ಅಪರಾಧ

ರೈಲು ಡಿಕ್ಕಿಯಾಗಿ ವ್ಯಕ್ತಿ ಮೃತ್ಯು !

ಪುತ್ತೂರು: ಕಬಕ ಪುತ್ತೂರು ರೈಲ್ವೇ ನಿಲ್ದಾಣ ಸಮೀಪದ ಮುರದಲ್ಲಿ ರೈಲು ಡಿಕ್ಕಿ ಹೊಡೆದು ವ್ಯಕ್ತಿಯೊಬ್ಬರು ಮೃತಪಟ್ಟ ಕುರಿತು ಇಂದು ಮುಂಜಾನೆ ಬೆಳಕಿಗೆ ಬಂದಿದೆ. ರೈಲು ಹಳಿ ದಾಟುವ ವೇಳೆ ರೈಲು ಡಿಕ್ಕಿ ಹೊಡೆದಿರಬಹುದು ಎಂದು ಶಂಕಿಸಲಾಗಿದೆ. ಸ್ಥಳಕ್ಕೆ ರೈಲ್ವೇ ಪೊಲೀಸರು ಆಗಮಿಸಿದ್ದಾರೆ.

ರೈಲು ಡಿಕ್ಕಿಯಾಗಿ ವ್ಯಕ್ತಿ ಮೃತ್ಯು ! Read More »

ರಸ್ತೆಯಲ್ಲಿ ನಮಾಜ್‍ ಪ್ರಕರಣ | ಹೇಳಿಕೆ ನೀಡಿದ ಹಿಂದೂ ಪ್ರಮುಖರ ಮೇಲಿನ ಕೇಸ್ ಹಿಂಪಡೆಯುವಂತೆ ಆಗ್ರಹ

ಪುತ್ತೂರು: ಮಂಗಳೂರಿನಲ್ಲಿ ರಸ್ತೆ ಬದಿಯಲ್ಲಿ ನಮಾಜ್ ಮಾಡಿ ಸಾರ್ವಜನಿಕರಿಗೆ ಸಮಸ್ಯೆ ಉಂಟು ಮಾಡಿದ ಕೃತ್ಯವನ್ನು ಖಂಡಿಸಿ ಹೇಳಿಕೆ ನೀಡಿರುವ ವಿಹಿಂಪ ನ ಪ್ರಮುಖರಾದ ಶರಣ್ ಪಂಪ್‍ ವೆಲ್‍ ಹಾಗೂ ಪ್ರದೀಪ್ ಸರಿಪಲ್ಲ ಅವರ ಮೇಲೆ ಎಫ್‍ ಐಆರ್ ದಾಖಲಿಸಿರುವುದು ಖಂಡನೀಯ ಎಂದು ವಿಹಿಂಪ ಗೋರಕ್ಷಾ ಪ್ರಮುಖ್ ಮುರಳೀಕೃಷ್ಣ ಹಸಂತಡ್ಕ ತಿಳಿಸಿದ್ದರು. ರಾಜ್ಯ ಸರಕಾರ ಅಲ್ಪಸಂಖ್ಯಾತರ ತುಷ್ಠೀಕರಣದ ಪರಾಕಾಷ್ಟೇಯನ್ನು ತಲುಪಿದ್ದು, ಮುಂದೆ ಹಿಂದೂ ಸಮಾಜ ತಕ್ಕ ಉತ್ತರ ನೀಡಲಿದೆ ಎಂದು ಅವರು ತಿಳಿಸಿದ್ದಾರೆ. ಕೂಡಲೇ ಹಿಂದೂ ನಾಯಕರ ಮೇಲೆ

ರಸ್ತೆಯಲ್ಲಿ ನಮಾಜ್‍ ಪ್ರಕರಣ | ಹೇಳಿಕೆ ನೀಡಿದ ಹಿಂದೂ ಪ್ರಮುಖರ ಮೇಲಿನ ಕೇಸ್ ಹಿಂಪಡೆಯುವಂತೆ ಆಗ್ರಹ Read More »

