ಅಪರಾಧ

ಮಂಗಳೂರಿನ ನಡುರಸ್ತೆಯಲ್ಲಿ ನಮಾಜ್ : ಪ್ರಕರಣ ದಾಖಲು

ಮಂಗಳೂರು : ಕಂಕನಾಡಿಯ ಮಸೀದಿ ಪಕ್ಕದ ರಸ್ತೆಯಲ್ಲಿ ನಮಾಜ್ ಮಾಡಿರುವ ವಿಡಿಯೋ ವೈರಲ್ ಆಗುತ್ತಿದ್ದಂತೆ ಇದೀಗ ರಸ್ತೆಯಲ್ಲಿ ನಮಾಜ್ ಮಾಡಿದವರ ವಿರುದ್ಧ ಕದ್ರಿ ಪೊಲೀಸರು ಎಫ್ಐಆರ್‌ ದಾಖಲಿಸಿದ್ದಾರೆ. ಮೇ 24 ರಂದು ಕಂಕನಾಡಿಯ ಮಸೀದಿ ಎದುರು ಕೆಲವು ಯುವಕರು ರಸ್ತೆಯನ್ನು ಬ್ಲಾಕ್ ಮಾಡಿ ನಮಾಜ್ ಮಾಡಿದ್ದರು. ಹಿಂದೂಪರ ಸಂಘಟನೆಗಳ ಆಕ್ರೋಶಕ್ಕೆ ಕಾರಣವಾಗಿತ್ತು. ಕಲಂ 341, 283, 143 ಜೊತೆಗೆ 149 ಐ.ಪಿ.ಸಿಯಂತೆ ಕದ್ರಿ ಪೊಲೀಸರು ಸುಮೊಟೊ ಪ್ರಕರಣ ದಾಖಲು ಮಾಡಿಕೊಂಡಿದ್ದಾರೆ. ಅಪರಿಚಿತ ವ್ಯಕ್ತಿಗಳ ಮೇಲೆ ಮಂಗಳೂರಿನ ಕದ್ರಿ […]

ಮಂಗಳೂರಿನ ನಡುರಸ್ತೆಯಲ್ಲಿ ನಮಾಜ್ : ಪ್ರಕರಣ ದಾಖಲು Read More »

ಅರ್ಜುನ ಆನೆ ಸಮಾಧಿ ಸ್ಥಳಕ್ಕೆ ಅಕ್ರಮ ಪ್ರವೇಶ ಮಾಡಿದ ದರ್ಶನ್ ಅಭಿಮಾನಿ : ಪ್ರಕರಣ ದಾಖಲು

ಹಾಸನ: ಕೆಲದಿನಗಳ ಹಿಂದೆ ಕಾಡಾನೆ ಸೆರೆ ವೇಳೆ ದುರಂತ ಸಾವಿಗೀಡಾಗಿದ್ದ ದಸರಾ ಆನೆ ಅರ್ಜುನನ ಸಮಾಧಿ ಸ್ಥಳಕ್ಕೆ ಅಕ್ರಮ ಪ್ರವೇಶ ಮಾಡಿದ ಆರೋಪಕ್ಕೆ ಸಂಬಂಧಿಸಿದಂತೆ ನಟ ದರ್ಶನ್ ಅಭಿಮಾನಿ ವಿರುದ್ಧ ಪ್ರಕರಣ ದಾಖಲಿಸಿದೆ. ಅರಣ್ಯ ಕಾಯಿದೆ 1963 ಮತ್ತು 1969 ರ ಅಡಿಯಲ್ಲಿ ನಟ ದರ್ಶನ್ ಅಭಿಮಾನಿ ಎಂದು ಹೇಳಿಕೊಂಡಿರುವ ಹೆಚ್.ಡಿ.ಕೋಟೆ ನಿವಾಸಿ ನವೀನ್ ವಿರುದ್ಧ ಯಸಳೂರು ವಲಯ ಅರಣ್ಯಾಧಿಕಾರಿಗಳು ಮಂಗಳವಾರ ಎಫ್‌ಐಆರ್ ದಾಖಲಿಸಿದ್ದಾರೆ. ಸಕಲೇಶಪುರ ತಾಲೂಕಿನ ದಬ್ಬೆಕಟ್ಟೆ ಮೀಸಲು ಅರಣ್ಯದಲ್ಲಿ ಇತ್ತೀಚೆಗೆ ದರ್ಶನ್ ಅಭಿಮಾನಿಗಳು ಎಂದು

