ಅಪರಾಧ

ಅಸಹಜ ಲೈಂಗಿಕ ದೌರ್ಜನ್ಯ : ಸೂರಜ್ ರೇವಣ್ಣರಿಗೆ 14 ದಿನಗಳ ನ್ಯಾಯಾಂಗ ಬಂಧನ

ಬೆಂಗಳೂರು: ಅಸಹಜ ಲೈಂಗಿಕ ದೌರ್ಜನ್ಯ ಪ್ರಕರಣದಲ್ಲಿ ಜೆಡಿಎಸ್ ಪಕ್ಷದ ಎಂಎಲ್‌ಸಿ ಸೂರಜ್ ರೇವಣ್ಣರನ್ನು14 ದಿನ ನ್ಯಾಯಾಂಗ ಬಂಧನಕ್ಕೆ ನೀಡಿ 42ನೇ ಎಸಿಎಂಎಂ ಕೋರ್ಟ್‌ನ ನ್ಯಾಯಾಧೀಶರು ಆದೇಶ ನೀಡಿದ್ದಾರೆ. ಶನಿವಾರ ಸಂತ್ರಸ್ತ ನೀಡಿದ್ದ ದೂರು ಆಧರಿಸಿ ನಿನ್ನೆ ಬೆಳಿಗ್ಗೆ ಹಾಸನದ ಸೆನ್ ಠಾಣೆ ಪೊಲೀಸರು ಸೂರಜ್‌ ರನ್ನು ಬಂಧಿಸಿದ್ದರು. ಬಳಿಕ ನ್ಯಾಯಾಧೀಶರ ನಿವಾಸದಲ್ಲಿ ಜಡ್ಜ್ ಮುಂದೆ ಸೂರಜ್‌ನನ್ನು ಹಾಜರುಪಡಿಸಲಾಗಿತ್ತು. ಹಾಸನದಲ್ಲಿ ಸೂರಜ್ ರೇವಣ್ಣರ ವೈದ್ಯಕೀಯ ಪರೀಕ್ಷೆ ನಡೆಸಿದ ಬಳಿಕ ಅವರನ್ನು ಬೆಂಗಳೂರಿನ 42ನೇ ಎಸಿಎಂಎಂ ಕೋರ್ಟ್ ಮುಂದೆ ಹಾಜರು […]

ಅಸಹಜ ಲೈಂಗಿಕ ದೌರ್ಜನ್ಯ : ಸೂರಜ್ ರೇವಣ್ಣರಿಗೆ 14 ದಿನಗಳ ನ್ಯಾಯಾಂಗ ಬಂಧನ Read More »

ಅಸಹಜ ಲೈಂಗಿಕ ದೌರ್ಜನ್ಯ : ಸೂರಜ್ ರೇವಣ್ಣ ಬಂಧನ

ಹಾಸನ : ಮಾಜಿ ಸಚಿವ ಹೆಚ್.ಡಿ. ರೇವಣ್ಣ ಪುತ್ರ ಎಂಎಲ್ ಸಿ ಸೂರಜ್ ರೇವಣ್ಣ ವಿರುದ್ಧ ಲೈಂಗಿಕ ದೌರ್ಜನ್ಯ ಆರೋಪದ ಹಿನ್ನಲೆಯಲ್ಲಿ ಹಾಸನ ಸೆನ್ ಪೊಲೀಸ್ ಠಾಣೆಯ ಪೊಲೀಸರು ಸೂರಜ್ ರೇವಣ್ಣರನ್ನು ಬಂಧಿಸಿದ್ದಾರೆ. ಹಾಸನದ ಸನ್ ಪೊಲೀಸ್ ಠಾಣೆಗೆ ಕರೆತಂದಿದ್ದ ಪೊಲೀಸರು ಇಂದು ಮುಂಜಾನೆ ನಾಲ್ಕು ಗಂಟೆಯವರೆಗೂ ಸುದೀರ್ಘ ವಿಚಾರಣೆ ನಡೆಸಿದ್ದಾರೆ. ಸೂರಜ್ ರೇವಣ್ಣ ಆಪ್ತ ಶಿವಕುಮಾರ್ ನೀಡಿದ್ದ ದೂರಿನ ಅನ್ವಯ ತಾಂತ್ರಿಕ ಸಾಕ್ಷ್ಯ ಸಂಗ್ರಹಕ್ಕೆ ಪೊಲೀಸರು ಮುಂದಾಗಿದ್ದಾರೆ. ಹೀಗಾಗಿ ಯಾವುದೇ ಕ್ಷಣದಲ್ಲೂ ಸೂರಜ್ ರೇವಣ್ಣ ಬಂಧನವಾಗುವ

