ಅಪರಾಧ

ಜೋಡಿ ಕೊಲೆ ಅಪರಾಧಿಗೆ ಜೀವಾವಧಿ ಕಾರಾಗೃಹ ವಾಸ

ಮರದ ಗೆಲ್ಲು ಕಡಿಯುವ ವಿಚಾರವಾಗಿ ನೆರೆಮನೆಯ ದಂಪತಿಯನ್ನು ಸಾಯಿಸಿದ್ದ ಅಪರಾಧಿ ಮಂಗಳೂರು : ಮೂಲ್ಕಿ ತಾಲೂಕಿನ ಏಳಿಂಜೆ ಗ್ರಾಮದ ಮುತ್ತಯ್ಯಕೆರೆ ಅಗಿಂದಕಾಡು ಎಂಬಲ್ಲಿ ನಡೆದ ಜೋಡಿ ಕೊಲೆ ಪ್ರಕರಣದ ಆರೋಪಿ ಅಲ್ಫೋನ್ಸ್ ಸಲ್ದಾನ ಎಂಬಾತನಿಗೆ 2ನೇ ಹೆಚ್ಚುವರಿ ಜಿಲ್ಲಾ ಸೆಷನ್ಸ್ ನ್ಯಾಯಾಲಯದ ನ್ಯಾಯಾಧೀಶ ಜಗದೀಶ್ ಅವರು ಜೀವಾವಧಿ ಶಿಕ್ಷೆ ಹಾಗೂ 2 ಲಕ್ಷ ರೂ. ದಂಡ ವಿಧಿಸಿ ಸೋಮವಾರ ತೀರ್ಪು ನೀಡಿದ್ದಾರೆ. 2020ರ ಎಪ್ರಿಲ್ 29ರಂದು ಆರೋಪಿ ಮನೆ ಸಮೀಪದ ವಿನ್ಸಿ ಯಾನೆ ವಿನ್ಸೆಂಟ್ ಡಿಸೋಜ ಮತ್ತವರ […]

ಜೋಡಿ ಕೊಲೆ ಅಪರಾಧಿಗೆ ಜೀವಾವಧಿ ಕಾರಾಗೃಹ ವಾಸ Read More »

ಕಚೇರಿಯಲ್ಲಿ ರಾಸಲೀಲೆ : ಡಿಜಿಪಿ ರಾಮಚಂದ್ರ ರಾವ್‌ಗೆ ಕಡ್ಡಾಯ ರಜೆ ಶಿಕ್ಷೆ!

ವಿಡಿಯೋ ಬಹಿರಂಗವಾದ ಬಳಿಕ ತೀವ್ರ ಮುಜುಗರ ಅನುಭವಿಸುತ್ತಿರುವ ಗೃಹ ಇಲಾಖೆ ಬೆಂಗಳೂರು: ಕಚೇರಿಯ ಒಳಗೆ ಸಮವಸ್ತ್ರದಲ್ಲಿರುವಾಗಲೇ ಹಲವು ಮಹಿಳೆಯರ ಜೊತೆ ಅನುಚಿತವಾಗಿ ವರ್ತಿಸಿದ ವಿಡಿಯೋ ಬಹಿರಂಗವಾದ ಬೆನ್ನಿಗೆ ಡಿಜಿಪಿ ರಾಮಚಂದ್ರ ರಾವ್‌ ಅವರನ್ನು ಸರ್ಕಾರ ಕಡ್ಡಾಯ ರಜೆ ಮೇಲೆ ಕಳುಹಿಸಿದೆ. ನಟಿ ರನ್ಯಾರಾವ್ ಒಳಗೊಂಡ ವಿದೇಶದಿಂದ ಚಿನ್ನ ಕಳ್ಳ ಸಾಗಾಟ ಪ್ರಕರಣದಲ್ಲೂ ಡಿಜಿಪಿ ರಾಮಚಂದ್ರ ರಾವ್‌ ಹೆಸರು ಬಲವಾಗಿ ಕೇಳಿಬಂದಿತ್ತು. ಆಗಲೂ ಸರ್ಕಾರ ಅವರನ್ನು ಕೆಲದಿನಗಳ ಮಟ್ಟಿಗೆ ರಜೆ ಮೇಲೆ ಕಳುಹಿಸಿ ಕೈತೊಳೆದುಕೊಂಡಿತ್ತು. ನಾಗರಿಕ ಹಕ್ಕು ಜಾರಿ

ಕಚೇರಿಯಲ್ಲಿ ರಾಸಲೀಲೆ : ಡಿಜಿಪಿ ರಾಮಚಂದ್ರ ರಾವ್‌ಗೆ ಕಡ್ಡಾಯ ರಜೆ ಶಿಕ್ಷೆ! Read More »

