ಅಪರಾಧ

ಸಾಮಾಜಿಕ ಜಾಲತಾಣದ ವಿಚಾರ | ಮನೆ ವಠಾರಕ್ಕೆ ಅಕ್ರಮವಾಗಿ ಪ್ರವೇಶಿಸಿ ಜೀವ ಬೆದರಿಕೆ | ಪ್ರಕರಣ ದಾಖಲು

ಪುತ್ತೂರು: ಸಾಮಾಜಿಕ ಜಾಲತಾಣದ ಬರವಣಿಗೆ ವಿಚಾರದಲ್ಲಿ 15 ಅಧಿಕ ಜನರು ಮನೆಯೊಳಗೆ ಅಕ್ರಮ ಪ್ರವೇಶ ಮಾಡಿ ಅವಾಚ್ಯವಾಗಿ ನಿಂಧಿಸಿ ಜೀವ ಬೆದರಿಕೆ ಹಾಕಿದ ಬಗ್ಗೆ ಪುತ್ತೂರು ನಗರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಪ್ರಜ್ವಲ್ ರೈ, ಸನತ್ ರೈ ಸಹಿತ 15 ಮಂದಿಯ ಮೇಲೆ ಪ್ರಕರಣದಾಖಲಾಗಿದೆ. ಬಿಜೆಪಿ ಸಾಮಾಜಿ ಜಾಲತಾಣ ಪ್ರಕೋಷ್ಠದ ಜಿಲ್ಲಾ ಸದಸ್ಯ ತಾರಿಗುಣ್ಣ ನಿವಾಸಿ ಜಯಾನಂದ ಕೆ. (41) ದೂರು ನೀಡಿದ್ದಾರೆ. ಕಾಂಗ್ರೆಸ್ ಸರ್ಕಾರದ ಯೋಜನೆಗಳನ್ನು ಬರೆದಿರುವ ಬ್ಯಾನರ್ ಪ್ರದರ್ಶಿಸಿಕೊಂಡು ಚೆಂಡೆಗಳನ್ನು ಜೋರಾಗಿ ಬಡಿಯುತ್ತಾ ಅಕ್ರಮವಾಗಿ […]

ಸಾಮಾಜಿಕ ಜಾಲತಾಣದ ವಿಚಾರ | ಮನೆ ವಠಾರಕ್ಕೆ ಅಕ್ರಮವಾಗಿ ಪ್ರವೇಶಿಸಿ ಜೀವ ಬೆದರಿಕೆ | ಪ್ರಕರಣ ದಾಖಲು Read More »

ಐದು ಗೋಣಿ ಸುಲಿದ ಅಡಿಕೆ ಕಳವು : ಪ್ರಕರಣ ದಾಖಲು

ಬೆಳ್ಳಾರೆ: ಸುಲಿದು ದಾಸ್ತಾನಿಟ್ಟಿದ್ದ ಐದು ಗೋಣಿ ಅಡಿಕೆ ಕಳವಾದ ಘಟನೆ ಸುಳ್ಯ ತಾಲೂಕಿನ ಕುಳ್ಳಂಪಾಡಿಯಲ್ಲಿ ನಡೆದಿದೆ. ಮನೆಯಲ್ಲಿ ಯಾರೂ ಇಲ್ಲದ ಸಂದರ್ಭ ಕಳವು ನಡೆದಿದ್ದು, ಕುಳ್ಳಂಪಾಡಿ ನಿವಾಸಿ ಹಿರಿಯಣ್ಣ ಗೌಡರು ಮೂರು ದಿನಗಳ ಹಿಂದೆ ಕುಟುಂಬ ಸಮೇತ ತನ್ನ ಅಕ್ಕನ ಮನೆಗೆ ಹೋದವರು ಮನೆಗೆ ಬಂದು ನೋಡಿದಾಗ ಸುಲಿದಿಟ್ಟಿದ್ದ ಅಡಿಕೆ ಐದು ಗೋಣಿ ಅಡಿಕೆ ಕಳವಾಗಿರುವುದು ಬೆಳಕಿ ಬಂದಿದೆ. ಕಳವಾದ ಅಡಿಕೆ ಮೌಲ್ಯ ಒಂದು ಲಕ್ಷ ರೂ. ಎಂದು ಅಂದಾಜಿಸಲಾಗಿದೆ. ಈ ಕುರಿತು ಬೆಳ್ಳಾರೆ ಠಾಣೆಗೆ ದೂರು

