ಅಪರಾಧ

ಅಗ್ನಿ ಅವಘಡ : ಫ್ರಿಡ್ಜ್ ಸ್ಪೋಟ

ಪುತ್ತೂರು : ಜಿಡೆಕಲ್ಲು ಕಾಲೇಜು ಬಳಿ ಇರುವ ಮನೆಯೊಂದರಲ್ಲಿ ರೆಫ್ರಿಜರೇಟರ್ ಸ್ಫೋಟಗೊಂಡ ಘಟನೆ ಇಂದು ಬೆಳಗ್ಗೆ ನಡೆದಿದೆ. ಜಿಡೆಕಲ್ಲು ಕಾಲೇಜು ಸಮೀಪದ ಮೋನಪ್ಪ ಎಂಬವರ ಮನೆಯಲ್ಲಿ ರೆಫ್ರಿಜರೇಟರ್ ಸ್ಫೋಟಗೊಂಡ ಹಿನ್ನೆಲೆ ಅಗ್ನಿ ಅವಘಡ ಸಂಭವಿಸಿದ್ದು, ಮನೆಯಲ್ಲಿ ಯಾರು ಇಲ್ಲದ ಕಾರಣ ಯಾವುದೇ ಪ್ರಾಣಾಪಾಯ ಸಂಭವಿಸಿಲ್ಲ. ಘಟನೆಯಲ್ಲಿ ಮನೆ ಹಾನಿಗೊಂಡಿದೆ. ಘಟನೆ ಬಗ್ಗೆ ತಿಳಿಯುತ್ತಿದ್ದಂತೆ ಕಾಲೇಜು ವಿದ್ಯಾರ್ಥಿಗಳು ಹಾಗೂ ಸ್ಥಳೀಯರು ನೀರು ಹಾಕಿ ಬೆಂಕಿ ನಂದಿಸಲು ಯತ್ನಿಸಿದ್ದು, ಬಳಿಕ ಅಗ್ನಿಶಾಮಕದಳದವರಿಗೆ ಮಾಹಿತಿ ನೀಡಿದ್ದು, ಘಟನಾ ಸ್ಥಳಕ್ಕೆ ಆಗಮಿಸಿದ್ದಾರೆ.

ಅಗ್ನಿ ಅವಘಡ : ಫ್ರಿಡ್ಜ್ ಸ್ಪೋಟ Read More »

ಮತ್ತೊಂದು ಸಂಕಷ್ಟದಲ್ಲಿ ದರ್ಶನ್ l ಅರಣ್ಯ ಇಲಾಖೆಯಿಂದ‌ ಪ್ರಕರಣ‌ ದಾಖಲು l ದರ್ಶನ್ ಪತ್ನಿಗೂ ಸಂಕಷ್ಟ

ಬೆಂಗಳೂರು : ಚಿತ್ರದುರ್ಗ ಮೂಲದ ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ಪೊಲೀಸ್ ಕಸ್ಟಡಿಯಲ್ಲಿರುವ ದರ್ಶನ್ ಗೆ ಇದೀಗ ಮತ್ತೊಂದು ಸಂಕಷ್ಟ ಎದುರಾಗಿದೆ. ದರ್ಶನ್ ಜತೆಗೆ ಪತ್ನಿ ವಿಜಯಲಕ್ಷ್ಮೀಗೂ ಈ ಕಂಟಕ ಕಾಡಲಿದೆ. ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ದರ್ಶನ್ ಎ2 ಆರೋಪಿಯಾಗಿದ್ದರೆ, ಗೆಳತಿ ಪವಿತ್ರಾ ಗೌಡ ಎ1 ಆರೋಪಿಯಾಗಿದ್ದಾರೆ. ಆದರೆ, ಈ ಪ್ರಕರಣದಲ್ಲಿ ದರ್ಶನ್ ಪತ್ನಿ ವಿಜಯಲಕ್ಷ್ಮೀ ಎ1 ಆರೋಪಿಯಾಗಿದ್ದು, ದರ್ಶನ್ ಎ3 ಆರೋಪಿಯಾಗಿದ್ದಾರೆ. ಕೊಲೆ ಪ್ರಕರಣದಲ್ಲಿ ದರ್ಶನ್ ಬಂಧನವಾದ ಬಳಿಕ ದರ್ಶನ್ ಗೆ ಸಂಬಂಧಿಸಿದ ಸಾಕಷ್ಟು ಪ್ರಕರಣಗಳು ಹೊರಬರುತ್ತಿದ್ದು,

