ಅಪರಾಧ

ಪಹಲ್ಗಾಮ್‌ ದಾಳಿಯ ಮಾಸ್ಟರ್‌ಮೈಂಡ್‌ ಸೈಫುಲ್ಲಾ ಖಾಲಿದ್‌

ಭಾರತದ ಪ್ರಧಾನಿಗಿಂತಲೂ ಹೆಚ್ಚಿನ ಭದ್ರತೆ ಇದೆಯಂತೆ ಪಾಕಿಸ್ಥಾನದ ಈ ಉಗ್ರನಿಗೆ ಹೊಸದಿಲ್ಲಿ: ಪಹಲ್ಗಾಮ್ ಭಯೋತ್ಪಾದಕ ದಾಳಿಯ ಸೂತ್ರಧಾರ ಸೈಫುಲ್ಲಾ ಖಾಲಿದ್‌ ಎಂಬ ಉಗ್ರ ಮುಖಂಡ ಎಂದು ತಿಳಿದುಬಂದಿದೆ. ದಾಳಿಯ ಹೊಣೆಯನ್ನು ಲಷ್ಕರ್-ಎ-ತೊಯ್ಬಾ ಭಯೋತ್ಪಾದಕ ಸಂಘಟನೆಯ ಅಂಗಸಂಸ್ಥೆ ‘ದಿ ರೆಸಿಸ್ಟೆನ್ಸ್ ಫ್ರಂಟ್’ (ಟಿಆರ್‌ಎಫ್) ಹೊತ್ತುಕೊಂಡಿದೆ. ಈ ದಾಳಿಯ ಮಾಸ್ಟರ್ ಮೈಂಡ್ ಭಯೋತ್ಪಾದಕ ಸೈಫುಲ್ಲಾ ಖಾಲಿದ್ ಎನ್ನಲಾಗಿದೆ. ಜಮ್ಮು ಮತ್ತು ಕಾಶ್ಮೀರದಲ್ಲಿ ಲಷ್ಕರ್ ಮತ್ತು ಟಿಆರ್‌ಎಫ್‌ನ ಭಯೋತ್ಪಾದಕ ಚಟುವಟಿಕೆಗಳ ಪ್ರಮುಖ ನಿರ್ವಾಹಕ ಈ ಸೈಫುಲ್ಲಾ ಖಾಲಿದ್‌. ಸೈಫುಲ್ಲಾ ಖಾಲಿದ್​ನನ್ನು ಸೈಫುಲ್ಲಾ […]

ಪಹಲ್ಗಾಮ್‌ ದಾಳಿಯ ಮಾಸ್ಟರ್‌ಮೈಂಡ್‌ ಸೈಫುಲ್ಲಾ ಖಾಲಿದ್‌ Read More »

ಖುಷಿಯಿಂದ ಪ್ರವಾಸಕ್ಕೆ ಹೋದವರು ಹೆಂಡತಿ, ಮಗನ ಎದುರೇ ಉಗ್ರರ ಗುಂಡಿಗೆ ಬಲಿಯಾದರು

ಬೆಂಗಳೂರಿನ ಭರತ್‌ಭೂಷಣ್‌, ಶಿವಮೊಗ್ಗದ ಮಂಜುನಾಥ್‌ ಹತ್ಯೆ ಅತಿ ದಾರುಣ ಬೆಂಗಳೂರು: ಕಾಶ್ಮೀರದ ಪ್ರಸಿದ್ಧ ಪ್ರವಾಸಿ ತಾಣ ಪಹಲ್ಗಾಂವ್‌ನ ಬೈಸನ್‌ ಎಂಬ ಕಣಿವೆಯಲ್ಲಿ ಮಂಗಳವಾರ ಮಧ್ಯಾಹ್ನ ನಡೆದ ಉಗ್ರರ ಭೀಕರ ದಾಳಿಯಲ್ಲಿ ಕರ್ನಾಟಕದ ಇಬ್ಬರು ವ್ಯಕ್ತಿಗಳು ತಮ್ಮ ಹೆಂಡತಿ ಮತ್ತು ಮಕ್ಕಳ ಎದುರೇ ಗುಂಡೇಟು ತಿಂದು ಮರಣವನ್ನಪ್ಪಿದ್ದಾರೆ. ಉಗ್ರರು ಪ್ರವಾಸಿಗರ ಪೈಕಿ ಪುರುಷರನ್ನು ಪ್ರತ್ಯೇಕಿಸಿ ಅವರ ಧರ್ಮ ಕೇಳಿ, ಕುರಾನ್‌ನ ವಾಕ್ಯಗಳನ್ನು ಪಠಿಸಲು ಹೇಳಿ ಅವರು ಹಿಂದುಗಳು ಎಂದು ದೃಢಪಡಿಸಿಕೊಂಡು ಕುಟುಂಬದವರ ಎದುರೇ ಗುಂಡಿಕ್ಕಿದ್ದಾರೆ. ಬೆಂಗಳೂರು ಮೂಲದ ಟೆಕ್ಕಿ

