ಅಪರಾಧ

ಬರ್ತ್‌ಡೇ ಪಾರ್ಟಿಯಲ್ಲಿ ಯುವಕನ ಹೊಟ್ಟೆಗೆ ಚಾಕುವಿನಿಂದ ಇರಿದು ಹತ್ಯೆ

ಬೆಳಗಾವಿ: ಸ್ನೇಹಿತನ ಬರ್ತ್‌ಡೇ ಪಾರ್ಟಿಯಲ್ಲಿ ಯುವಕನ ಹೊಟ್ಟೆಗೆ ಚಾಕುವಿನಿಂದ ಇರಿದು ಹತ್ಯೆ ಮಾಡಿರುವ ಘಟನೆ ಯರಗಟ್ಟಿ ಬೆಳಗಾವಿ ತಾಲೂಕಿನ ನುಗ್ಗಾನಟ್ಟಿ ಗ್ರಾಮದಲ್ಲಿ ನಡೆದಿದೆ. ಎಂಎಸ್‌ಡಬ್ಲ್ಯೂ ವ್ಯಾಸಂಗ ಮಾಡುತ್ತಿದ್ದ ಬಸವರಾಜ ಮುದ್ದಣ್ಣವ‌ರ್ (23) ಕೊಲೆಯಾದ ಯುವಕ. ಮಲ್ಲಿಕಾರ್ಜುನ ಎನ್ನುವ ಸ್ನೇಹಿತನ ಹುಟ್ಟುಹಬ್ಬ ಆಚರಣೆ ಹಿನ್ನೆಲೆಯಲ್ಲಿ ನುಗ್ಗಾನಟ್ಟಿ ಗ್ರಾಮದಲ್ಲಿ ನಡೆದ ಪಾರ್ಟಿಗೆ ಯುವಕ ಹೋಗಿದ್ದನು. ಆದರೆ ಬರ್ತ್‌ಡೇ ಪಾರ್ಟಿಗೆ ಆಗಮಿಸಿದ್ದ ಸ್ನೇಹಿತರ ನಡುವೆ ಗಲಾಟೆ ಆದ ವೇಳೆ ಮಾತಿಗೆ ಮಾತು ಬೆಳೆದು ಯುವಕನ ಹೊಟ್ಟೆಗೆ ಚಾಕುವಿನಿಂದ ಇರಿಯಲಾಗಿದೆ. ಇದರಿಂದ ತೀವ್ರವಾಗಿ […]

ಬರ್ತ್‌ಡೇ ಪಾರ್ಟಿಯಲ್ಲಿ ಯುವಕನ ಹೊಟ್ಟೆಗೆ ಚಾಕುವಿನಿಂದ ಇರಿದು ಹತ್ಯೆ Read More »

ಬಜರಂಗದಳ ಕಾರ್ಯಕರ್ತನಿಗೆ ಹಲ್ಲೆ | ಪ್ರಕರಣ ದಾಖಲು

ಮಂಗಳೂರು : ಬಜರಂಗದಳ ಕಾರ್ಯಕರ್ತನಿಗೆ ಹಲ್ಲೆ ನಡೆಸಿರುವ ಘಟನೆ ಕುಂಪಲ ಕೇಸರಿನಗರ ಎಂಬಲ್ಲಿ ನಡೆದ ಬಗ್ಗೆ ವರದಿಯಾಗಿದೆ. ಕುಂಪಲ ನಿವಾಸಿ ಬಜರಂಗದಳ ಕಾರ್ಯಕರ್ತ ಪ್ರವೀಣ್ ಪೂಜಾರಿ ಯಾನೆ ಪಿಟ್ರಿ (39) ಹಲ್ಲೆಗೊಳಗಾದವರು. ಸ್ಥಳೀಯ ಕೇಸರಿ ಮಿತ್ರ ವೃಂದದ ಗೌತಮ್ ಎಂಬಾತ ಹಲ್ಲೆ ನಡೆಸಿರುವುದಾಗಿ ಆರೋಪಿಸಲಾಗಿದೆ. ಚುನಾವಣೆ ಫಲಿತಾಂಶ ಪ್ರಕಟವಾಗುತ್ತಿದ್ದಂತೆ ಪಟಾಕಿ ಸಿಡಿಸಿದ ವಿಚಾರದಲ್ಲಿ ಬಜರಂಗದಳ ಹಾಗೂ ಕೇಸರಿ ಮಿತ್ರ ವೃಂದದ ಸದಸ್ಯರ ನಡುವೆ ವಾಗ್ವಾದ ನಡೆದಿತ್ತು. ಈ ಸಂಬಂಧ ನಿನ್ನ ಕೆಲಸದಿಂದ ವಾಪಸ್ಸಾಗುತ್ತಿದ್ದ ಪ್ರವೀಣ್ ಪೂಜಾರಿ ಅವರನ್ನು