ಮತ್ತೊಂದು ಸಂಕಷ್ಟದಲ್ಲಿ ದರ್ಶನ್ l ಅರಣ್ಯ ಇಲಾಖೆಯಿಂದ‌ ಪ್ರಕರಣ‌ ದಾಖಲು l ದರ್ಶನ್ ಪತ್ನಿಗೂ ಸಂಕಷ್ಟ Read More »

ರೆಣುಕಾಸ್ವಾಮಿ ಕ್ಷಮೆ ಕೇಳಿದ ಚಿತ್ರೀಕರಣರದ ಮೊಬೈಲ್ ಗಾಗಿ ಸುಮನಹಳ್ಳಿ ರಾಜಕಾಲುವೆಯಲ್ಲಿ ಶೋಧ

ಬೆಂಗಳೂರು: ಕೊಲೆಯಾದ ರೇಣುಕಸ್ವಾಮಿ ಮೊಬೈಲ್ ಎಸೆದಿದ್ದ ಸುಮನಹಳ್ಳಿ ರಾಜಕಾಲುವೆಯಲ್ಲಿ ಮೊಬೈಲ್‌ಗಾಗಿ ಪೊಲೀಸರು ಸೋಮವಾರ ತೀವ್ರ ಶೋಧ ನಡೆಸಿದರು. ಸ್ಥಳಕ್ಕೆ ಹತ್ತಕ್ಕೂ ಹೆಚ್ಚು ಪೌರ ಕಾರ್ಮಿಕರನ್ನು ಕರೆಸಿ ರಾಜಕಾಲುವೆಯಲ್ಲಿ ಹುಡುಕಾಟ ನಡೆಸಲಾಯಿತು. ರಾಜಕಾಲುವೆಗೆ ಇಳಿದು ಕಾರ್ಮಿಕರು ಎರಡು ತಾಸು, 200 ಮೀಟರ್ ಉದ್ದಕ್ಕೂ ಶೋಧಿಸಿದರು. ಆದರೆ, ಮೊಬೈಲ್ ಪತ್ತೆಯಾಗದ ಕಾರಣ ಶೋಧ ಕಾರ್ಯ ಸ್ಥಗಿತ ಮಾಡಲಾಯಿತು. ಪಟ್ಟಣಗೆರೆಯ ಶೆಡ್‌ನಲ್ಲಿ ಜೂನ್ 9ರ ರಾತ್ರಿ ರೇಣುಕಸ್ವಾಮಿ ಕೊಲೆ ಮಾಡಿದ ಬಳಿಕ ಆರೋಪಿಗಳು ಮುಂಜಾನೆ ಸುಮಾರು 3.30ಕ್ಕೆ ಸ್ಕಾರ್ಪಿಯೋ ಕಾರಿನಲ್ಲಿ ಮೃತದೇಹವನ್ನು

ರೆಣುಕಾಸ್ವಾಮಿ ಕ್ಷಮೆ ಕೇಳಿದ ಚಿತ್ರೀಕರಣರದ ಮೊಬೈಲ್ ಗಾಗಿ ಸುಮನಹಳ್ಳಿ ರಾಜಕಾಲುವೆಯಲ್ಲಿ ಶೋಧ Read More »

ಕಾಂತಮಂಗಲ ಶಾಲಾ ಜಗಲಿಯಲ್ಲಿ ಕೊಲೆಗೀಡಾದ ವ್ಯಕ್ತಿಯ ಗುರುತು ಪತ್ತೆ !

