ಅಪರಾಧ

ಹತ್ತು ವರ್ಷಗಳಿಂದ ಪರಾರಿಯಾಗಿದ್ದ ಆರೋಪಿ ಕುಂದಾಪುರ ಪೊಲೀಸರ ಬಲೆಗೆ

ಕುಂದಾಪುರ: ವರದಕ್ಷಿಣೆ ಕಿರುಕುಳ ಪ್ರಕರಣಕ್ಕೆ ಸಂಬಂಧಿಸಿದ ಹೀಗೆ ಹತ್ತು ವರ್ಷಗಳಿಂದ ಚಳ್ಳೆಹಣ್ಞು ತಿನ್ನಿಸಿ ನಾಪತ್ತೆಯಾಗಿದ್ದ ಆರೋಪಿ ಪಶ್ಚಿಮ ಬಂಗಾಳದಲ್ಲಿ ಕುಂದಾಪುರ ಪೊಲೀಸರಿಗೆ ಅತಿಥಿಯಾಗಿದ್ದಾನೆ. ಆರೋಪಿಯನ್ನು ಸಿದ್ದಾಪುರ ಗ್ರಾಮದ ಅಕ್ಕುಂಜೆಯ ಶಶಿಕಾಂತ ಶೆಟ್ಟಿ (44) ಎಂದು ಗುರುತಿಸಲಾಗಿದೆ. ಕುಂದಾಪುರದ ಯುವತಿಯ ಜೊತೆಗೆ 2015 ರಲ್ಲಿ ಆರೋಪಿ ಶಶಿಕಾಂತ ಶೆಟ್ಟಿ ಮದುವೆಯಾಗಿದ್ದು, ವರದಕ್ಷಿಣೆಗೆ ಸಂಬಂಧಿಸಿದ ಹಾಗೆ ಈ ಮದುವೆ ಮುರಿದು ಬಿದ್ದಿತ್ತು. ಅದರಂತೆ ಆತನ ಪತ್ನಿ ನೀಡಿದ ದೂರಿನನ್ವಯ ಕುಂದಾಪುರ ಪೊಲೀಸರು ದೂರು ದಾಖಲಿಸಿಕೊಂಡಿದ್ದರು. ಆದರೆ ಆತ ತಲೆಮರೆಸಿಕೊಂಡಿದ್ದ. ಸದ್ಯ […]

ಹತ್ತು ವರ್ಷಗಳಿಂದ ಪರಾರಿಯಾಗಿದ್ದ ಆರೋಪಿ ಕುಂದಾಪುರ ಪೊಲೀಸರ ಬಲೆಗೆ Read More »

ಗುಂಡಿನ ದಾಳಿಯಲ್ಲಿ ಭಾರತೀಯ ಮೂಲದ ವಿದ್ಯಾರ್ಥಿನಿ ಹತ: ಇರಾನ್ ಸಂಚಿದೆಯೇ ‌ಎಂಬ ನೆಲೆಯಲ್ಲಿ ತನಿಖೆ

ಟೆಕ್ಸಾಸ್: ಕಳೆದ ಭಾನುವಾರ ಆಸ್ಟಿನ್‌ನಲ್ಲಿ ‌ನಡೆದ ಗುಂಡಿನ ದಾಳಿಯಲ್ಲಿ ಭಾರತ ಮೂಲದ ವಿದ್ಯಾರ್ಥಿನಿ ‌ಸಹ ಬಲಿಯಾಗಿದ್ದು, ಒಟ್ಟು ಸಾವಿನ ಸಂಖ್ಯೆ ನಾಲ್ಕಕ್ಕೇರಿದೆ. ಟೆಕ್ಸಾಸ್ ವಿವಿಯ ವಿದ್ಯಾರ್ಥಿನಿ ‌ಸವಿತಾ ಷಣ್ಮುಗ ಸುಂದರಂ ಮೃತ ವಿದ್ಯಾರ್ಥಿನಿ.‌ ದಾಳಿ ಮಾಡಿದ ಬಂದೂಕುದಾರಿಯನ್ನು ಹತ್ಯೆ ಮಾಡಲಾಗಿದ್ದು, ಈ ದಾಳಿ ಸಂಭಾವ್ಯ ಭಯೋತ್ಪಾದಕ ದಾಳಿ ಎಂಬ ನೆಲೆಯಲ್ಲಿ ಎಫ್‌ಬಿಐ ತನಿಖೆ ಮಾಡುತ್ತಿದೆ. ಇರಾನ್ ಸಂಘರ್ಷ ಮತ್ತು ಈ ದಾಳಿಗೆ ಏನಾದರೂ ಸಂಪರ್ಕ ಇದೆಯೇ? ಎನ್ನುವ ನಿಟ್ಟಿನಲ್ಲಿಯೂ ತನಿಖೆ ನಡೆಯುತ್ತಿದೆ ಎಂದು ತಿಳಿದು ಬಂದಿದೆ. ಮೇ

