ಅಪರಾಧ

ವಿದ್ಯಾರ್ಥಿಯ ಖಾತೆಯಿಂದ ನಗದು ಅಪಹರಿಸಿ ವಂಚನೆ : ಪ್ರಕರಣ ದಾಖಲು

ಉಜಿರೆ: ಪ್ರಕೃತಿ ಚಿಕಿತ್ಸಾ ಕಾಲೇಜಿನ ವಿದ್ಯಾರ್ಥಿಯ ಬ್ಯಾಂಕ್ ಖಾತೆಯಿಂದ ನಗದು ಅಪಹರಿಸಿದ ಘಟನೆ ಕುರಿತು ಬೆಳ್ತಂಗಡಿ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಉಜಿರ ಬಿ.ಎನ್.ವೈ ಎಸ್ ಕಾಲೇಜಿನಲ್ಲಿ ಮೂರನೇ ವರ್ಷದ ವಿದ್ಯಾರ್ಥಿಯಾಗಿರುವ ಪ್ರದೀಪ್ ಸುರೇಶ್ ರೂಗಿ ಎಂಬವರ ಖಾತೆಯಿಂದ ಅಪರಿಚಿತರು 3.14 ಲಕ್ಷ ನಗದನ್ನು ಅಪಹರಿಸಿದ್ದಾರೆ. ಗುಲ್ಬರ್ಗ ಜಿಲ್ಲೆಯ ಅಫಲ್ ಪುರದ ಯೂನಿಯನ್ ಬ್ಯಾಂಕಿನಲ್ಲಿ ಖಾತೆ ಹೊಂದಿದ್ದು ಈ ಖಾತೆಯಿಂದ ಹಣ ಎಗರಿಸಲಾಗಿದೆ. ಮೇ 23ರವರೆಗೆ ಅವರ ಖಾತೆಯಲ್ಲಿ ಹಣವಿತ್ತು. ರಾತ್ರಿ 8.30ರ ಹೊತ್ತಿಗೆ ಇವರ ಮೊಬೈಲ್ ಗೆ […]

ವಿದ್ಯಾರ್ಥಿಯ ಖಾತೆಯಿಂದ ನಗದು ಅಪಹರಿಸಿ ವಂಚನೆ : ಪ್ರಕರಣ ದಾಖಲು Read More »

ಮನೆಗೆ ನುಗ್ಗಿದ ಕಳ್ಳರು ಡಿವಿಆರ್ ಹೊತ್ತೊಯ್ದರು

ವಿಟ್ಲ : ಮನೆಗೆ ನುಗ್ಗಿದ ಕಳ್ಳರು ಒಂದು ಲಕ್ಷ ರೂ. ಮೌಲ್ಯದ ವಾಚ್ ಜತೆಗೆ ಡಿವಿಆರ್ ಹಪತ್ತೊಯ್ದ ಘಟನೆ ವಿಟ್ಲ ಪರ್ತಿಪಾಡಿನಲ್ಲಿ ನಡೆದಿದೆ. ವಿಟ್ಲ ಪಡೂರು ಗ್ರಾಮದ ಪರ್ತಿಪ್ಪಾಡಿ ಮಸೀದಿ ದ್ವಾರದ ಮುಂಭಾಗದ ಎಂ.ಕೆ.ಖಲೀಲ್ ಎಂಬವರ ಮನೆಗೆ ಕನ್ನ ಹಾಕಿದ್ದಾರೆ. ಖಲೀಲ್ ಕುಟುಂಬ ಅರಬ್ ರಾಷ್ಟ್ರದ ಅಹ್ಮನ್ ನಲ್ಲಿದ್ದು ಆರು ತಿಂಗಳ ಹಿಂದಷ್ಟೇ ಊರಿಗೆ ಬಂದು ಹೋಗಿದ್ದರು. ಭಾನುವಾರ ಬೆಳಗ್ಗೆ ಪಕ್ಕದ ಮನೆಯವರು ನೋಡಿದಾಗ ಮುಂಭಾಗದ ಬಾಗಿಲು ತೆರೆದಿರುವುದನ್ನು ಗಮನಿಸಿ ಅನುಮಾನದಿಂದ ಮನೆಗೆ ಹೋಗಿ ನೋಡಿದಾಗ ಅಂಗಳದಲ್ಲಿದ್ದ