ಪೆನ್ ಡ್ರೈವ್ ಪ್ರಕರಣ : ವಿಮಾನ ಇಳಿಯುತ್ತಿದ್ದಂತೆ ಮಹಿಳಾ ಪೊಲೀಸ್ ಅಧಿಕಾರಿಗಳಿಂದ ಬಂಧನ

ಲೈಂಗಿಕ ದೌರ್ಜನ್ಯ ಕೇಸ್ ನಲ್ಲಿ ಇಷ್ಟು ದಿನ ವಿದೇಶದಲ್ಲಿ ತಲೆಮರೆಸಿಕೊಂಡಿದ್ದ ಪ್ರಜ್ವಲ್ ರೇವಣ್ಣ ಅವರನ್ನು ಜರ್ಮನಿಯಿಂದ ಬಂದು ವಿಮಾನದಿಂದ ಇಳಿಯುತ್ತಿದ್ದಂತೆಯೇ ಎಸ್ ಐಟಿ ಅಧಿಕಾರಿಗಳು ವಶಕ್ಕೆ ಪಡೆದಿದ್ದಾರೆ. ಭಾರತೀಯ ಕಾಲಮಾನದ ಪ್ರಕಾರ ನಿನ್ನೆ ಸಂಜೆ 4.05ಕ್ಕೆ ಮ್ಯೂನಿಕ್ ನಿಂದ ಹೊರಟ ಲುಫ್ತಾನ್ನಾ ಏರ್ ಲೈನ್ಸ್ ವಿಮಾನ ತಡರಾತ್ರಿ 12.50 ಕ್ಕೆ ಬೆಂಗಳೂರಿನ ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಲ್ಯಾಂಡಿಂಗ್ ಆಯ್ತು. ಪ್ರಜ್ವಲ್ ರೇವಣ್ಣ ಅರೆಸ್ಟ್ ಮಾಡಲಿಕ್ಕಾಗಿ ಏರ್ ಪೋರ್ಟ್ ನಲ್ಲಿ ಎಸ್ಐಟಿ ಅಧಿಕಾರಿಗಳ ಟೀಂ ಕಾದು ಕುಳಿತಿತ್ತು.

ಪೆನ್ ಡ್ರೈವ್ ಪ್ರಕರಣ : ವಿಮಾನ ಇಳಿಯುತ್ತಿದ್ದಂತೆ ಮಹಿಳಾ ಪೊಲೀಸ್ ಅಧಿಕಾರಿಗಳಿಂದ ಬಂಧನ Read More »

ವ್ಯಕ್ತಿಯಿಂದ ನ್ಯಾಯಾಧೀಶರ ಮೇಲೆ ಚಪ್ಪಲಿ ಎಸೆತ | ಆರೋಪಿಯನ್ನು ಪೊಲೀಸರಿಗೆ ಒಪ್ಪಿಸಿದ ನ್ಯಾಯವಾದಿಗಳು