ಬಜರಂಗದಳ ಕಾರ್ಯಕರ್ತನಿಗೆ ಹಲ್ಲೆ | ಪ್ರಕರಣ ದಾಖಲು Read More »

ಪಾಕ್ ಪರ ಜೈಕಾರ ಕೂಗಿದ ಯುವಕನ ಬಂಧನ

ಚಿಕ್ಕೋಡಿ : ಚಿಕ್ಕೋಡಿ ಕ್ಷೇತ್ರದಲ್ಲಿ ಕಾಂಗ್ರೆಸ್ ಗೆದ್ದ ಹಿನ್ನೆಲೆ ಸಂಭ್ರಮಾಚರಣೆಯಲ್ಲಿ ಯುವಕನೋರ್ವ ಪಾಕಿಸ್ತಾನದ ಪರ ಘೋಷಣೆ ಕೂಗಿದ್ದು, ಪಾಕಿಸ್ತಾನ ಪರ ಜೈಕಾರ ಹಾಕಿದ ಆರೋಪಿಯನ್ನು ಪೊಲೀಸರು ಬಂಧಿಸಿದ್ದಾರೆ. ಬಂದಿತ ಆರೋಪಿಯನ್ನುಜಮೀರ್ ನಾಯಿಕವಾಡಿ (25) ಎಂದು ಗುರುತಿಸಲಾಗಿದೆ. ಮಂಗಳವಾರ ಲೋಕಸಭಾ ಚುನಾವಣೆಯ ಫಲಿತಾಂಶ ಹೊರಬಿದ್ದಿದ್ದು, ಚಿಕ್ಕೋಡಿಯಲ್ಲಿ ಕಾಂಗ್ರೆಸ್ ಭರ್ಜರಿ ಜಯ ಗಳಿಸಿತ್ತು. ಈ ಹಿನ್ನೆಲೆ ಮತ ಎಣಿಕೆ ಕೇಂದ್ರದ ಹಿನ್ನೆಲೆ ಕಾಂಗ್ರೆಸ್ ಕಾರ್ಯಕರ್ತರು ಸಂಭ್ರಮಾಚರಣೆ ಮಾಡಿದ್ದಾರೆ. ಈ ವೇಳೆ ಆರೋಪಿ ಜಮೀರ್ ಪಾಕಿಸ್ತಾನ್ ಕೀ ಜೈ ಎಂದು ಘೋಷಣೆ

ಪಾಕ್ ಪರ ಜೈಕಾರ ಕೂಗಿದ ಯುವಕನ ಬಂಧನ Read More »

