ಅಪರಾಧ

ತಮಿಳುನಾಡು ಮೂಲದ ನಟೋರಿಯಸ್ ಕಳ್ಳಿಯ ಬಂಧನ | ಆರು ಲಕ್ಷ ರೂ. ಮೌಲ್ಯದ ಚಿನ್ನಾಭರಣ ವಶಕ್ಕೆ

ಪುತ್ತೂರು: ತಮಿಳುನಾಡು ಮೂಲದ ಅಂತರ್ ರಾಜ್ಯ ನಟೋರಿಯಸ್ ಕಳ್ಳಿಯೊಬ್ಬಗಳನ್ನು ಪುತ್ತೂರು ನಗರ ಠಾಣಾ ಪೊಲೀಸರು ಬಂಧಿಸಿದ್ದಾರೆ. ತಮಿಳುನಾಡು ಮೂಲದ ಈಸ್ವರಿ (45) ಬಂಧಿತ ಆರೋಪಿಯಾಗಿದ್ದು, ಈಕೆಯಿಂದ ಸುಮಾರು ಆರು ಲಕ್ಷ ರೂ. ಮೌಲ್ಯದ ಚಿನ್ನಾಭರಣವನ್ನು ಪೊಲೀಸರು ವಶಪಡಿಸಿಕೊಂಡಿದ್ದಾರೆ. ಕಳೆದ ಫೆ.12 ರಂದು ಪುತ್ತೂರು ನಗರದ ಕೆಎಸ್‍ ಆರ್‍ ಟಿಸಿ ಬಸ್ ನಿಲ್ದಾಣದಲ್ಲಿ ರೇಷ್ಮಾ ಎನ್. (41) ಎಂಬವರ ಬ್ಯಾಗಿನಲ್ಲಿದ್ದ ಚಿನ್ನಾಭರಣಗಳನ್ನು ಕಳ್ಳರು ಕಳವುಗೈದಿದ್ದರು. ಈ ಕುರಿತು ರೇಷ್ಮಾ ಅವರು ಪುತ್ತೂರು ನಗರ ಠಾಣೆಗೆ ದೂರು ನೀಡಿದ್ದು, ಪ್ರಕರಣ […]

ತಮಿಳುನಾಡು ಮೂಲದ ನಟೋರಿಯಸ್ ಕಳ್ಳಿಯ ಬಂಧನ | ಆರು ಲಕ್ಷ ರೂ. ಮೌಲ್ಯದ ಚಿನ್ನಾಭರಣ ವಶಕ್ಕೆ Read More »

ಅಕ್ರಮ ಮದ್ಯ ದಾಸ್ತಾನಿರಿಸಿ ಮಾರಾಟ | ಓರ್ವ ಆರೋಪಿ ಬಂಧನ

ಪುತ್ತೂರು: ಅಕ್ರಮ ಮದ್ಯ ದಾಸ್ತಾನಿರಿಸಿ ಮಾರಾಟ ಮಾಡುತ್ತಿದ್ದ ಸಂದರ್ಭ ದಾಳಿ ನಡೆಸಿದ ಪೊಲೀಸರು ಓರ್ವವನ್ನು ಬಂಧಿಸಿದ ಘಟನೆ ತಾಲೂಕಿನ ಇರ್ದೆ ಗ್ರಾಮದ ಮೇರ್ವೆಯಲ್ಲಿ ಶನಿವಾರ ನಡೆದಿದೆ. ಹುಕ್ರಪ್ಪ ಪೂಜಾರಿ ಬಂಧಿತ ಆರೋಪಿ. ಹುಕ್ರಪ್ಪ ಪೂಜಾರಿ ತನ್ನ ಮನೆಯ ಖಾಲಿ ಜಾಗದಲ್ಲಿ ಅಕ್ರಮವಾಗಿ ಮಧ್ಯ ದಾಸ್ತಾನಿರಿಸಿ ಮಾರಾಟ ಮಾಡುತ್ತಿದ್ದದ್ದನ್ನು ಮಾಹಿತಿ ಮೇರೆಗೆ ಪುತ್ತೂರು ಗ್ರಾಮಾಂತರ ಪೊಲೀಸರು ದಾಳಿ ನಡೆಸಿ ಸ್ಥಳದಲ್ಲಿದ್ದ ತಲಾ 90 ಎಂಎಲ್‍ ಮದ್ಯ ತುಂಬಿದ 49 ಸ್ಯಾಚೆಟ್‍ ಗಳು, 100 ರೂ. ನಗದು ವಶಪಡಿಸಿಕೊಂಡು ಆರೋಪಿಯನ್ನು