ಸುಳ್ಯ: ಅಜ್ಜಾವರ ಗ್ರಾಮದ ಕಾಂತಮಂಗಲ ಶಾಲಾ ಜಗಲಿಯಲ್ಲಿ ಕೊಲೆಗೀಡಾದ ವ್ಯಕ್ತಿಯ ಗುರುತು ಪತ್ತೆಯಾಗಿದೆ. ಕೊಡಗು ವಿರಾಜಪೇಟೆ ಮೂಲದ ವಸಂತ ಮೃತಪಟ್ಟವರೆಂದು ಗುರುತಿಸಲಾಗಿದೆ. ಇಂದು ಬೆಳಿಗ್ಗೆ ಕಾಂತಮಂಗಲ ಶಾಲಾ ಬಳಿಯಲ್ಲಿ ತಲೆಗೆ ಕಲ್ಲು ಹೊತ್ತು ಹಾಕಿ ಕೊಲೆಯಾದ ರೀತಿಯಲ್ಲಿ ವ್ಯಕ್ತಿಯೊಬ್ಬರ ಮೃತದೇಹ ಪತ್ತೆಯಾಗಿತ್ತು. ಪೊಲೀಸರು ಸ್ಥಳಕ್ಕೆ ಬಂದು ಮಹಜರು ನಡೆಸಿ ತನಿಖೆ ಆರಂಭಿಸಿದ್ದರು. ಪೊಲೀಸರು ನಡೆಸಿದ ತನಿಖೆಯಿಂದ ಮೃತಪಟ್ಟ ವ್ಯಕ್ತಿ ವಸಂತ ಎಂದು ಗುರುತಿಸಲಾಗಿದ್ದು ಈತ ಕುದ್ರೆಪಾಯದಿಂದ ಮದುವೆಯಾಗಿದ್ದ ಎಂದು ಹೇಳಲಾಗುತ್ತಿದೆ. ಹೆಚ್ಚಿನ ತನಿಖೆ ಮುಂದುವರಿದಿದೆ.

ಕಾಂತಮಂಗಲ ಶಾಲಾ ಜಗಲಿಯಲ್ಲಿ ಕೊಲೆಗೀಡಾದ ವ್ಯಕ್ತಿಯ ಗುರುತು ಪತ್ತೆ ! Read More »

ಶಂಕಾಸ್ಪದ ರೀತಿಯಲ್ಲಿ ಮೃತಪಟ್ಟ ಮಹಿಳೆ | ಪೊಲೀಸರಿಂದ ತನಿಖೆ

ಉಪ್ಪಿನಂಗಡಿ: ಮಹಿಳೆಯೊಬ್ಬರು ಶಂಕಾಸ್ಪದ ರೀತಿಯಲ್ಲಿ ಮೃತಪಟ್ಟಿ ಘಟನೆ ಪೆರ್ನೆ ಬಳಿಯ ಬಿಳಿಯೂರು ದರ್ಖಾಸ್‍ ನಿಂದ ವರದಿಯಾಗಿದೆ. ದರ್ಖಾಸ್ ನಿವಾಸಿ ಹೇಮಾವತಿ (37 ) ಮೃತ ಮಹಿಳೆ. ಈ ಕುರಿತು ಕೊಲೆ ಶಂಕೆ ವ್ಯಕ್ತವಾಗಿದ್ದು,  ಹೇಮಾವತಿ ತಾಯಿ, ಅಕ್ಕನ ಮಗನೊಂದಿಗೆ ಈ ಮನೆಯಲ್ಲಿದ್ದ ವೇಳೆ ನಿನ್ನೆ ರಾತ್ರಿ ಕೃತ್ಯ ನಡೆದಿದೆ. ಮೊದಲಿಗೆ ಪರಿಸರದಲ್ಲಿ ಹೃದಯಾಘಾತವೆಂಬ ಸುದ್ದಿ ಹರಡಿತ್ತು. ಆದರೆ ಬಳಿಕ ಈ ಬಗ್ಗೆ ಸಂಶಯ ವ್ಯಕ್ತವಾಗಿದ್ದು, ಪೊಲೀಸರು ಸ್ಥಳಕ್ಕೆ ಆಗಮಿಸಿದ್ದಾರೆ. ಪೊಲೀಸರು ವಿಚಾರಣೆಗಾಗಿ ಮೃತರ ಅಕ್ಕನ ಮಗ ಎಸೆಸ್ಸೆಲ್ಸಿ