ಖುಷಿಯಿಂದ ಪ್ರವಾಸಕ್ಕೆ ಹೋದವರು ಹೆಂಡತಿ, ಮಗನ ಎದುರೇ ಉಗ್ರರ ಗುಂಡಿಗೆ ಬಲಿಯಾದರು Read More »

26 ಜನರ ಹತ್ಯೆಗೆ ಜಾಗತಿಕ ಆಕ್ರೋಶ ವ್ಯಕ್ತ; ಸೌದಿ ಪ್ರವಾಸ ಮೊಟಕುಗೊಳಿಸಿ ವಾಪಸಾದ ಮೋದಿ

2019ರ ಪುಲ್ವಾಮಾ ಬಳಿಕ ಅತಿದೊಡ್ಡ ದಾಳಿ – ಧರ್ಮ ಕೇಳಿ ಪ್ರವಾಸಿಗರಿಗೆ ಗುಂಡಿಕ್ಕಿದ ಉಗ್ರರು ಹೊಸದಿಲ್ಲಿ : ಜಮ್ಮು ಮತ್ತು ಕಾಶ್ಮೀರದ ಪ್ರವಾಸಿಗರ ಸ್ವರ್ಗ ಎಂದು ಕರೆಯಲ್ಪಡುವ ಪಹಲ್ಗಾಮ್‌ ಕಣಿವೆ ನಿನ್ನೆ ಅಕ್ಷರಶಃ ನರಕವಾಗಿ ಬದಲಾಗಿದೆ. ಪ್ರವಾಸಗರ ಮೇಲೆ ಭಯೋತ್ಪಾದಕರು ನಡೆಸಿದ ದಾಳಿಯಲ್ಲಿ ಇಬ್ಬರು ಕನ್ನಡಿಗರ ಸಹಿತ ಕನಿಷ್ಠ 26 ಮಂದಿ ಸಾವನ್ನಪ್ಪಿದ್ದಾರೆ. ಇನ್ನೂ ಹಲವು ಮಂದಿ ಚಿಂತಾಜನಕ ಸ್ಥಿತಿಯಲ್ಲಿ ಇದ್ದು, ಸಾವಿನ ಸಂಖ್ಯೆ ಹೆಚ್ಚಾಗುವ ಸಾಧ್ಯತೆಯಿದೆ. ಸೌದಿ ಪ್ರವಾಸದಲ್ಲಿದ್ದ ಪ್ರಧಾನಿ ನರೇಂದ್ರ ಮೋದಿ ಪ್ರವಾಸ ಮೊಟಕುಗೊಳಿಸಿ

26 ಜನರ ಹತ್ಯೆಗೆ ಜಾಗತಿಕ ಆಕ್ರೋಶ ವ್ಯಕ್ತ; ಸೌದಿ ಪ್ರವಾಸ ಮೊಟಕುಗೊಳಿಸಿ ವಾಪಸಾದ ಮೋದಿ Read More »