ಗುಂಡಿನ ದಾಳಿಯಲ್ಲಿ ಭಾರತೀಯ ಮೂಲದ ವಿದ್ಯಾರ್ಥಿನಿ ಹತ: ಇರಾನ್ ಸಂಚಿದೆಯೇ ‌ಎಂಬ ನೆಲೆಯಲ್ಲಿ ತನಿಖೆ Read More »

ಪುತ್ತೂರು: ಪಿಸ್ತೂಲು ತೋರಿಸಿ ಬೆದರಿಸಿದ ಅಪರಿಚಿತ ವ್ಯಕ್ತಿ

ಪುತ್ತೂರು: ಬೈಕ್‌ನಲ್ಲಿ ಬಂದ ವ್ಯಕ್ತಿ ದರ್ಬೆ ಸಮೀಪ ವ್ಯಕ್ತಿಯೊಬ್ಬರಿಗೆ ಪಿಸ್ತೂಲ್ ತೋರಿಸಿ ಬೆದರಿಕೆಯೊಡ್ಡಿರುವ ಕುರಿತು ಪುತ್ತೂರು ನಗರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಕೂರ್ನಡ್ಕ ನಿವಾಸಿ ಅಬ್ದುಲ್ ಹಕೀಂ ದೂರು ನೀಡಿದವರು. ಅವರು ದರ್ಬೆಯಲ್ಲಿ ಕಾರು ನಿಲ್ಲಿಸಿ ರಿಕ್ಷಾ ಚಾಲಕರ ಮಧ್ಯೆ ನಡೆದ ಮಾತಿನ ಚಕಮಕಿಯನ್ನು ಸಮಾಧಾನಿಸಿ ಹಿಂದಿರುಗಿ ಹೊರಡುವ ಸಂದರ್ಭ ದ್ವಿಚಕ್ರ ವಾಹನದಲ್ಲಿ ಹೆಲ್ಮೆಟ್ ಧರಿಸದೆ ಬಂದ ಅಪರಿಚಿತ ವ್ಯಕ್ತಿ ಪಿಸ್ತೂಲ್ ತೋರಿಸಿ ಬೆದರಿಸಿದಾಗ ಹಕೀಂ ಮತ್ತು ಇತರರು ಸೇರಿ ಆತನನ್ನು ಹಿಡಿಯಲು ಹೋದಾಗ ವ್ಯಕ್ತಿ ಬೈಕ್‌

ಪುತ್ತೂರು: ಪಿಸ್ತೂಲು ತೋರಿಸಿ ಬೆದರಿಸಿದ ಅಪರಿಚಿತ ವ್ಯಕ್ತಿ Read More »