ಅಸಹಜ ಲೈಂಗಿಕ ದೌರ್ಜನ್ಯ : ಸೂರಜ್ ರೇವಣ್ಣ ಬಂಧನ Read More »

ಸಮುದ್ರ ಪಾಲಾದ ಯುವಕ : ಮೂರು ದಿನ ಕಳೆದರೂ ಪತ್ತೆಯಾಗದ ಸುಳಿವು

ಉಡುಪಿ : ಕುಂದಾಪುರ ತಾಲೂಕಿನ ಬೀಜಾಡಿ ಬಳಿ ಸಮುದ್ರದಲೆಯ ಅಬ್ಬರಕ್ಕೆ ಕೊಚ್ಚಿಹೋಗಿ ನಾಪತ್ತೆಯಾದ ಯುವಕನಿಗಾಗಿ ಮೂರು ದಿನಗಳಿಂದ  ಶೋಧ ಕಾರ್ಯ ಮುಂದುವರಿದಿದ್ದು, ಈವರೆಗೂ ಯಾವುದೇ ಸುಳಿವು ಪತ್ತೆಯಾಗಿಲ್ಲ. ತುಮಕೂರು ಜಿಲ್ಲೆಯ ತಿಪಟೂರು ಮೂಲದ ಯೋಗೀಶ್ (22) ಎಂಬಾತ ಸಮುದ್ರದಲ್ಲಿ ಆಟವಾಡುತ್ತಿದ್ದಾಗ ನೀರು ಪಾಲಾಗಿದ್ದನು. ಮಳೆಗಾಲದ ಸಮುದ್ರದ ಅಬ್ಬರದ ಕುರಿತು ಮಾಹಿತಿ ಇಲ್ಲದೆ ನೀರಿಗೆ ಇಳಿದಿದ್ದ ಆತ, ಸಮುದ್ರದಲ್ಲಿ ಗಾಳಿಯ ಒತ್ತಡ ಮತ್ತು ನೀರಿನ ರಭಸಕ್ಕೆ ಕೊಚ್ಚಿಹೋಗಿದ್ದನು. ಗಂಗೊಳ್ಳಿಯ ಮುಳುಗು ತಜ್ಞ ದಿನೇಶ್ ಖಾರ್ವಿ ನೇತೃತ್ವದಲ್ಲಿ ಸ್ಥಳೀಯರ ತಂಡ

ಸಮುದ್ರ ಪಾಲಾದ ಯುವಕ : ಮೂರು ದಿನ ಕಳೆದರೂ ಪತ್ತೆಯಾಗದ ಸುಳಿವು Read More »

