ಅಪರಾಧ

ಅನ್ಯಕೋಮಿನ ವ್ಯಕ್ತಿಯ ಕಾರಿನಲ್ಲಿ ತನ್ನ ಹೆಂಡತಿ ಇರುವುದನ್ನು ಪ್ರಶ್ನಿಸಿದ್ದಕ್ಕೆ ವ್ಯಕ್ತಿಯೋರ್ವರ ಮೇಲೆ ಹಲ್ಲೆ

ಪುತ್ತೂರು : ಅನ್ಯಕೋಮಿನ ವ್ಯಕ್ತಿಯ ಕಾರಿನಲ್ಲಿ ತನ್ನ ಹೆಂಡತಿ ಇರುವುದನ್ನು ಪ್ರಶ್ನಿಸಿದ್ದಕ್ಕೆ ವ್ಯಕ್ತಿಯೋರ್ವರ ಮೇಲೆ ಹಲ್ಲೆ ನಡೆಸಿರುವುದಾಗಿ ಆರೋಪಿಸಿ ದೂರು ನೀಡಲಾಗಿದೆ. ಪುತ್ತೂರು ಕೆಮ್ಮಾಯಿ ನಿವಾಸಿ ಸುರೇಶ್ ಭಟ್ ಎಂಬವರು ನೀಡಿರುವ ದೂರಿನ ಮೇರೆಗೆ ಬೈಂದೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಸುರೇಶ್ ಅವರು ಏ.10 ರಂದು ಉಡುಪಿಯಲ್ಲಿರುವ  ಸ್ನೇಹಿತರನ್ನು ಮಾತನಾಡಿಸಲು ಹೋಗಿ ಪುತ್ತೂರಿಗೆ ಹಿಂತಿರುಗುತ್ತಿದ್ದ ವೇಳೆ ಕಂಬದಕೋಣೆ ಗ್ರಾಮದ ರೈಲ್ವೇ ಗೇಟಿನ ಬಳಿ ಬರುವಾಗ ರೈಲ್ವೇ ಗೇಟ್ ಹಾಕಿರುವುದರಿಂದ ಕಾರನ್ನು ನಿಲ್ಲಿಸಿದಾಗ ಸುರೇಶ್ ಅವರ ಪತ್ನಿ […]

ಅನ್ಯಕೋಮಿನ ವ್ಯಕ್ತಿಯ ಕಾರಿನಲ್ಲಿ ತನ್ನ ಹೆಂಡತಿ ಇರುವುದನ್ನು ಪ್ರಶ್ನಿಸಿದ್ದಕ್ಕೆ ವ್ಯಕ್ತಿಯೋರ್ವರ ಮೇಲೆ ಹಲ್ಲೆ Read More »

ರಾಮೇಶ್ವರ ಕೆಫೆ ಬಾಂಬ್ ಬ್ಲಾಸ್ಟ್ : ಬಾಂಬ್ ಇಟ್ಟ ಆರೋಪಿ ಬಂಧನ

ಬೆಂಗಳೂರು : ಕರ್ನಾಟಕವನ್ನೇ ಬೆಚ್ಚಿ ಬೀಳಿಸಿದ ರಾಮೇಶ್ವರಂ ಕೆಫೆ ಬಾಂಬ್ ಸ್ಫೋಟ ಪ್ರಕರಣ ಸಂಬಂಧಿಸಿದಂತೆ ಮತ್ತೊಬ್ಬ ಉಗ್ರನ ಬಂಧನವಾಗಿದೆ. ಎನ್.ಐ.ಎ ತನಿಖೆಯಿಂದ ಬಾಂಬ್ ಇಟ್ಟಿದ್ದ ಉಗ್ರನನ್ನು ಅರೆಸ್ಟ್ ಮಾಡಲಾಗಿದೆ. ಮುಸಾಫೀರ್ ಶಾಜೀನ್ ಹುಸೇನ್ ಎಂಬ ಉಗ್ರ ಬಾಂಬ್ ಇಟ್ಟವನು ಎಂದು ತಿಳಿದುಬಂದಿದೆ. ಮುಸಾಫಿ‌ರ್ ಶಾಜೀನ್ ಹುಸೇನ್‌ನನ್ನು ಉತ್ತರ ಭಾರತದ ರಾಜ್ಯದಲ್ಲಿ ಅರೆಸ್ಟ್ ಮಾಡಲಾಗಿದೆ. ಎನ್ ಐಎ ತಂಡದಿಂದ ಕಾರ್ಯಾಚರಣೆ ನಡೆಸಿ ಬಂಧಿಸಲಾಗಿದೆ. ಮುಸಾಫೀ‌ರ್ ಶಾಜೀನ್ ಹುಸೇನ್ ಅಸ್ಸಾಂ ಮತ್ತು ಪಶ್ಚಿಮ ಬಂಗಾಳ ಕಡೆ ತಲೆಮರೆಸಿಕೊಂಡಿದ್ದನು. ಕೊನೆಗೂ ಆತನನ್ನು