18 ಕೋ. ರೂ. ಮೌಲ್ಯದ ಡ್ರಗ್ಸ್‌ ವಶ : ಪ್ರೇಮಿಗಳ ಬಂಧನ

ಡ್ರಗ್ಸ್‌ ದಂಧೆಯಲ್ಲಿ ತೊಡಗಿದ್ದ ಕೇರಳದ ಲಿವ್‌ ಇನ್‌ ರಿಲೇಷನ್‌ ಪ್ರೇಮಿಗಳು ಬೆಂಗಳೂರು: ಬೆಂಗಳೂರಿನಲ್ಲಿ ಡ್ರಗ್ಸ್ ದಂಧೆಯಲ್ಲಿ ತೊಡಗಿದ್ದ ಪ್ರೇಮಿಗಳನ್ನು ಬಂಧಿಸಿ 18 ಕೋಟಿ ರೂಪಾಯಿ ಮೌಲ್ಯದ ಮಾದಕ ವಸ್ತುಗಳನ್ನು ಪೊಲೀಸರು ವಶಪಡಿಸಿಕೊಂಡಿದ್ದಾರೆ. ಅಪಾರ್ಟ್‌ಮೆಂಟ್‌ನಲ್ಲಿ ಲಿವ್-ಇನ್ ರಿಲೇಶನ್‌ನಲ್ಲಿದ್ದ ಕೇರಳ ಮೂಲದ ಅಶ್ವಿನ್ ಹಾಗೂ ಮುಬೀನಾ ಬಂಧಿತ ಆರೋಪಿಗಳು. ನಗರದ ಖಾಸಗಿ ಕಾಲೇಜಿನಲ್ಲಿ ಬಿಬಿಎ ಓದುತ್ತಿದ್ದಾಗ ಇವರಿಬ್ಬರ ನಡುವೆ ಪ್ರೇಮಾಂಕುರವಾಗಿತ್ತು. ಇದೇ ನಂಟು ಡ್ರಗ್ಸ್‌ ಮಾರಾಟ ಜಾಲಕ್ಕೂ ಕರೆತಂದಿತ್ತು. ಅಪಾರ್ಟ್‌ಮೆಂಟ್‌ ಫ್ಲ್ಯಾಟ್‌ನಲ್ಲಿ ಸಹಜೀವನ ನಡೆಸುತ್ತಿದ್ದ ಅಶ್ವಿನ್‌ ಮತ್ತು ಮುಬೀನಾ ಸುಲಭವಾಗಿ

18 ಕೋ. ರೂ. ಮೌಲ್ಯದ ಡ್ರಗ್ಸ್‌ ವಶ : ಪ್ರೇಮಿಗಳ ಬಂಧನ Read More »

ಇನ್‌ಸ್ಟಾಗ್ರಾಂನಲ್ಲಿ ಖಮೇನಿ ಹತ್ಯೆ ಕುರಿತು ಪೋಸ್ಟ್‌ ಹಾಕಿದ ಹಿಂದೂ ಯುವಕನ ಮೇಲೆ ಹಲ್ಲೆ

ಅಂಗಡಿಗೆ ನುಗ್ಗಿ ಹಲ್ಲೆ ಮಾಡಿ ಜೀವ ಬೆದರಿಕೆ ಹಾಕಿದ ತಂಡ ಬೆಂಗಳೂರು: ಅಮೆರಿಕ ಮತ್ತು ಇಸ್ರೇಲ್​ ಕ್ಷಿಪಣಿ ದಾಳಿಯಲ್ಲಿ ಇರಾನ್‌ನ ಪರಮೋಚ್ಚ ನಾಯಕ ಅಯತೊಲ್ಲಾ ಅಲಿ ಖಮೇನಿ ಹತ್ಯೆಗೀಡಾದ ಕುರಿತಾಗಿ ಇನ್‌ಸ್ಟಾಗ್ರಾಂನಲ್ಲಿ ಸ್ಟೋರಿ ಹಾಕಿದ ಕಾರಣಕ್ಕೆ ಮುಸ್ಲಿಂ ಯುವಕರು ಹಿಂದೂ ಯುವಕನ ಮೇಲೆ ಹಲ್ಲೆ ಮಾಡಿರುವ ಘಟನೆ ಕೊಪ್ಪಳ ಜಿಲ್ಲೆಯ ಗಂಗಾವತಿ ನಗರದಲ್ಲಿ ನಡೆದಿದೆ. ಚಂದ್ರಶೇಖರ ಎಂಬವರ ಮೇಲೆ ಐದಾರು ಮುಸ್ಲಿಂ ಯುವಕರು ಹಲ್ಲೆ ಮಾಡಿದ್ದಾರೆ. ಚಂದ್ರಶೇಖರ ಖರ್ಜೂರ ವ್ಯಾಪಾರಿಯಾಗಿದ್ದು, ವ್ಯಾಪಾರ ಮಾಡುತ್ತಿದ್ದ ವೇಳೆ ಏಕಾಏಕಿ‌ ಬಂದ