ಗುತ್ತಿಗೆದಾರರೊಬ್ಬರ ಮನೆಗೆ ನುಗ್ಗಿದ ದರೋಡೆಕೋರರ ತಂಡ | ನಗ, ನಗದು ದರೋಡೆ

ಮಂಗಳೂರು: ಪಿಡಬ್ಲ್ಯುಡಿ ಗುತ್ತಿಗೆದಾರರೊಬ್ಬರ ಫಾರ್ಮ್ ಹೌಸ್ ಗೆ 9 ಮಂದಿಯ ದರೋಡೆಕೋರರ ತಂಡ ನುಗ್ಗಿ ದರೋಡೆಗೈದ ಘಟನೆ ಮಂಗಳೂರು ಹೊರವಲಯದ ಉಳಾಯಿಬೆಟ್ಟು ಎಂಬಲ್ಲಿ ನಡೆದಿದೆ. ಪದ್ಮನಾಭ ಕೋಟ್ಯಾನ್ ಎಂಬವರ ಫಾರ್ಮ್ ಹೌಸ್ ಗೆ ದರೋಡೆಕೋರರ ತಂಡ ನುಗ್ಗಿದ್ದು, ಪ್ಯಾಂಟ್ ಮತ್ತು ಶರ್ಟ್ ಧರಿಸಿದ್ದ 8-9 ಮಂದಿಯಿದ್ದ ತಂಡ ಶುಕ್ರವಾರ ರಾತ್ರಿ 8 ಗಂಟೆ ಸುಮಾರಿಗೆ ಮನೆಗೆ ನುಗ್ಗಿದೆ. ಮುಖಕ್ಕೆ ಮಾಸ್ಕ್ ಹಾಕಿಕೊಂಡಿದ್ದ ತಂಡದ ಸದಸ್ಯರು ಚೂರಿ ತೋರಿಸಿ ಮನೆಯವರನ್ನು ಹೆದರಿಸಿದ್ದಾರೆ. ಅಲ್ಲದೆ ಪದ್ಮನಾಭ ಕೋಟ್ಯಾನ್ ಮತ್ತವರ ಕುಟುಂಬದ

ಗುತ್ತಿಗೆದಾರರೊಬ್ಬರ ಮನೆಗೆ ನುಗ್ಗಿದ ದರೋಡೆಕೋರರ ತಂಡ | ನಗ, ನಗದು ದರೋಡೆ Read More »

ಮಂಗಳೂರು ಅಂತರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ಮತ್ತೆ ಬಾಂಬ್ ಬೆದರಿಕೆ | ಇ ಮೇಲ್ ನಲ್ಲಿ ಬೆದರಿಕೆ ಸಂದೇಶ ರವಾನೆ

ಮಂಗಳೂರು: ಅಂತಾರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ಮತ್ತೆ ಬಾಂಬ್ ಬೆದರಿಕೆ ಕರೆ ಬಂದಿದ್ದು, ತಡವಾಗಿ ಬೆಳಕಿಗೆ ಬಂದಿದೆ. ಜೂನ್18 ರಂದು ಮಧ್ಯಾಹ್ನ 12.43 ಕ್ಕೆ ವಿಮಾನ ನಿಲ್ದಾಣದ ಇಮೇಲ್ ಐಡಿಗಳಿಗೆ ಅಪರಿಚಿತರು, ಏರ್ ಪೋರ್ಟ್ ನಲ್ಲಿ ಬಾಂಬ್ ಇಟ್ಟಿದ್ದು ಕೆಲವೇ ಕ್ಷಣದಲ್ಲಿ ಸ್ಪೋಟಗೊಳ್ಳಲಿದೆ ಎನ್ನುವ ಸಂದೇಶ ಕಳಿಸಿದ್ದಾರೆ. ಈ ಬಗ್ಗೆ ವಿಮಾನ ನಿಲ್ದಾಣದ ಮುಖ್ಯ ಸೆಕ್ಯುರಿಟಿ ಅಧಿಕಾರಿ ಮೋನಿಷ್ ವಿಮಾನ ನಿಲ್ದಾಣದ ಒಳಗಡೆ ಮತ್ತು ಆವರಣದಲ್ಲಿ ತಪಾಸಣೆ ನಡೆಸಿ, ಯಾವುದೇ ತೊಂದರೆ ಇಲ್ಲವೆಂದು ಖಚಿತಪಡಿಸಿದ ಬಳಿಕ ಬಜ್ಪೆ ಠಾಣೆಗೆ

ಮಂಗಳೂರು ಅಂತರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ಮತ್ತೆ ಬಾಂಬ್ ಬೆದರಿಕೆ | ಇ ಮೇಲ್ ನಲ್ಲಿ ಬೆದರಿಕೆ ಸಂದೇಶ ರವಾನೆ Read More »