ಅರ್ಜುನ ಆನೆ ಸಮಾಧಿ ಸ್ಥಳಕ್ಕೆ ಅಕ್ರಮ ಪ್ರವೇಶ ಮಾಡಿದ ದರ್ಶನ್ ಅಭಿಮಾನಿ : ಪ್ರಕರಣ ದಾಖಲು Read More »

ಕ್ರಿಪ್ಟೋ ಕರೆನ್ಸಿ ಟ್ರೇಡಿಂಗ್| 1.5 ಕೋಟಿ ರೂ. ಕಳೆದುಕೊಂಡ ಕಡಬದ ವ್ಯಕ್ತಿ : ಪ್ರಕರಣ ದಾಖಲು

ಕಡಬ : ಅಪರಿಚಿತ ವ್ಯಕ್ತಿಯ ಸೂಚನೆಯಂತೆ ಕ್ರಿಪ್ಪೋ ಕರೆನ್ಸಿ ಟ್ರೇಡಿಂಗ್ ಮಾಡಲು ಹೋಗಿ ಕಡಬದ ವ್ಯಕ್ತಿಯೋರ್ವರು 1 ಕೋಟಿ 5 ಲಕ್ಷ ರೂ. ಗಳನ್ನು ಕಳೆದುಕೊಂಡಿರುವ ಘಟನೆ ಇಚಿಲಂಪಾಡಿಯಿಂದ ವರದಿಯಾಗಿದೆ. ಕಡಬ ತಾಲೂಕಿನ ಇಚಿಲಂಪಾಡಿ ನಿವಾಸಿ ಸಜಿ ಎಂಬವರು ಕ್ರಿಪ್ಪೋ ಕರೆನ್ಸಿ ಟ್ರೇಡಿಂಗ್ ಮಾಡಲು ಹೋಗಿ ಟೆಲಿಗ್ರಾಂ ಮೂಲಕ ಅಪರಿಚಿತ ವ್ಯಕ್ತಿಯ ಪರಿಚಯ ಮಾಡಿಕೊಂಡಿದ್ದು, ಆತನ ಸೂಚನೆಯಂತೆ Binance app ಮತ್ತು Defi app ಇನ್‌ಸ್ಟಾಲ್ ಮಾಡಿದ್ದ. ಬಳಿಕ ಈ ಆ್ಯಪ್ ಗಳ ಮೂಲಕ ಟ್ರೇಡಿಂಗ್ ಮಾಡಲು

ಕ್ರಿಪ್ಟೋ ಕರೆನ್ಸಿ ಟ್ರೇಡಿಂಗ್| 1.5 ಕೋಟಿ ರೂ. ಕಳೆದುಕೊಂಡ ಕಡಬದ ವ್ಯಕ್ತಿ : ಪ್ರಕರಣ ದಾಖಲು Read More »