ಮಾಚಾರಿನಲ್ಲಿ ನಡೆದ ಕೊಲೆಯತ್ನ ಪ್ರಕರಣ : ಆರೋಪಿಗಳಿಗೆ ಹೈಕೋರ್ಟ್ ನಿಂದ ಜಾಮೀನು

ಬೆಳ್ತಂಗಡಿ: ಹಣದ ವಿಚಾರಕ್ಕೆ ಸಂಬಂಧಿಸಿ ಉಜಿರೆ ಗ್ರಾಮದ ಮಾಚಾರು ಎಂಬಲ್ಲಿ ಯುವಕರ ನಡುವೆ ನಡೆದ ಮಾರಣಾಂತಿಕ ಹಲ್ಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಆರೋಪಿಗಳಿಗೆ ಕರ್ನಾಟಕ ಹೈಕೋರ್ಟ್ ಜಾಮೀನು ನೀಡಿದೆ. ಘಟನೆಯಲ್ಲಿ ಭಾಗಿಯಾಗಿದ್ದ ಮೂವರು ಆರೋಪಿಗಳ ವಿರುದ್ಧ ಪೊಲೀಸರು ಭಾರತೀಯ ನ್ಯಾಯ ಸಂಹಿತೆ, ಕಲಂ  109,351(2) ಜತೆ 3(5) ಕೊಲೆಯತ್ನ ಪ್ರಕರಣ ದಾಖಲಿಸಿದ್ದರು. ಇದೀಗ ಮೊದಲ ಆರೋಪಿ ನ್ಯಾಯಾಂಗ ಬಂಧನದಲ್ಲಿರುವ ಹಮೀದ್ ಗೆ ನಿಯಮಿತ ಜಾಮೀನು ಮತ್ತು ಎರಡನೇ ಆರೋಪಿ ರಿಯಾಝ್ ಮತ್ತು ಮೂರನೇ ಆರೋಪಿ ಅರ್ಷಾದ್ ಗೆ ನಿರೀಕ್ಷಣಾ

ಮಾಚಾರಿನಲ್ಲಿ ನಡೆದ ಕೊಲೆಯತ್ನ ಪ್ರಕರಣ : ಆರೋಪಿಗಳಿಗೆ ಹೈಕೋರ್ಟ್ ನಿಂದ ಜಾಮೀನು Read More »

ಉಪ್ಪಿನಂಗಡಿ : ಅಪ್ರಾಪ್ತೆಯ ಮೇಲೆ ಅತ್ಯಾಚಾರ ಎಸಗಿದ ಆರೋಪಿ ಪೋಕ್ಸೊದಡಿ ಬಂಧನ

ಉಪ್ಪಿನಂಗಡಿ: ಕಾಲೇಜು ಬಿಟ್ಟು ಮನೆಯಲ್ಲಿದ್ದ ಅಪ್ರಾಪ್ತ ವಯಸ್ಸಿನ ಯುವತಿಯ ಮೇಲೆ ಅತ್ಯಾಚಾರ ಎಸಗಿ ಆಕೆಯನ್ನು ಗರ್ಭಿಣಿಯಾಗಿಸಿದ ಘಟನೆ ಉಪ್ಪಿನಂಗಡಿಯ ಕೌಕ್ರಾಡಿ ಗ್ರಾಮದ ಕಾಪಿನಬಾಗಿಲು ಎಂಬಲ್ಲಿ ಸಂಭವಿಸಿದ್ದು, ಸಂಬಂಧಿಕ ಯುವಕನ ವಿರುದ್ಧ ಉಪ್ಪಿನಂಗಡಿ ಪೊಲೀಸರು ಪೋಕ್ಸೊ ಕೇಸ್‌ ದಾಖಲಿಸಿ ಬಂಧಿಸಿದ್ದಾರೆ. 16ರ ಹರೆಯದ ಯುವತಿ ದೂರದ ಸಂಬಂಧಿಕ ರಮೇಶ ಎಂಬವನ ಮನೆಗೆ ಫೆ.10ರಂದು ಹೋಗಿದ್ದಳು. ಅಂದು ರಾತ್ರಿ ರಮೇಶ ಆಕೆಯನ್ನು ಪುಸಲಾಯಿಸಿ, ಬೆದರಿಸಿ ದೈಹಿಕ ಸಂಪರ್ಕ ಮಾಡಿದ್ದ. ನಂತರ ಮಾ.9, ಮಾ.27 ಮತ್ತು ಮಾ.28ರಂದು ಇದೇ ರೀತಿ ಬಲವಂತವಾಗಿ

ಉಪ್ಪಿನಂಗಡಿ : ಅಪ್ರಾಪ್ತೆಯ ಮೇಲೆ ಅತ್ಯಾಚಾರ ಎಸಗಿದ ಆರೋಪಿ ಪೋಕ್ಸೊದಡಿ ಬಂಧನ Read More »

ರಿಕ್ಕಿ ರೈ ಮೇಲೆ ನಡೆದ ಫೈರಿಂಗ್‌ ನಕಲಿ?