ರಾಮೇಶ್ವರ ಕೆಫೆ ಬಾಂಬ್ ಬ್ಲಾಸ್ಟ್ : ಬಾಂಬ್ ಇಟ್ಟ ಆರೋಪಿ ಬಂಧನ Read More »

ಹೆತ್ತ ತಾಯಿ ಇಬ್ಬರು ಮಕ್ಕಳನ್ನು ಉಸಿರುಗಟ್ಟಿಸಿ ಬರ್ಬರವಾಗಿ ಕೊಲೆ

ಬೆಂಗಳೂರು: ಹೆತ್ತ ತಾಯಿಯೇ ಇಬ್ಬರು ಮಕ್ಕಳನ್ನು ಉಸಿರುಗಟ್ಟಿಸಿ ಕೊಲೆ ಮಾಡಿದ ಘಟನೆ ಬೆಂಗಳೂರಿನ ಜಾಲಹಳ್ಳಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ.ಗಂಗಾದೇವಿ ಕೊಲೆ ಮಾಡಿದ ಆರೋಪಿ. 9 ವರ್ಷದ ಮಗಳು ಲಕ್ಷ್ಮೀ, 7 ವರ್ಷದ ಮಗ ಗೌತಮ್​​ನನ್ನು ಬರ್ಬರವಾಗಿ ಕೊಲೆ ಮಾಡಿದ್ದಾಳೆ. ಮಕ್ಕಳನ್ನು ತಲೆ ದಿಂಬಿನಿಂದ ಉಸಿರುಗಟ್ಟಿಸಿ ಕೊಲೆ ಮಾಡಿರುವ ಗಂಗಾದೇವಿಯೇ ಪೊಲೀಸರಿಗೆ ಖುದ್ದು ಮಾಹಿತಿ ನೀಡಿದ್ದಾಳೆ. ಇಬ್ಬರು ಮಕ್ಕಳನ್ನ ಕೊಲೆ ಮಾಡಿ ಕಂಟ್ರೋಲ್ ರೂಂಗೆ ಕರೆ ಮಾಡಿದ್ದ ಗಂಗಾದೇವಿ, ಮಕ್ಕಳನ್ನು ಉಸಿರುಗಟ್ಟಿಸಿ ಕೊಲೆ ಮಾಡಿದ್ದೇನೆ. ಈಗ ನಾನು

ಹೆತ್ತ ತಾಯಿ ಇಬ್ಬರು ಮಕ್ಕಳನ್ನು ಉಸಿರುಗಟ್ಟಿಸಿ ಬರ್ಬರವಾಗಿ ಕೊಲೆ Read More »