ಅಕ್ರಮ ಮದ್ಯ ದಾಸ್ತಾನಿರಿಸಿ ಮಾರಾಟ | ಓರ್ವ ಆರೋಪಿ ಬಂಧನ Read More »

ಮಾಸ್ಕೋದಲ್ಲಿ ಉಗ್ರರ ದಾಳಿ ಖಂಡನೀಯ : ನಿಮ್ಮೊಂದಿಗೆ ನಾವಿದ್ದೇವೆ | ಪ್ರಧಾನಿ ನರೇಂದ್ರ ಮೋದಿಯಿಂದ ಟ್ವೀಟ್

ರಷ್ಯಾದ ಮಾಸ್ಕೋದಲ್ಲಿ ರಾಕ್‍ ಮ್ಯೂಸಿಕ್ ನಡೆಯುವ ಸಂದರ್ಭ ನಡೆಸಿದ ಉಗ್ರರ ದಾಳಿಯನ್ನು ಭಾರತ ಪ್ರಧಾನಿ ನರೇಂದ್ರ ಮೋದಿ ಖಂಡಿಸಿದ್ದು,  ರಷ್ಯಾದ ಜೊತೆ ನಾವಿದ್ದೇವೆ ಎಂದು ಟ್ವೀಟ್ ಮಾಡಿದ್ದಾರೆ. ಶುಕ್ರವಾರ ರಷ್ಯಾದ ಮಾಸ್ಕೋದ ಮಾಲ್ ಒಂದರದಲ್ಲಿ ಸಂಗೀತ ಕಾರ್ಯಕ್ರಮ ನಡೆಸುತ್ತಿದ್ದ ವೇಳೆ ಏಕಾಏಕಿ ಉಗ್ರರು ಭದ್ರತಾ ಸಿಬ್ಬಂದಿಗಳು ಕೊಂದು ಸಂಗೀತ ಕಾರ್ಯಕ್ರಮದಲ್ಲಿ ಪಾಲ್ಗೊಂಡಿದ್ದ ಮಕ್ಕಳು, ಮಹಿಳೆಯರು ಎನ್ನದೆ ಗುಂಡಿನ ದಾಳಿ ನಡೆಸಿದ್ದಾರೆ. ಈ ಘಟನೆ ಸುಮಾರು 70 ಕ್ಕೂ ಅಧಿಕ ಮಂದಿ ಹತರಾಗಿದ್ದು, 150 ಕ್ಕೂ ಅಧಿಕ ಮಂದಿ

ಮಾಸ್ಕೋದಲ್ಲಿ ಉಗ್ರರ ದಾಳಿ ಖಂಡನೀಯ : ನಿಮ್ಮೊಂದಿಗೆ ನಾವಿದ್ದೇವೆ | ಪ್ರಧಾನಿ ನರೇಂದ್ರ ಮೋದಿಯಿಂದ ಟ್ವೀಟ್ Read More »

ತಮಕೂರಿನಲ್ಲಿ ಸುಟ್ಟ ಕಾರಿನಲ್ಲಿ ಮೂವರ ಶವ ಪತ್ತೆ | ಪ್ರಕರಣಕ್ಕೆ ಸಂಬಂಧಿಸಿ ಆರು ಮಂದಿ ಪೊಲೀಸರ ವಶಕ್ಕೆ