ಮಾಜಿ ಗನ್‌ಮ್ಯಾನ್‌ ಮೂಲಕ ಫೈರಿಂಗ್‌ ಮಾಡಿಸಿಕೊಂಡ ಸಂಶಯ ಬೆಂಗಳೂರು: ಮಾಜಿ ಡಾನ್‌ ಮುತ್ತಪ್ಪ ರೈಯವರ ಪುತ್ರ ರಿಕ್ಕಿ ರೈ ಮೇಲೆ ನಡೆದಿದ್ದ ಫೈರಿಂಗ್‌ ಸುತ್ತ ಅನುಮಾನ ಮೂಡಿದೆ. ಇದು ನಕಲಿ ಶೂಟೌಟ್‌ ಆಗಿರುವ ಸಾಧ್ಯತೆ ಇದೆ ಎಂದು ಪೊಲೀಸರು ಅನುಮಾನಿಸಿದ್ದಾರೆ. ರಿಕ್ಕಿ ರೈಗೆ ಒಂದು ಕಾಲದಲ್ಲಿ ಗನ್‌ಮ್ಯಾನ್ ಆಗಿದ್ದ ವಿಠ್ಠಲ ಎಂಬಾತ ಕಾರಿನ ಮೇಲೆ ಫೈರಿಂಗ್ ಮಾಡಿದ್ದಾನೆ ಎಂಬ ಆರೋಪ ಕೇಳಿ ಬಂದಿದೆ. ಮಾಜಿ ಗನ್‌ಮ್ಯಾನ್ ವಿಠ್ಠಲನನ್ನು ಬಿಡದಿ ಪೊಲೀಸರು ವಶಕ್ಕೆ ಪಡೆದು ವಿಚಾರಣೆ ನಡೆಸುತ್ತಿದ್ದಾರೆ. ವಿಠ್ಠಲ

ರಿಕ್ಕಿ ರೈ ಮೇಲೆ ನಡೆದ ಫೈರಿಂಗ್‌ ನಕಲಿ? Read More »

1 ಕೋಟಿ ರೂ. ಬಹುಮಾನವಿದ್ದ ಮುಖಂಡನ ಸಹಿತ ಎಂಟು ನಕ್ಸಲರು ಬಲಿ

ರಾಂಚಿ: ಜಾರ್ಖಂಡ್‌ನ ಬೊಕಾರೊದ ದಟ್ಟಾರಣ್ಯದಲ್ಲಿ ನಡೆಸಿದ ಕಾರ್ಯಾಚರಣೆಯಲ್ಲಿ ತಲೆಗೆ 1 ಕೋಟಿ ರೂ. ಬಹುಮಾನ ಹೊತ್ತಿದ್ದ ನಕ್ಸಲ್ ನಾಯಕ ಸೇರಿ 8 ಮಂದಿ ನಕ್ಸಲರನ್ನು ಕಮಾಂಡೋಗಳು ಗುಂಡಿಕ್ಕಿ ಕೊಂದಿದ್ದಾರೆ. ಸೋಮವಾರ ಬೆಳಗ್ಗೆ ಕೇಂದ್ರ ಮೀಸಲು ಪೊಲೀಸ್ ಪಡೆ, ಕಮಾಂಡೋ ಬೆಟಾಲಿಯನ್ ಫಾರ್ ರೆಸಲ್ಯೂಟ್ ಆಕ್ಷನ್ (ಕೋಬ್ರಾ) ಕಮಾಂಡೋಗಳ ಅರಣ್ಯ ಯುದ್ಧ ಘಟಕ ಮತ್ತು ಜಾರ್ಖಂಡ್ ಪೊಲೀಸರು ಜಂಟಿ ಕಾರ್ಯಾಚರಣೆಯನ್ನು ನಡೆಸಿದ್ದರು. ಮೋಸ್ಟ್ ವಾಂಟೆಡ್ ನಕ್ಸಲ್ ನಾಯಕನ ಪತ್ತೆಗೆ ಸರ್ಕಾರ 1 ಕೋಟಿ ರೂ. ಬಹುಮಾನ ಫೋಷಿಸಿತ್ತು. ಇದೀಗ