ಮರೀಲ್ ನಲ್ಲಿ ಮಹಿಳೆ ನೇಣು ಬಿಗಿದು ಆತ್ಮಹತ್ಯೆ

ಪುತ್ತೂರು: ಮರೀಲ್ ಕಾಡಮನೆ ನಿವಾಸಿ ಆಟೋ ರಿಕ್ಷಾ ಚಾಲಕರೊಬ್ಬರ ಪತ್ನಿ ನೇಣುಬಿಗಿದು ಆತ್ಮಹತ್ಯೆ ಮಾಡಿಕೊಂಡ ಘಟನೆ ಇಂದು ಮರೀಲ್ ಕಾಡಮನೆ ಎಂಬಲ್ಲಿ ನಡೆದಿದೆ. ಆಟೋ ರಿಕ್ಷಾ ಚಾಲಕ ಮನೋಜ್ ಎಂಬವರ ಪತ್ನಿ ಸಂಧ್ಯಾ (45) ಆತ್ಮಹತ್ಯೆ ಮಾಡಿಕೊಂಡವರು. ಮನೋಜ್ ರಾತ್ರಿ ವೇಳ ರಿಕ್ಷಾದಲ್ಲಿ ಬಾಡಿಗೆ ಮಾಡುತ್ತಿದ್ದು ಬೆಳಗ್ಗೆ ಮನೆಗೆ ತೆರಳುತ್ತಿದ್ದರು. ಮನೆಯಲ್ಲಿ ಪತ್ನಿ ಮತ್ತು ಪುತ್ರ ಮಾತ್ರ ಇರುತ್ತಿದ್ದರು. ನಿನ್ನೆ ರಾತ್ರಿ ಮನೆಯಿಂದ ತೆರಳಿದ್ದ ಮನೋಜ್ ಇಂದು ಬೆಳಿಗ್ಗೆ ಮನೆಗೆ ಹೋದಾಗ ಪತ್ನಿ ಮನೆಯ ಹಾಲ್‌ನ ಕಿಟಕಿಗೆ

ಮರೀಲ್ ನಲ್ಲಿ ಮಹಿಳೆ ನೇಣು ಬಿಗಿದು ಆತ್ಮಹತ್ಯೆ Read More »

ಒಂದೇ ಕುಟುಂಬದ ಮೂವರು ಅನುಮಾನಾಸ್ಪದವಾಗಿ ಸಾವು :  ಕೊಲೆ ಶಂಕೆ

ಕೊಪ್ಪಳ: ಒಂದೇ ಕುಟುಂಬಕ್ಕೆ ಸೇರಿದ ಮೂವರು ಅನುಮಾನಾಸ್ಪದವಾಗಿ ಸಾವನ್ನಪ್ಪಿರುವ ಘಟನೆ ಕೊಪ್ಪಳ ತಾಲೂಕಿನ ಮುನಿರಾಬಾದ್ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ. ಹೊಸಲಿಂಗಾಪುರದ ರಾಜೇಶ್ವರಿ (50), ವಸಂತಾ (28) ಹಾಗೂ ವಸಂತಾ ಅವರ ಪುತ್ರ ಸಾಯಿಧರ್ಮ ತೇಜ್ (5) ಮೃತಪಟ್ಟವರೆಂದು ಗುರುತಿಸಲಾಗಿದೆ. ವಸಂತಾ ಅವರಿಗೆ ಆಂಧ್ರ ಪ್ರದೇಶದ ನಂದ್ಯಾಲ ಗ್ರಾಮದ ಯುವಕನ ಜತೆ ಮದುವೆ ಮಾಡಲಾಗಿತ್ತು. ಗಂಡನಿಂದ ದೂರವಾದ ವಸಂತಾ ಕಳೆದ ಎರಡು ವರ್ಷಗಳಿಂದ ಹೊಸಲಿಂಗಾಪುರದಲ್ಲಿ ಬಾಡಿಗೆ ಮನೆ ಮಾಡಿ ತಾಯಿ ಹಾಗೂ ಮಗನ ಜತೆ ವಾಸವಾಗಿದ್ದರು. ಸೋಮವಾರ

ಒಂದೇ ಕುಟುಂಬದ ಮೂವರು ಅನುಮಾನಾಸ್ಪದವಾಗಿ ಸಾವು :  ಕೊಲೆ ಶಂಕೆ Read More »

ಕಲ್ಲೇಗ ಟೈಗರ್ಸ್ ಮುಖ್ಯಸ್ಥ ಅಕ್ಷಯ ಕೊಲೆ ಪ್ರಕರಣ | ಇಬ್ಬರು ಆರೋಪಿಗಳ ಜಾಮೀನು ಅರ್ಜಿ ತಿರಸ್ಕರಿಸಿದ ನ್ಯಾಯಾಲಯ