ತುಮಕೂರು: ಸುಟ್ಟು ಕರಕಲಾದ ಕಾರಿನಲ್ಲಿ ಮೂವರ ಶವ ಪತ್ತೆಯಾದ ಪ್ರಕರಣಕ್ಕೆ ಸಂಬಂಧಿಸಿದಂತೆ ಆರು ಮಂದಿ ಆರೋಪಿಗಳನ್ನು ಕೋರಾ ಪೊಲೀಸರು ವಶಕ್ಕೆ ಪಡೆದುಕೊಂಡು ವಿಚಾರಣೆ ನಡೆಸುತ್ತಿದ್ದಾರೆ. ಪ್ರಕರಣದ ಪ್ರಮುಖ ಆರೋಪಿ ತುಮಕೂರಿನ ಸ್ವಾಮಿ ಸಹಿತ ಇತರ ಐದು ಮಂದಿಯನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ. ಶುಕ್ರವಾರ ತುಮಕೂರಿನ ಕೆರೆಯೊಂದರ ಬಳಿ ಸುಟ್ಟು ಕರಕಲಾದ ಕಾರಿನಲ್ಲಿ ಬೆಳ್ತಂಗಡಿ ಮೂಲದ ಆಟೋ ಚಾಲಕ ಸಾಹುಲ್ ಹಮೀದ್ (45), ಕುವೆಟ್ಟು ಗ್ರಾಮದ ಮದ್ದಡ್ಕ ನಿವಾಸಿ ಇಸಾಕ್ (56) ಹಾಗೂ ಶಿರ್ಲಾಲು ಗ್ರಾಮದ ಸಿದ್ದಿಕ್ (34)

ತಮಕೂರಿನಲ್ಲಿ ಸುಟ್ಟ ಕಾರಿನಲ್ಲಿ ಮೂವರ ಶವ ಪತ್ತೆ | ಪ್ರಕರಣಕ್ಕೆ ಸಂಬಂಧಿಸಿ ಆರು ಮಂದಿ ಪೊಲೀಸರ ವಶಕ್ಕೆ Read More »

ರಷ್ಯಾದ ಮಾಸ್ಕೋ ಮಾಲ್‍ನಲ್ಲಿ ಉಗ್ರರ ದಾಳಿ | 40 ಮಂದಿ ಮೃತ್ಯು, ಹಲವಾರು ಮಂದಿಗೆ ಗಾಯ

ಮಾಸ್ಕೋ: ರಷ್ಯಾದ ಮಾಸ್ಕೋದಲ್ಲಿ ಉಗ್ರ ದಾಳಿ ನಡೆಸಿದ್ದರ ಪರಿಣಾಮ 40 ಮಂದಿ ಮೃತಪಟ್ಟಿದ್ದು, ಹಲವಾರು ಮಂದಿ ಗಾಯಗೊಂಡಿದ್ದಾರೆ. ಮುಂಬೈ ಉಗ್ರರ ದಾಳಿ ಮಾದರಿ ಇದಾಗಿದ್ದು, ರಾಕ್ ಮ್ಯೂಸಿಕ್ ನಡೆಯುತ್ತಿದ್ದ ಮಾಲ್’ಗೆ ದಾಳಿ ನಡೆಸಿದ 4-5 ಮಂದಿಯಿದ್ದ ಉಗ್ರ ಗುಂಫು ಯದ್ವಾತದ್ವಾ ಗುಂಡು ಹಾರಿಸಿದೆ. ಘಟನೆಯಿಂದ ಸುಮಾರು 40 ಮಂದಿ ಮೃತಪಟ್ಟಿದ್ದಾರೆ. ಹಲವಾರು ಮಂದಿ ಗಾಯಗೊಂಡಿದ್ದಾರೆ. ಐಸಿಸ್ ಘಟನೆಯ‌ ಹೊಣೆ ಹೊತ್ತಿದೆ. ಎರಡು ದಶಕಗಳ ನಂತರ ನಡೆದ‌ ದೊಡ್ಡ ಘಟನೆ ಇದಾಗಿದ್ದು, ಓರ್ವ ಉಗ್ರನನ್ನು‌ ಸೆರೆಹಿಡಿಯಲಾಗಿದೆ. ಘಟನೆಯಿಂದ ಕಟ್ಟಡದಲ್ಲಿ