ಮನೆಗೆ ನುಗ್ಗಿದ ಕಳ್ಳರು ಡಿವಿಆರ್ ಹೊತ್ತೊಯ್ದರು Read More »

ಬ್ಯೂಟಿಷಿಯನ್ ಅಕ್ಷತಾ ಆತ್ಮಹತ್ಯೆಗೆ ಶರಣು

ಶಿವಮೊಗ್ಗ: ಮಹಿಳೆಯೊಬ್ಬರು ನೇಣು ಬಿಗಿದುಕೊಂಡು ಆತ್ಮಗತ್ಯೆ ಮಾಡಿಕೊಂಡ ಶಿವಮೊಗ್ಗ ಜಿಲ್ಲೆಯ ಸೊರಬ ಪಟ್ಟಣದಲ್ಲಿ ಇಂದು ನಡೆದಿದೆ. ಅಕ್ಷತಾ (30)  ಆತ್ಮಹತ್ಯೆ ಮಾಡಿಕೊಂಡವರು. ಬ್ಯೂಟಿ ಪಾರ್ಲರ್ ನಡೆಸುತ್ತಿದ್ದ ಅಕ್ಷತಾ ಕೆಲ ದಿನಗಳಿಂದ ಅನಾರೋಗ್ಯದಿಂದ ಬಳಲುತ್ತಿದ್ದರು. ಹೀಗಾಗಿ ಹೊಟ್ಟೆ ನೋವು ತಾಳಲಾರದೆ ಮನೆಯಲ್ಲಿ ನೇಣಿಗೆ ಶರಣಾಗಿದ್ದಾರೆ ಎನ್ನಲಾಗಿದೆ. ಅಕ್ಷತಾ ಅವರು ಭದ್ರಾವತಿ ತಾಲೂಕಿನ ಕೆರೆಬೀರನಹಳ್ಳಿ ಗ್ರಾಮದವರು. ಚಂದ್ರಗುತ್ತಿ ಗ್ರಾಮದ ಸಂತೋಪ್ ಜೊತೆ ಅಕ್ಷತಾ ಅವರ ಮದುವೆ ಆಗಿತ್ತು. ಹೊಟ್ಟೆನೋವು ತಾಳಲಾರದೆ ಸೊರಬ ಪಟ್ಟಣದ ವಿದ್ಯುತ್ ನಗರದ ಮನೆಯಲ್ಲಿ ಅಕ್ಷತಾ ಆತ್ಮಹತ್ಯೆ

ಬ್ಯೂಟಿಷಿಯನ್ ಅಕ್ಷತಾ ಆತ್ಮಹತ್ಯೆಗೆ ಶರಣು Read More »

ರಾಮೇಶ್ವರಂ ಕೆಫೆ ಸ್ಪೋಟ ಪ್ರಕರಣ | ಐದನೇ ಆರೋಪಿ ಬಂಧನ

ಬೆಂಗಳೂರು: ರಾಮೇಶ್ವರಂ ಕೆಫೆ ಸ್ಫೋಟ ಪ್ರಕರಣದಲ್ಲಿ ರಾಷ್ಟ್ರೀಯ ತನಿಖಾ ಸಂಸ್ಥೆ (ಎನ್ಐಎ) ಶುಕ್ರವಾರ ಮತ್ತೊಬ್ಬ ಶಂಕಿತನನ್ನು ಬಂಧಿಸಿದೆ.  ಲಷ್ಕರ್-ಎ- ತೊಯ್ಯಾ (ಎಲ್ಇಟಿ) ಪ್ರಕರಣದ ಮಾಜಿ ಅಪರಾಧಿ, ಕರ್ನಾಟಕದ ಹುಬ್ಬಳ್ಳಿ ಮೂಲದ ಶೋಯೆಬ್ ಅಹ್ಮದ್ ಮಿರ್ಜಾ (35) ಬಂಧಿತ ಐದನೇ ವ್ಯಕ್ತಿ. ಈ ಹಿಂದೆ ಎಲ್ಇಟಿ ಬೆಂಗಳೂರು ಪಿತೂರಿ ಪ್ರಕರಣದಲ್ಲಿ ಅಪರಾಧಿಯಾಗಿದ್ದ ಮಿರ್ಜಾ ಜೈಲಿನಿಂದ ಹೊರಬಂದ ನಂತರ ಹೊಸ ಸಂಚಿನಲ್ಲಿ ಭಾಗಿಯಾಗಿದ್ದಾನೆ ಎಂದು ಎನ್ಐಎ ತನಿಖೆಗಳು ಬಹಿರಂಗಪಡಿಸಿವೆ. ಎನ್ಐಎ ಅಧಿಕಾರಿಗಳು ಮೂರು ದಿನಗಳ ಹಿಂದಷ್ಟೇ ರಾಮೇಶ್ವರಂ ಕೆಫೆ ಸ್ಫೋಟ