ಪೊಲೀಸರಿಗೆ ಯಾಮಾರಿಸಿ ತಪ್ಪಿಸಿಕೊಂಡಿದ್ದ ಆರೋಪಿಯ ಬಂಧನ

ಮಂಗಳೂರು: ಸುಲಿಗೆ ಮಾಡಿದ ಪ್ರಕರಣದಲ್ಲಿ ಶಿಕ್ಷೆಗೆ ಒಳಪಟ್ಟಿದ್ದ ಬಳಿಕ ತಲೆ ಮರೆಸಿಕೊಂಡಿದ್ದ ವಾರಂಟ್ ಆರೋಪಿ ತೊಕ್ಕೊಟ್ಟು ಚಂಬುಗುಡ್ಡೆ ನಿವಾಸಿ ನವೀನ್ ಸೀಕ್ವೆರಾ ಎಂಬಾತನನ್ನು ಮಂಗಳೂರು ಪೂರ್ವ ಪೊಲೀಸರು ಬಂಧಿಸಿದ್ದಾರೆ. ಈ ಆರೋಪಿಯ ಮೇಲೆ 2011 – 2012 ರಲ್ಲಿ ಪ್ರಕರಣ ದಾಖಲಾಗಿತ್ತು. ನ್ಯಾಯಾಲಯದಲ್ಲಿ ಆರೋಪ ಸಾಬೀತಾಗಿ 2015 ರಲ್ಲಿ ಶಿಕ್ಷೆ ಪ್ರಕಟವಾಗಿತ್ತು. 3 ವರ್ಷಗಳ ಕಠಿಣ ಕಾರಾಗೃಹ ಶಿಕ್ಷೆ ಮತ್ತು 5000 ರೂ. ದಂಡವನ್ನು ವಿಧಿಸಿ ಕೋರ್ಟ್ ಆದೇಶ‌ ನೀಡಿತ್ತು. ಈ ಆದೇಶವನ್ನು ಪ್ರಶ್ನಿಸಿ ಆರೋಪಿ ಹೈಕೋರ್ಟ್‌ಗೂ

ಪೊಲೀಸರಿಗೆ ಯಾಮಾರಿಸಿ ತಪ್ಪಿಸಿಕೊಂಡಿದ್ದ ಆರೋಪಿಯ ಬಂಧನ Read More »

ಕಡಬ: ಬಾರ್‌ನಲ್ಲಿ ಹಲ್ಲೆ; ದೂರು ದಾಖಲು

ಕಡಬ : ಕಡಬ ಗ್ರಾಮದ ಬಾರ್ ಮತ್ತು ರೆಸ್ಟೋರೆಂಟ್‌ನಲ್ಲಿ ಹಲ್ಲೆ, ಜಾತಿ ನಿಂದನೆ ಮತ್ತು ಕ್ರಿಮಿನಲ್ ಬೆದರಿಕೆ ಆರೋಪದ ಮೇರೆಗೆ ಕಡಬ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಕಡಬ ತಾಲೂಕಿನ ಪಾಲ್ತಾಡು ಗ್ರಾಮದ ನಿವಾಸಿ ಜಗದೀಶ್ (28) ಜನವರಿ 16ರಂದು ರಾತ್ರಿ ಕಡಬ ಗ್ರಾಮದ ಕಲಾರದಲ್ಲಿರುವ ಸುರಭಿ ಬಾರ್ ಮತ್ತು ರೆಸ್ಟೋರೆಂಟ್‌ನಲ್ಲಿ ಊಟ ಮುಗಿಸಿ ಕ್ಯಾಶ್ ಕೌಂಟರ್ ಹತ್ತಿರ ನಿಂತಿದ್ದಾಗ ಪರಿಚಯಸ್ಥರಾದ ಅಜಯ್, ಬೇಬಿ ಮತ್ತು ಅನಿಲ್ ಎಂಬವರು ವಿನಾಕಾರಣ ಜಗಳ ಆರಂಭಿಸಿ ಜಾತಿನಿಂದನೆ ಮಾಡಿ, ಕೈಯಿಂದ

ಕಡಬ: ಬಾರ್‌ನಲ್ಲಿ ಹಲ್ಲೆ; ದೂರು ದಾಖಲು Read More »