ಐದು ಗೋಣಿ ಸುಲಿದ ಅಡಿಕೆ ಕಳವು : ಪ್ರಕರಣ ದಾಖಲು Read More »

ಸ್ಕೂಟರ್ ಕಳವು : ಪ್ರಕರಣ ದಾಖಲು

ಬಂಟ್ವಾಳ: ಗ್ಯಾರೇಜ್ ಒಂದರ ಬಳಿ ನಿಲ್ಲಿಸಲಾಗಿದ್ದ ಸ್ಕೂಟರ್ ಕಳವಾದ ಘಟನೆ ಬಂಟ್ವಾಳ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ. ಅಮ್ಟಾಡಿ ಗ್ರಾಮದ ಜೈದುರ್ಗ ಗ್ಯಾರೇಜ್ ಬಳಿ ಸುರೇಶ್ ಎಂಬವರು ಆ್ಯಕ್ಸಿಸ್ ಸ್ಕೂಟರ್ ನಿಲ್ಲಿಸಿದ್ದರು. ಮರುದಿನ ಬಂದು ನೋಡಿದಾಗ ಸ್ಕೂಟರ್ ಕಳವಾಗಿರುವುದು ಬೆಳಕಿಗೆ ಬಂದಿದೆ. ಕಳವಾದ ಸ್ಕೂಟರ್ ಮೌಲ್ಯ 45 ಸಾವಿರ ರೂ. ಎಂದು ಅಂದಾಜಿಸಲಾಗಿದೆ. ಈ ಕುರಿತು ಬಂಟ್ವಾಳ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಸ್ಕೂಟರ್ ಕಳವು : ಪ್ರಕರಣ ದಾಖಲು Read More »

ರಾಮೇಶ್ವರಂ ಕೆಫೆ ಬಾಂಬ್‍ ಬ್ಲಾಸ್ಟ್ | ಓರ್ವ ಆರೋಪಿಯನ್ನು ಎನ್‍.ಐ.ಎ. ವಶಕ್ಕೆ ಪಡೆದು ವಿಚಾರಣೆ

ಬೆಂಗಳೂರು: ಬೆಂಗಳೂರಿನ ರಾಮೇಶ್ವರಂ ಕೆಫೆ ಬಾಂಬ್ ಸ್ಪೋಟ ಪ್ರಕರಣಕ್ಕೆ ಸಂಬಂಧಿಸಿ ಎನ್‍ ಐಎ ಅಧಿಕಾರಿಗಳು ಬಾಡಿ ವಾರಂಟ್ ಆಧಾರದ ಮೇಲೆ ಓರ್ವನನ್ನು ವಿಚಾರಣೆ ನಡೆಸುತ್ತಿದ್ದಾರೆ. ಮಾಜ್ ಮುನೀರ್ ಎಂಬಾತನನ್ನು ಅಧಿಕಾರಿಗಳು ವಶಕ್ಕೆ ಪಡೆದಿದ್ದು, ಈತ ಶಿವಮೊಗ್ಗ ಟ್ರಯಲ್ ಬ್ಲಾಸ್ಟ್ ಕೇಸ್‍ ನ ಪ್ರಮುಖ ಆರೋಪಿಯಾಗಿದ್ದಾನೆ ಎನ್ನಲಾಗಿದೆ. ಟ್ರಯಲ್ ಬ್ಲಾಸ್ಟ್ ಕೇಸ್ ಸಂಬಂಧ ಈತ ಪರಪ್ಪನ ಅಗ್ರಹಾರ ಜೈಲಿನಲ್ಲಿದ್ದ. ಸದ್ಯ ಈತನನ್ನು 7 ದಿನಗಳ ಕಾಲ ಎನ್‍ ಐಎ ಕಸ್ಟಡಿಗೆ ಪಡೆದುಕೊಳ್ಳಲಾಗಿದೆ ಎಂದು ತಿಳಿದು ಬಂದಿದೆ.