ರಾಮೇಶ್ವರಂ ಕೆಫೆ ಸ್ಪೋಟ ಪ್ರಕರಣ | ಐದನೇ ಆರೋಪಿ ಬಂಧನ Read More »

ಬಾಂಗ್ಲಾ ದೇಶದ ಸಂಸದ ಅನ್ವರುಲ್ ಅಜೀಂ ಅನಾರ್ ನ ಹತ್ಯೆ ಮಾಡಿ ಚರ್ಮ ಸುಲಿದ ಹಂತಕರು | ಪ್ರಮುಖ ಆರೋಪಿ ಬಂಧನ

ಹೊಸದಿಲ್ಲಿ: ಬಾಂಗ್ಲಾದೇಶದ ಸಂಸದ ಅನ್ವರುಲ್ ಅಜೀಂ ಅನಾರ್ ಅವರನ್ನು ಬಾಂಗ್ಲಾದೇಶದಲ್ಲಿ ಬರ್ಬರವಾಗಿ ಕೊಲೆ ಮಾಡಿದ ವಿಚಾರ ತನಿಖೆಯಿಂದ ಬಯಲಾಗಿದ್ದು, ಹತ್ಯೆಯ ಪ್ರಮುಖ ಆರೋಪಿ ಬಾಂಗ್ಲಾ ದೇಶದ ಅಕ್ರಮ ವಲಸಿಗ ಜಿಹಾದ್ ಹವಾಲ್ದಾರ್ ಎಂಬಾತನನ್ನು ಪೊಲೀಸರು ಬಂಧಿಸಿದ್ದಾರೆ. ಕೋಲ್ಕತ್ತಾದ ನ್ಯೂಟೌನ್ ಪ್ರದೇಶದಲ್ಲಿರುವ ಅಪಾರ್ಟ್‌ಮೆಂಟ್‌ನಲ್ಲಿ ಸಂಸದರನ್ನು ಕತ್ತು ಹಿಸುಕಿ, ಚರ್ಮ ಸುಲಿದು ಕತ್ತರಿಸಿ ಹಾಕಲಾಗಿತ್ತು. ಸಿಐಡಿ ಮೂಲಗಳ ಪ್ರಕಾರ, ಕೋಲ್ಕತ್ತಾದ ನ್ಯೂಟೌನ್‌ನಲ್ಲಿರುವ ಫ್ಲಾಟ್‌ನಲ್ಲಿ ಕೊಲೆ ಮಾಡಿ ಸಂಸದರ ದೇಹವನ್ನು ತುಂಡು ತುಂಡಾಗಿಸಿ ವಿಕೃತಿ ಮೆರೆದಿರುವ ಬಗ್ಗೆ ಜಿಹಾದ್ ಹವಾಲ್ದಾ‌ರ್ ಒಪ್ಪಿಕೊಂಡಿದ್ದಾನೆ.

