ಅಪರಾಧ

ಬಸ್‌ನಲ್ಲಿ ಯುವತಿಗೆ ಕಿರುಕುಳ ನೀಡಿದ ಕಂಡಕ್ಟರ್‌

ವೀಡಿಯೊ ವೈರಲ್‌ ಆದ ಬಳಿಕ ನಿರ್ವಾಹಕನನ್ನು ವಶಕ್ಕೆ ತೆಗೆದುಕೊಂಡ ಪೊಲೀಸರು ಮಂಗಳೂರು: ಮುಡಿಪು -ಸ್ಟೇಟ್‌ ಬ್ಯಾಂಕ್‌ ಮಧ್ಯೆ ಸಂಚರಿಸುವ ಕೆಎಸ್​ಆರ್​ಟಿಸಿ ಬಸ್‌ ನಿರ್ವಹಕ ಚಲಿಸುತ್ತಿರುವ ಬಸ್ಸಿನಲ್ಲೇ ಯುವತಿಗೆ ಕಿರುಕುಳ ನೀಡಿದ ಘಟನೆ ಸಂಭವಿಸಿದೆ. ನಿದ್ರಿಸುತ್ತಿದ್ದ ಯುವತಿಗೆ ನಿರ್ವಾಹಕ ಕಿರುಕುಳ ನೀಡಿದ್ದು, ಪ್ರಯಾಣಿಕರೊಬ್ಬರು ಇದನ್ನು ವೀಡಿಯೊ ಮಾಡಿದ್ದರು. ಈ ವೀಡಿಯೊ ವೈರಲ್‌ ಆದ ಬಳಿಕ ಎಚ್ಚೆತ್ತುಕೊಂಡಿರುವ ಪೊಲೀಸರು, ಆರೋಪಿ ನಿರ್ವಾಹಕ ಬಾಗಲಕೋಟೆ ಮೂಲದ ಪ್ರದೀಪ್‌ (40) ಎಂಬಾತನನ್ನು ವಶಕ್ಕೆ ಪಡೆದಿದ್ದಾರೆ. ಏಪ್ರಿಲ್ 22ರಂದು ಮುಡಿಪುವಿನಿಂದ ಸ್ಟೇಟ್‌ ಬ್ಯಾಂಕ್​​ನತ್ತ ತೆರಳುತ್ತಿದ್ದ […]

ಬಸ್‌ನಲ್ಲಿ ಯುವತಿಗೆ ಕಿರುಕುಳ ನೀಡಿದ ಕಂಡಕ್ಟರ್‌ Read More »

ಬಾವಿಗೆ ಬಿದ್ದು ವ್ಯಕ್ತಿಯೋರ್ವ ಆತ್ಮಹತ್ಯೆಗೆ ಶರಣು

ಬೆಳ್ತಂಗಡಿ: ಬಾವಿಗೆ ಬಿದ್ದು ವ್ಯಕ್ತಿಯೋರ್ವ ಆತ್ಮಹತ್ಯೆ ಮಾಡಿಕೊಂಡ ಘಟನೆ ಎ.24 ರಂದು ಬೆಳ್ತಂಗಡಿ ಸಂತೆಕಟ್ಟೆಯಲ್ಲಿ ನಡೆದಿದೆ. ಮೃತ ವ್ಯಕ್ತಿ ಬೆಳ್ತಂಗಡಿ ನಿವಾಸಿ ಪಟ್ಟಣ ಪಂಚಾಯತ್ ಮಾಜಿ ಅಧ್ಯಕ್ಷೆ ವೀಣಾರವರ ಪತಿ ವಿನೋದ್ (48) ಎನ್ನಲಾಗಿದೆ. ಆತ್ಮಹತ್ಯೆಗೆ ಕಾರಣ ಇನ್ನಷ್ಟೇ ತಿಳಿದು ಬರಬೇಕಾಗಿದೆ. ಬೆಳ್ತಂಗಡಿ ಪೊಲೀಸರು ಸ್ಥಳಕ್ಕೆ ಆಗಮಿಸಿ ಪರಿಶೀಲನೆ ನಡೆಸಿದ್ದಾರೆ.