ಪುತ್ತೂರು : ಟೀಮ್ ಕಲ್ಲೇಗ ಟೈಗರ್ಸ್ ಮುಖ್ಯಸ್ಥ ಅಕ್ಷಯ್ ಕಲ್ಲೇಗ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ 3ನೇ ಆರೋಪಿ ಮಂಜುನಾಥ್ ಹಾಗೂ 4ನೇ ಆರೋಪಿ ಕೇಶವ ಪಡೀಲ್ ಪರ ಸಲ್ಲಿಸಿದ್ದ ಜಾಮೀನು ಅರ್ಜಿಯನ್ನು 5ನೇ ಹೆಚ್ಚುವರಿ ಜಿಲ್ಲಾ ಮತ್ತು ಸತ್ರ ನ್ಯಾಯಾಲಯ ತಿರಸ್ಕರಿಸಿದೆ. ಹೈಕೋರ್ಟ್ ನ್ಯಾಯವಾದಿಗಳ ಮೂಲಕ ಕರ್ನಾಟಕ ಉಚ್ಚ ನ್ಯಾಯಾಲಯಕ್ಕೆ ಜಾಮೀನು ಅರ್ಜಿ ಸಲ್ಲಿಸಿದ್ದು, ದೂರುದಾರ ವಿಖ್ಯಾತ್ ಪರ ಹೈಕೋರ್ಟ್ ನ್ಯಾಯವಾದಿಗಳಾದ ರಾಜಶೇಖರ್ ಹಿಲ್ಯಾರ್ ಸುದೀರ್ಘ ವಾದಮಂಡಿಸಿದ್ದು, ಹೈಕೋರ್ಟ್ ಆರೋಪಿಗಳ ಜಾಮೀನು ಅರ್ಜಿ ತಿರಸ್ಕರಿಸಿದೆ. ದೂರುದಾರರ ವಿಚಾರಣೆ

ಕಲ್ಲೇಗ ಟೈಗರ್ಸ್ ಮುಖ್ಯಸ್ಥ ಅಕ್ಷಯ ಕೊಲೆ ಪ್ರಕರಣ | ಇಬ್ಬರು ಆರೋಪಿಗಳ ಜಾಮೀನು ಅರ್ಜಿ ತಿರಸ್ಕರಿಸಿದ ನ್ಯಾಯಾಲಯ Read More »

ಬಿಂದು ಸಂಸ್ಥೆಯಲ್ಲಿ ಹಳೆಯ ಬೋರ್ ವೆಲ್ ಫ್ಲಶ್ ಮಾಡುವ ಸಂದರ್ಭದಲ್ಲಿ ಕಲ್ಲು ತೂರಾಟ

ಪುರುಷರಕಟ್ಟೆ: ಬಿಂದು ಪ್ಯಾಕ್ಟರಿಗೆ ಸೇರಿದ ಬೋರ್ ವೆಲ್ ವಾಹನಗಳ ಮೇಲೆ ಎಸ್. ಡಿ. ಪಿ. ಐ. ಕಾರ್ಯಕರ್ತರು ಕಲ್ಲು ತೂರಾಟ ನಡೆಸಿದ ಘಟನೆ ನಡೆದಿದ್ದು, ಪುತ್ತೂರು ಠಾಣೆಯಲ್ಲಿ ದೂರು ದಾಖಲಾಗಿದೆ. ಪುರುಷರಕಟ್ಟೆ ಯಲ್ಲಿರುವ ಸಾಫ್ಟ್ ಡ್ರಿಂಕ್ ಪ್ಯಾಕ್ಟರಿ ಬಿಂದು ಸಂಸ್ಥೆಯಲ್ಲಿ ಹಳೆಯ ಬೋರ್ ವೆಲ್ ಗಳನ್ನು ಫ್ಲಶ್ ಮಾಡುವ ಕೆಲಸ ನಿರ್ವಹಿಸುತ್ತಿದ್ದರು. ಈ ವೇಳೆ ಕೆಲವು ಸ್ಥಳೀಯ ಎಸ್ ಡಿ ಪಿ ಐ ಕಾರ್ಯಕರ್ತರು ಬೋರ್ ವೆಲ್ ವಾಹನದ ಮೇಲೆ ಕಲ್ಲು ತೂರಾಟ ನಡೆಸಿದ್ದಾರೆ. ಈ ಘಟನೆ