ಬಾಂಗ್ಲಾ ದೇಶದ ಸಂಸದ ಅನ್ವರುಲ್ ಅಜೀಂ ಅನಾರ್ ನ ಹತ್ಯೆ ಮಾಡಿ ಚರ್ಮ ಸುಲಿದ ಹಂತಕರು | ಪ್ರಮುಖ ಆರೋಪಿ ಬಂಧನ Read More »

ಮಹಿಳೆಯ ಬ್ಯಾಗ್‍ ನಿಂದ ಲಕ್ಷಾಂತರ ಮೌಲ್ಯದ ಚಿನ್ನ ಕಳವು : ದೂರು ದಾಖಲು | ಕಳ್ಳರ ತಾಣವಾಗುತ್ತಿರುವ ಬಿ.ಸಿ.ರೋಡು ಬಸ್ ನಿಲ್ದಾಣ

ಬಂಟ್ವಾಳ: ಬಿಸಿರೋಡಿನ ಬಸ್ ನಿಲ್ದಾಣ ಪಿಕ್ ಪಾಕೆಟ್ ತಾಣವಾಗಿ, ಕಳ್ಳರ ಕೇಂದ್ರವಾಗಿ ಮಾರ್ಪಾಡು ಹೊಂದಿದೆ. ಕಳೆದ ಕೆಲವು ದಿನಗಳಿಂದ ನಿರಂತರವಾಗಿ ಬಸ್ ಗೆ ಹತ್ತುವ ಮಹಿಳೆಯರ ನಗನಗದು ಕಳವು ನಡೆಯುತ್ತಿದ್ದು, ಪ್ರಯಾಣಿಕರು ಆತಂಕಕ್ಕೆ ಒಳಗಾಗಿದ್ದಾರೆ ಎಂಬ ಆರೋಪಗಳು ಕೇಳಿ ಬರುತ್ತಿದೆ. ಕಳ್ಳರು ಹಿಡಿಯುವಲ್ಲಿ ಪೊಲೀಸ್ ಇಲಾಖೆಯ ಕಾರ್ಯವೈಖರಿ ಬಗ್ಗೆ ಸಾರ್ವಜನಿಕರು ಬೇಸರ ವ್ಯಕ್ತಪಡಿಸಿದ್ದಾರೆ. ಇದೀಗ ಮತ್ತೆ ನಿನ್ನೆ ಬೆಳಿಗ್ಗೆ ಗಂಡ ಮತ್ತು ಮಗುವಿನ ಜೊತೆ ಬಸ್ ಹತ್ತುವ ವೇಳೆ ಬ್ಯಾಗಿನೊಳಗಿದ್ದ ಲಕ್ಷಾಂತರ ರೂ ಮೌಲ್ಯದ ಚಿನ್ನ ಕಳವಾದ

ಮಹಿಳೆಯ ಬ್ಯಾಗ್‍ ನಿಂದ ಲಕ್ಷಾಂತರ ಮೌಲ್ಯದ ಚಿನ್ನ ಕಳವು : ದೂರು ದಾಖಲು | ಕಳ್ಳರ ತಾಣವಾಗುತ್ತಿರುವ ಬಿ.ಸಿ.ರೋಡು ಬಸ್ ನಿಲ್ದಾಣ Read More »