ಇಂದೋರ್: ನ್ಯಾಯಾಧೀಶರ ಮೇಲೆ ಚಪ್ಪಲಿ ಹಾರ ಎಸೆದ ವ್ಯಕ್ತಿಯೊಬ್ಬನನ್ನು ನ್ಯಾಯವಾದಿಗಳು ಹಿಡಿದು ಹಿಗ್ಗಾಮುಗ್ಗ ಥಳಿಸಿ ಪೊಲೀಸರಿಗೆ ಒಪ್ಪಿಸಿದ ಘಟನೆ ಇಂದೋರ್ ನಲ್ಲಿ ನಡೆದಿದೆ. ಮಹಮ್ಮದ್ ನಲಿಂ ಎಂಬಾತ  ನ್ಯಾಯಾಧೀಶರ ಮೇಲೆ ಚಪ್ಪಲಿಯ ಹಾರ ಎಸೆದವನು. ಈ ಘಟನೆಯ ನಂತರ ನ್ಯಾಯಾಲಯದ ಪರಿಸರದಲ್ಲಿ ಪೊಲೀಸ್ ಬಂದೋಬಸ್ತ್ ಹೆಚ್ಚಿಸಲಾಯಿತು. ವಿಚಿತ್ರವೆಂದರೆ ಈ ನ್ಯಾಯಾಲಯದಲ್ಲಿ ಈ ಹಿಂದೆಯು ಕೂಡ ಈ ರೀತಿಯ ಘಟನೆಗಳು ನಡೆದಿದ್ದವು. ಪೊಲೀಸರು ಕೂಡಾ ಯಾಕೆ ಜಾಗರೂಕರಾಗುತ್ತಿಲ್ಲ ಎಂಬುದು ಪ್ರಶ್ನೆ ಉದ್ಭವಿಸಿದೆ. ಈ ನ್ಯಾಯಾಲಯದಲ್ಲಿ ಇಬ್ಬರು ಮೌಲ್ವಿಗಳ  ವಿರುದ್ಧದ

ವ್ಯಕ್ತಿಯಿಂದ ನ್ಯಾಯಾಧೀಶರ ಮೇಲೆ ಚಪ್ಪಲಿ ಎಸೆತ | ಆರೋಪಿಯನ್ನು ಪೊಲೀಸರಿಗೆ ಒಪ್ಪಿಸಿದ ನ್ಯಾಯವಾದಿಗಳು Read More »

ವಿದ್ಯುತ್ ಲೈನ್ ದುರಸ್ತಿ ವೇಳೆ ಕಿಡಿಗೇಡಿಯಿಂದ ಲೈನ್ ಆನ್ ಮಾಡಲು ಯತ್ನ | ಮುಚ್ಚಳಿಕೆ ಬರೆಸಿದ ಪೊಲೀಸರು.

ಪಂಜ: ವಿದ್ಯುತ್ ಲೈನ್ ದುರಸ್ತಿ ನಡೆಸುತ್ತಿದ್ದ ವೇಳೆ ಯುವಕನೊಬ್ಬ ಲೈನ್ ಆನ್ ಮಾಡಲು ಯತ್ನಿಸಿದ ಪರಿಣಾಮ ಭಾರೀ ಅನಾಹುತವೊಂದು ತಪ್ಪಿದ ಘಟನೆ ಕರಿಕ್ಕಳದಲ್ಲಿ ನಡೆದಿದೆ. ಪಂಜದ ಮೆಸ್ಕಾಂ ಇಲಾಖೆಯ ಸಿಬ್ಬಂದಿಗಳು ಕರಿಕ್ಕಳ ಸಮೀಪ ವಿದ್ಯುತ್ ಲೈನ್ ಗೆ ತಾಗುತ್ತಿದ್ದ ಮರದ ಗೆಲ್ಲನ್ನು ತೆಗೆಯಲೆಂದು ಜೆ.ಒ.ಸಿ ಆನ್ ಮಾಡಿ ಯಾರು ಆಫ್ ಮಾಡದಂತೆ ಅದನ್ನು ತಂತಿಯಲ್ಲಿ ಕಟ್ಟಿ ಕೆಲವು ಸಿಬ್ಬಂದಿಗಳು ಕೆಲಸ ಮಾಡುತ್ತಿದ್ದರು. ಇದೇ ವೇಳೆ ಅಲ್ಲಿಯೇ ಸಮೀಪದಲ್ಲಿ ರೂಮ್ ನಲ್ಲಿರುವ ರಬ್ಬರ್ ಟ್ಯಾಪರ್ ಆಗಿರುವ ರಾಜೇಶ್ ಎಂಬತ

ವಿದ್ಯುತ್ ಲೈನ್ ದುರಸ್ತಿ ವೇಳೆ ಕಿಡಿಗೇಡಿಯಿಂದ ಲೈನ್ ಆನ್ ಮಾಡಲು ಯತ್ನ | ಮುಚ್ಚಳಿಕೆ ಬರೆಸಿದ ಪೊಲೀಸರು. Read More »

