ಕಡಬ ಕಾಲೇಜಿನಲ್ಲಿ ಆ್ಯಸಿಡ್ ದಾಳಿ | ಇನ್ನಿಬ್ಬರು ಪೊಲೀಸ್ ವಶಕ್ಕೆ
ಕಡಬ: ವಿದ್ಯಾರ್ಥಿನಿಯರ ಮೇಲೆ ಆ್ಯಸಿಡ್ ದಾಳಿ ನಡೆಸಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಕೇರಳದ ಇನ್ನಿಬ್ಬರು ವ್ಯಕ್ತಿಗಳನ್ನು ಪೊಲೀಸರು ಬಂಧಿಸಿದ್ದಾರೆ. ಉಪ್ಪಿನಂಗಡಿ ವೃತ್ತ ನಿರೀಕ್ಷಕರ ತಂಡ ತಮಿಳುನಾಡು, ಎರ್ನಾಕುಲಂ ಮತ್ತಿತರ ಪ್ರದೇಶಕ್ಕೆ ತೆರಳಿ ತನಿಖೆ ನಡೆಸಿದ್ದು, ಕೇರಳದಲ್ಲಿ ಇಬ್ಬರನ್ನು ವಶಕ್ಕೆ ಪಡೆದಿದ್ದಾರೆ ಎನ್ನಲಾಗಿದೆ. ಈಗಾಗಲೇ ಆರೋಪಿ ಕೇರಳ ಮೂಲದ ಅಬಿನ್ ಎಂಬಾತನನ್ನು ಬಂಧಿಸಲಾಗಿದ್ದು, ಆತನಿಗೆ ಸಮವಸ್ತ್ರ ಹೊಲಿದುಕೊಟ್ಟ ವ್ಯಕ್ತಿ ಹಾಗೂ ಆ್ಯಸಿಡ್ ನೀಡಿದ ವ್ಯಕ್ತಿಯನ್ನು ಪೊಲೀಸರು ವಶಕ್ಕೆ ತೆಗೆದುಕೊಂಡಿದ್ದಾರೆ ಎಂದು ತಿಳಿದು ಬಂದಿದೆ.
ಕಡಬ ಕಾಲೇಜಿನಲ್ಲಿ ಆ್ಯಸಿಡ್ ದಾಳಿ | ಇನ್ನಿಬ್ಬರು ಪೊಲೀಸ್ ವಶಕ್ಕೆ Read More »