ಇನ್‌ಸ್ಟಾಗ್ರಾಂನಲ್ಲಿ ಖಮೇನಿ ಹತ್ಯೆ ಕುರಿತು ಪೋಸ್ಟ್‌ ಹಾಕಿದ ಹಿಂದೂ ಯುವಕನ ಮೇಲೆ ಹಲ್ಲೆ Read More »

ಉಡುಪಿ: ಪ್ರೇಮ ಪ್ರಕರಣದ ರಾಜಿ ಪಂಚಾಯಿತಿ ನಡೆಸುತ್ತಿದ್ದ ಮುಖಂಡನ ಮೇಲೆ ಚಾಕುವಿನಿಂದ ಹಲ್ಲೆ

ಉಡುಪಿ: ಪ್ರೇಮ ಪ್ರಕರಣದ ರಾಜಿ ಪಂಚಾಯಿತಿ ನಡೆಸುತ್ತಿದ್ದ ಸ್ಥಳೀಯ ಮೀನುಗಾರರ ಮುಖಂಡನಿಗೆ ಚಾಕುವಿನಿಂದ ಇರಿದ ಘಟನೆ ಉಡುಪಿ ಸಮೀಪ ಮಲ್ಪೆಯಲ್ಲಿ ನಡೆದಿದೆ. ಮಂಜು ಕೊಳ ಯಾನೆ ಮಂಜುನಾಥ ಸಾಲಿಯಾನ್ ಚಾಕು ಇರಿತಕ್ಕೊಳಗಾದ ಮೀನುಗಾರರ ಮುಖಂಡ. ಮಲ್ಪೆಯ ಯುವಕನ ಜೊತೆ ಪಡುಬಿದ್ರಿ ಪಲಿಮಾರು ಪರಿಸರದ ಯುವತಿಯ ಪ್ರೇಮ ಪ್ರಕರಣದ ಕುರಿತು ಮಾತುಕತೆಗೆ ಬಂದಿದ್ದ ಯುವತಿಯ ಕಡೆಯವರು ಮೀನುಗಾರ ಮುಖಂಡನಿಗೆ ಚಾಕುವಿನಿಂದ ಇರಿದಿದ್ದಾರೆ. ಗಾಯಾಳು ಮಂಜು ಕೊಳ ಖಾಸಗಿ ಆಸ್ಪತ್ರೆಗೆ ದಾಖಲಾಗಿದ್ದು, ಗಂಭೀರ ಗಾಯಗಳಿಲ್ಲದೆ ಅಪಾಯದಿಂದ ಪಾರಾಗಿದ್ದಾರೆ. ಇರಿದ ಆರೋಪಿಗಳನ್ನು

ಉಡುಪಿ: ಪ್ರೇಮ ಪ್ರಕರಣದ ರಾಜಿ ಪಂಚಾಯಿತಿ ನಡೆಸುತ್ತಿದ್ದ ಮುಖಂಡನ ಮೇಲೆ ಚಾಕುವಿನಿಂದ ಹಲ್ಲೆ Read More »

ಲಂಚ ಸ್ವೀಕಾರ : ಎಎಸ್‌ಐ, ಪಿಎಸ್‌ಐ ಲೋಕಾಯುಕ್ತ ಬಲೆಗೆ

ಬಿ ರಿಪೋರ್ಟ್‌ ಸಲ್ಲಿಸಲು 1 ಲ.ರೂ. ಕೇಳಿದ್ದ ಪೊಲೀಸರು ಬೆಂಗಳೂರು: ಪ್ರಕರಣವೊಂದರ ಬಿ ರಿಪೋರ್ಟ್ ಸಲ್ಲಿಕೆಗೆ 70 ಸಾವಿರ ಲಂಚ ಪಡೆದ ಪ್ರಕರಣದಲ್ಲಿ ಎಎಸ್‌ಐ ಮತ್ತು ಪಿಎಸ್‌ಐಯನ್ನು ಲೋಕಾಯುಕ್ತ ಪೊಲೀಸರು ಬಂಧಿಸಿದ ಘಟನೆ ಚಿಕ್ಕಬಳ್ಳಾಪುರದಲ್ಲಿ ನಡೆದಿದೆ. ಚಿಕ್ಕಬಳ್ಳಾಪುರ ಗ್ರಾಮಾಂತರ ಪೊಲೀಸ್ ಠಾಣೆಯ ಪಿಎಸ್ಐ ಶರಣಪ್ಪ ಹಾಗೂ ಎಎಸ್‌ಐ ವೆಂಕಟೇಶ್ ಅವರನ್ನು ಚಿಕ್ಕಬಳ್ಳಾಪುರ ಲೋಕಾಯುಕ್ತ ಪೊಲೀಸರು ಬಂಧಸಿ ವಿಚಾರಣೆ ಮುಂದುವರಿಸಿದ್ದಾರೆ. ಚಿಕ್ಕಬಳ್ಳಾಪುರ ತಾಲೂಕಿನ ಮೋಟಲೂರು ಗ್ರಾಮದ ರಘು ಎಂಬವರ ಬಳಿ ಪ್ರಕರಣ ಒಂದರ ಬಿ ರಿಪೋರ್ಟ್ ಸಲ್ಲಿಕೆಗಾಗಿ 1

