ಪಾದ್ರಿಯಿಂದ ಹಲ್ಲೆಗೊಳಗಾದ ದಂಪತಿಗೆ ಸಮುದಾಯದಿಂದ ಬಹಿಷ್ಕಾರ | ಪತ್ರಿಕಾಗೋಷ್ಠಿಯಲ್ಲಿ ಸಂತ್ರಸ್ತ ಗ್ರೆಗೊರಿ ಮೊಂಥೆರೊ
ಮಂಗಳೂರು: ದಕ್ಷಿಣ ಕನ್ನಡ ಜಿಲ್ಲೆಯ ಬಂಟ್ವಾಳ ತಾಲೂಕಿನ ಪರಿಯಾಲತಡ್ಕ ಗ್ರಾಮದಲ್ಲಿ ಮಾರ್ಚ್ ಮೊದಲ ವಾರದಲ್ಲಿ ನಡೆದ ಚರ್ಚ್ನ ಪಾದ್ರಿಯೊಬ್ಬರಿಂದ ಹಲ್ಲೆಗೊಳಗಾದ ವೃದ್ಧ ದಂಪತಿಯನ್ನು ಗ್ರಾಮದ ಕ್ರೈಸ್ತ ಸಮುದಾಯ ಬಹಿಷ್ಕರಿಸಿದೆ ಎಂದು ಆರೋಪಿಸಲಾಗಿದೆ. ಮಂಗಳೂರಿನಲ್ಲಿ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಹಲ್ಲೆಗೊಳಗಾದ ಗ್ರೆಗೊರಿ ಮೊಂಥೆರೊ ಹಾಗೂ ಫಿಲೋಮಿನಾ ಕೊಯೆಲೊ ಚರ್ಚ್ ಪಾದ್ರಿ ಫಾದರ್ ನೆಲ್ಸನ್ ಒಲಿವೆರಾ, ಹಲ್ಲೆ ನಡೆಸಿದವರ ವಿರುದ್ಧ ದೂರು ನೀಡಿದ ಕೂಡಲೇ ಕಿರುಕುಳ ಆರಂಭವಾಗಿದೆ. ಮೊದಲಿಗೆ ಚರ್ಚ್ಗೆ ಸಂಪರ್ಕ ಹೊಂದಿದ ಎಲ್ಲ ವಾಟ್ಸಾಪ್ ಗುಂಪುಗಳಿಂದ ನಮ್ಮನ್ನು ತೆಗೆದುಹಾಕಲಾಯಿತು. ನಂತರ […]










