ಎಡನೀರು ಸ್ವಾಮೀಜಿ ಶ್ರೀ ಸಚ್ಚಿದಾನಂದ ಭಾರತೀಯವರ ಕಾರಿಗೆ ಹಾನಿ | ಮತಾಂಧ ದುಷ್ಕರ್ಮಿಗಳನ್ನು ಬಂಧಿಸಿ ಸೂಕ್ತ ಕ್ರಮ ಕೈಗೊಳ್ಳಬೇಕು : ಸಂಜೀವ ಮಠಂದೂರು
ಪುತ್ತೂರು: ಎಡನೀರು ಮಠದ ಸ್ವಾಮೀಜಿ ಶ್ರೀ ಸಚ್ಚಿದಾನಂದ ಭಾರತೀಯವರು ಭಾನುವಾರ ಬೋವಿಕಾನ ಬಾವಿಕೆರೆ ಎಂಬಲ್ಲಿ ವಾಹನದಲ್ಲಿ ಸಂಚರಿಸುತ್ತಿದ್ದ ಸಂದರ್ಭದಲ್ಲಿ ಕೆಲವು ಮತಾಂಧ ಕಿಡಿಗೇಡಿಗಳು ಸ್ವಾಮೀಜಿಯವರು ಹೋಗುತ್ತಿದ್ದ ವಾಹನವನ್ನು ಅಡ್ಡಗಟ್ಟಿ ನಿಲ್ಲಿಸಿ ಬಾವಿಕೆರೆ ಎಂಬಲ್ಲಿ ದೊಣ್ಣೆಯಿಂದ ಕಾರಿನ ಗಾಜನ್ನು ಹೊಡೆದು ಹಾನಿಗೊಳಿಸಿದರೆಂದು ತಿಳಿದು ಬಂದಿದ್ದು, ಈ ಘಟನೆಯಲ್ಲಿ ಭಾಗಿಯಾದ ಮತಾಂಧ ದುಷ್ಕರ್ಮಿಗಳನ್ನು ತಕ್ಷಣ ಬಂಧಿಸಿ, ಕೇರಳ ಸರಕಾರ ಹಾಗೂ ಪೊಲೀಸ್ ಇಲಾಖೆ ಸೂಕ್ತ ರಕ್ಷಣೆ ನೀಡಬೇಕು ಎಂದು ಮಾಜಿ ಶಾಸಕ ಸಂಜೀವ ಮಠಂದೂರು ಆಗ್ರಹಿಸಿದ್ದಾರೆ. ಪತ್ರಿಕಾ ಹೇಳಿಕೆ ನೀಡಿರುವ […]