ಬಾವಿಗೆ ಬಿದ್ದು ವ್ಯಕ್ತಿಯೋರ್ವ ಆತ್ಮಹತ್ಯೆಗೆ ಶರಣು Read More »

ಕ್ರಿಕೆಟ್‌ ತಂಡದ ಕೋಚ್‌ ಗೌತಮ್‌ ಗಂಭೀರ್‌ಗೆ ಕೊಲೆ ಬೆದರಿಕೆ

ಐಸಿಸ್‌ ಕಾಶ್ಮೀರ ಖಾತೆಯಿಂದ ಐ ಕಿಲ್‌ ಯೂ ಎಂದು ಧಮ್ಕಿ ನವದೆಹಲಿ : ಭಾರತೀಯ ಕ್ರಿಕೆಟ್ ತಂಡದ ಮುಖ್ಯ ಕೋಚ್ ಗೌತಮ್ ಗಂಭೀರ್ ಅವರಿಗೆ ಐಸಿಸ್ ಕಾಶ್ಮೀರ ಎಂಬ ಖಾತೆಯಿಂದ ಕೊಲೆ ಬೆದರಿಕೆ ಬಂದಿದೆ. ಇ-ಮೇಲ್ ಮೂಲಕ ಜೀವ ಬೆದರಿಕೆಯೊಡ್ಡಲಾಗಿದ್ದು, ಈ ಬಗ್ಗೆ ದೆಹಲಿಯ ರಾಜೇಂದ್ರ ನಗರ ಠಾಣೆಯಲ್ಲಿ ಗಂಭೀರ್ ದೂರು ನೀಡಿದ್ದಾರೆ.ಗೌತಮ್ ಗಂಭೀರ್ ಬುಧವಾರ ದೆಹಲಿ ಪೊಲೀಸರನ್ನು ಸಂಪರ್ಕಿಸಿ, ಎಫ್‌ಐಆರ್ ದಾಖಲಿಸಿದ್ದಾರೆ. ಹಾಗೆಯೇ ತಮ್ಮ ಕುಟುಂಬದ ಭದ್ರತೆಗೆ ಸೂಕ್ತ ಕ್ರಮಗಳನ್ನು ಕೈಗೊಳ್ಳುವಂತೆ ಕೋರಿದ್ದಾರೆ ಎಂದು ರಾಜೇಂದ್ರ

ಕ್ರಿಕೆಟ್‌ ತಂಡದ ಕೋಚ್‌ ಗೌತಮ್‌ ಗಂಭೀರ್‌ಗೆ ಕೊಲೆ ಬೆದರಿಕೆ Read More »

ಅಪ್ಪನ ಮೃತದೇಹವನ್ನು ಕಂಡು ಕಣ್ಣೀರಿಟ್ಟ ಕಂದಮ್ಮ | ಚಾಕೊಲೇಟ್ ಇದೆ ಎಂದಾಗ ಅಪ್ಪ ಬೇಕು ಎಂದ ಕಂದಮ್ಮ