ಉಗ್ರರ ಜೊತೆ ಭದ್ರತಾ ಪಡೆಯ ಭೀಕರ ಕಾಳಗ : 8 ಯೋಧರಿಗೆ ಗಾಯ

ಅಡಗಿ ಕುಳಿತ ಉಗ್ರರನ್ನು ಹೊರಗೆಳೆಯಲು ಕಾರ್ಯಾಚರಣೆ ಶ್ರೀನಗರ: ಜಮ್ಮು ಮತ್ತು ಕಾಶ್ಮೀರದ ಕಿಶ್ತ್ವಾರ್ ಜಿಲ್ಲೆಯ ಸಿಂಗ್‌ಪೋರಾ ಪ್ರದೇಶದಲ್ಲಿ ಭಾರತೀಯ ಸೇನಾಪಡೆ ಎನ್ಕೌಂಟರ್ ಆರಂಭಿಸಿದ್ದು, ಸ್ಥಳದಲ್ಲಿ ಭದ್ರತಾ ಪಡೆಗಳು ಹಾಗೂ ಉಗ್ರರ ನಡುವೆ ಭಾರಿ ಗುಂಡಿನ ಚಕಮಕಿ ನಡೆಯುತ್ತಿದೆ ಎಂದು ತಿಳಿದುಬಂದಿದೆ. ಸ್ಥಳದಲ್ಲಿ ಪಾಕಿಸ್ತಾನದ ಜೈಶ್-ಇ-ಮೊಹಮ್ಮದ್ ಉಗ್ರ ಸಂಘಟನೆಯ ಮೂವರು ಭಯೋತ್ಪಾದಕರು ಅಡಗಿ ಕುಳಿತಿದ್ದು, ಉಗ್ರರನ್ನು ಭದ್ರತಾ ಪಡೆಗಳು ಸುತ್ತುವರಿದು ಕಾರ್ಯಾಚರಣೆ ನಡೆಸುತ್ತಿವೆ. ಈ ನಡುವೆ ಯೋಧರ ಮೇಲೆ ಉಗ್ರರು ಗ್ರೆನೇಡ್‌ಗಳನ್ನು ಎಸೆದಿದ್ದು, ಪರಿಣಾಮ 8 ಮಂದಿ ಸೈನಿಕರು

ಉಗ್ರರ ಜೊತೆ ಭದ್ರತಾ ಪಡೆಯ ಭೀಕರ ಕಾಳಗ : 8 ಯೋಧರಿಗೆ ಗಾಯ Read More »

ಕುಮಾರಧಾರಾ ನದಿಯಲ್ಲಿ ಮುಳುಗಿ ಇಬ್ಬರು ಸಾವು

ಸ್ನೇಹಿತರೊಂದಿಗೆ ಸ್ನಾನಕ್ಕೆಂದು ಬಂದಿದ್ದಾಗ ಸಂಭವಿಸಿದ ದುರಂತ ಸುಬ್ರಹ್ಮಣ್ಯ : ಕುಮಾರಧಾರಾ ನದಿಗೆ ತೆರಳಿದ್ದ ಇಬ್ಬರು ಯುವಕರು ಮುಳುಗಿ ಸಾವನ್ನಪ್ಪಿದ ಘಟನೆ ಭಾನುವಾರ ಸಂಭವಿಸಿದೆ. ಈ ಸಂಬಂಧ ಸುಬ್ರಹ್ಮಣ್ಯ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿರುತ್ತದೆ. ಸುಳ್ಯ ಕೊಲ್ಲಮೊಗ್ರು ಗ್ರಾಮದ ಜಯರಾಮ ಎಂಬವರು ದೂರು ದಾಖಲಿಸಿರುತ್ತಾರೆ. ಜ.18 ರಂದು ಸಂಜೆ ಜಯರಾಮ ಅವರ ಸಹೋದರನ ಮಗ ಸುಜಿತ್ (28) ಮತ್ತು ಗೋಪಾಲ್ ನಾಯರ್ ಎಂಬವರ ಮಗ ಹರಿಪ್ರಸಾದ್ (39) ಎಂಬವರು ಸುಬ್ರಹ್ಮಣ್ಯದ ಕುಲ್ಕುಂದ ಎಂಬಲ್ಲಿ ನದಿ ನೀರಿನಲ್ಲಿ ಮುಳುಗಿ ಮೃತಪಟ್ಟಿರುತ್ತಾರೆ.

