊತೆಗೆ ರಂಭಾನ್ ಜಿಲ್ಲೆಯ ಉಧಂಪುರದಿಂದ ಬನಿಹಾಲ್

ಅಮರನಾಥ ಯಾತ್ರಿಕರಿಗೆ ಭಯೋತ್ಪಾದಕ ದಾಳಿ ಬೆದರಿಕೆ | ಜಮ್ಮು ಕಾಶ್ಮೀರದಲ್ಲಿ ಬಿಗಿ ಭದ್ರತೆ Read More »

ಪಟ್ಲ ಬೆಟ್ಟದಲ್ಲಿ ಪ್ರವಾಸಿಗರ ಮೇಲೆ ಹಲ್ಲೆ | ನಾಲ್ವರು ಜೀಪು ಚಾಲಕರ ಬಂಧನ

ದಕ್ಷಿಣ ಕನ್ನಡ, ಹಾಸನ ಮತ್ತು ಕೊಡಗು ಜಿಲ್ಲೆಯ ಮಧ್ಯದಲ್ಲಿರುವ ಪ್ರಸಿದ್ದ ಪ್ರವಾಸಿ ತಾಣ ಬಿಸಿಲೆ ಘಾಟಿಯ ಪಟ್ಲ ಬೆಟ್ಟದಲ್ಲಿ ಪ್ರವಾಸಿಗರ ಮೇಲೆ ಹಲ್ಲೆ ನಡೆಸಿದ ಸ್ಥಳೀಯ ಜೀಪು ಚಾಲಕರ ಬಂಧನವಾಗಿದೆ. ಇತ್ತೀಚೆಗೆ ಪಟ್ಲಬೆಟ್ಟಕ್ಕೆ ತೆರಳಿದ ಮಂಗಳೂರಿನ ಬೈಕರ್ಸ್ ಮೇಲೆ ಸ್ಥಳೀಯ ಜೀಪು ಚಾಲಕರು ಹಲ್ಲೆ ಮಾಡಿದ್ದರು. ಇದೀಗ ನಾಲ್ವರು ಜೀಪು ಚಾಲಕರ ಬಂಧನವಾಗಿದೆ. ಹಾಸನ ಜಿಲ್ಲಾ ಕೇಂದ್ರದಿಂದ ಪಟ್ಲ ಬೆಟ್ಟ 80 ಕಿ.ಮೀ ದೂರದಲ್ಲಿದೆ. ಸುಬ್ರಹ್ಮಣ್ಯದಿಂದ 30ಕಿಮೀ ದೂರದಲ್ಲಿರುವ ಈ ಬೆಟ್ಟ ವೀಕ್ಷಣೆಗೆ ಪ್ರತಿದಿನ ಸಾವಿರಾರು ಪ್ರವಾಸಿಗರು

ಪಟ್ಲ ಬೆಟ್ಟದಲ್ಲಿ ಪ್ರವಾಸಿಗರ ಮೇಲೆ ಹಲ್ಲೆ | ನಾಲ್ವರು ಜೀಪು ಚಾಲಕರ ಬಂಧನ Read More »

ನೇಣು ಬಿಗಿದು ಯುವತಿ ವಿದ್ಯಾ ಆತ್ಮಹತ್ಯೆ

ಬೆಳ್ತಂಗಡಿ : ಯುವತಿಯೊಬ್ಬಳು ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡ ಘಟನೆ ಬೆಳ್ತಂಗಡಿ ತಾಲೂಕಿನ ಮಿತ್ತಬಾಗಿಲು ಗ್ರಾಮದ ಕುಕ್ಕಾವಿ ಸಮೀಪ ನಡೆದಿದೆ. ಕೊಳಂಬೆ ಉಮೇಶ್ ಗೌಡ ಎಂಬವರ ಪುತ್ರಿ ವಿದ್ಯಾ (22) ಆತ್ಮಹತ್ಯೆ ಮಾಡಿಕೊಂಡವರು. ಮನೆಯಲ್ಲಿ ಯಾರು ಇಲ್ಲದ ವೇಳೆ ಮನೆಯ ರೂಮಿನ ಫ್ಯಾನಿಗೆ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಮನೆಯಲ್ಲಿಯೇ ಇರುತ್ತಿದ್ದ ವಿದ್ಯಾ ಅಸೌಖ್ಯದಿಂದ ಬಳಲುತ್ತಿದ್ದರು ಎಂದು ತಿಳಿದುಬಂದಿದೆ. ಘಟನಾ ಸ್ಥಳಕ್ಕೆ ಬೆಳ್ತಂಗಡಿ ಪೊಲೀಸರು ಭೇಟಿ ನೀಡಿ ಮೃತದೇಹವನ್ನು ಬೆಳ್ತಂಗಡಿ ಸರ್ಕಾರಿ ಆಸ್ಪತ್ರೆಗೆ ಮರಣೋತ್ತರ ಪರೀಕ್ಷೆಗೆ ರವಾನಿಸಲಾಗಿದೆ.