ಪಶ್ಚಿಮ ಕಾಶ್ಮೀರದ ಪಹಲ್ಗಾಮ್​ನಲ್ಲಿ ಭಯೋತ್ಪಾದಕರು ದಾಳಿ ಮಾಡಿದ್ದು, ಈ ದಾಳಿಯಲ್ಲಿ 30 ಪ್ರವಾಸಿಗರು ಸಾವನ್ನಪಿರುವ ಮಾಹಿತಿ ಈಗಾಗಲೇ ತಿಳಿದುಬಂದಿದೆ. ಹಿಂದೂಗಳನ್ನೇ ಟಾರ್ಗೆಟ್​ ಮಾಡಿ ಭಯೋತ್ಪಾದಕರು ಫೈರಿಂಗ್​ ಮಾಡಿದ್ದು, ಸಾವಿನ ಸಂಖ್ಯೆ ಮತ್ತಷ್ಟು ಹೆಚ್ಚಾಗುವ ಸಾಧ್ಯತೆ ಇದೆ ಎಂದು ಎನ್ನಲಾಗ್ತಿದೆ. ಇನ್ನೂ ಹಲವು ಗಾಯಾಳುಗಳಿಗೆ ಸ್ಥಳೀಯ ಆಸ್ಪತ್ರೆಗಳಲ್ಲಿ ಚಿಕಿತ್ಸೆ ಕೊಡಿಸಲಾಗ್ತಿದೆ. ಇದರ ಮಧ್ಯೆ ಪುಟ್ಟ ಮಗುವೊಂದು ತನ್ನ ತಂದೆಯ ಮೃತದೇಹದ ಮೇಲೆ ಕುಳಿತು ಕಣ್ಣೀರಿಡುವ ಭಾವನಾತ್ಮಕ ದೃಶ್ಯ ಕಂಡು ಬಂದಿದೆ. ತನ್ನ ತಂದೆಯನ್ನ ಕಳೆದುಕೊಂಡು ಕಂದಮ್ಮ ಕಣ್ಣೀರು ಹಾಕಿದೆ.

ಅಪ್ಪನ ಮೃತದೇಹವನ್ನು ಕಂಡು ಕಣ್ಣೀರಿಟ್ಟ ಕಂದಮ್ಮ | ಚಾಕೊಲೇಟ್ ಇದೆ ಎಂದಾಗ ಅಪ್ಪ ಬೇಕು ಎಂದ ಕಂದಮ್ಮ Read More »

ಮಂಗಳೂರಿನ ಬಾಲಕಿಯೋರ್ವಳು  ನಾಪತ್ತೆ | ಪತ್ತೆಗಾಗಿ ಪೋಷಕರ ಮನವಿ..!

ಮಂಗಳೂರು: ಬಾಲಕಿಯೋರ್ವಳು ನಾಪತ್ತೆಯಾದ ಘಟನೆ ಪಕ್ಷಿಕೆರೆಯಲ್ಲಿ ನಡೆದಿದೆ.  ನಾಪತ್ತೆಯಾದವಳು ಸ್ವಾತಿ (17) ಎಂದು ಪತ್ತೆಹಚ್ಚಲಾಗಿದೆ. ಖಾಸಗಿ ಕಾಲೇಜಿನಲ್ಲಿ ಪ್ರಥಮ ವರ್ಷದ ಪದವಿ ಪೂರ್ವ ವಿದ್ಯಾರ್ಥಿನಿಯಾಗಿರುವ ಸ್ವಾತಿ, ರಜಾದಿನಗಳಲ್ಲಿ ಪಕ್ಷಿಕೆರೆಯ ಬಟ್ಟೆ ಅಂಗಡಿಯಲ್ಲಿ ಕೆಲಸ ಮಾಡುತ್ತಿದ್ದಳು. ಅವಳು ಸಾಮಾನ್ಯವಾಗಿ ಬೆಳಿಗ್ಗೆ 9 ಗಂಟೆ ಸುಮಾರಿಗೆ ಮನೆಯಿಂದ ಹೊರಟು ಸಂಜೆ 6 ಗಂಟೆಗೆ ಹಿಂತಿರುಗುತ್ತಿದ್ದಳು. ಆದಾಗ್ಯೂ, ಮಾರ್ಚ್ 25 ರಂದು, ಅಂಗಡಿ ಮಾಲೀಕರು ಬಂದಾಗ ಸ್ವಾತಿ ಕಾಣೆಯಾಗಿದ್ದಾಳೆಂದು ಕಂಡುಕೊಂಡರು. ಆಕೆಯ ಬ್ಯಾಗ್ ಮತ್ತು ಬಟ್ಟೆಗಳು ಅಂಗಡಿಯಲ್ಲಿ ಉಳಿದಿದ್ದವು. ನೆರೆಹೊರೆಯಲ್ಲಿ ವಿಚಾರಿಸಿದಾಗ,

ಮಂಗಳೂರಿನ ಬಾಲಕಿಯೋರ್ವಳು  ನಾಪತ್ತೆ | ಪತ್ತೆಗಾಗಿ ಪೋಷಕರ ಮನವಿ..! Read More »

