ಅಪರಾಧ

ಅರುಣ್ ಕುಮಾರ್ ಪುತ್ತಿಲರ ಮೇಲೆ ಲೈಂಗಿಕ ದೌರ್ಜನ್ಯದ ಜತೆಗೆ ಇದೀಗ ಅತ್ಯಾಚಾರ ಪ್ರಕರಣ ದಾಖಲು | ಪ್ರಕರಣವನ್ನು ಬೆಂಗಳೂರು ಸಿಟಿ ಸಿವಿಲ್ ನ್ಯಾಯಾಲಯಕ್ಕೆ ವರ್ಗಾಯಿಸುವಂತೆ ಪೊಲೀಸರಿಂದ ಪುತ್ತೂರು ನ್ಯಾಯಾಲಯಕ್ಕೆ, ಅರ್ಜಿ

ಪುತ್ತೂರು: ಮಹಿಳೆಯೋರ್ವರ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಪ್ರಕರಣ ದಾಖಲಾಗಿದ್ದು, ಪ್ರಕರಣದಲ್ಲಿ ಅರುಣ್ ಕುಮಾರ್ ಪುತ್ತಿಲ ವಿರುದ್ಧ ಪ್ರಕರಣ ದಾಖಲಾಗಿದ್ದು ಜಾಮೀನು ಪಡೆದುಕೊಂಡಿದ್ದಾರೆ. ಇದೀಗ ಈ ಪ್ರಕರಣದೊಂದಿಗೆ  ಅತ್ಯಾಚಾರ ಪ್ರಕರಣವೂ ದಾಖಲಾಗಿದೆ. ಸಂತ್ರಸ್ತ ಮಹಿಳೆ ನ್ಯಾಯಾಧೀಶರೆದುರು 164ರಡಿ ಹೇಳಿಕೆ ನೀಡಿದ ಬಳಿಕದ ಬೆಳವಣಿಗೆಯಲ್ಲಿ ಅತ್ಯಾಚಾರ ಆರೋಪವನ್ನೂ ಸೇರಿಸಲಾಗಿದೆ ಮಾತ್ರವಲ್ಲದೆ, ಘಟನೆ ಬೆಂಗಳೂರುನಲ್ಲಿ ನಡೆದಿರುವುದರಿಂದ ಪ್ರಕರಣವನ್ನು ಬೆಂಗಳೂರು ಸಿಟಿ ಸಿವಿಲ್ ನ್ಯಾಯಾಲಯಕ್ಕೆ ವರ್ಗಾಯಿಸುವಂತೆ ಪೊಲೀಸರು ಪುತ್ತೂರು ನ್ಯಾಯಾಲಯಕ್ಕೆ, ಅರ್ಜಿ ಸಲ್ಲಿಸಿದ್ದಾರೆ. ಪುತ್ತಿಲ ಅವರ ಹಿಂದುತ್ವದ ಪ್ರತಿಪಾದನೆ ಮತ್ತು ಪ್ರಖ್ಯಾತಿಯನ್ನು […]

ಅರುಣ್ ಕುಮಾರ್ ಪುತ್ತಿಲರ ಮೇಲೆ ಲೈಂಗಿಕ ದೌರ್ಜನ್ಯದ ಜತೆಗೆ ಇದೀಗ ಅತ್ಯಾಚಾರ ಪ್ರಕರಣ ದಾಖಲು | ಪ್ರಕರಣವನ್ನು ಬೆಂಗಳೂರು ಸಿಟಿ ಸಿವಿಲ್ ನ್ಯಾಯಾಲಯಕ್ಕೆ ವರ್ಗಾಯಿಸುವಂತೆ ಪೊಲೀಸರಿಂದ ಪುತ್ತೂರು ನ್ಯಾಯಾಲಯಕ್ಕೆ, ಅರ್ಜಿ Read More »