ನೇಣು ಬಿಗಿದು ಯುವತಿ ವಿದ್ಯಾ ಆತ್ಮಹತ್ಯೆ Read More »

ಹಾಲಿಗೆ ನೀರು ಬೆರೆಸಿ ಹೆಚ್ಚುವರಿ ಹಣ ಬೇನಾಮಿ ಖಾತೆಗೆ | ಹಾಲು ಉತ್ಪಾದಕರಿಂದ ಡೈರಿ ಮುಂದೆ ಪ್ರತಿಭಟನೆ

ಚಿಕ್ಕಬಳ್ಳಾಪುರ: ಹಾಲಿಗೆ ನೀರು ಬೆರೆಸಿ ಕರ್ನಾಟಕ ಹಾಲು ಮಹಾಮಂಡಳ ಕೆಎಂಎಫ್ ಗೆ ಲಕ್ಷಾಂತರ ಹಣ ಗುಳುಂ ಮಾಡಿರುವ ಕುರಿತು ಚಿಕ್ಕಬಳ್ಳಾಪುರ ತಾಲೂಕಿನ ಅಜ್ಜವಾರ ಗ್ರಾಮದ ಹಾಲುತ್ಪಾದಕರ ಸಹಕಾರ ಸಂಘದಲ್ಲಿ ಇದೀಗ ಬಯಲಾಗಿದೆ. ಕೆಎಂಎಫ್‍ ಗೆ ಹಾಲು ಸರಬರಾಜು ಮಾಡುವ ಬಿ.ಎಂ.ಸಿ ಹಾಲಿನ ಡೈರಿಯೊಂದಲ್ಲಿ ಕೆಲಸ ಮಾಡುವ ಡೈರಿ ಗುಮಾಸ್ತ ಹಾಗೂ ಕಾರ್ಯದರ್ಶಿ ಸೇರಿಕೊಂಡು ರೈತರು ತಂದು ಕೊಡುವ ಹಾಲಿಗೆ ನೀರು ಸೇರಿಸಿ ಹೆಚ್ಚುವರಿ ಹಾಲಿನ ಲೆಕ್ಕ ತೋರಿಸಿದ್ದಾರೆ. ನಂತರ ಹೆಚ್ಚುವರಿಯಾಗಿ ಬಂದ ಹಾಲಿನ ಹಣವನ್ನು ಬೇನಾಮಿ ಅಕೌಂಟ್

ಹಾಲಿಗೆ ನೀರು ಬೆರೆಸಿ ಹೆಚ್ಚುವರಿ ಹಣ ಬೇನಾಮಿ ಖಾತೆಗೆ | ಹಾಲು ಉತ್ಪಾದಕರಿಂದ ಡೈರಿ ಮುಂದೆ ಪ್ರತಿಭಟನೆ Read More »

ರಷ್ಯಾದಲ್ಲಿ ಚರ್ಚ್, ಪ್ರಾರ್ಥನಾ ಮಂದಿರಗಳ ಮೇಲೆ ಉಗ್ರರ ಅಟ್ಟಹಾಸ : 15 ಮಂದಿ ಮೃತ್ಯು

ಮಾಸ್ಕೊ: ರಷ್ಯಾದ ಮೇಲೆ ಉಗ್ರ ದಾಳಿಯಾಗಿದೆ. ಉಗ್ರರು ಯಹೂದಿಗಳ ಪ್ರಾರ್ಥನಾ ಮಂದಿರ ಹಾಗೂ ಎರಡು ಆರ್ಥಡಾಕ್ಸ್ ಚರ್ಚ್ ಮೇಲೆ ದಾಳಿ ನಡೆಸಿದ್ದಾರೆ. ಭದ್ರತಾ ಪಡೆಗಳ ಮೇಲೂ ದಾಳಿ ನಡೆಸಿ ಹತ್ಯೆಗೈದಿದ್ದಾರೆ. ಚರ್ಚ್ ಪಾದ್ರಿಯ ಶಿರಚ್ಛೇದ ಮಾಡಿದ್ದಾರೆ. ಭೀಕರ ದಾಳಿಯಲ್ಲಿ ಪಾದ್ರಿ, ಪೊಲೀಸರು ಸೇರಿ 15ಕ್ಕೂ ಹೆಚ್ಚು ಮಂದಿ ಮೃತಪಟ್ಟಿದ್ದಾರೆ. ಹಲವರು ಗಾಯಗೊಂಡಿದ್ದಾರೆ. 40ಕ್ಕೂ ಹೆಚ್ಚು ಮಂದಿಯನ್ನು ಉಗ್ರರು ಒತ್ತೆಯಾಳಾಗಿ ಇರಿಸಿಕೊಂಡಿದ್ದಾರೆ. ಉತ್ತರ ರಷ್ಯಾದ ಕೌಕಾಸ್ ವಲಯದಲ್ಲಿ ಈ ದಾಳಿ ನಡೆದಿದೆ. ಪ್ರತಿ ದಾಳಿಯಲ್ಲಿ ನಾಲ್ವರು ಉಗ್ರರು ಹತರಾಗಿದ್ದಾರೆ.