ಉಪ್ಪಿನಂಗಡಿ ಹೇಮಾವತಿ ಕೊಲೆ ಪ್ರಕರಣ | ಬಾಲಕ ರಿಮಾಂಡ್ ಹೋಮ್ ಗೆ

ಉಪ್ಪಿನಂಗಡಿ: ಸಮೀಪದ ಪೆರ್ನೆ ಗ್ರಾಮ ಬಿಳಿಯೂರಿನ ದರ್ಖಾಸು ನಿವಾಸಿ ಹೇಮಾವತಿ (37) ಎಂಬುವವರು ರವಿವಾರ ತಡ ರಾತ್ರಿ ಕೊಲೆಯಾಗಿರುವ ಪ್ರಕರಣಕ್ಕೆ ಸಂಬಂಧಿಸಿದಂತೆ ಬಂಧಿತ ಆರೋಪಿ ಅಪ್ರಾಪ್ತ ವಯಸ್ಕ ಬಾಲಕನನ್ನು ನ್ಯಾಯಾಲಯಕ್ಕೆ ಹಾಜರುಪಡಿಸಲಾಗಿದ್ದು, ನ್ಯಾಯಾಲಯವು 15 ದಿನಗಳವರೆಗೆ ರಿಮಾಂಡ್ ಹೋಮ್ ಗೆ ಕಳುಹಿಸಿದೆ. ಹೇಮಾವತಿ ಅವರ ಮನೆಯಲ್ಲಿ ಘಟನೆಯ ರಾತ್ರಿ ತಂಗಿದ್ದ ಅವರ ಅಕ್ಕನ ಮಗ, ಹತ್ತನೇ ತರಗತಿ ವಿದ್ಯಾರ್ಥಿಯಾಗಿರುವ, ಅಪ್ರಾಪ್ತ ಬಾಲಕ ಹೇಮಾವತಿ ಮಲಗಿದ್ದಲ್ಲಿಗೆ ಹೋಗಿ ದೇಹ ಸುಖ ಬಯಸಿದ್ದು, ಇದಕ್ಕೆ ಹೇಮಾವತಿಯವರು ಪ್ರತಿರೋಧ ವ್ಯಕ್ತಪಡಿಸಿದ್ದರು. ಆಗ

ಉಪ್ಪಿನಂಗಡಿ ಹೇಮಾವತಿ ಕೊಲೆ ಪ್ರಕರಣ | ಬಾಲಕ ರಿಮಾಂಡ್ ಹೋಮ್ ಗೆ Read More »

ಕಣ್ಣುಕುಕ್ಕುವ ಹೆಡ್ ಲೈಟ್ ನಿಂದ ಹೈರಾಣಾದ ವಾಹನಸವಾರರು

ಬೆಂಗಳೂರು : ಕಾರು, ಬೈಕ್ ಹಾಗೂ ಇತರ ವಾಹನಗಳಲ್ಲಿ ಕಣ್ಣುಕುಕ್ಕುವಂಥ ಎಲ್ಇಡಿ ಲೈಟ್ ಗಳನ್ನು ಅಳವಡಿಸುವುದರ ವಿರುದ್ಧ ಕಠಿಣ ಕ್ರಮಕ್ಕೆ ಸಂಚಾರ ಪೊಲೀಸರು ಮುಂದಾಗಿದ್ದಾರೆ. ಈ ರೀತಿಯ ಲೈಟ್ ಗಳನ್ನು ಅಳವಡಿಸುವುದರಿಂದ ಎದುರಿನಿಂದ ಬರುವ ವಾಹನಗಳ ಚಾಲಕರಿಗೆ ತೊಂದರೆಯಾಗುತ್ತಿದ್ದು, ಅಪಘಾತಗಳಿಗೂ ಕಾರಣವಾಗುತ್ತಿದೆ. ಹೀಗಾಗಿ ಇಂಥ ಲೈಟ್ ಗಳನ್ನು ಅಳವಡಿಸುವವರ ವಿರುದ್ಧ ಕಠಿಣ ಕ್ರಮಕ್ಕೆ ಸಂಚಾರ ಪೊಲೀಸರು ಮುಂದಾಗಿದ್ದಾರೆ. ಉಲ್ಲಂಘಿಸಿದವರು ದಂಡ ಸೇರಿದಂತೆ ಇತರ ಕಾನೂನು ಕ್ರಮಗಳನ್ನು ಎದುರಿಸಬೇಕಾಗಲಿದೆ. ಈ ಕುರಿತು ಸಂಚಾರ ಮತ್ತು ರಸ್ತೆ ಸುರಕ್ಷತೆ ವಿಭಾಗದ