ಕುಮಾರಧಾರಾ ನದಿಯಲ್ಲಿ ಮುಳುಗಿ ಇಬ್ಬರು ಸಾವು Read More »

ಧರ್ಮಸ್ಥಳ ನಿಂದನೆ : ವಿಠಲ ಗೌಡಗೆ 30 ದಿನಗಳ ಸಿವಿಲ್ ಬಂಧನ

ನ್ಯಾಯಾಲಯದ ತಡೆಯಾಜ್ಞೆ ಇದ್ದರೂ ಅವಹೇಳನ ಬೆಂಗಳೂರು : ಶ್ರೀ ಕ್ಷೇತ್ರ ಧರ್ಮಸ್ಥಳ ಮತ್ತು ಧರ್ಮಾಧಿಕಾರಿ ಡಾ.ವೀರೇಂದ್ರ ಹೆಗ್ಗಡೆಯವರು ಮತ್ತು ಹೆಗ್ಗಡೆಯವರ ಕುಟುಂಬದ ವಿರುದ್ಧ ನಿಂದನೆ ಮಾಡಬಾರದು ಎಂಬ ನ್ಯಾಯಾಲಯದ ಆದೇಶವನ್ನು ಪದೇ ಪದೇ ಉಲ್ಲಂಘಿಸಿದ ಆರೋಪದಡಿಯಲ್ಲಿ ಬೆಂಗಳೂರಿನ ಸಿಟಿ ಸಿವಿಲ್ ನ್ಯಾಯಾಲಯ ಸೌಜನ್ಯ ಮಾವ ವಿಠಲ ಗೌಡ ಅವರಿಗೆ 30 ದಿನಗಳ ಸಿವಿಲ್ ಬಂಧನ ಶಿಕ್ಷೆ ವಿಧಿಸಿ ತೀರ್ಪು ನೀಡಿದೆ. ಪ್ರಕರಣದ ಆರೋಪಿಯಾಗಿರುವ ಸೌಜನ್ಯಳ ಮಾವ ವಿಠ್ಠಲ ಗೌಡಗೆ ಶ್ರೀ ಕ್ಷೇತ್ರ ಧರ್ಮಸ್ಥಳ ಮತ್ತು ಡಾ.ವೀರೇಂದ್ರ ಹೆಗ್ಗಡೆ

ಧರ್ಮಸ್ಥಳ ನಿಂದನೆ : ವಿಠಲ ಗೌಡಗೆ 30 ದಿನಗಳ ಸಿವಿಲ್ ಬಂಧನ Read More »

ಕರಿಮಣಿಗಾಗಿ ‌ವೃದ್ಧೆಯ ಕೊಲೆ: ಆರೋಪಿ ಕುಂಬಳೆ ಪೊಲೀಸರ ಅತಿಥಿ

ಕಾಸರಗೋಡು: ತನ್ನ ಆರ್ಥಿಕ ಸಮಸ್ಯೆಯನ್ನು ಪರಿಹರಿಸಿಕೊಳ್ಳಲು 72 ವರ್ಷದ ವೃದ್ಧೆಯ ಕರಿಮಣಿ ಎಗರಿಸಲು ಆಕೆಯನ್ನು ಕೊಲೆಗೈದ ಆರೋಪಿ ಕುಂಬಳೆ ಪೊಲೀಸರ ಅತಿಥಿಯಾಗಿರುವ ಘಟನೆ ನಡೆದಿದೆ. ಮೊವ್ವಾರಿನ ಅಜಿಲದಲ್ಲಿ ಒಂಟಿಯಾಗಿ ವಾಸಿಸುತ್ತಿದ್ದ ಪುಷ್ಪಲತಾ ಶೆಟ್ಟಿ ಅವರ ಕತ್ತಿನಲ್ಲಿದ್ದ ಕರಿಮಣಿ ಸರವನ್ನು ಎಗರಿಸಲು ಅದೇ ಪ್ರದೇಶದಲ್ಲಿ ಹುಲ್ಲು ಕೀಳುವ ಕೆಲಸ ಮಾಡುತ್ತಿದ್ದ ಪೆರಡಾಲ ನಿವಾಸಿ ಪರಮೇಶ್ವರ ಯಾನೆ ರಮೇಶ್ ನಾಯಕ್ (47) ಪ್ರಯತ್ನ ನಡೆಸಿದ್ದ. ಈ ವೇಳೆ ವೃದ್ಧೆ ವಿರೋಧ ವ್ಯಕ್ತಪಡಿಸಿದ್ದು, ಆ ಸಂದರ್ಭದಲ್ಲಿ ಆಕೆಯ ಕತ್ತು ಹಿಸುಕಿ ಕೊಲೆ

ಕರಿಮಣಿಗಾಗಿ ‌ವೃದ್ಧೆಯ ಕೊಲೆ: ಆರೋಪಿ ಕುಂಬಳೆ ಪೊಲೀಸರ ಅತಿಥಿ Read More »