ಬಿಂದು ಸಂಸ್ಥೆಯಲ್ಲಿ ಹಳೆಯ ಬೋರ್ ವೆಲ್ ಫ್ಲಶ್ ಮಾಡುವ ಸಂದರ್ಭದಲ್ಲಿ ಕಲ್ಲು ತೂರಾಟ Read More »

ಓವರ್ ಟೇಕ್ ವಿಚಾರ : ಅನ್ಯ ಕೋಮಿನ ಯುವಕರ ತಂಡದಿಂದ ಹಿಂದೂ ಯುವಕನ ಮೇಲೆ ಹಲ್ಲೆ

ಮಂಡ್ಯ : ಓವ‌ರ್ ಟೇಕ್ ಮಾಡಲು ಹೋಗಿ ಬೈಕ್‌ಗೆ ಟಚ್ ಮಾಡಿರುವುದನ್ನು ಅಭಿಲಾಷ್ ಇಬ್ಬರು ಮುಸ್ಲಿಂ ಯುವಕರನ್ನು ಪ್ರಶ್ನಿಸಿದ್ದಾರೆ. ಇದೇ ದ್ವೇಷ ಇಟ್ಟುಕೊಂಡು ಮುಸ್ಲಿಂ ಯುವಕರ ಗುಂಪೊಂದು ಅಭಿಲಾಷ್ ಮೇಲೆ ಹಲ್ಲೆ ಮಾಡಿರುವ ಘಟನೆ ಮಂಡ್ಯ ಜಿಲ್ಲೆಯ ನಾಗಮಂಡಲ ತಾಲೂಕಿನ ಬೆಳ್ಳೂರಿನಲ್ಲಿ ನಡೆದಿದೆ. ಹಲ್ಲೆಯಿಂದ ಗಾಯಗೊಂಡಿರುವ ಅಭಿಲಾಷ್ ನನ್ನು ಆದಿಚುಂಚನಗಿರಿ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ. ಇನ್ನೊಂದೆಡೆ ಸ್ಥಳೀಯ ಮುಸ್ಲಿಂ ಯುವಕರ ವಿರುದ್ಧ ಗ್ರಾಮಸ್ಥರು ಆಕ್ರೋಶಗೊಂಡಿದ್ದು, ಆರೋಪಿಗಳ ವಿರುದ್ಧ ಕ್ರಮಕೈಗೊಳ್ಳುವಂತೆ ಆಗ್ರಹಿಸಿ ಬೆಳ್ಳೂರು ಪೊಲೀಸ್‌ ಠಾಣೆ ಎದುರು

ಓವರ್ ಟೇಕ್ ವಿಚಾರ : ಅನ್ಯ ಕೋಮಿನ ಯುವಕರ ತಂಡದಿಂದ ಹಿಂದೂ ಯುವಕನ ಮೇಲೆ ಹಲ್ಲೆ Read More »