ಮನೆಯಿಂದ ಹೊರ ಹೋದ ತಾಯಿ-ಮಗಳು ನಾಪತ್ತೆ

ಮಂಗಳೂರು : ಮನೆಯಿಂದ ಹೊರಗೆ ತೆರಳಿದ ತಾಯಿ ಹಾಗೂ ಮಗು ನಾಪತ್ತೆಯಾಗಿರುವ ಕುರಿತು ಪಣಂಬೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಬೈಕಂಪಾಡಿ ಮೀನಕಳಿ ನಿವಾಸಿ ಶ್ವೇತಾ (31) ಹಾಗೂ ಮಗಳು ಇಶಿಕಾ(6) ನಾಪತ್ತೆಯಾದವರು. ನಿನ್ನೆ ಮಧ್ಯಾಹ್ನ 3 ಗಂಟೆ ಹೊತ್ತಿಗೆ ತಾಯಿ ಮನೆಯಿಂದ ಗಂಡನ ಮನೆ ಕೂಳೂರಿಗೆ ಹೋಗಿ ಬರುತ್ತೇನೆ ಎಂದು ಹೇಳಿ ಹೋದ ತಾಯಿ ಮಗಳು ನಾಪತ್ತೆಯಾಗಿದ್ದಾರೆ. ಈ ಕುರಿತು ಪಣಂಬೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಯಾರಿಗಾದರೂ ತಾಯಿ ಮಗಳ ಬಗ್ಗೆ ಮಾಹಿತಿ ಸಿಕ್ಕಿದರೆ

ಮನೆಯಿಂದ ಹೊರ ಹೋದ ತಾಯಿ-ಮಗಳು ನಾಪತ್ತೆ Read More »

ಅಯೋಧ್ಯೆ ರಾಮಮಂದಿರ ಸ್ಪೋಟಿಸುವ ಬೆದರಿಕೆ ಹಾಕಿದ ಇಬ್ಬರ ಬಂಧನ

ಲಕ್ನೋ: ಅಯೋಧ್ಯೆಯ ರಾಮಮಂದಿರವನ್ನು ಸ್ಫೋಟಿಸುವುದಾಗಿ ಬೆದರಿಕೆ ಹಾಕಿದ 14 ವರ್ಷದ ಬಾಲಕ ಹಾಗೂ ಆತನ ಅಜ್ಜಿಯನ್ನು ಪೊಲೀಸರು ವಶಕ್ಕೆ ಪಡೆದುಕೊಂಡು ವಿಚಾರಣೆ ನಡೆಸುತ್ತಿದ್ದಾರೆ. ಬಾಲಕ ಮಂಗಳವಾರ ರಾತ್ರಿ ಪೊಲೀಸ್ ಕಂಟ್ರೋಲ್ ರೂಮ್‌ನ ತುರ್ತು ಸಹಾಯವಾಣಿ 112ಕ್ಕೆ ಕರೆಮಾಡಿ, ಮಂದಿರವನ್ನು ಬಾಂಬ್‌ನಿಂದ ಸ್ಫೋಟಿಸುವುದಾಗಿ ಬೆದರಿಕೆ ಹಾಕಿದ್ದಾನೆ. ಬಳಿಕ ಪೊಲೀಸರು ಸೈಬರ್ ಸೆಲ್ ಸಹಾಯದಿಂದ ಆರೋಪಿಗಳಿರುವ ಸ್ಥಳವನ್ನು ಪತ್ತೆಹಚ್ಚಿದ್ದಾರೆ. ಇದೀಗ ಆರೋಪಿ ಬಾಲಕ ಹಾಗೂ ಆತನ ಅಜ್ಜಿಯನ್ನು ವಶಕ್ಕೆ ಪಡೆದು ವಿಚಾರಣೆ ನಡೆಸುತ್ತಿದ್ದಾರೆ. ಬಾಲಕ ಬುದ್ದಿಮಾಂದ್ಯತೆಯಿಂದ ಬಳಲುತ್ತಿದ್ದು, ಚಿಕಿತ್ಸೆ ಪಡೆಯುತ್ತಿದ್ದಾನೆ