ಶಂಕಾಸ್ಪದ ರೀತಿಯಲ್ಲಿ ಮೃತಪಟ್ಟ ಮಹಿಳೆ | ಪೊಲೀಸರಿಂದ ತನಿಖೆ Read More »

ಕಲ್ಲು ಎತ್ತಿ ಹಾಕಿ ಕೊಲೆಗೈದ ಸ್ಥಿತಿಯಲ್ಲಿ ಯುವಕನ ಶವ ಪತ್ತೆ !

ಸುಳ್ಯ: ಯುವಕನೊಬ್ಬನ ತಲೆಗೆ ಕಲ್ಲು ಎತ್ತಿ ಹಾಕಿ ಕೊಲೆ ಮಾಡಿರುವ ಘಟನೆ ಕಾಂತಮಂಗಲದಿಂದ ವರದಿಯಾಗಿದೆ. ಅಜ್ಜಾವರ ಗ್ರಾಮದ ಕಾಂತಮಂಗಲದ ಶಾಲೆಯೊಂದರ ಜಗಲಿಯಲ್ಲಿ ತಲೆಗೆ ಕಲ್ಲು ಎತ್ತಿ ಕೊಲೆ ಮಾಡಿರುವ ಯುವಕನ ಶವ ಪತ್ತೆಯಾಗಿದೆ. ಸುಮಾರು 25 – 30 ವರ್ಷದ ಅಪರಿಚಿತ ಯುವಕನ ಶವ ಎಂದು ಅಂದಾಜಿಸಲಾಗಿದೆ. ಪೋಲೀಸರು ಸ್ಥಳಕ್ಕೆ ಬಂದಿದ್ದು ಮಹಜರು ನಡೆಸುತಿದ್ದಾರೆ ಎಂದು ತಿಳಿದು ಬಂದಿದೆ.

ಕಲ್ಲು ಎತ್ತಿ ಹಾಕಿ ಕೊಲೆಗೈದ ಸ್ಥಿತಿಯಲ್ಲಿ ಯುವಕನ ಶವ ಪತ್ತೆ ! Read More »

ಹಣದ ಬೇಡಿಕೆಯಿಟ್ಟು ಉದ್ಯಮಿಗೆ ಅನಾಮಿಕ ವ್ಯಕ್ತಿಯಿಂದ ಕರೆ : ಪ್ರಕರಣ ದಾಖಲು

ಪುತ್ತೂರು : ಬೊಳುವಾರಿನ ಉದ್ಯಮಿಯೊಬ್ಬರಿಗೆ ಕರೆ ಮಾಡಿ ಹಣಕ್ಕೆ ಬೇಡಿಕೆ ಇಟ್ಟಿರುವ ಕುರಿತು ಪುತ್ತೂರು ನಗರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಅನಾಮಿಕ ವ್ಯಕ್ತಿಯೊಬ್ಬ 4 ದಿನಗಳ ಹಿಂದೆ ಹಿಂದಿ ಭಾಷೆಯಲ್ಲಿ ಸಿಬಿಐ ಕ್ರೈಂ ಬ್ರಾಂಚ್‌ನಿಂದ ಮಾತನಾಡುತ್ತಿದ್ದೇನೆ ಎಂದು ಪರಿಚಯಿಸಿಕೊಂಡು ಉದ್ಯಮಿಯ ಪುತ್ರನ ಹೆಸರು ಹೇಳಿ, ನಿಮ್ಮ ಮಗನನ್ನು ಡ್ರಗ್ಸ್ ಕೇಸ್‌ನಲ್ಲಿ ಅರೆಸ್ಟ್ ಮಾಡಿದ್ದೇವೆ. ನಿಮ್ಮ ಮಗ ಸೇರಿದಂತೆ ಮೂವರನ್ನು ಈ ಕೇಸ್‌ನಲ್ಲಿ ಬಂಧಿಸಿ ದೆಹಲಿಗೆ ಕರೆದುಕೊಂಡು ಹೋಗುತ್ತಿದ್ದೇವೆ ಎಂದು ಹೇಳಿದ್ದಾನೆ. ಈ ಸಂದರ್ಭದಲ್ಲಿ ಉದ್ಯಮಿಯು ಪುತ್ರನ ಜತೆ