ಬಿಜೆಪಿ ಎಸ್. ಟಿ ಮೋರ್ಚಾ ಅಧ್ಯಕ್ಷ ರಾಜೇಶ್ ಮೇಲೆ ಹಲ್ಲೆ

ಬೆಳ್ತಂಗಡಿ: ತಾಲೂಕು ಬಿಜೆಪಿ ಎಸ್.ಟಿ. ಮೋರ್ಚಾ ಅಧ್ಯಕ್ಷ ರಾಜೇಶ್ ನಿಡ್ಡಾಜೆ (33) ಅವರ ಮೇಲೆ ತಲವಾರಿನಿಂದ ಹಲ್ಲೆ ನಡೆಸಿದ ಘಟನೆ ಮಂಗಳವಾರ ಸಂಜೆ ಕಾಯರ್ತಡ್ಕದಲ್ಲಿ  ನಡೆದಿದೆ. ಕಳೆಂಜ ಗ್ರಾಮ ಪಂಚಾಯತ್ ಮಾಜಿ ಸದಸ್ಯ ಕುಶಾಲಪ್ಪ ಗೌಡ ಕಜೆ ದಾಳಿ ನಡೆಸಿದವರು ಎಂದು ಆರೋಪಿಸಲಾಗಿದೆ. ಸಂಜೆ ತನ್ನ ಅಂಗಡಿ ಮುಚ್ಚಿ ಮನೆಗೆ ಹೊರಟಿದ್ದ ರಾಜೇಶ್ ಮೇಲೆ ದಾಳಿ ನಡೆಸಲಾಗಿದೆ. ತಕ್ಷಣ ಅವರನ್ನು ಉಜಿರೆಯ ಆಸ್ಪತ್ರೆಗೆ ಕರೆದೊಯ್ಯಲಾಗಿದ್ದು, ಅಪಾಯದಿಂದ ಪಾರಾಗಿದ್ದಾರೆ ಎಂಬ ಮಾಹಿತಿ ಲಭಿಸಿದೆ. ಬೆಳ್ತಂಗಡಿ ಸರ್ಕಲ್ ಇನ್ಸ್ಪೆಕ್ಟರ್ ವಸಂತ್

ಬಿಜೆಪಿ ಎಸ್. ಟಿ ಮೋರ್ಚಾ ಅಧ್ಯಕ್ಷ ರಾಜೇಶ್ ಮೇಲೆ ಹಲ್ಲೆ Read More »

ಪ್ರವೀಣ್ ನೆಟ್ಟಾರು ಹತ್ಯೆ ಪ್ರಕರಣ | ಮತ್ತೋರ್ವ ಆರೋಪಿ ಬಂಧನ

ಬೆಳ್ಳಾರೆ: ಬೆಳ್ಳಾರೆಯಲ್ಲಿ ನಡೆದ ಬಿಜೆಪಿ ಯುವ ಮೋರ್ಚಾ ನಾಯಕ ಪ್ರವೀಣ್ ನೆಟ್ಟಾರು ಭೀಕರ ಹತ್ಯೆಯಲ್ಲಿ ಭಾಗಿಯಾಗಿದ್ದ ಮತ್ತೋರ್ವ ಆರೋಪಿಯನ್ನು ಎನ್‌ಐಎ ಇಂದು ಬಂಧಿಸಿದೆ. ಬಂಧಿತ ಆರೋಪಿ ರಿಯಾಜ್ ಯೂಸಫ್ ಹಾರಳ್ಳಿ ಅಲಿಯಾಸ್ ರಿಯಾಜ್ ವಿದೇಶಕ್ಕೆ ಪರಾರಿಯಾಗಲು ಯತ್ನಿಸುತ್ತಿದ್ದಾಗ ಮುಂಬೈ ವಿಮಾನ ನಿಲ್ದಾಣದಲ್ಲಿ ಬಂಧಿಸಲಾಗಿದೆ ಎಂದು ತಿಳಿದುಬಂದಿದೆ. ರಿಯಾಜ್ ಬಂಧನದಿಂದ ಪ್ರಕರಣದಲ್ಲಿ ಈವರೆಗೆ ಒಟ್ಟು 19 ಜನ ಆರೋಪಿಗಳನ್ನು ಬಂಧಿಸಲಾಗಿದೆ.

ಪ್ರವೀಣ್ ನೆಟ್ಟಾರು ಹತ್ಯೆ ಪ್ರಕರಣ | ಮತ್ತೋರ್ವ ಆರೋಪಿ ಬಂಧನ Read More »

ಪ್ರಜ್ವಲ್ ರೇವಣ್ಣ ಮಾದರಿ ಲೈಂಗಿಕ ದೌರ್ಜನ್ಯ ಪ್ರಕರಣ ಪತ್ತೆ | ಪ್ರಕರಣ ದಾಖಲಾಗುತ್ತಲೇ ಆರೋಪಿ ಉದ್ಯಮಿ ಪರಾರಿ