ಪಕ್ಕಾ ಪ್ಲ್ಯಾನ್‌ ಮಾಡಿ ನಡೆಸಿದ ಉಗ್ರ ದಾಳಿ : ಪ್ರಾಥಮಿಕ ತನಿಖೆಯಲ್ಲಿ ತಿಳಿದುಬಂದ ಮಾಹಿತಿ

ಬಾಡಿ ಕ್ಯಾಮೆರಾ ಧರಿಸಿದ್ದ ಭಯೋತ್ಪಾದಕರು; ರೇಖಾಚಿತ್ರ ಬಿಡುಗಡೆಗೊಳಿಸಿದ ಭದ್ರತಾ ಪಡೆ ಶ್ರೀನಗರ: ಕಾಶ್ಮೀರದ ಪಹಲ್ಗಾಮ್‌ನಲ್ಲಿ ನಡೆದ ಭೀಕರ ಭಯೋತ್ಪಾದಕ ದಾಳಿಯ ಹಿನ್ನೆಲೆಯಲ್ಲಿ ಮತ್ತೆ ನಮ್ಮ ಗುಪ್ತಚರ ವಿಭಾಗ ವಿಫಲವಾಯಿತೇ ಎಂಬ ಪ್ರಶ್ನೆಯೊಂದು ಹುಟ್ಟಿಕೊಂಡಿದೆ. ಈ ದಾಳೀಗೆ ಉಗ್ರರು ಸಾಕಷ್ಟು ಪೂರ್ವ ತಯಾರಿ ಮಾಡಿಕೊಂಡಿದ್ದರು ಎಂಬುದು ಪ್ರಾಥಮಿಕ ತನಿಖೆಯಿಂದ ತಿಳಿದುಬಂದಿದೆ. ಪಾಕಿಸ್ಥಾನಿ ಮತ್ತು ಸ್ಥಳೀಯ ಕಾಶ್ಮೀರಿ ಭಯೋತ್ಪಾದಕರು ಸೇರಿ ಈ ಕೃತ್ಯ ಎಸಗಿದ್ದಾರೆ. 6-8 ಮಂದಿ ಉಗ್ರರು ಈ ಕೃತ್ಯ ಎಸಗಿದ್ದಾರೆ ಎನ್ನಲಾಗುತ್ತಿದೆ. ದಾಳಿ ನಡೆಸುವ ಮೊದಲು ಸಂಪೂರ್ಣ

ಪಕ್ಕಾ ಪ್ಲ್ಯಾನ್‌ ಮಾಡಿ ನಡೆಸಿದ ಉಗ್ರ ದಾಳಿ : ಪ್ರಾಥಮಿಕ ತನಿಖೆಯಲ್ಲಿ ತಿಳಿದುಬಂದ ಮಾಹಿತಿ Read More »

ಇಬ್ಬರು ಉಗ್ರರನ್ನು ಹೊಡೆದುರುಳಿಸಿದ ಸೇನೆ

ಹೊಸದಿಲ್ಲಿ: ಕಾಶ್ಮೀರದ ಪಹಲ್ಗಾಮ್‌ನಲ್ಲಿ 26 ಪ್ರವಾಸಿಗರನ್ನು ಉಗ್ರರು ಗುಂಡಿಕ್ಕಿ ಸಾಯಿಸಿದ ಬೆನ್ನಿಗೆ ಸೇನೆ ಇಬ್ಬರು ಉಗ್ರರನ್ನು ಗಡಿ ರೇಖೆಯ ಬಳಿ ಸಾಯಿಸಿದೆ. ಬಾರಾಮುಲ್ಲಾ ಜಿಲ್ಲೆಯ ಗಡಿ ನಿಯಂತ್ರಣ ರೇಖೆಯ ಬಳಿ ನುಸುಳಿಕೊಂಡು ಬರಲು ಯತ್ನಿಸಿದ್ದ ಉಗ್ರರನ್ನು ಸೇನೆ ಸಾಯಿಸಿದೆ. ಭಾರಿ ಗುಂಡಿನ ಕಾಳಗದ ಬಳಿಕ ಇಬ್ಬರು ಉಗ್ರರನ್ನು ಹೊಡೆದುರುಳಿಸಲಾಗಿದೆ ಎಂದು ಸೇನೆಯ ಮೂಲಗಳು ತಿಳಿಸಿವೆ. ಉಗ್ರರಿಂದ ಅಪಾರ ಪ್ರಮಾಣದ ಮದ್ದುಗುಂಡು, ಬಂದೂಕುಗಳನ್ನು ವಶಪಡಿಸಿಕೊಳ್ಳಲಾಗಿದೆ. ಬಾರಾಮುಲ್ಲಾದ ಉರಿನಾಲಾದ ಸರ್ಜೀವನ್‌ ಎಂಬ ಪ್ರದೇಶದಿಂದ ಮೂವರು ಉಗ್ರರು ಒಳನುಸುಳಲು ಯುತ್ನಿಸಿದ್ದರು. ಓರ್ವ