ಕಾಂಬೋಡಿಯಾದಲ್ಲಿ ಉದ್ಯೋಗ ಮೋಸದ ಜಾಲಕ್ಕೆ ಸಿಲುಕಿದ ಭಾರತೀಯರ ರಕ್ಷಣೆ

ಹೊಸದಿಲ್ಲಿ: ಕಾಂಬೋಡಿಯಾದಲ್ಲಿ ಉದ್ಯೋಗದ ಮೋಸದ ಜಾಲಕ್ಕೆ ಸಿಲುಕಿದ್ದ 60 ಮಂದಿ ಭಾರತೀಯರನ್ನು ಅಲ್ಲಿನ ಭಾರತೀಯ ರಾಯಭಾರ ಕಚೇರಿ ರಕ್ಷಣೆ ಮಾಡಿದೆ. ರಕ್ಷಣೆ ಮಾಡಿದ ಬೆನ್ನಲ್ಲೇ 60 ಮಂದಿಯ ಮೊದಲ ಬ್ಯಾಚ್ ಭಾರತಕ್ಕೆ ಮರಳಿದೆ ಎಂದು ರಾಯಭಾರ ಕಚೇರಿ ತಿಳಿಸಿದೆ. ಕಾಂಬೋಡಿಯಾ ಸ್ಥಳೀಯ ಅಧಿಕಾರಿಗಳ ಸಹಕಾರದೊಂದಿಗೆ ಸಿಹಾನೌಕ್ವಿಲೈನಲ್ಲಿ ಭಾರತೀಯ ರಾಯಭಾರ ಕಚೇರಿ ಅಧಿಕಾರಿಗಳು ಜಿನ್ ಬೆ-4 ಎಂಬ ಸ್ಥಳದಲ್ಲಿ ಭಾರತೀಯರನ್ನು ರಕ್ಷಣೆ ಮಾಡಿದ್ದಾರೆ. ಇನ್ನು ಮುಂದೆ ಉದ್ಯೋಗಕ್ಕಾಗಿ ಕಾಂಬೋಡಿಯಾಕ್ಕೆ ಬರುವ ಭಾರತೀಯರು ವಿದೇಶಾಂಗ ವ್ಯವಹಾರಗಳ ಸಚಿವಾಲಯ ಅನುಮೋದಿಸಿದ ಅಧಿಕೃತ

ಕಾಂಬೋಡಿಯಾದಲ್ಲಿ ಉದ್ಯೋಗ ಮೋಸದ ಜಾಲಕ್ಕೆ ಸಿಲುಕಿದ ಭಾರತೀಯರ ರಕ್ಷಣೆ Read More »

ಕಳ್ಳತನ : ಇಬ್ಬರು ಅಂತರ್ ರಾಜ್ಯ ಕಳ್ಳರ ಬಂಧನ

ಮಂಗಳೂರು : ಕಳ್ಳತನ ಪ್ರಕರಣಕ್ಕೆ ಸಂಬಂಧಿಸಿ ಕಂಕನಾಡಿ ನಗರ ಠಾಣಾ ಪೊಲೀಸರ ತಂಡ ಇಬ್ಬರು ಅಂತರ್ ರಾಜ್ಯ ಕಳ್ಳರನ್ನು ಬಂಧಿಸಿದೆ. ಕೊಡಗು ಜಿಲ್ಲೆ ವೀರಾಜಪೇಟೆ ಬೆಳ್ಳುರು ಗ್ರಾಮ ನಿವಾಸಿ ಸಚಿನ್ ಮತ್ತು ಕೊಡಗು ಜಿಲ್ಲೆ ಬಾಡಗಾ ಗ್ರಾಮ ನಿವಾಸಿ ನಿಶಾಂತ್ ಬಂಧಿತ ಆರೋಪಿಗಳು. ಮಂಗಳೂರು ನಗರದ ಕುಲಶೇಖರ ದ.ಕ ಸಹಕಾರಿ ಹಾಲು ಒಕ್ಕೂಟದ ಬಳಿಯ ಮನೆಗೆ ನುಗ್ಗಿದ ಕಳ್ಳರು ಮನೆಯಲ್ಲಿದ್ದ 87.5 ಗ್ರಾಂ ಚಿನ್ನಾಭರಣ ಕಳವು ಮಾಡಿದ್ದರು. ಪ್ರಕರಣದ ತನಿಖೆ ನಡೆಸಿದ ಪೊಲೀಸರು ಇಬ್ಬರು ಆರೋಪಿಗಳನ್ನು ಬಂಧಿಸಿ

ಕಳ್ಳತನ : ಇಬ್ಬರು ಅಂತರ್ ರಾಜ್ಯ ಕಳ್ಳರ ಬಂಧನ Read More »