ರಷ್ಯಾದಲ್ಲಿ ಚರ್ಚ್, ಪ್ರಾರ್ಥನಾ ಮಂದಿರಗಳ ಮೇಲೆ ಉಗ್ರರ ಅಟ್ಟಹಾಸ : 15 ಮಂದಿ ಮೃತ್ಯು Read More »

ಜಹೀರ್ ಇಕ್ಬಾಲ್ ಜತೆ ನಟಿ ಸೋನಾಕ್ಷಿ ಮದುವೆ ಫಿಕ್ಸ್ | ಲವ್ ಜಿಹಾದ್ ಆರೋಪ

ಸದ್ಯ ಇದರ ವಿರುದ್ಧ ದೊಡ್ಡ ಮಟ್ಟದಲ್ಲಿ ವಿರೋಧ ವ್ಯಕ್ತವಾಗಿ ಹಿಂದೂ ಸಂಘಟನೆಗಳು ಬಲಿಯಾಗುತ್ತಿರುವ ಹಿಂದೂ ಯುವತಿಯರ ರಕ್ಷಣೆಗೆ ಹಲವು ಪ್ರಯತ್ನಗಳನ್ನು ಮಾಡಿದರು. ಆದರೆ ಈ ಲವ್ ಜಿಹಾದ್ ಅಟ್ಟಹಾಸ ಕಮ್ಮಿಯಾಗಿಲ್ಲ. ಸೋನಾಕ್ಷಿ ಸಿನ್ಹಾ ಅವರು ಮುಸ್ಲಿಂ ವ್ಯಕ್ತಿಯನ್ನು ಮದುವೆಯಾಗುತ್ತಿರುವುದು ಲವ್ ಜಿಹಾದ್ ಎನ್ನುವು ಆರೋಪ ಕೇಳಿ ಬಂದರೂ ಇದರ ವಿರುದ್ಧ ಯಾರು ಧ್ವನಿ ಎತ್ತುತ್ತಿಲ್ಲ. ಹಾಗಾದರೆ ಈ ಸೆಲೆಬ್ರಿಟಿಗಳು, ಶ್ರೀಮಂತರ ಈ ನಡೆಯ ಬಗ್ಗೆ ಯಾರೂ ಮಾತನಾಡುತ್ತಿಲ್ಲ. ಇದು ನಿಜಕ್ಕೂ ಗಂಭೀರವಾದ ವಿಚಾರ. ಏಕೆಂದರೆ ಎಷ್ಟೋ ಜನ

ಜಹೀರ್ ಇಕ್ಬಾಲ್ ಜತೆ ನಟಿ ಸೋನಾಕ್ಷಿ ಮದುವೆ ಫಿಕ್ಸ್ | ಲವ್ ಜಿಹಾದ್ ಆರೋಪ Read More »

ಅಪ್ರಾಪ್ತ ಮಗನಿಗೆ ಬೈಕ್ ನೀಡಿದ ತಂದೆ : 25 ಸಾವಿರ ದಂಡ ವಿಧಿಸಿ ಆದೇಶ

ಶಿವಮೊಗ್ಗ : ಅಪ್ರಾಪ್ತನೊಬ್ಬ ದ್ವಿಚಕ್ರ ವಾಹನ ಚಾಲನೆ ಮಾಡಿದ್ದಕ್ಕೆ ತಂದೆಗೆ 25 ಸಾವಿರ ರೂ. ದಂಡ ವಿಧಿಸಿದ ಘಟನೆ ಶಿವಮೊಗ್ಗ ಜಿಲ್ಲೆಯ ತೀರ್ಥಹಳ್ಳಿ ತಾಲ್ಲೂಕಿನಲ್ಲಿ ನಡೆದಿದೆ. ಮಗನಿಗೆ ತಂದೆಯೇ ವಾಹನ ಚಾಲನೆ ಮಾಡಲು ಅವಕಾಶ ಮಾಡಿಕೊಟ್ಟಿದ್ದಕ್ಕೆ ತೀರ್ಥಹಳ್ಳಿ ನ್ಯಾಯಾಲಯವು ತಂದೆಗೆ 25,000 ರೂ. ದಂಡ ವಿಧಿಸಿದೆ. ದ್ವಿಚಕ್ರ ವಾಹನ ಚಾಲನೆ ಮಾಡಿದ 17 ವರ್ಷದ ಅಪ್ರಾಪ್ತ ಮೂಲತಃ ತೀರ್ಥಹಳ್ಳಿಯವನು ಎಂದು ತಿಳಿದುಬಂದಿದೆ. ತೀರ್ಥಹಳ್ಳಿ ಟೌನ್ ದೊಡ್ಮನೆ ಕೇರಿ ಬಳಿಕ ಶಿವಮೊಗ್ಗ ಸಂಚಾರ ಪೊಲೀಸರು ವಾಹನ ತಪಾಸಣೆ ಮಾಡುತ್ತಿದ್ದರು.

ಅಪ್ರಾಪ್ತ ಮಗನಿಗೆ ಬೈಕ್ ನೀಡಿದ ತಂದೆ : 25 ಸಾವಿರ ದಂಡ ವಿಧಿಸಿ ಆದೇಶ Read More »

error: Content is protected !!
Scroll to Top