ಸುರತ್ಕಲ್‌ : ಚಲಿಸುತ್ತಿರುವಾಗಲೇ ಬೆಂಕಿಗಾಹುತಿಯಾದ ಬಿಎಂಡಬ್ಲ್ಯು ಕಾರು

ಮಂಗಳೂರು : ಮಂಗಳೂರು-ಉಡುಪಿ ರಾಷ್ಟ್ರಿಯ ಹೆದ್ದಾರಿಯಲ್ಲಿ ಸುರತ್ಕಲ್ ಎನ್‌ಐಟಿಕೆ ಹಳೆ ಟೋಲ್‌ಗೇಟ್ ಬಳಿ ಇಂದು ಬೆಳಗ್ಗೆ ಚಲಿಸುತ್ತಿದ್ದ ಬಿಎಂಡಬ್ಲ್ಯು ಕಾರೊಂದು ಬೆಂಕಿ ಹತ್ತಿಕೊಂಡು ಸಂಪೂರ್ಣ ಸುಟ್ಟು ಕರಕಲಾಗಿದೆ. ಕಾರು ಉಡುಪಿ ಕಡೆಯಿಂದ ಮಂಗಳೂರು ಕಡೆಗೆ ತೆರಳುತ್ತಿದ್ದಾಗ ಟನ್‌ಐಟಿಕೆ ಟೋಲ್‌ಗೇಟ್‌ ಸಮೀಪಿಸುತ್ತಿರುವಾಗ ಬೆಂಕಿ ಹತ್ತಿಕೊಂಡಿದೆ. ಬೆಂಕಿ ಅವಘಡದಲ್ಲಿ ಸಾವುನೋವು ಸಂಭವಿಸಿಲ್ಲ. ಚಾಲಕ ಪಾರಾಗಿದ್ದಾರೆ. ಮಂಗಳೂರು ಉತ್ತರ ಸಂಚಾರ ಪೊಲೀಸರು, ಸುರತ್ಕಲ್ ಠಾಣೆಯ ಪೊಲಿಸರು ಸ್ಥಳಕ್ಕೆ ದೌಡಾಯಿಸಿದ್ದಾರೆ. ಅಗ್ನಿಶಾಮಕ ದಳಕ್ಕೆ ಸಾರ್ವಜನಿಕರು ಮಾಹಿತಿ ನೀಡಿದ ಬಳಿಕ ಬಂದು ಬೆಂಕಿ ನಂದಿಸಿದ್ದಾರೆ.

ಸುರತ್ಕಲ್‌ : ಚಲಿಸುತ್ತಿರುವಾಗಲೇ ಬೆಂಕಿಗಾಹುತಿಯಾದ ಬಿಎಂಡಬ್ಲ್ಯು ಕಾರು Read More »

ಕಡಬ ಸರಕಾರಿ ಕಾಲೇಜಿನ ವಿದ್ಯಾರ್ಥಿನಿಯರ ಮೇಲೆ ಆ್ಯಸಿಡ್ ದಾಳಿ | ಆರೋಪಿಯ ಜಾಮೀನು ಅರ್ಜಿ ವಜಾಗೊಳಿಸಿದ ನ್ಯಾಯಾಧೀಶರು

ಕಡಬ: ಕಡಬ ಸರಕಾರಿ ಪದವಿಪೂರ್ವ ಕಾಲೇಜಿನ ಮೂವರು ವಿದ್ಯಾರ್ಥಿನಿಯರ ಮೇಲೆ ಆ್ಯಸಿಡ್ ದಾಳಿ ನಡೆಸಿ ಕೊಲೆಗೆ ಯತ್ನಿಸಿದ ಪ್ರಕರಣಕ್ಕೆ ಸಂಬಂಧಿಸಿ ಬಂಧಿತನಾಗಿ ನ್ಯಾಯಾಂಗ ಬಂಧನದಲ್ಲಿರುವ ಕೇರಳ ಮಲ್ಲಾಪುರದ ಅಬಿನ್.ಪಿ.ಸಿ.ಬಿ. ಸಲ್ಲಿಸಿದ್ದ ಜಾಮೀನು ಅರ್ಜಿಯನ್ನು ಪುತ್ತೂರಿನ 5ನೇ ಹೆಚ್ಚುವರಿ ಜಿಲ್ಲಾ ಹಾಗೂ ಸತ್ರ ನ್ಯಾಯಾಲಯದ ನ್ಯಾಯಾಧೀಶರು ವಜಾಗೊಳಿಸಿದ್ದಾರೆ. ಕಡಬ ಸರಕಾರಿ ಪದವಿಪೂರ್ವ ಕಾಲೇಜಿನ ಸಮವಸ್ತ್ರವನ್ನು ಹೊಲಿಸಿ ಪಡೆದುಕೊಂಡು ಕೊಯಮುತ್ತೂರಿನಿಂದ ಆಸಿಡ್ ಖರೀದಿಸಿ ಸಮವಸ್ತ್ರ ಧರಿಸಿಕೊಂಡು ಮಾ. 4ರಂದು ಬೆಳಿಗ್ಗೆ ಕಾಲೇಜಿಗೆ ಬಂದು ದ್ವಿತೀಯ ಪಿಯುಸಿ ಪರೀಕ್ಷೆಗೆ ತಯಾರಿ ನಡೆಸುತ್ತಿದ್ದ