ಇಬ್ಬರು ಉಗ್ರರನ್ನು ಹೊಡೆದುರುಳಿಸಿದ ಸೇನೆ Read More »

ಮಾದಕವಸ್ತು ಸೇವನೆ ಮಾಡಿದ ಮೂವರು ಆರೋಪಿಗಳು ಅರೆಸ್ಟ್

ಮಣಿಪಾಲ : ಲಾಡ್ಜ್ ಒಂದರಲ್ಲಿ ಮಾದಕ ವಸ್ತು ಸಹಿತ ಮೂವರನ್ನು ಪೊಲೀಸರು ಎ. 22 ಮಂಗಳವಾರದಂದು ಬಂಧಿಸಿರುವ ಘಟನೆ ಮಣಿಪಾಲದ 80 ಬಡಗಬೆಟ್ಟು ಗ್ರಾಮದ ದಶರಥ ನಗರದಲ್ಲಿ ನಡೆದಿದೆ. ಕಾಪುವಿನ ಮಂಚಕಲ್ ಅಜರುದ್ದೀನ್, ಮಹಾರಾಷ್ಟ್ರದ ಪುಣೆಯ ರಾಜೇಶ್ ಪ್ರಕಾಶ್ ಜಾದವ್, ಮತ್ತು ಮಲ್ಪೆಯ ನಾಜೀಲ್ (ಅಶಿಪ್) ಬಂಧಿತ ಆರೋಪಿಗಳು ಎಂದು ಗುರುತಿಸಲಾಗಿದೆ. ಮಾದಕವಸ್ತುವನ್ನು ತೆಗೆದುಕೊಳ್ಳಲು ಉಪಯೋಗಿಸುವ ಸಿರಿಂಜ್‌ಗಳನ್ನು ಹೊಂದಿದ ಬಗ್ಗೆ ಬಂದ ಮಾಹಿತಿ ಆಧರಿಸಿ ಮಣಿಪಾಲ ಠಾಣೆ ಪೊಲೀಸರು ಕಾರ್ಯಾಚರಣೆ ನಡೆಸಿದ್ದಾರೆ. 40 ಸಾವಿರ ರೂ ಮೌಲ್ಯದ

ಮಾದಕವಸ್ತು ಸೇವನೆ ಮಾಡಿದ ಮೂವರು ಆರೋಪಿಗಳು ಅರೆಸ್ಟ್ Read More »