ಹಣದ ಬೇಡಿಕೆಯಿಟ್ಟು ಉದ್ಯಮಿಗೆ ಅನಾಮಿಕ ವ್ಯಕ್ತಿಯಿಂದ ಕರೆ : ಪ್ರಕರಣ ದಾಖಲು Read More »

ವಿಷ ಸೇವಿಸಿ ಚಿಂತಾಜನಕ ಸ್ಥಿತಿಯಲ್ಲಿದ್ದ ವಿದ್ಯಾರ್ಥಿನಿ ಧನ್ಯಶ್ರೀ ಮೃತ್ಯು

ಕಾಸರಗೋಡು: ವಿಷ ಸೇವಿಸಿ ಚಿಂತಾಜನಕ ಸ್ಥಿತಿಯಲ್ಲಿದ್ದ ಪದವಿ ವಿದ್ಯಾರ್ಥಿನಿಯೊಬ್ಬರು ಮೃತಪಟ್ಟ ಘಟನೆ ಕಾಸರಕೋಟಿಯ ಖಾಸಗಿ ಆಸ್ಪತ್ರೆಯಲ್ಲಿ ನಡೆದಿದೆ. ಮಂಗಳೂರಿನ ಕಾಲೇಜೊಂದರಲ್ಲಿ ದ್ವಿತೀಯ ವರ್ಷದ ಪದವಿ ವಿದ್ಯಾರ್ಥಿನಿ, ಆಯಾಲಾ ಹಾಗೂ ಆಟೋ ಚಾಲಕ ನುರೇಶ್ ದಂಪತಿ ಪುತ್ರಿ ಯುಡುಪುಲುವಿನ ಧನ್ಯಶ್ರೀ (19) ಮೃತಪಟ್ಟವರು. ಕೆಲ ದಿನಗಳ ಹಿಂದೆ ಧನ್ಯಶ್ರೀ ಅವರು ಹೊಟ್ಟೆ ನೋವಿನಿಂದಾಗಿ ವೈದ್ಯರನ್ನು ನೋಡಿದ್ದರು. ಔಷಧ ಸೇವಿಸಿದ ಬಳಿಕ ನೋವು ಕಡಿಮೆಯಾಗಿ ನಂತರ ನೋವು ಕಾಣಿಸಿಕೊಂಡು ದೇರಳಕಟ್ಟೆಯ ಆಸ್ಪತ್ರೆಗೆ ಕರೆದೊಯ್ಯಲಾಯಿತು. ಅಲ್ಲಿಯೇ ಧನ್ಯಶ್ರೀ ಅವರು ವಿಷ ಸೇವಿಸಿರುವುದಾಗಿ

ವಿಷ ಸೇವಿಸಿ ಚಿಂತಾಜನಕ ಸ್ಥಿತಿಯಲ್ಲಿದ್ದ ವಿದ್ಯಾರ್ಥಿನಿ ಧನ್ಯಶ್ರೀ ಮೃತ್ಯು Read More »