ರಾಮೇಶ್ವರಂ ಕೆಫೆ ಬಾಂಬ್‍ ಬ್ಲಾಸ್ಟ್ | ಓರ್ವ ಆರೋಪಿಯನ್ನು ಎನ್‍.ಐ.ಎ. ವಶಕ್ಕೆ ಪಡೆದು ವಿಚಾರಣೆ Read More »

ಅಡ್ಯನಡ್ಕ ಕರ್ಣಾಟಕ ಬ್ಯಾಂಕ್ ಕಳ್ಳತನ | ಆರೋಪಿಗಳನ್ನು ಬಂಧಿಸುವಲ್ಲಿ ಯಶಸ್ವಿಯಾದ ತನಿಖಾ ತಂಡಕ್ಕೆ ಬಹುಮಾನ ಘೋಷಣೆ

ವಿಟ್ಲ : ಅಡ್ಯನಡ್ಕ ಕರ್ಣಾಟಕ ಬ್ಯಾಂಕ್ ನಲ್ಲಿ ನಡೆದ ನಗದು ಹಾಗೂ ಕೋಟ್ಯಾಂತರ ರೂ. ಚಿನ್ನಾಭರಣ ಕಳ್ಳತನ ಪ್ರಕರಣಕ್ಕೆ ಸಂಬಂಧಿಸಿದಂತೆ ವಿಶೇಷ ತನಿಖಾ ತಂಡ ಆರೋಪಿಗಳನ್ನು ಬಂಧಿಸಿದ್ದು, ಈ ಕುರಿತು ದ.ಕ ಜಿಲ್ಲಾ ಪೊಲೀಸ್ ಅಧೀಕ್ಷಕ ಸಿ.ಬಿ. ರಿಷ್ಯಂತ್ ಮಾಹಿತಿ ನೀಡಿದರು. ಪತ್ರಿಕಾಗೋಷ್ಠಿಯಲ್ಲಿ ಅವರು ಕಳ್ಳತನದ ಮಾಹಿತಿ ನೀಡಿ, ಬಂಟ್ವಾಳ ಗೂಡಿನ ಬಳಿ ನಿವಾಸಿ ಮಹಮ್ಮದ್ ರಫೀಕ್ ಯಾನೆ ಗೂಡಿನ ಬಳಿ ರಫೀಕ್ (35), ಮಂಜೇಶ್ವರ ಬಿಂಗಿನಾನಿ ನಿವಾಸಿ ಇಬ್ರಾಹಿಂ ಕಲಂದರ್ (41), ಮಂಜೇಶ್ವರ ಗಾಳಿಯಡ್ಕ ನಿವಾಸಿ

ಅಡ್ಯನಡ್ಕ ಕರ್ಣಾಟಕ ಬ್ಯಾಂಕ್ ಕಳ್ಳತನ | ಆರೋಪಿಗಳನ್ನು ಬಂಧಿಸುವಲ್ಲಿ ಯಶಸ್ವಿಯಾದ ತನಿಖಾ ತಂಡಕ್ಕೆ ಬಹುಮಾನ ಘೋಷಣೆ Read More »