ಅಯೋಧ್ಯೆ ರಾಮಮಂದಿರ ಸ್ಪೋಟಿಸುವ ಬೆದರಿಕೆ ಹಾಕಿದ ಇಬ್ಬರ ಬಂಧನ Read More »

ನೇಣು ಬಿಗಿದ ಸ್ಥಿತಿಯಲ್ಲಿ ವ್ಯಕ್ತಿಯ ಮೃತದೇಹ ಪತ್ತೆ !

ನೆಲ್ಯಾಡಿ: ನೇಣುಬಿಗಿದ ಸ್ಥಿತಿಯಲ್ಲಿ ವ್ಯಕ್ತಯೊಬ್ಬರ ಮೃತದೇಹ ಕೊಕ್ಕಡ ಗ್ರಾಮದ ಹಿತ್ತಿಲು ಸಮೀಪದ ಗೇರು ಗುಡ್ಡೆಯಲ್ಲಿ ಪತ್ತೆಯಾದ ಘಟನೆ ನಡೆದಿದೆ. ಮೃತರು ಬೆಂಗಳೂರಿನಿಂದ-ಹಾಸನ, ಹಾಸನದಿಂದ-ಕೊಕ್ಕಡಕ್ಕೆ ಮೇ.24ರಂದು ಬಸ್ಸಿನಲ್ಲಿ ಪ್ರಯಾಣಿಸಿರುವ ಟಿಕೆಟ್ ಹಾಗೂ ಬ್ಯಾಂಕ್ ಎಟಿಎಂ ಕಾರ್ಡ್ ದೊರೆತಿದ್ದು ಅದರಲ್ಲಿ ನಿಂಗಣ್ಣ ಎಂದು ಹೆಸರು ನಮೂದಿಸಲಾಗಿದೆ. ಸ್ಥಳಕ್ಕೆ ಧರ್ಮಸ್ಥಳ ಪೊಲೀಸ್ ಠಾಣೆಯ ಸಬ್‌ಇನ್ಸ್‌ಪೆಕ್ಟ‌ರ್ ಸಮರ್ಥ ಗಾಣಿಗ ಮತ್ತು ಸಿಬ್ಬಂದಿಗಳು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಬಳಿಕ ಅರಸಿನಮಕ್ಕಿ ಹಾಗೂ ಶಿಶಿಲ ಶೌರ್ಯ ಘಟಕದ ತಂಡದ ಸದಸ್ಯರ ಸಹಕಾರದಿಂದ ಮೃತದೇಹವನ್ನು ಮರಣೋತ್ತರ

ನೇಣು ಬಿಗಿದ ಸ್ಥಿತಿಯಲ್ಲಿ ವ್ಯಕ್ತಿಯ ಮೃತದೇಹ ಪತ್ತೆ ! Read More »