ಸಿಸಿಬಿ ಪೋಲಿಸರು ಬಂಧಿಸಿದ 5 ಜನರ ಗ್ಯಾಂಗ್ ವಶ

ಬೆಂಗಳೂರು: ಖಾಸಗಿ ಕಂಪನಿಗಳಿಂದ ನೀಡಬೇಕಾದ ಸಿಎಸ್‌ಆರ್‌ ಫಂಡ್ ಬ್ಲ್ಯಾಕ್ ಮನಿಯನ್ನು ಖಾಸಗಿ ಟ್ರಸ್ಟ್‌ಗಳಿಗೆ ನೀಡುವುದಾಗಿ ವಂಚನೆ ಮಾಡುತ್ತಿದ್ದ 5 ಜನರ ಗ್ಯಾಂಗ್‌ ಅನ್ನು ಸಿಸಿಬಿ ಪೊಲೀಸರು ಬಂಧಿಸಿದ್ದು, 30 ಕೋಟಿ ರೂ. ಮೌಲ್ಯದ ನೋಟುಗಳನ್ನು ವಶಕ್ಕೆ ಪಡೆದಿದ್ದಾರೆ. ರಾಜ್ಯ ರಾಜಧಾನಿ ಬೆಂಗಳೂರಿನಲ್ಲಿ ಲಕ್ಷಾಂತರ ಖಾಸಗಿ ಕಂಪನಿಗಳು ಕಾರ್ಯ ನಿರ್ವಹಿಸುತ್ತಿವೆ. ಜೊತೆಗೆ, ಸಾವಿರಾರು ಖಾಸಗಿ ಟ್ರಸ್ಟ್‌ಗಳು ಕೂಡ ಸೇವೆ ಸಲ್ಲಿಸುತ್ತಿವೆ. ಆದರೆ, ಇಲ್ಲೊಂದು ಗ್ಯಾಂಗ್‌ ಖಾಸಗಿ ಕಂಪನಿಗಳ ಸಾಂಸ್ಥಿಕ ಸಿಎಸ್‌ಆರ್‌ ಫಂಡ್ ಅನ್ನು ಸಂಕಷ್ಟದಲ್ಲಿರುವ ಟ್ರಸ್ಟ್‌ಗಳಿಗೆ ನೀಡುವುದಾಗಿ ಕೋಟಿ

ಸಿಸಿಬಿ ಪೋಲಿಸರು ಬಂಧಿಸಿದ 5 ಜನರ ಗ್ಯಾಂಗ್ ವಶ Read More »

ಅಡ್ಯನಡ್ಕದಲ್ಲಿ ಹಲ್ಲೆ ಪ್ರಕರಣ: ಇತ್ತಂಡಗಳ ವಿರುದ್ಧ ಪ್ರಕರಣ ದಾಖಲು

ವಿಟ್ಲ: ಅಡ್ಯನಡ್ಕದಲ್ಲಿ ಇತ್ತೀಚೆಗೆ ನಡೆದ ಯುವಕನ ಮೇಲಿನ ಹಲ್ಲೆ ಪ್ರಕರಣಕ್ಕೆ ಸಂಬಂಧಿಸಿ ವಿಟ್ಲ ಠಾಣೆಯಲ್ಲಿ ಇತ್ತಂಡಗಳ ವಿರುದ್ಧ ದೂರು ದಾಖಲಾಗಿದೆ. ಅಡ್ಯನಡ್ಕ ನಿವಾಸಿ ಮಹಮ್ಮದಾಲಿ ಎ. (36) ಎಂಬವರು ನೀಡಿದ ದೂರಿನಂತೆ ಗಣೇಶ್ ಎಂಬವರು ಮನೆಯ ಬಳಿ ಬಂದು ಹಣದ ವಿಚಾರದಲ್ಲಿ ತಕರಾರು ತೆಗೆದು ಅವ್ಯಾಚವಾಗಿ ನಿಂದಿಸಿ, ಕತ್ತಿಯಿಂದ ಹಲ್ಲೆ ನಡೆಸಲು ಮುಂದಾಗಿದ್ದು, ಸ್ಥಳೀಯರು ಬಂದಾಗ ಪರಾರಿಯಾಗಿರುತ್ತಾನೆ ಎಂದು ಪ್ರಕರಣ ದಾಖಲಾಗಿದೆ. ಈ ನಡುವೆ ಗಣೇಶ್ ಅವರು ಮಹಮ್ಮದಾಲಿ ಕತ್ತಿಯಿಂದ ಹಲ್ಲೆ ನಡೆಸಿ ಜೀವ ಬೆದರಿಕೆ ಒಡ್ಡಿದ್ದಾರೆಂದು