ಪಾಕ್ ಪರ ಘೋಷಣೆ | ಬಂಧಿತ ಮೂವರು ಆರೋಪಿಗಳಿಗೆ ಜಾಮೀನು

ಬೆಂಗಳೂರು: ರಾಜ್ಯಸಭಾ ಚುನಾವಣೆ ಸಂದರ್ಭದಲ್ಲಿ ವಿಧಾನ ಸೌಧದಲ್ಲೇ ಪಾಕಿಸ್ತಾನ್‌ ಪರ ಘೋಷಣೆ ಕೂಗಿದ ಪ್ರಕರಣಕ್ಕೆ ಸಂಬಂಧಿಸಿ ಬಂಧಿತರಾದ ಮೂವರು ಆರೋಪಿಗಳಿಗೆ ಬೆಂಗಳೂರಿನ ಹೆಚ್ಚುವರಿ ಮುಖ್ಯ ಮೆಟ್ರೊಪಾಲಿಟನ್‌ ಮ್ಯಾಜಿಸ್ಟ್ರೇಟ್‌ ನ್ಯಾಯಾಲಯ ಷರತ್ತುಬದ್ಧ ಜಾಮೀನು ನೀಡಿದೆ. ದೆಹಲಿಯ ಕಿಶನ್‌ ಗಂಜ್‌ನ ಮೊಹಮ್ಮದ್ ಇಲ್ತಾಜ್, ಹಾವೇರಿ ಜಿಲ್ಲೆ ಬ್ಯಾಡಗಿಯ ಮೊಹಮ್ಮದ್ ಶಫಿ ನಾಶಿಪುಡಿ, ಬೆಂಗಳೂರಿನ ಜಯಮಹಲ್‌ ನಿವಾಸಿ ಡಿ.ಎಸ್‌ ಮುನಾವರ್ ಅಹ್ಮದ್ ಅವರಿಗೆ ಜಾಮೀನು ಲಭಿಸಿದೆ. ಕಾಂಗ್ರೆಸ್ ಅಭ್ಯರ್ಥಿ ಸಯ್ಯದ್ ನಾಸೀರ್ ರಾಜ್ಯಸಭಾ ಚುನಾವಣೆಯಲ್ಲಿ ಜಯಗಳಿಸಿದ ಬೆನ್ನಲ್ಲೇ ನಡೆಸಿದ ವಿಜಯೋತ್ಸವ ಸಂದರ್ಭ

ಪಾಕ್ ಪರ ಘೋಷಣೆ | ಬಂಧಿತ ಮೂವರು ಆರೋಪಿಗಳಿಗೆ ಜಾಮೀನು Read More »

ಕೆಲಸ ಕೊಡಿಸುವ ನೆಪದಲ್ಲಿ ಯುವತಿಯ ಅತ್ಯಾಚಾರ !

ಪುತ್ತೂರು: ಯುವತಿಯೋರ್ವಳನ್ನು ಇಬ್ಬರು ಯುವಕರು ಅತ್ಯಾಚಾರ ಮಾಡಿರುವ ಘಟನೆ ಕೆಮ್ಮಾಯಿಯ ಮನೆಯೊಂದರಲ್ಲಿ ನಡೆದಿದೆ. ವಾಮಂಜೂರು ಮೂಲಕ ಯುವತಿ ಎಂದು ಹೇಳಲಾಗಿದ್ದು, ಕರ್ವೇಲು ಹಾಗೂ ಕಡೇಶ್ವಾಲ್ಯದ ಇಬ್ಬರು ಯುವಕರು ಕೆಲಸ ಕೊಡಿಸುವ ನೆಪದಲ್ಲಿ ಅತ್ಯಾಚಾರ ಮಾಡಿರುವುದಾಗಿ ತಿಳಿದು ಬಂದಿದೆ. ಯುವಕರಿಬ್ಬರು ಪರಾರಿಯಾಗಿದ್ದು, ತಕ್ಷಣ ಶೋಧ ನಡೆಸಿದ ಪೊಲೀಸರ ವಶಕ್ಕೆ ಬಿದ್ದಿದ್ದಾರೆ ಎಂದು ತಿಳಿದುಬಂದಿದೆ. ಯುವತಿ ಪುತ್ತೂರು ಮಹಿಳಾ ಪೊಲೀಸ್ ಠಾಣೆಗೆ ದೂರು ನೀಡಿದ್ದು, ಪ್ರಕರಣ ದಾಖಲಾಗಿದೆ. ಹೆಚ್ಚಿನ ಮಾಹಿತಿ ತಿಳಿದುಬಂದಿಲ್ಲ.