ಕಡಬ ಸರಕಾರಿ ಕಾಲೇಜಿನ ವಿದ್ಯಾರ್ಥಿನಿಯರ ಮೇಲೆ ಆ್ಯಸಿಡ್ ದಾಳಿ | ಆರೋಪಿಯ ಜಾಮೀನು ಅರ್ಜಿ ವಜಾಗೊಳಿಸಿದ ನ್ಯಾಯಾಧೀಶರು Read More »

ಕೊಲೆ ಪ್ರಕರಣ : ದರ್ಶನ್‌ ವಿರುದ್ಧ 3,991 ಪುಟಗಳ ಚಾರ್ಜ್‌ಶೀಟ್‌ ಸಲ್ಲಿಕೆ

ಪವಿತ್ರಾ ಎ1, ದರ್ಶನ್‌ ಎ2 ಆರೋಪಿ ಬೆಂಗಳೂರು: ಚಿತ್ರದುರ್ಗದ ರೇಣುಕಾಸ್ವಾಮಿ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಆರೋಪಿಗಳಾದ ನಟ ದರ್ಶನ್‌ ಮತ್ತು ಗ್ಯಾಂಗ್‌ ವಿರುದ್ಧ ಕೋರ್ಟ್‌ಗೆ ಪೊಲೀಸರು ಇಂದು ಚಾರ್ಜ್‌ಶೀಟ್‌ ಸಲ್ಲಿಸಿದ್ದಾರೆ ಎಂದು ಪೊಲೀಸ್‌ ಮೂಲಗಳು ತಿಳಿಸಿವೆ. 24ನೇ ಎಸಿಎಂಎಂ ಕೋರ್ಟ್‌ಗೆ ಸುಮಾರು 3,991 ಪುಟಗಳ ಚಾರ್ಜ್‌ಶೀಟ್‌ ಸಲ್ಲಿಕೆ ಮಾಡಿರುವುದಾಗಿ ತಿಳಿದುಬಂದಿದೆ.ಇಂದು ಬೆಳಗ್ಗೆ ಬೆಂಗಳೂರಿನ 24ನೇ ಎಸಿಎಂಎಂ ಕೋರ್ಟ್​ಗೆ ಪೊಲೀಸರು ದೋಷಾರೋಪ ಪಟ್ಟಿ ಸಲ್ಲಿಕೆ ಮಾಡಿದ್ದಾರೆ. ಈ ಮೊದಲು ಎಫ್​ಐಆರ್​ ಹಾಕುವಾಗ ದರ್ಶನ್ ಎ2 ಆರೋಪಿ ಆಗಿದ್ದರೆ, ಪವಿತ್ರಾ

ಕೊಲೆ ಪ್ರಕರಣ : ದರ್ಶನ್‌ ವಿರುದ್ಧ 3,991 ಪುಟಗಳ ಚಾರ್ಜ್‌ಶೀಟ್‌ ಸಲ್ಲಿಕೆ Read More »

ರೂಮಿನಲ್ಲಿ ಕೂಡಿ ಹಾಕಿ ಡ್ರಗ್ಸ್‌ ನೀಡಿ ಅತ್ಯಾಚಾರ : ಮಲಯಾಳಂ ಹೀರೊ ನಿವಿನ್‌ ಪೌಲಿ ವಿರುದ್ಧ ದೂರು