1 ಕೋಟಿ ರೂ. ಬಹುಮಾನವಿದ್ದ ಮುಖಂಡನ ಸಹಿತ ಎಂಟು ನಕ್ಸಲರು ಬಲಿ Read More »

ನಿವೃತ್ತ ಡಿಜಿಪಿ ಓಂ ಪ್ರಕಾಶ್ ಕೊಲೆ ಪ್ರಕರಣ : ಪತ್ನಿ ಪಲ್ಲವಿ ಅರೆಸ್ಟ್‌

ಆತ್ಮರಕ್ಷಣೆಗಾಗಿ ಕೊಲೆ ಮಾಡಬೇಕಾಯಿತು ಎಂದು ಹೇಳಿಕೆ ಬೆಂಗಳೂರು : ನಿವೃತ್ತ ಪೊಲೀಸ್​ ಮಹಾನಿರ್ದೇಶಕ ಓಂ ಪ್ರಕಾಶ್ ಕೊಲೆ ಪ್ರಕರಣಕ್ಕೆ ಸಂಬಂಧಿಸಿ ಅವರ ಪತ್ನಿ ಪಲ್ಲವಿಯನ್ನು ಪೊಲೀಸರು ಬಂಧಿಸಿದ್ದಾರೆ. ರಾಜ್ಯದಲ್ಲಿ ಸಂಚಲನ ಸೃಷ್ಟಿಸಿದ ಈ ಪ್ರಕರಣಕ್ಕೆ ಸಂಬಂಧಿಸಿ ನಿನ್ನೆಯಿಂದೀಚೆಗೆ ಪತ್ನಿ ಪಲ್ಲವಿ ಮತ್ತು ಪುತ್ರಿ ಕೃತಿಯನ್ನು ಎಚ್​ಎಸ್​ಆರ್​​ ಲೇಔಟ್​​ ಪೊಲೀಸರು ವಶಕ್ಕೆ ಪಡೆದುಕೊಂಡು ವಿಚಾರಣೆಗೊಳಪಡಿಸಿದ್ದರು. ಇಂದು ಪಲ್ಲವಿಯನ್ನು ಬಂಧನಕ್ಕೊಳಪಡಿಸುವ ಔಪಚಾರಿಕತೆ ಮಾಡಲಾಯಿತು. ಎಚ್‌ಎಸ್‌ಆರ್‌ ಲೇಔಟ್‌ನಲ್ಲಿರುವ ತಮ್ಮ ನಿವಾಸದಲ್ಲೆ ಓಂ ಪ್ರಕಾಶ್ ನಿನ್ನೆ ಸಂಜೆ ಭೀಕರವಾಗಿ ಹತ್ಯೆಯಾಗಿದ್ದಾರೆ. ಪತ್ನಿ ಮತ್ತು

ನಿವೃತ್ತ ಡಿಜಿಪಿ ಓಂ ಪ್ರಕಾಶ್ ಕೊಲೆ ಪ್ರಕರಣ : ಪತ್ನಿ ಪಲ್ಲವಿ ಅರೆಸ್ಟ್‌ Read More »