ಕಣ್ಣುಕುಕ್ಕುವ ಹೆಡ್ ಲೈಟ್ ನಿಂದ ಹೈರಾಣಾದ ವಾಹನಸವಾರರು Read More »

ರೇಣುಕಾ ಸ್ವಾಮಿ ಕೊಲೆ ಪ್ರಕರಣ | ನ್ಯಾಯಾಲಯದ ಎದುರು ದರ್ಶನ್ ಹಾಗೂ ಗ್ಯಾಂಗ್ ನ್ನು ಹಾಜರುಪಡಿಸಲಿದ್ದಾರೆ ಪೊಲೀಸರು

ಬೆಂಗಳೂರು: ರೇಣುಕಾ ಸ್ವಾಮಿ ಕೊಲೆ ಕೇಸ್ ನ ಆರೋಪಿಗಳಾಗಿ ನಟ ಚಾಲೆಂಜಿಂಗ್ ಸ್ಟಾರ್ ದರ್ಶನ್, ಪವಿತ್ರಾ ಗೌಡ, ವಿನಯ್ ಸೇರಿದಂತೆ ಹಲವರನ್ನು ಬಂಧಿಸಲಾಗಿದೆ. ಪೊಲೀಸರು ವಿವಿಧ ರೀತಿಯಲ್ಲಿ ವಿಚಾರಣೆ ನಡೆಸಿದ್ದಾರೆ. ಇಂದಿಗೆ 17 ಆರೋಪಿಗಳ ಪೊಲೀಸ್ ಕಸ್ಟಡಿ ಅಂತ್ಯವಾಗಲಿದೆ. ಇಂದು ಮಧ್ಯಾಹ್ನದ ನಂತರ ಆರೋಪಿಗಳನ್ನು ಪೊಲೀಸರು ನ್ಯಾಯಾಲಯಕ್ಕೆ ಹಾಜರುಪಡಿಸಲಿದ್ದಾರೆ. ಚಿತ್ರದುರ್ಗದ ರೇಣುಕಾ ಸ್ವಾಮಿ ಹತ್ಯೆ ಆಗಿದ್ದು, ಜೂನ್ 11ರ ಮುಂಜಾನೆಯೇ ದರ್ಶನ್ ಅವರನ್ನು ಬಂಧಿಸಲಾಯಿತು. ಆ ಬಳಿಕ ಪವಿತ್ರಾ ಗೌಡ ಸೇರಿ ಹಲವರ ಬಂಧನ ಆಯಿತು. ಅನುಮಾನ

ರೇಣುಕಾ ಸ್ವಾಮಿ ಕೊಲೆ ಪ್ರಕರಣ | ನ್ಯಾಯಾಲಯದ ಎದುರು ದರ್ಶನ್ ಹಾಗೂ ಗ್ಯಾಂಗ್ ನ್ನು ಹಾಜರುಪಡಿಸಲಿದ್ದಾರೆ ಪೊಲೀಸರು Read More »

ಸಿದ್ಧರಾಮಯ್ಯ ನೇತೃತ್ವದ ಸಂಪುಟ ಸಚಿವರಿಂದ ದರ್ಶನ್ ಬಿಡಿಸುವ ಪ್ರಯತ್ನ | ಗೃಹಸಚಿವರ ಕಾಲಿಗೆ ಬೀಳಲು ಮುಂದಾದ ಸಚಿವ