ಕೊಚ್ಚಿ: ಮಲಯಾಳಂನ ಬೆಂಗಳೂರು ಡೇಸ್, ಪ್ರೇಮಂ ಮೊದಲಾದ ಹಿಟ್ ಸಿನೆಮಾಗಳ ನಾಯಕ ನಟ ನಿವಿನ್ ಪೌಲಿ ವಿರುದ್ಧ ಲೈಂಗಿಕ ದೌರ್ಜನ್ಯ ದೂರು ದಾಖಲಾಗಿದೆ. ಸಿನೆಮಾದಲ್ಲಿ ಚಾನ್ಸ್ ಕೊಡಿಸುತ್ತೇನೆ ಎಂದು ನಂಬಿಸಿ ನನ್ನ ಮೇಲೆ ದೌರ್ಜನ್ಯವೆಸಗಿದ್ದಾರೆ ಎಂದು ಎರ್ನಾಕುಳಂ ಜಿಲ್ಲೆಯ ನೇರ್ಯಮಂಗಲಂ ನಿವಾಸಿ ಯುವತಿ ಉನ್ನುಕ್ಕಲ್ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದಾರೆ.ದೂರು ದಾಖಲಾಗುತ್ತಿದ್ದಂತೆ ಈ ಪ್ರಕರಣ ಇಂತಹ ಪ್ರಕರಣಗಳ ತನಿಖೆಗೆ ರಚಿಸಲಾಗಿರುವ ಎಸ್‌ಐಟಿಗೆ ವರ್ಗಾವಣೆಯಾಗಿದೆ. ಹೇಮಾ ಕಮಿಷನ್ ವರದಿ ಬಹಿರಂಗಗೊಂಡ ಬಳಿಕ ತನಿಖೆಗೆ ನೇಮಕಗೊಂಡ ವಿಶೇಷ ತನಿಖಾ ತಂಡ

ರೂಮಿನಲ್ಲಿ ಕೂಡಿ ಹಾಕಿ ಡ್ರಗ್ಸ್‌ ನೀಡಿ ಅತ್ಯಾಚಾರ : ಮಲಯಾಳಂ ಹೀರೊ ನಿವಿನ್‌ ಪೌಲಿ ವಿರುದ್ಧ ದೂರು Read More »

ವೈದ್ಯಕೀಯ ವಿದ್ಯಾರ್ಥಿನಿಯ ಮತಾಂತರಕ್ಕೆ ಯತ್ನ : ಯುವಕ ಸೆರೆ

ಪ್ರೀತಿಸಿದ ಬಳಿಕ ಮತಾಂತರವಾಗಲು ಬಲವಂತ ಮಾಡಿದ ಡಾಕ್ಟರ್‌ ಉಡುಪಿ: ಮಣಿಪಾಲದ ಪ್ರತಿಷ್ಠಿತ ವೈದ್ಯಕೀಯ ಕಾಲೇಜಿನಲ್ಲಿ ಎಂಬಿಬಿಎಸ್ ಮುಗಿಸಿ ಉನ್ನತ ವ್ಯಾಸಂಗ ಮಾಡುತ್ತಿದ್ದ ಯುವಕ ತನ್ನ ಸಹಪಾಠಿ ಯುವತಿಯನ್ನು ಪ್ರೀತಿಸಿ ಬಳಿಕ ಮತಾಂತರಕ್ಕೆ ಒತ್ತಾಯಿಸಿದ ಕುರಿತು ಮಣಿಪಾಲ ಪೊಲೀಸ್‌ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.ಯುವಕ ದಿಲ್ಲಿಯ ಮಹಮ್ಮದ್‌ ಡ್ಯಾನಿಶ್ ಖಾನ್ ಹಾಗೂ ಯುವತಿ ರಾಜಸ್ಥಾನದ ಹಿಂದೂ ಸಮುದಾಯಕ್ಕೆ ಸೇರಿದವರು. ಯುವತಿಯೊಡನೆ ಸ್ನೇಹ ಪ್ರೇಮವಾಗಿ ಬದಲಾಗಿ ಮದುವೆಯ ಮಾತುಕತೆಯ ಹಂತಕ್ಕೆ ತಲುಪಿತ್ತು. ಆದರೆ ಮಹಮ್ಮದ್‌ ಡ್ಯಾನಿಶ್ ಖಾನ್ ದಿನ ಕಳೆದಂತೆ ನೀನು

ವೈದ್ಯಕೀಯ ವಿದ್ಯಾರ್ಥಿನಿಯ ಮತಾಂತರಕ್ಕೆ ಯತ್ನ : ಯುವಕ ಸೆರೆ Read More »