ಮಂಗಳೂರಿನ ನಡುರಸ್ತೆಯಲ್ಲಿ ನಮಾಜ್ : ಪ್ರಕರಣ ದಾಖಲು

ಮಂಗಳೂರು : ಕಂಕನಾಡಿಯ ಮಸೀದಿ ಪಕ್ಕದ ರಸ್ತೆಯಲ್ಲಿ ನಮಾಜ್ ಮಾಡಿರುವ ವಿಡಿಯೋ ವೈರಲ್ ಆಗುತ್ತಿದ್ದಂತೆ ಇದೀಗ ರಸ್ತೆಯಲ್ಲಿ ನಮಾಜ್ ಮಾಡಿದವರ ವಿರುದ್ಧ ಕದ್ರಿ ಪೊಲೀಸರು ಎಫ್ಐಆರ್‌ ದಾಖಲಿಸಿದ್ದಾರೆ. ಮೇ 24 ರಂದು ಕಂಕನಾಡಿಯ ಮಸೀದಿ ಎದುರು ಕೆಲವು ಯುವಕರು ರಸ್ತೆಯನ್ನು ಬ್ಲಾಕ್ ಮಾಡಿ ನಮಾಜ್ ಮಾಡಿದ್ದರು. ಹಿಂದೂಪರ ಸಂಘಟನೆಗಳ ಆಕ್ರೋಶಕ್ಕೆ ಕಾರಣವಾಗಿತ್ತು. ಕಲಂ 341, 283, 143 ಜೊತೆಗೆ 149 ಐ.ಪಿ.ಸಿಯಂತೆ ಕದ್ರಿ ಪೊಲೀಸರು ಸುಮೊಟೊ ಪ್ರಕರಣ ದಾಖಲು ಮಾಡಿಕೊಂಡಿದ್ದಾರೆ. ಅಪರಿಚಿತ ವ್ಯಕ್ತಿಗಳ ಮೇಲೆ ಮಂಗಳೂರಿನ ಕದ್ರಿ

ಮಂಗಳೂರಿನ ನಡುರಸ್ತೆಯಲ್ಲಿ ನಮಾಜ್ : ಪ್ರಕರಣ ದಾಖಲು Read More »

ಅರ್ಜುನ ಆನೆ ಸಮಾಧಿ ಸ್ಥಳಕ್ಕೆ ಅಕ್ರಮ ಪ್ರವೇಶ ಮಾಡಿದ ದರ್ಶನ್ ಅಭಿಮಾನಿ : ಪ್ರಕರಣ ದಾಖಲು

ಹಾಸನ: ಕೆಲದಿನಗಳ ಹಿಂದೆ ಕಾಡಾನೆ ಸೆರೆ ವೇಳೆ ದುರಂತ ಸಾವಿಗೀಡಾಗಿದ್ದ ದಸರಾ ಆನೆ ಅರ್ಜುನನ ಸಮಾಧಿ ಸ್ಥಳಕ್ಕೆ ಅಕ್ರಮ ಪ್ರವೇಶ ಮಾಡಿದ ಆರೋಪಕ್ಕೆ ಸಂಬಂಧಿಸಿದಂತೆ ನಟ ದರ್ಶನ್ ಅಭಿಮಾನಿ ವಿರುದ್ಧ ಪ್ರಕರಣ ದಾಖಲಿಸಿದೆ. ಅರಣ್ಯ ಕಾಯಿದೆ 1963 ಮತ್ತು 1969 ರ ಅಡಿಯಲ್ಲಿ ನಟ ದರ್ಶನ್ ಅಭಿಮಾನಿ ಎಂದು ಹೇಳಿಕೊಂಡಿರುವ ಹೆಚ್.ಡಿ.ಕೋಟೆ ನಿವಾಸಿ ನವೀನ್ ವಿರುದ್ಧ ಯಸಳೂರು ವಲಯ ಅರಣ್ಯಾಧಿಕಾರಿಗಳು ಮಂಗಳವಾರ ಎಫ್‌ಐಆರ್ ದಾಖಲಿಸಿದ್ದಾರೆ. ಸಕಲೇಶಪುರ ತಾಲೂಕಿನ ದಬ್ಬೆಕಟ್ಟೆ ಮೀಸಲು ಅರಣ್ಯದಲ್ಲಿ ಇತ್ತೀಚೆಗೆ ದರ್ಶನ್ ಅಭಿಮಾನಿಗಳು ಎಂದು

ಅರ್ಜುನ ಆನೆ ಸಮಾಧಿ ಸ್ಥಳಕ್ಕೆ ಅಕ್ರಮ ಪ್ರವೇಶ ಮಾಡಿದ ದರ್ಶನ್ ಅಭಿಮಾನಿ : ಪ್ರಕರಣ ದಾಖಲು Read More »

error: Content is protected !!
Scroll to Top