ಕೆಲಸ ಕೊಡಿಸುವ ನೆಪದಲ್ಲಿ ಯುವತಿಯ ಅತ್ಯಾಚಾರ ! Read More »

ಆ್ಯಸಿಡ್ ಸೇವಿಸಿ ಮಹಿಳೆ ಆತ್ಮಹತ್ಯೆಗೆ ಯತ್ನ

ಬೆಳ್ಳಾರೆ: ಸುಳ್ಯ ತಾಲೂಕಿನ ಬೆಳ್ಳಾರೆಯಲ್ಲಿ ಮಹಿಳೆಯೋರ್ವರು ರಬ್ಬರ್ ಶೀಟ್ ಮಾಡಲು ಬಳಸುವ ಆ್ಯಸಿಡ್ ಸೇವಿಸಿ ಆತ್ಮಹತ್ಯೆಗೆ ಯತ್ನಿಸಿದ ಘಟನೆ ನಡೆದಿದೆ. ಬೆಳ್ಳಾರೆ ನಿವಾಸಿ ಲಕ್ಷ್ಮೀಕಾಂತ ಹೆಗ್ಡೆಯವರ ಪತ್ನಿ ವೀಣಾ ಆತ್ಮಹತ್ಯೆಗೆ ಯತ್ನಿಸಿದವರು. ಮಂಗಳವಾರ ಮಧ್ಯಾಹ್ನ ಮನೆಯಲ್ಲಿ ಯಾರು ಇಲ್ಲದ ಸಂದರ್ಭದಲ್ಲಿ ಮಹಿಳೆಯು ಆ್ಯಸಿಡ್ ಸೇವಿಸಿ ತನ್ನ ಸಹೋದ್ಯೋಗಿಗೆ ಕರೆಮಾಡಿ ತಿಳಿಸಿದ್ದರು. ತಕ್ಷಣ ಮನೆಯವರಿಗೆ ವಿಚಾರ ತಿಳಿಸಿ ಆಟೋ ರಿಕ್ಷದ ಮೂಲಕ ಆಸ್ಪತ್ರೆಗೆ ಸಾಗಿಸಿದ್ದು ಅಷ್ಟರಲ್ಲಿ ಮಹಿಳೆಯು ವಾಂತಿ ಮಾಡಲು ಪ್ರಾರಂಭಿಸಿದ್ದಾರೆ. ಬಳಿಕ ಬೆಳ್ಳಾರೆಯ ಆಸ್ಪತ್ರೆಯ ವೈದ್ಯರ ಸಲಹೆ

ಆ್ಯಸಿಡ್ ಸೇವಿಸಿ ಮಹಿಳೆ ಆತ್ಮಹತ್ಯೆಗೆ ಯತ್ನ Read More »

ಕೆರೆಗೆ ಬಿದ್ದು ಮೃತ್ಯು !