ರಷ್ಯಾದ ಮಾಸ್ಕೋ ಮಾಲ್‍ನಲ್ಲಿ ಉಗ್ರರ ದಾಳಿ | 40 ಮಂದಿ ಮೃತ್ಯು, ಹಲವಾರು ಮಂದಿಗೆ ಗಾಯ Read More »

ಪೆಟ್ರೋಲಿಯಂ ಪೈಪ್ ಲೈನಿಗೆ ಕನ್ನ ಕೊರೆದು ಲಕ್ಷಾಂತರ ಮೌಲ್ಯದ ಪೆಟ್ರೋಲ್ ಕಳ್ಳತನ

ಬೆಳ್ತಂಗಡಿ; ಪುದುವೆಟ್ಟುವಿನಲ್ಲಿ ಪೆಟ್ರೋಲಿಯಂ ಪೈಫ್ ಲೈನ್ ಗೆ ಕನ್ನ ಕೊರೆದು ಲಕ್ಷಾಂತರ ಮೌಲ್ಯದ ಪೆಟ್ರೋಲ್ ಕಳ್ಳತನ ಮಾಡಿರುವ ಘಟನೆ ಬೆಳಕಿಗೆ ಬಂದಿದೆ. ಈ ಕುರಿತು ಕಂಪೆನಿಯವರು ನೀಡಿರುವ ದೂರಿನಂತೆ ಧರ್ಮಸ್ಥಳ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಲಾಗಿದೆ. ಪೆಟ್ರೋನೆಟ್ ಎಂ ಹೆಚ್ ಬಿ ಲಿಮಿಟೆಡ್ ನ ನೆರಿಯದ ಸ್ಟೇಶನ್ ಇನ್ ಚಾರ್ಜ್ ರಾಜನ್  ಧರ್ಮಸ್ಥಳ ಪೊಲೀಸರಿಗೆ ದೂರು ನೀಡಿದ್ದಾರೆ.  ಮಂಗಳೂರು ಹಾಸನ ಬೆಂಗಳೂರು ಪೆಟ್ರೋನೆಟ್ ಪೈಪ್ ಮೂಲಕ ಪೆಟ್ರೋಲಿಯಂ  ವಸ್ತುಗಳು ಸಾಗಾಟವಾಗುತ್ತಿದ್ದು ಬೆಳ್ತಂಗಡಿ ತಾಲೂಕಿನ ಪುದುವೆಟ್ಟು ಗ್ರಾಮದ ಆಲಡ್ಕ

ಪೆಟ್ರೋಲಿಯಂ ಪೈಪ್ ಲೈನಿಗೆ ಕನ್ನ ಕೊರೆದು ಲಕ್ಷಾಂತರ ಮೌಲ್ಯದ ಪೆಟ್ರೋಲ್ ಕಳ್ಳತನ Read More »

ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಬಂಧನ !

ಹೊಸದಿಲ್ಲಿ: ದೆಹಲಿ ಅಬಕಾರಿ ನೀತಿ ಪ್ರಕರಣಕ್ಕೆ ಸಂಬಂಧಿಸಿದಂತೆ ಸಮನ್ಸ್ ನೀಡಲು ಜಾರಿ ನಿರ್ದೇಶನಾಲಯದ (ಇ.ಡಿ.) ತಂಡ ದೆಹಲಿ ಸಿಎಂ ಅರವಿಂದ್ ಕೇಜ್ರಿವಾಲ್ ಅವರನ್ನು ಗುರುವಾರ ಬಂಧಿಸಿದೆ. ಕೇಜ್ರಿವಾಲ್ ನಿವಾಸಕ್ಕೆ ಗುರುವಾರ ಸಂಜೆ ಆಗಮಿಸಿದ ತನಿಖಾ ಸಂಸ್ಥೆಯ ತಂಡವು ಮನಿ ಲಾಂಡರಿಂಗ್ ಕಾಯ್ದೆಯ (ಪಿಎಂಎಲ್‌ಎ) ಸೆಕ್ಷನ್ 50 ರ ಅಡಿಯಲ್ಲಿ ದೆಹಲಿ ಮುಖ್ಯಮಂತ್ರಿಯ ಹೇಳಿಕೆಯನ್ನು ದಾಖಲಿಸಿಕೊಂಡು ಬಂಧನ ಮಾಡಿದೆ. ಅರವಿಂದ್ ಕೇಜ್ರಿವಾಲ್ ಅವರ ಕಾನೂನು ತಂಡವು ತತ್ ಕ್ಷಣವೇ ಈ ವಿಷಯದ ತುರ್ತು ವಿಚಾರಣೆಯನ್ನು ಕೋರಿ ಸುಪ್ರೀಂ ಕೋರ್ಟ್‌ಗೆ ಮೊರೆ

ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಬಂಧನ ! Read More »

ಅರಣ್ಯ ಪ್ರದೇಶದಲ್ಲಿ ಅಸ್ತಿಪಂಜರ ಸ್ಥಿತಿಯಲ್ಲಿ ಮೃತದೇಹ ಪತ್ತೆ

ಬೆಳ್ತಂಗಡಿ: ಅಸ್ತಿಪಂಜರ ಸ್ಥಿತಿಯಲ್ಲಿ ಮೃತದೇಹವೊಂದು ಬೆಳ್ತಂಗಡಿ ತಾಲೂಕಿನ ಪುದುವೆಟ್ಟು ಗ್ರಾಮದ ಬೋಳ್ಮಿನಾರು ಎಂಬಲ್ಲಿ ಅರಣ್ಯ ಪ್ರದೇಶದಲ್ಲಿ ಪತ್ತೆಯಾಗಿದೆ. ಮೃತದೇಹದ ಬಳಿ ಪತ್ತೆಯಾದ ಆಧಾರ್ ಕಾರ್ಡ್‍ ಆಧಾರದಲ್ಲಿ ಮೃತ ವ್ಯಕ್ತಿಯನ್ನು ಪತ್ತೆಹಚ್ಚಲಾಗಿದ್ದು, ಕಳೆಂಜ ಗ್ರಾಮದ ಕಾಯರ್ತಡ್ಕದ ರಾಜು ಜೋಸೆಫ್‍ ಎಂದು ಗುರುತಿಸಲಾಗಿದೆ. ಬುಧವಾರ ಅರಣ್ಯ ಪ್ರದೇಶದಿಂದ ಸೊಪ್ಪು ತರಲು ತೆರಳಿದ್ದ ಸ್ಥಳೀಯರಿಗೆ ಮೃತದೇಹ ಪತ್ತೆಯಾಗಿದ್ದು, ಈ ಕುರಿತು ಧರ್ಮಸ್ಥಳ ಪೊಲೀಸರಿಗೆ ಮಾಹಿತಿ ನೀಡಿದ್ದಾರೆ. ಆತ್ಮಹತ್ಯೆ ಮಾಡಿಕೊಂಡಿರುವ ಶಂಕೆ ವ್ಯಕ್ತವಾಗಿದೆ. ರಾಜು ಜೋಸೆಫ್ ಅವರು ಕೆಲವು ವರ್ಷಗಳ ಹಿಂದೆ ಮನೆ

ಅರಣ್ಯ ಪ್ರದೇಶದಲ್ಲಿ ಅಸ್ತಿಪಂಜರ ಸ್ಥಿತಿಯಲ್ಲಿ ಮೃತದೇಹ ಪತ್ತೆ Read More »