ಲಂಚ ಸ್ವೀಕಾರ : ಎಎಸ್‌ಐ, ಪಿಎಸ್‌ಐ ಲೋಕಾಯುಕ್ತ ಬಲೆಗೆ Read More »

ಶೀಲ ಶಂಕಿಸಿ ಪತ್ನಿಯನ್ನು ಬರ್ಬರವಾಗಿ ಕೊಂದ ಪಾಪಿ ಪತಿ

ಬೀದರ್: ಪತ್ನಿಗೆ ಅನೈತಿಕ ಸಂಬಂಧ ಇರುವ ಸಂದೇಹದಲ್ಲಿ ಗಂಡನೊಬ್ಬ ಆಕೆಯ ಮೇಲೆ ಕಲ್ಲು ಎತ್ತಿ ಹಾಕಿ ಬರ್ಬರವಾಗಿ ‌ಹತ್ಯೆ ಮಾಡಿದ ಘಟನೆ ಮನ್ನಳ್ಳಿ ಗ್ರಾಮದಲ್ಲಿ ನಡೆದಿದೆ. ಮೃತ ಮಹಿಳೆಯನ್ನು ಅಶ್ವಿನಿ(28) ಎಂದು ಗುರುತಿಸಲಾಗಿದೆ. ಕಿಶನ್ ಎಂಬವನೇ ಆರೋಪಿ. ಕಿಶನ್ ಮಹಾರಾಷ್ಟ್ರದ ಡಾಬಾ ಒಂದರಲ್ಲಿ ಕೆಲಸ ಮಾಡುತ್ತಿದ್ದ. ಅಶ್ವಿನಿ ಮೂವರು ಮಕ್ಕಳ ಜೊತೆಗೆ ಮನ್ನಳ್ಳಿಯಲ್ಲೇ ವಾಸವಿದ್ದಳು. ಕಿಶನ್ ತನ್ನ ಪತ್ನಿಗೆ ಅಕ್ರಮ ಸಂಬಂಧ ಇದೆ ಎಂದು ಹೇಳಿ ಪ್ರತಿನಿತ್ಯ ಆಕೆಯ ಜೊತೆಗೆ ಜಗಳವಾಡುತ್ತಿದ್ದ. ಬೇರೊಬ್ಬ ವ್ಯಕ್ತಿಯ ಜೊತೆ ಆಕೆ

ಶೀಲ ಶಂಕಿಸಿ ಪತ್ನಿಯನ್ನು ಬರ್ಬರವಾಗಿ ಕೊಂದ ಪಾಪಿ ಪತಿ Read More »