ಅಡ್ಯನಡ್ಕದಲ್ಲಿ ಹಲ್ಲೆ ಪ್ರಕರಣ: ಇತ್ತಂಡಗಳ ವಿರುದ್ಧ ಪ್ರಕರಣ ದಾಖಲು Read More »

ಸ್ಪೋಟಕ ಬಳಸಿ ಕಲ್ಲು ಸ್ಪೋಟ | ಮನೆಗೆ ಹಾನಿ : ಠಾಣೆಗೆ ದೂರು

ಕಡಬ: ಸ್ಪೋಟಕ ಬಳಸಿ ಕಲ್ಲು ಒಡೆಯುತ್ತಿರುವ ಪರಿಣಾಮ ಮನೆಗಳಿಗೆ ಹಾನಿಯುಂಟಾಗುವುದರ ಜತೆ ಪರಿಸರ ಮಾಲಿನ್ಯ ಉಂಟಾಗುತ್ತಿದೆ ಎಂದು ಸ್ಪೋಟಕ ನಡೆಸುವವರ ವಿರುದ್ಧ ಸುಬ್ರಹ್ಮಣ್ಯ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಕಡಬ ತಾಲೂಕಿನ ಏನೆಕಲ್ಲು ಗ್ರಾಮದ ಕುಕ್ಕಿಪ್ಪನ ಮನೆ ನಿವಾಸಿ ಆನಂದ ಗೌಡ ಎಂಬವರು ಈ ಕುರಿತು ಠಾಣೆಗೆ ದೂರು ನೀಡಿದ್ದು, ಸಮೀಪದ ನಿವಾಸಿ ದಯಾನಂದ ಎಂಬವರ ವಿರುದ್ಧ ಪ್ರಕರಣ ದಾಖಲಾಗಿದೆ. ಏನೆಕಲ್ಲು ಗ್ರಾಮದ ಅಜಿರುಪೊಲಿ ಎಂಬಲ್ಲಿ ಕಳೆದ ಎರಡು ತಿಂಗಳಿನಿಂದ ಅಕ್ರಮ ಸ್ಪೋಟಕಗಳನ್ನು ಬಳಸಿ ಕಲ್ಲುಗಳನ್ನು ಒಡೆದು ಸೈಜುಕಲ್ಲುಗಳನ್ನಾಗಿ

ಸ್ಪೋಟಕ ಬಳಸಿ ಕಲ್ಲು ಸ್ಪೋಟ | ಮನೆಗೆ ಹಾನಿ : ಠಾಣೆಗೆ ದೂರು Read More »

ನಿಷೇಧಿತ ಕೇರಳ ರಾಜ್ಯ ಲಾಟರಿ ಮಾರಾಟ | ಓರ್ವ ಪೊಲೀಸ್ ವಶಕ್ಕೆ

ಪುತ್ತೂರು: ನಿಷೇಧಿತ ಕೇರಳ ಲಾರಿ ಮಾರಾಟ ಮಾಡುತ್ತಿದ್ದ ವ್ಯಕ್ತಿಯೊಬ್ಬನನ್ನು ಪೊಲೀಸರು ಬಂಧಿಸಿದ ಘಟನೆ ನಡೆದಿದೆ. ಪಡ್ನೂರು ನಿವಾಸಿ ಲಕ್ಷ್ಮಣ ಬಂಧಿತ ವ್ಯಕ್ತಿ ಇಂದು ಮಧ್ಯಾಹ್ನ ಪುತ್ತೂರಿನ ಬೈಪಾಸ್ ರಸ್ತೆಯಲ್ಲಿರುವ ಲಿನೆಟ್ ಜಂಕ್ಷನ್ ಬಳಿ ಪಾನ್‍ ಬೀಡ ಅಂಗಡಿಯಲ್ಲಿ ಕೇರಳ ಲಾಟರಿ ಮಾರಾಟ ಮಾಡುತ್ತಿದ್ದಾಗ ದಾಳಿ ನಡೆಸಿದ ಪುತ್ತೂರು ನಗರ ಪೊಲೀಸ್ ಠಾಣಾ ಉಪನಿರೀಕ್ಷಕ ನಂದಕುಮಾರ್ ಎಂ.ಎಂ. ಹಾಗೂ ಸಿಬ್ಬಂದಿಗಳು ಲಕ್ಷ್ಮಣ ಎಂಬಾತನನ್ನು ವಿಚಾರಿಸಿ 1,550 ಮೌಲ್ಯದ 31 ಲಾಟರಿ ಹಾಗೂ ಮಾರಾಟ ಮಾಡಿದ ಹಣ 1100 ರೂ.