ಪುತ್ತೂರು: ದರ್ಶನ್ ಪತ್ನಿ ವಿಜಯಲಕ್ಷ್ಮಿ ವಕೀಲರನ್ನು ಸಂಪರ್ಕಿಸಿ ದರ್ಶನ್‌ ಪರ ಜಾಮೀನು ಪಡೆಯಲು ಹೋರಾಡುತ್ತಿರುವ ವಿಚಾರ ಎಲ್ಲರಿಗೂ ಗೊತ್ತಿದೆ. ಆದರೆ ದರ್ಶನ್‌ ಆಪ್ತರೆನಿಸಿಕೊಂಡವರು ಏನೂ ಮಾಡುತ್ತಿಲ್ಲವೇ ಎನ್ನುವ ಪ್ರಶ್ನೆ ಹಲವರಲ್ಲಿದೆ. ಆದರೆ ಹಲವರು ಈ ಪ್ರಕರಣದಿಂದ ಅಂತರ ಕಾಯ್ದುಕೊಂಡಿದ್ದರೆ, ಆದರೆ ಆ ಒಬ್ಬ ವ್ಯಕ್ತಿ ಮಾತ್ರ ದರ್ಶನ್‌ ಪರ ಹೋರಾಡುತ್ತಿದ್ದಾರೆ ಎನ್ನುವ ಮಾಹಿತಿ ಲಭ್ಯವಾಗಿದೆ. ಕನ್ನಡ ಚಿತ್ರರಂಗದ ಖ್ಯಾತ ನಟ ದರ್ಶನ್‌ ಬಂಧನವಾಗಿ ಸಂಪೂರ್ಣ ಒಂದು ವಾರ ಕಳೆದಿದ್ದು ಕಳೆದ ಎಂಟು ದಿನಗಳಿಂದ ನಟ ಪೊಲೀಸ್‌ ಠಾಣೆಯಲ್ಲಿದ್ದಾರೆ.

ಸಿದ್ಧರಾಮಯ್ಯ ನೇತೃತ್ವದ ಸಂಪುಟ ಸಚಿವರಿಂದ ದರ್ಶನ್ ಬಿಡಿಸುವ ಪ್ರಯತ್ನ | ಗೃಹಸಚಿವರ ಕಾಲಿಗೆ ಬೀಳಲು ಮುಂದಾದ ಸಚಿವ Read More »

ಅಯೋಧ್ಯೆ ರಾಮ ಮಂದಿರದಲ್ಲಿ ಗುಂಡಿನ ದಾಳಿ | ಕರ್ತವ್ಯ ನಿರತ ಎಸ್ಎಸ್ಎಫ್ ಯೋಧ ಮೃತ್ಯು

ಅಯೋಧ್ಯೆ : ಉತ್ತರ ಪ್ರದೇಶದ ಅಯೋಧ್ಯೆಯ ರಾಮ ಮಂದಿರದ ಭದ್ರತೆಗೆ ನಿಯೋಜನೆಗೊಂಡಿದ್ದ ಎಸ್ಎಸ್ಎಫ್ ಯೋಧ ಗುಂಡಿಗೆ ಬಲಿಯಾಗಿದ್ದಾರೆ. ಬುಧವಾರ ಬೆಳಗ್ಗೆ 5.25ಕ್ಕೆ ಈ ಘಟನೆ ನಡೆದಿದ್ದು, ಗುಂಡಿಗೆ ಬಲಿಯಾದ ಯೋಧ ಅಂಬೇಡ್ಕರ್ ನಗರದ ನಿವಾಸಿ ಶತ್ರುಘ್ನ ವಿಶ್ವಕರ್ಮ(25) ಎಂದು ತಿಳಿದು ಬಂದಿದೆ. ಮಂದಿರದ ಆವರಣದಲ್ಲಿ ಗುಂಡಿನ ಸದ್ದು ಕೇಳಿದ ಸಹ ಸಿಬ್ಬಂದಿ ಅಲ್ಲಿಗೆ ಓಡಿ ಬಂದಿದ್ದಾರೆ, ಅಷ್ಟರಲ್ಲಾಗಲೆ ಯೋಧ ರಕ್ತದ ಮಡುವಿನಲ್ಲಿ ಬಿದ್ದಿದ್ದರು. ತಕ್ಷಣವೇ ಅವರನ್ನು ಆಸ್ಪತ್ರೆಗೆ ಕರೆದೊಯ್ಯಲಾಯಿತು, ಅಲ್ಲಿ ವೈದ್ಯರು ಮೃತಪಟ್ಟಿರುವುದಾಗಿ ಘೋಷಿಸಿದರು. ಯೋಧನ ಸಾವು

ಅಯೋಧ್ಯೆ ರಾಮ ಮಂದಿರದಲ್ಲಿ ಗುಂಡಿನ ದಾಳಿ | ಕರ್ತವ್ಯ ನಿರತ ಎಸ್ಎಸ್ಎಫ್ ಯೋಧ ಮೃತ್ಯು Read More »

error: Content is protected !!
Scroll to Top