ಲೈಂಗಿಕ ದೌರ್ಜನ್ಯ ಪ್ರಕರಣ | ಬೆಂಗಳೂರಿನ ಹೊಟೇಲ್‍ ನಲ್ಲಿ ಪೊಲೀಸರಿಂದ ಮಹಜರು

ಪುತ್ತೂರು : ಅರುಣ್ ಕುಮಾರ್ ಪುತ್ತಿಲರ ಮೇಲೆ ಲೈಂಗಿಕ ದೌರ್ಜನ್ಯ ಹಿನ್ನಲೆಯಲ್ಲಿ ಮಹಿಳೆಯೋರ್ವರು ಪುತ್ತೂರು ನಗರ ಠಾಣೆಗೆ ನೀಡಿದ ದೂರಿನ ಹಿನ್ನಲೆಯಲ್ಲಿ ಲೈಂಗಿಕ ದೌರ್ಜನ್ಯ ನಡೆಸಿದ ಬೆಂಗಳೂರಿನ ಹೊಟೇಲ್‍ ನಲ್ಲಿ ಮಹಜರು ನಡೆಸಲಾಗುತ್ತಿದೆ ಎಂದು ತಿಳಿದು ಬಂದಿದೆ. ಈಗಾಗಲೇ ಪುತ್ತೂರಿನಲ್ಲಿ ಮಹಿಳೆಯನ್ನು ವೈದ್ಯಕೀಯ ಪರೀಕ್ಷೆಗೆ ಒಳಪಡಿಸಲಾಗಿದ್ದು, ಪ್ರಕರಣಕ್ಕೆ ಸಂಬಂಧಿಸಿದಂತೆ ಪುತ್ತೂರು ನಗರ. ಪೊಲೀಸ್ ಠಾಣೆ ಇನ್ಸ್ ಪೆಕ್ಷರ್ ಸತೀಶ್ ಜಿ.ಜಿ ಅವರ ನೇತೃತ್ವದಲ್ಲಿ ಬೆಂಗಳೂರಿನ ಪೈ ವಿಸ್ಟಾ ಹೊಟೇಲ್ & ಪಾರ್ಟಿ ಹಾಲ್ ಹೊಟೇಲ್‌ನಲ್ಲಿ ಮಹಜರು ನಡೆಸಲಾಗುತ್ತಿದೆ

ಲೈಂಗಿಕ ದೌರ್ಜನ್ಯ ಪ್ರಕರಣ | ಬೆಂಗಳೂರಿನ ಹೊಟೇಲ್‍ ನಲ್ಲಿ ಪೊಲೀಸರಿಂದ ಮಹಜರು Read More »

ನದಿಗೆ ಹಾರಿದ ಯುವಕನ ಮೃತದೇಹ ಪತ್ತೆ !

ಸುಳ್ಯ: ನದಿಗೆ ಹಾರಿದ್ದ ಯುವಕನ ಮೃತದೇಹವೊಂದು ಇಂದು ಬೆಳಿಗ್ಗೆ ಪತ್ತೆಯಾಗಿದೆ. ಸುಳ್ಯ ತಾಲೂಕಿನ ಅಡ್ಕ ನಿವಾಸಿ ಸಿನಾನ್ (23) ಮೃತಪಟ್ಟ ಯುವಕ. ಅಜ್ಜಾವರ ಗ್ರಾಮದ ಕಾಂತಮಂಗಲ ಸೇತುವೆಯಿಂದ ಯುವಕ ಸಿನಾನ್ ಸೋಮವಾರ ಹೊಳೆಗೆ ಹಾರಿದ್ದರು. ಮಂಗಳವಾರ ಬೆಳಿಗ್ಗೆ ಮೃತದೇಹ ಪತ್ತೆಯಾಗಿರುವುದಾಗಿ ಮಾಹಿತಿ ಲಭಿಸಿದೆ. ಈ ಕುರಿತು ಸುಳ್ಯ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ನದಿಗೆ ಹಾರಿದ ಯುವಕನ ಮೃತದೇಹ ಪತ್ತೆ ! Read More »

‘ಐ ಲವ್ ಯೂ’ ಹೇಳಿದರೆ ಮಾತ್ರ ರಿಚಾರ್ಚ್ | ವಿದ್ಯಾರ್ಥಿನಿಯರಿಂದ ಅಂಗಡಿಯಾತನಿಗೆ ಹಿಗ್ಗಾಮುಗ್ಗ ಥಳಿತ