ನಿಷೇಧಿತ ಕೇರಳ ರಾಜ್ಯ ಲಾಟರಿ ಮಾರಾಟ | ಓರ್ವ ಪೊಲೀಸ್ ವಶಕ್ಕೆ Read More »

ಕಾಪು ಮಹಿಳಾ ಪಿಸಿ ಆತ್ಮಹತ್ಯೆ : ಪತಿ ಬಂಧನ

ಕಾಪು: ಪೋಲಿಸ್ ಠಾಣೆಯ ಮಹಿಳಾ ಸಿಬಂದಿ ಜ್ಯೋತಿ ಅವರ ಆತ್ಮಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಆತ್ಮಹತ್ಯೆಗೆ ಪ್ರಚೋದನೆ ನೀಡಿದ ಆರೋಪದಡಿ ಅವರ ಪತಿ ರವಿಕುಮಾರ್ (35) ಅವರನ್ನು  ಕಾಪು ಪೋಲಿಸರು ಬಂಧಿಸಿದ್ದಾರೆ. ಆತ್ಮಹತ್ಯೆಗೈದ ಬಳಿಕ ಜ್ಯೋತಿ ಅವರ ಕೊಠಡಿಯಲ್ಲಿ ಡೈರಿಯೊಂದು ಸಿಕ್ಕಿದ್ದು  ಅದರಲ್ಲಿ ಆಕೆ  ತನ್ನ ಆತ್ಮಹತ್ಯೆಗೆ ನನ್ನ ಗಂಡನ ಸಂಶಯ ಪ್ರವೃತ್ತಿಯೇ ಕಾರಣ ಎಂದು ಬರೆದುಕೊಂಡಿದ್ದಾಗಿ ಆಕೆಯ ತಾಯಿ ದೇವಮ್ಮ ವಿಟ್ಲಾಪುರ ಪೋಲಿಸರಿಗೆ ದೂರು ನೀಡಿದ್ದಾರೆ. ಈ  ಹಿನ್ನಲೆಯಲ್ಲಿ ಪೋಲೀಸರು ಶನಿವಾರ ತಡರಾತ್ರಿ ಆಕೆಯ ಪತಿಯನ್ನು ಬಂಧಿಸಿದ್ದಾರೆ.

ಕಾಪು ಮಹಿಳಾ ಪಿಸಿ ಆತ್ಮಹತ್ಯೆ : ಪತಿ ಬಂಧನ Read More »

ಮುಡಿಪು ರಸ್ತೆಯಲ್ಲಿ ಇಫ್ತಾರ್ ಕೂಟ | ತಪ್ಪಿಸ್ಥರ ವಿರುದ್ಧ ಕ್ರಮ ಕೈಗೊಳ್ಳುವಂತೆ ಹಿಂಜಾವೇಯಿಂದ ಚುನಾವಣಾ ಆಯುಕ್ತರಿಗೆ ದೂರು