ಮಂಗಳೂರು ಕಾರಾಗೃಹದಲ್ಲಿ ಮೊಬೈಲ್‌ಗಳು, ಸಿಮ್, ಚಾರ್ಜರ್ ಪತ್ತೆ

ಮಂಗಳೂರು: ಬೆಂಗಳೂರಿನಲ್ಲಿ ಬಂಧೀಖಾನೆ ಡಿಜಿಪಿಯಾಗಿ ಅಲೋಕ್ ‌ಕುಮಾರ್ ಅವರು ಅಧಿಕಾರ ವಹಿಸಿಕೊಂಡ ಬೆನ್ನಲ್ಲೇ ‌ಬಂಧೀಖಾನೆ ಭದ್ರತೆ ಹೆಚ್ಚಿಸಲಾಗಿದೆ. ಅವರು ಮಂಗಳೂರಿನ ಕಾರಾಗೃಹಕ್ಕೂ ‌ತೆರಳಿ ಪರಿಶೀಲನೆ ನಡೆಸಿ, ಎಚ್ಚರಿಕೆ ನೀಡಿದ್ದರು. ಇದರ ಬೆನ್ನಲ್ಲೇ ಮಂಗಳೂರು ಬಂಧೀಖಾನೆಯಲ್ಲಿ ಮೂರು ಮೊಬೈಲ್ ಫೋನ್, ಸಿಮ್ ಪತ್ತೆಯಾಗಿದೆ. ಜೈಲಧಿಕಾರಿಗಳು ಜ. 14 ರಂದು ಕಾರಾಗೃಹದಲ್ಲಿ ತಪಾಸಣೆ ನಡೆಸಿದ್ದು, ಈ ವೇಳೆ A ವಿಭಾಗದ ಮೂರನೇ ಕೊಠಡಿಯಲ್ಲಿ ಸಿಮ್ ಸಹಿತ ಮೊಬೈಲ್ ಫೋನ್, ಕೀ ಪ್ಯಾಡ್ ಫೋನ್, ಸಿನ್, ಚಾರ್ಜರ್, ಅಡಾಪ್ಟರ್, ಚಾರ್ಜರ್ ಕೇಬಲ್

ಮಂಗಳೂರು ಕಾರಾಗೃಹದಲ್ಲಿ ಮೊಬೈಲ್‌ಗಳು, ಸಿಮ್, ಚಾರ್ಜರ್ ಪತ್ತೆ Read More »

ಗೋವಾ : ಇಬ್ಬರು ಮಹಿಳೆಯರನ್ನು ಕತ್ತು ಸೀಳಿ ಕೊಂದ ರಷ್ಯಾ ಪ್ರವಾಸಿಗ

ಪಣಜಿ: ಗೋವಾದಲ್ಲಿ ರಷ್ಯಾದ ವ್ಯಕ್ತಿಯೊಬ್ಬ ತನ್ನದೇ ದೇಶದ ಇಬ್ಬರು ಮಹಿಳೆಯರನ್ನು ಕತ್ತು ಸೀಳಿ ಬರ್ಬರವಾಗಿ ಕೊಂದಿರುವ ಘಟನೆ ಸಂಭವಿಸಿದೆ. ಆರೋಪಿಯನ್ನು ಪೊಲೀಸರು ಬಂಧಿಸಿದ್ದಾರೆ. ಉತ್ತರ ಗೋವಾದ ಅರಾಂಬೋಲ್ ಮತ್ತು ಮೊರ್ಜಿಮ್ ಗ್ರಾಮದಲ್ಲಿ ವಾಸವಾಗಿದ್ದ ಎಲೆನಾ ವನೀವಾ (37) ಮತ್ತು ಎಲೆನಾ ಕಸ್ತನೋವಾ (37) ಅವರನ್ನು ಅಲೆಕ್ಸಿ ಲಿಯೊನೊವ್ ಎಂಬಾತ ಕೊಲೆಗೈದಿದ್ದಾನೆ. ಆತನನ್ನು ಬಂಧಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ. ಜನವರಿ 14 ರಂದು ಆರೋಪಿ ಮೊರ್ಜಿಮ್‌ನಲ್ಲಿ ವಾಸವಾಗಿದ್ದ ಸ್ನೇಹಿತೆ ಎಲೆನಾ ವನೀವಾ ಅವರ ಕುತ್ತಿಗೆಯನ್ನು ಸೀಳಿ ಕೊಂದಿದ್ದಾನೆ. ಜನವರಿ

ಗೋವಾ : ಇಬ್ಬರು ಮಹಿಳೆಯರನ್ನು ಕತ್ತು ಸೀಳಿ ಕೊಂದ ರಷ್ಯಾ ಪ್ರವಾಸಿಗ Read More »

error: Content is protected !!
Scroll to Top