ರಾಜಸ್ಥಾನ: ಮೊಬೈಲ್ ರಿಚಾರ್ಚ್ ಮಾಡಲು ಮೊಬೈಲ್ ಅಂಗಡಿಗೆ ಬಂದ ಶಾಲಾ ವಿದ್ಯಾರ್ಥಿನಿಯರಿಗೆ ಮೊಬೈಲ್ ಅಂಗಡಿಯಾತ ‘ಐ ಲವ್ ಯೂ’ ಎಂದು ಹೇಳಿದರೆ ಮಾತ್ರ ರೀಚಾರ್ಚ್‍ ಮಾಡುವುದು ಹೇಳಿದ್ದರಿಂದ ಕುಪಿತಗೊಂಡ ವಿದ್ಯಾರ್ಥಿನಿಯರು ಆತನಿಗೆ ಹಿಗ್ಗಾಮುಗ್ಗ ಥಳಿಸಿದ ಘಟನೆ ರಾಜಸ್ಥಾನದ ದಿದ್ಯಾನಾ ಎಂಬಲ್ಲಿ ನಡೆದಿದೆ. ಈ ಕುರಿತು ವೀಡಿಯೋ ಇದೀಗ ವೈರಲ್ ಆಗುತ್ತಿದ್ದು, ಹುಡುಗೀರ ಈ ಕಾರ್ಯಕ್ಕೆ ಭಾರೀ ಮೆಚ್ಚುಗೆ ವ್ಯಕ್ತವಾಗಿದೆ. ಒಂದಷ್ಟು ಸ್ಕೂಲ್ ಹುಡೀರು ಐ ಲವ್ ಯು ಹೇಳುವಂತೆ ಪೀಡಿಸಿದಾತನಿಗೆ ನಡು ರಸ್ತೆಯಲ್ಲಿಯೇ ಚಳಿ ಬಿಡಿಸಿದ್ದಾರೆ. ಸ್ಕೂಲ್

‘ಐ ಲವ್ ಯೂ’ ಹೇಳಿದರೆ ಮಾತ್ರ ರಿಚಾರ್ಚ್ | ವಿದ್ಯಾರ್ಥಿನಿಯರಿಂದ ಅಂಗಡಿಯಾತನಿಗೆ ಹಿಗ್ಗಾಮುಗ್ಗ ಥಳಿತ Read More »

ದನಗಳ್ಳನೆಂದು ಭಾವಿಸಿ ವಿದ್ಯಾರ್ಥಿಯನ್ನು ಗುಂಡಿಕ್ಕಿ ಕೊಂದ ಗೋರಕ್ಷಕರು

ಚಂಡೀಗಢ: ದನಗಳ್ಳನೆಂದು ಭಾವಿಸಿ ಪಿಯುಸಿ ವಿದ್ಯಾರ್ಥಿಯೊಬ್ಬನನ್ನು ಗೋರಕ್ಷಕರು ಕಾರಿನಲ್ಲಿ 30 ಕಿ.ಮೀ. ಹಿಂಬಾಲಿಸಿ ಗುಂಡಿಕ್ಕಿ ಹತ್ಯೆಗೈದ ಆಘಾತಕಾರಿ ಘಟನೆ ಹರ್ಯಾಣದ ಫರಿದಾಬಾದ್‍ನಲ್ಲಿ ನಡೆದಿದೆ.ಆರ್ಯನ್ ಮಿಶ್ರಾ ದುಷ್ಕರ್ಮಿಗಳ ದಾಳಿಗೆ ಬಲಿಯಾದ ದುರ್ದೈವಿ. ಆಗಸ್ಟ್ 23ರಂದು ಈ ಘಟನೆ ನಡೆದಿದ್ದು, ತಡವಾಗಿ ಬೆಳಕಿಗೆ ಬಂದಿದೆ. ಪ್ರಕರಣ ಸಂಬಂಧ ಐವರು ಆರೋಪಿಗಳನ್ನು ಪೊಲೀಸರು ಬಂಧಿಸಿದ್ದಾರೆ. ಬಂಧಿತರನ್ನು ಅನಿಲ್ ಕೌಶಿಕ್, ವರುಣ್, ಕೃಷ್ಣ, ಆದೇಶ್ ಮತ್ತು ಸೌರಭ್ ಎಂದು ಗುರುತಿಸಲಾಗಿದೆ.ರೆನಾಲ್ಟ್ ಡಸ್ಟರ್ ಮತ್ತು ಟೊಯೊಟಾ ಫಾರ್ಚುನರ್ ಕಾರುಗಳಲ್ಲಿ ಕೆಲವರು ಜಾನುವಾರುಗಳನ್ನು ಕಳ್ಳಸಾಗಾಣಿಕೆ ಮಾಡುತ್ತಿದ್ದಾರೆ

ದನಗಳ್ಳನೆಂದು ಭಾವಿಸಿ ವಿದ್ಯಾರ್ಥಿಯನ್ನು ಗುಂಡಿಕ್ಕಿ ಕೊಂದ ಗೋರಕ್ಷಕರು Read More »

error: Content is protected !!
Scroll to Top