ಪುತ್ತೂರು: ಈಜಲು ಕೆರೆಗೆ ಇಳಿದ ವ್ಯಕ್ತಿಯೊಬ್ಬರು ನೀರಿನಲ್ಲಿ ಮುಳುಗಿ ಮೃತಪಟ್ಟ ಘಟನೆ ಕೆದಂಬಾಡಿ ಗ್ರಾಮದ ತಿಂಗಳಾಡಿಯ ಪಟ್ಟೆಯಲ್ಲಿ ಮಾ.11ರಂದು ಸಂಜೆ ನಡೆದಿದೆ. ಕಡಬ ಕರ್ಮಾಯಿ ನಿವಾಸಿ ಕಿರಣ್ ರೈ (40) ಎಂಬವರು ಮೃತಪಟ್ಟ ವ್ಯಕ್ತಿಯಾಗಿದ್ದಾರೆ. ಇವರು ಸಂಜೀವ ರೈ ಎಂ.ರವರ ಪುತ್ರಿ ಮಮತಾರವರನ್ನು ವಿವಾಹವಾಗಿದ್ದು ಪ್ರಸ್ತುತ ಪತ್ನಿ ಮನೆಯಲ್ಲಿ ವಾಸವಾಗಿದ್ದರು. ಮಾ.11ರಂದು ಸಂಜೆ ತೋಟದ ಕೆರೆಗೆ ನೀರು ತರಲೆಂದು ಹೆಂಡತಿಯೊಂದಿಗೆ ತೆರಳಿದ್ದು, ಆ ಬಳಿಕ ನಾನು ಕೆರೆಯಲ್ಲಿ ಈಜಾಡುತ್ತೇನೆ ಎಂದು ಹೇಳಿ ಕೆರೆಗೆ ಇಳಿದವರು ನೀರಲ್ಲಿ ಮುಳುಗಿ

ಕೆರೆಗೆ ಬಿದ್ದು ಮೃತ್ಯು ! Read More »

ಹಾಸ್ಟೇಲ್ ಕಟ್ಟಡದಿಂದ ಬಿದ್ದು ನರ್ಸಿಂಗ್ ವಿದ್ಯಾರ್ಥಿನಿ ಮೃತ್ಯು !

ಬೆಂಗಳೂರು: ಕಟ್ಟಡದಿಂದ ಬಿದ್ದು ನರ್ಸಿಂಗ್ ವಿದ್ಯಾರ್ಥಿಯೋರ್ವರು ಮೃತಪಟ್ಟ ಘಟನೆ ಬೆಂಗಳೂರಿನಲ್ಲಿ ನಡೆದಿದೆ. ಕೇರಳದ ಎಲ್ಲಂಪ್ಲಾಕಲ್ ನ ಅನಿಲ (19) ಮೃತಪಟ್ಟ ವಿದ್ಯಾರ್ಥಿನಿ. ಬಿಜು ಹಾಗೂ ಉಡುಂಬಂಜೋಳ ಪಂಚಾಯತ್‍ ಉಪಾಧ್ಯಕ್ಷೆ ಬೀನಾ ಅವರ ಪುತ್ರಿಯಾಗಿರುವ ಅನಿಲ ಹಾಸ್ಟೇಲ್ ಕಟ್ಟಡದಿಂದ ಬಿದ್ದು ಶವವಾಗಿ ಪತ್ತೆಯಾಗಿದ್ದಾರೆ ಎನ್ನಲಾಗಿದೆ. ಬೆಂಗಳೂರಿನ ರಾಜರಾಜೇಶ್ವರಿ ವೈದ್ಯಕೀಯ ಕಾಲೇಜಿನಲ್ಲಿ ಫಿಸಿಯೋಥೆರಪಿ ವಿದ್ಯಾರ್ಥಿನಿಯಾಗಿದ್ದರು. ಮರಣೋತ್ತರ ಪರೀಕ್ಷೆ ಬಳಿಕ ಮೃತದೇಹವನ್ನು ಕುಟುಂಬದವರಿಗೆ ಹಸ್ತಾಂತರಿಸಲಾಯಿತು.

ಹಾಸ್ಟೇಲ್ ಕಟ್ಟಡದಿಂದ ಬಿದ್ದು ನರ್ಸಿಂಗ್ ವಿದ್ಯಾರ್ಥಿನಿ ಮೃತ್ಯು ! Read More »

error: Content is protected !!
Scroll to Top