ಸ್ವಾಮೀಜಿಯನ್ನೇ 26 ದಿನ ಡಿಜಿಟಲ್‌ ಅರೆಸ್ಟ್‌ ಮಾಡಿ 2.5 ಕೋಟಿ ರೂ. ಲಪಟಾಯಿಸಿದ ಖದೀಮರು

ಸೈಬರ್‌ ವಂಚಕರ ಮೋಸದಿಂದ ಮಠದ ಹಣವೆಲ್ಲ ಮಂಗಮಾಯ ಭೋಪಾಲ : ಸೈಬರ್‌ ಖದೀಮರು ಮಠದ ಸ್ವಾಮೀಜಿಯನ್ನೇ ಡಿಜಿಟಲ್‌ ಅರೆಸ್ಟ್‌ ಮಾಡಿ 2.5 ಕೋ. ರೂ. ಲಪಟಾಯಿಸಿದ್ದಾರೆ. ಮಧ್ಯಪ್ರದೇಶದ ಗ್ವಾಲಿಯರ್‌ ನಗರದಲ್ಲಿರುವ ರಾಮಕೃಷ್ಣ ಮಿಶನ್‌ ಆಶ್ರಮದ ಕಾರ್ಯದರ್ಶಿ ಸುಪ್ರದೀಪ್ತಾನಂದ ಸ್ವಾಮೀಜಿ ಬರೋಬ್ಬರಿ 26 ದಿನ ಡಿಜಿಟಲ್‌ ಅರೆಸ್ಟ್‌ ಆಗಿ 2.5 ಕೋ. ರೂ. ಕಳೆದುಕೊಂಡಿದ್ದಾರೆ. ಮಾ.15ರಂದು ಸ್ವಾಮೀಜಿಗೆ ಕರೆ ಮಾಡಿದ್ದ ವ್ಯಕ್ತಿಯೊಬ್ಬ ತನ್ನನ್ನು ಇ.ಡಿ. ಅಧಿಕಾರಿ ಎಂದು ಪರಿಚಯಿಸಿಕೊಂಡು 20 ಕೋ. ರೂ. ಅಕ್ರಮ ವರ್ಗಾವಣೆ ಪ್ರಕರಣದಲ್ಲಿ ನಿಮ್ಮ

ಸ್ವಾಮೀಜಿಯನ್ನೇ 26 ದಿನ ಡಿಜಿಟಲ್‌ ಅರೆಸ್ಟ್‌ ಮಾಡಿ 2.5 ಕೋಟಿ ರೂ. ಲಪಟಾಯಿಸಿದ ಖದೀಮರು Read More »

ಪತ್ನಿ, ಮಗಳಿಂದಲೇ ರಾಜ್ಯದ ಮಾಜಿ ಪೊಲೀಸ್‌ ಮಹಾನಿರ್ದೇಶಕ ಭೀಕರ ಹತ್ಯೆ

ರಾಜ್ಯದಲ್ಲಿ ಸಂಚಲನ ಸೃಷ್ಟಿಸಿದ ನಿವೃತ್ತ ಪೊಲೀಸ್‌ ಉನ್ನತಾಧಿಕಾರಿಯ ಕೊಲೆ ಬೆಂಗಳೂರು : ರಾಜ್ಯದ ನಿವೃತ್ತ ಪೊಲೀಸ್​ ಮಹಾನಿರ್ದೇಶಕ ಓಂ ಪ್ರಕಾಶ್ (68) ಹತ್ಯೆ ಪ್ರಕರಣ ಕರ್ನಾಟಕದಲ್ಲಿ ಸಂಚಲನ ಸೃಷ್ಟಿಸಿದೆ. ಹತ್ಯೆ ಸಂಬಂಧ ಅವರ ಪತ್ನಿ ಹಾಗೂ ಮಗಳನ್ನು ಬೆಂಗಳೂರು ಪೊಲೀಸರು ವಶಕ್ಕೆ ಪಡೆದುಕೊಂಡಿದ್ದಾರೆ. ಘಟನೆ ಸಂಬಂಧ ತನಿಖಾಧಿಕಾರಿಗಳ ಎದುರು ಓಂ ಪ್ರಕಾಶ್ ಪತ್ನಿ ಪಲ್ಲವಿ ಅವರು ಅನೇಕ ಸ್ಫೋಟಕ ಅಂಶಗಳನ್ನು ತಿಳಿಸಿದ್ದಾರೆ ಎಂದು ಪೊಲೀಸ್ ಮೂಲಗಳು ತಿಳಿಸಿವೆ. ಪತ್ನಿ ಪಲ್ಲವಿ ಹಾಗೂ ಮಗಳು ಕೃತಿ ಸದ್ಯ ಪೊಲೀಸರ

ಪತ್ನಿ, ಮಗಳಿಂದಲೇ ರಾಜ್ಯದ ಮಾಜಿ ಪೊಲೀಸ್‌ ಮಹಾನಿರ್ದೇಶಕ ಭೀಕರ ಹತ್ಯೆ Read More »

error: Content is protected !!
Scroll to Top