ಉಡುಪಿ : ಪ್ರಜ್ವಲ್ ರೇವಣ್ಣ ಮಾದರಿಯ ಪ್ರಕರಣವೊಂದು ಉಡುಪಿ ಜಿಲ್ಲೆಯಲ್ಲಿ ಬೆಳಕಿಗೆ ಬಂದಿದ್ದು, ಯುವ ಉದ್ಯಮಿಯೊಬ್ಬ ತನ್ನ ಪ್ರಭಾವ ಬಳಸಿ ವಿದ್ಯಾರ್ಥಿನಿಯರ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ದೃಶ್ಯಗಳನ್ನು ಸೆರೆ ಹಿಡಿದಿದ್ದಾನೆ. ಜಿಲ್ಲೆಯ ಕುಂದಾಪುರ ತಾಲೂಕಿನ ಅಮಾವಾಸ್ಯೆಬೈಲು ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದ್ದು, ಈ ಬಗ್ಗೆ ಪೋಕ್ಷ ಪ್ರಕರಣ ದಾಖಲಾಗುತ್ತಲೇ ಆರೋಪಿ ಪರಾರಿಯಾಗಿದ್ದಾನೆ. ಉದ್ಯಮಿ ಶ್ರೇಯಸ್ ನಾಯ್ಕ (25) ಅರೋಪಿ. ಬಾಲಕಿಯೊಬ್ಬಳ ಮೇಲೆ ಒಂದು ವರ್ಷದಿಂದ ಆರೋಪಿ ನಿರಂತರ ಲೈಂಗಿಕ ದೌರ್ಜನ್ಯ ಎಸಗಿದ್ದ. ಹಾಲಾಡಿ ರಸ್ತೆ ಹೆಗ್ಗೋಡ್ಲುವಿನ

ಪ್ರಜ್ವಲ್ ರೇವಣ್ಣ ಮಾದರಿ ಲೈಂಗಿಕ ದೌರ್ಜನ್ಯ ಪ್ರಕರಣ ಪತ್ತೆ | ಪ್ರಕರಣ ದಾಖಲಾಗುತ್ತಲೇ ಆರೋಪಿ ಉದ್ಯಮಿ ಪರಾರಿ Read More »

ರೈಲು ಹಳಿಗೆ ತಲೆಕೊಟ್ಟು ಆತ್ಮಹತ್ಯೆ ಮಾಡಿಕೊಂಡ ಛತ್ತೀಸ್ ಗಢದ ಯುವಕ

ಪುತ್ತೂರು: ಯುವಕನೊಬ್ಬ ರೈಲ್ವೇ ಹಳಿಗೆ ತಲೆ ಕೊಟ್ಟು ಆತ್ಮಹತ್ಯೆ ಮಾಡಿಕೊಂಡ ಘಟನೆ ಮುರ ಎಂಬಲ್ಲಿ ನಿನ್ನೆ ಬೆಳಕಿಗೆ ಬಂದಿದ್ದು, ಛತ್ತೀಸ್‌ಗಢದ ಮನಮೋಹನದಾಸ್ (24) ಎಂದು ತಿಳಿದು ಬಂದಿದೆ. ಪ್ರೇಮ ವೈಫಲ್ಯಕ್ಕೆ ಒಳಗಾಗಿ ಮನಮೋಹನದಾಸ್ ಆತ್ಮಹತ್ಯೆ ಮಾಡಿಕೊಂಡಿರಬಹುದು ಎಂದು ಶಂಕಿಸಲಾಗಿದೆ. ಛತ್ತೀಸ್‌ಗಢದ ಯುವತಿಯನ್ನು ಪ್ರೀತಿಸುತ್ತಿದ್ದ ಎನ್ನಲಾಗಿದೆ. ಅವರಿಬ್ಬರ ಮಧ್ಯೆ ವಿರಸ ಉಂಟಾಗಿದ್ದು ಪ್ರೇಮ ವೈಫಲ್ಯದ ಹಿನ್ನೆಲೆಯಲ್ಲಿ ಪ್ರೇಯಸಿಯ ದೂರವಾಣಿಗೆ ಸಂದೇಶ ಕಳುಹಿಸಿ ತಾನು ಆತ್ಮಹತ್ಯೆ ಮಾಡಿಕೊಂಡಿದ್ದಾನೆ ಎಂದು ತಿಳಿದು ಬಂದಿದೆ. ಕಳೆದ ಒಂದು ತಿಂಗಳಿನಿಂದ ಪುತ್ತೂರಿನಲ್ಲಿ ಎಳನೀರು ಕೀಳುವ