ಆಟೋ ರಿಕ್ಷಾ ಚಾಲಕನೋರ್ವ ರಿಕ್ಷಾ ಸಹಿತ ನಾಪತ್ತೆ

ಪುತ್ತೂರು:  ಬಾಡಿಗೆಗೆಂದು ಹೋದ ರಿಕ್ಷಾ ಚಾಲಕನೋರ್ವ ರಿಕ್ಷಾ ಸಹಿತವಾಗಿ ನಾಪತ್ತೆಯಾದ ಘಟನೆ ನಡೆದಿದೆ. ಪುತ್ತೂರು ರೈಲ್ವೇ ನಿಲ್ದಾಣದ ಬಳಿ ಬಾಡಿಗೆಗೆಂದು ಹೋದ ಸಾಲ್ಮರ ಸೂತ್ರ ಬೆಟ್ಟು ನಿವಾಸಿ ಆಟೋ ರಿಕ್ಷಾ ಚಾಲಕ ಲೋಕೇಶ ಎಂಬವರು ರಿಕ್ಷಾ ಸಮೇತ ನಾಪತ್ತೆಯಾಗಿರುವ ಕುರಿತು ಎ.21ರಂದು ಪುತ್ತೂರು ನಗರ ಪೊಲೀಸ್‌ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಬೆಳಗ್ಗೆ 5.30ಕ್ಕೆ ಪುತ್ತೂರು ರೈಲ್ವೇ ನಿಲ್ದಾಣದಲ್ಲಿ ಬಾಡಿಗೆ ಇದೆ ಎಂದು ಮನೆಯಿಂದ  ಹೋದವರು ಮತ್ತೆ ಮನೆಗೆ ವಾಪಸಾಗಿಲ್ಲವೆಂದು ತಿಳಿದು ಬಂದಿದೆ. ಈ ಘಟನಾ ಕುರಿತು ಇತರ

ಆಟೋ ರಿಕ್ಷಾ ಚಾಲಕನೋರ್ವ ರಿಕ್ಷಾ ಸಹಿತ ನಾಪತ್ತೆ Read More »

ಪಹಲ್ಗಾಮ್‌ ಉಗ್ರ ದಾಳಿ : ಕರ್ನಾಟಕದ ಇನ್ನೋರ್ವ ವ್ಯಕ್ತಿ ಬಲಿ

ಬೆಂಗಳೂರು: ಕಾಶ್ಮೀರದ ಪಹಲ್ಗಾಮ್ ಕಣಿವೆಯಲ್ಲಿ ಉಗ್ರರು ನಡೆಸಿದ ನಡೆದ ಹಿಂದೂಗಳ ನರಮೇಧದಲ್ಲಿ ಬೆಂಗಳೂರಿನ ಮಧುಸೂದನ್‌ ಎಂಬವರು ಬಲಿಯಾಗಿದ್ದು, ಇದರೊಂದಿಗೆ ಕರ್ನಾಟಕದ ಮೂವರು ಸಾವನ್ನಪ್ಪಿರುವುದು ದೃಢವಾಗಿದೆ. ಮೂಲತಃ ಆಂಧ್ರದ ನೆಲ್ಲೂರಿನವರಾದ ಮಧುಸೂದನ್‌ ರಾಮಮೂರ್ತಿ ನಗರದಲ್ಲಿ ವಾಸವಾಗಿದ್ದರು. ಎರಡು ದಿನದ ಹಿಂದೆ ಕಾಶ್ಮೀರಕ್ಕೆ ಕುಟುಂಬ ತೆರಳಿದ್ದರು. ಮಧುಸೂದನ್‌ ಅವರ ಸಾವಿನೊಂದಿಗೆ ಕರ್ನಾಟಕ ಮೂವರು ಉಗ್ರರ ದಾಳಿಗೆ ಬಲಿಯಾಗಿದ್ದಾರೆ. ಈಗಾಗಲೇ ಶಿವಮೊಗ್ಗದ ಮಂಜುನಾಥ್‌ ರಾವ್‌, ಬೆಂಗಳೂರಿನ ಭರತ್‌ ಭೂಷಣ್‌ ಎಂಬವರು ಮೃತಪಟ್ಟಿದ್ದಾರೆ. ವಿಮಾನ ನಿಲ್ದಾಣದಲ್ಲೇ ಮೋದಿ ಸಭೆ ಸೌದಿ ಅರೇಬಿಯಾ ಪ್ರವಾಸವನ್ನು

ಪಹಲ್ಗಾಮ್‌ ಉಗ್ರ ದಾಳಿ : ಕರ್ನಾಟಕದ ಇನ್ನೋರ್ವ ವ್ಯಕ್ತಿ ಬಲಿ Read More »

error: Content is protected !!
Scroll to Top