ಕಾಂಚನ ಈಶ್ವರ ಭಟ್ ಮನೆಯಿಂದ ಲಕ್ಷಾಂತರ ಮೌಲ್ಯದ ಚಿನ್ನಾಭರಣ ಕಳವು

ಪುತ್ತೂರು: ಸುದಾನ ಸಂಗೀತ ಕಲಾ ಶಾಲಾ ನಿರ್ದೇಶಕ ವಿದ್ವಾನ್ ಕಾಂಚನ ಈಶ್ವರ ಭಟ್ ಅವರ ಪಡೀಲು ವಿಜಯನಗರ ಬಡವಾಣೆಯಲ್ಲಿರುವ ಮನೆಗೆ ಕಳ್ಳರು ನುಗ್ಗಿ ಲಕ್ಷಾಂತರ ರೂಪಾಯಿ ಮೌಲ್ಯದ ಚಿನ್ನಾಭರಣ ಕಳವು ಮಾಡಿರುವ ಕುರಿತು ಇಂದು ಬೆಳಕಿಗೆ ಬಂದಿದೆ. ವಿದ್ವಾನ್ ಕಾಂಚನ ಈಶ್ವರ ಭಟ್ ಅವರು ಸಂಗೀತ ಕಾರ್ಯಕ್ರಮಕ್ಕೆ ಮೈಸೂರಿಗೆ ಹೋಗಿದ್ದು, ಅವರ ಪುತ್ರ ಬೆಂಗಳೂರಿಗೆ ಹೋಗಿದ್ದರು. ಇಂದು ಮನೆಗೆ ಹಿಂದಿರುಗಿದಾಗ ಕಳವಾದ ಕುರಿತು ಬೆಳಕಿಗೆ ಬಂದಿದೆ. ಅವರು ಮನೆಗೆ ಬಂದಾಗ ಮನೆಯ ಎದುರಿನ ಬಾಗಿಲ ಬೀಗ ಮುರಿದು

ಕಾಂಚನ ಈಶ್ವರ ಭಟ್ ಮನೆಯಿಂದ ಲಕ್ಷಾಂತರ ಮೌಲ್ಯದ ಚಿನ್ನಾಭರಣ ಕಳವು Read More »

ಅಕ್ರಮ ಗೋ ಸಾಗಾಟ : ಸ್ಥಳೀಯರಿಂದ ದಿಗ್ಬಂಧನ

ಪುತ್ತೂರು: ಅಕ್ರಮ ಗೋವುಗಳನ್ನು ಪಿಕಪ್ ನಲ್ಲಿ ಸಾಗಾಟ ಮಾಡುತ್ತಿದ್ದರು ಎಂಬ ಆರೋಪದಡಿ ಸ್ಥಳೀಯರು ವಾಹನವನ್ನು ಅಡ್ಡಗಟ್ಟಿದ ಮತ್ತು ಜೀಪು ಚಾಲಕ  ಹಾಗೂ ಇನ್ನೋರ್ವರಿಗೆ ದಿಗ್ಭಂಧನ ವಿಧಿಸಿದ ಘಟನೆ ಎಲಿಮಲೆಯ ಅಂಬೆಕಲ್ಲಿನಲ್ಲಿ ನಡೆದಿದೆ. ಪಡ್ಡಾಯರಿನ ಹರೀಶ್ ಮತ್ತು ಕೋಣಾಜೆಯ ಇಬ್ರಾಹಿಂ ಎಂಬವರು ದಿಗ್ಭಂಧನಕ್ಕೆ ಒಳಗಾದವರು. ಸುಳ್ಯದ ಎಲಿಮಲೆಯ ಅಂಬೆಕಲ್ಲು ಕಡೆಯಿಂದ ಇಂದು ಮುಂಜಾನೆ 4 ದನಗಳನ್ನು ಪಿಕಪ್ ವಾಹನದಲ್ಲಿ ತುಂಬಿಸಿ ಸಾಗಾಟ ಮಾಡುತ್ತಿರುವ ಆರೋಪದಲ್ಲಿ ಎಲಿಮಲೆ ಅಂಬೆಕಲ್ಲು ರಸ್ತೆಯ ಕಲ್ಪಣೆ ಎಂಬಲ್ಲಿ ಸ್ಥಳೀಯರು ವಾಹನವನ್ನು ಅಡ್ಡ ಗಟ್ಟಿದರು. ಈ

ಅಕ್ರಮ ಗೋ ಸಾಗಾಟ : ಸ್ಥಳೀಯರಿಂದ ದಿಗ್ಬಂಧನ Read More »

error: Content is protected !!
Scroll to Top