ರೈಲು ಹಳಿಗೆ ತಲೆಕೊಟ್ಟು ಆತ್ಮಹತ್ಯೆ ಮಾಡಿಕೊಂಡ ಛತ್ತೀಸ್ ಗಢದ ಯುವಕ Read More »

ವಾಲ್ಮೀಕಿ ಅಭಿವೃದ್ಧಿ ನಿಗಮದಿಂದ ಹಣ ದುರುಪಯೋಗ | ಇಬ್ಬರು ಅಧಿಕಾರಿಗಳನ್ನು ಬಂಧಿಸಿದ ಎಸ್ಐಟಿ

ಬೆಂಗಳೂರು : ವಾಲ್ಮೀಕಿ ಅಭಿವೃದ್ಧಿ ನಿಗಮದಲ್ಲಿ ನಡೆದ ಹಗರಣ ಪ್ರಕರಣಕ್ಕೆ ಸಂಬಂಧ ಇಬ್ಬರು ಅಧಿಕಾರಿಗಳನ್ನು ವಿಶೇಷ ತನಿಖಾ ದಳ (SIT) ವಶಕ್ಕೆ ಪಡೆದುಕೊಂಡಿದೆ. ವಾಲ್ಮೀಕಿ ಅಭಿವೃದ್ಧಿ ನಿಗಮದ ವ್ಯವಸ್ಥಾಪಕ ನಿರ್ದೇಶಕ ಪದ್ಮನಾಭ, ನಿಗಮದ ಲೆಕ್ಕಾಧಿಕಾರಿ ಪರಶುರಾಮ್ ಅವರನ್ನು ಎಸ್‌ಐಟಿ ಅಧಿಕಾರಿಗಳು ವಶಕ್ಕೆ ಪಡೆದುಕೊಂಡಿದ್ದಾರೆ. ಎಸ್‌ಐಟಿ ವಶದಲ್ಲಿರುವ ಈ ಇಬ್ಬರು ಅಧಿಕಾರಿಗಳು ವಿಚಾರಣೆ ವೇಳೆ ಸಚಿವರ ಹೆಸರು ಹೇಳಿದ್ದೇ ಆದರೆ, ಬಿ. ನಾಗೇಂದ್ರ ಅವರು ರಾಜೀನಾಮೆ ನೀಡುವುದು ನಿಶ್ಚಿತವಾಗಿದೆ. ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಬಿ. ನಾಗೇಂದ್ರ ಅವರಿಗೆ “ಎಸ್‌ಐಟಿ

ವಾಲ್ಮೀಕಿ ಅಭಿವೃದ್ಧಿ ನಿಗಮದಿಂದ ಹಣ ದುರುಪಯೋಗ | ಇಬ್ಬರು ಅಧಿಕಾರಿಗಳನ್ನು ಬಂಧಿಸಿದ ಎಸ್ಐಟಿ Read More »