ಘನಘೋರ ಸಮರ : ಇರಾನ್‌ನಲ್ಲಿ ಮಕ್ಕಳ ಸಹಿತ 700ಕ್ಕೂ ಅಧಿಕ ಮಂದಿ ಸಾವು

ತೀವ್ರಗೊಂದ ಸೇನಾ ಕಾರ್ಯಾಚರಣೆ, ಮಿಸೈಲ್‌, ಡ್ರೋನ್‌, ಫೈಟರ್‌ ವಿಮಾನಗಳ ಆರ್ಭಟ ಟೆಹ್ರಾನ್‌ : ಇದು ಸದ್ಯಕ್ಕೆ ಮುಗಿಯುವ ಯುದ್ಧವಲ್ಲ ಎಂದು ಅಮೆರಿಕ ಅಧ್ಯಕ್ಷ ಡೊನಾಲ್ಡ್‌ ಟ್ರಂಪ್‌ ಹೇಳಿದ ಬೆನ್ನಿಗೆ ಅಮೆರಿಕ ಹಾಗೂ ಇಸ್ರೇಲ್ ಸೇನೆಗಳು ಇರಾನ್ ಮೇಲಿನ ಯುದ್ಧವನ್ನು ತೀವ್ರಗೊಳಿಸಿದ್ದು, ಹಲವು ತಾಣಗಳನ್ನು ಗುರಿಯಾಗಿಸಿ ಬಾಂಬ್ ಹಾಗೂ ಕ್ಷಿಪಣಿ ದಾಳಿ ನಡೆಸಿವೆ. ಇರಾನ್ ಕೂಡ ಪ್ರತೀಕಾರದ ದಾಳಿ ಮುಂದುವರಿಸಿರುವುದರಿಂದ ಪಶ್ಚಿಮ ಏಷ್ಯಾದಲ್ಲಿ ಉದ್ವಿಗ್ನತೆ ಮತ್ತಷ್ಟು ಹೆಚ್ಚಾಗುತ್ತಿದೆ. ಗಲ್ಫ್‌ ರಾಷ್ಟ್ರಗಳ ಮೇಲಿನ ದಾಳಿಯನ್ನು ಇರಾನ್‌ ಮುಂದುವರಿಸಿದೆ. ಇರಾನ್‌ನ ಕ್ಷಿಪಣಿ

ಘನಘೋರ ಸಮರ : ಇರಾನ್‌ನಲ್ಲಿ ಮಕ್ಕಳ ಸಹಿತ 700ಕ್ಕೂ ಅಧಿಕ ಮಂದಿ ಸಾವು Read More »

ಇನ್‌ಸ್ಟಾಗ್ರಾಂನಲ್ಲಿ ಪ್ರಚೋದನಕಾರಿ ಪೋಸ್ಟ್‌ ಹಾಕಿದವನ ವಿರುದ್ಧ ದೂರು

ಮಂಗಳೂರು: ಇನ್‌ಸ್ಟಾಗ್ರಾಂನಲ್ಲಿ ಬಾಂಬ್ ಸ್ಫೋಟದ ಬೆದರಿಕೆ ಹಾಕಿದ ಪ್ರಕರಣಕ್ಕೆ ಸಂಬಂಧಿಸಿ ಉಳ್ಳಾಲ ಪೊಲೀಸ್ ಠಾಣೆಯಲ್ಲಿ ಸ್ವಯಂಪ್ರೇರಿತ ಪ್ರಕರಣ ದಾಖಲಾಗಿದೆ. ಉಳ್ಳಾಲ ಪೊಲೀಸ್ ಠಾಣೆಯ ಪೊಲೀಸ್ ಅಧಿಕಾರಿ ಸಂತೋಷ್ ದೊಡ್ಡಮನಿ ಅವರು ಮಾರ್ಚ್ 2ರಂದು ಬೆಳಗ್ಗೆ 11 ಗಂಟೆಯ ಸುಮಾರಿಗೆ ಸೋಶಿಯಲ್ ಮೀಡಿಯಾ ಮಾನಿಟರಿಂಗ್ ಕರ್ತವ್ಯ ನಿರ್ವಹಿಸುತ್ತಿದ್ದರು. ಈ ವೇಳೆ ಇನ್‌ಸ್ಟಾಗ್ರಾಂ ಪರಿಶೀಲಿಸುವಾಗ ಸುಹಾಸ್ ಶೆಟ್ಟಿ ಎಂಬಾತನ ಫೋಟೋ ಹೊಂದಿದ್ದ ಪೋಸ್ಟ್‌ಗೆ “shankar11916 Support maadi bro ullal masjid hatra bomb blast madtini (ಉಳ್ಳಾಲ ದರ್ಗಾ

ಇನ್‌ಸ್ಟಾಗ್ರಾಂನಲ್ಲಿ ಪ್ರಚೋದನಕಾರಿ ಪೋಸ್ಟ್‌ ಹಾಕಿದವನ ವಿರುದ್ಧ ದೂರು Read More »

error: Content is protected !!
Scroll to Top