ಮಂಗಳೂರು: ಮುಡಿಪು ರಸ್ತೆಯಲ್ಲಿ ಇಫ್ತಾರ್ ಕೂಟ ಆಯೋಜಿಸಿದ್ದನ್ನು ಹಿಂದೂ ಜಾಗರಣ ವೇದಿಕೆ ಖಂಡಿಸಿದ್ದು, ಈ ಕುರಿತು ಚುನಾವಣಾ ಆಯೋಗ ಹಾಗೂ ಪೊಲೀಸ್ ಆಯುಕ್ತರಿಗೆ ದೂರು ನೀಡಿದ್ದಾರೆ. ಲೋಕಸಭಾ ಚುನಾವಣೆ ಹಿನ್ನಲೆಯಲ್ಲಿ ನೀತಿ ಸಂಹಿತೆ ಜಾರಿಯಲ್ಲಿದ್ದರೂ ಅದನ್ನು ಉಲ್ಲಂಘಿಸಿ ಮುಡಿಪು ರಸ್ತೆಯಲ್ಲಿ ಒಂದು ಭಾಗವನ್ನು ತಡೆಮಾಡಿ ಒಂದು ಸಮುದಾಯ ಅನ್ಯರಾಜ್ಯಗಳ ವ್ಯಕ್ತಿಗಳನ್ನು ಸೇರಿಸಿ ಇಫ್ತಾರ್ ಕೂಟ ಮಾಡಿರುವುದು ಸಾರ್ವಜನಿಕರಿಗೆ ತೊಂದರೆ ಉಂಟಾಗಿದೆ. ಇದರಿಂದ ಚುನಾವಣಾ ನೀತಿ ಉಲ್ಲಂಘನೆಯಾಗಿದೆ ಎಂದು ಮನವಿಯಲ್ಲಿ ತಿಳಿಸಿದ್ದಾರೆ. ತಕ್ಷಣ ಈ ಕುರಿತು ಮೊಕದ್ದಮೆ ದಾಖಲಿಸಿ

ಮುಡಿಪು ರಸ್ತೆಯಲ್ಲಿ ಇಫ್ತಾರ್ ಕೂಟ | ತಪ್ಪಿಸ್ಥರ ವಿರುದ್ಧ ಕ್ರಮ ಕೈಗೊಳ್ಳುವಂತೆ ಹಿಂಜಾವೇಯಿಂದ ಚುನಾವಣಾ ಆಯುಕ್ತರಿಗೆ ದೂರು Read More »

ಸಾಕು ನಾಯಿಗಳಿಗೆ ವಿಷವಿಕ್ಕಿದ ನೀಚರು | 10 ಕ್ಕೂ ಅಧಿಕ ನಾಯಿಗಳ ಸಾವು

ಮುಂಡಾಜೆ : ಸಾಕು ನಾಯಿಗಳಿಗೆ ವಿಷವಿಕ್ಕಿದ ಪರಿಣಾಮ 10 ಕ್ಕೂ ಅಧಿಕ ನಾಯಿಗಳು ಸಾವನ್ನಪ್ಪಿದ ಘಟನೆ ಮುಂಡಾಜೆ ಗ್ರಾಮದ ಸೋಮಂತಡ್ಕದ ಅಗರಿ- ಹುರ್ತಾಜೆ ರಸ್ತೆಯಲ್ಲಿ ಶನಿವಾರ ರಾತ್ರಿ ನಡೆದಿದೆ. ಶನಿವಾರ ರಾತ್ರಿ ಈ ರಸ್ತೆಯುದ್ದಕ್ಕೂ ಆಹಾರದಲ್ಲಿ ವಿಷವನ್ನು ಬೆರೆಸಿ ಅಲ್ಲಲ್ಲಿ ಎಸೆದು ಹೋಗಿದ್ದಾರೆ. ಇದನ್ನು ತಿಂದಿರುವ ನಾಯಿಗಳು ಸಾವನ್ನಪ್ಪಿದೆ ಎನ್ನಲಾಗಿದೆ. ತಡರಾತ್ರಿ ಈಸ್ಟರ್ ಹಬ್ಬದಿಂದ ತೆರಳುತ್ತಿದ್ದ ಮಂದಿ ಇದನ್ನು ಗಮನಿಸಿ ತಕ್ಷಣ ಪಂಚಾಯಿತಿ ಅಧ್ಯಕ್ಷ ಗಣೇಶ್ ಬಂಗೇರ ಅವರ ಗಮನಕ್ಕೆ ತಂದರು. ಪರಿಶೀಲನೆ ನಡೆಸಿದಾಗ ಕೆಲವು ಮನೆಗಳ

ಸಾಕು ನಾಯಿಗಳಿಗೆ ವಿಷವಿಕ್ಕಿದ ನೀಚರು | 10 ಕ್ಕೂ ಅಧಿಕ ನಾಯಿಗಳ ಸಾವು Read More »

error: Content is protected !!
Scroll to Top