ಸಹೋದ್ಯೋಗಿ ಮಹಿಳೆಗೆ ಮಾನಸಿಕ, ಲೈಂಗಿಕ ಕಿರುಕುಳ | ಪ್ರಕರಣ ದಾಖಲು

ಉಡುಪಿ: ಸಹೋದ್ಯೋಗಿ ವೈದ್ಯ ಮಹಿಳೆಗೆ ಲೈಂಗಿಕ ಹಾಗೂ ಮಾನಸಿಕ ಕಿರುಕುಳ ನೀಡುತ್ತಿದ್ದಾನೆ ಎಂದು ದೂರು ನೀಡಿದ ಹಿನ್ನಲೆಯಲ್ಲಿ ಕುಂದಾಪುರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಕಳೆದ ಆರು ತಿಂಗಳಿಂದ ತನಗೆ ಹಗಲು ರಾತ್ರಿಯೆನ್ನದೇ ವೈದ್ಯಾಧಿಕಾರಿಯೊಬ್ಬ ಲೈಂಗಿಕ ಮತ್ತು ಮಾನಸಿಕ ಕಿರುಕುಳ ನೀಡುತ್ತಿದ್ದಾನೆ ಎಂದು ಕುಂದಾಪುರ ಸಾರ್ವಜನಿಕ ಆಸ್ಪತ್ರೆಯ ವೈದ್ಯಾಧಿಕಾರಿ ಡಾ, ರಾಬರ್ಟ್ ರೆಬೆಲ್ಲೋ ವಿರುದ್ಧ ಮಾನಭಂಗಕ್ಕೆ ಯತ್ನ ಆರೋಪದಡಿ ಪ್ರಕರಣ ದಾಖಲಿಸಲಾಗಿದೆ. ಕುಂದಾಪುರದ ಸರ್ಕಾರಿ ತಾಲೂಕು ಆಸ್ಪತ್ರೆಯ ವೈದ್ಯಾಧಿಕಾರಿ ಡಾ. ರಾಬರ್ಟ್ ರೆಬೆಲ್ಲೋ ವಿರುದ್ಧ ಹಿಂದಿನಿಂದಲೇ ಹಲವು ಆರೋಪಗಳಿದ್ದವು.

ಸಹೋದ್ಯೋಗಿ ಮಹಿಳೆಗೆ ಮಾನಸಿಕ, ಲೈಂಗಿಕ ಕಿರುಕುಳ | ಪ್ರಕರಣ ದಾಖಲು Read More »

ವ್ಯಕ್ತಿಗೆ ಆನ್ಲೈನ್ ವಂಚನೆ : ಪ್ರಕರಣ ದಾಖಲು

ಪುತ್ತೂರು: ಆನ್ಲೈನ್ ಮೂಲಕ ಡ್ರಮ್ ಉತ್ಪನ್ನಗಳನ್ನು ಪೂರೈಸುವುದಾಗಿ ನಂಬಿಸಿ ಹಣ ಪಡೆದುಕೊಂಡು ಕೃಷಿ ಉಪಕರಣಗಳನ್ನು ಪೂರೈಸದೆ ವಂಚಿಸಿರುವುದಾಗಿ ವ್ಯಕ್ತಿಯೋರ್ವರು ನಗರ ಪೊಲೀಸ್ ಠಾಣೆಯಲ್ಲಿ ದೂರು ಸಲ್ಲಿಸಿದ್ದಾರೆ. ನಗರದ ನರಿಮೊಗರು ನಿವಾಸಿ ಗಣೇಶ್ ಪ್ರಭು (40) ಎಂಬವರು ಈ ಕುರಿತು  ದೂರು ನೀಡಿದ್ದಾರೆ. ಪುತ್ತೂರು ತಾಲೂಕು ನರಿಮೊಗರು ಗ್ರಾಮದ ಪುರುಷರಕಟ್ಟೆ ಎಂಬಲ್ಲಿ, ಅಗ್ರೋ ಉತ್ಪನ್ನಗಳನ್ನು ಕೃಷಿಕರಿಗೆ ಮಾರಾಟ ಮಾಡುತ್ತಿದ್ದು, ಯುನಿಟಿ ಪಾಲಿ ಬ್ಯಾರೆಲ್ಸ್ ಪ್ರೈವೇಟ್ ಲಿಮಿಟೆಡ್ ಅಶೋಕ ನಗರ, ಶಿವಾಜಿ ನಗರ, ಪುಣೆ, ಮಹಾರಾಷ್ಟ್ರ ಎಂಬ ಹೆಸರಿನಿಂದ ಗಣೇಶ್

ವ್ಯಕ್ತಿಗೆ ಆನ್ಲೈನ್ ವಂಚನೆ : ಪ್ರಕರಣ ದಾಖಲು Read More »

error: Content is protected !!
Scroll to Top