ಅಕ್ರಮ ಗಣಿಗಾರಿಕೆ ಪ್ರಕರಣ | ಬಂಧಿಸಲ್ಪಟ್ಟಿದ್ದ ಶಶಿರಾಜ್ ಶೆಟ್ಟಿಗೆ ಜಾಮೀನು

ಬೆಳ್ತಂಗಡಿ: ಅಕ್ರಮ ಗಣಿಗಾರಿಕೆ ಪ್ರಕರಣಕ್ಕೆ ಸಂಬಂಧಿಸಿ ಬಂಧಿಸಲ್ಪಟ್ಟಿದ್ದ ಶಶಿರಾಜ್ ಶೆಟ್ಟಿಗೆ ಜಾಮೀನು ಮಂಜೂರಾಗಿದೆ. ಬೆಳ್ತಂಗಡಿ ತಾಲೂಕಿನಲ್ಲಿ ಅಕ್ರಮವಾಗಿ ಗಣಿಗಾರಿಕೆ ನಡೆಸುತ್ತಿದ್ದರೆಂದು ತಾಲೂಕು ಬಿಜೆಪಿ ಯುವಮೋರ್ಚ ಅಧ್ಯಕ್ಷರಾದ ಶಶಿರಾಜ್ ಶೆಟ್ಟಿ ಬಂಧನವಾಗಿತ್ತು. ಅದೇ ದಿನ ರಾತ್ರಿ ಶಾಸಕ ಹರೀಶ್ ಪೂಂಜ ಠಾಣೆಗೆ ಆಗಮಿಸಿ ಬಿಡುಗಡೆಗೊಳಿಸುವಂತೆ ಬೆಳಿಗ್ಗೆ ತನಕ ಠಾಣೆಯಲ್ಲಿದ್ದರು ಪ್ರಯೋಜನವಾಗದೇ ನಂತರದ ಬೆಳವಣಿಗೆಯಲ್ಲಿ ಪ್ರತಿಭಟನೆಗಳು ನಡೆದರು ಕಸ್ಟಡಿಗೆ ಪಡೆದಿದ್ದರು. ಇಂದು ಜಾಮೀನು ಮಂಜೂರುಗೊಂಡಿದೆ. ಶಶಿರಾಜ್ ಪರ ವಕೀಲರಾದ ಮಹೇಶ್ ಕಜೆ ವಾದಿಸಿದ್ದರು.

ಅಕ್ರಮ ಗಣಿಗಾರಿಕೆ ಪ್ರಕರಣ | ಬಂಧಿಸಲ್ಪಟ್ಟಿದ್ದ ಶಶಿರಾಜ್ ಶೆಟ್ಟಿಗೆ ಜಾಮೀನು Read More »

ಕ್ಷುಲ್ಲಕ ವಿಚಾರದಲ್ಲಿ ಗಲಾಟೆ : ಚೂರಿ ಇರಿತ

ಪುತ್ತೂರು : ಹಿರಿಯ ನಾಗರಿಕರ ನಡುವೆ ಕ್ಷುಲ್ಲಕ ಕಾರಣಕ್ಕೆ ಗಲಾಟೆ ನಡೆದು ಓರ್ವರಿಗೆ ಚೂರಿಯಿಂದ ಇರಿದ ಘಟನೆ ಕೋರ್ಟ್ ರಸ್ತೆಯಲ್ಲಿ ಇಂದು ನಡೆದಿದೆ. ಗುಣಶೇಖರ್ ಶೆಟ್ಟಿ ಹಾಗೂ ಸದಾಶಿವ ಪೈ ಎಂಬವರ ಮಧ್ಯೆ ಪಾರ್ಕಿಂಗ್ ವಿಚಾರವಾಗಿ ಈ ಗಲಾಟೆ ನಡೆದಿದ್ದು, ಜಗಳ ತಾರಕಕ್ಕೇರಿ ಚೂರಿ ಇರಿಯಲಾಗಿದೆ ಎಂದು ತಿಳಿದು ಬಂದಿದೆ. ಸದಾಶಿವ ಪೈ ಅವರ ಕೈ ಗೆ ಚೂರಿ ತಾಗಿದ್ದು, ಅವರು ಖಾಸಗಿ ಆಸ್ಪತ್ರೆಗೆ ದಾಖಲಾಗಿದ್ದಾರೆ ಎಂದು ತಿಳಿದು ಬಂದಿದೆ.

ಕ್ಷುಲ್ಲಕ ವಿಚಾರದಲ್ಲಿ ಗಲಾಟೆ : ಚೂರಿ ಇರಿತ Read More »

error: Content is protected !!
Scroll to Top