ಅಮಲು ಪದಾರ್ಥ ಸೇವಿಸಿ ಅನುಚಿತ ವರ್ತನೆ | ಇಬ್ಬರು ಪೊಲೀಸ್ ವಶಕ್ಕೆ

ಪುತ್ತೂರು: ನಗರದ ಕಿಲ್ಲೇ ಮೈದಾನದ ಬಳಿ ಗಾಂಜಾ ಸೇವಿಸಿ ಅನುಚಿತವಾಗಿ ವರ್ತಿಸಿದ ಇಬ್ಬರನ್ನು ಪೊಲೀಸರು ವಶಕ್ಕೆ ಪಡೆದ ಘಟನೆ ನಡೆದಿದೆ. ಬಪ್ಪಳಿಗೆ ನಿವಾಸಿ ಉಮ್ಮರ್ ಫಾರೂಕ್, ಉಳ್ಳಾಲ ಮುಕ್ಕಚೇರಿ ನಿವಾಸಿ ಮೊಹಿದ್ದಿನಿ ಪೊಲೀಸ್ ವಶವಾದವರು. ಪುರಭವನದ ಬಳಿ ಇಬ್ಬರು ಯುವಕರು ಅನುಚಿತವಾಗಿ ವರ್ತಿಸಿರುವ ಕುರಿತು ಮಾಹಿತಿ ತಿಳಿಸಿದ ಪುತ್ತೂರು ನಗರ ಪೊಲೀಸರು ತೆರಳಿದಾಗ ಇಬ್ಬರು ಪರಾರಿಯಾಗಲು ಯತ್ನಿಸಿದ್ದರು. ತಕ್ಷಣ ಇಬ್ಬರನ್ನು ತಡೆದು ವಿಚಾರಿಸಿದಾಗ ಗಾಂಜಾ ನಶೆಯಲ್ಲಿರುವುದು ಕಂಡು ಬಂದಿದೆ. ತಕ್ಷಣ ಅವರನ್ನು ವೈದ್ಯಕೀಯ ಪರೀಕ್ಷೆಗೊಳಪಡಿಸಿದಾಗ ಅಮಲು ಪದಾರ್ಥ

ಅಮಲು ಪದಾರ್ಥ ಸೇವಿಸಿ ಅನುಚಿತ ವರ್ತನೆ | ಇಬ್ಬರು ಪೊಲೀಸ್ ವಶಕ್ಕೆ Read More »

ಲೋಕಸಭಾ ಚುನಾವಣೆ | ಮೂರು ಕೋಟಿಗೂ ಅಧಿಕ ಮೌಲ್ಯದ ಮದ್ಯ, ಡ್ರಗ್ಸ್ ವಶ

ಮಂಗಳೂರು: ಲೋಕಸಭಾ ಚುನಾವಣೆಯ ನೀತಿ ಸಂಹಿತೆ ಜಾರಿಯಾದ ಬಳಿಕ ಮಾ.20 ರವರೆಗೆ 12,300 ರೂಪಾಯಿ ಮೌಲ್ಯದ 21.34 ಲೀಟರ್ ಮದ್ಯವನ್ನು ಜಪ್ತಿ ಮಾಡಲಾಗಿದೆ. 3,13,500 ರೂ.ಗಳ ಮೌಲ್ಯದ 1.65 ಕೆಜಿ ಡ್ರಗ್ಸ್ ನ್ನು ವಶಪಡಿಸಿಕೊಳ್ಳಲಾಗಿದೆ ಎಂದು ಜಿಲ್ಲಾಧಿಕಾರಿಗಳ ಕಚೇರಿ ಪ್ರಕಟಣೆ ತಿಳಿಸಿದೆ. ನೀತಿ ಸಂತೆ ಜಾರಿಯಾದ ದಿನದಿಂದ ಮಾ.20ವರೆಗೆ ದೂರವಾಣಿ ಮೂಲಕ (1950) ಸಾರ್ವಜನಿಕರಿಂದ 75 ಕರೆಗಳನ್ನು ಸ್ವೀಕರಿಸಿ ಸ್ಪಂದಿಸಲಾಗಿದೆ ಸಿ-ಸಿಲ್ ಆಪ್ ಮೂಲಕ 11 ದೂರುಗಳು ಸ್ವೀಕೃತಗೊಂಡಿದೆ. ಈ ಎಲ್ಲಾ ದೂರುಗಳನ್ನು ವಿಲೇವಾರಿ ಮಾಡಲಾಗಿದೆ. ಎನ್.

ಲೋಕಸಭಾ ಚುನಾವಣೆ | ಮೂರು ಕೋಟಿಗೂ ಅಧಿಕ ಮೌಲ್ಯದ ಮದ್ಯ, ಡ್ರಗ್ಸ್ ವಶ Read More »

error: Content is protected !!
Scroll to Top