ಇಂಡಿಗೋ ವಿಮಾನಕ್ಕೆ ಬಾಂಬ್‍ ಬೆದರಿಕೆ | ತನಿಖೆಗಾಗಿ ಪ್ರತ್ಯೇಕ ಪ್ರದೇಶಕ್ಕೆ ಸ್ಥಳಾಂತರ

ದೆಹಲಿ: ಇಂಡಿಗೋ ವಿಮಾನಕ್ಕೆ ಬಾಂಬ್ ಬೆದರಿಕೆ ಬಂದಿರುವುದಾಗಿ ತಿಳಿದು ಬಂದಿದ್ದು, ತನಿಖೆಗಾಗಿ ವಿಮಾನವನ್ನು ಪ್ರತ್ಯೇಕ ಪ್ರದೇಶಕ್ಕೆ ಸ್ಥಳಾಂತರಿಸಲಾಗಿದೆ. ದೆಹಲಿಯಿಂದ ವಾರಣಾಸಿಗೆ ತೆರಳುತ್ತಿದ್ದ ಇಂಡಿಗೋ ವಿಮಾನಕ್ಕೆ ಬೆದರಿಕೆ ಕರೆ ಬಂದಿದ್ದು, ವಿಮಾನಯಾನ ಭದ್ರತೆ ಮತ್ತು ಬಾಂಬ್ ನಿಷ್ಕ್ರಿಯ ತಂಡವು ಸ್ಥಳದಲ್ಲಿದೆ ಎಂದು ವಿಮಾನ ನಿಲ್ದಾಣದ ಅಧಿಕಾರಿ ಎಎನ್ ಐಗೆ ತಿಳಿಸಿದ್ದಾರೆ. ಇಂದು ಮುಂಜಾನೆ 5.35 ಕ್ಕೆ ದೆಹಲಿಯಿಂದ ವಾರಣಾಸಿಗೆ ಹೊರಟಿದ್ದ ವಿಮಾನದಲ್ಲಿ ಬಾಂಬ್ ಇದೆ ಎಂಬ ಸುದ್ದಿ ಇತ್ತು. QRT ಸ್ಥಳಕ್ಕೆ ತಲುಪಿತು. ಎಲ್ಲಾ ಪ್ರಯಾಣಿಕರನ್ನು ತುರ್ತು ಬಾಗಿಲಿನ

ಇಂಡಿಗೋ ವಿಮಾನಕ್ಕೆ ಬಾಂಬ್‍ ಬೆದರಿಕೆ | ತನಿಖೆಗಾಗಿ ಪ್ರತ್ಯೇಕ ಪ್ರದೇಶಕ್ಕೆ ಸ್ಥಳಾಂತರ Read More »

ವಾಹನ ಓಡಾಟದ ನಡುವೆಯೇ ರಸ್ತೆಯಲ್ಲಿ ನಮಾಜ್‍ | ಎಲ್ಲೆಡೆ ವ್ಯಾಪಕ ಆಕ್ರೋಶ

ಮಂಗಳೂರು: ವಾಹನ ಓಡಾಟದ ನಡುವೆಯೇ ರಸ್ತೆಯಲ್ಲಿ ಕುಳಿತು ನಮಾಜ್‍ ಮಾಡಿದ ಘಟನೆ ಮಂಗಳೂರಿನ ಕಂಕನಾಡಿ ಮಸೀದಿ ಎದುರು ನಡೆದಿದ್ದು, ಈ ಕುರಿತು ವೀಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ. ಇತ್ತೀಚಿಗೆ ಬೆಂಗಳೂರಿನಲ್ಲಿ ಮುಸ್ಲಿಮರು ನಡುರಸ್ತೆಯಲ್ಲಿ ಕೂತು ನಮಾಜ್ ಮಾಡುತ್ತಿದ್ದ ಭಾವಚಿತ್ರ ಎಲ್ಲಡೆ ಹರದಾಡಿತ್ತು. ಇದಕ್ಕೆ ವ್ಯಾಪಕ ಆಕ್ರೋಶ ವ್ಯಕ್ತವಾಗಿತ್ತು. ಇದರ ಬೆನ್ನಲ್ಲೇ ಮಂಗಳೂರಿನ ಕಂಕನಾಡಿಯಲ್ಲಿ ನಡು ರಸ್ತೆಯಲ್ಲೇ ಮುಸ್ಲಿಮರು ನಮಾಜ್ ಮಾಡಿದ್ದಾರೆ. ಕಳೆದ ಶುಕ್ರವಾರ ಘಟನೆ ನಡೆದಿದ್ದು, ನಮಾಜ್ ಮಾಡಿದ ವಿಡಿಯೋ ಎಲ್ಲಡೆ ಹರಿದಾಡುತ್ತಿದೆ. ಯುವಕರು ನಡುರಸ್ತೆಯಲ್ಲೇ

ವಾಹನ ಓಡಾಟದ ನಡುವೆಯೇ ರಸ್ತೆಯಲ್ಲಿ ನಮಾಜ್‍ | ಎಲ್ಲೆಡೆ ವ್ಯಾಪಕ ಆಕ್ರೋಶ Read More »

error: Content is protected !!
Scroll to Top